Connect with us

ಬೆಂಗಳೂರು

Punith Kerehalli | ಪುನೀತ್ ರಾಜ್ ಕುಮಾರ್ ಕುರಿತು ಅವಹೇಳನಕಾರಿ ಮಾತು ಆರೋಪ : ಪುನೀತ್ ಕೆರೆಹಳ್ಳಿಗೆ ನಡುರಸ್ತೆಯಲ್ಲೇ ಅಂಗಿಹರಿದು ಥಳಿತ

Ad Widget

Ad Widget

ಬೆಂಗಳೂರು: ಕರ್ನಾಟಕ ರತ್ನ ಡಾ‌. ರಾಜ್‌ಕುಮಾರ್ ಕುಟುಂಬ ಹಾಗೂ ಪುನೀತ್ ರಾಜ್ ಕುಮಾರ್ ಕುರಿತು ಬೇಕಾಬಿಟ್ಟಿಯಾಗಿ ಕೆಟ್ಟದಾಗಿ ಮಾತಾಡಿದ್ದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ(Punith Kerehalli) ಕನ್ನಡಪರ ಹೋರಾಟಗಾರರು ಧರ್ಮದೇಟು ಕೊಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಸದ್ಯ ಕೆರೆಹಳ್ಳಿಗೆ ಗೂಸಾ ಕೊಟ್ಟಿರುವ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇಂದು ಚಾಮರಾಜಪೇಟೆಯಲ್ಲಿ ರಾಜ್‌ಕುಮಾರ್ ಫ್ಯಾಮಿಲಿ ಬಗ್ಗೆ ಹಗುರವಾಗಿ ಮಾತಾನಾಡುತ್ತೀಯಾ ಎಂದು ಕ್ಷಮೆ ಕೇಳು ಎಂದು ಕನ್ನಡಪರ ಹೋರಾಟಗಾರ ಶಿವಕುಮಾರ್ ಟೀಂನಿಂದ ಪುನೀತ್ ಕೆರೆಹಳ್ಳಿಗೆ ಆಗ್ರಹಿಸಿದ್ದಾರೆ. ಆದರೆ ಏಟು ಪುನೀತ್ ಕೆರೆಹಳ್ಳಿ ಮಾತ್ರ ನಾನ್ಯಾಕೇ ಕ್ಷಮೆ ಕೇಳಲಿ ಎಂದು ಮೂಗಿನ ನೇರಕ್ಕೆ ಮಾತನಾಡಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಕನ್ನಡಪರ ಹೋರಾಟಗಾರರು ಕೆರೆಹಳ್ಳಿಗೆ ಹೊಡೆತ ಕೊಟ್ಟಿದ್ದಾರೆ.

Ad Widget

Ad Widget

Ad Widget

ಸದ್ಯ ಕೆರೆಹಳ್ಳಿಗೆ ಗೂಸಾ ಕೊಟ್ಟಿರುವ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇಂದು ಚಾಮರಾಜಪೇಟೆಯಲ್ಲಿ ರಾಜ್‌ಕುಮಾರ್ ಫ್ಯಾಮಿಲಿ ಬಗ್ಗೆ ಹಗುರವಾಗಿ ಮಾತಾನಾಡುತ್ತೀಯಾ ಎಂದು ಕ್ಷಮೆ ಕೇಳು ಎಂದು ಕನ್ನಡಪರ ಹೋರಾಟಗಾರ ಶಿವಕುಮಾರ್ ಟೀಂನಿಂದ ಪುನೀತ್ ಕೆರೆಹಳ್ಳಿಗೆ ಆಗ್ರಹಿಸಿದ್ದಾರೆ.

Ad Widget

ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಘಟನೆ ಬಗ್ಗೆ ದಿ. ಪುನೀತ್ ರಾಜಕುಮಾರ್ ವಿರುದ್ಧ ಪುನೀತ್ ಕೆರೆಹಳ್ಳಿ ಹಗುರವಾಗಿ ಮಾತನಾಡಿದ್ದ ಎಂದು ಶಿವಕುಮಾರ್ ಮತ್ತಿತರರು ಆರೋಪಿಸಿದ್ದು ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ. ಆದರೆ ನಾನ್ಯಾಕೆ ಕ್ಷಮೆ ಕೇಳಬೇಕು ಎಂದು ಪುನೀತ್ ವಾದಿಸಿದ್ದು, ವಾಗ್ವಾದ ವಿಕೋಪಕ್ಕೆ ಹೋಗಿ ಹೊಯ್‌ಕೈ ನಡೆದಿದ್ದು, ಈ ಕುರಿತ ವಿಡಿಯೋ ಕೂಡ ಹರಿದಾಡಲಾರಂಭಿಸಿದೆ.

Ad Widget

Ad Widget

ಡಾ.ರಾಜಕುಮಾರ್ ಕುಟುಂಬದ ಬಗ್ಗೆ ನೀನು ಹೇಗೆ ಮಾತಾಡಿದೆ ಅಂತ ಫೇಸ್‌ಬುಕ್‌ನಲ್ಲಿ ಕನ್ನಡಪರ ಮುಖಂಡ ಶಿವಕುಮಾರ್ ನಾಯ್ಕ ಪ್ರಶ್ನಿಸಿದ್ದು, ಬಳಿಕ ಇಬ್ಬರ ಮಧ್ಯೆ ಫೋನ್‌ನಲ್ಲಿ ಮಾತುಕತೆ ನಡೆದಿದೆ. ಆಗ ನಾನು ಚಾಮರಾಜಪೇಟೆಗೆ ಬಂದಿದ್ದೇನೆ ಬಾ ಎಂದು ಪುನೀತ್ ಕೆರೆಹಳ್ಳಿ ಕರೆದಿದ್ದು, ಅಲ್ಲಿಗೆ ಶಿವಕುಮಾರ್ ಮತ್ತು ತಂಡ ಹೋಗಿದ್ದು, ಅಲ್ಲಿ ಈ ಪ್ರಕರಣ ನಡೆದಿದೆ. ಸದ್ಯ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಮರಾಜಪೇಟೆ ಪೊಲೀಸರಿಂದ ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು

ಸಿ.ಪಿ ಯೋಗೇಶ್ವರ್ ಭಾವ ಮಹದೇವಯ್ಯ ನಾಪತ್ತೆ: ಅಪಹರಣ ಶಂಕೆ

Ad Widget

Ad Widget

ರಾಮನಗರ : ಬಿಜೆಪಿ ನಾಯಕ, ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರ ಭಾವ ಹಾಗೂ ಮೆಗಾಸಿಟಿ ನಿರ್ದೇಶಕ ಮಹದೇವಯ್ಯ ಅವರು ಅನುಮಾನಾಸ್ಪದವಾಗಿ ಕಾಣೆಯಾಗಿದ್ದಾರೆ.62 ವರ್ಷದ ಮಹದೇವಯ್ಯ ಅವರು ಗ್ರಾಮದ ತೋಟದ ಮನೆಯಲ್ಲಿ ಅವರು ವಾಸವಿದ್ದರು.

Ad Widget

Ad Widget

Ad Widget

Ad Widget

ಅವರ ಪತ್ನಿ ಬೆಂಗಳೂರಿಗೆ ಹೋಗಿದ್ದರಿಂದ, ಮನೆಯಲ್ಲಿ ಅವರೊಬ್ಬರೇ ಇದ್ದರು. ಮಧ್ಯಾಹ್ನ ಸ್ಥಳೀಯರು ಮನೆಗೆ ಹೋಗಿದ್ದಾಗ, ಮಹದೇವಯ್ಯ ಅವರು ಇರಲಿಲ್ಲ. ಬೆಡ್ ರೂಮ್ ನ ಅಲ್ಮೆರಾ ತೆರೆದಿದ್ದು, ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

Ad Widget

Ad Widget

Ad Widget

ಹಾಗಾಗಿ, ಯಾರೋ ಅವರನ್ನು ಅಪಹರಿಸಿ ಮನೆಯಲ್ಲಿದ್ದ ನಗದು ಮತ್ತು ಚಿನ್ನಾಭರಣ ದೋಚಿರುವ ಅನುಮಾನ ವ್ಯಕ್ತವಾಗಿದ್ದು, ಕೂಡಲೇ ಕುಟುಂಬದವರಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಿಪಿ ಯೋಗೇಶ್ವರ್ ಅವರ ಸಹೋದರ ಸಿ.ಪಿ.ರಾಜೇಶ್ ಅವರು, ತೋಟದ ಮನೆಗೆ ಬಂದು ನೋಡಿದಾಗ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿ ಆಗಿತ್ತು.

Ad Widget

ಬೇರೆ ಬೇರೆ ಕಾರು ಓಡಾಡಿರುವ ಸಾಧ್ಯತೆ ಇದೆ. ಹೀಗಾಗಿ ಮಹದೇವಯ್ಯರನ್ನು ಅಪಹರಣ ಮಾಡಿರುವ ಅನುಮಾನ ಇದೆ. ಅದಕ್ಕೆ ನಾವು ಪೊಲೀಸರಿಗೆ ವಿಚಾರ ತಿಳಿಸಿದ್ದೇವೆ ಎಂದಿದ್ದಾರೆ.

Ad Widget

Ad Widget
Continue Reading

ಬೆಂಗಳೂರು

Bangalore Kambala | ಬೆಂಗಳೂರು ಕಂಬಳ ಅದ್ದೂರಿ ಯಶಸ್ವಿ – ಮುಂದಿನ ಹೆಜ್ಜೆ ದೆಹಲಿಯತ್ತ

Ad Widget

Ad Widget

ಬೆಂಗಳೂರು: ಅದ್ದೂರಿಯಾಗಿ ಸಮಾರೋಪಗೊಂಡ ರಾಜ್ಯ ರಾಜಧಾನಿ ಬೆಂಗಳೂರಿನ ಕಂಬಳದ (Bangalore Kambala) ನಂತರ ರಾಷ್ಟ್ರ ರಾಜಧಾನಿಯಲ್ಲಿ ದೆಹಲಿಯಲ್ಲಿ ಕಂಬಳ ಆಯೋಜನೆ ಮಾಡುವ ಯೋಜನೆ ಕೈಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ಆಯೋಜನೆಗೊಂಡಿದ್ದ ‘ಬೆಂಗಳೂರು ಕಂಬಳ’ ಭಾನುವಾರ ಮಧ್ಯರಾತ್ರಿ ಅದ್ದೂರಿ ಸಮಾರೋಪ ಕಂಡಿತು. ಪ್ರಶಸ್ತಿ ವಿತರಣೆಯಾಗುತ್ತಿದ್ದಂತೆಯೇ ಗೆದ್ದ ಕೋಣಗಳ ತಂಡ ತವರು ಸೇರಲು ತಯಾರಾಗುತ್ತಿದ್ದವು. ಪರಿಚಾರಕರ ತಂಡ, ಬೆಳಗ್ಗೆಯಿಂದಲೇ ಸಾಮಾನು. ಸರಂಜಾಮುಗಳನ್ನು ಲಾರಿಗೆ ತುಂಬಿಸುತ್ತಿದ್ದರು.

Ad Widget

Ad Widget

Ad Widget

ಪಂದ್ಯಾಟದಲ್ಲಿ ಸೋತ ಕೋಣಗಳ ಕೆಲ ತಂಡ ಭಾನುವಾರ ರಾತ್ರಿಯೇ ಊರಿನತ್ತ ಮುಖ ಮಾಡಿದ್ದವು.

Ad Widget

ಬೆಂಗಳೂರಿನಿಂದ ಹೊರಟ ಕೆಲ ಕೋಣಗಳ ತಂಡ ಶಿರಾಡಿ ಘಾಟ್ ಹಾಗೂ ಇನ್ನು ಕೆಲವು ತಂಡ ಚಾರ್ಮಾಡಿ ಘಾಟ್ ಮೂಲಕ ಲಾರಿಯಲ್ಲಿ ತೆರಳಿದವು. ಹಾಸನ ಹಾಗೂ ಸಕಲೇಶಪುರದಲ್ಲಿ ಕೋಣಗಳಿಗೆ ಆಯಾಸ ತಣಿಸಲು ವಾಸ್ತವ್ಯ ವ್ಯವಸ್ಥೆ ಮಾಡಲಾಗಿತ್ತು.

Ad Widget

Ad Widget

ಒಟ್ಟಾರೆಯಾಗಿ ಬೆಂಗಳೂರು ಕಂಬಳದಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ ಮತ್ತು ಮುಂದಿನ ವರ್ಷ ಕಂಬಳ ಆಯೋಜಿಸಿದರೂ ಬರುತ್ತೇವೆ ಎಂದು ಬಹುತೇಕ ಕೋಣಗಳ ಮಾಲೀಕರು ಮತ್ತು ಪರಿಚಾರಕರು ಪ್ರತಿಕ್ರಿಯಿಸಿದರು.

ರಾಜಧಾನಿಯ ಅರಮನೆ ಮೈದಾನದಲ್ಲಿ 40 ಗಂಟೆಗೂ ಅಧಿಕ ಕಾಲ ಸಾಗಿದ ಕಂಬಳವನ್ನು ಒಟ್ಟಾರೆ 6 ಲಕ್ಷಕ್ಕೂ ಅಧಿಕ ಮಂದಿ ಕಣ್ತುಂಬಿಕೊಂಡಿದ್ದಾರೆ ಎನ್ನಲಾಗಿದೆ. 159 ಜತೆ ಕೋಣಗಳು ವಿವಿಧ ವಿಭಾಗಗಳಲ್ಲಿ ಓಟ ನಡೆಸಿದವು.

ಕರಾವಳಿಯ ಸಂಸ್ಕೃತಿ ಅನಾವರಣ ಮಾಡಲು ಬೆಂಗಳೂರಿನಲ್ಲಿ ಸರ್ಕಾರ ಎರಡು ಎಕರೆ ಜಾಗ ನೀಡಬೇಕು ಎಂದು ಬೆಂಗಳೂರು ಕಂಬಳ ಸಂಘಟಕ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ ಮಾಡಿದ್ದಾರೆ. ಮುಂದಿನ ದಿನದಲ್ಲಿ ದೆಹಲಿಯಲ್ಲಿ ಕಂಬಳ ಆಯೋಜಿಸುವ ಚಿಂತನೆ ಇದೆ ಎಂದು ಅಶೋಕ್ ರೈ ತಿಳಿಸಿದ್ದಾರೆ.

Continue Reading

ಬೆಂಗಳೂರು

ಬೆಂಗಳೂರು ಕಂಬಳ ನೋಡಿ ವಾಪಸ್ಸಾಗುತ್ತಿದ್ದಾಗ ಭೀಕರ ಅಪಘಾತ, ಇಬ್ಬರ ಸಾವು !

Ad Widget

Ad Widget

ಬೆಂಗಳೂರಿನಲ್ಲಿ ನಡೆಯುತ್ತಿರುವ ‘ಬೆಂಗಳೂರು ಕಂಬಳ’ವನ್ನು ನೋಡಿಕೊಂಡು ಮಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ರಾತ್ರಿ 1:15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನೆ ರಾಜ್ಯ ಹೆದ್ದಾರಿ 33 ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಭಾನುವಾರ ನಡೆದಿದೆ.

Ad Widget

Ad Widget

Ad Widget

ಮಂಗಳೂರಿನ ಬಜಪೆ ಮೂಲದ ಕಿಶಾನ್ ಶೆಟ್ಟಿ( 20 ) ದಕ್ಷಿಣ ಕನ್ನಡ ಜಿಲ್ಲೆ ಭಟ್ಟರ ತೋಟ ಗ್ರಾಮದ ಫಿಲೀಪ್‌ ನೇರಿ ಲೋಬೋ (32) ಮೃತ ದುರ್ದೈವಿಗಳು. ನಿತೀಶ್ ಭಡಾರಿ, ಪ್ರೀತಿ ಲೋಬೋ, ಹರೀಶ್ ತೀವ್ರವಾಗಿ ಗಾಯಗೊಂಡು ಅದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget

ಕಾರಿನಲ್ಲಿದ್ದವರು ನೆಲಮಂಗಲ ಹಾಗೂ ಕುಣಿಗಲ್ ಮಾರ್ಗವಾಗಿ ಮಂಗಳೂರಿಗೆ ಹೋಗಬೇಕಾಗಿತ್ತು. ಆದರೆ, ದಾರಿತಪ್ಪಿ ತುಮಕೂರಿಗೆ ಹೋಗಿದ್ದಾರೆ. ಬಳಿಕ ಅಲ್ಲಿಂದ ಹೆಬ್ಬೂರು ಮಾರ್ಗವಾಗಿ ಕುಣಿಗಲ್ ನಿಂದ ಮಂಗಳೂರಿಗೆ ತೆರಳುತ್ತಿರಬೇಕಾದರೆ ಇವರು ಸಂಚರಿಸುತ್ತಿದ್ದ ಕಾರಿಗೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

Ad Widget

Ad Widget

ನಿನ್ನೆ ರಾತ್ರಿ ಕಂಬಳ ನೋಡಿದ ಐವರು ಕಾರಿನಲ್ಲಿ ಮಂಗಳೂರಿಗೆ ವಾಪಸಾಗುತ್ತಿದ್ದರು. ಇದೇ ವೇಳೆ ಕಾರು ಹಾಗೂ ಬೋರ್‌ವೆಲ್‌ ಕೊರೆಯುವ ಲಾರಿ ಡಿಕ್ಕಿಯಾಗಿವೆ. ಮಂಗಳೂರಿನ ಬಜಪ್ಪೆ ಗ್ರಾಮದ ವಾಸಿ ಕಿಶಾನ್ ಶೆಟ್ಟಿ(20) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟ ಗ್ರಾಮದ ವಾಸಿ ಫಿಲಿಪ್ ನೇರಿ‌ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಅಪಘಾತ ಸಂಭವಿಸುತ್ತಲೇ ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಲಾರಿ ಹಾಗೂ ಕಾರು ವೇಗವಾಗಿ ಚಲಿಸುತ್ತಿದ್ದ ಕಾರಣ ಕಾರು ನಜ್ಜುಗುಜ್ಜಾಗಿದೆ. ಹಾಗಾಗಿಯೇ, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಣಿಗಲ್‌ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

Trending

error: Content is protected !!