ಪುತ್ತೂರು
ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ 64 ವರ್ಷ : ಜ.14ರಂದು ಮಾಣಿ ಶಾಖೆ ಶುಭಾರಂಭ
ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ 64 ವರ್ಷಗಳ ಸುದೀರ್ಘ ಸೇವೆಯನ್ನು ನೀಡುತ್ತಿದೆ. ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮಾಣಿ ಶಾಖೆ ಆರಂಭಗೊಳ್ಳಲಿದ್ದು, ಜ.14ರಂದು ಲೋಕಾರ್ಪಣೆ ಕಾರ್ಯಕ್ರಮ ಬೆಳಗ್ಗೆ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಜನಾರ್ದನ ಮೂಲ್ಯ ಹೇಳಿದರು.
ಕುಂಭಶ್ರೀ ಸಹಕಾರ ಭವನವನ್ನು ಸುಮಾರು 1.60 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಸಂಘದ ಶಾಖಾ ಕಚೇರಿ ಹಾಗೂ ವಾಣಿಜ್ಯ ಕೊಠಡಿಗಳು ಇದರಲ್ಲಿವೆ. 1958 ನೇ ವರ್ಷದಲ್ಲಿ ಗ್ರಾಮೀಣ ಕುಂಬಾರಿಕೆ ಮತ್ತು ಗುಡಿ ಕೈಗಾರಿಕೆಯ ಅಭಿವೃದ್ಧಿಗಾಗಿ ಗ್ರಾಮೀಣ ಕುಂಬಾರ ಕುಶಲಕರ್ಮಿಗಳನ್ನು ಸದಸ್ಯರನ್ನಾಗಿಸಿ, ಪುತ್ತೂರು ತಾಲೂಕಿನ ಅಲಯಡ್ಕ ಮತ್ತು ಮಾಡೂರು ಗ್ರಾಮಗಳಿಗೆ ಕಾರ್ಯ ವ್ಯಾಪ್ತಿಯನ್ನು ಹೊಂದಿ, ಅಂದಿನ ಮದ್ರಾಸ್ ಸರಕಾರದಡಿಯಲ್ಲಿ ರಚಿತವಾದ ಸಹಕಾರ ಸಂಘವು ಇಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು ಜಿಲ್ಲಾ ಕಾರ್ಯ ವ್ಯಾಪ್ತಿಯನ್ನು ಹೊಂದಿದೆ ಸದಸ್ಯರ ಅನುಕೂಲಕ್ಕಾಗಿ 13 ಕಡೆಗಳಲ್ಲಿ ಶಾಖೆಗಳಿಂದ ಬ್ಯಾಂಕಿAಗ್ ಸೇವೆ ಮತ್ತು ಮಾರಾಟ ಮಳಿಗೆಗಳನ್ನು ಹೊಂದಿದೆ. ಅರಿಯಡ್ಕ ಗ್ರಾಮದಲ್ಲಿ ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರದ ಮುಖಾಂತರ ತನ್ನ ಸದಸ್ಯರಿಗೆ ಸಹಾಯವನ್ನು ನೀಡುತ್ತಿರುವ ರಾಜ್ಯದ ಏಕೈಕ ಸಹಕಾರ ಸಂಘವಾಗಿರುತ್ತದೆ ಎಂದು ಗುರುವಾರ ಪುತ್ತೂರು ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಆತ್ಮನಿರ್ಭರ ಭಾರತದ ದೃಷ್ಟಿಕೋನವನ್ನಿಟ್ಟುಕೊಂಡು, ದ.ಕ ಜಿಲ್ಲೆಯಲ್ಲಿಯೇ ಗ್ರಾಮೀಣ ಗುಡಿ ಕೈಗಾರಿಕಾ ಉತ್ಪನ್ನಗಳನ್ನು ಖರೀದಿಸಿ ಮಾರಾಟ ಮಾಡುವ ಏಕೈಕ ಸಹಕಾರ ಸಂಘವಾಗಿರುತ್ತದೆ. ಸಹಕಾರ ಸಂಘದ ಕೇಂದ್ರ ಕಚೇರಿಯು ಪುತ್ತೂರಿನ ಹೃದಯ ಭಾಗದಲ್ಲಿ ಇದ್ದು, ಕೌಡಿಚ್ಚಾರು, ಬೆಳ್ಳಾರೆ, ಗುರುವಾಯನಕೆರೆ, ಮಾಣಿ, ವಿಟ್ಲ, ಕುಡ್ತಮುಗೇರು, ಉಪ್ಪಿನಂಗಡಿ, ಬಿ. ಸಿ. ರೋಡ್, ಮೆಲ್ಕಾರು, ಬೆಳ್ತಂಗಡಿ, ಸಿದ್ದಕಟ್ಟೆ, ಮುಡಿಪು, ಫರಂಗಿಪೇಟೆ ಕಡೆಗಳಲ್ಲಿ ಒಟ್ಟು 14 ಶಾಖೆಗಳ ಮುಖಾಂತರ ಸದಸ್ಯರಿಗೆ ಸೇವೆ ನೀಡುತ್ತಾ ಬಂದಿದೆ. ಪ್ರಸಕ್ತ 28,266 ಸದಸ್ಯ ಬಲವನ್ನು ಹೊಂದಿದೆ ಎಂದರು.
ಬೆಳಗ್ಗೆ 10.30ಕ್ಕೆ ನಡೆಯುವ ಸಮಾರಂಭದಲ್ಲಿ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ನಿರ್ದೇಶಕ ಮಂಜಪ್ಪ ಅವರು ಕುಂಭಶ್ರೀ ಸಹಕಾರ ಭವನ ಲೋಕಾರ್ಫಣೆ ಮಾಡಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಮಾರಾಟ ಮಳಿಗೆ ಉದ್ಘಾಟಿಸಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಗಣಕಯಂತ್ರವನ್ನು, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಅವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಭಾಸ್ಕರ ಎಂ. ಪೆರುವಾಯಿ ಅಧ್ಯಕ್ಷತೆ ವಹಿಸಲಿದ್ದು, ಶಾಸಕರಾದ ಯು.ಟಿ. ಖಾದರ್, ಭರತ್ ವೈ. ಶೆಟ್ಟಿ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ.ವಿ., ಎಸ್.ಸಿ.ಡಿ.ಸಿ.ಸಿ. ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು, ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಎಂ.ಪೆರುವಾಯಿ, ಉಪಾಧ್ಯಕ್ಷ ದಾಮೋದರ ವಿ., ನಿರ್ದೇಶಕ ಗಣೇಶ್ ಪಿ. ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ
Student harrased in bus ಉಪ್ಪಿನಂಗಡಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿದ್ಯಾರ್ಥಿನಿಗೆ ಜತೆ ಸಹ ಪ್ರಯಾಣಿಕನಿಂದ ಕಿರುಕುಳ – ಯುವತಿ ವ್ಯಗ್ರಗೊಳ್ಳುತ್ತಾಳೆ ಕಿಟಕಿಯಿಂದ ಹಾರಿ ಆರೋಪಿ ಪರಾರಿ – ಮುಂದೇನಾಯಿತು ?
ಉಪ್ಪಿನಂಗಡಿ : ಏ 25: ಸ್ಲೀಪರ್ ಕೋಚ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಅನ್ಯಕೋಮಿನ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಲು ಮುಂದಾದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ನ ಕಿಟಕಿಯಿಂದ ಹಾರಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮೂಲತಃ ಬಂಟ್ವಾಳ ತಾಲೂಕಿನ ಫರಂಗಿಪೇಟೆ ನಿವಾಸಿಯಾಗಿರುವ ವಿದ್ಯಾರ್ಥಿನಿಯು ಬೆಂಗಳೂರಿನಲ್ಲಿ ಫ್ಯಾಶನ್ ಡಿಸೈನಿಂಗ್ ಕಲಿಯುತ್ತಿದ್ದು, ಊರಿಗೆ ಹೋಗುವ ಸಲುವಾಗಿ ಮಂಗಳವಾರ ರಾತ್ರಿ ಬೆಂಗಳೂರಿನಿಂದ ಖಾಸಗಿ ಬಸ್ನಲ್ಲಿ (ಕೆಎ-51 ಎಡಿ-7116 ನೇ ನೋಂದಣಿಯ ಬಸ್ಸಿನಲ್ಲಿ ) ಪ್ರಯಾಣಿಸುತ್ತಿದ್ದಳು. ಬಸ್ ಸಕಲೇಶಪುರ ಕಳೆದು ಬೆಳಿಗ್ಗಿನ ಜಾವ ಗುಂಡ್ಯ ಬಳಿ ತಲುಪುತ್ತಿದ್ದಂತೆ ಆರೋಪಿ ಮಲಗಿದ್ದ ವಿದ್ಯಾರ್ಥಿನಿಯ ಮೈ ಮೇಲೆ ಕೈ ಹಾಕಿದ್ದಾನೆ. ಬಳಿಕ ಮತ್ತೊಮ್ಮೆ ಇದೇ ಯತ್ನ ನಡೆದಾಗ ಈ ಬಗ್ಗೆ ಬಸ್ನ ಚಾಲಕನ ಗಮನಕ್ಕೆ ತಂದಿದ್ದಾಳೆ.
ಆದರೆ ಚಾಲಕನಿಂದ ಯಾವುದೇ ಸ್ಪಂದನ ದೊರೆಯದಿದ್ದಾಗ, ಕೆಲವು ಸಹ ಪ್ರಯಾಣಿಕರು ರಕ್ಷಣೆಗೆ ಧಾವಿಸಿ ಬಂದು ಆತನನ್ನು ವಿಚಾರಿಸಿದಾಗ ತಾನು, ಬೆಳ್ತಂಗಡಿ ತಾಲೂಕು ನಿವಾಸಿ ಮಹಮ್ಮದ್ ಅಝೀಮ್ ಎಂದು ಪರಿಚಯಿಸಿಕೊಂಡಿದ್ದಾನೆ. ಈ ವೇಳೆ ದಾರಿ ಮಧ್ಯೆ ಸಿಗುವ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ದೂರು ನೀಡುವುದಾಗಿ ವಿದ್ಯಾರ್ಥಿನಿ ಹೇಳಿದ್ದಾಳೆ. ಇದಾದ ಬಳಿಕ ಚಲಿಸುತ್ತಿದ್ದ ಬಸ್ ವೇಗ ಕಡಿಮೆಯಾಗುತ್ತಿದ್ದಂತೆಯೇ ಕಿಟಕಿಯಿಂದ ಹೊರಗೆ ಹಾರಿದ ಆರೋಪಿಯು ಬಳಿಕ ಅಲ್ಲಿಂದ ಕಣ್ಮರೆಯಾಗಿದ್ದಾನೆ.
ವಿದ್ಯಾರ್ಥಿನಿಯು ಮನೆಗೆ ತಲುಪಿದ ಬಳಿಕ ತನ್ನ ಹೆತ್ತವರೊಂದಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಬಂದು ಲಿಖಿತ ದೂರು ಸಲ್ಲಿಸಿದ್ದಾರೆ. ಆರೋಪಿಯ ವಿರುದ್ದ Ipc ಸೆಕ್ಷನ್ 354,354(A)ಯಡಿ ಪ್ರಕರಣ ದಾಖಲಾಗಿದೆ. ಬಳಿಕ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ.
ಪೊಲೀಸ್ ಪ್ರಕಟನೆ:
ರಾಜಕೀಯ ಲಾಭಕ್ಕಾಗಿ,ಕೆಲವು ಸಾಮಾಜಿಕ ಜಾಲತಾಣಗಳಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಳ್ಳುಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದು ಕಂಡುಬಂದಿದ್ದು, ಇದು ಚುನಾವಣಾ ನೀತಿಸಂಹಿತೆಯ ಉಲ್ಲಂಘನೆಯಾಗಿರುತ್ತದೆ ಹಾಗೂ ಇಂತಹ ಸುಳ್ಳುಸುದ್ದಿಗಳಿಂದ ಸಾಮಾಜಿಕ ಸ್ವಾಸ್ಥ್ಯವನ್ನು ಕೆಡಿಸುವುದರಿಂದ, ಅಂತಹ ಕಿಡಿಗೇಡಿಗಳ ವಿರುದ್ದವೂ ಸೂಕ್ತ ಕಾನುನುಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ
Press Release-ವಿಶೇಷ ಸರ್ಟಿಫಿಕೇಟ್ ಕೋರ್ಸ್ಗಳ ಉದ್ಘಾಟನಾ ಕಾರ್ಯಕ್ರಮದ ಪತ್ರಿಕಾ ಪ್ರಕಟಣೆ
ವಿವೇಕಾನಂದ ಪದವಿಪೂರ್ವ ಕಾಲೇಜು 2024-25ನೇ ಶೈಕ್ಷಣಿಕ ವರ್ಷದಿಂದ ವಿಶೇಷ ಸರ್ಟಿಫಿಕೇಟ್ ಕೋರ್ಸ್ಗಳನ್ನು ಪರಿಚಯಿಸುತ್ತಿದೆ. ಪದವಿಪೂರ್ವ ಶಿಕ್ಷಣ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಈ ವಿನೂತನ ಪ್ರಯೋಗವನ್ನು ನಮ್ಮ ಸಂಸ್ಥೆ ಆರಂಭಿಸುತ್ತಿದ್ದು, ಈ ಕೋರ್ಸ್ಗಳ ಮೂಲಕ ವಿದ್ಯಾರ್ಥಿಗಳಿಗೆ ಶೇರು ವಹಿವಾಟು, Tally, ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಮುಂತಾದ ವಿಷಯಗಳ ಬಗ್ಗೆ ವ್ಯಾವಹಾರಿಕ ಹಾಗೂ ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶವಿದೆ.
ಈ ವಿಶೇಷ ಸರ್ಟಿಫಿಕೇಟ್ ಕೋರ್ಸ್ಗಳ ಉದ್ಘಾಟನಾ ಸಮಾರಂಭವು 24 ಏಪ್ರಿಲ್ 2024 ನೇ ಬುಧವಾರ 10 ಗಂಟೆಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಇರುವ ನೇತಾಜಿ ಸಭಾಂಗಣದಲ್ಲಿ ಜರುಗಲಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ. ಪಿ. ಇವರು ವಹಿಸಲಿದ್ಧಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ಉದ್ಯಮಿಗಳು ಹಾಗೂ ಅಜೇಯ ವಿಶ್ವಸ್ಥ ಮಂಡಳಿ, ಮೂರ್ಕಜೆ, ವಿಟ್ಲ ಇದರ ಅಧ್ಯಕ್ಷರಾದ ಪಿ. ಸುಬ್ರಾಯ ಪೈ ಇವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೆಲ್ತ್ ವಿಷನ್ ಪುತ್ತೂರು ಹಾಗೂ ಹಾರ್ದಿಕ್ ಹರ್ಬಲ್ಸ್ ಬಂಟ್ವಾಳ ಇದರ ಸಂಸ್ಥಾಪಕರಾದ ಮುರಳೀಧರ ಕೆ. ಇವರು ಭಾಗವಹಿಸಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ಕೆ. ಎನ್. ಸುಬ್ರಹ್ಮಣ್ಯ ಹಾಗೂ ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ ಇವರು ಉಪಸ್ಥಿತಲಿರಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪೋಷಕರು, ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಮುಂಬರುವ ಶೈಕ್ಷಣಿಕ ವರ್ಷದಿಂದ ಈ ಕೋರ್ಸ್ಗಳು ಆರಂಭಗೊಳ್ಳಲಿದ್ದು ಹಲವಾರು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲಿದ್ದಾರೆ.
ಪುತ್ತೂರು
ಕಳೆದ ವರ್ಷ ಶೇ 100 ಫಲಿತಾಂಶ ದಾಖಲಿಸಿದ ವಿದ್ಯಾಮಾತಾ ಅಕಾಡೆಮಿಯಿಂದ KARTET 2024ಕ್ಕೆ ತರಬೇತಿ ಪ್ರಾರಂಭ – ಆನ್ಲೈನ್ ತರಬೇತಿ ಪ್ರಾರಂಭಿಸಿದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ
2023ನೇ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಹೆಗ್ಗಳಿಕೆಯೊಂದಿಗೆ 2024ನೇ ಸಾಲಿನ KARTET ಗೆ ಅರ್ಜಿ ಸಲ್ಲಿಸಿರುವ ಮತ್ತು ಅರ್ಜಿ ಸಲ್ಲಿಸಲು ಉದ್ದೇಶಿಸಿರುವ ಭವಿಷ್ಯದ ಸರಕಾರಿ ಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತರಬೇತಿ ಪ್ರಾರಂಭಿಸಿದೆ.
ವಿದ್ಯಾಮಾತಾ ಅಕಾಡೆಮಿಯು
ಈ ವರ್ಷವೂ ಕೂಡ ಆನ್ ಲೈನ್ ತರಬೇತಿಯನ್ನು ಒದಗಿಸಲಿದ್ದು ದಿನಾಂಕ 25.04.2024ರಿಂದ 2 ತಿಂಗಳ ಕಾಲ ಪ್ರತಿನಿತ್ಯ ರಾತ್ರಿ 7ರಿಂದ 8ರ ವರೆಗೆ ಆನ್ ಲೈನ್ ತರಗತಿಗಳು ನಡೆಯಲಿದ್ದು, ಈ ಅರ್ಹತಾ ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯನ್ನು ಈ ಕೆಳಗಡೆ ನೀಡಿರುವ ದೂರವಾಣಿ ಸಂಖ್ಯೆ ಅಥವಾ ಖುದ್ದಾಗಿ ಸಂಸ್ಥೆಯ ಸುಳ್ಯ ವಿದ್ಯಾಮಾತಾ ಅಕಾಡೆಮಿಯ ಕಛೇರಿ ಮತ್ತು ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯ ಕಛೇರಿಯನ್ನು ಹಾಗೂ ಕಾರ್ಕಳದ ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಲು ಅವಕಾಶ ಕಲ್ಪಿಸಲಾಗಿದೆ.
ಶಿಕ್ಷಕರ ಅರ್ಹತಾ ಪರೀಕ್ಷೆಯ ಮಾನದಂಡಗಳು:
ಅರ್ಜಿ ಸಲ್ಲಿಸಲು 15.05.2024 ಕೊನೆಯ ದಿನಾಂಕವಾಗಿರುತ್ತದೆ
ವಿದ್ಯಾರ್ಹತೆ:
PUC D.Ed, BE. BEd, BA.B.Ed, BSc.B.Ed
B.com B.Ed
ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:
ಫೋಟೋ, ಅಂಕಪಟ್ಟಿಗಳು,ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು 30.06.2024ರಂದು ನಡೆಯಲಿದೆ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ವಿದ್ಯಾಮಾತಾ ಅಕಾಡೆಮಿ
ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201
PH: 9148935808 / 96204 68869
*ಸುಳ್ಯ ಶಾಖೆ:* ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ 574239
*PH: 9448527606*
*ಕಾರ್ಕಳ ಶಾಖೆ:*
ಒಂದನೆಯ ಮಹಡಿ, MCC ಬ್ಯಾಂಕ್ ಮೇಲ್ಗಡೆ, ತಾಲೂಕು ಕಚೇರಿ ರಸ್ತೆ, (ಬಂಡಿ ಮಠ ಬಸ್ ಸ್ಟ್ಯಾಂಡ್ ಎದುರು ರಸ್ತೆ ) ಕಾರ್ಕಳ
PH:- 8310484380 / 9740564044 / 9620468869
-
ಪುತ್ತೂರು2 days ago
ಅರುಣ್ ಪುತ್ತಿಲ ಮನೆ ಬಳಿ ಅಣ್ಣಾಮಲೈಗೆ ಅದ್ದೂರಿ ಸ್ವಾಗತ
-
ದಕ್ಷಿಣ ಕನ್ನಡ2 days ago
ವಿಟ್ಲ : ದುರಸ್ತಿಗೆ ಬಾವಿಗಿಳಿದ ಇಬ್ಬರು ಅಮ್ಲಜನಕ ಕೊರತೆಯಿಂದ ಮೃತ್ಯು
-
ಬಿಗ್ ನ್ಯೂಸ್18 hours ago
NOTAForSoujanyaCase : ಸೌಜನ್ಯ ಪ್ರಕರಣ : ಟ್ವಿಟರ್ ಟ್ರೆಂಡಿಂಗಲ್ಲಿ 3ನೇ ಸ್ಥಾನ ಪಡೆದ ನೋಟಾ ಅಭಿಯಾನ
-
ನಿಧನ ವಾರ್ತೆ1 day ago
Run over-ತಂದೆಯಿಂದಲೇ ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣ
-
ಮಂಗಳೂರು2 days ago
Heat wave-ರಾಜ್ಯದಲ್ಲಿ ಇನ್ನೂ ಐದು ದಿನ ಉಷ್ಣ ಮಾರುತ ದಾಳಿ; ಕರಾವಳಿಯಲ್ಲಿ ಮುಂದುವರಿದ ಪ್ರಖರ ಬಿಸಿಲು
-
ದಕ್ಷಿಣ ಕನ್ನಡ1 day ago
ಬೆಲೆಯೆರಿಕೆ ಗಗನಕ್ಕೆರಿದ ಸಂದರ್ಭ ಸಿದ್ದರಾಮಯ್ಯ ಸರಕಾರ ಗ್ಯಾರಂಟಿ ಮೂಲಕ ಮಹಿಳೆಯರ ನೆರವಿಗೆ ನಿಂತಿದೆ : ಅನಿತಾ ಹೇಮನಾಥ ಶೆಟ್ಟಿ
-
Uncategorized2 days ago
ಮಠಂತಬೆಟ್ಟು ಗುಲಾಬಿ ಅನಂತ ರೈ ನಿಧನ
-
ಅಪರಾಧ23 hours ago
Online acquaintance-ಆನ್ ಲೈನ್ ಪರಿಚಿತ ಗೆಳೆಯ ಮಹಿಳೆಯ ಜೀವಾಂತ್ಯಗೊಳಿಸಿದ