Connect with us

ಮಂಗಳೂರು

Siddaramaiah | ನಳಿನ್ ಕುಮಾರ್ ಬಿಜೆಪಿಯ ಜೋಕರ್ – ನನ್ನ ಜೈಲಿಗೆ ಹಾಕೋದಿದ್ದರೂ ಕೋರ್ಟ್ ಇವರಲ್ಲ – ಮಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ

Ad Widget

Ad Widget

ಹಿರಿಯ ಕಾಂಗ್ರೆಸ್ ನಾಯಕ, ಬಿಲ್ಲವ ಮುಖಂಡ ಜನಾರ್ಧನ ಪೂಜಾರಿಯವರ ಕ್ರಾಂತಿಕಾರಿ ನಡೆಯಾದ ವಿಧವೆ ಅರ್ಚಕಿಯಿಂದ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಎದುರು ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಾರಾಯಣ ಗುರು ಮೂರ್ತಿಗೆ ಪೂಜೆ ನಡೆಯಿತು.

Ad Widget

Ad Widget

Ad Widget

Ad Widget

ಸಿದ್ದರಾಮಯ್ಯ ಉಳ್ಳಾಲದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ ಬಂದಿದ್ದು ಆ ಸಂದರ್ಭ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ತೆರಳಿ ದೇವರಿಗೆ ವಿಶೇಷ ಸಲ್ಲಿಸಿದರು. ಆ ಸಂದರ್ಭ ಅರ್ಚಕರು ಮುಂದೆ ಉತ್ತಮ ಆಡಳಿತ ನೀಡಿ ಎಂದು ಆಶೀರ್ವಾದಿಸಿದರು.

Ad Widget

Ad Widget

Ad Widget

ನಂತರ ಮಾಧ್ಯಮದೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಳಿನ್ ಕುಮಾರ್ ನನ್ನು ಬಿಜೆಪಿಯ ಜೋಕರ್ ಎಂದರು. ಅವರ ಮಾತಿಗೆ ನನ್ನ ಅಭಿಪ್ರಾಯವಿಲ್ಲ ಎಂದ ಸಿದ್ದು ನಳಿನ್ ವಿದುಷಕರು ಎಂದರು. ತನ್ನನ್ನು ಜೈಲಿಗೆ ಹಾಕಲಾಗುವುದು ಎನ್ನುವ ಕಟೀಲ್ ಮಾತಿಗೆ , ಜೈಲಿಗೆ ಹಾಕುವುದು ಕೋರ್ಟ್, ಕಟೀಲ್ ಹಾಕಲು ಆಗ್ತದಾ ಇದೊಂದು ಬಾಲಿಶ ಹೇಳಿಕೆ, ಇದಕ್ಕೆ ನಾನು ಕಟೀಲ್ ಹೇಳಿಕೆಗೆ ಉತ್ತರಿಸುವುದಿಲ್ಲ ಎಂದರು.

Ad Widget
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ವಿಧಾನಸಭೆ ಕ್ಷೇತ್ರದ ಹರೇಕಳದಲ್ಲಿ ಇಂದು ಆಯೋಜಿಸಿದ್ದ ಜನ ಜಾಗೃತಿ ಸಮಾವೇಶ
ಸಿದ್ದರಾಮಯ್ಯ ಜೈಲಿಗೆ ಕಟೀಲ್ ಹೇಳಿಕೆ

ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೆದುರು ಮಾತನಾಡುವ ಧೈರ್ಯ ಇಲ್ಲ, ಬೇರೆಯವರ ಧಮ್, ತಾಕತ್ ಪ್ರಶ್ನಿಸುವ ಬೊಮ್ಮಾಯಿಯೇ ಸ್ವತಃ ಮೋದಿಯವರನ್ನು ಕಂಡ್ರೆ ಹೆದರುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದೆ. ಅದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ.ಪುಕ್ಕಲು ಸ್ವಭಾವದವರು, ಧೈರ್ಯ ಇಲ್ಲದವರು ಎನ್ನುವ ಅರ್ಥದಲ್ಲಿ ಹಳ್ಳಿ ಭಾಷೆಯಲ್ಲಿ ನಾಯಿ ಮರಿ ಎಂದಿದ್ದೇ ಹೊರತು ಮುಖ್ಯಮಂತ್ರಿಗಳನ್ನು ವ್ಯಕ್ತಿಗತವಾಗಿ ನಿಂದಿಸುವ ದುರುದ್ದೇಶ ಖಂಡಿತ ಇರಲಿಲ್ಲ.

Ad Widget

Ad Widget
ನಳಿನ ಕುಮಾರ್ ಒಬ್ಬ ಜೋಕರ್ – ಸಿದ್ದರಾಮಯ್ಯ

ಪ್ರಾಣಿ-ಪಕ್ಷಿ-ಹೂ-ಹಣ್ಣುಗಳನ್ನು ಅವುಗಳ ಸ್ವಭಾವಗಳ ಸಾಮ್ಯತೆಗೆ ಅನುಗುಣವಾಗಿ ಮನುಷ್ಯರಿಗೆ ಹೋಲಿಸುವುದು ಜನಪದ ಸಂಸ್ಕೃತಿ.ಯಾವ ಪ್ರಾಣಿ-ಪಕ್ಷಿಯೂ ಕೀಳೂ ಅಲ್ಲ, ಮೇಲು ಅಲ್ಲ.ಹುಲಿ ಮನುಷ್ಯರನ್ನು ಕೊಂದು ತಿನ್ನುವ ಪ್ರಾಣಿ. ಬಿಜೆಪಿಯವರೇ ಯಡಿಯೂರಪ್ಪನವರನ್ನು ರಾಜಾ ಹುಲಿ ಎಂದು ಬಣ್ಣಿಸುತ್ತಾರೆ. ಅದನ್ನೂ ಅವಮಾನ ಎಂದು ತಿಳಿದುಕೊಳ್ಳಬಹುದಲ್ಲಾ ? ಟಿವಿ ಚಾನೆಲ್‌ನವರು ಪ್ರತಿದಿನ ನನ್ನನ್ನು ‘ಟಗರು’ ‘ಟಗರು’ ಎಂದು ಹಾಡು ಕಟ್ಟಿ ತೋರಿಸುತ್ತಾರೆ.ಟಗರು ಗುಮ್ಮುತ್ತೆ, ನಾನು ಯಾರಿಗೆ ಗುಮ್ಮಿದ್ದೇನೆ? ನಾನೂ ಅವಮಾನ ಮಾಡಿದ್ದಾರೆ ಎಂದು ಕೋಪಮಾಡಿಕೊಳ್ಳಬಹುದಲ್ಲಾ?

ಸಾವಿರಾರು ಮಂದಿ ಹತ್ಯೆಗೀಡಾದ ಗುಜರಾತ್ ಗಲಭೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ‘ “ಕಾರಿಗೆ ಅಡ್ಡಬಂದು ನಾಯಿಮರಿ ಸತ್ತರೆ ಏನು ಮಾಡೋಣ” ಎಂದು ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಹೇಳಿದ್ದರು. ಇದೂ ವಿವಾದವಾಗಿತ್ತಲ್ಲವೇ? ನಾಯಿ ಸ್ವಾಮಿ ನಿಷ್ಠೆಗೆ ಹೆಸರಾದರೆ, ನಾಯಿ‌ಮರಿ ಪುಕ್ಕಲು ಸ್ವಭಾವಕ್ಕೆ ಕುಖ್ಯಾತಿ‌ಪಡೆದಿದೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ? ನಾಯಿ ಮರಿ, ಬೆಕ್ಕಿನ ಮರಿಗಳಿಗೆ ಹೋಲಿಸಬೇಕಲ್ಲಾ?

ನಮಗೆ ನಾಡಿನ ಹಿತ ಮುಖ್ಯ. 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಶಿಫಾರಸು ಮಾಡಿದ್ದ 5,495 ಕೋಟಿ ವಿಶೇಷ ಅನುದಾನವನ್ನು ನೀಡಲು ನಿರ್ಮಲಾ ಸೀತಾರಾಮನ್ ಅವರು ನಿರಾಕರಿಸಿದರು, ಅವರೊಂದಿಗೆ ಮಾತನಾಡಿ ಈ ಅನುದಾನ ತರಲು ಬೊಮ್ಮಾಯಿ ಅವರಿಂದ ಸಾಧ್ಯವಾಗಿಲ್ಲ. ಇದರಿಂದ ನಷ್ಟವಾಗಿದ್ದು ರಾಜ್ಯಕ್ಕಲ್ಲವೇ? ರಾಜ್ಯಕ್ಕೆ ಸಿಗಬೇಕಾದ ಅನುದಾನ ಸರಿಯಾದ ಪ್ರಮಾಣದಲ್ಲಿ ಸಿಕ್ಕಿಲ್ಲ, ಪೂರ್ಣಪ್ರಮಾಣದ ಜಿಎಸ್‌ಟಿ ಪರಿಹಾರ ಬಂದಿಲ್ಲ, ಬರ, ನೆರೆ ಪರಿಹಾರದ ಹಣ ಬಂದಿಲ್ಲ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರೋರು ಇದನ್ನೆಲ್ಲ ಗಟ್ಟಿ ಧ್ವನಿಯಲ್ಲಿ ಕೇಳದೆ ಹೆದರಿ ಸುಮ್ಮನಿದ್ರೆ ನಾಡಿಗೆ ಅನ್ಯಾಯವಾಗಲ್ವ?

ಬಸವರಾಜ ಬೊಮ್ಮಾಯಿ ಅವರು ನಮ್ಮ ಒಡನಾಟದವರು, ಅವರೇನು ಬೇಸರ ಮಾಡಿಕೊಂಡಿರಲಾರರು. ಸುತ್ತಲಿನ ವಂದಿ-ಮಾಗದರು ಅವರನ್ನು ಓಲೈಸಲಿಕ್ಕಾಗಿ ಖಂಡಿಸಿ, ಮಂಡಿಸಿ ವಿವಾದ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಬೊಮ್ಮಾಯಿಯವರು ಜಾಗರೂಕರಾಗಿರುವುದು ಒಳ್ಳೆಯದು.

ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಶ್ರೀ ಪ್ರಣವಾನಂದ ಸ್ವಾಮಿಯವರು ಮಂಗಳೂರಿನಲ್ಲಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಈಡಿಗ ಬಿಲ್ಲವ ನಾಮಧಾರಿ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಮನವಿ ಮಾಡಿದರು. ಶ್ರೀಗಳ ಮನವಿ ಸ್ವೀಕರಿಸಿದ ಬಳಿಕ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಮಂಗಳೂರಿನಲ್ಲಿ ಇಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಜೊತೆ ಪಕ್ಷ ಸಂಘಟನೆ, ಚುನಾವಣಾ ತಯಾರಿ ಮುಂತಾದ ಪ್ರಮುಖ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದೆ. ‌ ದಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ , ಮಾಜಿ ಸಚಿವರಾದ ರಮಾನಾಥ ರೈ ,ಅಭಯಚಂದ್ರ ಜೈನ್, ವಿನಯಕುಮಾರ್ ಸೊರಕೆ, ಯು.ಟಿ. ಖಾದರ್ , ಶಕುಂತಲ ಶೆಟ್ಟಿ , ಮಿಥುನ್ ರೈ ಇನ್ನಿತರ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.

Click to comment

Leave a Reply

ಮಂಗಳೂರು

Interfaith Marriage ಮಂಗಳೂರು :  ಭಿನ್ನಕೋಮಿನ ಜೋಡಿ ವಿವಾಹ?

Ad Widget

Ad Widget

ಸುರತ್ಕಲ್, ಡಿ. 7: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಭಿನ್ನ ಕೋಮಿನ ಜೋಡಿಯೊಂದು ನಾಪತ್ತೆಯಾಗಿದ್ದು, ಅವರಿಬ್ಬರು ವಿವಾಹವಾಗಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಈ ಎರಡು ಕುಟುಮಬದ ಮೂಲಗಳಿಂದ ಈ ಬಗ್ಗೆ ಯಾವುದೇ ಖಚಿತತೆ ದೊರಕಿಲ್ಲ

Ad Widget

Ad Widget

Ad Widget

Ad Widget

ಸುರತ್ಕಲ್‌   7ನೇ ಬ್ಲಾಕ್ ಕಾಟಿಪಳ್ಳದ ಯುವಕ ಪ್ರಶಾಂತ್ ಭಂಡಾರಿ (31) ಹಾಗೂ 3ನೇ ಬ್ಲಾಕ್ ಆಶ್ರಯ ಕಾಲನಿಯನಿವಾಸಿ ಆಯೇಷಾ (19) ಡಿ. 1ರಂದು ನಾಪತ್ತೆಯಾಗಿದ್ದರು ಎನ್ನಲಾಗಿದೆ. , ಇದೀಗ ಅವರು ವಿವಾಹವಾಗಿದ್ದಾರೆ ಎನ್ನುವ ಫೋಟೋವನ್ನು  ಅವರಿಬ್ಬರ ಆಪ್ತರು  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.

Ad Widget

Ad Widget

Ad Widget

 ಆಯೇಷಾ ತನ್ನ ಹೆಸರನ್ನು ಅಕ್ಷತಾ ಎಂದು ಬದಲಾಯಿಸಿಕೊಂಡಿದ್ದಾರೆ ಎಂದು ಕೂಡ ವೈರಲ್‌ ಮೆಸೇಜ್‌ ನಲ್ಲಿ ಹೇಳಲಾಗಿದೆ. ಯುವತಿ ನಾಪತ್ತೆಯಾದ ಬಗ್ಗೆ   ಆಯೇಷಾ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Ad Widget

ಯುವತಿ ಕುಟುಂಬ ಮೂಲತಃ ಕಾರವಾರದ ಮುಂಡಗೋಡದವರಾಗಿದ್ದು, ಈಕೆಯ ತಂದೆ ಸ್ಥಳೀಯವಾಗಿ ಉದ್ಯೋಗದಲ್ಲಿದ್ದಾರೆ. ಅವರ ಪತ್ತೆಗಾಗಿ ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ.

Ad Widget

Ad Widget

Continue Reading

ಮಂಗಳೂರು

ಕುಡುಪು ಷಷ್ಟಿ ಮಹೋತ್ಸವ ಜಾತ್ರೆ – ಸಂತೆ ವ್ಯಾಪಾರದಲ್ಲಿ ಹಿಂದೂಯೇತರರಿಗಿಲ್ಲ ಅವಕಾಶ: ವ್ಯಾಪಾರಿಗಳ ಸಮನ್ವಯ ಸಮಿತಿ  ಆಕ್ರೋಶ – ದೇವಸ್ಥಾನದ  EOರಿಂದ ತಿರುಗೇಟು – ಕರಾವಳಿಯಲ್ಲಿ ನಿಲ್ಲೋದಿಲ್ವಾ ಧರ್ಮ ದಂಗಲ್ ?

Ad Widget

Ad Widget

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನ ಕ್ಷೇತ್ರ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಷಷ್ಠಿ ಬ್ರಹ್ಮರಥೋತ್ಸವ ಇದೇ 17 ರಂದು   ನಡೆಯಲಿದೆ.  ಈ ಹಿನ್ನಲೆಯಲ್ಲಿ ಡಿ 14ರಿಂದ 19ರವರೆಗೂ ಈ ದೇವಸ್ಥಾನಕ್ಕೆ ಭಾರಿ ಸಂಖ್ಯೆಯಲ್ಲಿ  ಭಕ್ತರು ಭೇಟಿ ನೀಡುತ್ತಾರೆ.  ಆದರೇ  ಜಾತ್ರೆ ಸಂದರ್ಭ  ದೇಗುಲದ ಬಳಿ ಹಾಕುವ ಸಂತೆ ಅಂಗಡಿ ವಿಚಾರ ವಿವಾದಕ್ಕೆ ಕಾರಣವಾಗಿದೆ. ಮತ್ತೆ ಉಭಯ ಜಿಲ್ಲೆಗಳಲ್ಲಿ ವ್ಯಾಪಾರ ದಂಗಲ್‌ ನಡೆಯುವ ಸಾಧ್ಯತೆ ಗೋಚರಿದೆ.

Ad Widget

Ad Widget

Ad Widget

ಕಳೆದೆರಡು ವರ್ಷಗಳಿಂದ ರಾಜ್ಯದಲ್ಲಿ  ಅದರಲ್ಲೂ  ವಿಶೇಷವಾಗಿ ಕರಾವಳಿ ಜಿಲ್ಲೆಗಳ ಹಿಂದೂ ಶ್ರದ್ದಾ ಕೇಂದ್ರಗಳಲ್ಲಿ ನಡೆಯುವ ಜಾತ್ರೋತ್ಸವದ ಸಂದರ್ಭ  ಹಾಕುವ ತಾತ್ಕಾಲಿಕ ಸಂತೆ ವ್ಯಾಪಾರ ಮಳಿಗೆಗಳಲ್ಲಿ ಹಿಂದೂಯೇತರರಿಗೆ ಅವಕಾಶ ನಿರಾಕರಿಸಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಈ ವಿವಾದ ತಾರಕಕ್ಕೇರಿತ್ತು. ಆದರೇ ಕಾಂಗ್ರೆಸ್‌ ಆಡಳಿತ ಬಂದ ಬಳಿಕವು ಈ ವಿವಾದ ತಣ್ಣಗಾಗುವ ಲಕ್ಷಣ ಕಾಣಿಸುತ್ತಿಲ್ಲ. ಇದು ಪ್ರಗತಿಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.  

Ad Widget

ಈ ಸಾಲಿನ ನವರಾತ್ರಿ ಹಬ್ಬದ ಸಂದರ್ಭದಲ್ಲೂ ಈ ವಿವಾದ ಎದ್ದಿತ್ತು. ಮಂಗಳೂರಿನ ಇತಿಹಾಸ ಪ್ರಸಿದ್ದ ಮಂಗಳಾದೇವಿ ದೇವಸ್ಥಾನದ ಜಾತ್ರೋತ್ಸವ ಸಂದರ್ಭ ಮುಸ್ಲಿಂ ವ್ಯಾಪರಸ್ಥರಿಗೆ ಸಂತೆ ವ್ಯಾಪರಕ್ಕೆ ಅವಕಾಶ ನೀಡದ ಹಿನ್ನಲೆ ವಿವಾದ ಭುಗಿಲೆದಿತ್ತು. ಈಗ ಮತ್ತೆ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಷಷ್ಟಿ ಮಹೋತ್ಸವದ ಸಂದರ್ಭ ದೇವಸ್ಥಾನದ ಅವರಣದ ಹೊರಗಡೆ ನಡೆಯುವ ಸಂತೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ

Ad Widget

Ad Widget

ಕುಡುಪು ಜಾತ್ರೆಯ ಸಂತೆ  ವ್ಯಾಪಾರದಲ್ಲಿ ಹಿಂದೂಯೇತರರಿಗೆ ಅವಕಾಶ ಕಲ್ಪಿಸಿಲ್ಲ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಜಾತ್ರೆ ವ್ಯಾಪಾರಿಗಳ ಸಮನ್ವಯ ಸಮಿತಿ  ಆರೋಪಿಸಿದ್ದು  ಕಾಂಗ್ರೆಸ್ ನೇತೃತ್ವದ ಸರ್ಕಾರವೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುವಾದಿಗಳ ಕಪಿಮುಷ್ಟಿಯಲ್ಲಿ ನಲುಗುತ್ತಿದೆ. ಬಡ ಸಂತೆ ವ್ಯಾಪಾರಿಗಳ ಜೊತೆ ನಿಲ್ಲಲಾಗದ ಈ ಸರ್ಕಾರದ  ಕ್ರಮವನ್ನು  ಖಂಡಿಸುತ್ತೇವೆ  ಎಂದು ಸಮನ್ವಯ ಸಮಿತಿ ತಿಳಿಸಿದೆ.

ಸಮನ್ವಯ ಸಮಿತಿಯ ಸಂಚಾಲಕ ಬಿ.ಕೆ.ಇಮ್ತಿಯಾಜ್‌ ಆರೋಪ:

ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಕುಡುಪು ದೇವಸ್ಥಾನದ ಷಷ್ಠಿ ಜಾತ್ರೋತ್ಸವದ ಸಂದರ್ಭದಲ್ಲಿ ದೇವಸ್ಥಾನದ ಪ್ರಾಂಗಣದ ಹೊರಗಡೆ ಸಂತೆ ವ್ಯಾಪಾರ ನಡೆಯುತ್ತದೆ.  ಇಲ್ಲಿ  ವ್ಯಾಪಾರ ನಡೆಸಲು ಅವಕಾಶ ಕಲ್ಪಿಸುವಾಗ ಧಾರ್ಮಿಕ ತಾರತಮ್ಯ ನಡೆಸಲಾಗುತ್ತಿದೆ. ಜಾತ್ರೆಗಳನ್ನೇ ನಂಬಿ ಬದುಕುವ ಬಡ ಸಂತೆ ವ್ಯಾಪಾರಿಗಳ ಬದುಕುವ ಹಕ್ಕನ್ನು ರಕ್ಷಿಸಲು ಮತ್ತೆ ಜಿಲ್ಲಾಡಳಿತ ವಿಫಲ ಆಗಿದೆ.  ನಿರ್ದಿಷ್ಟ ವ್ಯಕ್ತಿಗಳಿಗೆ ಮಾತ್ರ ಇಲ್ಲಿ ಟೆಂಡರ್‌ ನೀಡಲಾಗುತ್ತಿದೆ. ಅವರು ಹಿಂದೂಯೇತರರಿಗೆ ವ್ಯಾಪಾರಿ ಮಳಿಗೆಗಳನ್ನು ಹಾಕಲು ಅವಕಾಶ ನೀಡುವುದಿಲ್ಲ’ ಎಂದು ಸಮನ್ವಯ ಸಮಿತಿಯ ಸಂಚಾಲಕ ಬಿ.ಕೆ.ಇಮ್ತಿಯಾಜ್‌ ತಿಳಿಸಿದ್ದಾರೆ.

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್‌ ಅವರ ಪ್ರತಿಕ್ರಿಯೆ:

ಈ ವರ್ಷ ದೇವಸ್ಥಾನದ ಷಷ್ಠಿ ಮಹೋತ್ಸವ ಸಂದರ್ಭದಲ್ಲಿ ಮಳಿಗೆಗಳನ್ನು ಹಾಕಿ ಜಾತ್ರೆ ವ್ಯಾಪಾರ ನಡೆಸುವುದಕ್ಕೆ ಟೆಂಡರ್‌ ಕರೆದೇ ಜಾಗ ಒದಗಿಸಿದ್ದೇವೆ.  ಡಿ. 5ರಂದು ನಡೆದ ಹರಾಜಿನಲ್ಲಿ ಐವರು ಭಾಗವಹಿಸಿದ್ದರು. ಹೆಚ್ಚು ಮೊತ್ತ ನೀಡಿದವರಿಗೆ ಮಳಿಗೆ ಹಾಕಲು ಜಾಗ ಒದಗಿಸಿದ್ದೇವೆ. ನವೀನ್‌ ಎಂಬುವವರು ₹ 1.15 ಲಕ್ಷ ಹೆಚ್ಚಿನ ಮೊತ್ತ ಹಣ ನೀಡಿ ಟೆಂಡರ್ ವಹಿಸಿಕೊಂಡಿದ್ದಾರೆ, ಹಾಗಾಗಿ ಅವರಿಗೆ ಮಳಿಗೆ ಹಾಕಲು ಜಾಗ ಒದಗಿಸಿದ್ದೇವೆ. ಹಿಂದಿನಿಂದಲೂ ಇಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ  ಮಳಿಗೆ ಹಾಕಲು ಅವಕಾಶ ನೀಡುತ್ತಿರಲಿಲ್ಲ. ಈ ವರ್ಷವೂ ಟೆಂಡರ್‌ ನೋಟಿಸ್‌ನಲ್ಲೂ ಇದನ್ನು ಸ್ಪಷ್ಟಪಡಿಸಲಾಗಿತ್ತು’ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್‌ ಅವರು ತಿಳಿಸಿದ್ದಾರೆ.

Continue Reading

ಅಪರಾಧ

Mother and Son died ಮಂಗಳೂರು : ಹಸೂಗೂಸನ್ನು ಟಬ್‌ʼನ ನೀರಿನಲ್ಲಿ ಮುಳುಗಿಸಿ ತಾನೂ ಜೀವ ಕಳೆದುಕೊಂಡ ನವ ವಿವಾಹಿತೆ

Ad Widget

Ad Widget

ಮಂಗಳೂರು: ಹೆರಿಗೆ ಬಳಿಕ ಸಾಮಾನ್ಯವಾಗಿ ಬಾಣಂತಿಯರನ್ನು/ ಮಹಿಳೆಯರನ್ನು  ಕಾಡುವ  ಮಾನಸಿಕ ಖಿನ್ನತೆಗೆ (Mental disorder) ತುತ್ತಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕೂವರೆ  ತಿಂಗಳ ಹಸುಗೂಸನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಗುಜ್ಜರಕೆರೆ ಎಂಬಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಗುಜ್ಜರಕೆರೆಯ ವಸತಿ ಸಮುಚ್ಚಯವೊಂದರಲ್ಲಿ ವಾಸಿಸುತ್ತಿದ್ದ  ಫಾತಿಮಾ ರುಕಿಯಾ (23) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.  ನಾಲ್ಕೂವರೆ ತಿಂಗಳ ಗಂಡು ಮಗು  ಅಬ್ದುಲ್ಲಾ ಹೂದ್ ಮೃತ ಹಸುಳೆ.  ಈ ದುರಂತದ ಬಗ್ಗೆ   ಮೃತ ಮಹಿಳೆಯ ತಾಯಿ ದೂರು ನೀಡಿದ್ದು, ನಗರದ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

ಫಾತಿಮಾ ರುಕಿಯಾರವರ ವಿವಾಹ ಸುಮಾರು  ಒಂದೂವರೆ ವರ್ಷದ ಹಿಂದೆ   ಮುಹಮ್ಮದ್ ಉನೈಸ್ ಎಂಬವರ ಜತೆ ಜರುಗಿತ್ತು. ಜುಲೈ 7ರಂದು ಗಂಡು ಮಗುವಿಗೆ (ಅಬ್ದುಲ್ಲಾ ಹೂದ್ ) ಜನ್ಮ ನೀಡಿದ್ದರು.ಇದಾದ ಬಳಿ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಫಾತಿಮಾರವರಿಗೆ ಮಂಗಳೂರಿನ   ಅರೋಗ್ಯ ಕ್ಲಿನಿಕ್ ನಲ್ಲಿ ಮಾನಸಿಕ ವೈದ್ಯರಾದ ಡಾ. ಸುಪ್ರಿಯಾ ರವರಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. .

Ad Widget

ಫಾತಿಮಾರವರು  ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ತಾಯಿ ಬಳಿ ಆಗಾಗ ಹೇಳಿಕೊಳ್ಳುತ್ತಿದ್ದರು . ಡಿ 2 ರಂದು ಬೆಳಿಗ್ಗೆ 11.30ರಿಂದ ಸಂಜೆ 3.30ರ ನಡುವೆ    ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್ ನ ಫ್ಲಾಟ್ ನಂಬರ್ 507 ರ ಬೆಡ್ ರೂಮ್ ನ ಗ್ಯಾಲರಿಯಲ್ಲಿ ಫಾತಿಮಾ ರುಕಿಯಾರವರು  ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ 4 1/2 ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

Ad Widget

Ad Widget

Bitter Gourd health benefits: ಹಾಗಲಕಾಯಿ ನಾಲಿಗೆಗೆ ಕಹಿ – ಉದರಕ್ಕೆ ಸಿಹಿ… ಇಲ್ಲಿದೆ ಅದರ ಆರೋಗ್ಯ ಪ್ರಯೋಜನಗಳು

ಬಳಿಕ ಕೊಠಡಿಯ ಕಿಟಕಿಯ ಕಬ್ಬಿಣದ ಸರಳಿಗೆ ಸೀರೆಯನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಫಾತಿಮಾ ರುಕಿಯಾ ತಾಯಿ  ಖತಿಜಾತುಲ್ ಕುಬ್ರ ರವರು ಠಾಣೆಗೆ ದೂರು ನೀಡಿದ್ದಾರೆ.

Continue Reading

Trending

error: Content is protected !!