ರಾಷ್ಟ್ರೀಯ
Jaiveer Shergill | ಮೂರು ತಿಂಗಳ ಹಿಂದೆ ಕಾಂಗ್ರೇಸ್ ತೊರೆದ ಜೈವೀರ್ ಶೆರ್ಗಿಲ್ ಬಿಜೆಪಿಯ ರಾಷ್ಟ್ರೀಯ ವಕ್ತಾರರಾಗಿ ಆಯ್ಕೆ : ಪುಲ್ವಾಮ ದಾಳಿಯಲ್ಲಿ ಮಡಿದ ಸೈನಿಕರ ರಕ್ತವನ್ನು ಬಿಜೆಪಿ ಚುನಾವಣೆಗೆ ಬಳಸಿಕೊಂಡಿದೆ ಎಂದಿದ್ದ ಶೆರ್ಗಿಲ್ ವಿಡಿಯೋ ಇದೀಗ ವೈರಲ್

ಹೊಸದಿಲ್ಲಿ: ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿರುವ ನಾಯಕರುಗಳಿಗೆ ಬಿಜೆಪಿ ಪ್ರಮುಖ ಹುದ್ದೆ ನೀಡಿದೆ. ಮೂರು ತಿಂಗಳ ಹಿಂದೆಯಷ್ಟೇ ಪಕ್ಷ ತ್ಯಜಿಸಿ ಬಂದಿರುವ ಮಾಜಿ ಕಾಂಗ್ರೆಸ್ ನಾಯಕ ಜೈವೀರ್ ಶೆರ್ಗಿಲ್ Jaiveer Shergill ಅವರನ್ನು ವಕ್ತಾರರನ್ನಾಗಿ ಶುಕ್ರವಾರ ನೇಮಿಸಲಾಗಿದೆ.
ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹಾಗೂ ಮಾಜಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಜಾಖರ್ ಅವರನ್ನು ಸೇರ್ಪಡೆ ಮಾಡಲಾಗಿದೆ.
ಇತ್ತಿಚೆಗೆಷ್ಟೇ ಶೇರ್ಗಿಲ್ ಕಾಂಗ್ರೇಸ್ ನಲ್ಲಿದ್ದಾಗ ಪತ್ರಿಕಾಗೋಷ್ಠಿ ನಡೆಸಿದ ವಿಡಿಯೋ ವೈರಲ್ ಆಗುತ್ತಿದೆ, ಬಿಜೆಪಿ ಓಟಿಗೆ ಮಾತ್ರ ಗಮನ ಕೊಡ್ತದೆ ರಾಷ್ಟ್ರೀಯತೆಗಲ್ಲ, 26/11 ರ ಪುಲ್ವಾಮ ದಾಳಿ ನಂತರ ಬಿಜೆಪಿ ಅದನ್ನು ಪ್ರಚಾರಕ್ಕಾಗಿ ಬಳಸಿಕೊಂಡಿತು. ಸೈನಿಕರ ರಕ್ತವನ್ನು ಬಿಜೆಪಿ ಚುನಾವಣೆಗೆ ಬಳಸಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಪುಲ್ವಾಮ ದಾಳಿಯ ಹೆಸರಿನಲ್ಲಿ ಓಟ್ ಕೇಳಲು ಬಿಜೆಪಿಗೆ ನಾಚಿಕೆಯಾಗಬೇಕು ಎಂದಿದ್ದರು.
ರಾಷ್ಟ್ರೀಯ ಭದ್ರತೆಯ ಲಾಭ ಮಾತ್ರ ತೆಗೊಳುತ್ತದೆ , ಭದ್ರತಾ ವೈಫಲ್ಯದ ವಿಷಯದಲ್ಲಿ ಯಾಕೆ ಬಿಜೆಪಿ ಪ್ರಶ್ನೆಗಳನ್ನು ಎದುರಿಸಲು ತಯಾರಿಲ್ಲ..? ಎಂದು ಮೂರು
ಪುಲ್ವಾಮ ದಾಳಿಯ ಭದ್ರತಾ ವೈಫಲ್ಯದ ಹೊಣೆ ಯಾರು ಹೊತ್ತುಕೊಳ್ಳಬೇಕು..?
ಪ್ರಧಾನಿ ಮೋದಿ ತನ್ನ ಸ್ವಂತ ಪ್ರಚಾರಕ್ಕಾಗಿ 4500 ಕೋಟಿ ಖರ್ಚು ಮಾಡಿದೆ, 1.5 ಕೋಟಿ ಮೋದಿ ತನ್ನ ಭದ್ರತೆಗೆ ಪ್ರತಿ ದಿನ ಖರ್ಚು ಮಾಡ್ತಾರೆ ಎಂದಿದ್ದರು. ಬಿಜೆಪಿ ಸರ್ಕಾರ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದವರಿಗೆ ಕೊಟ್ಟ ಆಶ್ವಾಸನೆ ಯಾಕೆ ಈಡೆರಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ಈ ವಿಡಿಯೋ ಇದೀಗ ವೈರಲ್ ಆಗ್ತಿದೆ. ಯುವ ಕಾಂಗ್ರೇಸ್ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಈ ವಿಡಿಯೋ ಹಾಕಿ ಬಿಜೆಪಿ ವಕ್ತಾರ ಮೋದಿಯನ್ನೇ ಪ್ರಶ್ನಿಸುತ್ತಿದ್ದಾನೆ ಎಂದಿದ್ದಾರೆ.
ಶೇರ್ಗಿಲ್ ಬಿಜೆಪಿ ರಾಷ್ಟ್ರೀಯ ವಕ್ತಾರರಾದ ನಂತರವೂ ತನ್ನ ಫೇಸ್ಬುಕ್ ಖಾತೆಯಲ್ಲಿ ಕಾಂಗ್ರೇಸ್ ನ ಶಾಲು ಹಾಕಿದ ಪೋಟೋ ವನ್ನೇ ಡಿಪಿಯಾಗಿ ಇಟ್ಟುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.

ಅಪರಾಧ
Dowry Harasment: ʼಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಡೆತ್ ನೋಟ್ ಬರೆದಿಟ್ಟು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಯುವ ವೈದ್ಯೆ ಆತ್ಮಹತ್ಯೆ – ಅಷ್ಟಕ್ಕೂ ವರನ ಮನೆಯವರು ಇಟ್ಟ ಡಿಮ್ಯಾಂಡ್ ಎಷ್ಟು ಗೊತ್ತೆ ?

ತಿರುವನಂತಪುರಂ : ಕಳೆದ ವರ್ಷ ಕೇರಳದಲ್ಲಿ ದೊಡ್ಡ ಅಭಿಯಾನಕ್ಕೆ ಕಾರಣವಾಗಿದ್ದ ವರದಕ್ಷಿಣೆ ಕಿರುಕುಳ ಮತ್ತೆ ಆ ರಾಜ್ಯದಲ್ಲಿ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣವಾಗಿರುವುದು ಎರಡು ದಿನಗಳ ಹಿಂದೆ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಕೇರಳದ (Kerala) ಯುವ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು. ಮೃತಳನ್ನು ಶಹನಾ (Shahana) (26) ಎಂದು ಗುರುತಿಸಲಾಗಿದೆ̤ ಈಕೆಯ ಆತ್ಮಹತ್ಯೆಗೆ ಪ್ರಚೊಧನೆ ನೀಡಿದ ಆರೋಪದಡಿ ಆಕೆಯ ಬಾಯ್ ಫ್ರೆಂಡ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಹಾನಾ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪಿಜಿ ವಿದ್ಯಾರ್ಥಿನಿ. ಈಕೆಯ ಮೃತ ದೇಹ ಮಂಗಳವಾರ ಬೆಳಗ್ಗೆ ಕಾಲೇಜ್ ಬಳಿಯ ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ಪತ್ತೆಯಾಗಿದೆ. ಡಾ. ಸಹನಾ, ತಮ್ಮ ತಾಯಿ ಮತ್ತು ಇಬ್ಬರು ಒಡಹುಟ್ಟಿದವರ ಜತೆ ವಾಸವಿದ್ದರು. ಗಲ್ಫ್ನಲ್ಲಿ ಕೆಲಸ ಮಾಡುತ್ತಿದ್ದ ಅವರ ತಂದೆ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಅವರು ಡಾ. ಇಎ ರುವಾಯಿಸ್ನನ್ನು ಪ್ರೀತಿಸುತ್ತಿದ್ದರು. ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು.
ಬಳಿಕ ಆ ಯುವಕನ ಕುಟುಂಬ ವರದಕ್ಷಿಣೆಗೆ ಡಿಮ್ಯಾಂಡ್ ಮಾಡಿದ ಹಿನ್ನಲೆಯಲ್ಲಿ ಅ ಮದುವೆ ಮುರಿದು ಬಿದ್ದಿತ್ತು. ಇದರಿಂದ ಮಾನಸಿಕ ಖಿನ್ನತೆ ಅನುಭವಿಸಿದ ಅಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆಕೆಯ ಸಂಬಂಧಿಕರು ಆರೋಪಿಸಿದ್ದಾರೆ. ಈ ವಿಚಾರ ಕೇರಳದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ (Veena George) ಅವರು ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೂಚಿಸಿದ್ದಾರೆ.
ತರುವಾಯ, ವೈದ್ಯಕೀಯ ಕಾಲೇಜು ಪೊಲೀಸರು ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಶಹಾನಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅದೇ ಸಂಸ್ಥೆಯಲ್ಲಿ ಪಿಜಿ ವಿದ್ಯಾರ್ಥಿಯಾಗಿರುವ ಯುವಕ ಪ್ರಕರಣದ ಆರೋಪಿ. ಈತ ಮೂಳೆ ಚಿಕಿತ್ಸೆಯಲ್ಲಿ ಪಿಜಿ ಮಾಡುತ್ತಿರುವ ವೈದ್ಯ.ಈತನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ವರದಕ್ಷಿಣೆಗಾಗಿ ಕಿರುಕುಳ ಪ್ರಕರಣ ದಾಖಲಾಗಿದೆ.
ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಾವು ದಾಖಲಿಸಿಕೊಂಡಿರುವ ವಿವಿಧ ಹೇಳಿಕೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಾಗಿದೆ. ಆ ಬಳಿಕವಷ್ಟೇ ಯುವಕನ ಬಂಧನ ಸೇರಿದಂತೆ ಮುಂದಿನ ಪ್ರಕ್ರಿಯೆಗಳ ಕುರಿತಾಗಿ ನಿರ್ಧರಿಸಲಾಗುವುದು” ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಆರಂಭದಲ್ಲಿ ಅಸಹಜ ಸಾವು ಎಂದು ಶಹನಾ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಶಹಾನಾ ಅವರ ಕುಟುಂಬಸ್ಥರು ದೂರು ನೀಡಿದ ಬಳಿಕ ಅದರಂತೆ ಐಪಿಸಿ ಸೆಕ್ಷನ್ಗಳನ್ನು ಬದಲಾಯಿಸಿದರು.

ವರದಕ್ಷಿಣೆಯಾಗಿ 150 ಪವನ್ ಚಿನ್ನ, ಐಷಾರಾಮಿ BMW ಕಾರು ಮತ್ತು 15 ಎಕ್ರೆ ಜಮೀನು ನೀಡುವಂತೆ ಆರೋಪಿ ಕುಟುಂಬ ಬೇಡಿಕೆಯಿಟ್ಟಿತ್ತು. ಆದರೆ, ಶಹನಾಳ ಮನೆಯವರಿಗೆ ಅಷ್ಟು ದೊಡ್ಡ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿಲ್ಲ . ಈ ಬಳಿಕ ವೈದ್ಯಕೀಯ ಪಿಜಿ ವೈದ್ಯರ ಸಂಘದ ಪ್ರತಿನಿಧಿಯೂ ಆಗಿದ್ದ ಆರೋಪಿ ವೈದ್ಯ ಶಹಾನಾ ಜೊತೆಗಿನ ಸಂಬಂಧವನ್ನು ಕಡಿತಗೊಳಿಸಿದ್ದಾನೆ.
ಪೊಲೀಸರು ಮೃತಳು ವಾಸ್ತವ್ಯವಿದ್ದ ಕೊಠಡಿಯಿಂದ ಡೆತ್ ನೋಟ್ ಅನ್ನು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ “ಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಎಂದು ಬರೆದು ಕೊಂಡಿದ್ದಾಳೆ . ತಾನೇ ಇಷ್ಟಪಟ್ಟು ಆಯ್ಕೆ ಮಾಡಿಕೊಂಡ ಗೆಳೆಯನ ಜತೆ ಮದುವೆಗೆ ಸಿದ್ಧತೆ ನಡೆಸಿದ್ದ ಡಾ. ಸಹನಾಗೆ ಇದು ಭಾರಿ ಆಘಾತ ಉಂಟುಮಾಡಿತ್ತು. ಇದರಿಂದ ತೀವ್ರ ನೊಂದಿದ್ದ ಸಹನಾ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ಮತ್ತು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ
ರಾಷ್ಟ್ರೀಯ
Divorce under Hindu Marriage Act : ಹಿಂದು ವಿವಾಹ ಕಾಯ್ದೆಯಡಿ ವಿಚ್ಛೇದನ ಪಡೆಯಲು ʼಈʼ ನಿಯಮ ಪಾಲನೆ ಕಡ್ಡಾಯ – ಕೊರ್ಟು ಮಹತ್ವದ ಆದೇಶ ; ಏನದು ನಿಯಮ ?

ಬೆಂಗಳೂರು: ಹಿಂದು ವಿವಾಹ ಕಾಯ್ದೆಯಡಿ ಪರಸ್ಪರ ಸಮ್ಮತಿಯ ಮೇರೆಗೆ ದಂಪತಿಗಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ವಿಚಾರಣಾ ನ್ಯಾಯಾಲಯ ಅರ್ಜಿಯನ್ನು ಏಕಾಏಕಿ ವಜಾಗೊಳಿಸದೆ 18 ತಿಂಗಳು ಕಾಯಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿದೆ ವಿಚ್ಛೇದನದ ಅರ್ಜಿ ವಜಾಗೊಳಿಸಿದ್ದ ವಿಚಾರಣಾ ಕೋರ್ಟ್ ಆದೇಶವನ್ನು ರದ್ದು ಮಾಡಿದ ನ್ಯಾ.ಕೆ.ಎಸ್. ಮುದ್ಗಲ್, ನ್ಯಾ ಕೆ.ವಿ.ಅರವಿಂದ ಅವರಿದ್ದ ಪೀಠವು ದಂಪತಿಗೆ ಮಧ್ಯಸ್ಥಿಕೆ ಕೇಂದ್ರ ಸಂರ್ಪಕಿಸಲು ಸೂಚಿಸಿದೆ.
ಮಧ್ಯಸ್ಥಿಕೆ ಕೇಂದ್ರ ವಿಚಾರಣಾ ನ್ಯಾಯಾಲಯಕ್ಕೆ ಮಧ್ಯಸ್ಥಿಕೆ ವರದಿಯನ್ನು ಸಲ್ಲಿಸಬೇಕು. ಆ ವರದಿ ಆಧರಿಸಿ ವಿಚಾರಣಾ ನ್ಯಾಯಾಲಯ ಕಾನೂನು ಪ್ರಕಾರ ವಿಚ್ಛೇದನ ಅರ್ಜಿಯನ್ನು ಇತ್ಯರ್ಥ ಪಡಿಸಬಹುದು ಎಂದು ಆದೇಶಿಸಿದೆ. ಪಕ್ಷಗಾರರ ಮನವಿ ಇಲ್ಲದೆ ವಿಚಾರಣಾ ನ್ಯಾಯಾಲಯ ತನ್ನಷ್ಟಕ್ಕೆ ಅರ್ಜಿಯನ್ನು ವಜಾಗೊಳಿಸಬಾರದು ಎಂದೂ ಸಹ ಪೀಠ ಹೇಳಿದೆ.
ಹಿಂದು ವಿವಾಹ ಕಾಯ್ದೆಯ ಸೆಕ್ಷನ್ 13ಬಿ ಅನ್ವಯ, ದಂಪತಿಗಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಮುನ್ನ ಈ ಕೆಳಗಿನ ಸೂಚನೆಗಳನ್ನು ಪಾಲಿಸಬೇಕು ಎಂದು ನ್ಯಾಯಪೀಠ ಆದೇಶಿಸಿದೆ.
- 1ವರ್ಷ ಪ್ರತ್ಯೇಕವಾಗಿ ವಾಸವಿರಬೇಕು. ಪಕ್ಷಗಾರರು ಜತೆಯಲ್ಲಿ ವಾಸ ಮಾಡುವಂತಿಲ್ಲ
- ಪರಸ್ಪರ ವಿವಾಹ ಸಂಬಂಧ ಮುರಿದುಕೊಳ್ಳಲು ಒಪ್ಪಿರಬೇಕು
- ಅರ್ಜಿ ಸಲ್ಲಿಸಿದ ಆರು ತಿಂಗಳವರೆಗೆ ಅವರು ಆ ಅರ್ಜಿಯನ್ನು ನ್ಯಾಯಾಲಯದ ಮುಂದೆ ಮಂಡಿಸುವಂತಿಲ್ಲ
ಆದರೆ, ಈ ಪ್ರಕರಣದಲ್ಲಿ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ಕೇವಲ 9 ತಿಂಗಳಿಗೆ ವಜಾಗೊಳಿಸಿದೆ. ನಿಗದಿಯಂತೆ ಪ್ರಕರಣದ ಇತ್ಯರ್ಥಕ್ಕೆ 18 ತಿಂಗಳು ಕಾಲಾವಕಾಶ ಇದೆ. ಅದಕ್ಕೂ ಹೆಚ್ಚಾಗಿ ಸೆಕ್ಷನ್ 13 ಬಿ(2) ನಿಯಮದ ಪಾಲನೆ ಆಗಿಲ್ಲ. ಹಾಗಾಗಿ ವಿಚಾರಣಾ ನ್ಯಾಯಾಲಯ ತಪ್ಪೆಸಗಿದೆ ಎಂದು ನ್ಯಾಯಪೀಠ ಹೇಳಿದೆ.
ಪ್ರಕರಣದ ಹಿನ್ನೆಲೆ:
ಅರ್ಜಿದಾರ ದಂಪತಿ 2020ರ ನ.27ರಂದು ಮದುವೆಯಾಗಿದ್ದರು ಮತ್ತು ಅವರು 2021ರ ಸೆ. ನಿಂದ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದರು. ಇಬ್ಬರೂ ವಿವಾಹ ಬಂಧನ ಕಡಿದುಕೊಳ್ಳಲು ಹಿಂದು ವಿವಾಹ ಕಾಯ್ದೆ ಸೆಕ್ಷನ್ 13ಬಿ ಅನ್ವಯ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಳ್ಳುವುದಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಮತ್ತೆ ಒಂದುಗೂಡುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ಮಾಡಿ ಎಂದು ಪ್ರಕರಣವನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ವರ್ಗಾಯಿಸಿತ್ತು
ಮಧ್ಯಸ್ಥಿಕೆದಾರರು ಇಬ್ಬರ ನಡುವೆ ಸಹಮತ ಮೂಡಿಸಲು ಪ್ರಯತ್ನಿಸಿದರಾದರೂ ಅದು ಫಲ ನೀಡಲಿಲ್ಲ. ಹಾಗಾಗಿ ಮಧ್ಯಸ್ಥಿಕೆ ಕೇಂದ್ರದ ವರದಿ ಆಧರಿಸಿ ವಿಚಾರಣಾ ನ್ಯಾಯಾಲಯ, ದಂಪತಿಗೆ ಈ ಪ್ರಕರಣ ಮುನ್ನಡೆಸಲು ಆಸಕ್ತಿ ಇಲ್ಲ ಎಂದು ದಾಖಲಿಸಿ ಕೇಸ್ ವಜಾ ಮಾಡಿತ್ತು. ಅದನ್ನು ಪ್ರಶ್ನಿಸಿ ಇಬ್ಬರೂ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು
ಆದರೆ, ಈ ಪ್ರಕರಣದಲ್ಲಿ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ಕೇವಲ 9 ತಿಂಗಳಿಗೆ ವಜಾಗೊಳಿಸಿದೆ. ನಿಗದಿಯಂತೆ ಪ್ರಕರಣದ ಇತ್ಯರ್ಥಕ್ಕೆ 18 ತಿಂಗಳು ಕಾಲಾವಕಾಶ ಇದೆ. ಅದಕ್ಕೂ ಹೆಚ್ಚಾಗಿ ಸೆಕ್ಷನ್ 13 ಬಿ(2) ನಿಯಮದ ಪಾಲನೆ ಆಗಿಲ್ಲ. ಹಾಗಾಗಿ ವಿಚಾರಣಾ ನ್ಯಾಯಾಲಯ ತಪ್ಪೆಸಗಿದೆ ಎಂದು ನ್ಯಾಯಪೀಠ ಹೇಳಿದೆ.
ರಾಷ್ಟ್ರೀಯ
Pancard latest update : ಪ್ಯಾನ್ ಕಾರ್ಡ್ ಕುರಿತು ಮಹತ್ವದ ಮಾಹಿತಿ – ಈ ತಪ್ಪು ಮಾಡಿದರೆ 10,000 ರೂ ದಂಡ ಗ್ಯಾರಂಟಿ

ಮುಂಬೈ: ಆದಾಯ ತೆರಿಗೆ ಇಲಾಖೆಯು ಈಗ ಹೊಸ ನಿಯಮ ಹೊರಡಿಸಿದೆ. ಈ ನಿಯಮ ಉಲ್ಲಂಘಿಸಿ ಸಿಕ್ಕಿಬಿದ್ದರೆ 10 ಸಾವಿರ ರೂಪಾಯಿ ದಂಡ ಗ್ಯಾರಂಟಿ. ಭಾರತದಲ್ಲಿ ಪ್ಯಾನ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದ್ದು ಯಾವುದೇ ನಾಗರೀಕ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಹಾಗೊಂದು ವೇಳೆ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ಗಳನ್ನು ಹೊಂದಿದ್ದರೆ ಅದನ್ನು ನಕಲು ಪ್ಯಾನ್ ಕಾರ್ಡ್ ಎನ್ನಲಾಗುವುದು. ಇದರಿಂದ ಸಮಸ್ಯೆ ಉಂಟಾಗುತ್ತದೆ.
ಕೆಲವರು ಉದ್ದೇಶಪೂರ್ವಕವಾಗಿ ಇನ್ನು ಕೆಲವರು ಕಾನೂನಿನ ಮಾಹಿತಿಯ ಕೊರತೆಯಿಂದ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದಿರುತ್ತಾರೆ, ಬಹುತೇಕರು ಪ್ಯಾನ್ ಕಾರ್ಡ್ ಕಳೆದು ಹೋದರೆ ಅದರ ಮತ್ತೊಂದು ಪ್ರತಿ ಪಡೆಯುವ ಬದಲು ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುತ್ತಾರೆ. ನಕಲಿ ಪ್ರತಿ ಪಡೆಯುವುದು ಕ್ಲಿಷ್ಟಕರ ಪ್ರಕ್ರಿಯೆಯಾಗಿರುವುದರಿಂದ ಜನರು ಹೊಸ ಕಾರ್ಡ್ ಗೆ ಅರ್ಜಿ ಗುಜರಾಯಿಸುತ್ತಾರೆ. ಆದರೇ ಹೀಗೆ ಮಾಡುವುದು ತಪ್ಪು
ನಿಮ್ಮಲ್ಲಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಇದ್ದರೆ ಈಗಲೇ ಎಚ್ಚೆತ್ತುಕೊಳ್ಳಿ. ಆದಾಯ ತೆರಿಗೆ ಕಾಯ್ದೆಯಲ್ಲಿ ಇದಕ್ಕೆ ಸಂಬಂಧಿಸಿದ ನಿಯಮಗಳು ಮತ್ತು ದಂಡಗಳ ಬಗ್ಗೆ ನೀವು ತಿಳಿದುಕೊಳ್ಳಬೇಕು. ಈ ದಂಡದಿಂದ ತಪ್ಪಿಸುವ ಮಾರ್ಗಗಳನ್ನು ಸಹ ನೀವು ತಿಳಿದುಕೊಳ್ಳಬೇಕು.
ಪ್ಯಾನ್ ಕಾರ್ಡ್ ಇಲ್ಲದೆ, ಒಬ್ಬ ವ್ಯಕ್ತಿಯು ಯಾವುದೇ ರೀತಿಯ ಬ್ಯಾಂಕ್ ವಹಿವಾಟು, ಸಾಲದ ಅರ್ಜಿ, ಆನ್ಲೈನ್ ಪಾವತಿ, ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದು ಮತ್ತು ಹೂಡಿಕೆ ಇತ್ಯಾದಿಗಳನ್ನು ಮಾಡುವುದು ಬಹುತೇಕ ಅಸಾಧ್ಯ. ಇದಲ್ಲದೆ, ಇದನ್ನು ಗುರುತಿನ ಪುರಾವೆಯಾಗಿಯೂ ಬಳಸಲಾಗುತ್ತದೆ. ಇದು 10 ಅಂಕಿಗಳ ವಿಶಿಷ್ಟ ಆಲ್ಫಾನ್ಯೂಮರಿಕ್ ಸಂಖ್ಯೆಯಾಗಿದ್ದು, ಆದಾಯ ತೆರಿಗೆ ಇಲಾಖೆಯಿಂದ ನೋಂದಾಯಿಸಲ್ಪಟ್ಟಿದೆ. ಈ ಕಾರಣಕ್ಕಾಗಿ, ಪ್ರತಿ ವ್ಯಕ್ತಿಗೆ ವಿಶೇಷ ಪ್ಯಾನ್ ಕಾರ್ಡ್ ನೀಡಲಾಗುತ್ತದೆ.
ಆದರೆ, ಇಂತಹ ಹೆಚ್ಚಿನ ಸೌಲಭ್ಯಗಳನ್ನು ಪಡೆಯಲು ಸಾಕಷ್ಟು ಜನರು ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ಗಳನ್ನು ಪಡೆಯುತ್ತಾರೆ. ಹಾಗಿದ್ದರೆ,ಭಾರತದಲ್ಲಿ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದಬಹುದಾ? ಎಂಬ ಪ್ರಶ್ನೆ ಬರುತ್ತದೆ
ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದುವುದು ಕಾನೂನು ಬಾಹಿರ:
ಪ್ಯಾನ್ ಕಾರ್ಡ್ ವಿಶಿಷ್ಟ ಸಂಖ್ಯೆಯನ್ನು ಹೊಂದಿದ್ದು, ಪ್ರತಿಯೊಬ್ಬ ವ್ಯಕ್ತಿಗೆ ಒಂದೇ ಪ್ಯಾನ್ ಕಾರ್ಡ್ ನೀಡಲಾಗುತ್ತದೆ. ಅಲ್ಲದೆ, ಅದನ್ನು ವರ್ಗಾಯಿಸಲಾಗುವುದಿಲ್ಲ. ಆದಾಯ ತೆರಿಗೆ ಇಲಾಖೆಯ ಪ್ರಕಾರ, ಪ್ರತಿಯೊಬ್ಬ ವ್ಯಕ್ತಿಯು ಕೇವಲ ಒಂದು ಪ್ಯಾನ್ ಸಂಖ್ಯೆಯನ್ನು ಹೊಂದಿರಬೇಕು. ಒಬ್ಬ ವ್ಯಕ್ತಿ ಅಥವಾ ಕಂಪನಿಯು ಒಂದಕ್ಕಿಂತ ಹೆಚ್ಚು ಪ್ಯಾನ್ ಸಂಖ್ಯೆಯನ್ನು ಹೊಂದಿರುವುದು ಕಾನೂನುಬಾಹಿರವಾಗಿದೆ. ಸಿಕ್ಕಿಬಿದ್ದರೆ, ಆದಾಯ ತೆರಿಗೆ ಇಲಾಖೆ ಕಾನೂನು ಕ್ರಮ ತೆಗೆದುಕೊಳ್ಳಬಹುದು ಅಥವಾ ಹಣಕಾಸಿನ ದಂಡವನ್ನು ವಿಧಿಸಬಹುದು.
ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದಿದ್ದರೆ 10,000 ರೂ ದಂಡ:
ಒಬ್ಬ ವ್ಯಕ್ತಿಯು ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದಿದ್ದರೆ, ಆದಾಯ ತೆರಿಗೆ ಕಾಯಿದೆ 1961 ರ ಸೆಕ್ಷನ್ 272B ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ಸೆಕ್ಷನ್ ಅಡಿಯಲ್ಲಿ, ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದಿರುವ ವ್ಯಕ್ತಿಗೆ 10,000 ರೂ.ಗಳ ದಂಡವನ್ನು ವಿಧಿಸಬಹುದು. ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ಗಳಿದ್ದಲ್ಲಿ, ವ್ಯಕ್ತಿಯು ಎರಡನೇ ಪ್ಯಾನ್ ಕಾರ್ಡ್ ಅನ್ನು ಸರೆಂಡರ್ ಮಾಡಬೇಕು.
ಪ್ಯಾ ನ್ ಕಾರ್ಡ್ ಸರೆಂಡರ್ ಮಾಡುವುದು ಹೇಗೆ?:
ಪ್ಯಾನ್ ಕಾರ್ಡ್ ಅನ್ನು ಸರೆಂಡರ್ ಮಾಡಲು, ಆನ್ಲೈನ್ ಅಥವಾ ಆಫ್ಲೈನ್ ಮೋಡ್ ಆಯ್ಕೆ ಮಾಡಬಹುದು. ಅದರ ವಿಧಾನ ಹೀಗಿದೆ.
ಆನ್ಲೈನ್ನಲ್ಲಿ ಪ್ಯಾನ್ ಕಾರ್ಡ್ ಅನ್ನು ಸರೆಂಡರ್ ಮಾಡಲು, ನೀವು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.
ಹಂತ 1: ಆನ್ಲೈನ್ನಲ್ಲಿ ಸರೆಂಡರ್ ಮಾಡಲು, ಆದಾಯ ತೆರಿಗೆ ಇಲಾಖೆಯ ಆನ್ಲೈನ್ ಪೋರ್ಟಲ್ಗೆ ಭೇಟಿ ನೀಡಿ ಅಥವಾ https://www.tin-nsdl.com/faqs/pan/faq-pan-cancellation.html ಕ್ಲಿಕ್ ಮಾಡಿ.
ಹಂತ 2: ಫಾರ್ಮ್ನ ಮೇಲ್ಭಾಗದಲ್ಲಿ ನೀವು ಪ್ರಸ್ತುತ ಬಳಸುತ್ತಿರುವ PAN ನಮೂದಿಸುವ ಮೂಲಕ PAN ಬದಲಾವಣೆ ವಿನಂತಿಯ ಅರ್ಜಿ ನಮೂನೆ ಸಲ್ಲಿಸಿ.
ಹಂತ 3: ಫಾರ್ಮ್ 11 ಮತ್ತು ಸಂಬಂಧಿತ ಪ್ಯಾನ್ ಕಾರ್ಡ್ನ ಪ್ರತಿಯನ್ನು ಫಾರ್ಮ್ನೊಂದಿಗೆ ಪ್ರಸ್ತುತಪಡಿಸಬೇಕು.
ಆಫ್ಲೈನ್ ಸರೆಂಡರ್ ಪ್ರಕ್ರಿಯೆ ಹೀಗಿದೆ.
ಹಂತ 1: PAN ಅನ್ನು ಆಫ್ಲೈನ್ನಲ್ಲಿ ಸಲ್ಲಿಸಲು ಫಾರ್ಮ್ 49A ಅನ್ನು ಭರ್ತಿ ಮಾಡಿ. ಸರೆಂಡರ್ ಮಾಡಬೇಕಾದ ಪ್ಯಾನ್ ಸಂಖ್ಯೆಯನ್ನು ನಮೂದಿಸಿ ಮತ್ತು ಫಾರ್ಮ್ ಅನ್ನು ಯುಟಿಐ ಅಥವಾ ಎನ್ಎಸ್ಡಿಎಲ್ ಟಿನ್ ಫೆಸಿಲಿಟೇಶನ್ ಸೆಂಟರ್ಗೆ ಸಲ್ಲಿಸಿ.
ಹಂತ 2: ನಿಮ್ಮ ಅಧಿಕಾರ ವ್ಯಾಪ್ತಿಯ ಮೌಲ್ಯಮಾಪನ ಅಧಿಕಾರಿಗೆ ಪತ್ರವನ್ನು ಬರೆಯಿರಿ, ನಿಮ್ಮ ಪ್ಯಾನ್ ಕಾರ್ಡ್ನಲ್ಲಿ ಪೂರ್ಣ ಹೆಸರು, ಹುಟ್ಟಿದ ದಿನಾಂಕದಂತಹ ನಿಮ್ಮ ವೈಯಕ್ತಿಕ ವಿವರಗಳನ್ನು ನಮೂದಿಸಿ. http://www.incometaxindiaefiling.gov.in ನಲ್ಲಿ ನಿಮ್ಮ ಅಧಿಕಾರ ವ್ಯಾಪ್ತಿಯಲ್ಲಿರುವ ಅಧಿಕಾರಿಯನ್ನು ನೀವು ನೋಡಿಕೊಳ್ಳಬಹುದು.
ಹಂತ 3: NSDL TIN ಫೆಸಿಲಿಟೇಶನ್ ಸೆಂಟರ್ನಿಂದ ಸ್ವೀಕರಿಸಿದ ಸ್ವೀಕೃತಿ ಪ್ರತಿಯೊಂದಿಗೆ ನಕಲಿ PAN ನ ನಕಲನ್ನು ಲಗತ್ತಿಸಿ ಸಲ್ಲಿಸಿ.
-
ಸಿನೆಮಾ2 days ago
ಬಿ – ಟೌನ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇದನ ಸುದ್ದಿ – ನಿಜಕ್ಕೂ ಅವರಿಬ್ಬರ ಮಧ್ಯೆ ಆಗಿರುವುದೇನು ?
-
ದಕ್ಷಿಣ ಕನ್ನಡ2 days ago
ಪುತ್ತೂರು : ಕುಡಿದು ಟೈಟಾಗಿದ್ದ ಚಾಲಕ ವಿವೇಕಾನಂದ ವಿದ್ಯಾ ಸಂಸ್ಥೆಯ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ – ಮಾಜಿ ಶಾಸಕಿಯ ಪುತ್ರನ ಕಾರು ಸೇರಿ 3 ವಾಹನಕ್ಕೆ ಢಿಕ್ಕಿ – ಪಾನಮತ್ತ ಚಲಾಯಿಸುತ್ತಿದ್ದ ಬಸ್ಸಿನಲ್ಲಿದ್ದರು ವಿದ್ಯಾರ್ಥಿಗಳು..̆
-
ದಕ್ಷಿಣ ಕನ್ನಡ2 days ago
ವಿಟ್ಲ : ಅಡಿಕೆ ಮರ ಮುರಿದು ಬಿದ್ದು ಮಹಿಳೆ ಸಾವು
-
ರಾಜಕೀಯ2 days ago
CM Siddaramaiah: ಐಸಿಸ್ ಉಗ್ರ ಸಂಘಟನೆಯ ಬೆಂಬಲಿಗನ ಜತೆ ಹುಬ್ಬಳಿಯಲ್ಲಿ ವೇದಿಕೆ ಹಂಚಿಕೊಂಡ ಸಿ. ಎಂ.ಸಿದ್ದರಾಮಯ್ಯ : ಚಿತ್ರ ಸಹಿತ ಯತ್ನಾಳ್ ಗಂಭೀರ ಆರೋಪ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
-
ಸುಳ್ಯ1 day ago
College student rape case ಪುತ್ತೂರು : ಕಾಲೇಜ್ ವಿದ್ಯಾರ್ಥಿನಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ಬಂಧಿತ ಆರೊಪಿಗೆ 2 ತಿಂಗಳ ಬಳಿಕ ಜಾಮೀನು
-
Uncategorized2 days ago
loan write off ದೇಶದ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಕಳೆದ 5 ವರ್ಷಗಳಲ್ಲಿ 10.57 ಲಕ್ಷ ಕೋಟಿ ರೂ. ರೈಟ್-ಆಫ್….
-
ಉದ್ಯೋಗ1 day ago
Job Alert: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ – ಸದ್ಯದಲ್ಲೆ ಸಾರಿಗೆ ಇಲಾಖೆಗೆ 9 ಸಾವಿರ ಸಿಬ್ಬಂದಿಗಳ ನೇಮಕ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
-
ಪುತ್ತೂರು1 day ago
Puthila Parivara | ಪುತ್ತೂರು ನಗರಸಭೆ 2 ವಾರ್ಡ್ ಮರುಮತದಾನ – ಬಿಜೆಪಿ ಕಾಂಗ್ರೇಸ್ ನಡುವೆ ಕಾರ್ಯಕರ್ತರ ಒತ್ತಾಯದಂತೆ ಪುತ್ತಿಲ ಪರಿವಾರ ಮತ್ತೊಂದು ಚುನಾವಣೆ ಎದುರಿಸುವುದು ಬಹುತೇಕ ಫಿಕ್ಸ್ : ವಿಧಾನಸಭಾ ಚುನಾವಣೆಯಲ್ಲಿ ಈ ವಾರ್ಡ್ ಗಳಲ್ಲಿ ಯಾರಿಗೆ ಎಷ್ಟು ಮತದಾನವಾಗಿತ್ತು ಗೊತ್ತೇ.?