Connect with us

ನಿಧನ ವಾರ್ತೆ

Sudden Death : ಬ್ರಹ್ಮವಾರ : ಯುವ ನಟ  ಕಾರ್ತಿಕ್‌ ಕಾರ್ಯಕ್ರಮವೊಂದರಲ್ಲಿ ಕುಸಿದು ಬಿದ್ದು ಮೃತ್ಯು

Ad Widget

ಉಡುಪಿ :  ಜ 24 :  ರಂಗ ಭೂಮಿ ಕಲಾವಿದ  ಬ್ರಹ್ಮಾವರದ ಕಾರ್ತಿಕ್ ಕುಮಾರ್(31) ಎಂಬವರು ಕುಸಿದು ಬಿದ್ದು ಮೃತಪಟ್ಟ ಘಟನೆ ಜ.22ರಂದು ಮಧ್ಯಾಹ್ನ ವೇಳೆ ಬ್ರಹ್ಮಾವರ ಸಮೀಪದ ಕುಮ್ರಗೋಡು ಗ್ರಾಮದ ಜಂಬಾಡಿ ಎಂಬಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಇವರು ಸುಮಾರು 1 ತಿಂಗಳಿನಿಂದ ವಿಪರೀತ ಕೆಮ್ಮು ಕಾಯಿಲೆಯಿಂದ ಬಳಲುತ್ತಿದ್ದು, ಅಕ್ಕನ ಮನೆಯ ದೈವದ ಮನೆಯಲ್ಲಿ ದರ್ಶನ ಆಗುತ್ತಿರುವಾಗ ಕುರ್ಚಿಯಲ್ಲಿ ಕುಳಿತಿದ್ದ ಕಾರ್ತಿಕ್ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಸಂಜೆ ವೇಳೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

ರಂಗಭೂಮಿ ನಟರಾದ  ಇವರು, ಮಂದಾರ ಬೈಕಾಡಿ, ಭೂಮಿಕಾ ರಂಗ ತಂಡ ಹಾರಾಡಿ, ದುರ್ಗಾ ಕಲಾ ತಂಡ ಸೇರಿದಂತೆ ವಿವಿಧ ತಂಡಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು, ಹಾಸ್ಯ ಹಾಗೂ ಕಿರುಚಿತ್ರಗಳಲ್ಲಿ ಅಭಿನಯಿಸಿದ್ದರು. ಮೃತರು ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ

Ad Widget

Ad Widget
Click to comment

Leave a Reply

ನಿಧನ ವಾರ್ತೆ

S.K. Jain-ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಟಿವಿ ಮಾಧ್ಯಮದ ಮೊಟ್ಟ ಮೊದಲ ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್‌ ವಿಧಿವಶ

Ad Widget

ಕನ್ನಡ ಟಿವಿ ಮಾಧ್ಯಮದ ಮೊಟ್ಟ ಮೊದಲ ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್(67) ರವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಏ.12ರಂದು ವಿಧಿವಶರಾಗಿದ್ದಾರೆ.

Ad Widget

Ad Widget

Ad Widget

Ad Widget

ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಾ.18ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರದಂದು ಇಹಲೋಕ ತ್ಯಜಿಸಿದ್ದಾರೆ.

Ad Widget

Ad Widget

2 ದಶಕಗಳ ಹಿಂದೆ ಟಿವಿ ಮಾಧ್ಯಮದ ಮೂಲಕ ಜ್ಯೋತಿಷ್ಯ ಕಾರ್ಯಕ್ರಮ ನಡೆಸಿದ್ದ ಜೈನ್ ಅವರು ಭಾರೀ ಸಂಚಲನ ಮೂಡಿಸಿದ್ದರು. ಕರ್ನಾಟಕ ಮಾಧ್ಯಮದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ಜೈನ್ ಅವರು, ರಾಶಿ ಭವಿಷ್ಯ, ಶುಭ-ಅಶುಭ, ಫಲಾಫಲ ಸೇರಿದಂತೆ ಜ್ಯೋತಿಷ್ಯದ ಪರಿಕರಗಳಲ್ಲಿ ನಿಖರತೆಯನ್ನು ತಂದುಕೊಟ್ಟಿದ್ದರು.

Ad Widget

Ad Widget

ವಿದ್ಯುನ್ಮಾನ ಮಾಧ್ಯಮದಲ್ಲಿ ಜ್ಯೋತಿಷಿ ಕಾರ್ಯಕ್ರಮ ನಡೆಸಿಕೊಡುವ ಮೂಲಕ ಕರ್ನಾಟಕದಲ್ಲಿ ಹೊಸ ಪರಂಪರೆ ಹಾಗೂ ಜ್ಯೋತಿಷ್ಯವನ್ನು ಮನೆ ಮನೆಗೆ ತಲುಪಿಸಿದ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ.

Ad Widget

Ad Widget

ಅಂದಿನ ಕಾಲಮಾನದಲ್ಲೇ ಎಸ್.ಕೆ. ಜೈನ್ ಅವರ ಕಾರ್ಯಕ್ರಮಕ್ಕೆ ಲಕ್ಷಾಂತರ ವೀಕ್ಷಕರಿದ್ದರು. ಬಹಳಷ್ಟು ವೀಕ್ಷಕರು ಕಾದಿದ್ದು ಜೈನ್‌ ಅವರ ಕಾರ್ಯಕ್ರಮ ವೀಕ್ಷಿಸುತ್ತಿದ್ದರು. ಎಸ್‌.ಕೆ. ಜೈನ್ ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Continue Reading

ನಿಧನ ವಾರ್ತೆ

Sullia-ಸುಳ್ಯ : ರಸ್ತೆ ದಾಟುತ್ತಿದ್ದ ಕಾಡುಹಂದಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಪ್ರಾಣ ಕಳಕೊಂಡ ಸಹ ಸವಾರ ರಾಝಿಕ್

Ad Widget

ಮಂಗಳೂರು(ಬೆಳ್ಳಾರೆ): ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಮಿಕ್ಕಳ ನಿವಾಸಿ 10ನೇ ತರಗತಿ ವಿದ್ಯಾರ್ಥಿ ಮಹಮ್ಮದ್ ರಾಝಿಕ್ (16) ಎಂಬ ಯುವಕ ಮೃತಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಮಹಮ್ಮದ್ ರಾಝಿಕ್ ಮರದ ವ್ಯಾಪಾರಿ ಅಬ್ದುಲ್ ರಝಾಕ್ ಎಂಬವರ ಪುತ್ರನಾಗಿದ್ದು ಈತ ಬೆಳ್ಳಾರೆಯಿಂದ ತರಕಾರಿ ಮತ್ತು ಹಣ್ಣುಹಂಪಲು ಖರೀದಿಸಿ ಬೆಳ್ಳಾರೆಯ ಕುಂಡಡ್ಕದಲ್ಲಿರುವ ಅಜ್ಜಿ ಮನೆಗೆ ಸಂಬಂಧಿ ಜೊತೆ ಆಕ್ಟಿವಾದಲ್ಲಿ ತೆರಳುತ್ತಿದ್ದ ವೇಳೆ ಕಾಡುಹಂದಿಗಳ ಗುಂಪೊಂದು ಹಠತ್ತಾಗಿ ರಸ್ತೆ ದಾಟಿದೆ.

Ad Widget

Ad Widget

ಆಕ್ಟಿವಾ ಸವಾರ ಹಂದಿಗಳನ್ನು ನೋಡಿ ಗಾಬರಿಗೊಂಡು ಬ್ರೇಕ್ ಹಾಕಿದ್ದು ರಸ್ತೆ ಬದಿಯ ಮರಕ್ಕೆ ಆಕ್ಟಿವಾ ಡಿಕ್ಕಿ ಹೊಡೆದಿದೆ. ಈ ವೇಳೆ ರಾಝಿಕ್ ತಲೆ ಮರಕ್ಕೆ ಬಡಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅಲ್ಲಿದ್ದ ಯುವಕರು ರಾಝಿಕ್ ನನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರಾದರು ದಾರಿ ಮಧ್ಯೆ ಆತ ಕೊನೆಯುಸಿರೆಳೆದಿದ್ದಾನೆ.

Ad Widget

Ad Widget
Continue Reading

ನಿಧನ ವಾರ್ತೆ

Kasargod-ಕಾಸರಗೋಡು : ಹಾಸ್ಟೇಲ್‌ ನಲ್ಲಿ ವಿದ್ಯಾರ್ಥಿನಿ ಶವ ಪತ್ತೆ – ABVP ಪ್ರತಿಭಟನೆ

Ad Widget

ಕಾಸರಗೋಡು: ಪೆರಿಯದಲ್ಲಿರುವ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Ad Widget

Ad Widget

Ad Widget

Ad Widget

ಒಡಿಶಾ ಮೂಲದ ಹಿಂದಿ ಆ್ಯಂಡ್‌ ಕಂಪರೇಟಿವ್‌ ಲಿಟರೇಚರ್‌ ಪಿಎಚ್‌ಡಿ ವಿದ್ಯಾರ್ಥಿನಿ ರೂಬಿ ಪಟೇಲ್‌ (24) ಮೃತಪಟ್ಟಿರುವ ವಿದ್ಯಾರ್ಥಿನಿ. ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಹಾಸ್ಟೆಲ್‌ನ ಶೌಚಾಲಯದಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಬೇಕಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

Ad Widget

Ad Widget

ಒಂದು ತಿಂಗಳ ಹಿಂದೆ ಉತ್ತರ ಪ್ರದೇಶದ ಗಾಜಿಪುರ್‌ ನಿವಾಸಿಯಾದ ಎಂ.ಎಡ್‌. ದ್ವಿತೀಯ ಸೆಮಿಸ್ಟರ್‌ ವಿದ್ಯಾರ್ಥಿ ನಿಧಿಶ್‌ ಯಾದವ್‌ (28) ಅವರ ಮೃತದೇಹ ಹಾಸ್ಟೆಲ್‌ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

Ad Widget

Ad Widget

ಏತನ್ಮಧ್ಯೆ, ಸಾವಿಗೆ ಸಂಬಂಧಿಸಿದಂತೆ ಎಸ್‌ಎಫ್‌ಐ ಮತ್ತು ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು, ಮಾನಸಿಕ ಒತ್ತಡದಿಂದ ಸಂಶೋಧನಾ ವಿದ್ಯಾರ್ಥಿ ಜೀವನ ಅಂತ್ಯಗೊಳಿಸಿದ್ದಾರೆ ಎಂದು ಆರೋಪಿಸಿದರು.

Ad Widget

Ad Widget

ಕ್ಯಾಂಪಸ್‌ನಲ್ಲಿ ಮನೋವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ಎಸ್‌ಎಫ್‌ಐ ಸಂಘಟನೆಯ ವಿದ್ಯಾರ್ಥಿಗಳು ಉಪಕುಲಪತಿಗಳ ಕೊಠಡಿಗೆ ನುಗ್ಗಿ ಪ್ರತಿಭಟನೆ ನಡೆಸಿದರು ಎಂದು ಸಿಯುಕೆ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಶ್ರೀಹರಿ ಎ ಹೇಳಿದರು.

“ಕ್ಯಾಂಪಸ್‌ನಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಮನೋವೈದ್ಯರಿಲ್ಲ. ಸದ್ಯ, ಒಬ್ಬ ವಿದ್ಯಾರ್ಥಿನಿ ತನ್ನ ಜೀವನವನ್ನು ಕೊನೆಗೊಳಿಸಿದ್ದಾಳೆ ಮತ್ತು ಇನ್ನಿಬ್ಬರು ಕ್ಯಾಂಪಸ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ, ”ಎಂದು ಶ್ರೀಹರಿ ಹೇಳಿದರು, ವಿಸಿ ಲಿಖಿತವಾಗಿ ಕಾರ್ಯಕಾರಿ ಸಭೆಯಲ್ಲಿ ತಮ್ಮ ಬೇಡಿಕೆಯನ್ನು ಪ್ರಸ್ತಾಪಿಸುವ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಹಿಂತೆಗೆದುಕೊಂಡರು. ಏಪ್ರಿಲ್ 16 ರಂದು ನಡೆಸಲು ನಿರ್ಧರಿಸಲಾಗಿದೆ.

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading