ವಿಟ್ಲ: ಕೃಷಿಕರೊಬ್ಬರು ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ಬಿದ್ದು ಸಾವನ್ನಪ್ಪಿದ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕೊಪ್ಪಳದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕೊಪ್ಪಳ ನಿವಾಸಿ ಹರೀಶ್ (53) ಮೃತ ದುರ್ದೈವಿ.
ಕೃಷಿ ಯಂತ್ರದ ಮೂಲಕ ತೋಟದಲ್ಲಿ ಅಡಿಕೆ ತೆಗಿಯುವ ಕಾರ್ಯದಲ್ಲಿ ನಿರತರಾಗಿದ್ದಾಗ ಹರೀಶ್ ಮರದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಫತ್ರೆಗೆ ಕರೆದುಕೊಂಡು ಹೋಗಲಾಗಿದೆ.ಅ ಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ
ಮೃತರು ಪತ್ನಿ ಲೀಲಾ, ಪುತ್ರರಾದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ವಿಶ್ವರಾಜ್ ಹಾಗೂ ವಿನೋದ್ ರಾಜ್ನನ್ನು ಅಗಲಿದ್ದಾರೆ.
