Ad Widget

Divya Hagaragi | ಪಿಎಸ್‌ಐ ಹಗರಣದ ಕಿಂಗ್ ಪಿನ್ ದಿವ್ಯಾ ಹಾಗರಗಿಗೆ ಜಾಮೀನು : ಭವ್ಯ ಸ್ವಾಗತ ಕೋರಿದ ಬಿಜೆಪಿ ಕಾರ್ಯಕರ್ತರು – ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೇಸ್ – ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ

InShot_20230109_134442244
Ad Widget

Ad Widget

Ad Widget

ಬೆಂಗಳೂರು, ಜ. 8: ಸಾವಿರಾರು ಯುವಕರ ಉದ್ಯೋಗದ ಕನಸಿಗೆ ಕೊಳ್ಳಿ ಇಟ್ಟ ಪಿಎಸ್‌ಐ ಹಗರಣದ ರೂವಾರಿ ದಿವ್ಯಾ ಹಾಗರಗಿಗೆ (Divya Hagaragi) ಜಾಮೀನು ದೊರೆತ ಕೂಡಲೇ ವಿಜಯೋತ್ಸವ ಮೂಲಕ ಸ್ವಾಗತಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

‘ಭ್ರಷ್ಟ ಬಿಜೆಪಿ ಸರಕಾರದ ಆಡಳಿತದ ವಿಪರ್ಯಾಸ ಇದು. ಪ್ರಾಮಾಣಿಕವಾಗಿ ಪರೀಕ್ಷೆ ಬರೆದ 56ಸಾವಿರ ಪಿಎಸ್ಸೈ ಅಭ್ಯರ್ಥಿಗಳು ಭವಿಷ್ಯದ ದಿಕ್ಕು ಕಾಣದೆ ನೋವು ಅನುಭವಿಸುತ್ತಿದ್ದಾರೆ. ಅಕ್ರಮ ನಡೆಸಿದ ಆರೋಪಿಗಳು ಸರಕಾರದ ಸಹಕಾರದಿಂದ ಜಾಮೀನು ಪಡೆದು, ಪಟಾಕಿ ಹಚ್ಚಿ ಸಂಭ್ರಮಿಸುತ್ತಿದ್ದಾರೆ. ಈ ಮೂಲಕ 56 ಸಾವಿರ ಯುವಕರನ್ನು ಅಣಕಿಸುತ್ತಿದೆ ಸರಕಾರ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

Ad Widget

Ad Widget

Ad Widget

Ad Widget

ರವಿವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸರಕಾರದ ಸಹಕಾರ, ಗೃಹ ಸಚಿವರ ಮುತುವರ್ಜಿಯಿಂದ ಜಾಮೀನು ಪಡೆದು ಹೊರಬಂದ ಪಿಎಸ್ಸೈ ಅಕ್ರಮದ ಆರೋಪಿ, ಬಿಜೆಪಿ ನಾಯಕಿ ದಿವ್ಯ ಹಾಗರಗಿಯನ್ನು ಪಟಾಕಿ ಹಚ್ಚಿ ಸಂಭ್ರಮಿಸಿ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರು. ಯಾಕೆ ಈ ಸಂಭ್ರಮ?, 56 ಸಾವಿರ ಯುವಕರ ಬದುಕು ಮುಳುಗಿಸಿದ್ದಕ್ಕಾ?, ಸರಕಾರದ ಕಿಂಗ್‍ಪಿನ್‍ಗಳನ್ನು ಬಚಾವು ಮಾಡಿದ್ದಕ್ಕಾ?’ ಎಂದು ಪ್ರಶ್ನಿಸಿದೆ.

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ 9 ತಿಂಗಳಿನಿಂದ ಜೈಲಿನಲ್ಲಿದ್ದ ದಿವ್ಯಾ ಹಾಗರಿಗಿ ಯನ್ನು ಜನವರಿ 5 ರಂದು ಕಲಬುರಗಿ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.  ಅಂದು ದಿವ್ಯಾ ಹಾಗರಗಿ ಸೇರಿ 217 ಜನರನ್ನು ನ್ಯಾಯಾಲಯ ಷರತ್ತುಬದ್ದ ಜಾಮೀನಿನಮೇಲೆ ಬಿಡುಗಡೆ ಮಾಡಿದೆ.

Ad Widget

Ad Widget
Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: