Ad Widget

ಬೆಳ್ತಂಗಡಿಯ ಮೂವರು ಮಾಜಿ ಶಾಸಕರ ಸಹೋದರ , ಪ್ರತಿಷ್ಠಿತ ಬಿಲ್ಲವ ಕುಟುಂಬ ಮುಗ್ಗ ಗುತ್ತಿನ ‘ಮಲ್ಲಣ್ಣ’ ಖ್ಯಾತಿಯ ಶತಾಯುಷಿ ಕೆ.ಜಿ ಬಂಗೇರ ಇನ್ನಿಲ್ಲ

Screenshot_20230126-225148_Gallery
Ad Widget

Ad Widget

Ad Widget

ಬೆಳ್ತಂಗಡಿ: ಬಿಲ್ಲವ ಸಂಘದ ಹಿರಿಯ ಮುಖಂಡ ಮೂವರು ಮಾಜಿ ಶಾಸಕರ ಹಿರಿಯ ಸಹೋದರ ಶತಾಯುಷಿ ಕೆ.ಜಿ ಬಂಗೇರ ಅವರು ನಿಧನ ಹೊಂದಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಪ್ರತಿಷ್ಠಿತ ಬಿಲ್ಲವ ಮನೆತನವಾದ ಮುಗ್ಗ ಗುತ್ತು ಕುಟುಂಬದ ಹಿರಿಯರಾದ ಕೇದೆ ಗುರುವಪ್ಪ ಬಂಗೇರ (101) ಇವರನ್ನು ಕುಟುಂಬದಲ್ಲಿ ‘ಮಲ್ಲಣ್ಣ’ ಎಂದೇ ಕರೆಯುತ್ತಿದ್ದರು . ಮಂಗಳೂರಿನ ಪಾಂಡೇಶ್ವರದ ತಮ್ಮ ಸ್ವಗೃಹದಲ್ಲಿ ಜ. 25 ರಂದು ನಿಧನ ಹೊಂದಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಬೆಳ್ತಂಗಡಿಯ ಮಾಜಿ ಶಾಸಕರಾದ ಚಿದಾನಂದ ಬಂಗೇರ, ವಸಂತ ಬಂಗೇರ ಹಾಗೂ ಪ್ರಭಾಕರ ಬಂಗೇರರ ಹಿರಿಯ ಸಹೋದರರೇ ಮೃತ ಕೆ.ಜಿ ಬಂಗೇರರು. ಮುಗ್ಗ ಗುತ್ತು ಟ್ರಸ್ಟ್ ನ ಅಧ್ಯಕ್ಷರಾಗಿದ್ದರು.

ನಿವೃತ್ತ ಕಂದಾಯ ಅಧಿಕಾರಿಯಾಗಿ ನಂತರ ಡೆಪ್ಯೂಟಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಬಿಲ್ಲವ ಸಮಾಜ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇವರು ಬೆಳ್ತಂಗಡಿ ಶ್ರೀ ಗುರುದೇವಾ ವಿವಿದೋದ್ದೇಶ ಸೇವಾ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷರಾಗಿ ಶ್ರೀ ಗುರುದೇವ ಕಾಲೇಜ್ ಬೆಳ್ತಂಗಡಿ ಇದರ ಟ್ರಸ್ಟಿಯಾಗಿ ಹಲವಾರು ಸೇವಾ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.

Ad Widget

Ad Widget

Ad Widget

Ad Widget

2022 ರ ನವೆಂಬರ್ ತಿಂಗಳಲ್ಲಿ 100ನೇ ವರ್ಷದ ಜನ್ಮದಿನಾಚರಣೆಯನ್ನು ಬೆಳ್ತಂಗಡಿಯಲ್ಲಿ ಬಿಲ್ಲವ ಸಂಘದ ವತಿಯಿಂದ ವಿಜೃಂಭಣೆಯಿಂದ ಆಚರಿಸಲಾಗಿತ್ತು.

ಮೃತರು ಪತ್ನಿ ಪುತ್ರ ಇಬ್ಬರು ಪುತ್ರಿಯರು ಮಾಜಿ ಶಾಸಕರುಗಳಾದ ಕೆ. ವಸಂತ ಬಂಗೇರ ಹಾಗೂ ಕೆ. ಪ್ರಭಾಕರ ಬಂಗೇರ ಸೇರಿದಂತೆ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: