Connect with us

ರಾಜಕೀಯ

Karnataka BJP | ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಬಂದು ನಿಂತ ರಾಜ್ಯ ಬಿಜೆಪಿ ನಾಯಕರೊಳಗಿನ ಕಚ್ಚಾಟ – ಎರಡು ಸಿಡಿ ಪ್ಯಾಕ್ಟರಿ ಇದೆ ಎಂದ ಯತ್ನಾಳ್

Ad Widget

Ad Widget

Ad Widget

Ad Widget Ad Widget

ವಿಜಯಪುರ : ರಾಜ್ಯ ಬಿಜೆಪಿ ನಾಯಕರೊಳಗಿನ (Karnataka BJP) ಕಚ್ಚಾಟ ಧರ್ಮಸ್ಥಳದಲ್ಲಿ ಆಣೆ ಪ್ರಮಾಣದವರೆಗೆ ಬಂದು ನಿಂತಿದೆ . ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪಕ್ಷೇತರ ಅಭ್ಯರ್ಥಿಗಳಿಗೆ ಒಂದು ರೂಪಾಯಿ ಹಣವನ್ನೂ ನೀಡಿಲ್ಲ ಎಂದು ಸಚಿವ ನಿರಾಣಿ ಹಾಗೂ ವಿಜಯೇಂದ್ರ ಧರ್ಮಸ್ಥಳದಲ್ಲಿ ಮಂಜುನಾಥಸ್ವಾಮಿ ಸನ್ನಿಧಾನದಲ್ಲಿ ಆಣೆ ಮಾಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Yatnal) ಸವಾಲು ಹಾಕಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ಸಿಡಿ ಪ್ಯಾಕ್ಟರಿ ಇದೆ ಒಂದು ಬಿಜೆಪಿಯಲ್ಲಿ ಮತ್ತೊಂದು ಕಾಂಗ್ರೇಸ್ ನಲ್ಲಿದೆ ಎಂದು ಟಾಂಗ್ ನೀಡಿದರು. ವಿಧಾನಸಭೆ ಚುನಾಚಣೆಯಲ್ಲಿ ನನಗೆ ಟಿಕೆಟ್ ಕೊಡಿಸಲು, ಸೋಲಿಸಲು ನಿರಾಣಿ ಯಾರು ಎಂದು ಹರಿಹಾಯ್ದು, ಪಾಲಿಕೆ ಚುನಾವಣೆಯಲ್ಲಿ ನೀವು ಯಾರಿಗೆ ಎಷ್ಟು ಹಣ ಕೊಟ್ಟಿದ್ದೀರಿ ಎಂಬುದು ಗೊತ್ತು, ಈ ವಿಚಾರ ಚುನಾವಣಾ ವೀಕ್ಷಕರಿಗೆ, ಕೇಂದ್ರದ ನಾಯಕರಿಗೂ ತಿಳಿದಿದೆ. ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗಾಗಿ ಪಕ್ಷದಿಂದಾಗಲಿ, ನಿರಾಣಿ ಹಾಗೂ ವಿಜಯೇಂದ್ರ ಹಣ ನೀಡಿಲ್ಲ, ನಾವು ಹಣ ಪಡೆದಿಲ್ಲ. ನಗರದ ಮತದಾರರು ನಮ್ಮ ಅಭ್ಯರ್ಥಿಗಳಿಗೆ ಹಣ ಪಡೆಯದೇ ಅಭಿವೃದ್ಧಿಗಾಗಿ ಮತ ಹಾಕಿ ಗೆಲ್ಲಿಸಿದ್ದಾರೆ ಎಂದರು.

Ad Widget

Ad Widget

ಬರುವ ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ವಿಜಯೇಂದ್ರ, ನಿರಾಣಿ, ಸತೀಶ ಜಾರಕಿಹೊಳಿ ಸೇರಿದಂತೆ ಹಲವರಿಂದ ದೊಡ್ಡ ಮಟ್ಟದ ಹಣ ವಿಜಯಪುರಕ್ಕೆ ಹರಿದು ಬರಲಿದೆ. ಆದರೆ ಅದನ್ನೆಲ್ಲ ಪಡೆದು ನಮ್ಮ ಜನ ನನಗೆ ಮತಹಾಕಲಿದ್ದಾರೆ ಎಂದು ಯತ್ನಾಳ್ ಹೇಳಿದರು.

Ad Widget

Ad Widget

ನಿರಾಣಿ ಕೇಳಿ ವಿಜಯಪುರ ಕ್ಷೇತ್ರದ ಜನರು ಮತ ಹಾಕುತ್ತಾರಾ, ನಿರಾಣಿ ನನ್ನನ್ನು ಸೋಲಿಸುವ ಮಾತಿರಲಿ, ಮೊದಲು ನಿರಾಣಿ ಬಿಳಗಿ ಕ್ಷೇತ್ರದಲ್ಲಿ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದರು.

Ad Widget

Ad Widget

ಇಷ್ಟಕ್ಕೂ ನನಗೆ ಟಿಕೆಟ್ ಕೊಡಿಸುವ ಮಾತಿರಲಿ, ನಿರಾಣಿ ಕುಟುಂಬದಲ್ಲಿ ಎಷ್ಟು ಜನ ಅಣ್ಣತಮ್ಮಂದಿರು ಚುನಾವಣೆಗೆ ನಿಲ್ಲುತ್ತಾರೆ ಎಂದು ಹೇಳಲಿ. ಕಾಂಗ್ರೆಸ್, ಜೆಡಿಎಸ್ ಪಕ್ಷದಿಂದ ಎಷ್ಟು ಜನ ನಿಲ್ಲುತ್ತಾರೆ ಎಂದು ಸ್ಪಷ್ಟಪಡಿಸಲಿ. ನನ್ನ ಮನೆಯಲ್ಲಿ ನಾನೊಬ್ಬನೇ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದರು.

Click to comment

Leave a Reply

ರಾಜಕೀಯ

ಐದು ವರ್ಷದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ನೋಡಿ ವೋಟ್ ಹಾಕುತ್ತೇನೆ – ಉಡುಪಿಯಲ್ಲಿ ಖ್ಯಾತ ನಟ ರಕ್ಷಿತ್ ಶೆಟ್ಟಿ

Ad Widget

Ad Widget

Ad Widget

Ad Widget Ad Widget

ಉಡುಪಿ : ಉಡುಪಿಯಲ್ಲಿ ನಟ ರಕ್ಷಿತ್ ಶೆಟ್ಟಿ ಮತದಾನ ಮಾಡಿ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಐದು ವರ್ಷದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ನೋಡಿ ವೋಟ್ ಹಾಕುತ್ತೇನೆ ಎಂದು ಖ್ಯಾತ ನಟ ಹೇಳಿದ್ದಾರೆ.

Ad Widget

Ad Widget

ಮುಂದಿನ ಐದು ವರ್ಷ ಯಾವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ಓಟ್ ಮಾಡ್ತೇನೆ. ಯೋಚನೆ ಮಾಡಿ ರಾಜಕೀಯ ತಿಳಿದವರ ಜೊತೆ ತರ್ಕ ಮಾಡಿ ಮತ ಹಾಕುತ್ತೇನೆ ಎಂದದು

Ad Widget

Ad Widget

ಯಾವಾಗಲೂ ನಾನು ಒಂದು ನಿರ್ಧಾರಕ್ಕೆ ಬಂದು ಮತ ಹಾಕುತ್ತೇನೆ. ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು. ನೆನ್ನೆ ರಾತ್ರಿ ಬೆಂಗಳೂರಿಂದ ಹೊರಟು ಉಡುಪಿಗೆ ಬಂದಿದ್ದೇನೆ. ನಾನು ಬೆಂಗಳೂರು ಸೇರಿ 18 ವರ್ಷ ಆಯ್ತು . ಪ್ರತಿ ಬಾರಿ ವೋಟಿಗೆ ನಾನು ಉಡುಪಿಗೆ ಬರುತ್ತೇನೆ

Ad Widget

Ad Widget

ವೋಟು ನಮ್ಮ ಹಕ್ಕು ನಮ್ಮ ಜವಾಬ್ದಾರಿ. ವೋಟ್ ಗೋಸ್ಕರ ಬೆಂಗಳೂರಿಂದ ಊರಿಗೆ ಬರುವುದು ಖುಷಿ ..ನನ್ನ ಊರು ನನ್ನ ದೇಶ ನಮ್ಮ ಜವಾಬ್ದಾರಿ ಏನೋ ಖುಷಿ ಇದೆ ಎಂದರು.

Continue Reading

ಅಂತರ ರಾಜ್ಯ

Ajit Pawar’s wife-25 ಸಾವಿರ ಕೋಟಿ ಅವ್ಯವಹಾರ : ಅಜಿತ್ ಪವಾರ್ ಪತ್ನಿಗೆ ಕ್ಲೀನ್ ಚಿಟ್

Ad Widget

Ad Widget

Ad Widget

Ad Widget Ad Widget

ಮುಂಬಯಿ: ಮಹಾರಾಷ್ಟ್ರ ರಾಜ್ಯ ಸಹಕಾರ ಬ್ಯಾಂಕ್‌ನಲ್ಲಿ (ಎಂಎಸಿಬಿ) ನಡೆದಿರುವ 25 ಸಾವಿರ ಕೋಟಿ ರೂ. ಮೊತ್ತದ ಅವ್ಯವಹಾರ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಅವರನ್ನು ಮುಂಬಯಿ ಪೊಲೀಸರು ದೋಷಮುಕ್ತಗೊಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಬಾರಾಮತಿ ಲೋಕಸಭೆ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿರುವ ಸುನೇತ್ರಾ ಅವರಿಗೆ ಪೊಲೀಸರಿಂದ ಕ್ಲೀನ್‌ ಚಿಟ್ ಸಿಕ್ಕಿರುವುದು ಚುನಾವಣೆ ಹೊತ್ತಲ್ಲಿ ರಿಲೀಫ್ ತಂದಿದೆ.

Ad Widget

Ad Widget

25 ಸಾವಿರ ಕೋಟಿ ರೂ. ಅವ್ಯವಹಾರದ ಪ್ರಕರಣದ ತನಿಖೆ ಕೈಗೊಂಡಿದ್ದ ಮುಂಬಯಿ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ವಿಭಾಗವು ಪ್ರಕರಣವನ್ನು ಮುಕ್ತಾಯಗೊಳಿಸಿ ಕಳೆದ ಜನವರಿಯಲ್ಲಿ ವರದಿ ಸಲ್ಲಿಸಿತ್ತು.

Ad Widget

Ad Widget

‘ಅಜಿತ್ ಪವಾರ್ ಅವರ ನಂಟು ಹೊಂದಿರುವ ಜರಂಡೇಶ್ವರ ಸಕ್ಕರೆ ಕಾರ್ಖಾನೆಗೆ ಸಾಲ ಅಥವಾ ಮಾರಾಟಕ್ಕೆ ಅನುಮತಿ ನೀಡಿದ ಪ್ರಕ್ರಿಯೆಯಲ್ಲಿ ಎಂಎಸ್‌ಬಿ ಬ್ಯಾಂಕಿಗೆ ಯಾವುದೇ ರೀತಿಯ ನಷ್ಟ ಉಂಟಾಗಿಲ್ಲ. ಹಣಕಾಸು ವ್ಯವಹಾರದಲ್ಲಿ ಯಾವುದೇ ಕ್ರಿಮಿನಲ್ ಅಪರಾಧ ನಡೆದಿಲ್ಲ, ” ಎಂದು ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ವಿಭಾಗವು ತನ್ನ ವರದಿಯಲ್ಲಿ ತಿಳಿಸಿದೆ.

Ad Widget

Ad Widget
Continue Reading

ಅಂತರ ರಾಜ್ಯ

BJP leader-ನರೇಂದ್ರ ಮೋದಿ ಮುಸ್ಲಿಂಮರ ವಿರುದ್ಧ ನೀಡಿದ್ದ ಹೇಳಿಕೆಯನ್ನು ಖಂಡಿಸಿದ ಬಿಜೆಪಿ ಮುಖಂಡ ಪಕ್ಷದಿಂದ ವಜಾ

Ad Widget

Ad Widget

Ad Widget

Ad Widget Ad Widget

ಜೈಪುರ: ಇತ್ತೀಚೆಗೆ ರಾಜಸ್ಥಾನದ ಚುನಾವಣಾ Rallyಯಲ್ಲಿ ಪ್ರಧಾನಿ ಮೋದಿ ಅವರು ದೇಶದ ಮುಸ್ಲಿಮರನ್ನು ನುಸುಳುಕೋರರಿಗೆ ಹೋಲಿಸಿ ನೀಡಿದ್ದ ಹೇಳಿಕೆಯನ್ನು ಖಂಡಿಸಿದ್ದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿ ಅವರನ್ನು ಬುಧವಾರ ಪಕ್ಷದಿಂದ ಉಚ್ಚಾಟಿಸಲಾಗಿದೆ.

Ad Widget

Ad Widget

Ad Widget

Ad Widget

Ad Widget

ಇತ್ತೀಚೆಗೆ ಘನಿ ಅವರು ದಿಲ್ಲಿಯಲ್ಲಿ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದರು. ಆಗ ಅವರು, “ರಾಜಸ್ಥಾನದಲ್ಲಿ ಬಿಜೆಪಿಯು ಮೂರಾಲ್ಕು ಸ್ಥಾನಗಳನ್ನು ಕಳೆದುಕೊಳ್ಳಲಿದೆ,” ಎಂದಿದ್ದರು. ಅಲ್ಲದೇ ಮುಸ್ಲಿಮರ ಕುರಿತು ಪ್ರಧಾನಿ ನೀಡಿದ್ದ ಹೇಳಿಕೆಯನ್ನು ಖಂಡಿಸಿದ್ದರು.

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading