Moral Policing : ಸುಬ್ರಹ್ಮಣ್ಯ : ಅಪ್ರಾಪ್ತೆಯ ಭೇಟಿಯಾಗಲು ಬಂದ ಯುವಕನಿಗೆ ಥಳಿಸಿದ ಪ್ರಕರಣ – ಇಬ್ಬರ ಬಂಧನ

Polish_20230107_064256215
Ad Widget

Ad Widget

Ad Widget

ಸುಬ್ರಹ್ಮಣ್ಯ : ಪರಿಚಿತ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಸುಬ್ರಹ್ಮಣ್ಯದಲ್ಲಿ  ಭೇಟಿಯಾಗಲು ಬಂದ  ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಇಬ್ಬರನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ. ರಾಧಾಕೃಷ್ಣ (45), ವಿಶ್ವಾಸ್‌ ಎನ್‌. (19) ಬಂಧಿತರು. ಕಲ್ಲುಗುಂಡಿಯ ಹಫೀದ್‌ ಹಲ್ಲೆಯಾದ ಬಗ್ಗೆ ದೂರು ನೀಡಿದವರು.

Ad Widget

  ಜ. 5ರಂದು ಘಟನೆ ನಡೆದಿತ್ತು. ಕಲ್ಲುಗುಂಡಿಯ ಹಫೀದ್‌ ಸುಬ್ರಹ್ಮಣ್ಯದ ಕಾಲೇಜೊಂದರ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಭೇಟಿಯಾಗಲು ಬಂದ ವೇಳೆ ಘಟನೆ ನಡೆದಿತ್ತು. ಯುವಕನು ಬಾಲಕಿಯ ಜತೆ ವಿಹಾರಿಸುವುದನ್ನು ಗಮನಿಸಿದ ಯುವಕರ ತಂಡವೊಂದು ಆತನ್ನು ಜೀಪಿನಲ್ಲೆ ಬೇರೆಡೆ ಕರೆದುಕೊಂಡು ಹೋಗಿ ಹಿಗ್ಗಾಮುಗ್ಗಾ ಥಳಿಸಿದ್ದರು ಎಂದು ವರದಿಯಾಗಿತ್ತು.

Ad Widget

Ad Widget

Ad Widget

ಜ.5ರಂದು ಸುಬ್ರಹ್ಮಣ್ಯಕ್ಕೆ ಬಂದಿದ್ದ ವೇಳೆ ಕುಮಾರಧಾರ ಬಳಿಯ ಹಳೆ ಕಟ್ಟಡದ ಕೋಣೆಯೊಳಗೆ ಕೂಡಿ ಹಾಕಿ ತಂಡವೊಂದು ಹಲ್ಲೆ ನಡೆಸಿತ್ತು ಎಂದು ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದ ಹಫೀದ್‌ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದ. ಇದೇ ಘಟನೆಗೆ ಸಂಬಂಧಿಸಿ ವಿದ್ಯಾರ್ಥಿನಿಯ ತಂದೆಯು ಹಫೀದ್‌ ವಿರುದ್ಧ ಪುತ್ರಿಯ ಮಾನಭಂಗಕ್ಕೆ ಯತ್ನಿಸಿ ಬೆದರಿಕೆ ಹಾಕಿದ ಬಗ್ಗೆ ದೂರು ನೀಡಿದ್ದರು. ಹಫೀದ್‌ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

Ad Widget

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: