ಪುತ್ತೂರು
Puttur Accident | ಪುತ್ತೂರು : ರಸ್ತೆ ದಾಟುತಿದ್ದ ವಿದ್ಯಾರ್ಥಿಗೆ ಶಾಸಕರ ಕಾರು ಡಿಕ್ಕಿ
ಪುತ್ತೂರು:ಹಾರಾಡಿ ಶಾಲಾ ಬಳಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಯೊಬ್ಬರಿಗೆ ಪುತ್ತೂರು ಶಾಸಕರ ಕಾರು ಡಿಕ್ಕಿಯಾದ (Puttur Accident) ಘಟನೆ ಡಿ.16 ರಂದು ನಡೆದಿದೆ.
ಪುತ್ತೂರಿನ ಪಡೀಲು ಸಮೀಪದ ಹಾರಾಡಿ ಶಾಲಾ ವಿದ್ಯಾರ್ಥಿ ಶಾಲೆಯ ಬಳಿ ರಸ್ತೆ ದಾಟುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಶಾಸಕ ಸಂಜೀವ ಮಠಂದೂರು ಅವರ ಕಾರು ಆತನಿಗೆ ಡಿಕ್ಕಿಯಾಗಿದೆ.
ಗಾಯಗೊಂಡ ವಿದ್ಯಾರ್ಥಿಯನ್ನು ಅದೇ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿ ಬಳಿಕ ಶಾಲೆಗೆ ಬಿಡಲಾಗಿದೆ ಎಂದು ತಿಳಿದು ಬಂದಿದೆ.
ಪುತ್ತೂರು – ಉಪ್ಪಿನಂಗಡಿ ರಸ್ತೆ ಚತುಷ್ಪಥವಾದ ಬಳಿಕ ವಾಹನ ದಟ್ಟಣೆ ಹೆಚ್ಚಾಗಿದ್ದು ಶಾಲಾ ವಿದ್ಯಾರ್ಥಿಗಳು ರಸ್ತೆ ದಾಟುವ ವೇಳೆ ರಸ್ತೆ ವಿಭಜಕದಲ್ಲಿ ಗೊಂದಲವುಂಟಾಗಿ ಅತ್ತಿಂದಿತ್ತ ಬರುವ ವಾಹನಗಳನ್ನು ಗಮನಿಸಲಾಗದೆ ಅನೇಕ ಬಾರಿ ಸಣ್ಣಪುಟ್ಟ ಅಪಘಾತಗಳಾಗಿರುವುದರಿಂದ ಈ ಭಾಗದಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಹಂಪ್ಸ್ ಅಳವಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡ
Student harrased in bus ಉಪ್ಪಿನಂಗಡಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿದ್ಯಾರ್ಥಿನಿಗೆ ಜತೆ ಸಹ ಪ್ರಯಾಣಿಕನಿಂದ ಕಿರುಕುಳ – ಯುವತಿ ವ್ಯಗ್ರಗೊಳ್ಳುತ್ತಾಳೆ ಕಿಟಕಿಯಿಂದ ಹಾರಿ ಆರೋಪಿ ಪರಾರಿ – ಮುಂದೇನಾಯಿತು ?
ಉಪ್ಪಿನಂಗಡಿ : ಏ 25: ಸ್ಲೀಪರ್ ಕೋಚ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಅನ್ಯಕೋಮಿನ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಲು ಮುಂದಾದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ನ ಕಿಟಕಿಯಿಂದ ಹಾರಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮೂಲತಃ ಬಂಟ್ವಾಳ ತಾಲೂಕಿನ ಫರಂಗಿಪೇಟೆ ನಿವಾಸಿಯಾಗಿರುವ ವಿದ್ಯಾರ್ಥಿನಿಯು ಬೆಂಗಳೂರಿನಲ್ಲಿ ಫ್ಯಾಶನ್ ಡಿಸೈನಿಂಗ್ ಕಲಿಯುತ್ತಿದ್ದು, ಊರಿಗೆ ಹೋಗುವ ಸಲುವಾಗಿ ಮಂಗಳವಾರ ರಾತ್ರಿ ಬೆಂಗಳೂರಿನಿಂದ ಖಾಸಗಿ ಬಸ್ನಲ್ಲಿ (ಕೆಎ-51 ಎಡಿ-7116 ನೇ ನೋಂದಣಿಯ ಬಸ್ಸಿನಲ್ಲಿ ) ಪ್ರಯಾಣಿಸುತ್ತಿದ್ದಳು. ಬಸ್ ಸಕಲೇಶಪುರ ಕಳೆದು ಬೆಳಿಗ್ಗಿನ ಜಾವ ಗುಂಡ್ಯ ಬಳಿ ತಲುಪುತ್ತಿದ್ದಂತೆ ಆರೋಪಿ ಮಲಗಿದ್ದ ವಿದ್ಯಾರ್ಥಿನಿಯ ಮೈ ಮೇಲೆ ಕೈ ಹಾಕಿದ್ದಾನೆ. ಬಳಿಕ ಮತ್ತೊಮ್ಮೆ ಇದೇ ಯತ್ನ ನಡೆದಾಗ ಈ ಬಗ್ಗೆ ಬಸ್ನ ಚಾಲಕನ ಗಮನಕ್ಕೆ ತಂದಿದ್ದಾಳೆ.
ಆದರೆ ಚಾಲಕನಿಂದ ಯಾವುದೇ ಸ್ಪಂದನ ದೊರೆಯದಿದ್ದಾಗ, ಕೆಲವು ಸಹ ಪ್ರಯಾಣಿಕರು ರಕ್ಷಣೆಗೆ ಧಾವಿಸಿ ಬಂದು ಆತನನ್ನು ವಿಚಾರಿಸಿದಾಗ ತಾನು, ಬೆಳ್ತಂಗಡಿ ತಾಲೂಕು ನಿವಾಸಿ ಮಹಮ್ಮದ್ ಅಝೀಮ್ ಎಂದು ಪರಿಚಯಿಸಿಕೊಂಡಿದ್ದಾನೆ. ಈ ವೇಳೆ ದಾರಿ ಮಧ್ಯೆ ಸಿಗುವ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ದೂರು ನೀಡುವುದಾಗಿ ವಿದ್ಯಾರ್ಥಿನಿ ಹೇಳಿದ್ದಾಳೆ. ಇದಾದ ಬಳಿಕ ಚಲಿಸುತ್ತಿದ್ದ ಬಸ್ ವೇಗ ಕಡಿಮೆಯಾಗುತ್ತಿದ್ದಂತೆಯೇ ಕಿಟಕಿಯಿಂದ ಹೊರಗೆ ಹಾರಿದ ಆರೋಪಿಯು ಬಳಿಕ ಅಲ್ಲಿಂದ ಕಣ್ಮರೆಯಾಗಿದ್ದಾನೆ.
ವಿದ್ಯಾರ್ಥಿನಿಯು ಮನೆಗೆ ತಲುಪಿದ ಬಳಿಕ ತನ್ನ ಹೆತ್ತವರೊಂದಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಬಂದು ಲಿಖಿತ ದೂರು ಸಲ್ಲಿಸಿದ್ದಾರೆ. ಆರೋಪಿಯ ವಿರುದ್ದ Ipc ಸೆಕ್ಷನ್ 354,354(A)ಯಡಿ ಪ್ರಕರಣ ದಾಖಲಾಗಿದೆ. ಬಳಿಕ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ.
ಪೊಲೀಸ್ ಪ್ರಕಟನೆ:
ರಾಜಕೀಯ ಲಾಭಕ್ಕಾಗಿ,ಕೆಲವು ಸಾಮಾಜಿಕ ಜಾಲತಾಣಗಳಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಳ್ಳುಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದು ಕಂಡುಬಂದಿದ್ದು, ಇದು ಚುನಾವಣಾ ನೀತಿಸಂಹಿತೆಯ ಉಲ್ಲಂಘನೆಯಾಗಿರುತ್ತದೆ ಹಾಗೂ ಇಂತಹ ಸುಳ್ಳುಸುದ್ದಿಗಳಿಂದ ಸಾಮಾಜಿಕ ಸ್ವಾಸ್ಥ್ಯವನ್ನು ಕೆಡಿಸುವುದರಿಂದ, ಅಂತಹ ಕಿಡಿಗೇಡಿಗಳ ವಿರುದ್ದವೂ ಸೂಕ್ತ ಕಾನುನುಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ
Press Release-ವಿಶೇಷ ಸರ್ಟಿಫಿಕೇಟ್ ಕೋರ್ಸ್ಗಳ ಉದ್ಘಾಟನಾ ಕಾರ್ಯಕ್ರಮದ ಪತ್ರಿಕಾ ಪ್ರಕಟಣೆ
ವಿವೇಕಾನಂದ ಪದವಿಪೂರ್ವ ಕಾಲೇಜು 2024-25ನೇ ಶೈಕ್ಷಣಿಕ ವರ್ಷದಿಂದ ವಿಶೇಷ ಸರ್ಟಿಫಿಕೇಟ್ ಕೋರ್ಸ್ಗಳನ್ನು ಪರಿಚಯಿಸುತ್ತಿದೆ. ಪದವಿಪೂರ್ವ ಶಿಕ್ಷಣ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಈ ವಿನೂತನ ಪ್ರಯೋಗವನ್ನು ನಮ್ಮ ಸಂಸ್ಥೆ ಆರಂಭಿಸುತ್ತಿದ್ದು, ಈ ಕೋರ್ಸ್ಗಳ ಮೂಲಕ ವಿದ್ಯಾರ್ಥಿಗಳಿಗೆ ಶೇರು ವಹಿವಾಟು, Tally, ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಮುಂತಾದ ವಿಷಯಗಳ ಬಗ್ಗೆ ವ್ಯಾವಹಾರಿಕ ಹಾಗೂ ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶವಿದೆ.
ಈ ವಿಶೇಷ ಸರ್ಟಿಫಿಕೇಟ್ ಕೋರ್ಸ್ಗಳ ಉದ್ಘಾಟನಾ ಸಮಾರಂಭವು 24 ಏಪ್ರಿಲ್ 2024 ನೇ ಬುಧವಾರ 10 ಗಂಟೆಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಇರುವ ನೇತಾಜಿ ಸಭಾಂಗಣದಲ್ಲಿ ಜರುಗಲಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ. ಪಿ. ಇವರು ವಹಿಸಲಿದ್ಧಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ಉದ್ಯಮಿಗಳು ಹಾಗೂ ಅಜೇಯ ವಿಶ್ವಸ್ಥ ಮಂಡಳಿ, ಮೂರ್ಕಜೆ, ವಿಟ್ಲ ಇದರ ಅಧ್ಯಕ್ಷರಾದ ಪಿ. ಸುಬ್ರಾಯ ಪೈ ಇವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೆಲ್ತ್ ವಿಷನ್ ಪುತ್ತೂರು ಹಾಗೂ ಹಾರ್ದಿಕ್ ಹರ್ಬಲ್ಸ್ ಬಂಟ್ವಾಳ ಇದರ ಸಂಸ್ಥಾಪಕರಾದ ಮುರಳೀಧರ ಕೆ. ಇವರು ಭಾಗವಹಿಸಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ಕೆ. ಎನ್. ಸುಬ್ರಹ್ಮಣ್ಯ ಹಾಗೂ ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ ಇವರು ಉಪಸ್ಥಿತಲಿರಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪೋಷಕರು, ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಮುಂಬರುವ ಶೈಕ್ಷಣಿಕ ವರ್ಷದಿಂದ ಈ ಕೋರ್ಸ್ಗಳು ಆರಂಭಗೊಳ್ಳಲಿದ್ದು ಹಲವಾರು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲಿದ್ದಾರೆ.
ಪುತ್ತೂರು
ಕಳೆದ ವರ್ಷ ಶೇ 100 ಫಲಿತಾಂಶ ದಾಖಲಿಸಿದ ವಿದ್ಯಾಮಾತಾ ಅಕಾಡೆಮಿಯಿಂದ KARTET 2024ಕ್ಕೆ ತರಬೇತಿ ಪ್ರಾರಂಭ – ಆನ್ಲೈನ್ ತರಬೇತಿ ಪ್ರಾರಂಭಿಸಿದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ
2023ನೇ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಹೆಗ್ಗಳಿಕೆಯೊಂದಿಗೆ 2024ನೇ ಸಾಲಿನ KARTET ಗೆ ಅರ್ಜಿ ಸಲ್ಲಿಸಿರುವ ಮತ್ತು ಅರ್ಜಿ ಸಲ್ಲಿಸಲು ಉದ್ದೇಶಿಸಿರುವ ಭವಿಷ್ಯದ ಸರಕಾರಿ ಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತರಬೇತಿ ಪ್ರಾರಂಭಿಸಿದೆ.
ವಿದ್ಯಾಮಾತಾ ಅಕಾಡೆಮಿಯು
ಈ ವರ್ಷವೂ ಕೂಡ ಆನ್ ಲೈನ್ ತರಬೇತಿಯನ್ನು ಒದಗಿಸಲಿದ್ದು ದಿನಾಂಕ 25.04.2024ರಿಂದ 2 ತಿಂಗಳ ಕಾಲ ಪ್ರತಿನಿತ್ಯ ರಾತ್ರಿ 7ರಿಂದ 8ರ ವರೆಗೆ ಆನ್ ಲೈನ್ ತರಗತಿಗಳು ನಡೆಯಲಿದ್ದು, ಈ ಅರ್ಹತಾ ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯನ್ನು ಈ ಕೆಳಗಡೆ ನೀಡಿರುವ ದೂರವಾಣಿ ಸಂಖ್ಯೆ ಅಥವಾ ಖುದ್ದಾಗಿ ಸಂಸ್ಥೆಯ ಸುಳ್ಯ ವಿದ್ಯಾಮಾತಾ ಅಕಾಡೆಮಿಯ ಕಛೇರಿ ಮತ್ತು ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯ ಕಛೇರಿಯನ್ನು ಹಾಗೂ ಕಾರ್ಕಳದ ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಲು ಅವಕಾಶ ಕಲ್ಪಿಸಲಾಗಿದೆ.
ಶಿಕ್ಷಕರ ಅರ್ಹತಾ ಪರೀಕ್ಷೆಯ ಮಾನದಂಡಗಳು:
ಅರ್ಜಿ ಸಲ್ಲಿಸಲು 15.05.2024 ಕೊನೆಯ ದಿನಾಂಕವಾಗಿರುತ್ತದೆ
ವಿದ್ಯಾರ್ಹತೆ:
PUC D.Ed, BE. BEd, BA.B.Ed, BSc.B.Ed
B.com B.Ed
ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:
ಫೋಟೋ, ಅಂಕಪಟ್ಟಿಗಳು,ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು 30.06.2024ರಂದು ನಡೆಯಲಿದೆ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ವಿದ್ಯಾಮಾತಾ ಅಕಾಡೆಮಿ
ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201
PH: 9148935808 / 96204 68869
*ಸುಳ್ಯ ಶಾಖೆ:* ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ 574239
*PH: 9448527606*
*ಕಾರ್ಕಳ ಶಾಖೆ:*
ಒಂದನೆಯ ಮಹಡಿ, MCC ಬ್ಯಾಂಕ್ ಮೇಲ್ಗಡೆ, ತಾಲೂಕು ಕಚೇರಿ ರಸ್ತೆ, (ಬಂಡಿ ಮಠ ಬಸ್ ಸ್ಟ್ಯಾಂಡ್ ಎದುರು ರಸ್ತೆ ) ಕಾರ್ಕಳ
PH:- 8310484380 / 9740564044 / 9620468869
-
ಸಾಮಾಜಿಕ ಮಾಧ್ಯಮ1 day ago
Hasana sex tape : ಚುನಾವಣೆ ಹೊಸ್ತಿಲಲ್ಲಿ ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್ ಡ್ರೈವ್ ಸೌಂಡ್ ! ಅಸಲಿಯ / ನಕಲಿಯ ತೀವ್ರ ಚರ್ಚೆ
-
ದಕ್ಷಿಣ ಕನ್ನಡ2 days ago
Student harrased in bus ಉಪ್ಪಿನಂಗಡಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿದ್ಯಾರ್ಥಿನಿಗೆ ಜತೆ ಸಹ ಪ್ರಯಾಣಿಕನಿಂದ ಕಿರುಕುಳ – ಯುವತಿ ವ್ಯಗ್ರಗೊಳ್ಳುತ್ತಾಳೆ ಕಿಟಕಿಯಿಂದ ಹಾರಿ ಆರೋಪಿ ಪರಾರಿ – ಮುಂದೇನಾಯಿತು ?
-
ನಿಧನ ವಾರ್ತೆ1 day ago
Bhagavata Subramanya Dhareshwara-ಹಾಡು ನಿಲ್ಲಿಸಿದ ಬಡಗುತಿಟ್ಟಿನ ಗಾನ ಕೋಗಿಲೆ – ಯಕ್ಷಗಾನದ ಹಿರಿಯ ಭಾಗವತ ಸುಬ್ರಮಣ್ಯ ಧಾರೇಶ್ವರ ಇನ್ನಿಲ್ಲ
-
ಬಿಗ್ ನ್ಯೂಸ್11 hours ago
ಕುಟುಂಬ ಸಮೇತ ಮತ ಚಲಾಯಿಸಲು ಪದ್ಮರಾಜ್ ಬಂದಾಗ ಬಿಜೆಪಿ ಕಾರ್ಯಕರ್ತನಿಂದ ಗೂಂಡಾಗಿರಿ – ಪೊಲೀಸ್ ಅಧಿಕಾರಿಯನ್ನು ತಳ್ಳಾಡಿ ಪುಂಡಾಟ : ಮಾಧ್ಯಮದವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ
-
ಸ್ಥಳೀಯ1 day ago
Mithun Rai-ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಮೂಡುಬಿದಿರೆ ಬಿಜೆಪಿ ಶಾಸಕರ ಪ್ರಾಮಾಣಿಕ ಪ್ರಯತ್ನ – ಮಿಥುನ್ ರೈ ಶಾಕಿಂಗ್ ಹೇಳಿಕೆ
-
ಮಂಗಳೂರು1 day ago
Janardhana Poojary-ಹಿಂದುತ್ವದ ಅಮಲಿನಲ್ಲಿ ಹಿಂದುಳಿದ ವರ್ಗದ ಯುವಕರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಮೇಲ್ವರ್ಗದವರು ಅಧಿಕಾರ ನಡೆಸುತ್ತಿದ್ದಾರೆ- ಇದಕ್ಕೆಲ್ಲ ತಿಲಾಂಜಲಿ ನೀಡುವ ಕೆಲಸ ಪದ್ಮರಾಜ್ ಆರ್ ಪೂಜಾರಿಯನ್ನು ಗೆಲ್ಲಿಸುವ ಮೂಲಕ ಆಗಬೇಕಿದೆ :ಜನಾರ್ದನ ಪೂಜಾರಿ
-
ಬಿಗ್ ನ್ಯೂಸ್12 hours ago
Hasana Sex Tape: ಹಾಸನ ಸಂಸದ ಪ್ರಜ್ವಲ್ ರೇವಣ್ಣರವರದೆಂದು ಬಿಂಬಿಸಿ ಕೊಳಕು, ಮಾರ್ಫ್ ಮಾಡಿದ ವೀಡಿಯೊಗಳು ಆನ್ಲೈನ್ನಲ್ಲಿ ವ್ಯಾಪಕವಾಗಿ ಪ್ರಸಾರ : ಚುನಾವಣಾ ಏಜೆಂಟ್ ರಿಂದ ಠಾಣೆಗೆ ದೂರು
-
ಅಪರಾಧ1 day ago
Bantwal-ಬಂಟ್ವಾಳ : ಬಾಲಕಿಯೊಂದಿಗೆ ಅನುಚಿತ ವರ್ತನೆ – ಯುವಕನ ವಿರುದ್ಧ ಪ್ರಕರಣ ದಾಖಲು