Connect with us

ಮಂಗಳೂರು

ಯುವ ವಕೀಲ ಕುಲ್‌ದೀಪ್ ಶೆಟ್ಟಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ – ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪುತ್ತೂರು ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ಬಂಟ್ವಾಳದಿಂದ ಪ್ರತಿಭಟನೆ

Ad Widget

Ad Widget

ಪುತ್ತೂರು/ ಬಂಟ್ವಾಳ: ಡಿ 7 :  ಮಂಗಳೂರಿನ ಯುವ ವಕೀಲ‌ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ವಕೀಲರ ಸಂಘ  ಹಾಗೂ ಯುವ ವಕೀಲರ ವೇದಿಕೆ ಬಂಟ್ವಾಳದ ನೇತೃತ್ವದಲ್ಲಿ  ಡಿ.7 ರಂದು ಪ್ರತಿಭಟನೆ ನಡೆಯಿತು. ಪುತ್ತೂರು ವಕೀಲರ ಸಂಘದವರು ಪುತ್ತೂರು ತಾಲೂಕು ಆಡಳಿತ ಸೌಧದ ಎದುರು  ಹಾಗೂ  ಯುವ ವಕೀಲರ ವೇದಿಕೆ ಬಂಟ್ವಾಳದವರು ಬಂಟ್ವಾಳ ನ್ಯಾಯಾಲಯದ ಮುಂಭಾಗ ಪ್ರತಿಭಟನೆ ಹಮ್ಮಿಕೊಂಡಿದ್ದರು.

Ad Widget

Ad Widget

Ad Widget

Ad Widget

ಪುತ್ತೂರಿನ ಪ್ರತಿಭಟನೆ

Ad Widget

Ad Widget

Ad Widget

 ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ ಅವರು ಮಾತನಾಡಿ ಏಕಾಏಕಿ ಮನೆಗೆ ಆಗಮಿಸಿದ ಪೊಲೀಸರು ವಕೀಲ ಕುಲದೀಪ್‌ಗೆ ಹಲ್ಲೆ ನಡೆಸಿ ಶಿಷ್ಠಾಚಾರ ತೋರದೆ ಅವರ ತಂದೆ ತಾಯಿಗೂ ಹಲ್ಲೆ ನಡೆಸಿ ಉಟ್ಟ ಬಟ್ಟೆಯಲ್ಲೇ ಕುಲದೀಪ್ ಶೆಟ್ಟಿಯವರನ್ನು ಠಾಣೆಗೆ ಕರೆತಂದು ಹಲ್ಲೆ ನಡೆಸಿದ್ದಾರೆ. ಪೊಲೀಸರ ಈ ವರ್ತನೆಯನ್ನು ಪುತ್ತೂರು ವಕೀಲರ ಸಂಘ ಖಂಡಿಸುತ್ತದೆ ಎಂದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ, ಜಯಾನಂದ ಮಾತನಾಡಿದರು.

Ad Widget

ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಚಿನ್ಮಯ್ ರೈ, ಉಪಾಧ್ಯಕ್ಷ ಕೃಷ್ಣಪ್ಪ ಗೌಡ ಕಕ್ವೆ, ಜೊತೆ ಕಾರ್ಯದರ್ಶಿ ಸೀಮಾ ನಾಗರಾಜ್, ಖಜಾಂಜಿ ಶ್ಯಾಮಪ್ರಸಾದ್ ಕೈಲಾರ್ ಸಹಿತ ವಕೀಲರ ಸಂಘದ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿ ಘಟನೆ ಕುರಿತು ಪಾರದರ್ಶಕ ತನಿಖೆ ನಡೆಸಿ ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಹಾಯ ಕಮೀಷನರ್ ಕಚೇರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

Ad Widget

Ad Widget

ಬಂಟ್ವಾಳ ಪ್ರತಿಭಟನೆ:

ತಿಭಟನೆಯನ್ನು ಉದ್ದೇಶಿಸಿ  ಹಿರಿಯ ವಕೀಲರಾದ ಸುರೇಶ್ ಶೆಟ್ಟಿ  ಮಾತನಾಡಿ ಪೋಲಿಸರ ಈ ಕೃತ್ಯವು ಖಂಡನೀಯ ವಾಗಿದ್ದು ಇದು ಇಡೀ ವಕೀಲ ಸಮುದಾಯವನ್ನೇ ಅವಮಾನಿಸುವ ಕ್ರಮ ವಾಗಿದೆ.ಇದು ಸಂವಿದಾನ ವಿರೋಧಿ ಕೃತ್ಯವಾಗಿದ್ದು ಪೋಲೀಸರ ಇಂತಹ ಕೃತ್ಯದ ವಿರುದ್ಧ ಇಡೀ ವಕೀಲ ಸಮುದಾಯ ಒಗ್ಗಟ್ಟಾಗಿದ್ದು ಕೂಡಲೇ ಹಲ್ಲೆ ಸಡೆಸಿದ ಪೋಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕು ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ವಕೀಲರ ಮೇಲೆಯೇ ಇಂತಹ ದೌರ್ಜನ್ಯ ನಡೆದರೆ ಸಾಮಾನ್ಯ ಜನರ ಪಾಡೇನು ಎಂದು ಆಕ್ರೋಶ ವ್ಯಕ್ತಪಡಿಸಿದರು

.ಹಿರಿಯ ವಕೀಲರಾದ ಕೆ.ವಿ.ಭಟ್ ಮಾತನಾಡಿ ಬೆಂಬಲ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಹಿರಿಯ ವಕೀಲರಾದ ಎ.ಕೆ.ರಾವ್, ಸುರೇಶ್ ಪೂಜಾರಿ,ಪ್ರಕಾಶ್ ನಾರಾಯಣ ಜೆಡ್ಡು, ಪದ್ಮನಾಭ ಅಳಿಕೆ,ಹಾತಿಮ್ ಅಹಮದ್, ಎ.ಮೋಹನ್, ಚಂದ್ರಶೇಖರ್ ರಾವ್ ಪುಂಚಮೆ, ವಿಶ್ವನಾಥ ಗೌಡ, ಮಹಮ್ಮದ್ ಕಬೀರ್.ಕೆಮ್ಮಾರ,  ಯುವ ವಕೀಲರಾದ  ಮಲಿಕ್ ಅನ್ಸಾರ್ ಕರಾಯ , ಮೋಹನ್ ಕುಮಾರ್ ಕಡೇಶ್ವಾಲ್ಯ, ಅಬ್ದುಲ್ ಜಲೀಲ್ , ತುಳಸೀದಾಸ್.ವಿಟ್ಲ,ಎ.ಪಿ.ಮೊಂತೆರೋ , ಪ್ರಶಾಂತ್.ಕೆ, ನಿತಿನ್,   ಪ್ರದೀಫ್ .ಎನ್.ಕೆ,ಸೆಕೀನಾ, ಮಾಧುರಿ,  ನಿರ್ಮಲ,ಶುಭ, ಸುಷ್ಮಾ, ಕಾವ್ಯಶ್ರೀ,ದೀಪಕ್,  ಮಹಮ್ಮದ್ ಗಝಾಲಿ,  ಮಹಮ್ಮದ್ ಅಶ್ರಪ್, ಮಹಮ್ಮದ್ ಮುಂಝಿರ್ ,  ಶ್ರೀ ಕೃಷ್ಣ, ಲಕ್ಮೀನಾರಾಯಣ ಸಿದ್ದಕಟ್ಟೆ,ಹಾಗೂ ಹಲವಾರು ಯುವ ವಕೀಲರು ಭಾಗವಹಿಸಿದ್ದರು.ಯುವ ವಕೀಲರ ನಾಯಕರಾದ ವೀರೇಂದ್ರ ಎಂ ಸಿದ್ದಕಟ್ಟೆ ಪ್ರಾಸ್ತಾವಿಕ ವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.

Click to comment

Leave a Reply

ಮಂಗಳೂರು

Interfaith Marriage ಮಂಗಳೂರು :  ಭಿನ್ನಕೋಮಿನ ಜೋಡಿ ವಿವಾಹ?

Ad Widget

Ad Widget

ಸುರತ್ಕಲ್, ಡಿ. 7: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಭಿನ್ನ ಕೋಮಿನ ಜೋಡಿಯೊಂದು ನಾಪತ್ತೆಯಾಗಿದ್ದು, ಅವರಿಬ್ಬರು ವಿವಾಹವಾಗಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಈ ಎರಡು ಕುಟುಮಬದ ಮೂಲಗಳಿಂದ ಈ ಬಗ್ಗೆ ಯಾವುದೇ ಖಚಿತತೆ ದೊರಕಿಲ್ಲ

Ad Widget

Ad Widget

Ad Widget

Ad Widget

ಸುರತ್ಕಲ್‌   7ನೇ ಬ್ಲಾಕ್ ಕಾಟಿಪಳ್ಳದ ಯುವಕ ಪ್ರಶಾಂತ್ ಭಂಡಾರಿ (31) ಹಾಗೂ 3ನೇ ಬ್ಲಾಕ್ ಆಶ್ರಯ ಕಾಲನಿಯನಿವಾಸಿ ಆಯೇಷಾ (19) ಡಿ. 1ರಂದು ನಾಪತ್ತೆಯಾಗಿದ್ದರು ಎನ್ನಲಾಗಿದೆ. , ಇದೀಗ ಅವರು ವಿವಾಹವಾಗಿದ್ದಾರೆ ಎನ್ನುವ ಫೋಟೋವನ್ನು  ಅವರಿಬ್ಬರ ಆಪ್ತರು  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.

Ad Widget

Ad Widget

Ad Widget

 ಆಯೇಷಾ ತನ್ನ ಹೆಸರನ್ನು ಅಕ್ಷತಾ ಎಂದು ಬದಲಾಯಿಸಿಕೊಂಡಿದ್ದಾರೆ ಎಂದು ಕೂಡ ವೈರಲ್‌ ಮೆಸೇಜ್‌ ನಲ್ಲಿ ಹೇಳಲಾಗಿದೆ. ಯುವತಿ ನಾಪತ್ತೆಯಾದ ಬಗ್ಗೆ   ಆಯೇಷಾ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Ad Widget

ಯುವತಿ ಕುಟುಂಬ ಮೂಲತಃ ಕಾರವಾರದ ಮುಂಡಗೋಡದವರಾಗಿದ್ದು, ಈಕೆಯ ತಂದೆ ಸ್ಥಳೀಯವಾಗಿ ಉದ್ಯೋಗದಲ್ಲಿದ್ದಾರೆ. ಅವರ ಪತ್ತೆಗಾಗಿ ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ.

Ad Widget

Ad Widget

Continue Reading

ಮಂಗಳೂರು

ಕುಡುಪು ಷಷ್ಟಿ ಮಹೋತ್ಸವ ಜಾತ್ರೆ – ಸಂತೆ ವ್ಯಾಪಾರದಲ್ಲಿ ಹಿಂದೂಯೇತರರಿಗಿಲ್ಲ ಅವಕಾಶ: ವ್ಯಾಪಾರಿಗಳ ಸಮನ್ವಯ ಸಮಿತಿ  ಆಕ್ರೋಶ – ದೇವಸ್ಥಾನದ  EOರಿಂದ ತಿರುಗೇಟು – ಕರಾವಳಿಯಲ್ಲಿ ನಿಲ್ಲೋದಿಲ್ವಾ ಧರ್ಮ ದಂಗಲ್ ?

Ad Widget

Ad Widget

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನ ಕ್ಷೇತ್ರ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಷಷ್ಠಿ ಬ್ರಹ್ಮರಥೋತ್ಸವ ಇದೇ 17 ರಂದು   ನಡೆಯಲಿದೆ.  ಈ ಹಿನ್ನಲೆಯಲ್ಲಿ ಡಿ 14ರಿಂದ 19ರವರೆಗೂ ಈ ದೇವಸ್ಥಾನಕ್ಕೆ ಭಾರಿ ಸಂಖ್ಯೆಯಲ್ಲಿ  ಭಕ್ತರು ಭೇಟಿ ನೀಡುತ್ತಾರೆ.  ಆದರೇ  ಜಾತ್ರೆ ಸಂದರ್ಭ  ದೇಗುಲದ ಬಳಿ ಹಾಕುವ ಸಂತೆ ಅಂಗಡಿ ವಿಚಾರ ವಿವಾದಕ್ಕೆ ಕಾರಣವಾಗಿದೆ. ಮತ್ತೆ ಉಭಯ ಜಿಲ್ಲೆಗಳಲ್ಲಿ ವ್ಯಾಪಾರ ದಂಗಲ್‌ ನಡೆಯುವ ಸಾಧ್ಯತೆ ಗೋಚರಿದೆ.

Ad Widget

Ad Widget

Ad Widget

ಕಳೆದೆರಡು ವರ್ಷಗಳಿಂದ ರಾಜ್ಯದಲ್ಲಿ  ಅದರಲ್ಲೂ  ವಿಶೇಷವಾಗಿ ಕರಾವಳಿ ಜಿಲ್ಲೆಗಳ ಹಿಂದೂ ಶ್ರದ್ದಾ ಕೇಂದ್ರಗಳಲ್ಲಿ ನಡೆಯುವ ಜಾತ್ರೋತ್ಸವದ ಸಂದರ್ಭ  ಹಾಕುವ ತಾತ್ಕಾಲಿಕ ಸಂತೆ ವ್ಯಾಪಾರ ಮಳಿಗೆಗಳಲ್ಲಿ ಹಿಂದೂಯೇತರರಿಗೆ ಅವಕಾಶ ನಿರಾಕರಿಸಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಈ ವಿವಾದ ತಾರಕಕ್ಕೇರಿತ್ತು. ಆದರೇ ಕಾಂಗ್ರೆಸ್‌ ಆಡಳಿತ ಬಂದ ಬಳಿಕವು ಈ ವಿವಾದ ತಣ್ಣಗಾಗುವ ಲಕ್ಷಣ ಕಾಣಿಸುತ್ತಿಲ್ಲ. ಇದು ಪ್ರಗತಿಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.  

Ad Widget

ಈ ಸಾಲಿನ ನವರಾತ್ರಿ ಹಬ್ಬದ ಸಂದರ್ಭದಲ್ಲೂ ಈ ವಿವಾದ ಎದ್ದಿತ್ತು. ಮಂಗಳೂರಿನ ಇತಿಹಾಸ ಪ್ರಸಿದ್ದ ಮಂಗಳಾದೇವಿ ದೇವಸ್ಥಾನದ ಜಾತ್ರೋತ್ಸವ ಸಂದರ್ಭ ಮುಸ್ಲಿಂ ವ್ಯಾಪರಸ್ಥರಿಗೆ ಸಂತೆ ವ್ಯಾಪರಕ್ಕೆ ಅವಕಾಶ ನೀಡದ ಹಿನ್ನಲೆ ವಿವಾದ ಭುಗಿಲೆದಿತ್ತು. ಈಗ ಮತ್ತೆ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಷಷ್ಟಿ ಮಹೋತ್ಸವದ ಸಂದರ್ಭ ದೇವಸ್ಥಾನದ ಅವರಣದ ಹೊರಗಡೆ ನಡೆಯುವ ಸಂತೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ

Ad Widget

Ad Widget

ಕುಡುಪು ಜಾತ್ರೆಯ ಸಂತೆ  ವ್ಯಾಪಾರದಲ್ಲಿ ಹಿಂದೂಯೇತರರಿಗೆ ಅವಕಾಶ ಕಲ್ಪಿಸಿಲ್ಲ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಜಾತ್ರೆ ವ್ಯಾಪಾರಿಗಳ ಸಮನ್ವಯ ಸಮಿತಿ  ಆರೋಪಿಸಿದ್ದು  ಕಾಂಗ್ರೆಸ್ ನೇತೃತ್ವದ ಸರ್ಕಾರವೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುವಾದಿಗಳ ಕಪಿಮುಷ್ಟಿಯಲ್ಲಿ ನಲುಗುತ್ತಿದೆ. ಬಡ ಸಂತೆ ವ್ಯಾಪಾರಿಗಳ ಜೊತೆ ನಿಲ್ಲಲಾಗದ ಈ ಸರ್ಕಾರದ  ಕ್ರಮವನ್ನು  ಖಂಡಿಸುತ್ತೇವೆ  ಎಂದು ಸಮನ್ವಯ ಸಮಿತಿ ತಿಳಿಸಿದೆ.

ಸಮನ್ವಯ ಸಮಿತಿಯ ಸಂಚಾಲಕ ಬಿ.ಕೆ.ಇಮ್ತಿಯಾಜ್‌ ಆರೋಪ:

ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಕುಡುಪು ದೇವಸ್ಥಾನದ ಷಷ್ಠಿ ಜಾತ್ರೋತ್ಸವದ ಸಂದರ್ಭದಲ್ಲಿ ದೇವಸ್ಥಾನದ ಪ್ರಾಂಗಣದ ಹೊರಗಡೆ ಸಂತೆ ವ್ಯಾಪಾರ ನಡೆಯುತ್ತದೆ.  ಇಲ್ಲಿ  ವ್ಯಾಪಾರ ನಡೆಸಲು ಅವಕಾಶ ಕಲ್ಪಿಸುವಾಗ ಧಾರ್ಮಿಕ ತಾರತಮ್ಯ ನಡೆಸಲಾಗುತ್ತಿದೆ. ಜಾತ್ರೆಗಳನ್ನೇ ನಂಬಿ ಬದುಕುವ ಬಡ ಸಂತೆ ವ್ಯಾಪಾರಿಗಳ ಬದುಕುವ ಹಕ್ಕನ್ನು ರಕ್ಷಿಸಲು ಮತ್ತೆ ಜಿಲ್ಲಾಡಳಿತ ವಿಫಲ ಆಗಿದೆ.  ನಿರ್ದಿಷ್ಟ ವ್ಯಕ್ತಿಗಳಿಗೆ ಮಾತ್ರ ಇಲ್ಲಿ ಟೆಂಡರ್‌ ನೀಡಲಾಗುತ್ತಿದೆ. ಅವರು ಹಿಂದೂಯೇತರರಿಗೆ ವ್ಯಾಪಾರಿ ಮಳಿಗೆಗಳನ್ನು ಹಾಕಲು ಅವಕಾಶ ನೀಡುವುದಿಲ್ಲ’ ಎಂದು ಸಮನ್ವಯ ಸಮಿತಿಯ ಸಂಚಾಲಕ ಬಿ.ಕೆ.ಇಮ್ತಿಯಾಜ್‌ ತಿಳಿಸಿದ್ದಾರೆ.

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್‌ ಅವರ ಪ್ರತಿಕ್ರಿಯೆ:

ಈ ವರ್ಷ ದೇವಸ್ಥಾನದ ಷಷ್ಠಿ ಮಹೋತ್ಸವ ಸಂದರ್ಭದಲ್ಲಿ ಮಳಿಗೆಗಳನ್ನು ಹಾಕಿ ಜಾತ್ರೆ ವ್ಯಾಪಾರ ನಡೆಸುವುದಕ್ಕೆ ಟೆಂಡರ್‌ ಕರೆದೇ ಜಾಗ ಒದಗಿಸಿದ್ದೇವೆ.  ಡಿ. 5ರಂದು ನಡೆದ ಹರಾಜಿನಲ್ಲಿ ಐವರು ಭಾಗವಹಿಸಿದ್ದರು. ಹೆಚ್ಚು ಮೊತ್ತ ನೀಡಿದವರಿಗೆ ಮಳಿಗೆ ಹಾಕಲು ಜಾಗ ಒದಗಿಸಿದ್ದೇವೆ. ನವೀನ್‌ ಎಂಬುವವರು ₹ 1.15 ಲಕ್ಷ ಹೆಚ್ಚಿನ ಮೊತ್ತ ಹಣ ನೀಡಿ ಟೆಂಡರ್ ವಹಿಸಿಕೊಂಡಿದ್ದಾರೆ, ಹಾಗಾಗಿ ಅವರಿಗೆ ಮಳಿಗೆ ಹಾಕಲು ಜಾಗ ಒದಗಿಸಿದ್ದೇವೆ. ಹಿಂದಿನಿಂದಲೂ ಇಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ  ಮಳಿಗೆ ಹಾಕಲು ಅವಕಾಶ ನೀಡುತ್ತಿರಲಿಲ್ಲ. ಈ ವರ್ಷವೂ ಟೆಂಡರ್‌ ನೋಟಿಸ್‌ನಲ್ಲೂ ಇದನ್ನು ಸ್ಪಷ್ಟಪಡಿಸಲಾಗಿತ್ತು’ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್‌ ಅವರು ತಿಳಿಸಿದ್ದಾರೆ.

Continue Reading

ಅಪರಾಧ

Mother and Son died ಮಂಗಳೂರು : ಹಸೂಗೂಸನ್ನು ಟಬ್‌ʼನ ನೀರಿನಲ್ಲಿ ಮುಳುಗಿಸಿ ತಾನೂ ಜೀವ ಕಳೆದುಕೊಂಡ ನವ ವಿವಾಹಿತೆ

Ad Widget

Ad Widget

ಮಂಗಳೂರು: ಹೆರಿಗೆ ಬಳಿಕ ಸಾಮಾನ್ಯವಾಗಿ ಬಾಣಂತಿಯರನ್ನು/ ಮಹಿಳೆಯರನ್ನು  ಕಾಡುವ  ಮಾನಸಿಕ ಖಿನ್ನತೆಗೆ (Mental disorder) ತುತ್ತಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕೂವರೆ  ತಿಂಗಳ ಹಸುಗೂಸನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಗುಜ್ಜರಕೆರೆ ಎಂಬಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಗುಜ್ಜರಕೆರೆಯ ವಸತಿ ಸಮುಚ್ಚಯವೊಂದರಲ್ಲಿ ವಾಸಿಸುತ್ತಿದ್ದ  ಫಾತಿಮಾ ರುಕಿಯಾ (23) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.  ನಾಲ್ಕೂವರೆ ತಿಂಗಳ ಗಂಡು ಮಗು  ಅಬ್ದುಲ್ಲಾ ಹೂದ್ ಮೃತ ಹಸುಳೆ.  ಈ ದುರಂತದ ಬಗ್ಗೆ   ಮೃತ ಮಹಿಳೆಯ ತಾಯಿ ದೂರು ನೀಡಿದ್ದು, ನಗರದ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

ಫಾತಿಮಾ ರುಕಿಯಾರವರ ವಿವಾಹ ಸುಮಾರು  ಒಂದೂವರೆ ವರ್ಷದ ಹಿಂದೆ   ಮುಹಮ್ಮದ್ ಉನೈಸ್ ಎಂಬವರ ಜತೆ ಜರುಗಿತ್ತು. ಜುಲೈ 7ರಂದು ಗಂಡು ಮಗುವಿಗೆ (ಅಬ್ದುಲ್ಲಾ ಹೂದ್ ) ಜನ್ಮ ನೀಡಿದ್ದರು.ಇದಾದ ಬಳಿ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಫಾತಿಮಾರವರಿಗೆ ಮಂಗಳೂರಿನ   ಅರೋಗ್ಯ ಕ್ಲಿನಿಕ್ ನಲ್ಲಿ ಮಾನಸಿಕ ವೈದ್ಯರಾದ ಡಾ. ಸುಪ್ರಿಯಾ ರವರಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. .

Ad Widget

ಫಾತಿಮಾರವರು  ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ತಾಯಿ ಬಳಿ ಆಗಾಗ ಹೇಳಿಕೊಳ್ಳುತ್ತಿದ್ದರು . ಡಿ 2 ರಂದು ಬೆಳಿಗ್ಗೆ 11.30ರಿಂದ ಸಂಜೆ 3.30ರ ನಡುವೆ    ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್ ನ ಫ್ಲಾಟ್ ನಂಬರ್ 507 ರ ಬೆಡ್ ರೂಮ್ ನ ಗ್ಯಾಲರಿಯಲ್ಲಿ ಫಾತಿಮಾ ರುಕಿಯಾರವರು  ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ 4 1/2 ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

Ad Widget

Ad Widget

Bitter Gourd health benefits: ಹಾಗಲಕಾಯಿ ನಾಲಿಗೆಗೆ ಕಹಿ – ಉದರಕ್ಕೆ ಸಿಹಿ… ಇಲ್ಲಿದೆ ಅದರ ಆರೋಗ್ಯ ಪ್ರಯೋಜನಗಳು

ಬಳಿಕ ಕೊಠಡಿಯ ಕಿಟಕಿಯ ಕಬ್ಬಿಣದ ಸರಳಿಗೆ ಸೀರೆಯನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಫಾತಿಮಾ ರುಕಿಯಾ ತಾಯಿ  ಖತಿಜಾತುಲ್ ಕುಬ್ರ ರವರು ಠಾಣೆಗೆ ದೂರು ನೀಡಿದ್ದಾರೆ.

Continue Reading

Trending

error: Content is protected !!