Ad Widget

SI Suthesh | ವಕೀಲ ಕುಲದೀಪ್ ಶೆಟ್ಟಿಗೆ ಹಲ್ಲೆ ಆರೋಪ : ಎಸ್ಪಿ ಕಚೇರಿಗೆ ವರ್ಗಾವಣೆಗೊಂಡ ಎಸ್ಐ ಸುತೇಶ್ ಸಸ್ಪೆಂಡ್

IMG-20221211-WA0037
Ad Widget

Ad Widget

Ad Widget

ಬೆಳ್ತಂಗಡಿ: ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸಿ ಎಸ್.ಪಿ ಕಚೇರಿಗೆ ವರ್ಗಾವಣೆಯಾಗಿರುವ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಸುತೇಶ್ (SI Suthesh) , ಸಿಎಂ ಬೊಮ್ಮಾಯಿ ಬಂದು ಹೋದ ಬೆನ್ನಲ್ಲೇ ಸಸ್ಪೆಂಡ್ ಆದೇಶ ಹೊರಬಿದ್ದಿದೆ.

Ad Widget

Ad Widget

Ad Widget

Ad Widget

ಜಾಗದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಕುಲದೀಪ್ ಶೆಟ್ಟಿ ಅವರ ಮನೆಗೆ ನುಗ್ಗಿದ ಪೂಂಜಾಲಕಟ್ಟೆ ಪೊಲೀಸರು ಅವರ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ ವಕೀಲರು ಜಿಲ್ಲೆಯಾಧ್ಯಂತ ಪ್ರತಿಭಟನೆ ನಡೆಸಿದ್ದರು.

Ad Widget

Ad Widget

Ad Widget

Ad Widget

ರಾತ್ರಿ ಕುಲದೀಪ್ ಶೆಟ್ಟಿ ಬಂಧಿಸಿ ಪೊಲೀಸ್ ಜೀಪಿನಲ್ಲಿ ಕರೆದುಕೊಂಡು ಹೋಗುವಾಗ ತಾಯಿ ತಡೆಯಲು ಯತ್ನಿಸಿದ್ದಾರೆ. ಆಗ ಜೀಪನ್ನು ಹಿಂದೆ ಮುಂದೆ ಚಲಾಯಿಸಿದ ವಿಡಿಯೋ ವೈರಲ್ ಆಗಿತ್ತು.

 ನಂತರ ಸಬ್ ಇನ್ ಸ್ಪೆಕ್ಟರ್ ಅವರನ್ನು ಎಸ್.ಪಿ ಅವರ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು.

Ad Widget

Ad Widget

ವಕೀಲನ ಮೇಲೆ ಜಾಗದ ಗಲಾಟೆ ಹೊಂದಿರುವ ಕುಟುಂಬವೂ ಪತ್ರಿಕಾಗೋಷ್ಠಿ ಕರೆದು ಆರೋಪಿಸಿತು. ಈ ನಡುವೆ ಬಿಜೆಪಿ ನಾಯಕರು ಎಸ್ಐ ಸುತೇಶ್ ಪರ ನಿಂತು ಹೋರಾಟಕ್ಕೆ ತಯಾರಿ ನಡೆಸುವಾಗಲೇ ಅಮಾನತು ಆದೇಶ ಹೊರಬಿದ್ದಿದೆ.

ಯುವ ವಕೀಲನ ಮೇಲೆ ದೌರ್ಜನ್ಯ ನಡೆಸಿದ ಆರೋಪ ಹೊತ್ತಿರುವ ಎಸ್ಐ ಅಮಾನತಿಗಾಗಿ ವಕೀಲರ ಸಂಘ ರಾಜ್ಯವ್ಯಾಪ್ತಿ ಪ್ರತಿಭಟನೆಗೆ ನಿರ್ಧರಿಸಿತು.

Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: