Connect with us

ಪುತ್ತೂರು

Banking Job | ಕರ್ನಾಟಕ ಬ್ಯಾಂಕ್ ನೇಮಕಾತಿಯಲ್ಲಿ ‘ವಿದ್ಯಾಮಾತಾ ಅಕಾಡೆಮಿ’ ಯ ವಿದ್ಯಾರ್ಥಿ ಸುಳ್ಯದ ನಿರಂಜನ್.ಜೆ ಆಯ್ಕೆ – ಸಂಸ್ಥೆಯ ವತಿಯಿಂದ ಸನ್ಮಾನ

Ad Widget

Ad Widget

Ad Widget

Ad Widget


ಸುಳ್ಯ ತಾಲೂಕು ಸಂಪಾಜೆಯ ನಿರಂಜನ್ ಜೆ ರವರು ಪುತ್ತೂರಿನ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ‘ವಿದ್ಯಾಮಾತಾ ಅಕಾಡೆಮಿ’ಯಲ್ಲಿ ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ಪಡೆದು 2022-23 ನೇ ಸಾಲಿನ ಕರ್ನಾಟಕ ಬ್ಯಾಂಕ್ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಅಂತಿಮ ಹಂತದ ನೇರ ಸಂದರ್ಶನದಲ್ಲಿ (Banking Job) ಉತ್ತಮ ಸಾಧನೆಯನ್ನು ಮಾಡಿ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget


ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಚಟ್ಟೆಕಲ್ಲು ನಿವಾಸಿಯಾಗಿರುವ ನಿರಂಜನ್ ಜೆ ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎಸ್.ಸಿ ಮಾಡುತ್ತಿದ್ದು, ತನ್ನ ಸ್ನಾತಕೋತ್ತರ ಪದವಿ ಜೊತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿಯನ್ನು ಕೂಡ ಪಡೆಯುತ್ತಿದ್ದರು. ತನ್ನ ಪ್ರಥಮ ಪ್ರಯತ್ನದಲ್ಲೇ ಬ್ಯಾಂಕಿಂಗ್ ಪರೀಕ್ಷೆ ಪಾಸಾಗಿರುತ್ತಾರೆ.

Ad Widget

ಇವರು ಕಲ್ಲುಗುಂಡಿಯಲ್ಲಿ ಕೀರ್ತಿ ಕ್ಲಿನಿಕ್ ಹೊಂದಿರುವ ಡಾ.ಯು.ಪಿ.ಜಯರಾಮ ಮತ್ತು ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ಶ್ರೀವಿದ್ಯಾ ದಂಪತಿಗಳ ಪುತ್ರರಾಗಿರುತ್ತಾರೆ.

Ad Widget

Ad Widget


ನಿರಂಜನ್ ರವರಿಗೆ ವಿದ್ಯಾಮಾತಾ ಅಕಾಡೆಮಿಯಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಅತಿಥಿಗಳಾಗಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತದ ಮೊಕ್ತೇಸರರಾದ ಮುಳಿಯ ಶ್ರೀ ಕೇಶವ ಪ್ರಸಾದ ರವರು ಮತ್ತು ಜೆಸಿಐ ಪುತ್ತೂರು ನಿಕಟಪೂರ್ವ ಅಧ್ಯಕ್ಷರಾದ ಶಶಿರಾಜ್ ರೈ ರವರು ಉಪಸ್ಥಿತರಿದ್ದರು.

Ad Widget

Ad Widget

Ad Widget


ನಿರಂಜನ್ ರವರನ್ನು ಸನ್ಮಾನಿಸಿದ ಮುಳಿಯ ಕೇಶವ ಪ್ರಸಾದ್ ರವರು “ಕರಾವಳಿ ಭಾಗದಲ್ಲಿ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಿದ್ದರೂ ಕೂಡ ಉತ್ತಮ ಉದ್ಯೋಗ ಕೌಶಲ್ಯತೆಯನ್ನು ನೀಡಿ, ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಬಲ್ಲ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಸಂಸ್ಥೆಗಳ ಕೊರತೆಯನ್ನು ವಿದ್ಯಾಮಾತಾ ಅಕಾಡೆಮಿಯು ನೀಗಿಸಿದೆ. ಭಾರತೀಯ ಸೇನೆ, ಪೊಲೀಸ್ ಇಲಾಖೆ, ಬ್ಯಾಂಕಿಂಗ್ ಸೇರಿದಂತೆ ಹತ್ತಾರು ಸರಕಾರಿ, ಸರಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಈ ಭಾಗದ ವಿದ್ಯಾರ್ಥಿಗಳು ನೇಮಕಾತಿಯಾಗುವಂತೆ ಮಾಡಿದ ಹಿರಿಮೆ ವಿದ್ಯಾಮಾತಾ ಅಕಾಡೆಮಿಯದ್ದಾಗಿದೆ. ಒಂದು ಕಾಲದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡಿದ್ದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಬ್ಯಾಂಕಿಂಗ್ ಉದ್ಯೋಗಿಗಳು ಕಡಿಮೆಯಾಗುತ್ತಿದ್ದಾರೆ ಎನ್ನುವ ಕೂಗಿನ ಮಧ್ಯೆ ವಿದ್ಯಾಮಾತಾದ ಈ ಪ್ರಯತ್ನ ನಿಜಕ್ಕೂ ಪ್ರಶಂಸನೀಯ. ಈ ಸಂಸ್ಥೆ ಇನ್ನಷ್ಟು ಬೆಳೆಯಲಿ” ಎಂದು ಶುಭ ಹಾರೈಸಿದರು.


ಸನ್ಮಾನ ಸ್ವೀಕರಿಸಿದ ನಿರಂಜನ್ ಜೆ ರವರು “ಕಾನ ಶ್ರೀ ಶಂಕರನಾರಾಯಣ ಮಠದ ಅನುವಂಶಿಕ ಅರ್ಚಕರಾಗಿರುವ ಶ್ರೀ ಕೇಶವ ಪ್ರಸಾದ ನನ್ನಿಹಿತ್ಲು ರವರ ಸಲಹೆಯ ಮೇರೆಗೆ ನಾನು ವಿದ್ಯಾಮಾತಾ ಅಕಾಡೆಮಿಗೆ ಸೇರಿದ್ದು, ನನ್ನ ಸ್ನಾತಕೋತ್ತರ ಪದವಿ ಜೊತೆಗೆ ಆನ್ಲೈನ್ ಮತ್ತು ನೇರ ತರಗತಿಗಳ ಮೂಲಕ ತರಬೇತಿಯನ್ನು ಪಡೆದುಕೊಂಡು ಪ್ರಥಮ ಪ್ರಯತ್ನದಲ್ಲೇ ಬ್ಯಾಂಕಿಂಗ್ ಉದ್ಯೋಗವನ್ನು ಪಡೆದುಕೊಂಡಿದ್ದೇನೆ. ಕರ್ನಾಟಕ ಬ್ಯಾಂಕ್ ಚೆನ್ನೈ ಶಾಖೆಗೆ ನಿಯುಕ್ತಿಗೊಳಿಸಿ ನನಗೆ ಆಫರ್ ಲೆಟರ್ ಕೂಡ ಲಭಿಸಿದೆ. ಅರ್ಜಿ ಹಾಕುವುದರಿಂದ ಹಿಡಿದು ಲಿಖಿತ ಪರೀಕ್ಷೆ, ನೇರ ಸಂದರ್ಶನದವರೆಗೂ ತರಬೇತಿ ನೀಡಿ, ಬದುಕಿಗೊಂದು ದಾರಿ ತೋರಿಸಿದ ವಿದ್ಯಾಮಾತಾ ಅಕಾಡೆಮಿಗೆ ನಾನು ಅನಂತ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ವಿದ್ಯಾಮಾತಾ ಅಕಾಡೆಮಿಯ ಸ್ಥಾಪಕರಾದ ಭಾಗ್ಯೇಶ್ ರೈ ಯವರು, ಮುಂದೆ ಐಎಎಸ್ ಅಥವಾ ಕೆಎಎಸ್ ಅಧಿಕಾರಿಯಾಗಬೇಕು ಎನ್ನುವ ಗುರಿಯನ್ನು ನೀಡಿದ್ದಾರೆ. ವಿದ್ಯಾಮಾತಾ ಅಕಾಡೆಮಿಯ ಉತ್ತಮ ತರಬೇತಿಯೊಂದಿಗೆ ಆ ಗುರಿಯನ್ನು ಸಾಧಿಸುವ ವಿಶ್ವಾಸ ನನಗಿದೆ” ಎಂದು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.


ಈ ಸಂದರ್ಭದಲ್ಲಿ ಅತಿಥಿಯಾಗಿದ್ದ ಶಶಿರಾಜ್ ರೈ ಯವರು ವಿದ್ಯಾಮಾತಾ ಅಕಾಡೆಮಿಯ ಮುಂದಿನ ಯೋಜನೆಗಳಿಗೆ ಶುಭವನ್ನು ಹಾರೈಸಿದರು.


ವೇದಿಕೆಯಲ್ಲಿ ಉಪಸ್ಥಿತರಿದ್ದ ನಿರಂಜನ್ ಜೆ ರವರ ತಂದೆ ಡಾ.ಯು.ಪಿ.ಜಯರಾಮ್ ರವರು ಮತ್ತು ತಾಯಿ ಶ್ರೀವಿದ್ಯಾ ರವರು ವಿದ್ಯಾಮಾತಾ ಅಕಾಡೆಮಿಗೆ ಧನ್ಯವಾದಗಳನ್ನು ಅರ್ಪಿಸಿದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅತಿಥಿಗಳು ಮತ್ತು ಸನ್ಮಾನಿತರನ್ನು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ಅಭಿನಂದನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿಯ ತರಬೇತುದಾರರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ವಿದ್ಯಾಮಾತಾ ಅಕಾಡೆಮಿ
ಸ್ಪರ್ಧಾತ್ಮಕ ಪರೀಕ್ಷೆಗಳ ಅರ್ಜಿ ಸಲ್ಲಿಕೆ ಹಾಗೂ ತರಬೇತಿ ಕೇಂದ್ರ
ಹಿಂದೂಸ್ತಾನ್ ಕಾಂಪ್ಲೆಕ್ಸ್ , ಎ. ಪಿ. ಎಂ. ಸಿ. ರೋಡ್, ಸಿಟಿ ಆಸ್ಪತ್ರೆ ಹತ್ತಿರ ಪುತ್ತೂರು ದ.ಕ 574201
ಫೋನ್ ನಂ: 9620468869 / 9148935808

Click to comment

Leave a Reply

ದಕ್ಷಿಣ ಕನ್ನಡ

Woman Missing: ಉಪ್ಪಿನಂಗಡಿ : ತಾಯಿ ಮತ್ತು ಒಂದು ವರ್ಷದ ಮಗು ನಾಪತ್ತೆ – ಪತ್ತೆಯಾದಲ್ಲಿ ತಿಳಿಸುವಂತೆ ಮನವಿ

Ad Widget

Ad Widget

Ad Widget

Ad Widget

ಉಪ್ಪಿನಂಗಡಿ:  ಬಾಡಿಗೆ ಮನೆಯಲ್ಲಿ ವಾಸವಿದ್ದ ಉತ್ತರ ಪ್ರದೇಶ ಮೂಲದ ತಾಯಿ ಮತ್ತು ಒಂದು ವರ್ಷದ ಮಗು ನಾಪತ್ತೆಯಾದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದೇ ತಿಂಗಳ ಏಫ್ರಿಲ್‌ 22 ರಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ತಾಯಿ ಮತ್ತು ಮಗು ನಾಪತ್ತೆಯಾಗಿದ್ದಾರೆ.

Ad Widget

Ad Widget

Ad Widget

 ಕೌಕ್ರಾಡಿ ಗ್ರಾಮದ ಕಟ್ಟೆ ಮಜಲಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ಸೋನು ಸೋಂಕರ್‌ ಅವರ ಪತ್ನಿ ರೀಮಾ ಸೋಂಕರ್‌ (26) ಮತ್ತು ಮಗು ರಿಯಾ (1) ನಾಪತ್ತೆಯಾಗಿರುವರು.    

Ad Widget

ಇಂಟೀರಿಯರ್‌ ಡೆಕೊರೇಟರ್‌ ಆಗಿರುವ ಸೋನು ಸೋಂಕರ್‌ ಉತ್ತರ ಪ್ರದೇಶದ ಅಜಾಮ್‌ ಘರ್‌ ಜಿಲ್ಲೆಯ ಅಮಹಾಮಾಫಿ ಗ್ರಾಮದ ನಿವಾಸಿಯಾಗಿದ್ದು, ಕೌಕ್ರಾಡಿಯಲ್ಲಿ ಕೃಷ್ಣಪ್ಪ ಅವರ ಬಾಡಿಗೆ ಮನೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು.

Ad Widget

Ad Widget

ಸೋನು ಸೋಂಕರ್‌ ಅವರು ಏ 22 ರಂದು ಬೆಳಿಗ್ಗೆ 8 .30 ಕ್ಕೆ ಕಟ್ಟೆ ಮಜಲಿನ ಬಾಡಿಗೆ ಮನೆಯಿಂದ ಕೆಲಸದ ನಿಮಿತ್ತ ಹೊರಗೆ ಹೋಗಿದ್ದು ಸಂಜೆ 7.30ರ ಸುಮಾರಿಗೆ ಬಂದು ನೋಡಿದಾಗ, ಮನೆಗೆ ಬಾಗಿಲು ಹಾಕಿತ್ತು. ಬಾಗಿಲು ತೆರೆದು ಒಳ ಪ್ರವೇಶಿಸಿದಾಗ ತಾಯಿ ಮತ್ತು ಮಗು ಕಾಣೆಯಾಗಿದ್ದು ರೀಮಾ ಬಳಸುತ್ತಿದ್ದ ಮೊಬೈಲ್‌  ಫೋನ್‌ ನೆಲದಲ್ಲಿ ಬಿದ್ದು ಕೊಂಡಿತ್ತು.

Ad Widget

Ad Widget

Ad Widget

ಮನೆ ಮಾಲೀಕರಲ್ಲಿ ಹಾಗೂ ಅಕ್ಕಪಕ್ಕದವರಲ್ಲಿ ವಿಚಾರಿಸಿದಾಗ, ಅದೇ ದಿನ ಬೆಳಿಗ್ಗೆ  10 ಗಂಟೆ ಸುಮಾರಿಗೆ ರೀಮಾ  ಮನೆಗೆ ಬೀಗ ಹಾಕಿ ಮಗುವಿನ ಜತೆ ಹೋಗಿರುವುದನ್ನು ನೋಡಿರುವುದಾಗಿ ತಿಳಿಸಿರುತ್ತಾರೆ. ನಾಪತ್ತೆಯಾಗಿರುವ ತಾಯಿ ಮತ್ತು ಮಗು ಕಂಡಲ್ಲಿ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ತಿಳಿಸುವಂತೆ ಕೋರಲಾಗಿದೆ.

Continue Reading

ದಕ್ಷಿಣ ಕನ್ನಡ

Communal Hatred Murder: ವಿಟ್ಲದ ಹಲ್ಲೆಗೆ ಪ್ರತಿಕಾರವಾಗಿ ಬಂಟ್ವಾಳದಲ್ಲಿ  ಕೋಮು ದ್ವೇಷದಿಂದ ಹತ್ಯೆ : ನಾಲ್ವರಿಗೆ ಜೀವಾವಧಿ ಶಿಕ್ಷೆ

Ad Widget

Ad Widget

Ad Widget

Ad Widget

9 ವರ್ಷಗಳ ಹಿಂದೆ  ಬಂಟ್ವಾಳದ ಸಜಿಪಮೂಡ ಗ್ರಾಮದಲ್ಲಿ ನಡೆದಿದ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ತಲಾ 30 ಸಾವಿರ ರು. ದಂಡ ವಿಧಿಸಿದೆ. 2015ರಲ್ಲಿ ತಂಡವೊಂದು ಮೊಹಮ್ಮದ್ ಮುಸ್ತಾಫ ಮತ್ತು ಮಹಮ್ಮದ್ ನಾಸೀರ್ ಎಂಬವರ ಮೇಲೆ ತಲವಾರ್ ನಡೆಸಿತ್ತು . ಇದರಲ್ಲಿ ಮಹಮ್ಮದ್ ನಾಸೀರ್ ಕೊಲೆಯಾಗಿದ್ದರು . ಕೋಮು ದ್ವೇಷದಿಂದ ಈ ಹತ್ಯೆ ಮಾಡಿದ್ದು ಸಾಬೀತಾದ ಹಿನ್ನಲೆಯಲ್ಲಿ ನ್ಯಾಯಾಲಯವು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

Ad Widget

Ad Widget

Ad Widget

 ಬಂಟ್ವಾಳ ತಾಲೂಕು ಮಂಚಿ ಗ್ರಾಮದ ವಿಜೇತ್ ಕುಮಾರ್ (22), ಅಭಿ ಯಾನೆ ಅಭಿಜಿತ್ (24), ಮಂಗಳೂರು ತಾಲೂಕು ಬಡಗ ಉಳಿಪ್ಪಾಡಿ ಗ್ರಾಮದ ಮಳಲಿ ಮಟ್ಟಿಮನೆ ಕಿರಣ್ ಪೂಜಾರಿ (24), ತಿರುವೈಲು ಗ್ರಾಮದ ಅನೀಶ್ ಯಾನೆ ಧನು (23) ಶಿಕ್ಷೆಗೆ ಒಳಗಾದವರು.

Ad Widget

2015ರ ಆಗಸ್ಟ್‌ 6ರಂದು ರಾತ್ರಿ ಆಟೊದಲ್ಲಿ ಹೋಗುತ್ತಿದ್ದ ಮೊಹಮ್ಮದ್‌ ಮುಸ್ತಾಫ್ ಮತ್ತು ನಾಸೀರ್‌ ಅಲಿಯಾಸ್‌ ಮೊಹ್ಮದ್‌ ನಾಸೀರ್‌ ಅವರ ಮೇಲೆ  ಅಪರಾಧಿಗಳು  ತಲವಾರಿನಿಂದ ಹಲ್ಲೆ ಮಾಡಿದ್ದರು. ತೀವ್ರ ಗಾಯಗೊಂಡಿದ್ದ ನಾಸೀರ್‌ ಮಂಗಳೂರಿನ ಆಸ್ಪತ್ರೆಯಲ್ಲಿ ಮರುದಿನ ಮೃತಪಟ್ಟಿದ್ದರು.

Ad Widget

Ad Widget

ಮೊಹಮ್ಮದ್‌ ಮುಸ್ತಾಫ ಅವರು ತಮ್ಮ ಮಾವನ ಹೆಂಡತಿಯನ್ನು ಹೆರಿಗೆಗಾಗಿ ಬಂಟ್ವಾಳ ಆಸ್ಪತ್ರೆಗೆ ಆಟೊ ರಿಕ್ಷಾದಲ್ಲಿ  ಬಿಟ್ಟು ರಾತ್ರಿ  ಮನೆಗೆ ವಾಪಸ್ಸು ಆಗುತ್ತಿದ್ದರು.  ತಮ್ಮ ಪತ್ನಿಯ ಮನೆಗೆ ಹೋಗುವ ಸಲುವಾಗಿ ನಾಸೀರ್‌ ಅವರು ಮೆಲ್ಕಾರ್‌ ಬಳಿ ಈ ಆಟೊ ಹತ್ತಿದ್ದರು. ಮೆಲ್ಕಾರ್‌ ನಿಂದ ಮುಡಿಪು ಕಡೆಗೆ ಆಟೊ ರಿಕ್ಷಾ ಹೋಗುತ್ತಿರುವುದನ್ನು ಕಂಡ ಆರೋಪಿಗಳು, ಬೈಕ್‌ನಲ್ಲಿ ಬೆನ್ನಟ್ಟಿದ್ದಾರೆ.  ರಾತ್ರಿ 10.45ಕ್ಕೆ ಸಜಿಪ ಮೂಡ ಗ್ರಾಮದ ಕೊಳಕೆ ಕಂದೂರು ತಲುಪುತ್ತಿದ್ದಂತೆ ರಿಕ್ಷಾ ತಡೆದು ನಿಲ್ಲಿಸಿದ್ದಾರೆ.  ಅದರಲ್ಲಿ ಇರುವ ಇಬ್ಬರು  ಮುಸ್ಲಿಂರು ಎನ್ನುವುದನ್ನು ಖಚಿತಪಡಿಸಿಕೊಂಡು ಅವರ ಮೇಲೆ ತಲವಾರಿನಿಂದ ದಾಳಿ ಮಾಡಿದ್ದರು.

Ad Widget

Ad Widget

Ad Widget

ಮುಖ್ಯ ಆರೋಪಿ ವಿಜೇತ್ ಕುಮಾರ್ ತಲವಾರಿನಿಂದ ಮುಸ್ತಾಫ ಅವರ ಕೈ, ಎದೆಗೆ ಬಲವಾಗಿ ಕಡಿದಿದ್ದಾನೆ. 2ನೇ ಆರೋಪಿ ಕಿರಣ್ ಪೂಜಾರಿ ಪ್ರಯಾಣಿಕರ ಸೀಟ್‌ನಲ್ಲಿ ಕುಳಿತಿದ್ದನಾಸೀರ್ ಗೆ ತಲವಾರಿನಿಂದ ಕಡಿದಿದ್ದಾನೆ. ತೀವ್ರ ಗಾಯಗೊಂಡ ಇಬ್ಬರನ್ನೂ ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ನಾಸೀರ್ ಅಹಮ್ಮದ್ಆ.7ರಂದು ಮೃತಪಟ್ಟಿದ್ದಾರೆ. ಅಪರಾಧಿಗಳು ಕೃತ್ಯದ ವೇಳೆ ಧರಿಸಿದ್ದ ರಕ್ತಸಿಕ್ತ ಬಟ್ಟೆಗಳನ್ನು ಪಾಣೆಮಂಗಳೂರು ನೇತ್ರಾವತಿ ನದಿಗೆ ಎಸೆದು ಸಾಕ್ಷ್ಯಾಧಾರವನ್ನು ಮರೆಮಾಚಿಸಿದ್ದಾರೆ   

ಇದಕ್ಕೂ ಮುನ್ನಾ ದಿನ 2015ರ ಆಗಸ್ಟ್‌ 5ರಂದು ರಾತ್ರಿ ವಿಟ್ಲ ಪೊಲೀಸ್‌ ಠಾಣೆ ವ್ಯಾಪ್ತಿಯ ಆಲಬೆ ಎಂಬಲ್ಲಿ ವಿಜೇತ್‌ ಕುಮಾರ್‌ ಮತ್ತು ಅಭಿ ಮೇಲೆ ಮುಸ್ಲಿಂ ಸಮುದಾಯದ 4-5 ಯುವಕರು ಹಲ್ಲೆ ಮಾಡಿದ್ದರು. ಇದರಿಂದಾಗಿ ರೊಚ್ಚಿಗೆದ್ದಿದ್ದ ಈ ಇಬ್ಬರು, ತಮ್ಮ ಇನ್ನಿಬ್ಬರು ಮಿತ್ರರನ್ನು ಕರೆಯಿಸಿಕೊಂಡು, ಪಾಣೆ ಮಂಗಳೂರು ಬಳಿ ಮುಸ್ಲಿಂ ಯುವಕನೊಬ್ಬನನ್ನು ಕೊಲೆ ಮಾಡುವ ಉದ್ದೇಶ ಹೊಂದಿದ್ದರು. ಅದರಂತೆ ದಾರಿಯಲ್ಲಿ ಸಿಕ್ಕ ಇವರನ್ನು ಕೊಲೆ ಮಾಡಿದರು ಎಂದು ಪ್ರಕರಣದ ವಿಚಾರಣೆ ನಡೆಸಿದ್ದ ಇನ್‌ಸ್ಪೆಕ್ಟರ್‌ ಕೆ.ಯು. ಬೆಳ್ಳಿಯಪ್ಪ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್‌.ಎಸ್‌. ಅವರು ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದ್ದಾರೆ.ಸರ್ಕಾರದ ಪರವಾಗಿ ಶೇಖರ ಶೆಟ್ಟಿ ಸಾಕ್ಷಿ ವಿಚಾರಣೆ ಮಾಡಿದ್ದು, ಜುಡಿತ್‌ ಓಲ್ಗಾ ಮಾರ್ಗರೇಟ್‌ ಕ್ರಾಸ್ತಾ ವಾದ ಮಂಡಿಸಿದ್ದರು.

ನಾಲ್ವರೂ ಆರೋಪಿಗಳಿಗೆ ತಲಾ ₹30 ಸಾವಿರ ದಂಡ ವಿಧಿಸಲಾಗಿದೆ. ದಂಡದ ಮೊತ್ತದಲ್ಲಿ ₹1.20 ಲಕ್ಷವನ್ನು ಮೃತ ನಾಸೀರ್‌ ಅವರ ಪತ್ನಿ ರಹಮತ್‌ ಅವರಿಗೆ ನೀಡಬೇಕು ಹಾಗೂ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿಯೂ ರಹಮತ್‌ ಅವರಿಗೆ ಪರಿಹಾರ ನೀಡಬೇಕು ಎಂದು ತೀರ್ಪಿನಲ್ಲಿ ನಿರ್ದೇಶನ ನೀಡಿದ್ದಾರೆ.

ತನಿಖಾಧಿಕಾರಿಯಾಗಿದ್ದ ಕೆ.ಯು.ಬೆಳ್ಳಿಯಪ್ಪ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯದಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಒಟ್ಟು 29 ಸಾಕ್ಷಿದಾರರನ್ನು ವಿಚಾರಿಸಲಾಗಿದ್ದು, 40 ದಾಖಲೆಗಳನ್ನು ಗುರುತಿಸಲಾಗಿದೆ. ಸರ್ಕಾರದ ಪರವಾಗಿ ಶೇಖರ ಶೆಟ್ಟಿ ಸಾಕ್ಷಿ ವಿಚಾರಣೆ ಮಾಡಿದ್ದು, ಜುಡಿತ್ ಓಲ್ಟಾ ಮಾರ್ಗರೇಟ್ ಕ್ರಾಸ್ತ ವಾದ ಮಂಡಿಸಿದ್ದಾರೆ.

Continue Reading

ಕಾರ್ಯಕ್ರಮಗಳು

Sringeri Sri-ಕಹಳೆ ನ್ಯೂಸ್ ಮುಖ್ಯಸ್ಥರ ಹೊಸಮೂಲೆ ಮನೆಗೆ ಶೃಂಗೇರಿ ಶ್ರೀ ಜಗದ್ಗುರುಗಳ ಭೇಟಿ – ಪಾದಪೂಜೆ

Ad Widget

Ad Widget

Ad Widget

Ad Widget

ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿರುವ ಕಹಳೆ ನ್ಯೂಸ್ ವಾಹಿನಿಯ ಮುಖ್ಯಸ್ಥರು ಹಾಗೂ ಪ್ರಧಾನ ಸಂಪಾದಕರಾದ ಶ್ಯಾಮ ಸುದರ್ಶನ ಭಟ್ ಅವರ ಹೊಸಮೂಲೆ ಮನೆಗೆ ಶ್ರೀ ದಕ್ಷಿಣಾಮ್ಮಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರ ಕರಕಮಲಸಂಜಾತರಾದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭೇಟಿ ನೀಡಿ‌ ಹರಸಿದರು.

Ad Widget

Ad Widget

Ad Widget

ಪೂಜ್ಯ ಜಗದ್ಗುರುಗಳಿಗೆ ಮನೆಯ ಯಜಮಾನರಾದ ಗೋಪಾಲಕೃಷ್ಣ ಭಟ್ ದಂಪತಿಗಳು ಪಾದ ಪೂಜೆಯನ್ನು ನೆರವೇರಿಸಿದರು. ವೇ.ಮೂ.‌ ಕೊಂಡಗೆ ಈಶ್ವರ ಭಟ್ ಅವರು ವೈದಿಕ ವಿಧಿಯನ್ನು ನೆರವೇರಿಸಿದರು.

Ad Widget

ಶೃಂಗೇರಿ ಮಠದ ಆಡಳಿತಾಧಿಕಾರಿಗಳಾದ ಮುರಳಿಯವರು ಉಪಸ್ಥಿತರಿದ್ದರು.

Ad Widget

Ad Widget

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸುದರ್ಶನ್ ಮೂಡಬಿದಿರೆ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಪಿ.ಜಿ.‌ ಜಗನ್ನಿವಾಸ್ ರಾವ್, ಉಪ್ಪಿನಂಗಡಿ ಸಿ.ಎ.‌ಬ್ಯಾಂಕ್ ಅಧ್ಯಕ್ಷರಾದ ಕೆ.ವಿ. ಪ್ರಸಾದ್, ಡಾ. ರವಿನಾರಾಯಣ್ ಸಿ., ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ತಿಮ್ಮಪ್ಪ ಗೌಡ ಇಳಂತಿಲ ಭಾಗಿಯಾಗಿದ್ದರು.

Ad Widget

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading