Connect with us

ಆರೋಗ್ಯ

Covid 19 : ಮತ್ತೆ ಕೊರೊನಾ ಭೀತಿ : ಮಾಸ್ಕ್ ಧರಿಸಿ – ಜನರಿಗೆ ಕೇಂದ್ರ ಮಹತ್ವದ ಸೂಚನೆ : ಕೋವಿಡ್ ನಿಯಮಗಳ ಪಾಲಿಸಿ ಅಥಾವ ಭಾರತ್ ಜೋಡೋ ಯಾತ್ರೆ ರದ್ದು ಮಾಡಿ : ಕಾಂಗ್ರೆಸ್‌ ಗೆ ಕೇಂದ್ರದ ಖಡಕ್‌ ವಾರ್ನಿಂಗ್‌

Ad Widget

Ad Widget

Ad Widget

Ad Widget Ad Widget

ನವ ದೆಹಲಿ : ಡಿ 21 : ಚೀನಾ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜನಜಂಗುಳಿಯಿರುವ ಪ್ರದೇಶಗಳಲ್ಲಿ. ಮಾಸ್ಕ್ ಧರಿಸುವಂತೆ ಕೇಂದ್ರ ಮಹತ್ವದ ಸೂಚನೆ ನೀಡಿದೆ. ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯಯವರು ಉನ್ನತ ಮಟ್ಟದ ಅಧಿಕಾರಿಗಳ ಜೊತೆ ದೇಶದ ಕೊವೀಡ್ ಕುರಿತಾಗಿ ಪರಿಸ್ಥಿತಿ ಪರಿಶೀಲನಾ ಸಭೆ ನಡೆಸಿದರು. ಅಲ್ಲದೆ, ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Ad Widget

Ad Widget

Ad Widget

Ad Widget

Ad Widget

‘ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತು ತಜ್ಞರ ಜೊತೆ ಇಂದು ದೇಶದಲ್ಲಿ ಕೋವಿಡ್ ಸ್ಥಿತಿ ಕುರಿತಂತೆ ಪರಿಶೀಲನಾ ಸಭೆ ನಡೆಸಿದೆ. ಕೋವಿಡ್ ಇನ್ನೂ ಅಂತ್ಯಗೊಂಡಿಲ್ಲ. ಸಂಬಂಧಿತ ಎಲ್ಲ ಅಧಿಕಾರಿಗಳಿಗೂ ಎಚ್ಚರಿಕೆ ವಹಿಸಲು ಮತ್ತು ಕಣ್ಗಾವಲಿಗೆ ಸೂಚಿಸಿದ್ದೇನೆ. ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ನಿರ್ವಹಿಸಲು ನಾವು ಸಿದ್ಧರಾಗಿದ್ದೇವೆ’ ಎಂದು ಮಾಂಡವೀಯಟ್ವೀಟ್ ಮೂಲಕ ತಿಳಿಸಿದ್ಧಾರೆ.

Ad Widget

Ad Widget

ಆರೋಗ್ಯ, ಫಾರ್ಮಾಸಿಟಿಕಲ್, ಬಯೊಟೆಕ್ನಾಲಜಿ, ಆಯುಷ್ ಇಲಾಖೆಯ ಅಧಿಕಾರಿಗಳು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಡಿಜಿ ರಾಜೀವ್ ಬಹ್ಲ್, ನೀತಿ ಆಯೋಗದ ಸದಸ್ಯ ಡಾ.ವಿ.ಕೆ ಪೌಲ್, ಲಸಿಕೀಕರಣಕ್ಕೆ ಸಂಬಂಧಿಸಿದ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯ(ಎನ್ಟಿಎಜಿಐ) ಅಧ್ಯಕ್ಷ ಡಾ.ಎನ್.ಕೆ. ಅರೋರಾ ಮುಂತಾದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Ad Widget

Ad Widget

ಜಪಾನ್, ಅಮೆರಿಕ, ದಕ್ಷಿಣ ಕೊರಿಯಾ, ಬ್ರೆಜಿಲ್ ಮತ್ತು ಚೀನಾ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಕೊರೊನಾದ ಹೊಸ ತಳಿಗಳನ್ನು ಪತ್ತೆ ಮಾಡುವ ದೃಷ್ಟಿಯಿಂದ ಹೊಸದಾಗಿ ಪತ್ತೆಯಾದ ಕೋವಿಡ್ ಪ್ರಕರಣಗಳ ಜಿನೋಮ್ ಪರೀಕ್ಷೆ ಹೆಚ್ಚಿಸುವಂತೆ ದೇಶದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ. ಈ ಕುರಿತಂತೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್, ಕೊರೊನಾದ ಹೊಸ ತಳಿಗಳ ಪತ್ತೆಗೆ ಜಿನೋಮ್ ಪರೀಕ್ಷೆ ತೀವ್ರಗೊಳಿಸಬೇಕಿದೆ ಎಂದು ತಿಳಿಸಿದ್ದಾರೆ.

Ad Widget

Ad Widget

ದೇಶದ ಎಲ್ಲ ನಾಗರಿಕರು ಕೋವಿಡ್ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆಯಬೇಕು ಮತ್ತು ವೈರಸ್ ಹರಡುವಿಕೆ ತಡೆಗೆ ಜನಜಂಗುಳಿ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಮಾಂಡವೀಯ ಜೊತೆಗಿನ ಸಭೆ ಬಳಿಕ ನೀತಿ ಆಯೋಗದ ಸದಸ್ಯ ವಿ.ಕೆ. ಪೌಲ್ ಒತ್ತಾಯಿಸಿದ್ದಾರೆ.
‘ದೇಶದಲ್ಲಿ ಸದ್ಯ ಶೇಕಡ 27–28ರಷ್ಟು ಜನರು ಮಾತ್ರ ಕೋವಿಡ್ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದಿದ್ದಾರೆ. ಹಿರಿಯ ನಾಗರಿಕರೂ ಸೇರಿದಂತೆ ಉಳಿದ ಎಲ್ಲ ನಾಗರಿಕರು ಲಸಿಕೆ ಪಡೆಯಬೇಕು’ಎಂದು ಅವರು ಹೇಳಿದ್ದಾರೆ.

‘ಒಳಾಂಗಣ ಅಥವಾ ಹೊರಾಂಗಣ ಎಲ್ಲಿಯೇ ಇದ್ದರೂ ಜನಜಂಗುಳಿ ಇದ್ದಾಗ ಮಾಸ್ಕ್ ಬಳಸಿ. ವಿಶೇಷವಾಗಿ ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಅಥವಾ ಹಿರಿಯ ನಾಗರಿಕರು ಈ ನಿಯಮ ಪಾಲಿಸುವುದು ಮುಖ್ಯವಾಗಿದೆ’ ಎಂದು ಅವರು ಹೇಳಿದ್ದಾರೆ.

ಭಾರತ್‌ ಜೋಡೊಗೂ ಸಂಕಷ್ಟ:

ಕೋವಿಡ್–19 ನಿಯಮಾವಳಿಗಳನ್ನು ಪಾಲನೆ ಮಾಡಿ. ಸಾಧ್ಯವಾಗದಿದ್ದರೆ ಭಾರತ್ ಜೋಡೊ ಯಾತ್ರೆಯನ್ನು ನಿಲ್ಲಿಸಿ ಎಂದು ಕಾಂಗ್ರೆಸ್’ಗೆ ಕೇಂದ್ರ ಸರ್ಕಾರ ಬುಧವಾರ ಸೂಚನೆ ನೀಡಿದೆ.

ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಭಾರತ್ ಜೋಡೊ ಯಾತ್ರೆಯಲ್ಲಿ ಕೋವಿಡ್ ತಡೆ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಪಾಲನೆಯಾಗದಿದ್ದರೇ ಯಾತ್ರೆಯನ್ನು ನಿಲ್ಲಿಸುವುದು ಸೂಕ್ತ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ವಿಚಾರವನ್ನು ತಲೆಯಲ್ಲಿಟ್ಟುಕೊಳ್ಳಿ ಎಂದು ಪತ್ರದಲ್ಲಿ ಸೂಚಿಸಿದ್ದಾರೆಂದು ವರದಿಗಳು ತಿಳಿಸಿವೆ.

ಯಾತ್ರೆಯಲ್ಲಿ ಭಾಗವಹಿಸಿದ ನಂತರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಕೊರೋನಾ ವೈರಸ್‌ ಸೋಂಕಿಗೆ ಒಳಗಾಗಿದ್ದನ್ನು ಉಲ್ಲೇಖಿಸಿ ರಾಜಸ್ಥಾನದ ಮೂವರು ಸಂಸದರ ಬರೆದಿರುವ ಪತ್ರವನ್ನು ಕೂಡ ಕೇಂದ್ರ ಸಚಿವರು ರಾಹುಲ್ ಗಾಂಧಿಗೆ ಕಳುಹಿಸಿರುವ ಪತ್ರದಲ್ಲಿ ಲಗತ್ತಿಸಿದ್ದಾರೆ.

Click to comment

Leave a Reply

ಆರೋಗ್ಯ

Bourn Vita | ಬೋರ್ನ್ ವಿಟಾವನ್ನು ಎಲ್ಲಾ ಹೆಲ್ತ್ ಡ್ರಿಂಕ್ಸ್ ವರ್ಗದಿಂದ ತೆಗೆದುಹಾಕುವಂತೆ ಆದೇಶಿಸಿದ ಕೇಂದ್ರ ಸರ್ಕಾರ : ಅಧಿಕ ಪ್ರಮಾಣದ ಸಕ್ಕರೆ ಅಂಶವನ್ನು ಬಯಲಿಗೆಳೆದ ಯೂಟ್ಯೂಬರ್

Ad Widget

Ad Widget

Ad Widget

Ad Widget Ad Widget

ನವದೆಹಲಿ ಎ.14: ಮಕ್ಕಳಿಗೆ ಕುಡಿಸುವ ಬೋರ್ನ್ ವಿಟಾ (Bourn Vita) ಇನ್ನು ಮುಂದೆ ಹೆಲ್ತ್ ಡ್ರಿಂಕ್ಸ್ ವರ್ಗದಿಂದ ತೆಗೆದು ಹಾಕುವಂತೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಸಲಹೆ ನೀಡಿದೆ. ಪೋರ್ಟಲ್ ಮತ್ತು ಪ್ಲಾಟ್‍ಫಾರ್ಮ್‍ಗಳಲ್ಲಿ ಬೋರ್ನ್‍ವಿಟಾ ಸೇರಿದಂತೆ ಎಲ್ಲಾ ಪಾನೀಯಗಳು ಈ ವರ್ಗದಿಂದ ಕೈಬಿಡುವಂತೆ ಆದೇಶ ನೀಡಲಾಗಿದೆ.

Ad Widget

Ad Widget

Ad Widget

Ad Widget

Ad Widget

ಒಬ್ಬ ಯುಟ್ಯೂಬರ್ ಬೋರ್ನ್ ವೀಟಾದಲ್ಲಿ ಹೆಚ್ಚಿನ ಪ್ರಮಾಣ ಸಕ್ಕರೆ ಅಂಶ ಇರುವ ಬಗ್ಗೆ ವಿಡಿಯೋ ಮಾಡಿದ್ದ, ಅಲ್ಲದೆ ಪ್ರಯೋಗ ಮೂಲಕ ಆತ ಅದನ್ನು ತೋರಿಸಿದ್ದ. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ನ್ಯಾಷನಲ್ ಕಮಿಷನ್ ಫಾರ್ ಪ್ರೊಟೆಕ್ಷನ್ ಆಫ್ ಚೈಲ್ಡ್ ರೈಟ್ಸ್‌ನ ತನಿಖೆಯಯಲ್ಲಿ ಬೋರ್ನ್‍ವಿಟಾ ಹೆಚ್ಚಿನ ಸಕ್ಕರೆ ಮಟ್ಟವನ್ನು ಹೊಂದಿದೆ ಎಂದು ತಿಳಿದುಬಂದಿದೆ. ಇದು ಸ್ವೀಕಾರಾರ್ಹ ಮಿತಿಗಳಿಗಿಂತ ಹೆಚ್ಚು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Ad Widget

Ad Widget

ಕಂಪನಿಗಳು ಸುರಕ್ಷತಾ ಮಾನದಂಡಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಲು ವಿಫಲವಾಗಿವೆ. ಅಲ್ಲದೇ ಆರೋಗ್ಯಕರ ಪಾನೀಯಗಳು ಎಂದು ಬಿಂಬಿಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲು ಎನ್‍ಸಿಪಿಸಿಆರ್, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಕ್ಕೆ (FSSAI) ಸೂಚಿಸಿತ್ತು.

Ad Widget

Ad Widget
Continue Reading

ಆರೋಗ್ಯ

Paracetamol-ಸಣ್ಣ ತೊಂದರೆಗೂ ಪ್ಯಾರಸಿಟಮಲ್ ಸೇವಿಸುತ್ತಿದ್ದೀರಾ? ಮಿತಿಮೀರಿದ ಸೇವನೆಯಿಂದ ಕಿಡ್ನಿ, ಲಿವರ್‌ಗೆ ಸಮಸ್ಯೆಯಾಗುತ್ತಂತೆ.

Ad Widget

Ad Widget

Ad Widget

Ad Widget Ad Widget

ಜ್ವರ, ತಲೆ ನೋವು, ಮೈಕೈ ನೋವು, ಹಲ್ಲು ನೋವಿನಂತಹ ಸಣ್ಣ ಸಣ್ಣ ಆರೋಗ್ಯ ಸಮಸ್ಯೆಗಳಿಗೂ ಮಾತ್ರೆ ತೆಗೆದುಕೊಳ್ಳುತ್ತಿರುವವರಿಗೆ ಎಡಿನ್‌ಬರ್ಗ್‌ ವಿಶ್ವವಿದ್ಯಾಲಯದ ಅಧ್ಯಯನವೊಂದು ಶಾಕ್ ನೀಡಿದೆ.

Ad Widget

Ad Widget

Ad Widget

Ad Widget

Ad Widget

ಹೌದು.. ಸಣ್ಣ ತೊಂದರೆಗಳಿಗೂ ಪ್ಯಾರಸಿಟಮಲ್‌ ನುಂಗುವ ಅಭ್ಯಾಸ ಹೆಚ್ಚಿರುವ ಈ ಹೊತ್ತಿನಲ್ಲಿ, ಎಡಿನ್‌ಬರ್ಗ್‌ ವಿಶ್ವವಿದ್ಯಾಲಯದ ಅಧ್ಯಯನಕಾರರು ಮಹತ್ವದ ವರದಿ ನೀಡಿದ್ದು, ಹೆಚ್ಚು ಪ್ಯಾರಸಿಟಮಲ್ ಸೇವನೆಯಿಂದ ನಮ್ಮ ಲಿವರ್ ಗೆ ಹಾನಿಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ‌ಏಕೆಂದರೆ ಇದು ಪ್ರಿಸ್ಕ್ರಿಪ್ಷನ್‌ಇಲ್ಲದೆಯೂ ಸಹ ಮೆಡಿಕಲ್‌ಗಳಲ್ಲಿ ಲಭ್ಯವಿದೆ. ಇದು ನೋವು ನಿವಾರಕ ಮತ್ತು ಜ್ವರವನ್ನು ಕಡಿಮೆ ಮಾಡುವುದಾದರೂ ಶಿಫಾರಸು ಮಾಡಲಾದ ಡೋಸೇಜ್‌ಗಿಂತ ಅಧಿಕ ಸೇವಿಸಿದರೆ ಹಲವಾರು ಹಾನಿಕಾರಕ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು.

Ad Widget

Ad Widget

ಪ್ಯಾರಸಿಟಮಲ್‌ ಮಿತಿಮೀರಿದ ಸೇವನೆಯು ನಮ್ಮ ಯಕೃತ್ತಿನ ಔಷಧವನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ನಾಶಪಡಿಸುತ್ತದೆ. ಇದು ಯಕೃತ್ತಿನ ಹಾನಿಗೆ ಕಾರಣವಾಗುತ್ತದೆ. ಅಲ್ಲದೆ ವಾಕರಿಕೆ, ವಾಂತಿ, ಹೊಟ್ಟೆನೋವು ಮತ್ತು ಹಸಿವಿನ ಕೊರತೆಯಂತಹ ರೋಗ ಲಕ್ಷಣಕ್ಕೆ ಕಾರಣವಾಗಬಹುದು. ಅಲ್ಲದೆ ನಮ್ಮ ಆರೋಗ್ಯವನ್ನೇ ನುಂಗಿ ಹಾಕುತ್ತವೆ ಎಂದು ಇತ್ತೀಚಿನ ಅಧ್ಯಯನಗಳು ಬಹಿರಂಗ ಪಡಿಸಿವೆ.

Ad Widget

Ad Widget

ಎಡಿನ್‌ಬರ್ಗ್‌ವಿಶ್ವವಿದ್ಯಾಲಯದ ಅಧ್ಯಯನದಲ್ಲೇನಿದೆ?
ಪ್ರತಿ ಸಣ್ಣ ವಿಷಯಕ್ಕೂ, ವೈದ್ಯರ ಸಲಹೆ ಇಲ್ಲದೆ ಪ್ಯಾರಸಿಟಮಲ್ ಅಥವಾ ನೋವಿನ ಮಾತ್ರೆಗಳನ್ನು ನುಂಗುವುದರಿಂದ ಉಂಟಾಗುವ ಅಡ್ಡ ಪರಿಣಾಮಗಳು ಕೆಲವೊಮ್ಮೆ ಶಾಶ್ವತವೂ ಆಗಬಹುದು. ಇದು ಅಂಗಾಂಗ ವೈಫಲ್ಯಕ್ಕೂ ದಾರಿ ಮಾಡುತ್ತದೆ ಎಂದು ಅಧ್ಯಯನದಲ್ಲಿ ಎಚ್ಚರಿಸಲಾಗಿದೆ. ಪ್ರಮುಖವಾಗಿ ಭಾರತದಲ್ಲಿ ಬಳಸುವ ಪ್ಯಾರಸಿಟಮಲ್ ಪ್ರಮಾಣಕ್ಕಿಂತ ಪಶ್ಚಿಮ ದೇಶಗಳಲ್ಲಿ ಪ್ಯಾರಸಿಟಮಲ್ ಅಥವಾ ಅಸೆಟೋಮೆನೊಫಿನ್ ಬಳಸುವ ಪ್ರಮಾಣ ಹೆಚ್ಚು. ಆದರೆ ಕೋವಿಡ್‌ನಂತರದ ದಿನಗಳಲ್ಲಿ ಪ್ಯಾರಸಿಟಮಲ್ ಬಳಸುವ ಪ್ರಮಾಣ ಎಲ್ಲಾ ದೇಶಗಳಲ್ಲಿ ಮೊದಲಿಗಿಂತ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಇಂಥ ಅಧ್ಯಯನಗಳು ಮಹತ್ವ ಪಡೆದಿವೆ.

Ad Widget

Ad Widget

ಯಕೃತ್ತಿಗೆ ಹಾನಿ
ರೋಗದ ಉಪಶಮನಕ್ಕಾಗಿ ಬಳಸುವ ಈ ಔಷಧಗಳು ಮಿತಿ ಮೀರಿದರೆ ಅಪಾಯಗಳಿಗೆ ಆಹ್ವಾನ ನೀಡುತ್ತವೆ ಎಂಬುದು ಸಾಬೀತಾಗಿದೆ. ಕೆಲವು ಸಂದರ್ಭಗಳಲ್ಲಿ, ಯಕೃತ್ತಿನ ಮೇಲೆ ದುಷ್ಟಪರಿಣಾಮ ಬೀರುವ ಈ ಔಷಧಗಳು, ಅಲ್ಲಿನ ಆರೋಗ್ಯವಂತ ಕೋಶಗಳನ್ನು ಹಾಳು ಮಾಡುತ್ತವೆ ಹಾಗೂ ಅಂಗದ ವೈಫಲ್ಯಕ್ಕೂ ಕಾರಣವಾಗಬಹುದು. ಯಾವುದೇ ಕೋಶಗಳು ತಮ್ಮ ಅಂಗಗಳ ಗೋಡೆಯ ಜೊತೆಗಿನ ಸಂಪರ್ಕವನ್ನು ಕಳೆದುಕೊಂಡರೆ ಆಪತ್ತು ಎದುರಾಗುತ್ತದೆ. ಇದರಿಂದ ಆ ಕೋಶಗಳು ಕ್ರಮೇಣ ಸಾಯಬಹುದು. ಇಂಥ ಸಂದರ್ಭಗಳಲ್ಲಿ ಅಂಗಗಳು ಪೂರ್ಣ ಅಥವಾ ಭಾಗಶಃ ಹಾನಿಗೊಂಡು ವಿಫಲವೂ ಆಗಬಹುದು ಎಂದು ಹೇಳಲಾಗಿದೆ.

ಮೂತ್ರಪಿಂಡದ ಹಾನಿಗೆ ಕಾರಣವಾಗಬಹುದು
ಪ್ಯಾರಸಿಟಮಾಲ್ ಮಿತಿಮೀರಿದ ಸೇವನೆಯು ತೀವ್ರವಾದ ಪಿತ್ತಜನಕಾಂಗದ ವೈಫಲ್ಯಕ್ಕೆ ಕಾರಣವಾಗಬಹುದು ಮತ್ತು ದೀರ್ಘಾವಧಿಯ ಬಳಕೆಯು ಯಕೃತ್ತಿನ ಕಸಿ ಅಗತ್ಯವಿರುವ ಬದಲಾಯಿಸಲಾಗದ ಯಕೃತ್ತಿನ ಗಾಯಕ್ಕೆ ಕಾರಣವಾಗಬಹುದು. ಇದು ಜೀವಕ್ಕೆ ಅಪಾಯಕಾರಿ ಸ್ಥಿತಿಯಾಗಿದೆ. ಇದು ಕಾಮಾಲೆ ಮತ್ತು ಕೋಮಾಗೆ ಕಾರಣವಾಗಬಹುದು. ಚಿಕಿತ್ಸೆ ನೀಡದಿದ್ದರೆ, ಅದು ಮಾರಣಾಂತಿಕವಾಗಬಹುದು. ಕೆಲವೊಮ್ಮೆ ಇದು ಮೂತ್ರಪಿಂಡದ ಹಾನಿಗೆ ಕಾರಣವಾಗಬಹುದು.

Continue Reading

ಆರೋಗ್ಯ

Bad breath-ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸುತ್ತದೆ ಈ ತರಕಾರಿ! ಇಲ್ಲಿದೆ ಉಪಯುಕ್ತ ಮಾಹಿತಿ

Ad Widget

Ad Widget

Ad Widget

Ad Widget Ad Widget

ಬೆಂಗಳೂರು: ಸಾಮಾನ್ಯವಾಗಿ ಬೆವರಿದಾಗ ದೇಹ ದರ್ವಾಸನೆ ಬರುತ್ತದೆ. ಇದು ಇತರರಿಗೆ ಕಿರಿಕಿರಿ ಜತೆಗೆ ಮುಜುಗರವನ್ನು ಉಂಟುಮಾಡುತ್ತದೆ. ಇದಕ್ಕೆ ನಾವು ಸುಗಂಧ ದ್ರವ್ಯ ಇತ್ಯಾದಿಗಳನ್ನು ಬಳಸಿ, ವಾಸನೆ ತಡೆಗಟ್ಟುತ್ತೇವೆ. ಆದರೆ, ಬಾಯಿ ವಾಸನೆ ಸಮಸ್ಯೆಗೆ ಏನಪ್ಪಾ ಮಾಡೋದು? ಇದರಿಂದ ಮುಕ್ತಿ ಹೊಂದುವುದು ಹೇಗೆ ಎಂದು ಹಲವರು ಚಿಂತಿಸುತ್ತಾರೆ. ಅದಕ್ಕೆ ಇಲ್ಲಿದೆ ಸರಳ ಉಪಾಯ.

Ad Widget

Ad Widget

Ad Widget

Ad Widget

Ad Widget

ಬೆಳಗ್ಗೆ ಎದ್ದಾಗ ನಮ್ಮ ಬಾಯಿ ವಾಸನೆ ಬರುವುದು ಸಾಮಾನ್ಯ. ಕೂಡಲೇ ಬ್ರಶ್ ಮಾಡಿ, ಹಲ್ಲು-ನಾಲಿಗೆಯನ್ನು ಉಜ್ಜಿ ಬಾಯನ್ನು ಸ್ವಚ್ಛಗೊಳಿಸುತ್ತೇವೆ. ಆದರೂ ಸಹ ಕೆಲವರಿಗೆ ಬಾಯಿಯಿಂದ ಬರುವ ದರ್ವಾಸನೆ ಕಡಿಮೆಯಾಗುವುದಿಲ್ಲ. ಇದರಿಂದ ಇತರರೊಂದಿಗೆ ಬಾಯ್ಬಿಟ್ಟು ಮಾತನಾಡುವುದಕ್ಕೆ ಅನೇಕರು ಮುಜುಗರ ಪಡುತ್ತಾರೆ.

Ad Widget

Ad Widget

ಬಾಯಿಯನ್ನು ಸ್ವಚ್ಛವಾಗಿರಿಸಿಕೊಳ್ಳದಿದ್ದರೆ ಬ್ಯಾಕ್ಟೀರಿಯಾ ಆವರಿಸಿಕೊಳ್ಳುತ್ತದೆ. ಇದರಿಂದ ಬಾಯಿಯ ವಾಸನೆ ಕೂಡ ಹೆಚ್ಚಾಗುತ್ತದೆ. ಹಾಗಾದ್ರೆ ಈ ಸಮಸ್ಯೆಯನ್ನು ಸೌತೆಕಾಯಿ ಹೇಗೆ ನಿವಾರಿಸುತ್ತದೆ ಎಂಬುದನ್ನು ನೋಡುವುದಾದರೆ, ಸೌತೆಕಾಯಿಯ ಒಂದು ತುಂಡು ನಿಮ್ಮ ಬಾಯಿಯ ದುರ್ವಾಸನೆ ಹೋಗಲಾಡಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
ಒಂದು ಸೌತೆಕಾಯಿಯ ತುಂಡನ್ನು ನಾಲಿಗೆ ಮತ್ತು ನಾಲಿಗೆಯ ಮೇಲ್ಭಾಗಕ್ಕೆ ತಗಲುವಂತೆ 90ಸೆಕೆಂಡ್ ಅಥವಾ ಒಂದು ನಿಮಿಷ ಇಟ್ಟುಕೊಳ್ಳಿ. ಇದರಿಂದ ಫೈಟೋಕೆಮಿಕಲ್ ಅಂಶವು ಬ್ಯಾಕ್ಟಿರೀಯಾವನ್ನು ನಾಶಪಡಿಸುವ ಮೂಲಕ ಬಾಯಿಯಿಂದ ಬರುವ ದರ್ವಾಸನೆಯನ್ನು ತಡೆಗಟ್ಟುತ್ತದೆ.

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading