Connect with us

ದಕ್ಷಿಣ ಕನ್ನಡ

ಪುತ್ತೂರು : ನಗರಸಭೆ ಹೊರ ಗುತ್ತಿಗೆ ನೌಕರ ಸಚಿನ್ ಅಕಾಲಿಕ ನಿಧನ – ಆಧಾರ ಸ್ತಂಭ ಕಳಕೊಂಡ ಬಡ ಕುಟುಂಬಕ್ಕೆ ನೆರವಾಗುವಂತೆ ನಗರಸಭೆ ಸದಸ್ಯ ಪಿ.ಜಿ.ಜಗನ್ನಿವಾಸ್  ಮನವಿ

Ad Widget

Ad Widget

Ad Widget

Ad Widget

ಪುತ್ತೂರು: ಡಿ 10:  ಪುತ್ತೂರು ನಗರಸಭೆಯ ಕಸ ಸಾಗಾಟ ವಾಹನದ ಚಾಲಕರಾಗಿದ್ದ  ಸಚಿನ್ (27ವ)ರವರು ಡಿ. 9ರಂದು ಮಂಗಳೂರಿನ ಆಸ್ಫತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರು ನಗರ ಸಭೆಯ ಹೊರಗುತ್ತಿಗೆ ನೌಕರನಾಗಿದ್ದರು. ಮೃತರು ತಾಯಿ ವಿಜಯ ಹಾಗೂ  ಸಹೋದರಿಯನ್ನು ಅಗಲಿದ್ದಾರೆ.

Ad Widget

Ad Widget

Ad Widget

ಸಚಿನ್ ಅವರು ದಿನದ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕುಡಲೇ ಅವರನ್ನು  ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.   .ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆದಾಖಲಿಸಲಾಗಿತ್ತು.ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಡಿ.9ರಂದು ಮೃತಪಟ್ಟಿದ್ದಾರೆ

vAd Widget

Ad Widget

 ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇಗುಲದ ಹಿಂಬದಿಯ  ಬಿಜೆಪಿ  ಓಣಿಯಲ್ಲಿ ಸಚಿನ್‌ ತಾಯಿ ಮತ್ತು ಸಹೋದರಿ ಜತೆ  ವಾಸಿಸುತ್ತಿದ್ದರು. ಇವರು ಕಳೆದ  3 ವರ್ಷಗಳಿಂದ ನಗರಸಭೆಯ ವಾಹನ ಚಾಲಕರಾಗಿ ದುಡಿಯುತ್ತಿದ್ದರು. ಸಣ್ಣ ಪ್ರಾಯದಲ್ಲೆ ತಂದೆಯನ್ನು ಕಳಕೊಂಡ ಇವರು ಬಳಿಕ ಮನೆಯ ಆಧಾರ ಸ್ತಂಭವಾಗಿದ್ದರು. ಕುಟುಂಬದ ಜೀವನ ನೀರ್ವಹಣೆ ಇವರ ದುಡಿಮೆಯನ್ನೆ ಅವಲಂಬಿಸಿತ್ತು. ಜೀವನದ ಬಂಡಿ ಓಡಿಸಲು ಇವರು ಹಗಲಿರುಳು ದುಡಿಯುತ್ತಿದ್ದರು.

Ad Widget

Ad Widget

ತನ್ನ ನಗರಸಭಾ ಸದಸ್ಯತ್ವದ ತಿಂಗಳ ಗೌರವ ವೇತನ ರೂ.4 ಸಾವಿರವನ್ನು ಸಚಿನ್ ಅವರ ತಾಯಿಯ ಖಾತೆಗೆ ಜಮೆ ಮಾಡಿರುವ  ಪಿ.ಜಿ.ಜಗನ್ನಿವಾಸ್ ರಾವ್  ಅವರು ಈ ಕುಟುಂಬಕ್ಕೆ ಇತರರು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ಸಚಿನ್ ಅವರ ತಾಯಿ ವಿಜಯ್ ಅವರ ಎಸ್ ಬಿಐ ಖಾತೆ ಸಂಖ್ಯೆ 65120888945 (ಐಎಫ್‌ಎಸ್‌ಸಿ ಕೋಡ್ ಎಸ್‌ಬಿಐಎನ್ 0040152) ಕ್ಕೆ ಧನ ಸಹಾಯ ಮಾಡಬಹುದು ಎಂದು ನಗರಸಭೆಯ ಸ್ಥಳೀಯ ವಾರ್ಡ್ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಮನವಿಯಲ್ಲಿ ತಿಳಿಸಿದ್ದಾರೆ

Ad Widget

Ad Widget

Ad Widget
Click to comment

Leave a Reply

ರಾಜಕೀಯ

CM released-ಶಾಸಕರು ಕೇಳಿದ್ದು 50 ಲಕ್ಷ – ಸಿಎಂ ಬಿಡುಗಡೆ ಮಾಡಿದ್ದು 1.50 ಕೋಟಿ : ನಾಳೆಯಿಂದಲೇ ಪುತ್ತೂರಿನಲ್ಲಿ ಕಾರ್ಯಚರಣೆ ಪ್ರಾರಂಭ

Ad Widget

Ad Widget

Ad Widget

Ad Widget

ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಎಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೊಂದರೆಯಾದ ಗ್ರಾಮಗಳಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಸಲುವಾಗಿ ಹೆಚ್ಚುವರಿ ವಿಶೇಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದು ಕನಿಷ್ಠ 50 ಲಕ್ಷ ರೂ ನೀಡುವಂತೆ ವಿನಂತಿಸಿದ್ದರು. ಆದರೆ ಶಾಸಕ ಅಶೋಕ್ ರೈ ಬಡವರ ಪರ ಕಾಳಜಿಗೆ ಸಹಮತ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯವರು 50 ಲಕ್ಷ ರೂ ಬಲದಿಗೆ 1.50 ಕೋಟಿ ರೂ ಹೆಚ್ಚುವರಿ ಅನುದಾನವನ್ನು ನೀಡಿದ್ದು ಕುಡಿಯುವ ನೀರಿನ ಸಮಸ್ಯೆ ಇರುವ ಪ್ರತೀ ಗ್ರಾಮದಲ್ಲಿ ತಕ್ಷನ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆಯನ್ನು ನೀಡಿದ್ದಾರೆ.

Ad Widget

Ad Widget

Ad Widget

ಈಗಾಗಲೇ ಪುತ್ತೂರು ವಿಧಾನಸಬಾ ಕ್ಷೇತ್ರ ವ್ಯಾಪ್ತಿಯ ಏಳೆಂಟು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಅಂಥಹ ಕಡೆಗಳಲ್ಲಿ ಟ್ಯಾಂಕರ್ ಮೂಲಕ ಶಾಸಕರೇ ನೀರು ಪೂರ‍್ಯಕೆಯ ವ್ಯವಸ್ಥೆಯನ್ನು ಮಾಡಿದ್ದಾರೆ. ಆರ್ಯಾಪು ಗ್ರಾಮದಲ್ಲಿ ಹೊಸ ಕೊಳವೆ ಬಾವಿಯನ್ನೇ ಕೊರೆಯುವ ಮೂಲಕ ಕುಡಿಯುವ ನೀರಿನ ಸಮಸ್ಯೆಗೆ ಶಾಸ್ವತ ಪರಿಹಾರವನ್ನು ಶಾಸಕರು ನೀಡಿದ್ದಾರೆ.

vAd Widget

Ad Widget

ಪುತ್ತೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಸಮಸ್ಯೆಯ ಬಗ್ಗೆ ಶಾಸಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು ಎಲ್ಲಾ ಕ್ಷೇತ್ರಗಳಿಗೂ ಮುಖ್ಯಮಂತ್ರಿಯವರು ವಿಶೇಷ ಅನುದಾನವನ್ನು ಮಂಜೂರು ಮಾಡಿದ್ದಾರೆ ಎಂದು ಶಾಸಕರಾದ ಅಶೋಕ್ ರೈಗಳು ತಿಳಿಸಿದ್ದಾರೆ.

Ad Widget

Ad Widget

ನಾಳೆಯಿಂದಲೇ ಕಾರ್ಯಾಚರಣೆ

Ad Widget

Ad Widget

Ad Widget

ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ ಶಾಸಕರು ಎಲ್ಲೆಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆಯೋ ಅಲ್ಲೆಲ್ಲಾ ತಕ್ಷಣ ನೀರಿನ ವ್ಯವಸ್ಥೆ ಮಾಡುವಂತೆ ಎಲ್ಲಾ ಗ್ರಾಪಂ ಪಿಡಿಒಗಳಿಗೆ ಸೂಚನೆಯನ್ನು ನೀಡಿದ್ದಾರೆ. ಗ್ರಾಮದ ಯಾವ ಪ್ರದೇಶದಲ್ಲೂ ಕುಡಿಯುವ ನೀರಿನ ಸಮಸ್ಯೆ ಇರಬಾರದು. ಕೊಳವೆ ಬಾವಿ ಬೇಕಾದಲ್ಲಿ ಕೊಳವೆ ಬಾವಿ , ಟ್ಯಾಂಕರ್ ಮೂಲಕ ವ್ಯವಸ್ಥೆ ಮಾಡುವುದಾದರೆ ಆ ಮೂಲಕ ವ್ಯವಸ್ಥೆ ಮಾಡಬೇಕು ಎಂಬ ಕಟ್ಟಪ್ಪಣೆಯನ್ನು ಶಾಸಕರು ನೀಡಿದ್ದಾರೆ.

Continue Reading

ನಿಧನ ವಾರ್ತೆ

Bhaskar Rai Mitrampady-ಆತ್ಮಹತ್ಯೆಗೆ ಶರಣಾದ ಕೆದಂಬಾಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಭಾಸ್ಕರ ರೈ ಮಿತ್ರಂಪಾಡಿ

Ad Widget

Ad Widget

Ad Widget

Ad Widget

ಕೆದಂಬಾಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಹಾಗೂ ಸದಸ್ಯರಾಗಿರುವ. ಭಾಸ್ಕರ ರೈ ಎಂ ಮಿತ್ರಂಪಾಡಿಯವರು ನಿಧನರಾಗಿದ್ದಾರೆ.

Ad Widget

Ad Widget

Ad Widget

ಭಾಸ್ಕರ ರೈಯವರು ಬಂಟ್ವಾಳದಲ್ಲಿ ಇರುವ ತನ್ನ ಪತ್ನಿ ಮನೆಗೆ ತೆರಳಿದ್ದರು. ಈ ವೇಳೆ ಪತ್ನಿ ಮನೆಯಲ್ಲಿಯೇ ರಾತ್ರಿ ನಿಧನರಾಗಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಮೃತರು ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.

vAd Widget

Ad Widget
Continue Reading

ಅಪರಾಧ

Mangaluru-ಮಂಗಳೂರು : ಮೆಡಿಕಲ್ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ ಚಿತ್ರಿಕರಣ

Ad Widget

Ad Widget

Ad Widget

Ad Widget

ಮಂಗಳೂರು: ಇಲ್ಲಿನ ವೈದ್ಯಕೀಯ ಕಾಲೇಜೊಂದರಲ್ಲಿ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ ಚಿತ್ರೀಕರಿಸುತ್ತಿದ್ದುದು ಪತ್ತೆಯಾಗಿದೆ. ಈ ಕೃತ್ಯವನ್ನು 17 ವರ್ಷದ ಬಾಲಕನೊಬ್ಬ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

Ad Widget

ವಿಡಿಯೊ ಚಿತ್ರೀಕರಿಸಿರುವ, ಕಾನೂನು ಸಂಘರ್ಷಕ್ಕೆ ಸಿಲುಕಿದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲನ್ಯಾಯ ಮಂಡಳಿ ಮುಂದೆ ಆತನನ್ನು ಹಾಜರುಪಡಿಸಿ ಮುಂದಿನ‌ ಕ್ರಮ ಕೈಗೊಂಡಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

vAd Widget

Ad Widget

ಯಾರೂ ಇಲ್ಲದ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ರಿಂಗಾಗುತ್ತಿತ್ತು. ಶೌಚಾಲಯವನ್ನು ಭದ್ರತಾ ಸಿಬ್ಬಂದಿ ಪರಿಶೀಲಿಸಿದಾಗ ಮೊಬೈಲ್ ಪತ್ತೆಯಾಗಿತ್ತು. ಬಾಲಕ ರೋಗಿಯ ಸೋಗಿನಲ್ಲಿ ವೈದ್ಯಕೀಯ ಕಾಲೇಜಿನ ಒಳಗೆ ಬಂದು ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ. ಮೊಬೈಲನ್ನು ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ನಗರ ಉತ್ತರ ಠಾಣೆಯಲ್ಲಿ ಮಹಿಳೆಯ ನಗ್ನ ಚಿತ್ರ ಸೆರೆ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ಪತ್ತೆಯಾದ ಮೊಬೈಲ್ ಬಳಸಿ ಶೌಚಾಲಯಕ್ಕೆ ಹೋಗಿದ್ದ ಮಹಿಳೆಯರ ವಿಡಿಯೋ ಚಿತ್ರೀಕರಿಸಲಾಗಿತ್ತೇ ಎಂಬ ವಿವರವನ್ನು ಬಹಿರಂಗಪಡಿಸಿಲ್ಲ

Ad Widget

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading