ದಕ್ಷಿಣ ಕನ್ನಡ
ಪುಣಚ : 6 ತಿಂಗಳು ಕಳೆದರೂ ದುರಸ್ತಿಯಾಗದ ಪೈಪ್ ಒಡೆದು ಹಾಳಾದ ರಸ್ತೆ – 60 ಮನೆಗಳಿಗಿಲ್ಲ ದಾರಿ – ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ವಿಟ್ಲ: ಪುಣಚ ಗ್ರಾಮದ ದೇವಿನಗರ – ಕಲ್ಲಾಜೆ – ಅಜೇರು ಮಧ್ಯ ಹಾದು ಹೋಗುವ ರಸ್ತೆಯ ಮಡ್ಯಾರಬೆಟ್ಟು ತೋಡಿಗೆ ಹಾಕಿದ ಸಿಮೆಂಟ್ ಪೈಪ್ ಮಳೆಗಾಲದಲ್ಲಿ ಕೊಚ್ಚಿ ಹೋಗಿ ಹಲವು ಮನೆಗಳಿಗೆ ಸೂಕ್ತ ರಸ್ತೆ ಸಂಪರ್ಕ ಇಲ್ಲದಂತಾಗಿ 6ತಿಂಗಳು ಸಂದಿವೆ. ಆದರೇ ಅಡಳಿತಶಾಹಿ ಮುಗುಮ್ಮಾಗಿ ಕೂತಿದ್ದು, ಈ ಕಡೆ ಗಮನ ಹರಿಸುತ್ತಿಲ್ಲವೇಂದು ಸಾರ್ವಜನಿಕರು ಆರೋಪಿಸಿದ್ದಾರೆ. ಅಡಳಿತ ವ್ಯವಸ್ಥೆ ಕೂಡಲೇ ಸರಿ ಮಾಡದಿದ್ದರೇ ಮುಂದಿನ ವಿಧಾನಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ
ಮಡ್ಯಾರಬೆಟ್ಟು ಸೇತುವೆ ಕುಸಿತದಿಂದ ಮಡ್ಯಾರುಬೆಟ್ಟು, ಆಜೇರು, ಮಲ್ಯ, ಅನವುಗುಡ್ಡೆ ಭಾಗದ ಸುಮಾರು 60ಕ್ಕೂ ಅಧಿಕ ಮನೆಗಳಿಗೆ ಸರಿಯಾದ ರಸ್ತೆ ಸಂಪರ್ಕ ಇಲ್ಲದಂತಾಗಿದೆ. ಸರಕಾರಿ ಶಾಲೆ, ಅಂಗನವಾಡಿ, ಭಜನಾಮಂದಿರ ಸಂಪರ್ಕಿಸುವ ರಸ್ತೆ ಇದಾಗಿದ್ದು, ಸುಮಾರು 40 ಪರಿಶಿಷ್ಟ ಪಂಗಡದವರ ಮನೆಗಳಿಗೂ ಇದೆ ಸಂಪರ್ಕ ರಸ್ತೆಯಾಗಿದೆ.
ಸದ್ಯ ಸ್ಥಳೀಯ ನಿವಾಸಿಗಳು ಅನವುಗುಡ್ಡೆ – ಸಾರ್ಯ – ಬುಳ್ಳೆರಿಕಟ್ಟೆ ರಸ್ತೆಯ ಅಥವಾ ಅನವುಗುಡ್ಡೆ – ಗೋವಿಂದ ಮೂಲೆ – ತೋರಣಕಟ್ಟೆ ರಸ್ತೆಯನ್ನು ಬಳಸಿ ಸುತ್ತಿಕೊಂಡು ಪುಣಚ ಪೇಟೆಗೆ ಬರಬೇಕಾಗಿದೆ. ಸೇತುವೆ ನಿರ್ಮಾಣ ಮಾಡಿಕೊಡುವಂತೆ ಜಿಲ್ಲಾಡಳಿತ, ಸ್ಥಳೀಯ ಪಂಚಾಯಿತಿ ಸೇರಿ ಪುತ್ತೂರು ಶಾಸಕರಿಗೆ ಮನವಿಯನ್ನು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ಸ್ಥಳೀಯರ ಮಾತು ಕೇಳದೆ ಅವೈಜ್ಞಾನಿಕ ಕಾಮಗಾರಿ!
2013-14ನೇ ಸಾಲಿನಲ್ಲಿ 3ಲಕ್ಷ ಜಿಲ್ಲಾ ಪಂಚಾಯಿತಿ ಅನುದಾನ ಮತ್ತು 5 ಲಕ್ಷ ಸಂಸದರ ನಿಧಿಯ ಅನುದಾನದಲ್ಲಿ 4 ಅಡಿಯ 2ಸಾಲು ಸಿಮೆಂಟ್ ಪೈಪ್ ಗಳನ್ನು ಹಾಕಿ, ಎರಡು ಬದಿಗೆ ಕಗ್ಗಲ್ಲಿನ ತಡೆಗೋಡೆ ಕಟ್ಟಿ ಮಧ್ಯಕ್ಕೆ ಮಣ್ಣು ತುಂಬಿಸಿ ರಸ್ತೆ ನಿರ್ಮಾಣ ಮಾಡಲಾಗಿತ್ತು. ಆದರೆ ಈ ಭಾಗದಲ್ಲಿ ಮಳೆಗಾಲದಲ್ಲಿ ನೀರಿನ ಹರಿವು ಹೆಚ್ಚಿರುವ ಕಾರಣ ಕನಿಷ್ಠ 6ಅಡಿ ಪೈಪ್ ಆದರೂ ಅಳವಡಿಸಬೇಕೆಂಬ ಸ್ಥಳೀಯರ ಬೇಡಿಕೆಯನ್ನೂ ನಿರ್ಲಕ್ಷ್ಯಿಸಿ ಅವೈಜ್ಞಾನಿಕ ಕಾಮಗಾರಿಯನ್ನು ನಡೆಸಲಾಗಿತ್ತು.
ಗುದ್ದಲಿಪೂಜೆ ಆದರೂ ಸೇತುವೆ ಆಗಿಲ್ಲ!
ಕಿರಿದಾದ ಪೈಪ್ ಅಳವಡಿಕೆಯಿಂದ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯದೆ ಅಕ್ಕಪಕ್ಕದ ತೋಟಗಳಲ್ಲಿ ನೀರು ತುಂಬಿ ಸಮಸ್ಯೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ 2019ರ ಮಾರ್ಚ್ ನಲ್ಲಿ ನೂತನ ಸೇತುವೆಯ ನಿರ್ಮಾಣಕ್ಕಾಗಿ ಗುದ್ದಲಿಪೂಜೆ ಮಾಡಲಾಗಿತ್ತು. ಆದರೆ ಸುಮಾರು ನಾಲ್ಕು ವರ್ಷವಾಗುತ್ತಾ ಬಂದರೂ ಸೇತುವೆ ಮಾತ್ರ ನಿರ್ಮಾಣವಾಗಿರಲಿಲ್ಲ.
ಚುನಾವಣಾ ಬಹಿಷ್ಕಾರದ ಎಚ್ಚರಿಕೆ!
ಸೇತುವೆ ನಿರ್ಮಾಣದ ವಿಚಾರದಲ್ಲಿ ಅಧಿಕಾರಿಗಳಿಂದಾಗಲೀ, ಜನಪ್ರತಿನಿಧಿಗಳಿಂದಾಗಲೀ ಯಾವುದೇ ಸ್ಪಂದನೆ ಇದುವರೆಗೆ ದೊರೆತಿಲ್ಲ. ಸರ್ಕಾರ ತಕ್ಷಣ ಎಚ್ಚೆತ್ತು ವ್ಯವಸ್ಥೆಯನ್ನು ಕಲ್ಪಿಸದೇ ಹೋದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುಬೇಕಾಗುತ್ತದೆ. ಜತೆಗೆ ಮುಂಬರುವ ಎಲ್ಲಾ ಚುನಾವಣೆಯನ್ನು ಬಹಿಷ್ಕಾರಿಸುವ ಸೂಚನೆಯನ್ನು ಸ್ಥಳೀಯ ನಿವಾಸಿಗಳು ನೀಡಿದ್ದಾರೆ.
ದಕ್ಷಿಣ ಕನ್ನಡ
Bird Flu HIgh Alert in DK ಕೇರಳದಲ್ಲಿ ಹಕ್ಕಿ ಜ್ವರ – ದಕ್ಷಿಣ ಕನ್ನಡದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ; ಹಕ್ಕಿಜ್ವರ ಇರುವಾಗ ಕೋಳಿ ಮಾಂಸ ತಿನ್ನಬಹುದಾ ?
ಮಂಗಳೂರು: ನೆರೆರಾಜ್ಯ ಕೇರಳದ ಆಲಪ್ಪುಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹೀಗಾಗಿ ದಕ್ಷಿಣ ಕನ್ನಡದ ಗಡಿ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಜಿಲ್ಲಾಡಳಿತ ಮತ್ತು ಪಶುಸಂಗೋಪನೆ ಇಲಾಖೆಯು ಕೇರಳ-ಕರ್ನಾಟಕ ಗಡಿಯ ಚೆಕ್ ಪೋಸ್ಟ್ಗಳಲ್ಲಿ ಕಣ್ಗಾವಲು ಹೆಚ್ಚಿಸಿವೆ. ರೋಗ ಬಾಧಿತ ಆಲಪ್ಪುಳವು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಮಾರು 400 ಕಿಲೊಮೀಟರ್ ದೂರದಲ್ಲಿದೆ.
ಕೇರಳ ಗಡಿಭಾಗ ಸುಳ್ಯದ ಜಾಲ್ಸೂರು, ಬಂಟ್ವಾಳದ ಸಾರಡ್ಕ, ಉಳ್ಳಾಲದ ತಲಪಾಡಿಯಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಉತ್ಪಾದನೆಯಾಗುವ ಮಾಂಸದ ಕೋಳಿಗಳಲ್ಲಿ ಬಹುಪಾಲನ್ನು ಕೇರಳದಲ್ಲಿ ಮಾರಾಟ ಮಾಡಲಾಗುತ್ತಿದೆ. ಕೇರಳದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಬಳಿಕ ಈ ಕೋಳಿ ಸಾಗಾಟದ ವಾಹನಗಳನ್ನು ಗಡಿಭಾಗಗಳಲ್ಲಿ ಸ್ಯಾನಿಟೈಜ್ ಮಾಡಲಾಗುತ್ತದೆ. ಕೇರಳದಿಂದ ಖಾಲಿ ವಾಹನಗಳು ಬರುತ್ತವೆ. ಈ ವಾಹನಗಳನ್ನು ಕೂಡ ಗಡಿಯಲ್ಲಿ ಸ್ಯಾನಿಟೈಜ್ ಮಾಡಿದ ನಂತರವೇ ಒಳಗೆ ಬಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಸಿದ್ದಾರೆ.
ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಅರುಣ್ ಕುಮಾರ್ ಶೆಟ್ಟಿ ಈ ಕರಿತಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ‘ಹಕ್ಕಿಜ್ವರ ಹೆಚ್ಚಾಗಿ ವಲಸೆ ಹಕ್ಕಿಗಳಿಂದ ಹರಡುತ್ತದೆ. ದಕ್ಷಿಣ ಕನ್ನಡ ಜಿಲ್ಲೆಗೆ ವಿದೇಶದಿಂದ ಹಕ್ಕಿಗಳ ವಲಸೆ ಇಲ್ಲ. ಕೇರಳ ಮತ್ತು ಸುತ್ತಮುತ್ತಲಿಂದ ಬರುತ್ತವೆ. ಆದರೆ ಈಗ ಕಡು ಬೇಸಿಗೆ ಇರುವುದರಿಂದ ಹಕ್ಕಿಗಳ ವಲಸೆ ತೀರಾ ಅಪರೂಪ. ಹೀಗಾಗಿ ಹಕ್ಕಿಜ್ವರದ ಸೋಂಕು ಹರಡುವ ಸಾಧ್ಯತೆ ಕಡಿಮೆ. ಆದರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಹಕ್ಕಿಜ್ವರದ ಯಾವ ಲಕ್ಷಣವೂ ಕಂಡುಬಂದಿಲ್ಲ. ಆದರೂ ಇಲಾಖೆ ಜಾಗರೂಕವಾಗಿದೆ. ಹಕ್ಕಿಜ್ವರ ಕೋಳಿ ಮಾಂಸ ಸೇವನೆಯಿಂದ ಹರಡುವುದಿಲ್ಲ. ಆದ್ದರಿಂದ ಮಾಂಸ ತಿನ್ನುವುದನ್ನು ಬಿಡಬೇಡಿ. ಸೋಂಕು ಕಾಲಿಟ್ಟರೂ ಕೋಳಿ ಸಾಕಣೆ ಕೇಂದ್ರದಲ್ಲಿ ಮತ್ತು ಮಾಂಸ ಸಂಸ್ಕರಣೆ ಮಾಡುವವರಿಗೆ ಮಾತ್ರ ತಗಲುತ್ತದೆ. ಮತ್ತೊಂದು ವಿಶೇಷವೆಂದರೆ ಈ ಸೋಂಕು ಮನುಷ್ಯನಿಂದ ಮನುಷ್ಯನಿಗೆ ಹರಡುವುದಿಲ್ಲ. ಹಕ್ಕಿಗಳಿಂದ ಮಾತ್ರ ಹರಡುತ್ತದೆ. ಆದ್ದರಿಂದ ಯಾರೂ ಗಾಬರಿಯಾಗಬೇಕಾದ ಅಗತ್ಯವಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
‘ಹೊರಗಿನವರು ಮತ್ತು ಅಪರಿಚಿತರನ್ನು ಕೋಳಿ ಸಾಕಣೆ ಕೇಂದ್ರದೊಳಗೆ ಬಿಡಬಾರದು ಎಂದು ಕೇಂದ್ರಗಳ ಮಾಲೀಕರಿಗೆ ಸೂಚಿಸಲಾಗಿದೆ. ಸೋಂಕು ಹರಡುವುದನ್ನು ತಡೆಯುವುದಕ್ಕಾಗಿ ಹೊರರಾಜ್ಯದಿಂದ ಬರುವ ವಾಹನವನ್ನು ಕೇಂದ್ರದೊಳಗೆ ಬಿಡುವ ಮೊದಲು ಕಡ್ಡಾಯವಾಗಿ ಸ್ಯಾನಿಟೈಜ್ ಮಾಡಬೇಕು ಎಂದು ಕೋಳಿ ಸಾಕಾಣೆದಾರರಿಗೆ ಪಶುಸಂಗೋಪನೆ ಇಲಾಖೆ ಸೂಚಿಸಿದೆ.
ಹಕ್ಕಿಗಳು ಅಥವಾ ಕೋಳಿಗಳು ಶಂಕಾಸ್ಪದವಾಗಿ ಸಾವಿಗೀಡಾಗಿರುವುದು ಕಂಡುಬಂದರೆ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು ಎಂದು ರೈತರಿಗೆ ತಿಳಿಸಲಾಗಿದೆ. ಹಕ್ಕಿಜ್ವರ ಹರಡುವುದರ ಕುರಿತು ಮತ್ತು ಅದನ್ನು ತಡೆಯುವ ಕ್ರಮಗಳ ಬಗ್ಗೆ ಪಶುವೈದ್ಯರು ರೈತರಿಗೆ ಮಾಹಿತಿ ನೀಡಿದ್ದಾರೆ. ಕೋಳಿ ಸಾಕಣೆ ಕೇಂದ್ರ ಮತ್ತು ಮಾಂಸ ಸಂಸ್ಕರಣೆ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹಕ್ಕಿಜ್ವರದ ಸೋಂಕು ತಗಲುವ ಸಾಧ್ಯತೆ ಹೆಚ್ಚು ಇರುವುದರಿಂದ ಜಾಗೃತರಾಗಿರುವಂತೆ ತಿಳಿಸಲಾಗಿದೆ ಎಂದು ಡಾ.ಅರುಣ್ ಕುಮಾರ್ ಹೇಳಿದರು.
ಮಂಗಳೂರು
Brijesh Chowta-ಕಾಂಗ್ರೆಸಿಗೆ ಮತ ನೀಡಿದರೆ ಎಸ್ಡಿಪಿಐ ಕೈ ಬಲಪಡಿಸಿದಂತೆ ; ಶಕ್ತಿನಗರ ಕಾಲ್ನಡಿಗೆ ರೋಡ್ ಶೋದಲ್ಲಿ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು, ಎ.24 : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಚುನಾವಣಾ ಪ್ರಚಾರದ ಕೊನೆಯಲ್ಲಿ ಮಂಗಳೂರು ನಗರದ ಶಕ್ತಿನಗರದಲ್ಲಿ ಕಾಲ್ನಡಿಗೆಯಲ್ಲಿ ರೋಡ್ ಶೋ ನಡೆಸಿದ್ದಾರೆ. ಶಕ್ತಿನಗರದಿಂದ ನಾಲ್ಯಪದವು ಶತಮಾನೋತ್ಸವ ಶಾಲೆಯ ವರೆಗೂ ನೂರಾರು ಕಾರ್ಯಕರ್ತರ ಜೊತೆಗೆ ಕಾಲ್ನಡಿಗೆಯಲ್ಲಿ ಬಂದು ಮತಯಾಚನೆ ಮಾಡಿದ್ದಾರೆ.
ಇದೇ ವೇಳೆ ಮಾತನಾಡಿದ ಬ್ರಿಜೇಶ್ ಚೌಟ, ಜಿಲ್ಲೆಯಲ್ಲಿ ಬಿಜೆಪಿ ವಿರೋಧಿ ಶಕ್ತಿಗಳೆಲ್ಲ ಒಂದಾಗಿವೆ. ಎಸ್ಡಿಪಿಐ ಅವರಲ್ಲಿ ಅಭ್ಯರ್ಥಿ ಯಾರೆಂದು ಕೇಳಿದರೆ ಕಾಂಗ್ರೆಸ್, ಕಮ್ಯುನಿಸ್ಟರಲ್ಲಿ ಕೇಳಿದರೂ ಕಾಂಗ್ರೆಸ್ ಎಂದೇ ಹೇಳುತ್ತಾರೆ. ಕಾಂಗ್ರೆಸಿನವರಲ್ಲಿ ಕೇಳಿದರೆ ಅಭ್ಯರ್ಥಿ ಬಗ್ಗೆ ಸಂಶಯ ಇದೆ. ಅವರಲ್ಲೇ ಮನೆಯೊಂದು ಮೂರು ಬಾಗಿಲು ಎನ್ನುವ ರೀತಿ ಇದೆ. ಹೀಗಾಗಿ ಕಾಂಗ್ರೆಸಿಗೆ ಮತ ನೀಡಿದರೆ ಎಸ್ಡಿಪಿಐ ಕೈ ಬಲಪಡಿಸಿದಂತಾಗುತ್ತದೆ ಎಂದು ಹೇಳಿದರು.
ನೀವು ನೈಜ ದೇಶಭಕ್ತರು, ದೇಶಕ್ಕಾಗಿ ಮತ
ಬುಧವಾರ ಬೆಳಗ್ಗೆ ದೇರಳಕಟ್ಟೆಯ ಕೆಎಸ್ ಹೆಗ್ಡೆ ಆಸ್ಪತ್ರೆ, ಮುಕ್ಕ ಶ್ರೀನಿವಾಸ ಮೆಡಿಕಲ್ ಕಾಲೇಜು ಆಸ್ಪತ್ರೆ, ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಭೇಟಿಯಿತ್ತ ಕ್ಯಾ. ಬ್ರಿಜೇಶ್ ಚೌಟ, ನಿಮಗೆ ರಾಷ್ಟ್ರಭಕ್ತಿ, ರಾಷ್ಟ್ರಸೇವೆಯ ಬಗ್ಗೆ ಪ್ರತ್ಯೇಕ ಹೇಳಬೇಕಾಗಿಲ್ಲ. ನೀವೇ ನೈಜ ದೇಶ ಭಕ್ತರು. ಕೊರೊನಾ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ಬಲತುಂಬಿದವರು ವೈದ್ಯರು ಮತ್ತು ಆರೋಗ್ಯ ಸಿಬಂದಿ. ನಿಮ್ಮನ್ನು ಕೊರೊನಾ ವಾರಿಯರ್ಸ್ ಎಂಬುದಾಗಿ ಕೊಂಡಾಡಿದ್ದರು ಎಂದರಲ್ಲದೆ, ಪ್ರಧಾನಿಯನ್ನು ಮೂರನೇ ಬಾರಿಗೆ ಗದ್ದುಗೆ ಏರಿಸುವಲ್ಲಿ ನಿಮ್ಮ ಕೊಡುಗೆ ನೀಡಬೇಕೆಂದು ಮನವಿ ಮಾಡಿದರು.
ಮಂಗಳೂರು
Congress roadshow-ಪಂಪ್’ವೆಲ್’ನಿಂದ ಕಣ್ಣೂರುವರೆಗೆ ಸಾಗಿದ ಕಾಂಗ್ರೆಸ್ ರೋಡ್ ಶೋ
ಮಂಗಳೂರು: ಲೋಕಸಭೆ ಚುನಾವಣೆಯ ಕೊನೆ ದಿನವಾದ ಬುಧವಾರ ಮಂಗಳೂರಿನ ಪಂಪ್’ವೆಲ್’ನಿಂದ ಕಣ್ಣೂರುವರೆಗೆ ರೋಡ್ ಶೋ ಜರಗಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಸದಸ್ಯ ಐವನ್ ಡಿಸೋಜಾ, ಕಾರ್ಪೋರೇಟರ್ ಗಳಾದ ಶಶಿಧರ್ ಹೆಗ್ಡೆ, ಅಶ್ರಫ್, ಕೇಶವ ಮರೋಳಿ, ನವೀನ್ ಡಿಸೋಜಾ, ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ದಾಸ್, ಪ್ರಮುಖರಾದ ಯು.ಟಿ. ಫರ್ಜಾನ್, ರವಿರಾಜ್ ಪೂಜಾರಿ, ರಮಾನಂದ್ ಪೂಜಾರಿ, ಸುನಿಲ್ ಪೂಜಾರಿ, ರಾಕೇಶ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.
ಗರೋಡಿ, ದರ್ಗಾ ಭೇಟಿ:
ರೋಡ್ ಶೋ ನಡುವೆ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಕಂಕನಾಡಿ ಬ್ರಹ್ಮಬೈದರ್ಕಳ ಗರೋಡಿ, ಅಡ್ಯಾರ್ ಕಣ್ಣೂರು ಶೇಖ್ ಯೂಸುಫ್ ಸಿದ್ದೀಕ್ ದರ್ಗಾ ಶರೀಫ್’ಗೆ ಭೇಟಿ ನೀಡಿದರು.
ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಬುಧವಾರ ಸಂಜೆ ಉರ್ವ, ಬಂದರು ಪ್ರದೇಶದಲ್ಲಿ ರೋಡ್ ಶೋ ನಡೆಸಿ, ಮತ ಯಾಚಿಸಿದರು.
ತೆರೆದ ವಾಹನದ ಮುಂಭಾಗದಿಂದ ಸಾಗುತ್ತಿದ್ದ ಕಾರ್ಯಕರ್ತರು, ಘೋಷಣೆಗಳನ್ನು ಕೂಗುತ್ತಾ ಸಾಗಿದರು. ನಾಸಿಕ್ ಬ್ಯಾಂಡ್ ಸದ್ದು ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿತು.
-
ಸಾಮಾಜಿಕ ಮಾಧ್ಯಮ2 days ago
Hasana sex tape : ಚುನಾವಣೆ ಹೊಸ್ತಿಲಲ್ಲಿ ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್ ಡ್ರೈವ್ ಸೌಂಡ್ ! ಅಸಲಿಯ / ನಕಲಿಯ ತೀವ್ರ ಚರ್ಚೆ
-
ದಕ್ಷಿಣ ಕನ್ನಡ2 days ago
Student harrased in bus ಉಪ್ಪಿನಂಗಡಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿದ್ಯಾರ್ಥಿನಿಗೆ ಜತೆ ಸಹ ಪ್ರಯಾಣಿಕನಿಂದ ಕಿರುಕುಳ – ಯುವತಿ ವ್ಯಗ್ರಗೊಳ್ಳುತ್ತಾಳೆ ಕಿಟಕಿಯಿಂದ ಹಾರಿ ಆರೋಪಿ ಪರಾರಿ – ಮುಂದೇನಾಯಿತು ?
-
ಬಿಗ್ ನ್ಯೂಸ್17 hours ago
Hasana Sex Tape: ಹಾಸನ ಸಂಸದ ಪ್ರಜ್ವಲ್ ರೇವಣ್ಣರವರದೆಂದು ಬಿಂಬಿಸಿ ಕೊಳಕು, ಮಾರ್ಫ್ ಮಾಡಿದ ವೀಡಿಯೊಗಳು ಆನ್ಲೈನ್ನಲ್ಲಿ ವ್ಯಾಪಕವಾಗಿ ಪ್ರಸಾರ : ಚುನಾವಣಾ ಏಜೆಂಟ್ ರಿಂದ ಠಾಣೆಗೆ ದೂರು
-
ಬಿಗ್ ನ್ಯೂಸ್16 hours ago
ಕುಟುಂಬ ಸಮೇತ ಮತ ಚಲಾಯಿಸಲು ಪದ್ಮರಾಜ್ ಬಂದಾಗ ಬಿಜೆಪಿ ಕಾರ್ಯಕರ್ತನಿಂದ ಗೂಂಡಾಗಿರಿ – ಪೊಲೀಸ್ ಅಧಿಕಾರಿಯನ್ನು ತಳ್ಳಾಡಿ ಪುಂಡಾಟ : ಮಾಧ್ಯಮದವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ
-
ನಿಧನ ವಾರ್ತೆ2 days ago
Bhagavata Subramanya Dhareshwara-ಹಾಡು ನಿಲ್ಲಿಸಿದ ಬಡಗುತಿಟ್ಟಿನ ಗಾನ ಕೋಗಿಲೆ – ಯಕ್ಷಗಾನದ ಹಿರಿಯ ಭಾಗವತ ಸುಬ್ರಮಣ್ಯ ಧಾರೇಶ್ವರ ಇನ್ನಿಲ್ಲ
-
ಸ್ಥಳೀಯ2 days ago
Mithun Rai-ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಮೂಡುಬಿದಿರೆ ಬಿಜೆಪಿ ಶಾಸಕರ ಪ್ರಾಮಾಣಿಕ ಪ್ರಯತ್ನ – ಮಿಥುನ್ ರೈ ಶಾಕಿಂಗ್ ಹೇಳಿಕೆ
-
ಮಂಗಳೂರು2 days ago
Janardhana Poojary-ಹಿಂದುತ್ವದ ಅಮಲಿನಲ್ಲಿ ಹಿಂದುಳಿದ ವರ್ಗದ ಯುವಕರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಮೇಲ್ವರ್ಗದವರು ಅಧಿಕಾರ ನಡೆಸುತ್ತಿದ್ದಾರೆ- ಇದಕ್ಕೆಲ್ಲ ತಿಲಾಂಜಲಿ ನೀಡುವ ಕೆಲಸ ಪದ್ಮರಾಜ್ ಆರ್ ಪೂಜಾರಿಯನ್ನು ಗೆಲ್ಲಿಸುವ ಮೂಲಕ ಆಗಬೇಕಿದೆ :ಜನಾರ್ದನ ಪೂಜಾರಿ
-
ಅಪರಾಧ1 day ago
Bantwal-ಬಂಟ್ವಾಳ : ಬಾಲಕಿಯೊಂದಿಗೆ ಅನುಚಿತ ವರ್ತನೆ – ಯುವಕನ ವಿರುದ್ಧ ಪ್ರಕರಣ ದಾಖಲು