ಬಿಗ್ ನ್ಯೂಸ್
Indira Canteen | ಹಸಿದ ಹೊಟ್ಟೆ ತಣಿಸುವ ಸಿದ್ದು ಸರ್ಕಾರದ ಮಹತ್ವಾಕಾಂಕ್ಷೆಯ ‘ಇಂದಿರಾ ಕ್ಯಾಂಟಿನ್’ ಸಿಬ್ಬಂದಿಗೆ 6 ತಿಂಗಳಿನಿಂದ ವೇತನವಿಲ್ಲ : ಪ್ರತಿಭಟನೆ ನಂತರ ಒಂದು ತಿಂಗಳ ವೇತನ ಪಾವತಿ : ಬಡವರ ಹಸಿವು ನೀಗಿಸುವ ಸಿಬ್ಬಂದಿಗಳ ಮನೆಯಲ್ಲಿ ಪರದಾಡ : ಪುತ್ತೂರು ಮತ್ತು ಬಂಟ್ವಾಳದಲ್ಲಿ ಪ್ರತಿದಿನ ಎಷ್ಟು ಹಸಿದ ಹೊಟ್ಟೆಗಳಿಗೆ ನೆರವಾಗುತ್ತೇ ಗೊತ್ತೇ..?
ಕೊರೊನಾ ಕಾಲದಲ್ಲಿ ನಿಯಮಗಳನ್ನು ಪಾಲಿಸಿಕೊಂಡು ತೆರೆದಿದ್ದ ಸಂದರ್ಭ ಬಡವರ ಹಸಿದ ಹೊಟ್ಟೆಗಳನ್ನು ತಣಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇಂದಿರಾ ಕ್ಯಾಂಟೀನ್ (Indira Canteen) ನೌಕರರ ವೇತನ ಸಮಸ್ಯೆ ಇನ್ನೂ ಕಗ್ಗಂಟಾಗಿಯೇ ಇದೆ. ಮೂರು ದಿನ ಕ್ಯಾಂಟೀನ್ ಬಂದ್ ಮಾಡಿ ಪ್ರತಿಭಟಿಸಿದ ಕಾರಣ ಒಂದು ತಿಂಗಳ ವೇತನವನ್ನೇನೋ ಪಾವತಿಸಿದ್ದಾರೆ. ಆದರೆ ಐದು ತಿಂಗಳ ಪಾವತಿ ಇನ್ನೂ ಬಾಕಿ ಇದೆ.
ಪುತ್ತೂರು ಮಿನಿ ವಿಧಾನಸೌಧ ಹಾಗೂ ಬಿ.ಸಿ.ರೋಡ್ನ ಮಿನಿ ವಿಧಾನಸೌಧದ ಪಕ್ಕದಲ್ಲೇ ಕ್ಯಾಂಟೀನ್ ಆರಂಭಗೊಂಡ ಸಂದರ್ಭ ಇಲ್ಲಿ ಸೇರಿದ್ದ ನೌಕರರಿಗೆ ಆರಂಭದಿಂದಲೇ ಸರಿಯಾಗಿ ತಿಂಗಳ ಮೊದಲ ವಾರ ವೇತನ ದೊರಕುತ್ತಿರಲಿಲ್ಲ. ಒಂದು ಬಾರಿ ಪ್ರತಿಭಟನೆ ನಡೆಸಿ ಸುದ್ದಿಯಾದ ವೇಳೆ ಗುತ್ತಿಗೆ ವಹಿಸಿಕೊಂಡ ಏಜೆನ್ಸಿಯವರು ಪಾವತಿ ಮಾಡಿದ್ದು ಬಿಟ್ಟರೆ, ಮತ್ತೆ ಅದೇ ಸಮಸ್ಯೆ.
ಮನೆ ಮಂದಿಗೆ ಅಕ್ಕಿ, ಬೇಳೆ ಕೊಂಡು ಹೋಗಲೂ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದರೆ, ಏಜೆನ್ಸಿಯವರನ್ನು ಕೇಳಿದಾಗ ನೀವು ಡಿ.ಸಿ.ಗೆ ದೂರು ನೀಡಿ ಎಂದು ಉತ್ತರ ನೀಡಿದ್ದಾಗಿ ತಿಳಿಸಿದ್ದಾರೆ. ಹೀಗಾಗಿ ಕ್ಯಾಂಟೀನ್ ನೌಕರರು ಕಂಗಾಲಾಗಿದ್ದಾರೆ.
”ಕೊರೊನಾ ಬಂದಾಗಲೂ ನಾವು ಕ್ಯಾಂಟೀನ್ ತೆರೆದಿದ್ದು, ಸೇವೆ ನೀಡಿದ್ದೆವು. ಕ್ಯಾಂಟೀನ್ ಆರಂಭದ ದಿನದಿಂದ ಇದುವರೆಗೂ ಸರಿಯಾದ ವೇತನ ದೊರಕುತ್ತಿಲ್ಲ. ಅದರಲ್ಲೂ ನಮಗೆ ಆರು ತಿಂಗಳಿಂದ ಸರಿಯಾದ ವೇತನವನ್ನು ನೀಡಿಲ್ಲ. ಈ ಹಿನ್ನೆಲೆಯಲ್ಲಿ ನ.30ರಿಂದ ಮೂರು ದಿನ ನಾವು ಕ್ಯಾಂಟೀನ್ ಬಂದ್ ಮಾಡಿದ್ದೆವು. ಇದೀಗ ಒಂದು ತಿಂಗಳ ಸಂಬಳವನ್ನು ಹಾಕಿದ್ದು, ಇನ್ನು ಐದು ತಿಂಗಳ ವೇತನ ಬಾಕಿ ಇದೆ. ಆದಾಗ್ಯೂ ನಮ್ಮ ಹಾಗಿರುವ ಬಡ ಜನರಿಗೋಸ್ಕರ ನಾವು ಕ್ಯಾಂಟೀನ್ ತೆರೆದಿದ್ದೇವೆ”ಹೀಗೆಂದವರು ಬಿ.ಸಿ.ರೋಡ್ ಆಡಳಿತ ಸೌಧದ ಪಕ್ಕದಲ್ಲೇ ಕಳೆದ ನಾಲ್ಕು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಇಂದಿರಾ ಕ್ಯಾಂಟೀನ್ ನೌಕರ ಆನಂದ ಪೂಜಾರಿ.
ಪುತ್ತೂರು , ಬಿ.ಸಿ. ರೋಡ್ನಲ್ಲಿರುವ ಕ್ಯಾಂಟೀನ್ ನೌಕರರಷ್ಟೇ ಅಲ್ಲ, ಹಲವೆಡೆ ಇಂದಿರಾ ಕ್ಯಾಂಟೀನ್ ನೌಕರರಿಗೆ ಸರಿಯಾದ ವೇತನ ಬಂದಿಲ್ಲ. ಮೊನ್ನೆ ಪ್ರತಿಭಟನಾರ್ಥವಾಗಿ ಬಂದ್ ಮಾಡಿದ ಕಾರಣ ಇದರ ಗುತ್ತಿಗೆ ನಿರ್ವಹಿಸುವವರು ಒಂದು ತಿಂಗಳ ವೇತನ ನೀಡಿ ನೀವು ಬಂದ್ ಮಾಡಬೇಡಿ, ಎಂದಿದ್ದಾರೆ. ಆದರೆ ಐದು ತಿಂಗಳ ವೇತನ ಒಮ್ಮೆಗೇ ಸಿಗುವುದು ಡೌಟು ಎಂಬ ಅನುಮಾನ ಅವರಿಗೂ ಇದೆ.
ಇಲ್ಲಿಗೆ 10 ರೂ.ಗೆ ಊಟ, 5 ರೂ.ಗೆ ತಿಂಡಿ ಸೇವಿಸಲು ಬರುವವರು ಬಡವರು. ಹೀಗಾಗಿ ಅವರಿಗೆ ತೊಂದರೆ ಆಗಬಾರದು ಎಂಬ ಕಳಕಳಿಯೂ ನಮಗಿದೆ ಎನ್ನುತ್ತಾರೆ ಇಲ್ಲಿನ ನೌಕರರು.
ಪುತ್ತೂರು, ಬಂಟ್ವಾಳದಲ್ಲಿ ಎಷ್ಟು ಹಸಿದ ಹೊಟ್ಟೆಗಳಿಗೆ ನೆರವಾಗುತ್ತಿದೆ ಗೊತ್ತೇ..? : ಪುತ್ತೂರಿನಲ್ಲಿ 150 ವಿದ್ಯಾರ್ಥಿಗಳು ಸೇರಿ 400 ಜನರಷ್ಟು ಪ್ರತಿದಿನ ಊಟ ಮತ್ತು ತಿಂಡಿ ಸೇವಿಸುತ್ತಾರೆ. ಮೂವರು ಸಿಬ್ಬಂದಿ ಇಲ್ಲಿ ಕೆಲಸ ಮಾಡುತ್ತಿದ್ದಾರೆ.
ಬಂಟ್ವಾಳ ಇಂದಿರಾ ಕ್ಯಾಂಟೀನ್ ಗೆ ಪ್ರತಿದಿನ 300ರಷ್ಟು ಮಂದಿ ಆಗಮಿಸಿ ಊಟ, 350 ಮಂದಿ ತಿಂಡಿ ಸೇವಿಸುತ್ತಾರೆ. ನಾಲ್ವರು ಸಿಬ್ಬಂದಿ ಇಲ್ಲಿ ಕೆಲಸ ಮಾಡುತ್ತಿದ್ದೇವೆ. ಒಳಗೆ ಅಡುಗೆ ಮನೆಯಲ್ಲಿ ಕೆಲವೊಮ್ಮೆ ವಿದ್ಯುತ್ ಶಾಕ್ ಕೂಡ ಬರುತ್ತಿದ್ದ ವೇಳೆ ನಾವು ಕೆಲಸ ಮಾಡಿದ್ದೇವೆ ಎಂದು ಇಲ್ಲಿನ ನೌಕರರು ಅಳಲು ತೋಡಿಕೊಂಡರು.
ಹೋಟೆಲ್ನವರ ಮಾನವೀಯತೆ: ಪುತ್ತೂರು ಇಂದಿರಾ ಕ್ಯಾಂಟೀನ್ ನಲ್ಲಿ ಮಧ್ಯಾಹ್ನದ ಊಟ ಮಾಡಿ ಹಸಿವು ನೀಗಿಸಿಕೊಳ್ಳುತ್ತಿದ್ದ ಕೆಲವು ವಿದ್ಯಾರ್ಥಿಗಳು ಬುಧವಾರ ಇಂದಿರಾ ಕ್ಯಾಂಟೀನ್ಗೆ ಊಟಕ್ಕೆ ಬಂದು ಹಿಂತಿರುಗಬೇಕಾಯಿತು. ಈ ನಡುವೆ ಇಂದಿರಾ ಕ್ಯಾಂಟೀನ್ಗೆ ಊಟಕ್ಕೆಂದು ಬಂದ ಕೆಲವು ವಿದ್ಯಾರ್ಥಿಗಳಿಗೆ ಪಕ್ಕದ ಶಿವಪ್ರಸಾದ್ ಹೋಟೆಲ್ನವರು 20 ರೂ. ರಿಯಾಯಿತಿ ದರದಲ್ಲಿ ಊಟ ನೀಡಿ ಮಾನವೀಯತೆ ಮೆರೆದಿದ್ದಾರೆ.
ಸಾಮಾಜಿಕ ಮಾಧ್ಯಮ
Hasana sex tape : ಚುನಾವಣೆ ಹೊಸ್ತಿಲಲ್ಲಿ ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್ ಡ್ರೈವ್ ಸೌಂಡ್ ! ಅಸಲಿಯ / ನಕಲಿಯ ತೀವ್ರ ಚರ್ಚೆ
ಹಾಸನ ಲೋಕಸಭಾ ಕ್ಷೇತ್ರದ ರಾಜಕೀಯ ಪಕ್ಷವೊಂದರ ಅಭ್ಯರ್ಥಿಯೊರು ಭಾಗಿಯಾಗಿದ್ದಾರೆ ಎನ್ನಲಾದ ನೂರಾರು ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ವೊಂದು ಇದೆ ಎಂಬ ಸುದ್ದಿ ಕ್ಷೇತ್ರದಾದ್ಯಂತ ಚುನಾವಣೆಯಲ್ಲಿ ಭಾರಿ ಸಂಚಲನ ಉಂಟು ಮಾಡಿದೆ. ಕೆಲ ಅಶ್ಲೀಲ ವಿಡಿಯೋ ಹಾಗೂ ಫೋಟೊಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇವು ಆ ಪೆನ್ ಡ್ರೈವ್ ಒಳಗಿನಿಂದ ಸೋರಿಕೆ ಮಾಡಲಾದ ಕ್ಲಿಪಿಂಗ್ ಗಳು ಎಂದು ಹೇಳಲಾಗುತ್ತಿದೆ.
ಚುನಾವಣೆ ಹೊಸ್ತಿಲಲ್ಲಿ , 3 ದಿನಗಳ ಹಿಂದೆಯಷ್ಟೆ ಈ ಪೆನ್ ಡ್ರೈವ್ ಚರ್ಚೆ ಮುನ್ನಲೆಗೆ ಬಂದಿದೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ. ತನ್ನಲ್ಲಿ ಕೆಲಸ ಕೇಳಿ ಬಂದ ಯುವತಿಯರು ಹಾಗೂ ಮಹಿಳೆಯರನ್ನು ಆ ವ್ಯಕ್ತಿ ವಿಕೃತವಾಗಿ ಬಳಸಿಕೊಂಡಿದ್ದಾನೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಆದರೇ ರಾಜಕಾರಣಿಯ ಬೆಂಬಲಿಗರು ಈ ಆರೋಪಗಳನ್ನು ನಿರಾಕರಿಸಿದ್ದು. ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಈ ವಿಡಿಯೋಗಳನ್ನು ಎಂದು ಅಭ್ಯರ್ಥಿಯ ಬೆಂಬಲಿಗರು ಪೊಲೀಸ್ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದಾರೆ.
ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಇಷ್ಟು ದಿನಗಳ ಬಳಿಕ ಇದೀಗ ಕೊನೆಯ ಹಂತದಲ್ಲಿ ಈ ರಾಸಲೀಲೆಯ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಬಗ್ಗೆ ಚರ್ಚೆ ನಡೆಯುತ್ತಿರುವುದು ಕುತೂಹಲ ಮೂಡಿದ್ದು, ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ.
ಈ ಪೆನ್ಡ್ರೈನಲ್ಲಿ ಸುಮಾರು ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಇದರಲ್ಲಿರುವ ಎನ್ನಲಾದ ಅಭ್ಯರ್ಥಿ ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದ. ಆ ಲೈಂಗಿಕ ಚಟುವಟಿಕೆಯನ್ನು ತಾನೇವಿಡಿಯೋ ಮಾಡಿಟ್ಟುಕೊಳ್ಳುತ್ತಿದ್ದ. ಈಗಾಗಲೇ ಕ್ಷೇತ್ರದ ಹಲವರು ಹಲವರು ಈ ಈ ವಿಡಿಯೋಗಳನ್ನು ನೋಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅದರ ತುಣುಕುಗಳು ಹರಿದಾಡುತ್ತಿವೆ.
ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿ ಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆದರೆ, ಇದೀಗ ಈ ವಿಡಿಯೋಗಳನ್ನು ತಾವು ಬಹಿರಂಗ ಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.
ಬಿಗ್ ನ್ಯೂಸ್
NOTAForSoujanyaCase : ಸೌಜನ್ಯ ಪ್ರಕರಣ : ಟ್ವಿಟರ್ ಟ್ರೆಂಡಿಂಗಲ್ಲಿ 3ನೇ ಸ್ಥಾನ ಪಡೆದ ನೋಟಾ ಅಭಿಯಾನ
ಮಂಗಳೂರು: 2012ರ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಇದೀಗ ಬಾರಿ ಸದ್ದು ಮಾಡುತ್ತಿದೆ.
ಸೌಜನ್ಯ ಪರ ಹೋರಾಟಗಾರರು ಎ.26ರಂದು ಜರಗುವ ಲೋಕಸಭಾ ಚುನಾವಣೆಯಲ್ಲಿ ನೋಟಾ ಮತದಾನದ ಅಭಿಯಾನ ಕೈಗೊಂಡಿದ್ದಾರೆ.
ಟ್ವಿಟರ್ (ಎಕ್ಸ್) ನಲ್ಲಿ #NOTAForSoujanyaCase ಎಂಬ ಟ್ರೆಂಡಿಂಗ್ 3ನೇ ಸ್ಥಾನ ಪಡೆದಿದೆ.
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನೋಟಾ ಅಭಿಯಾನದ ಪರ ಪ್ರಚಾರ ಕಾರ್ಯವನ್ನು ಹೋರಾಟಗಾರರು ನಡೆಸುತ್ತಿದ್ದಾರೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನೋಟಾ ಪರಿಣಾಮ ಯಾವಾ ರೀತಿ ಪಲಿತಾಂಶದ ಮೇಲೆ ಪರಿಣಾಮ ಬೀರಬಹುದೆಂಬ ಅಂಕಿಅಂಶ ಇನ್ನೂ ಕೂಡ ರಾಜಕೀಯ ಪಂಡಿತರಿಗೆ ಅಂದಾಜಿಸಲು ಸಾಧ್ಯವಾಗಿಲ್ಲ.
ಬಿಗ್ ನ್ಯೂಸ್
ಪದ್ಮರಾಜ್ ಆರ್ ಪೂಜಾರಿ ಬಿಲ್ಲವನಲ್ಲ – ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ – ಜಿಲ್ಲಾ ಕಾಂಗ್ರೆಸ್ ನಿಂದ ಪೊಲೀಸ್ ಕಮೀಷನರ್ ಗೆ ದೂರು
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಯವರ ಜಾತಿಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸುತ್ತಿದ್ದು ಇದರ ವಿರುದ್ದ , ಜಿಲ್ಲಾ ಕಾಂಗ್ರೆಸ್ ಮಂಗಳೂರು ಪೊಲೀಸ್ ಕಮೀಷನರ್ ಗೆ ದೂರು ನೀಡಿದೆ.
ಗಣೇಶ್ ಶೆಟ್ಟಿ ಎಂಬವರು ಯುವನಾಯಕ ಬ್ರಿಜೇಶ್ ಚೌಟ ಫೇಸ್ ಬುಕ್ ಪೇಜಿನಲ್ಲಿ ಹಾಗು ಡಾಕ್ಟರ್ಸ್ ಲೀವ್ ಸ್ಟೇಸ್ಟಸ್ ಗ್ರೂಫಿನಲ್ಲಿ ಸಂತೋಷ್ ಕುಮಾರ್ ಎಂಬಾತ ಅಪಪ್ರಚಾರ ನಡೆಸಿದ್ದಾನೆಂದು ದೂರಿನಲ್ಲಿ ಆರೋಪಿಸಲಾಗಿದೆ.
ಪದ್ಮರಾಜ್ ಆರ್ ಪೂಜಾರಿಯವರು ಬಿಲ್ಲವ ಸಮುದಾಯಕ್ಕೆ ಸೇರಿದವರಲ್ಲ. ಅವರು ಹಿಂದೂ ಯುವಕನ ಕೊಲೆ ಕೇಸಿನಲ್ಲಿ ಕೊಲೆ ಆರೋಪಿ ಪಿ ಎಫ್ ಐ ಕಾರ್ಯಕರ್ತನ ಪರ ವಕಾಲತ್ತು ವಹಿಸಿದ್ದಾರೆ ಇತ್ಯಾದಿ ಸುಳ್ಳು ಸುದ್ದಿಗಳನ್ನು ಒಳಗೊಂಡ ಪೋಸ್ಟ್ ವೊಂದನ್ನು ವಿರೋದಿಗಳು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಹಂಚುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ.
ಈ ಹಿಂದೆ ಜನಾರ್ಧನ ಪೂಜಾರಿಯನ್ನು ಅನುಸರಿಸಿದ ಅಪಪ್ರಚಾರದ ತಂತ್ರವನ್ನೆ ಅವರ ಶಿಷ್ಯ ಪದ್ಮರಾಜ್ ವಿರುದ್ದವು ಅನುಸರಿಸುತ್ತಿದ್ದು, ಮತದಾರರು ಇದನ್ನು ಸೂಕ್ಷ್ಮವಾಗಿ ಗಮನಿಸಿ ಮುಂಬರುವ ಚುನಾವಣೆಯಲ್ಲಿ ಮತದಾನ ಮಾಡಬೇಕೆಂದು ಅದು ವಿನಂತಿಸಿದೆ.
-
ಸಾಮಾಜಿಕ ಮಾಧ್ಯಮ20 hours ago
Hasana sex tape : ಚುನಾವಣೆ ಹೊಸ್ತಿಲಲ್ಲಿ ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್ ಡ್ರೈವ್ ಸೌಂಡ್ ! ಅಸಲಿಯ / ನಕಲಿಯ ತೀವ್ರ ಚರ್ಚೆ
-
ದಕ್ಷಿಣ ಕನ್ನಡ20 hours ago
Student harrased in bus ಉಪ್ಪಿನಂಗಡಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿದ್ಯಾರ್ಥಿನಿಗೆ ಜತೆ ಸಹ ಪ್ರಯಾಣಿಕನಿಂದ ಕಿರುಕುಳ – ಯುವತಿ ವ್ಯಗ್ರಗೊಳ್ಳುತ್ತಾಳೆ ಕಿಟಕಿಯಿಂದ ಹಾರಿ ಆರೋಪಿ ಪರಾರಿ – ಮುಂದೇನಾಯಿತು ?
-
ಬಿಗ್ ನ್ಯೂಸ್1 day ago
NOTAForSoujanyaCase : ಸೌಜನ್ಯ ಪ್ರಕರಣ : ಟ್ವಿಟರ್ ಟ್ರೆಂಡಿಂಗಲ್ಲಿ 3ನೇ ಸ್ಥಾನ ಪಡೆದ ನೋಟಾ ಅಭಿಯಾನ
-
ನಿಧನ ವಾರ್ತೆ19 hours ago
Bhagavata Subramanya Dhareshwara-ಹಾಡು ನಿಲ್ಲಿಸಿದ ಬಡಗುತಿಟ್ಟಿನ ಗಾನ ಕೋಗಿಲೆ – ಯಕ್ಷಗಾನದ ಹಿರಿಯ ಭಾಗವತ ಸುಬ್ರಮಣ್ಯ ಧಾರೇಶ್ವರ ಇನ್ನಿಲ್ಲ
-
ಅಪರಾಧ2 days ago
Online acquaintance-ಆನ್ ಲೈನ್ ಪರಿಚಿತ ಗೆಳೆಯ ಮಹಿಳೆಯ ಜೀವಾಂತ್ಯಗೊಳಿಸಿದ
-
ನಿಧನ ವಾರ್ತೆ2 days ago
Run over-ತಂದೆಯಿಂದಲೇ ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣ
-
ಮಂಗಳೂರು18 hours ago
Janardhana Poojary-ಹಿಂದುತ್ವದ ಅಮಲಿನಲ್ಲಿ ಹಿಂದುಳಿದ ವರ್ಗದ ಯುವಕರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಮೇಲ್ವರ್ಗದವರು ಅಧಿಕಾರ ನಡೆಸುತ್ತಿದ್ದಾರೆ- ಇದಕ್ಕೆಲ್ಲ ತಿಲಾಂಜಲಿ ನೀಡುವ ಕೆಲಸ ಪದ್ಮರಾಜ್ ಆರ್ ಪೂಜಾರಿಯನ್ನು ಗೆಲ್ಲಿಸುವ ಮೂಲಕ ಆಗಬೇಕಿದೆ :ಜನಾರ್ದನ ಪೂಜಾರಿ
-
ದಕ್ಷಿಣ ಕನ್ನಡ2 days ago
ಬೆಲೆಯೆರಿಕೆ ಗಗನಕ್ಕೆರಿದ ಸಂದರ್ಭ ಸಿದ್ದರಾಮಯ್ಯ ಸರಕಾರ ಗ್ಯಾರಂಟಿ ಮೂಲಕ ಮಹಿಳೆಯರ ನೆರವಿಗೆ ನಿಂತಿದೆ : ಅನಿತಾ ಹೇಮನಾಥ ಶೆಟ್ಟಿ