Connect with us

ರಾಷ್ಟ್ರೀಯ

ಕೇರಳದ : ಅಧ್ಯಯನ ನೆಪದಲ್ಲಿ ಸರಕಾರಿ ಶಿಕ್ಷಣ ಸಂಸ್ಥೆಗಳ  ಲ್ಯಾಬ್‌ ನಲ್ಲಿ ಶಸ್ತ್ರಾಸ್ತ್ರಗಳ ತಯಾರಿ – ಪೊಲೀಸ್‌ ವರದಿ   

Ad Widget

Arm manufacturing training ಕಾಸರಗೋಡು:  ಕೇರಳದ ಕೆಲವು ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನದ ನೆಪದಲ್ಲಿ ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗುತ್ತಿದೆ ಎಂದು ಪೊಲೀಸರ ವರದಿ ತಿಳಿಸಿದೆ.   ಪಠ್ಯಕ್ರಮದ ಪ್ರಾಯೋಗಿಕ ಅನುಭವದ ಭಾಗವಾಗಿರುವ ಲ್ಯಾಬ್ ಚಟುವಟಿಕೆಗಳ ಸಂದರ್ಭ ಮಾಡಲಾಗುತ್ತಿದೆಎಂಬ ಪೊಲೀಸರ ವರದಿಯ ಅಧಾರದಲ್ಲಿ ರಾಜ್ಯದ  ಎಡಿಜಿಪಿ ಉನ್ನತ ಶಿಕ್ಷಣ ಇಲಾಖೆಗೆ ಪತ್ರ ನೀಡಿದ್ದಾರೆ.

Ad Widget

Ad Widget

Ad Widget

Ad Widget

 ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಲ್ಯಾಬ್ ಚಟುವಟಿಕೆಗಳ ಮೇಲೆ ಸೂಕ್ತ  ಕಣ್ಗಾವಲಿರಿಸಿ  ನಿಗಾವಹಿಸುವಂತೆ ತಾಂತ್ರಿಕ ಶಿಕ್ಷಣ ನಿರ್ದೇಶಕರು  ಶಿಕ್ಷನ ಸಂಸ್ಥೆಗಳ ಮುಖ್ಯಸ್ಥರಿಗೆ ಸುತ್ತೋಲೆ ಹೊರಡಿಸಿದ್ದಾರೆ.ಶಿಕ್ಷಕರು ಹಾಗೂ ಲ್ಯಾಬ್ ಸಿಬ್ಬಂದಿ ವಿದ್ಯಾರ್ಥಿಗಳ ಲ್ಯಾಬ್ ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಸುತ್ತೋಲೆಯಲ್ಲಿ  ಸ್ಪಷ್ಟ ಪಡಿಸಲಾಗಿದೆ.ಆದರೆ ಶಸ್ತ್ರಾಸ್ತ್ರ ತಯಾರಿ ಎಲ್ಲಿ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ತಾಂತ್ರಿಕ ಶಿಕ್ಷಣ ನಿರ್ದೇಶಕ ಬೈಜು ಭಾಯ್ ತಿಳಿಸಿದ್ದಾರೆ.ಸರಕಾರದ ಆದೇಶವನ್ನು ಪಾಲಿಸಿ ಸುತ್ತೋಲೆ ಹೊರಡಿಸಲಾಗಿದೆ‌ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

Ad Widget

Ad Widget

ಇದೇ ವೇಳೆ  ತಾಂತ್ರಿಕ ಶಿಕ್ಷಣ ಪ್ರಯೋಗಾಲಯಗಳಲ್ಲಿ ಅಧ್ಯಯನದ ಭಾಗವಾಗಿ ನಡೆಯುವ ಪ್ರಾಯೋಗಿಕ ತರಗತಿಗಳು ಶಿಕ್ಷಕರ  ಮೇಲುಸ್ತುವಾರಿಯಲ್ಲಿಯೇ ನಡೆಯಬೇಕೇಂದು  ಎಂದು ಗುಪ್ತಚರ ಇಲಾಖೆ ಎಡಿಜಿಪಿ ಟಿ.ಕೆ.ವಿನೋದ್ ಕುಮಾರ್ ಸರಕಾರಕ್ಕೆ ನೀಡಿರುವ ವರದಿಯಲ್ಲಿ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳು ಲ್ಯಾಬ್ ಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.ಐಟಿಐಗಳಲ್ಲಿ ಶಿಕ್ಷಕರ ಮೇಲ್ವಿಚಾರಣೆಯಿಲ್ಲದೆ ವಿದ್ಯಾರ್ಥಿಗಳು ಆಯುಧಗಳನ್ನು ತಯಾರಿಸುತ್ತಿದ್ದಾರೆ ಎಂಬ ಮಾಧ್ಯಮಗಳ ವರದಿಯ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸಬೇಕು ಎಂದು ವರದಿಯಲ್ಲಿ ತಿಳಿಸಲಾಗಿದೆ.

Ad Widget

Ad Widget

ಕಾಲೇಜು ಪ್ರಿನ್ಸಿಪಾಲರಿಗೂ ಈ ನಿಟ್ಟಿನಲ್ಲಿ ವಿಶೇಷ ಗಮನ ಹರಿಸುವಂತೆ ಸೂಚಿಸಲಾಗಿದೆ.ತಿರುವನಂತಪುರಂ ಧನುವಾಚಪುರಂ ಸರಕಾರಿ ಐಟಿಐನಲ್ಲಿ ಲ್ಯಾಬ್ ಚಟುವಟಿಕೆ ಮರೆಯಲ್ಲಿ ಕೆಲವು ವಿದ್ಯಾರ್ಥಿಗಳು ಆಯುಧಗಳನ್ನು ತಯಾರಿಸಿರುವ ಬಗ್ಗೆ ಈ ಹಿಂದೆಯೇ ದೂರುಗಳು ಬಂದಿದ್ದವು.

Ad Widget

Ad Widget

ಈ ಹಿನ್ನೆಲೆಯಲ್ಲಿ ಪೊಲೀಸ್ ವರದಿ ಹಾಗೂ ನಿರ್ದೇಶಕರ ಸುತ್ತೋಲೆ ಹೊರಡಿಸಲಾಗಿದೆ.ರಾಜ್ಯ ಕೈಗಾರಿಕಾ ತರಬೇತಿ ಇಲಾಖೆಯಡಿ ಐಟಿಐಗಳು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯ ಅಡಿಯಲ್ಲಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳು ಕಾರ್ಯನಿರ್ವಹಿಸುತ್ತಿವೆ.ಈ ಕುರಿತು ಎಡಿಜಿಪಿ ಕೈಗಾರಿಕಾ ತರಬೇತಿ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಗೆ ಎಡಿಜಿಪಿ ಪತ್ರ ಕಳುಹಿಸಿದ್ದಾರೆ.ಡಿ.21ರಂದು ಎಡಿಜಿಪಿ ಈ ಕುರಿತು ವರದಿ ಸಲ್ಲಿಸಿದ್ದು ಅದನ್ನು ಸರಕಾರಕ್ಕೆ ಹಸ್ತಾಂತರಿಸಲಾಗಿತ್ತು.ಈ ಹಿನ್ನೆಲೆಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ.

Click to comment

Leave a Reply

ರಾಷ್ಟ್ರೀಯ

ಅಪಾರ್ಟ್ ಮೆಂಟ್ ನ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಯುಟ್ಯೂಬರ್ ಜೋಡಿ

Ad Widget

ಹೊಸದಿಲ್ಲಿ ಎ.14: ಸೋಶಿಯಲ್ ಮಿಡಿಯಾ ಯೂಟ್ಯೂಬರ್ ಮೂಲಕ ಟ್ರೆಂಡಿಗ್ ನಲ್ಲಿದ್ದ ಜೋಡಿಯೊಂದು ಅಪಾರ್ಟ್ ಮೆಂಟ್ ನ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಹರಿಯಾಣದ ಬಹದ್ದೂರ್‌ಗಢದ ರುಹಿಲ್ ರೆಸಿಡೆನ್ಸಿಯಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಮೃತರನ್ನು ಗರ್ವಿತ್ (25) ಮತ್ತು ನಂದಿನಿ (22) ಎಂದು ಗುರುತಿಸಲಾಗಿದೆ. ಮೃತ ಜೋಡಿ ತಮ್ಮ ಯೂಟ್ಯೂಬ್ ಚಾನೆಲ್ ನಿರ್ವಹಣೆ ಮತ್ತು ಕಿರುಚಿತ್ರಗಳನ್ನು ರಚಿಸುವಲ್ಲಿ ಪ್ರಸಿದ್ಧರಾಗಿದ್ದರು. ಇತ್ತೀಚೆಗೆ, ಅವರು ತಮ್ಮ ತಂಡದೊಂದಿಗೆ ಡೆಹ್ರಾಡೂನ್‌ನಿಂದ ಬಹದ್ದೂರ್‌ಗಢಕ್ಕೆ ಸ್ಥಳಾಂತರಗೊಂಡಿದ್ದರು.

Ad Widget

Ad Widget

ದಂಪತಿಗಳು ಕಟ್ಟಡದ ಏಳನೇ ಮಹಡಿಯಲ್ಲಿ ಅಪಾರ್ಟ್ಮೆಂಟ್ ಅನ್ನು ಬಾಡಿಗೆಗೆ ಪಡೆದಿದ್ದರು. ಅವರು ತಮ್ಮ ತಂಡದ ಸರಿಸುಮಾರು ಐದು ಮಂದಿಯೊಂದಿಗೆ ವಾಸಿಸುತ್ತಿದ್ದರು.

Ad Widget

Ad Widget
Continue Reading

ಮಂಗಳೂರು

Padmaraj R ಜಿಲ್ಲೆಯ ಪ್ರಭಾವಿ ಬಿಲ್ಲವ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಶಿಷ್ಯ  ಪದ್ಮರಾಜ್‌ ರಾಮಯ್ಯ ಗೆ ಒಲಿದ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ –   

Ad Widget

ಪುತ್ತೂರು:   ಕಾಂಗ್ರೆಸ್‌ ಪಕ್ಷ ರಾಜ್ಯದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮಂಗಳೂರು ಲೋಕಸಭಾ ಕ್ಷೇತ್ರದಿಂದ ಜಿಲ್ಲೆಯ ಪ್ರಭಾವಿ ಬಿಲ್ಲವ ನಾಯಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜನಾರ್ಧನ ಪೂಜಾರಿಯರ ಶಿಷ್ಯ , ಕಳೆದ 25 ವರ್ಷಗಳಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯವಾದಿ ಪದ್ಮರಾಜ್‌ ರಾಮಯ್ಯನವರಿಗೆ ಟಿಕೆಟ್‌ ನೀಡಲಾಗಿದೆ. ನೋಟರಿ ವಕೀಲರಾದ ಇವರು ತನ್ನ ನೋಟರಿ ಸಹಿಯನ್ನು ಬಡವರು, ವಿದ್ಯಾರ್ಥಿಗಳ ದೃಢೀಕರಣಕ್ಕೆ ಉಚಿತವಾಗಿ ನೀಡುವ ಮೂಲಕ ಸಮಾಜಕ್ಕೊಬ್ಬ ಮಾದರಿ ವಕೀಲರಾಗಿದ್ದಾರೆ.

Ad Widget

Ad Widget

Ad Widget

Ad Widget

ಪದ್ಮರಾಜ್‌ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರುನಲ್ಲಿ ವಾಸ್ತವ್ಯವಿದ್ದ  ಮಂಗಳೂರು ಮೂಲದ ಎಚ್.ಎಂ. ರಾಮಯ್ಯ ಪೂಜಾರಿ ಮತ್ತು ಲಲಿತಾ ದಂಪತಿಯ ದ್ವಿತೀಯ ಪುತ್ರ. ಅವರು ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣವನ್ನು ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಗಿಸಿ ಮುಂದೆ ಬಿ.ಎ. ಪದವಿಯನ್ನು ಬೆಳ್ತಂಗಡಿಯ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಹಾಗೂ ಕಾನೂನು ಪದವಿಯನ್ನು ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಮುಗಿಸಿದರು

Ad Widget

Ad Widget

 1995ರಿಂದ ಕಾನೂನು ವೃತ್ತಿಯ ಚೊಚ್ಚಲ ಅಭ್ಯಾಸವನ್ನು ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿಯವರೊಂದಿಗೆ ಪ್ರಾರಂಭಿಸಿದ ಇವರು ನಾಲ್ಕು ವರ್ಷಗಳ ಬಳಿಕ ಮಂಗಳೂರಿನ ಬಳ್ಳಾಲ್‌ಬಾಗ್‌ನಲ್ಲಿ ಸ್ವಂತ ಕಚೇರಿ ಪ್ರಾರಂಭಿಸಿದರು. ವೃತ್ತಿ ಜೀವನದ ಆರಂಭದ ಸಮಯದಲ್ಲಿ ಹಿರಿಯ ವಕೀಲರಾದ ಪಿ.ಗಂಗಾಧ‌ರ್ ಅವರ ಸಲಹೆಯಂತೆ ಆಗಿನ ಬಿಲ್ಲವರ ಯೂನಿಯನ್ ಸದಸ್ಯರಾದರು. ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಳ್ಳದಿದ್ದರೂ ಬಿ.ಜನಾರ್ದನ ಪೂಜಾರಿಯವರು ಸ್ಪರ್ಧಿಸಿದ ಎಲ್ಲಾ ಚುನಾವಣೆ ಸಂದರ್ಭದಲ್ಲೂ ಅವರಿಗಾಗಿ ದುಡಿದಿದ್ದಾರೆ.

Ad Widget

Ad Widget

ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಮಾಜಸೇವೆಯನ್ನು ಮೈಗೂಡಿಸಿಕೊಂಡಿರುವ ಪದ್ಮರಾಜ್‌ ಅವರಿಗೆ  ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಳದ ಬಗ್ಗೆ ಅಪಾರ ಶ್ರದ್ಧೆ, ಭಕ್ತಿ. ಬಿ.ಜನಾರ್ದನ ಪೂಜಾರಿಯವರ   ಮಾರ್ಗದರ್ಶನದಲ್ಲಿಪದ್ಮರಾಜ್‌ ರವರು   ಮಂಗಳೂರಿನ ನವರಾತ್ರಿ ಉತ್ಸವ ವಿಶ್ವ ಪ್ರಸಿದ್ಧಿ ಪಡೆಯಲು ಶ್ರಮ ಪಟ್ಟಿದ್ದಾರೆ.

Ad Widget

Ad Widget

ಕೊರೊನಾ ಮಹಾಮಾರಿಯಿಂದಾಗಿ 40 ದಿನಗಳ ಲಾಕ್‌ಡೌನ್ ಉಂಟಾದ ಸಂದರ್ಭ ಬಿ.ಜನಾರ್ದನ ಪೂಜಾರಿಯವರ  sUcneyMte  ದಿನಂಪ್ರತಿ ದೇವಸ್ಥಾನದ ವತಿಯಿಂದ ಸುಮಾರು 1000 ಬಡವರು, ನಿರಾಶ್ರಿತರಿಗೆ ಹಾಗೂ ವಲಸೆ ಕೂಲಿ ಕಾರ್ಮಿಕರಿಗೆ ಅನ್ನದಾನ ನಡೆಯುತ್ತಿತ್ತು. ಈ ಸಂದರ್ಭ ಪದ್ಮರಾಜ್ ಅವರೇ ಖುದ್ದಾಗಿ ಸೇವಾದಳದವರೊಂದಿಗೆ ವಿವಿಧ ಪ್ರದೇಶಗಳಿಗೆ ತೆರಳಿ ಅನ್ನದಾನ ವಿತರಣೆಯಲ್ಲಿ ಭಾಗಿಯಾಗುತ್ತಿದ್ದರು

ಪದ್ಮರಾಜ್ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ ದೇವಸ್ಥಾನದ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ 300 ಕ್ವಿಂಟಾಲ್‌ ಅಕ್ಕಿದಾನ ಮಾಡಲಾಗಿತ್ತು. ಎರಡನೇ ಲಾಕ್‌ಡೌನ್‌ ಸಂದರ್ಭದಲ್ಲಿ ತನ್ನ ಮುಂದಾಳತ್ವದ ಗುರು ಬೆಳದಿಂಗಳು ಪೌಂಡೇಶನ್ ಮೂಲಕ ಸಹಸ್ರಾರು ನೊಂದವರಿಗೆ ದಿನಸಿ, ಆಹಾರ ಸಾಮಾಗ್ರಿ ತಲುಪಿಸಿದರು. ಗುರು ಬೆಳದಿಂಗಳು ಪೌಂಡೇಶನ್ ಅಶಕ್ತರ ಕಣ್ಣೀರು ಒರೆಸಲು ಪದ್ಮರಾಜ್‌ ಆರಂಭಿಸಿದ ಪೌಂಡೇಷನ್.‌ ಇದರ ಮೂಲಕ ಸಾವಿರಾರು ನೊಂದವರಿಗೆ ಸಹಾಯ ಮಾಡಲಾಗಿದೆ.

ಯುವವಾಹಿನಿ ಕೇಂದ್ರ ಸಮಿತಿಯ ಗೌರವ ಸಲಹೆಗಾರರು, ಜೆ.ಸಿ. ಪ್ರತಿಷ್ಠಾನ ದ.ಕ. ಜಿಲ್ಲಾ ಗೌರವ ಸಂಚಾಲಕ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಂಘ ಸಂಸ್ಥೆಗಳಿಂದ ಇವರ ಸಮಾಜಮುಖಿ ಸೇವೆಗೆ ಗೌರವ ಸಂದಿದೆ. ನಮ್ಮ ಕುಡ್ಲ ವಾಹಿನಿ ನೀಡುವ ಪ್ರಶಸ್ತಿಗೂ ಭಾಜನರಾಗಿದ್ದಾರೆ.

ಪದ್ಮರಾಜ್‌ರವರು ಬ್ರಹ್ಮಶ್ರೀ ನಾರಾಯಣ  ಗುರುಗಳ ತತ್ವ ಅದರ್ಶಗಳನ್ನು ಮೈಗೂಡಿಸಿಕೊಂಡವರು. 2 ವರ್ಷಗಳ ಹಿಂದೆ  ಗಣ ರಾಜ್ಯೋತ್ಸವದ ಸಂದರ್ಭ ಕೇಂದ್ರ ಸರಕಾರ ನಾರಾಯಣ ಗುರುಗಳ ಟ್ಯಾಬ್ಲೊ ಪ್ರದರ್ಶನವನ್ನು  ನಿರಾಕರಿಸಿದಾಗ ಅದರ ವಿರುದ್ಧ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿ ದ್ದವರು. ಇವರ ಮುಂದಾಳತ್ವದಲ್ಲಿ ಗುರುಗಳಿಗೆ ಆದ ಅವಮಾನದ ಕುರಿತು ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆದಿತ್ತು.   ಹಿಂದಿನ ರಾಜ್ಯ ಸರಕಾರದ ಅವಧಿಯಲ್ಲಿ  10ನೇ ತರಗತಿಯ ಪಠ್ಯಪುಸ್ತಕದ ಸಮಾಜ ವಿಜ್ಞಾನದಲ್ಲಿ ನಾರಾಯಣ ಗುರುಗಳ ಪಠ್ಯ ಕೈಬಿಟ್ಟದ್ದರ ವಿರುದ್ಧ ಮೊದಲು ಖಂಡನೆ ವ್ಯಕ್ತಪಡಿಸಿ ರಾಜ್ಯಾದ್ಯಂತ ಹೋರಾಟ ಮಾಡುವ ಮೂಲಕ ಗುರುಗಳ ಪಠ್ಯವನ್ನು ಸೇರ್ಪಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದರು.

Continue Reading

ಅಪರಾಧ

Mother Kills Own Daughter: ಮನೆಯಲ್ಲಿ ಬಾಯ್‌ ಫ್ರೆಂಡ್‌ ಜತೆ ಮಗಳ ನೋಡಿ ತಾಯಿ ಕೆಂಡಮಂಡಲ – ಕತ್ತು ಹಿಸುಕಿ ಹತ್ಯೆ

Ad Widget

ಹೈದರಾಬಾದ್‌:  ಮನೆಯಲ್ಲಿ ಯಾರೂ ಇಲ್ಲದ ವೇಳೆ, ಮಗಳು ತನ್ನ ಬಾಯ್‌ಫ್ರೆಂಡ್‌ ಜೊತೆ ಮನೆಯೊಳಗಡೆ  ಇರುವುದನ್ನು ಕಂಡು ಕೋಪಗೊಂಡ ತಾಯಿ, ಸ್ವಂತ ಮಗಳನ್ನೆ ಕತ್ತು ಹಿಸುಕಿ ಹತ್ಯೆ ಮಾಡಿದ ಘಟನೆ ಹೈದರಾಬಾದ್‌ನಲ್ಲಿ (Hyderabad) ನಡೆದಿದೆ. 19ರ ಹರೆಯದ ಬಾರ್ಗವಿ ಕೊಲೆಯಾದವಳು.

Ad Widget

Ad Widget

Ad Widget

Ad Widget

ಹೈದರಾಬಾದ್‌ ನ ಇಬ್ರಾಹಿಂಪಟ್ಟಣದಲ್ಲಿ ಕೃತ್ಯ ನಡೆದಿದೆ. ಬಾರ್ಗವಿಯ ತಾಯಿ ಜಂಗಮ್ಮ ಕೊಲೆ ಆರೋಪಿ.  ಭಾರ್ಗವಿಗೆ ಮದುವೆ  ಮಾಡಲು ನಿರ್ಧರಿಸಿದ್ದ, ಜಂಗಮ್ಮ   ಸೂಕ್ತ ವರನ ಅನ್ವೇಷಣೆಯಲ್ಲಿದ್ದರು.  ಆದರೆ ಯುವತಿ  ಸ್ಥಳೀಯ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಇದು ಜಂಗಮ್ಮನಿಗೆ ಇಷ್ಟವಿರಲಿಲ್ಲ. ಆಕೆ ಅವರಿಬ್ಬರ ಪ್ರೀತಿ ಸಂಬಂಧವನ್ನು ವಿರೋಧಿಸಿದ್ದಳು.

Ad Widget

Ad Widget

ಸೋಮವಾರ ಮಧ್ಯಾಹ್ನ  ಜಂಗಮ್ಮ ಗದ್ದೆಯಿಂದ ಊಟಕ್ಕೆಂದು ಮನೆಗೆ ಬಂದಾಗ ಮಗಳ ಗೆಳೆಯ ಮನೆಯಲ್ಲಿದ್ದದ್ದನ್ನು ಕಂಡು  ಕೋಪಗೊಂಡಿದ್ದಾಳೆ.   ಮಗಳಿಗೆ ಬೈಯಲು ಆರಂಭಿಸಿದ್ದಾಳೆ.  ಈ ವೇಳೆ ಯುವಕ  ಮನೆಯಿಂದ  ಓಡಿ ಹೋಗಿದ್ದು, ಯುವತಿಯ ತಮ್ಮನಿಗೆ  ವಿಷಯ ತಿಳಿಸಿದ್ದಾನೆ. ಆಕೆಯ ಸಹೋದರ ಮನೆಗೆ ಬಂದಾಗ ಬಾಗಿಲು ಬೀಗ ಹಾಕಿತ್ತು.  ಕಿಟಕಿಯಿಂದ ನೋಡಿದಾಗ,   ತಾಯಿ  ಅಕ್ಕನ  ಕತ್ತು ಹಿಸುಕಲು ಪ್ರಯತ್ನಿಸುತ್ತಿರುವುದು ಕಾಣಿಸಿದೆ.   

Ad Widget

Ad Widget

 ಹೀಗಾಗಿ ಆತ ಕೋಣೆಯ ಬಾಗಿಲು ಬಿಡಿದಿದ್ದು, ಅಲ್ಲಿಂದ ಹೊರ ಬಂದ ಜಂಗಮ್ಮ ,  ತಾನು ನೋಡಿದಾಗ ಮಗಳು ಕೊರಳಿಗೆ ಸೀರೆಯ ಕುಣಿಕೆ ಹಾಕಿಕೊಂಡಿದ್ದು, ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಸುಳ್ಳು ಕಥೆಯೊಂದನ್ನು ಮಗನಲ್ಲಿ ಹೇಳಿದ್ದಳು.  ಸಂಬಂಧಿಕರು ವೈದ್ಯರನ್ನು ಮನೆಗೆ ಕರೆತಂದು ಪರೀಖ್ಷೆಗೆ ಒಳಪಡಿಸಿದಾಗ, ಭಾರ್ಗವಿ ಸಾವನ್ನಪ್ಪಿರುವುದು ಗೊತ್ತಾಗಿದೆ.   

Ad Widget

Ad Widget

ಕೊಲೆಯಾದ ಯುವತಿಯ ಅಪ್ರಾಪ್ತ ಸಹೋದರ, ತಾನು ಕೊಲೆಯನ್ನು ನೋಡಿರುವುದಾಗಿ  ತಾಯಿಯ ವಿರುದ್ಧ ದೂರು  ನೀಡಿದ್ದು , ಅದರಂತೆ ಪ್ರಕರಣ ದಾಖಲಾಗಿದೆ.  

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading