ಅಪರಾಧ
ಪಡೆದ ಹಣ ವಾಪಸ್ಸು ಮಾಡಿಲ್ಲವೆಂದು ಮರಕ್ಕೆ ನೇತು ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿ ಕೊಂದು ಶವವನ್ನು ಚಾರ್ಮಾಡಿ ಘಾಟ್ ನಲ್ಲಿ ಎಸೆದ ಹಂತಕರು – 9 ತಿಂಗಳ ಹಿಂದಿನ ಕೃತ್ಯ ವಿಡಿಯೋ ದಿಂದ ಬಯಲು | ವಿಡಿಯೋ ನೋಡಿ

ಬೆಂಗಳೂರು (ಡಿ.27) : ಯುವಕನೊಬ್ಬ ಪಡೆದ ಹಣ ವಾಪಸ್ಸು ನೀಡಿಲ್ಲವೆಂದು ತಂಡವೊಂದು ಆತನನ್ನು ಅಪಹರಣ ಮಾಡಿ , ಅಮಾನುಷವಾಗಿ ಹಲ್ಲೆ ನಡೆಸಿ ಕೊಂದು ಬಳಿಕ ಶವವನ್ನ ಚಾರ್ಮುಡಿ ಘಾಟ್ನಲ್ಲಿ ಬಿಸಾಡುವ ಮೂಲಕ ಪೈಶಾಚಿಕ ಕೃತ್ಯ ಎಸಗಿದ ಘಟನೆಯನ್ನು 9 ತಿಂಗಳ ಬಳಿಕ ಬೆಂಗಳುರು ಪೊಲೀಸರು ಭೇದಿಸಿದ್ದಾರೆ. ಯವಕನಿಗೆ ಹಂತಕರು ಹೃದಯ ಶೂನ್ಯರಂತೆ ಭೀಭತ್ಸವಾಗಿ ಹಲ್ಲೆ ನಡೆಸುವ ವಿಡಿಯೋ ಲೀಕ್ ಆಗಿತ್ತು. ಆ ಬಳಿಕ ಈ ಭಯಾನಕ ಘಟನೆ ಪೊಲೀಸರ ಗಮನಕ್ಕೆ ಬಂದಿತ್ತು. ವಿಡಿಯೋ ಬಹಿರಂಗವಾಗುತ್ತಲೇ ಸುಮೋಟೊ ಪ್ರಕರಣ ದಾಖಲಿಸಿದ ಪೊಲೀಸರು ಕೃತ್ಯದ ಆಳಕ್ಕೆ ಇಳಿದು ತನಿಖೆ ನಡೆಸಿ ಮುಚ್ಚಿ ಹೋಗಿದ ಕೊಲೆಯನ್ನು ಬೆಳಕಿಗೆ ತಂದಿದ್ದಾರೆ.
ಚಿಕ್ಕಬಳ್ಳಾಪುರ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ) ರಾಜ್ಯ ಅಧ್ಯಕ್ಷ ಎಚ್ ಜಿ ವೆಂಕಟಾಚಲಪತಿ, ಅವರ ಪುತ್ರ ಎ ವಿ ಶರತ್ ಕುಮಾರ್, ಸಹಚರರಾದ ಆರ್ ಶ್ರೀಧರ್, ಕೆ ಧನುಷ್, ಯಲಹಂಕದ ಎಂ ಪಿ ಮಂಜುನಾಥ್ ಬಂಧಿತರು. ಬೆಂಗಳೂರು ನಗರ ಕೋಣನಕುಂಟೆಯ ಹರಿನಗರ ನಿವಾಸಿ ಎಚ್ ಶರತ್ ಹತ್ಯೆಯಾದ ಯುವಕ.
ಮೂಲಗಳ ಪ್ರಕಾರ ಶರತ್ ಎಸ್ಸಿ ಎಸ್ಟಿ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ದರದಲ್ಲಿ ಕಾರು ಕೊಡಿಸುವುದಾಗಿ ಚಿಕ್ಕಬಳ್ಳಾಪುರ ಹಾಗೂ ಯಲಹಂಕದ ಹಲವು ನಿವಾಸಿಗಳಿಂದ ಒಟ್ಟು ಸುಮಾರು 20 ಲಕ್ಷ ಹಣ ಪಡೆದು ವಂಚಿಸಿದ್ದ. ಸುವುದಾಗಿ ಚಿಕ್ಕಬಳ್ಳಾಪುರ ಹಾಗೂ ಯಲಹಂಕ ನಿವಾಸಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದರು. ಕಾರನ್ನು ಕೊಡಿಸದ ಕಾರಣಕ್ಕೆ ಗ್ರಾಹಕರು ಆತನ ವಿರುದ್ಧ ತಿರುಗಿ ಬಿದ್ದು, ವಂಚನೆ ಪ್ರಕರಣ ದಾಖಲಿಸಿದ್ದರು.
ಅಲ್ಲದೇ ಮೋಸ ಹೋದವರು ಹಣ ವಾಪಸ್ ಕೊಡಿಸುವಂತೆ ಚಿಕ್ಕಬಳ್ಳಾಪುರ ಕರ್ನಾಟಕ ರಕ್ಷಣಾ ವೇದಿಕೆ ವೆಂಕಟಾಚಲಪತಿ ಬಳಿ ಕೇಳಿಕೊಂಡಿದ್ದರು. ಹಣ ವಾಪಸ್ಸು ಮಾಡಲು ಸುಫಾರಿ ಪಡೆದ ಆರೋಪಿಗಳು ಹಣ ವಾಪಸ್ಸು ಮಾಡುವಂತೆ ಹಲವು ಸಲ ಶರತ್ ನನ್ನು ಬೆದರಿಸಿದ್ದಾರೆ. ಆದರೂ ಶರತ್ ಹಣ ಹಿಂತಿರುಗಿಸಿರಲಿಲ್ಲ. ಶರತ್ ವರ್ತನೆಯಿಂದ ರೋಸಿ ಹೋಗಿದ್ದ ಆರೋಪಿಗಳು, ಮಾರ್ಚ್ ತಿಂಗಳ ಒಂದು ದಿನ ಶರತ್ ಮೈಸೂರಿನಿಂದ ಬೆಂಗಳೂರಿಗೆ ಬಂದು ಬನಶಂಕರಿ ಬಸ್ ನಿಲ್ದಾಣದ ಬಳಿ ನಡೆದು ಹೋಗ್ತಿದ್ದ ವೇಳೆ ಆತನನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿದ್ರು.
ಬಳಿಕ ನೇರವಾಗಿ ಗೌರಿಬಿದನೂರಿನ ಫಾರ್ಮ್ ಹೌಸ್ ಗೆ ಕರೆದೊಯ್ತು ಅಲ್ಲಿನ ಕೋಣೆಯೊಂದ್ರಲ್ಲಿ ಕೂಡಿ ಹಾಕಿ ನಗ್ನಗೊಳಿಸಿ ಹಲ್ಲೆ ಮಾಡಿದ್ರು. ಅಷ್ಟು ಸಾಲದು ಅನ್ನೊ ರೀತಿ ಮರಕ್ಕೆ ನೇತಾಕಿಯೂ ಮನ ಬಂದಂತೆ ಹಲ್ಲೆ ಮಾಡಿದ್ದಾರೆ. ಈ ಕೃತ್ಯವನ್ನು ಆರೋಪಿಗಳ ಪೈಕಿ ಓರ್ವ ವಿಡಿಯೋ ಕೂಡ ಮಾಡಿಕೊಂಡಿದ್ದ. ಈ ವಿಡಿಯೋವನ್ನು ಇಲ್ಲಿ ಹಾಕಲಾಗಿದ್ದು ದುರ್ಬಲ ಹೃದಯದವರು ನೋಡದಿರುವುದೆ ಉತ್ತಮ. ಇದೇ ವೇಳೆ ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಶರತ್ ಸಾವನ್ನಪ್ಪಿದ್ದು, ಶವವನ್ನ ಮೂಟೆಯಲ್ಲಿ ತುಂಬಿದ್ದ ಹಂತಕರು ಚಾರ್ಮಾಡಿಘಾಟ್(Charmady Ghat) ನಲ್ಲಿ ಬಿಸಾಡಿ ವಾಪಸ್ಸಾಗಿದ್ರು.
ಅಲ್ಲದೆ, ಶರತ್ ಮೊಬೈಲ್ ಕಸಿದುಕೊಂಡಿದ್ದ ಆರೋಪಿಗಳು “ತಾನು ಕೆಲಸದ ಸಲುವಾಗಿ ಹೊರ ರಾಜ್ಯಕ್ಕೆ ಹೋಗುತ್ತಿದ್ದೇನೆ. ಯಾರೂ ನನ್ನ ಹುಡುಕಬೇಡಿ” ಎಂದು ಪೋಷಕರಿಗೆ ಮೆಸೇಜ್ ಮಾಡಿ, ಲಾರಿಯೊಂದರ ಒಳಗೆ ಮೊಬೈಲ್ ಎಸೆದಿದ್ದರು ಎನ್ನಲಾಗಿದೆ.
ಬಳಿಕ ಶರತ್ ಪೋಷಕರಿಗೆ ಮೃತ ಶರತ್ ಫೋನ್ ನಿಂದಲೇ ಕರೆ ಮಾಡಿದ್ದ ಹಂತಕರು, ನನಗೆ ಸಾಲ ಹೆಚ್ಚಾಗಿದೆ. ನಾನು ಊರು ಬಿಟ್ಟು ಹೋಗ್ತಿದ್ದೇನೆ. ಸೆಟೆಲ್ ಆದ್ಮೇಲೆ ಬರ್ತೇನೆ ಅಂತೇಳಿ ಫೋನ್ ಸ್ವಿಚ್ ಆಫ್ ಮಾಡಿ ಲಾರಿ ಮೇಲೆ ಎಸೆದಿದ್ರು.
ಮನೆಯವರು ಮಗ ದುಡಿಯಲು ಹೋಗಿದ್ದಾನೆ ಅಂದುಕೊಂಡಿದ್ದರು. ಇತ್ತ ಆರೋಪಿಗಳು ಯಾರಿಗೂ ಅನುಮಾನ ಬರದಂತೆ 9 ತಿಂಗಳಿಂದ ಆರಾಮಾಗಿ ಜೀವನ ಸಾಗಿಸ್ತಿದ್ರು. ಆದ್ರೆ, ಅವ್ರೇ ಮಾಡಿಕೊಂಡಿದ್ದ ಹಲ್ಲೆಯ ದೃಶ್ಯಗಳು ದಿನಕಳೆದಂತೆ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪಿಯೊಬ್ಬನಿಂದ ಲೀಕ್ ಆಗಿತ್ತು. ಅದು ಒಬ್ಬರಿಂದ ಒಬ್ಬರ ಮೊಬೈಲ್ ಗೆ ಹರಿದು ಕೊನೆಗೆ ಪೊಲೀಸ್ರ ಕೈ ಸೇರಿತ್ತು.
ಈ ವಿಡಿಯೋ(Video) ಸೋಷಿಯಲ್ಮೀಡಿಯಾ(Social media)ಗಳಲ್ಲಿ ಹರಿದಾಡುತ್ತ ಕೊನೆಗೆ ಕಬ್ಬನ್ ಪಾರ್ಕ್(Cubbon park) ಸಬ್ ಡಿವಿಷನ್ ಎಸಿಪಿಗೂ ತಲುಪಿತ್ತು. ವಿಡಿಯೋ ನೋಡಿ ಶಾಕ್ ಆದ ಪೊಲೀಸ್ರು ಏನೋ ಆಗಿದೆ ಅನ್ನೋ ಅನುಮಾನದಲ್ಲಿ ಸುಮೋಟೊ ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.ಆಗ ಯುವಕನನ್ನು ಅಪಹರಿಸಿ ಆತನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವುದು ಹಾಗೂ ಶವವನ್ನು ನಿರ್ಜನ ಪ್ರದೇಶದಲ್ಲಿ ಬಿಸಾಡಿರುವುದು ಪತ್ತೆಯಾಗಿದೆ. ಹಂತಕರನ್ನ ಬಂಧಿಸಿದ ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಪರಾಧ
Dowry Harasment: ʼಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಡೆತ್ ನೋಟ್ ಬರೆದಿಟ್ಟು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಯುವ ವೈದ್ಯೆ ಆತ್ಮಹತ್ಯೆ – ಅಷ್ಟಕ್ಕೂ ವರನ ಮನೆಯವರು ಇಟ್ಟ ಡಿಮ್ಯಾಂಡ್ ಎಷ್ಟು ಗೊತ್ತೆ ?

ತಿರುವನಂತಪುರಂ : ಕಳೆದ ವರ್ಷ ಕೇರಳದಲ್ಲಿ ದೊಡ್ಡ ಅಭಿಯಾನಕ್ಕೆ ಕಾರಣವಾಗಿದ್ದ ವರದಕ್ಷಿಣೆ ಕಿರುಕುಳ ಮತ್ತೆ ಆ ರಾಜ್ಯದಲ್ಲಿ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣವಾಗಿರುವುದು ಎರಡು ದಿನಗಳ ಹಿಂದೆ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಕೇರಳದ (Kerala) ಯುವ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು. ಮೃತಳನ್ನು ಶಹನಾ (Shahana) (26) ಎಂದು ಗುರುತಿಸಲಾಗಿದೆ̤ ಈಕೆಯ ಆತ್ಮಹತ್ಯೆಗೆ ಪ್ರಚೊಧನೆ ನೀಡಿದ ಆರೋಪದಡಿ ಆಕೆಯ ಬಾಯ್ ಫ್ರೆಂಡ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಹಾನಾ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪಿಜಿ ವಿದ್ಯಾರ್ಥಿನಿ. ಈಕೆಯ ಮೃತ ದೇಹ ಮಂಗಳವಾರ ಬೆಳಗ್ಗೆ ಕಾಲೇಜ್ ಬಳಿಯ ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ಪತ್ತೆಯಾಗಿದೆ. ಡಾ. ಸಹನಾ, ತಮ್ಮ ತಾಯಿ ಮತ್ತು ಇಬ್ಬರು ಒಡಹುಟ್ಟಿದವರ ಜತೆ ವಾಸವಿದ್ದರು. ಗಲ್ಫ್ನಲ್ಲಿ ಕೆಲಸ ಮಾಡುತ್ತಿದ್ದ ಅವರ ತಂದೆ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಅವರು ಡಾ. ಇಎ ರುವಾಯಿಸ್ನನ್ನು ಪ್ರೀತಿಸುತ್ತಿದ್ದರು. ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು.
ಬಳಿಕ ಆ ಯುವಕನ ಕುಟುಂಬ ವರದಕ್ಷಿಣೆಗೆ ಡಿಮ್ಯಾಂಡ್ ಮಾಡಿದ ಹಿನ್ನಲೆಯಲ್ಲಿ ಅ ಮದುವೆ ಮುರಿದು ಬಿದ್ದಿತ್ತು. ಇದರಿಂದ ಮಾನಸಿಕ ಖಿನ್ನತೆ ಅನುಭವಿಸಿದ ಅಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆಕೆಯ ಸಂಬಂಧಿಕರು ಆರೋಪಿಸಿದ್ದಾರೆ. ಈ ವಿಚಾರ ಕೇರಳದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ (Veena George) ಅವರು ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೂಚಿಸಿದ್ದಾರೆ.
ತರುವಾಯ, ವೈದ್ಯಕೀಯ ಕಾಲೇಜು ಪೊಲೀಸರು ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಶಹಾನಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅದೇ ಸಂಸ್ಥೆಯಲ್ಲಿ ಪಿಜಿ ವಿದ್ಯಾರ್ಥಿಯಾಗಿರುವ ಯುವಕ ಪ್ರಕರಣದ ಆರೋಪಿ. ಈತ ಮೂಳೆ ಚಿಕಿತ್ಸೆಯಲ್ಲಿ ಪಿಜಿ ಮಾಡುತ್ತಿರುವ ವೈದ್ಯ.ಈತನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ವರದಕ್ಷಿಣೆಗಾಗಿ ಕಿರುಕುಳ ಪ್ರಕರಣ ದಾಖಲಾಗಿದೆ.
ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಾವು ದಾಖಲಿಸಿಕೊಂಡಿರುವ ವಿವಿಧ ಹೇಳಿಕೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಾಗಿದೆ. ಆ ಬಳಿಕವಷ್ಟೇ ಯುವಕನ ಬಂಧನ ಸೇರಿದಂತೆ ಮುಂದಿನ ಪ್ರಕ್ರಿಯೆಗಳ ಕುರಿತಾಗಿ ನಿರ್ಧರಿಸಲಾಗುವುದು” ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಆರಂಭದಲ್ಲಿ ಅಸಹಜ ಸಾವು ಎಂದು ಶಹನಾ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಶಹಾನಾ ಅವರ ಕುಟುಂಬಸ್ಥರು ದೂರು ನೀಡಿದ ಬಳಿಕ ಅದರಂತೆ ಐಪಿಸಿ ಸೆಕ್ಷನ್ಗಳನ್ನು ಬದಲಾಯಿಸಿದರು.

ವರದಕ್ಷಿಣೆಯಾಗಿ 150 ಪವನ್ ಚಿನ್ನ, ಐಷಾರಾಮಿ BMW ಕಾರು ಮತ್ತು 15 ಎಕ್ರೆ ಜಮೀನು ನೀಡುವಂತೆ ಆರೋಪಿ ಕುಟುಂಬ ಬೇಡಿಕೆಯಿಟ್ಟಿತ್ತು. ಆದರೆ, ಶಹನಾಳ ಮನೆಯವರಿಗೆ ಅಷ್ಟು ದೊಡ್ಡ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿಲ್ಲ . ಈ ಬಳಿಕ ವೈದ್ಯಕೀಯ ಪಿಜಿ ವೈದ್ಯರ ಸಂಘದ ಪ್ರತಿನಿಧಿಯೂ ಆಗಿದ್ದ ಆರೋಪಿ ವೈದ್ಯ ಶಹಾನಾ ಜೊತೆಗಿನ ಸಂಬಂಧವನ್ನು ಕಡಿತಗೊಳಿಸಿದ್ದಾನೆ.
ಪೊಲೀಸರು ಮೃತಳು ವಾಸ್ತವ್ಯವಿದ್ದ ಕೊಠಡಿಯಿಂದ ಡೆತ್ ನೋಟ್ ಅನ್ನು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ “ಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಎಂದು ಬರೆದು ಕೊಂಡಿದ್ದಾಳೆ . ತಾನೇ ಇಷ್ಟಪಟ್ಟು ಆಯ್ಕೆ ಮಾಡಿಕೊಂಡ ಗೆಳೆಯನ ಜತೆ ಮದುವೆಗೆ ಸಿದ್ಧತೆ ನಡೆಸಿದ್ದ ಡಾ. ಸಹನಾಗೆ ಇದು ಭಾರಿ ಆಘಾತ ಉಂಟುಮಾಡಿತ್ತು. ಇದರಿಂದ ತೀವ್ರ ನೊಂದಿದ್ದ ಸಹನಾ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ಮತ್ತು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ
ಅಪರಾಧ
ವಿಟ್ಲ : 80 ಪ್ರಕರಣಗಳ ಸರದಾರ ʼಇತ್ತೆ ಬರ್ಪೆ ಅಬೂಬ್ಬಕರ್ʼ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು – ಅಷ್ಟಕ್ಕೂ ಈತ ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ? ಇತ್ತೆ ಬರ್ಪೆ ಹೆಸರಿನ ಹಿಂದಿದೆ ಇಂಟ್ರೆಸ್ಟಿಂಗ್ ಕಹಾನಿ

ಪುತ್ತೂರು: ಕೆದಿಲದಲ್ಲಿ ನವೆಂಬರ್ 22 ರಂದು ನಡೆದ ಸರಣಿ ಕಳ್ಳತನದ ಆರೋಪಿಯನ್ನು ಸ್ಥಳೀಯರು ಡಿ 4 ರಂದು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು , ಇಂದು(ಮಂಗಳವಾರ) ಬಂಧಿಸಿರುವ ಬಗ್ಗೆ ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.ಮೂಲತಃ ವಿಟ್ಲ ಸಮೀಪದ ಕಡಂಬು ನಿವಾಸಿ ಹಾಲಿ ಚಿಕ್ಕಮಂಗಳೂರು ಉಪ್ಪಳ್ಳಿ ನಿವಾಸಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬ್ಬಕರ್ ಬಂಧಿತ. ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಡಿ.19ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಕೆದಿಲದ ರಮ್ಲ ಕುಂಞಿ ಮನೆಯಲ್ಲಿ ಕಳ್ಳತನಗೈದಿದ್ದ ಆರೋಪಿ ಕೋಡಿ ನಿವಾಸಿ ಉಮ್ಮರ್ ಫಾರೂಕ್ ಅವರ ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳವುಗೈದಿದ್ದ. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ ಸಂಖ್ಯೆ 112 ಮತ್ತು 113ರಂತೆ ಪ್ರಕರಣ ದಾಖಲಾಗಿತ್ತು.
ಸಿಕ್ಕಿಬಿದ್ದದ್ದು ಹೀಗೆ
ಈ ಪೈಕಿ ಆರೋಪಿಯು ಕಳವು ಗೈದ ದ್ವಿಚಕ್ರವಾಹನ ಗುಡ್ಡ ಪ್ರದೇಶದಲ್ಲಿ ಅಡಗಿಸಿಟ್ಟಿದ್ದ. ಅದನ್ನು ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಸೋಮವಾರ ಅಬೂಬ್ಬಕರ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಖರೀದಿಸಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರಿಗೆ ಅನುಮಾನ ಉಂಟಾಗಿದೆ. ಅವರು ಆತನ ಬೆನ್ನ ಹಿಂದೆ ಬಿದ್ದಿದ್ದಾರೆ ಎನ್ನಲಾಗಿದೆ.
ಈತ ಅಲ್ಲಿಂದ ತಾನು ಬೈಕ್ ಅಡಗಿಸಿಟ್ಟಿದ್ದ ಗುಡ್ಡಕ್ಕೆ ತೆರಳಿದ್ದು ಈ ವೇಳೆ ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದು ವಿಚಾರಿಸಿದ್ದಾರೆ. ಈವೇಳೆ ಆತ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಬಳಿಕ ಸ್ಥಳೀಯರು ಆತನನ್ನು ಠಾಣೆಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.
ಒಂದೇ ದಿನ ಎರಡು ಕಳ್ಳತನ
ರಮ್ಲ ಕುಂಞಿ ಬೆಂಗಳೂರು ಕಂಬಳಕ್ಕೆ ವ್ಯಾಪಾರಕ್ಕೆಂದು ನ.22ರಂದು ರಾತ್ರಿ 8 ಗಂಟೆಗೆ ಮನೆಗೆ ಬೀಗ ಹಾಕಿ ತೆರಳಿದ್ದು, ಕೆದಿಲ ಮಿತ್ತಪಡ್ಪು ನಿವಾಸಿ ಹಮೀದ್ ನ.23 ರಂದು ಬೆಳಗ್ಗೆ ಹೋಗಿ ನೋಡುವ ಸಂದರ್ಭದಲ್ಲಿ ಬೀಗ ಮುರಿದಿದ್ದು ಪತ್ತೆಯಾಗಿತ್ತು, ಕಪಾಟಿನಲ್ಲಿದ್ದ ಸುಮಾರು ೨ಲಕ್ಷ ಕಳವಾಗಿತ್ತು. ಇದರ ಜತೆಗೆ ಕೋಡಿ ನಿವಾಸಿ ಉಮ್ಮರ್ ಫಾರೂಕ್ ಅವರಿಗೆ ಸೇರಿದ ದ್ವಿಚಕ್ರವಾಹನ ಮನೆಯ ಅಂಗಳದಿಂದ ಕಳವಾಗಿತ್ತು. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು.
ಇತ್ತೆ ಬರ್ಪೆ ಹೆಸರು ಬಂದದ್ದು ಹೇಗೆ :
ಟ್ಲದಲ್ಲಿ ಅಟೋ ರಿಕ್ಷಾ ಹೊಂದಿದ್ದ ಅಬೂಬಕ್ಕರ್ ರಿಕ್ಷಾ ಹಿಂಭಾಗದಲ್ಲಿ ಇತ್ತೆ ಬರ್ಪೆ ಎಂದು ಬರೆದಿಕೊಂಡಿದ್ದರು. ಇದರಿಂದ ಆ ಹೆಸರಿನಲ್ಲೇ ಜನರಿಗೆ ಚಿರಪರಿಚಿತರಾಗಿದ್ದರು. ಮಂಗಳೂರು, ಬಂಟ್ವಾಳ, ಪುತ್ತೂರು, ಮೂಡುಬಿದಿರೆ, ಕಾರ್ಕಳ, ಉಡುಪಿ, ಸುರತ್ಕಲ್, ಚಿಕ್ಕಮಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಸುಮಾರು 80 ಕ್ಕೂ ಹೆಚ್ಚು ಕಳ್ಳತನದ ಪ್ರಕರಣಗಳು ದಾಖಲಾಗಿತ್ತು.
ಅಪರಾಧ
Ballari Murder case ಸರಿಯಾಗಿ ಆರೈಕೆ ಮಾಡ್ತಿಲ್ಲ ಎಂದು ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಪತಿ: ಪೊಲೀಸರಿಗೆ ಆರೋಪಿ ಶರಣು
ಹೆಂಡತಿ ಸರಿಯಾಗಿ ಆರೈಕೆ ಮಾಡುತ್ತಿಲ್ಲವೆಂದು ಪತಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಬಳ್ಳಾರಿ, (ಡಿಸೆಂಬರ್ 04): ಸರಿಯಾಗಿ ಆರೈಕೆ ಮಾಡುತ್ತಿಲ್ಲ ಎಂದು ಕೋಪಗೊಂಡ ಪತಿರಾಯನೊಬ್ಬ(Husband) ಹೆಂಡತಿಯನ್ನು(Wife) ಕೊಚ್ಚಿ ಕೊಂದಿರುವ ಘಟನೆ ಬಳ್ಳಾರಿ(Bellary) ಜಿಲ್ಲೆಯ ಸಿರುಗುಪ್ಪದ ಬಲಕುಂದಿ ಗ್ರಾಮದಲ್ಲಿ ನಡೆದಿದೆ. ಮೈಬುನಾ ಬಿ. (35) ಕೊಲೆಯಾದ ಮಹಿಳೆ.
ಡಯಾಲಿಸಿಸ್ ರೋಗಿಯಾಗಿರುವ ಆರೋಪಿ ರಸೂಲ್ ಸಾಬ್, ಪತ್ನಿ ಸರಿಯಾಗಿ ಕೇರ್ ಮಾಡುತ್ತಿಲ್ಲ ಎಂದು ಮಲಗಿದ್ದ ಮೈಬುನಾಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಆರೋಪಿ ರಸೂಲ್ ಸಾಬ್ ತಾನೇ ಪೊಲೀಸರ ಮುಂದೆ ಶರಣಾಗಿದ್ದಾನೆ.
ಈ ಬಗ್ಗೆ ಮಾತನಾಡಿರುವ ರಸೂಲ್ ಸಾಬ್ ನನಗೆ ಡಯಾಲಿಸಿಸ್ ಕಾಯಲೆ ಇದೆ. ಆದ್ರೆ, ಪತ್ನಿ ಸರಿಯಾಗಿ ಆರೈಕೆ ಮಾಡುತ್ತಿಲ್ಲ. ಹೀಗಾಗಿ ನಾನು ಬೇಗ ಸಾಯುತ್ತೇನೆ. ನನಗಿಂತ ಮೊದಲು ಪತ್ನಿ ಸಾಯಬೇಕು ಎಂದು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ಸತ್ಯ ಒಪ್ಪಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ತೆಕ್ಕಲಕೋಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
-
ದಕ್ಷಿಣ ಕನ್ನಡ2 days ago
ಪುತ್ತೂರು : ಕುಡಿದು ಟೈಟಾಗಿದ್ದ ಚಾಲಕ ವಿವೇಕಾನಂದ ವಿದ್ಯಾ ಸಂಸ್ಥೆಯ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ – ಮಾಜಿ ಶಾಸಕಿಯ ಪುತ್ರನ ಕಾರು ಸೇರಿ 3 ವಾಹನಕ್ಕೆ ಢಿಕ್ಕಿ – ಪಾನಮತ್ತ ಚಲಾಯಿಸುತ್ತಿದ್ದ ಬಸ್ಸಿನಲ್ಲಿದ್ದರು ವಿದ್ಯಾರ್ಥಿಗಳು..̆
-
ದಕ್ಷಿಣ ಕನ್ನಡ2 days ago
ವಿಟ್ಲ : ಅಡಿಕೆ ಮರ ಮುರಿದು ಬಿದ್ದು ಮಹಿಳೆ ಸಾವು
-
ಸುಳ್ಯ1 day ago
College student rape case ಪುತ್ತೂರು : ಕಾಲೇಜ್ ವಿದ್ಯಾರ್ಥಿನಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ಬಂಧಿತ ಆರೊಪಿಗೆ 2 ತಿಂಗಳ ಬಳಿಕ ಜಾಮೀನು
-
ರಾಜಕೀಯ2 days ago
CM Siddaramaiah: ಐಸಿಸ್ ಉಗ್ರ ಸಂಘಟನೆಯ ಬೆಂಬಲಿಗನ ಜತೆ ಹುಬ್ಬಳಿಯಲ್ಲಿ ವೇದಿಕೆ ಹಂಚಿಕೊಂಡ ಸಿ. ಎಂ.ಸಿದ್ದರಾಮಯ್ಯ : ಚಿತ್ರ ಸಹಿತ ಯತ್ನಾಳ್ ಗಂಭೀರ ಆರೋಪ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
-
ಉದ್ಯೋಗ1 day ago
Job Alert: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ – ಸದ್ಯದಲ್ಲೆ ಸಾರಿಗೆ ಇಲಾಖೆಗೆ 9 ಸಾವಿರ ಸಿಬ್ಬಂದಿಗಳ ನೇಮಕ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
-
Uncategorized2 days ago
loan write off ದೇಶದ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಕಳೆದ 5 ವರ್ಷಗಳಲ್ಲಿ 10.57 ಲಕ್ಷ ಕೋಟಿ ರೂ. ರೈಟ್-ಆಫ್….
-
ಪುತ್ತೂರು1 day ago
Puthila Parivara | ಪುತ್ತೂರು ನಗರಸಭೆ 2 ವಾರ್ಡ್ ಮರುಮತದಾನ – ಬಿಜೆಪಿ ಕಾಂಗ್ರೇಸ್ ನಡುವೆ ಕಾರ್ಯಕರ್ತರ ಒತ್ತಾಯದಂತೆ ಪುತ್ತಿಲ ಪರಿವಾರ ಮತ್ತೊಂದು ಚುನಾವಣೆ ಎದುರಿಸುವುದು ಬಹುತೇಕ ಫಿಕ್ಸ್ : ವಿಧಾನಸಭಾ ಚುನಾವಣೆಯಲ್ಲಿ ಈ ವಾರ್ಡ್ ಗಳಲ್ಲಿ ಯಾರಿಗೆ ಎಷ್ಟು ಮತದಾನವಾಗಿತ್ತು ಗೊತ್ತೇ.?
-
ಜೀವನಶೈಲಿ1 day ago
2024 Maruti swift Car: ಮಾರುತಿ ಸುಜುಕಿ ಕಂಪನಿಯಿಂದ ಸಿಹಿಸುದ್ದಿ: ಹೊಸ ಎಂಜಿನ್ ಮಹಿಮೆ – 40 ಕಿ. ಮೀ ಮೈಲೇಜ್ ಕೊಡುವ ಹೊಸ ಸ್ವಿಫ್ಟ್ ಬಿಡುಗಡೆ ಕ್ಷಣಗಣನೆ – ಬೆಲೆ ಎಷ್ಟಿದೆ ಗೊತ್ತೆ?