ಬಂಟ್ವಾಳ
BJP Rally Vehicle | ಬಿಜೆಪಿ ಪ್ರಚಾರ ವಾಹನ ಮತ್ತು ಬೈಕ್ ಅಪಘಾತ – ಬೈಕ್ ಸವಾರ ಮೃತ್ಯು : ಬಂಟ್ವಾಳ ಶಾಸಕರ ಗ್ರಾಮ ವಿಕಾಸ ಯಾತ್ರೆ ಆರಂಭವಾಗಿ 3 ನೇ ದಿನಕ್ಕೆ ಅವಘಡ : ಮೋದಿ ಗುಜರಾತ್ನಲ್ಲಿ ಪ್ರಚಾರ ನಡೆಸಿದ್ದ ಈ ವಾಹನ ಬಂಟ್ವಾಳದಲ್ಲಿ ಗಮನ ಸೆಳೆದಿತ್ತು
ಬಂಟ್ವಾಳ: ಬೈಕ್ ಮತ್ತು ಬಂಟ್ವಾಳ ಬಿಜೆಪಿ ರ್ಯಾಲಿಯ ಪ್ರಚಾರದ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ಕಲ್ಲಡ್ಕದ ನರಹರಿ ಸಮೀಪ ನಡೆದಿದೆ (BJP Rally Vehicle) . ಈ ವಾಹನ ಪ್ರಧಾನಿ ಮೋದಿ ಗುಜರಾತ್ನಲ್ಲಿ ಪ್ರಚಾರ ಕಾರ್ಯ ಕೈಗೊಂಡ ವಾಹನವಾಗಿದೆ.
ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತಕ್ಕೆ ಗುರುವಾಯನಕೆರೆ ಮೂಲದ ವಿಜಿತ್ (35) ಮೃತಪಟ್ಟಿದ್ದಾರೆ ಎನ್ನಲಾಗಿದೆ. ವಿಜಿತ್ ತರಕಾರಿ ನಾರಾಯಣ ಎಂಬವರ ಪುತ್ರ.
ಜ.14 ರಂದು ಆರಂಭವಾದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ನೇತೃತ್ವದ ಗ್ರಾಮ ವಿಕಾಸ ಯಾತ್ರೆಯ ಪ್ರಚಾರದ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದಾರೆ. ಕೆಲ ಕಾಲ ಸಂಚಾರಕ್ಕೆ ತೊಡಕು ಉಂಟಾಯಿತು.
ಜ.14 ರಿಂದ 26ರವರೆಗೆ 13 ದಿನ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದ ಗ್ರಾಮ ವಿಕಾಸ ಯಾತ್ರೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮದಲ್ಲಿ ಸಂಚರಿಸಲಿದೆ. ಯಾತ್ರೆ ಪ್ರಾರಂಭವಾಗಿ 3ನೇ ದಿನದಂದೇ ಪ್ರಚಾರ ವಾಹನ ಅವಘಡ ಸಂಭವಿಸಿದೆ.
ಕಳೆದ ಗುಜರಾತ್ ಚುನಾವಣೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರೋಡ್ ಶೋ ನಡೆಸಿದ್ಧ ವಿಶೇಷವಾಗಿ ವಿನ್ಯಾಸಗೊಳಿಸಿದ ವಾಹನ ಇದೀಗ ಬಂಟ್ವಾಳಕ್ಕೆ ಆಗಮಿಸಿತ್ತು, ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತೃತ್ವದಲ್ಲಿ ನಡೆಯಲಿರುವ ಪಾದಯಾತ್ರೆಯಲ್ಲಿ ಈ ವಾಹನ ಗಮನ ಸೆಳೆಯುತಿತ್ತು. ಇದೀಗ ಅವಘಡ ಸಂಭವಿಸಿದೆ.
ಇದು ತೆಲಂಗಾಣ ಮೂಲದ ಇಸುಝ್ ಕಂಪೆನಿಯ ಎಸ್ ಕ್ಯಾಬ್ ವಾಹನವಾಗಿದ್ದು, ರೋಡ್ ಶೋ ಯಾತ್ರೆಗಳನ್ನು ನಡೆಸುವ ಸಂದರ್ಭ ಹಿಂಬದಿಯಲ್ಲಿ ನಿಂತು ಸಾಗುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಜತೆಗೆ ವಾಹನದಲ್ಲಿ ಲೈಟಿಂಗ್ ವ್ಯವಸ್ಥೆ ಧ್ವನಿವರ್ಧಕ ವ್ಯವಸ್ಥೆಯನ್ನೂ ಅಳವಡಿಸಲಾಗಿದೆ.
ಅಪರಾಧ
Bantwal-ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನಿಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನ – ರವಿ ನಾವೂರು ವಿರುದ್ದ ಪ್ರಕರಣ ದಾಖಲು
ಹಿಂದೂ ಸಂಘಟನೆಯ ಮುಖಂಡನಿಗೆ ಚೂರಿಯಿಂದ ಇರಿದು ಹತ್ಯೆ ಯತ್ನಿಸಿದ ಬಗ್ಗೆ ರವಿ ನಾವೂರು ಎಂಬಾತನ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣಕಾಸಿನ ಮನಸ್ತಾಪದಲ್ಲಿ ಉಂಟಾದ ಜಗಳ ಕೊಲೆಯತ್ನದವರೆಗೆ ಮುಂದುವರಿದಿದೆ ಎಂದು ಬಡ್ಡಕಟ್ಟೆ, ಬಿ.ಕಸ್ಬಾ ಗ್ರಾಮ, ಬಂಟ್ವಾಳ ನಿವಾಸಿ ಗುರುರಾಜ್ (32) ಎಂಬವರು ಠಾಣೆಗೆ ದೂರು ನೀಡಿದ್ದಾರೆ.
ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ಬಡ್ಡಕಟ್ಟೆ ಎಂಬಲ್ಲಿ ಏ. 14ರಂದು ರಾತ್ರಿ ಪುಷ್ಪರಾಜ್ ಎಂಬವರ ಮೇಲೆ ಹಲ್ಲೆ ನಡೆದಿತ್ತು. ಪರಸ್ಪರ ಪರಿಚಿತರಾದ ರವಿ ನಾವೂರು ಹಾಗೂ ಪುಷ್ಪರಾಜ್ ಎಂಬವರ ನಡುವೆ ಗಲಾಟೆ ನಡೆದಿದ್ದು, ಆರೋಪಿ ರವಿ ನಾವೂರು ಪುಷ್ಪರಾಜ್ ರವರಿಗೆ ಚೂರಿಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಹಲ್ಲೆಯಿಂದ ಗಾಯಗೊಂಡ ಪುಷ್ಪರಾಜ್ ರವರನ್ನು, ಗುರುರಾಜ್ ಹಾಗೂ ಮತ್ತೋರ್ವರು ಸೇರಿ, ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ, ಮಂಗಳೂರು ಎ.ಜೆ. ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ.
ಗಲಾಟೆ ಕುರಿತಾಗಿ ಪುಷ್ಪರಾಜ್ ಬಳಿ ಗುರುರಾಜ್ರವರು ವಿಚಾರಿಸಿದಾಗ, ಹಣಕಾಸಿನ ವಿಚಾರದಲ್ಲಿ ಆರೋಪಿ ಹಲ್ಲೆ ನಡೆಸಿರುವುದಾಗಿ ತಿಳಿಸಿರುತ್ತಾನೆ ಎಂಬುದಾಗಿ ಗುರುರಾಜ್ರವರು ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ದ ಐಪಿಸಿ ಕಲಂ 504, 506, 307 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಬಿಗ್ ನ್ಯೂಸ್
Bantwal-ಬಂಟ್ವಾಳ : ಕುದ್ಕೋಳಿ ಬಳಿ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಡಸ್ಟರ್ ಕಾರು
ಬಂಟ್ವಾಳ: ಇಲ್ಲಿನ ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ(ಏ.8) ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದು ಹೋದ ಘಟನೆ ನಡೆದಿದೆ. ಆದರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.
ಬಂಟ್ವಾಳ ಅಗ್ನಿಶಾಮಕ ದಳದವರು ಹಾಗೂ ಸ್ಥಳೀಯರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಕಾರಿನಲ್ಲಿದ್ದವರು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಿಂದ ಇಳಿದಿದ್ದು, ಯಾರಿಗೂ ಗಾಯಗಳಾಗಿಲ್ಲ. ಆದರೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಈ ಘಟನೆಯಿಂದಾಗಿ ಬಂಟ್ವಾಳ- ಮೂಡುಬಿದಿರೆ ರಸ್ತೆ ಸುಮಾರು ಒಂದು ತಾಸುಗಳ ಕಾಲ ಬ್ಲಾಕ್ ಆಗಿತ್ತು ಎನ್ನಲಾಗಿದೆ.
ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರ ಕಾರಿನಲ್ಲಿ ಬೆಂಕಿ ಕಾಣಿಕೊಂಡಿದ್ದು, ಈ ವೇಳೆ ಕಾರು ಬ್ರೇಕ್ ಹಾಕಿದರೂ ನಿಲ್ಲದೇ, ಬಳಿಕ ಚಾಲಕನ ಸಮಯ ಪ್ರಜ್ಞೆಯಿಂದ ಕಾರು ನಿಂತಿದೆ. ಕಾರಿನಲ್ಲಿ ಮಗು ಸೇರಿದಂತೆ ಇತರ ನಾಲ್ಕು ಮಂದಿ ಇದ್ದು, ಯಾರಿಗೂ ಯಾವುದೇ ಹಾನಿ ಸಂಭವಿಸಿರುವುದಿಲ್ಲ.
ನಿಧನ ವಾರ್ತೆ
Boy dies-ಬಂಟ್ವಾಳ : ಮೊಬೈಲ್ ನೋಡುತ್ತಾ ಮಹಡಿಯಿಂದ ಕೆಳಗೆ ಬಿದ್ದು ಬಾಲಕ ಸಾವು
ಮೊಬೈಲ್ ನೋಡುತ್ತ ನಡೆದ ಬಾಲಕನೊಬ್ಬ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತ ಬಾಲಕ.
ಆತ ಮನೆಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ.
ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ.
ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ. ಬಂಟ್ವಾಳ ನಗರ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ
-
ದಕ್ಷಿಣ ಕನ್ನಡ2 days ago
ವಿಟ್ಲ : ದುರಸ್ತಿಗೆ ಬಾವಿಗಿಳಿದ ಇಬ್ಬರು ಅಮ್ಲಜನಕ ಕೊರತೆಯಿಂದ ಮೃತ್ಯು
-
ಬಿಗ್ ನ್ಯೂಸ್20 hours ago
NOTAForSoujanyaCase : ಸೌಜನ್ಯ ಪ್ರಕರಣ : ಟ್ವಿಟರ್ ಟ್ರೆಂಡಿಂಗಲ್ಲಿ 3ನೇ ಸ್ಥಾನ ಪಡೆದ ನೋಟಾ ಅಭಿಯಾನ
-
ನಿಧನ ವಾರ್ತೆ1 day ago
Run over-ತಂದೆಯಿಂದಲೇ ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣ
-
ಅಪರಾಧ1 day ago
Online acquaintance-ಆನ್ ಲೈನ್ ಪರಿಚಿತ ಗೆಳೆಯ ಮಹಿಳೆಯ ಜೀವಾಂತ್ಯಗೊಳಿಸಿದ
-
Uncategorized2 days ago
ಮಠಂತಬೆಟ್ಟು ಗುಲಾಬಿ ಅನಂತ ರೈ ನಿಧನ
-
ದಕ್ಷಿಣ ಕನ್ನಡ1 day ago
ಬೆಲೆಯೆರಿಕೆ ಗಗನಕ್ಕೆರಿದ ಸಂದರ್ಭ ಸಿದ್ದರಾಮಯ್ಯ ಸರಕಾರ ಗ್ಯಾರಂಟಿ ಮೂಲಕ ಮಹಿಳೆಯರ ನೆರವಿಗೆ ನಿಂತಿದೆ : ಅನಿತಾ ಹೇಮನಾಥ ಶೆಟ್ಟಿ
-
ದಕ್ಷಿಣ ಕನ್ನಡ6 hours ago
Student harrased in bus ಉಪ್ಪಿನಂಗಡಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿದ್ಯಾರ್ಥಿನಿಗೆ ಜತೆ ಸಹ ಪ್ರಯಾಣಿಕನಿಂದ ಕಿರುಕುಳ – ಯುವತಿ ವ್ಯಗ್ರಗೊಳ್ಳುತ್ತಾಳೆ ಕಿಟಕಿಯಿಂದ ಹಾರಿ ಆರೋಪಿ ಪರಾರಿ – ಮುಂದೇನಾಯಿತು ?
-
ಸಾಮಾಜಿಕ ಮಾಧ್ಯಮ5 hours ago
Hasana sex tape : ಚುನಾವಣೆ ಹೊಸ್ತಿಲಲ್ಲಿ ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್ ಡ್ರೈವ್ ಸೌಂಡ್ ! ಅಸಲಿಯ / ನಕಲಿಯ ತೀವ್ರ ಚರ್ಚೆ