ಮೂಲ್ಕಿ, ಡಿ 18 :ಮಂಗಳೂರಿನ (Mangalore) ಹೊರವಲಯದ ಮೂಲ್ಕಿ ಕೆರೆಕಾಡು ಗ್ರಾಮದಲ್ಲಿ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಆರೋಪಿಯು ಬೈಕ್ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು ಅಸಭ್ಯವಾಗಿ ವರ್ತಿಸಿದ್ದು, ಈ ಬಗ್ಗೆ ಬಾಲಕಿಯ ತಂದೆಯ ಸ್ನೇಹಿತರಿಬ್ಬರು ಗಮನಿಸಿದ್ದರು.
ಇನ್ನು ಶನಿವಾರದಂದು ಮತ್ತೆ ಅದೇ ಪ್ರದೇಶದಲ್ಲಿ ಆರೋಪಿ ಕಂಡು ಬಂದ ಹಿನ್ನೆಲೆಯಲ್ಲಿ ಆತನನ್ನು ಕಟ್ಟಿ ಹಾಕಿ ಹೊಡೆದಿದ್ದಾರೆ ಎಂದು ವರದಿಯಾಗಿದೆ.
ಬಾಲಕಿಯ ಪೋಷಕರ ದೂರಿನ ಮೇರೆಗೆ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಯ ದೂರಿನ ಮೇರೆಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಗಲಭೆ ಪ್ರಕರಣದ ದೂರು ದಾಖಲಾಗಿದೆ.
ಬಂಧಿತ ಆರೋಪಿಗಳನ್ನು ಕೆರೆಕಾಡು ನಿವಾಸಿ ದಿವ್ಯೇಶ್ ದೇವಾಡಿಗ (38), ರಾಜೇಶ್ ಕೆರೆಕಾಡು ಮತ್ತು ಯೋಗೀಶ್ ಕುಮಾರ್ ಯಾನೆ ಯೋಗಿಸ್ (46) ಎಂದು ಗುರುತಿಸಲಾಗಿದೆ.
ವ್ಯಕ್ತಿಯೋರ್ವ ಬೈಕ್ ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು ಅಸಭ್ಯವಾಗಿ ವರ್ತಿಸಿದ್ದು ಬಾಲಕಿಯ ತಂದೆಯ ಸ್ನೇಹಿತರಿಬ್ಬರು ಗಮನಿಸಿದ್ದರು. ನಿನ್ನೆ ಶನಿವಾರ ಅದೇ ಪ್ರದೇಶದಲ್ಲಿ ಆರೋಪಿ ಕಂಡುಬಂದ ಹಿನ್ನೆಲೆಯಲ್ಲಿ ಆತನನ್ನು ಕಟ್ಟಿಹಾಕಿ ಹೊಡೆದಿದ್ದರು.
ಬಾಲಕಿ ಪೋಷಕರ ದೂರಿನ ಮೇರೆಗೆ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು ಆರೋಪಿ ದೂರಿನ ಮೇರೆಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಗಲಭೆ ಪ್ರಕರಣ ದೂರು ದಾಖಲಾಗಿದ್ದು ಅದರಂತೆ ಮೂವರನ್ನು ಬಂಧಿಸಿದ್ದಾರೆ.