ಸ್ಥಳೀಯ
Heart Attack : ಬಂಟ್ವಾಳ : ಯಕ್ಷಗಾನದ ಚೌಕಿಯಲ್ಲೇ ಹೃದಯಾಘಾತಕ್ಕೆ ತುತ್ತಾಗಿ ಚೌಕಿ ಸಹಾಯಕ ಮೃತ್ಯು
ಬಂಟ್ವಾಳ: ಕಟೀಲು ಮೇಳದ ಚೌಕಿ ಸಹಾಯಕ ಯಕ್ಷಗಾನ ಮುಗಿದ ಬಳಿಕ ಪರಿಕರಗಳನ್ನು ಜೋಡಿಸುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಡಿ 5 ರಂದು ತಡರಾತ್ರಿ 1 ಗಂಟೆ ಸುಮಾರಿಗೆ ಬಿ.ಸಿ. ರೋಡಿನ ಪಲ್ಲಮಜಲು ಎಂಬಲ್ಲಿ ನಡೆದಿದೆ.
ಕಟೀಲು ಶ್ರೀದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಯ ಐದನೇ ಮೇಳದಲ್ಲಿ ಯಕ್ಷಗಾನ ಚೌಕಿ (ಗ್ರೀನ್ ರೂಮ್)ನಲ್ಲಿ ಸಹಾಯಕರಾಗಿದ್ದ ಅಚ್ಯುತ ನಾಯಕ್ (45) ಮೃತಪಟ್ಟವರು. ಅಚ್ಯುತ ನಾಯಕ್ ಅವರು ಮಣಿನಾಲ್ಕೂರು ಗ್ರಾಮದ ಕೊಡಂಗೆ ನಿವಾಸಿ.
ಯಕ್ಷಗಾನ ಮುಗಿದ ಬಳಿಕ ಕಲಾವಿದರ ಬಟ್ಟೆಗಳನ್ನು ತುಂಬಿಸಿ, ಪರಿಕರಗಳನ್ನು ಜೋಡಿಸಿ ಮನೆಗೆ ಹೊರಡಲು ಸಿದ್ದರಾಗುತ್ತಿದಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆ ತಂದಿದ್ದು , ಅಲ್ಲಿನ ವೈದಯರ ಸಲಹೆಯಂತೆ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು,ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಕಳೆದ ಹಲವು ವರ್ಷಗಳಿಂದ ಕಟೀಲು ಮೇಳದ ಚೌಕಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಅವರು ಈ. ಹಿಂದೆ ಸರಪಾಡಿ ಸೇರಿದಂತೆ ಹಲವೆಡೆ ಸಣ್ಣ ಹೋಟೆಲ್ ನಡೆಸುತ್ತಿದ್ದರು , ಜೊತೆಗೆ ಅಡುಗೆ ಕೆಲಸಕ್ಕೂ ಹೋಗುತ್ತಿದ್ದರು. ಕೆಲ ವರ್ಷಗಳ ಹಿಂದೆ ಹೊಸ ಮನೆ ನಿರ್ಮಾಣಕ್ಕೆ ಮುಂದಾಗಿದ್ದು, ಕೊರೊನಾ ಕಾಲದಲ್ಲಿ ಉಂಟಾದ ಅರ್ಥಿಕ ಸಂಕಷ್ಟದಿಂದ ಅರ್ಧದಲ್ಲೆ ನಿರ್ಮಾಣ ಹಂತದಲ್ಲಿ ಬಾಕಿಯಾಗಿದೆ.ಮೃತರು ಪತ್ನಿ ಅಂಗನವಾಡಿಗೆ ಹೋಗುವ ಮಗು ಸಹಿತ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ರಾಜಕೀಯ
Priyanka Gandhi-ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನೆ ತ್ಯಾಗ ಮಾಡಿದ್ದಾರೆ, ಅಜ್ಜಿ ಯುದ್ದ ಕಾಲದಲ್ಲಿ ತನ್ನ ಚಿನ್ನವನ್ನೆ ದೇಶಕ್ಕೆ ನೀಡಿದ್ದಾರೆ : 60 ವರ್ಷದ ಆಡಳಿತದಲ್ಲಿ ಕಾಂಗ್ರೆಸ್ ಯಾವತ್ತೂ ಮಹಿಳೆಯರ ಮಂಗಳಸೂತ್ರ ಕೀಳುವ ಕೆಲಸ ಮಾಡಿಲ್ಲ : ಪ್ರಿಯಾಂಕಾ ಗಾಂಧಿ
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕ್ರಿಕೆಟ್ ಮೈದಾನದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರವಾಗಿ ಮತಯಾಚನೆ ಮಾಡಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ʻಮಂಗಳಸೂತ್ರದ ಮಹತ್ವದ ಬಗ್ಗೆ ಅರಿವಿಲ್ಲದವರು ಅಸಂಬದ್ಧವಾಗಿ ಮಾತನಾಡುತ್ತಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಿತ್ತುಕೊಳ್ಳುತ್ತದೆ ಎಂದು ಹೇಳುತ್ತಾರೆ. 60ಕ್ಕೂ ಹೆಚ್ಚಿನ ವರ್ಷ ದೇಶವನ್ನಾಳಿದ ಕಾಂಗ್ರೆಸ್ ಯಾವತ್ತೂ ಮಹಿಳೆಯರ ಮಂಗಳಸೂತ್ರ ಕೀಳುವ ಕೆಲಸ ಮಾಡಿಲ್ಲ’ ಎಂದರು.
ಈ ದೇಶಕ್ಕಾಗಿ ನನ್ನ ತಾಯಿ ತಮ್ಮ ಮಂಗಳಸೂತ್ರವನ್ನೇ ತ್ಯಾಗ ಮಾಡಿದವರು. ನನ್ನ ಅಜ್ಜಿ ಇಂದಿರಾಗಾಂಧಿ ಅವರು ಯುದ್ಧದ ಸಂದರ್ಭದಲ್ಲಿ ತಮ್ಮ ಚಿನ್ನವನ್ನೆಲ್ಲ ದೇಶಕ್ಕೆ ನೀಡಿದವರು. ಮಹಿಳೆಯರ ಸೇವೆ, ಸಂಘರ್ಷಗಳ ಬಗ್ಗೆ ಅರಿವಿಲ್ಲದ ನರೇಂದ್ರ ಮೋದಿ ಅವರು ಮಂಗಳಸೂತ್ರದ ಬಗ್ಗೆ ಕೇವಲವಾಗಿ ಮಾತನಾಡುತ್ತಿದ್ದಾರೆ. ಅವರು ಮಹಿಳೆಯರ ಭಾವನೆಗಳಿಗೆ ಘಾಸಿ ಮಾಡುತ್ತಿದ್ದಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ಮಾಡಿದರು.
ಚುನಾವಣೆಗಾಗಿ ಮೋದಿಗೆ ಮಂಗಳಸೂತ್ರ ನೆನಪಾಗಿದೆ
ನಮ್ಮ ದೇಶದ ಪರಂಪರೆಯು ಮಹಿಳೆಯರ ಸೇವೆ, ಸಂಘರ್ಷದ ಮೇಲೆ ನಿಂತಿದೆ. ನೋಟ್ ಬ್ಯಾನ್ ಮಾಡಿದಾಗ ಮಹಿಳೆಯರು ಕೂಡಿಟ್ಟಿದ್ದ ಹಣವನ್ನೆಲ್ಲ ಕಿತ್ತುಕೊಳ್ಳುವಾಗ ನರೇಂದ್ರ ಮೋದಿ ಅವರಿಗೆ ಮಂಗಳಸೂತ್ರದ ನೆನಪಾಗಲಿಲ್ಲ. ಲಾಕ್ ಡೌನ್ ಮಾಡಿ ಕಾರ್ಮಿಕರು ಮತ್ತು ಕುಟುಂಬ ಬರಿಗಾಲಲ್ಲಿ ತಮ್ಮ ಊರಿಗೆ ಸಾಗುವಾಗ ಮಂಗಳಸೂತ್ರದ ನೆನಪಾಗಲಿಲ್ಲ. ಕೃಷಿಕರು ಆಂದೋಲನ ಮಾಡಿದಾಗ 600ಕ್ಕೂ ಹೆಚ್ಚಿನ ಕೃಷಿಕರು ಸಾವನ್ನಪ್ಪಿದರು. ಅವರ ಪತ್ನಿಯರ ಮಂಗಳಸೂತ್ರದ ಬಗ್ಗೆ ಯೋಚಿಸಲಿಲ್ಲ. ಮಣಿಪುರದಲ್ಲಿ ಯೋಧನ ಪತ್ನಿಯನ್ನು ವಿವಸ್ತ್ರಗೊಳಿಸಿ ಬೀದಿಯಲ್ಲಿ ಮೆರವಣಿಗೆ ಮಾಡುವಾಗ ನರೇಂದ್ರ ಮೋದಿ ಅವರಿಗೆ ಆಕೆಯ ಮಂಗಳಸೂತ್ರದ ಬಗ್ಗೆ ಯೋಚನೆ ಬರಲಿಲ್ಲ. ಆದರೀಗ, ಚುನಾವಣೆಗಾಗಿ ಮಂಗಳಸೂತ್ರದ ನೆನಪಾಗಿದೆ.- ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನಾಯಕಿ
ಮಂಗಳೂರು
Brijesh Chowta-ಕಾಂಗ್ರೆಸಿಗೆ ಮತ ನೀಡಿದರೆ ಎಸ್ಡಿಪಿಐ ಕೈ ಬಲಪಡಿಸಿದಂತೆ ; ಶಕ್ತಿನಗರ ಕಾಲ್ನಡಿಗೆ ರೋಡ್ ಶೋದಲ್ಲಿ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು, ಎ.24 : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಚುನಾವಣಾ ಪ್ರಚಾರದ ಕೊನೆಯಲ್ಲಿ ಮಂಗಳೂರು ನಗರದ ಶಕ್ತಿನಗರದಲ್ಲಿ ಕಾಲ್ನಡಿಗೆಯಲ್ಲಿ ರೋಡ್ ಶೋ ನಡೆಸಿದ್ದಾರೆ. ಶಕ್ತಿನಗರದಿಂದ ನಾಲ್ಯಪದವು ಶತಮಾನೋತ್ಸವ ಶಾಲೆಯ ವರೆಗೂ ನೂರಾರು ಕಾರ್ಯಕರ್ತರ ಜೊತೆಗೆ ಕಾಲ್ನಡಿಗೆಯಲ್ಲಿ ಬಂದು ಮತಯಾಚನೆ ಮಾಡಿದ್ದಾರೆ.
ಇದೇ ವೇಳೆ ಮಾತನಾಡಿದ ಬ್ರಿಜೇಶ್ ಚೌಟ, ಜಿಲ್ಲೆಯಲ್ಲಿ ಬಿಜೆಪಿ ವಿರೋಧಿ ಶಕ್ತಿಗಳೆಲ್ಲ ಒಂದಾಗಿವೆ. ಎಸ್ಡಿಪಿಐ ಅವರಲ್ಲಿ ಅಭ್ಯರ್ಥಿ ಯಾರೆಂದು ಕೇಳಿದರೆ ಕಾಂಗ್ರೆಸ್, ಕಮ್ಯುನಿಸ್ಟರಲ್ಲಿ ಕೇಳಿದರೂ ಕಾಂಗ್ರೆಸ್ ಎಂದೇ ಹೇಳುತ್ತಾರೆ. ಕಾಂಗ್ರೆಸಿನವರಲ್ಲಿ ಕೇಳಿದರೆ ಅಭ್ಯರ್ಥಿ ಬಗ್ಗೆ ಸಂಶಯ ಇದೆ. ಅವರಲ್ಲೇ ಮನೆಯೊಂದು ಮೂರು ಬಾಗಿಲು ಎನ್ನುವ ರೀತಿ ಇದೆ. ಹೀಗಾಗಿ ಕಾಂಗ್ರೆಸಿಗೆ ಮತ ನೀಡಿದರೆ ಎಸ್ಡಿಪಿಐ ಕೈ ಬಲಪಡಿಸಿದಂತಾಗುತ್ತದೆ ಎಂದು ಹೇಳಿದರು.
ನೀವು ನೈಜ ದೇಶಭಕ್ತರು, ದೇಶಕ್ಕಾಗಿ ಮತ
ಬುಧವಾರ ಬೆಳಗ್ಗೆ ದೇರಳಕಟ್ಟೆಯ ಕೆಎಸ್ ಹೆಗ್ಡೆ ಆಸ್ಪತ್ರೆ, ಮುಕ್ಕ ಶ್ರೀನಿವಾಸ ಮೆಡಿಕಲ್ ಕಾಲೇಜು ಆಸ್ಪತ್ರೆ, ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಭೇಟಿಯಿತ್ತ ಕ್ಯಾ. ಬ್ರಿಜೇಶ್ ಚೌಟ, ನಿಮಗೆ ರಾಷ್ಟ್ರಭಕ್ತಿ, ರಾಷ್ಟ್ರಸೇವೆಯ ಬಗ್ಗೆ ಪ್ರತ್ಯೇಕ ಹೇಳಬೇಕಾಗಿಲ್ಲ. ನೀವೇ ನೈಜ ದೇಶ ಭಕ್ತರು. ಕೊರೊನಾ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ಬಲತುಂಬಿದವರು ವೈದ್ಯರು ಮತ್ತು ಆರೋಗ್ಯ ಸಿಬಂದಿ. ನಿಮ್ಮನ್ನು ಕೊರೊನಾ ವಾರಿಯರ್ಸ್ ಎಂಬುದಾಗಿ ಕೊಂಡಾಡಿದ್ದರು ಎಂದರಲ್ಲದೆ, ಪ್ರಧಾನಿಯನ್ನು ಮೂರನೇ ಬಾರಿಗೆ ಗದ್ದುಗೆ ಏರಿಸುವಲ್ಲಿ ನಿಮ್ಮ ಕೊಡುಗೆ ನೀಡಬೇಕೆಂದು ಮನವಿ ಮಾಡಿದರು.
ಮಂಗಳೂರು
Congress roadshow-ಪಂಪ್’ವೆಲ್’ನಿಂದ ಕಣ್ಣೂರುವರೆಗೆ ಸಾಗಿದ ಕಾಂಗ್ರೆಸ್ ರೋಡ್ ಶೋ
ಮಂಗಳೂರು: ಲೋಕಸಭೆ ಚುನಾವಣೆಯ ಕೊನೆ ದಿನವಾದ ಬುಧವಾರ ಮಂಗಳೂರಿನ ಪಂಪ್’ವೆಲ್’ನಿಂದ ಕಣ್ಣೂರುವರೆಗೆ ರೋಡ್ ಶೋ ಜರಗಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಸದಸ್ಯ ಐವನ್ ಡಿಸೋಜಾ, ಕಾರ್ಪೋರೇಟರ್ ಗಳಾದ ಶಶಿಧರ್ ಹೆಗ್ಡೆ, ಅಶ್ರಫ್, ಕೇಶವ ಮರೋಳಿ, ನವೀನ್ ಡಿಸೋಜಾ, ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ದಾಸ್, ಪ್ರಮುಖರಾದ ಯು.ಟಿ. ಫರ್ಜಾನ್, ರವಿರಾಜ್ ಪೂಜಾರಿ, ರಮಾನಂದ್ ಪೂಜಾರಿ, ಸುನಿಲ್ ಪೂಜಾರಿ, ರಾಕೇಶ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.
ಗರೋಡಿ, ದರ್ಗಾ ಭೇಟಿ:
ರೋಡ್ ಶೋ ನಡುವೆ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಕಂಕನಾಡಿ ಬ್ರಹ್ಮಬೈದರ್ಕಳ ಗರೋಡಿ, ಅಡ್ಯಾರ್ ಕಣ್ಣೂರು ಶೇಖ್ ಯೂಸುಫ್ ಸಿದ್ದೀಕ್ ದರ್ಗಾ ಶರೀಫ್’ಗೆ ಭೇಟಿ ನೀಡಿದರು.
ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಬುಧವಾರ ಸಂಜೆ ಉರ್ವ, ಬಂದರು ಪ್ರದೇಶದಲ್ಲಿ ರೋಡ್ ಶೋ ನಡೆಸಿ, ಮತ ಯಾಚಿಸಿದರು.
ತೆರೆದ ವಾಹನದ ಮುಂಭಾಗದಿಂದ ಸಾಗುತ್ತಿದ್ದ ಕಾರ್ಯಕರ್ತರು, ಘೋಷಣೆಗಳನ್ನು ಕೂಗುತ್ತಾ ಸಾಗಿದರು. ನಾಸಿಕ್ ಬ್ಯಾಂಡ್ ಸದ್ದು ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿತು.
-
ದಕ್ಷಿಣ ಕನ್ನಡ2 days ago
ವಿಟ್ಲ : ದುರಸ್ತಿಗೆ ಬಾವಿಗಿಳಿದ ಇಬ್ಬರು ಅಮ್ಲಜನಕ ಕೊರತೆಯಿಂದ ಮೃತ್ಯು
-
ಬಿಗ್ ನ್ಯೂಸ್23 hours ago
NOTAForSoujanyaCase : ಸೌಜನ್ಯ ಪ್ರಕರಣ : ಟ್ವಿಟರ್ ಟ್ರೆಂಡಿಂಗಲ್ಲಿ 3ನೇ ಸ್ಥಾನ ಪಡೆದ ನೋಟಾ ಅಭಿಯಾನ
-
ನಿಧನ ವಾರ್ತೆ1 day ago
Run over-ತಂದೆಯಿಂದಲೇ ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣ
-
ದಕ್ಷಿಣ ಕನ್ನಡ9 hours ago
Student harrased in bus ಉಪ್ಪಿನಂಗಡಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿದ್ಯಾರ್ಥಿನಿಗೆ ಜತೆ ಸಹ ಪ್ರಯಾಣಿಕನಿಂದ ಕಿರುಕುಳ – ಯುವತಿ ವ್ಯಗ್ರಗೊಳ್ಳುತ್ತಾಳೆ ಕಿಟಕಿಯಿಂದ ಹಾರಿ ಆರೋಪಿ ಪರಾರಿ – ಮುಂದೇನಾಯಿತು ?
-
ಸಾಮಾಜಿಕ ಮಾಧ್ಯಮ8 hours ago
Hasana sex tape : ಚುನಾವಣೆ ಹೊಸ್ತಿಲಲ್ಲಿ ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್ ಡ್ರೈವ್ ಸೌಂಡ್ ! ಅಸಲಿಯ / ನಕಲಿಯ ತೀವ್ರ ಚರ್ಚೆ
-
ಅಪರಾಧ1 day ago
Online acquaintance-ಆನ್ ಲೈನ್ ಪರಿಚಿತ ಗೆಳೆಯ ಮಹಿಳೆಯ ಜೀವಾಂತ್ಯಗೊಳಿಸಿದ
-
ದಕ್ಷಿಣ ಕನ್ನಡ1 day ago
ಬೆಲೆಯೆರಿಕೆ ಗಗನಕ್ಕೆರಿದ ಸಂದರ್ಭ ಸಿದ್ದರಾಮಯ್ಯ ಸರಕಾರ ಗ್ಯಾರಂಟಿ ಮೂಲಕ ಮಹಿಳೆಯರ ನೆರವಿಗೆ ನಿಂತಿದೆ : ಅನಿತಾ ಹೇಮನಾಥ ಶೆಟ್ಟಿ
-
Uncategorized2 days ago
ಮಠಂತಬೆಟ್ಟು ಗುಲಾಬಿ ಅನಂತ ರೈ ನಿಧನ