Connect with us

ಪುತ್ತೂರು

ಷಾ ಪುತ್ತೂರಿಗೆ – ಬಿಜೆಪಿ ವತಿಯಿಂದ ಇಂದು ಪುತ್ತೂರು ಪೇಟೆಯಲ್ಲಿ ಬೃಹತ್ ಪ್ರಚಾರ ಕಾರ್ಯಕ್ರಮ- ದರ್ಬೆಯಿಂದ ಬೊಳುವಾರು ತನಕ ಕಾಲ್ನಡಿಗೆ ಜಾಥ

Ad Widget

ಪುತ್ತೂರು: ಪುತ್ತೂರಿನಲ್ಲಿ ಫೆ.11ರ ಅಮಿತ್ ಷಾ ಅವರ ಕಾರ್ಯಕ್ರಮದ ಸಲುವಾಗಿ ಪುತ್ತೂರು ಬಿಜೆಪಿ ವತಿಯಿಂದ “ಬೃಹತ್ ಪ್ರಚಾರ ಕಾರ್ಯಕ್ರಮ”ವು ದರ್ಬೆಯಿಂದ ಬೊಳುವಾರು ತನಕ ಫೆ.9ರಂದು ಕಾಲ್ನಡಿಗೆಯ ಮೂಲಕ ನಡೆಯಲಿದೆ.

Ad Widget

Ad Widget

Ad Widget

Ad Widget

ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಪುತ್ತೂರಿಗೆ ಆಗಮಿಸುವ ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಷಾ , ಫೆ.11ಕ್ಕೆ ಮಧ್ಯಾಹ್ನ 2.30 ಕ್ಕೆ ಕಣ್ಣೂರಿಗೆ ತಲುಪಿ , ಅಲ್ಲಿಂದ ವಾಯುಪಡೆ ಹೆಲಿಕಾಪ್ಟರ್ ನಲ್ಲಿ ಈಶ್ವರಮಂಗಲಕ್ಕೆ ಬಂದು ನಂತರ ಅಮರಗಿರಿ ಲೋಕಾರ್ಪಣೆ ಕಾರ್ಯಕ್ರಮ ಮುಗಿಸಿ , ಅಲ್ಲಿಂದ ಪುತ್ತೂರಿಗೆ ಹೆಲಿಕಾಪ್ಟರ್ ನಲ್ಲೇ ಬಂದು ಎನ್ ಆರ್ ಸಿಸಿ ಯಲ್ಲಿ ಇಳಿದು ನಂತರ ತೆಂಕಿಲಕ್ಕೆ ರಸ್ತೆ ಮಾರ್ಗದ ಮೂಲಕ ಸಂಚರಿಸಿ ಅಲ್ಲಿ ಕ್ಯಾಂಪ್ಕೊ ಸುವರ್ಣ ಮಹೋತ್ಸವ ಹಾಗೂ ಸಹಕಾರಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ .

Ad Widget

Ad Widget

ಈ ಬಗ್ಗೆ ಪ್ರಚಾರರಾರ್ಥವಾಗಿ, ಫೆ.9 ರ ಸಂಜೆ 4 ಗಂಟೆಗೆ ಕಾಲ್ನಡಿಗೆ ಜಾಥಾ ಮೂಲಕ ಬೃಹತ್ ಪ್ರಚಾರ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ಕಚೇರಿ ಪ್ರಕಟನೆ ತಿಳಿಸಿದೆ.

Ad Widget

Ad Widget
Click to comment

Leave a Reply

ದಕ್ಷಿಣ ಕನ್ನಡ

ನಿಮ್ಮ ಕಾವಲುಗಾರನಾಗಿ ನಾನಿರುವೆ: ಪದ್ಮರಾಜ್ ಆರ್. ಪೂಜಾರಿ; ಬಂಟ್ವಾಳದಲ್ಲಿ ಬಿರುಸಿನ ಪ್ರಚಾರ

Ad Widget

ಬಂಟ್ವಾಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧೆಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಬಿರುಸಿನ ಪ್ರಚಾರ ಕಾರ್ಯ ನಡೆಸಿದರು.

Ad Widget

Ad Widget

Ad Widget

Ad Widget

ಗುರುವಾರ ಬೆಳಗ್ಗಿನಿಂದಲೇ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧೆಡೆಗಳಿಗೆ ತೆರಳಿ ಪ್ರಚಾರ ಕಾರ್ಯದಲ್ಲಿ ಭಾಗಿಯಾದರು. ಅಂಗಡಿ – ಮಳಿಗೆ, ಮನೆಗಳಿಗೆ ತೆರಳಿ ಮತ ಯಾಚನೆ ನಡೆಸಿದರು.

Ad Widget

Ad Widget

ಅಭ್ಯರ್ಥಿ ತಮ್ಮ ಊರಿಗೆ ಬರುತ್ತಿದ್ದಂತೆ ಕಾರ್ಯಕರ್ತರು ಹೂ ಮಾಲೆ ಹಾಕಿ, ಶಾಲು ಹೊದಿಸಿ, ಇನ್ನೂ ಕೆಲವೆಡೆ ಪಟಾಕಿ ಸಿಡಿಸಿ ಬರಮಾಡಿಕೊಂಡರು. ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮತ ಯಾಚನೆ ಮಾಡುವಾಗ ಅವರ‌ ಜೊತೆ ತೆರಳಿ, ಅಭ್ಯರ್ಥಿ ವೇಗಕ್ಕೆ ಇನ್ನಷ್ಟು ಬಲ ತುಂಬಿದರು.

Ad Widget

Ad Widget

ಬಡಗ ಬೆಳ್ಳೂರು, ಅಮ್ಮುಂಜೆ – ಬಡಕಬೈಲು ಜಂಕ್ಷನ್, ಕಳ್ಳಿಗೆ – ಬ್ರಹ್ಮರಕೊಟ್ಲು, ಶೇಡಿಗುರಿ, ಬಾಳ್ತಿಲ, ಸೂರಿಕುಮೇರು, ಮಾಣಿ, ಬುಡೋಳಿ, ಪೆರ್ಲಾಪು- ಕಡೇಶ್ವಾಲ್ಯ, ನೇರಳಕಟ್ಟೆ, ಅನಂತಾಡಿ, ಮಂಗಿಲಪದವು, ಕಲ್ಲಡ್ಕ, ಅಮ್ಟೂರು, ಬೊಳ್ಳಾಯಿ, ಮಿತನಡ್ಕ, ಕನ್ಯಾನ, ಕೊಡುಂಗಾಯಿ, ಸಾಲೆತ್ತೂರು, ಬೋಳಂತೂರು, ಮಂಚಿ – ಕುಕ್ಕಾಜೆ ಜಂಕ್ಷನ್, ಸಜೀಪ ಮುನ್ನೂರು – ನಂದಾವರ ಜಂಕ್ಷನ್, ಪಾಣೆಮಂಗಳೂರು – ಮೆಲ್ಕಾರ್ ಜಂಕ್ಷನ್ ನಲ್ಲಿ ಬಿರುಸಿನ ಪ್ರಚಾರ ಕಾರ್ಯ ನಡೆಸಿದರು.

Ad Widget

Ad Widget

ಗೆಲುವಿಗೆ ನಾಂದಿ ಹಾಡಿ: ರಮಾನಾಥ ರೈ

ಮಾಜಿ ಸಚಿವ, ಜಿಲ್ಲಾ ಚುನಾವಣಾ ಉಸ್ತುವಾರಿ ರಮಾನಾಥ ರೈ ಮಾತನಾಡಿ, ಕಾಂಗ್ರೆಸ್ ಬಡವರ ಪರ ಕೆಲಸ ಮಾಡಿದ ಪಕ್ಷ. ಹಾಗಾಗಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದ ಅಗತ್ಯವಿದೆ. ಲೋಕಸಭಾ ಚುನಾವಣೆಯ ಗೆಲುವಿನ ಮೂಲಕ ಕಾಂಗ್ರೆಸ್’ನ ಗೆಲುವಿಗೆ ನಾಂದಿ ಹಾಡಿ ಎಂದರು.

ನಿಮ್ಮ ಕಾವಲುಗಾರನಾಗಿ ನಾನಿರುವೆ: ಪದ್ಮರಾಜ್ ಆರ್. ಪೂಜಾರಿ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವನ್ನು ಮಾಡಿಕೊಂಡಿ ಬಂದಿದ್ದೇನೆ. ಮುಂದೆಯೂ ಇಂತಹ ಸಾಮಾಜಿಕ ಕೆಲಸವನ್ನು ಮುಂದುವರಿಸುತ್ತೇನೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸರಕಾರ ಗ್ಯಾರೆಂಟಿ ಸಹಿತ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದನ್ನು ಮನೆಮನೆಗೆ ತಲುಪಿಸಿ. ಇದರೊಂದಿಗೆ ಉದ್ಯೋಗ ಸೃಷ್ಟಿಯ ಕೆಲಸವೂ ಜಿಲ್ಲೆಯಲ್ಲಿ ನಡೆಸಲಾಗುವುದು. ಮಾತ್ರವಲ್ಲ, ನಿಮ್ಮ ಸಮಸ್ಯೆಗಳ ಧ್ವನಿಯಾಗಿ ಸಂಸತ್ತಿನಲ್ಲಿ ಕೆಲಸ ಮಾಡುತ್ತೇನೆ. ಸಂಸತ್ ಸದಸ್ಯನಾಗಿ ನಿಮ್ಮ ಕಾವಲುಗಾರನಾಗಿ ಕೆಲಸ ನಿರ್ವಹಿಸುತ್ತೇನೆ ಎಂದರು.

ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು: ಹರೀಶ್ ಕುಮಾರ್

ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಬಡವರ ಪರವಾಗಿ ಇರುವ ಸರಕಾರ ಇಂದಿನ ಅಗತ್ಯ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬಂತೆ ಕಾಂಗ್ರೆಸ್ ಸರಕಾರ ಕೆಲಸ ಮಾಡುತ್ತಾ ಬಂದಿದೆ. ಮುಂದೆಯೂ ಬಡವರ ಬಗ್ಗೆ ಕಾಳಜಿ ವಹಿಸಲು, ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ದುಡಿಯಲು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಧಾರ್ಮಿಕ ಕೇಂದ್ರಗಳಿಗೆ ಭೇಟಿ:
ಬೆಳಿಗ್ಗೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಮುಂದಾದ ಪದ್ಮರಾಜ್ ಆರ್. ಪೂಜಾರಿ ಅವರು, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಮೊಡಂಕಾಪು ಚರ್ಚ್, ನರಿಕೊಂಬು ಹನುಮಾನ್ ಮಂದಿರ, ಮೊಗರ್ನಾಡು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ, ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಬಿಲ್ಲವ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಚಂದ್ರಪ್ರಕಾಶ್ ಶೆಟ್ಟಿ, ಅಶ್ವನಿ ಕುಮಾರ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಸುದರ್ಶನ್ ಜೈನ್, ಸಂಜೀವ ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಯೂತ್ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಸುರಯ್ಯ ಅಂಜುಮ್, ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಕೊಳ್ನಾಡು ವಲಯ ಕಾಂಗ್ರೆಸ್ ಅಧ್ಯಕ್ಷ ಪವಿತ್ರ ಪೂಂಜಾ, ಉಪಾಧ್ಯಕ್ಷ ಅಬ್ದುಲ್ ರಜಾಕ್, ಅಬ್ದುಲ್ ಮಜೀದ್, ಜಿಪಂ ಮಾಜಿ ಸದಸ್ಯ ಕೃಷ್ಙ ನಾಯ್ಕ, ದೇವಕಿ, ಶಾಹುಲ್ ಹಮೀದ್, ಮೊಯಿದ್ದೀನ್, ಗಂಗಾಧರ, ವಸಂತ ಬೆಳ್ಚಾಡ, ಕೃ಼ಷ್ಣಯ್ಯ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Continue Reading

ಪುತ್ತೂರು

ನರಿಮೊಗರು : ಬೈಕ್ – ಜೀಪು ನಡುವೆ ಭೀಕರ ಅಪಘಾತ : ಬೈಕ್ ಸವಾರ ಮೃತ್ಯು – ಇಬ್ಬರು ಮಕ್ಕಳು ಗಂಭೀರ : ಬೈಕನ್ನು ಎಳೆದೊಯ್ದ ಜೀಪು – ಜೀಪು ತೆಗೆಯಲು ಸಾರ್ವಜನಿಕರ ತೀವ್ರ ವಿರೋಧ

Ad Widget

ಪುತ್ತೂರು: ಬೈಕ್ ಮತ್ತು ಜೀಪೊಂದರ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನರಿಮೊಗರು ಸಮೀಪದ ಪಾಪೆತ್ತಡ್ಕ ಎಂಬಲ್ಲಿ ಎ.17ರಂದು ನಡೆದಿದೆ.

Ad Widget

Ad Widget

Ad Widget

Ad Widget

ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಜೀಪು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದೆ.

Ad Widget

Ad Widget

ಬೈಕ್ ಸವಾರ ಮುಂಡೂರು ಗ್ರಾಮದ ಕಡ್ಯ ನಿವಾಸಿ, ದಿ.ಬಾಳಪ್ಪ ಗೌಡರ ಪುತ್ರ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ ಗೌಡ(46.ವ) ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲೋಕೇಶ್ ಅವರ ಜೊತೆ ಬೈಕ್‌ನಲ್ಲಿದ್ದ ಅವರ ಮಕ್ಕಳಾದ ದೀಪ್ತಿ(8.ವ) ಹಾಗೂ ಗಗನ್ (4.ವ) ಗಂಭೀರ ಗಾಯಗೊಂಡಿದ್ದು ಅವರನ್ನು ಪುತ್ತೂರು ಸಿಟಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

Ad Widget

Ad Widget

ಔಷಧಿಗೆ ಬಂದಿದ್ದರು: ಲೋಕೇಶ್ ಅವರು ತಮ್ಮ ಮಕ್ಕಳಿಗೆ ಔಷಧಿಗೆಂದು ಪುರುಷರಕಟ್ಟೆಗೆ ಹೋಗಿ ಬರುವಾಗ ಈ ಅಪಘಾತ ಸಂಭವಿಸಿದೆ.

Ad Widget

Ad Widget

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಲೋಕೇಶ್ ಗೌಡ ಅವರು ಪತ್ನಿ ಮಾಲತಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.

ಅಪಘಾತ ನಡೆದ ವೇಳೆ ಘಟನಾ ಸ್ಥಳದಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಪುತ್ತೂರು ಜಾತ್ರೆ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳ ಓಡಾಟ ಇದ್ದುದರಿಂದ ರಸ್ತೆ ಸಂಪೂರ್ಣ ಬ್ಲಾಕ್ ಆಗಿ ವಾಹನಗಳು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡು ಬಂದಿತ್ತು.

ಜೀಪು ತೆಗೆಯಲು ವಿರೋಧ: ಲಾಠಿ ಪ್ರಹಾರ: ಅಪಘಾತದ ಬಳಿಕ ರಸ್ತೆ ಬದಿಯ ಕಣಿಯಲ್ಲಿದ್ದ ಜೀಪನ್ನು ಅಲ್ಪ ಸಮಯದ ಬಳಿಕ ಚಾಲಕನ ಕಡೆಯವರು ಸ್ಥಳದಿಂದ ತೆರವು ಮಾಡಲು ಪ್ರಯತ್ನಿಸಿದಾಗ ಸ್ಥಳದಲ್ಲಿದ್ದ ಯುವಕರು ಜೀಪು ತೆಗೆಯುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಎರಡೂ ತಂಡಗಳ ಮಧ್ಯೆ ಮಾತಿನ ಚಕಮಕಿ, ವಾಗ್ವಾದ ನಡೆಯಿತು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಜನರನ್ನು ಸ್ಥಳದಿಂದ ಚದುರಿಸಿದರು.

ಕಠಿಣ ಕ್ರಮಕ್ಕೆ ಆಗ್ರಹ: ಜೀಪು ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಬವಿಸಿ ಸಾವನ್ನಪ್ಪಿದ್ದು ಜೀಪು ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳದಲ್ಲಿ ಸೇರಿದ್ದವರು ಆಕ್ರೋಶ ವ್ಯಕ್ತಪಡಿಸುತ್ತಿದ್ದ ದೃಶ್ಯ ಕಂಡು ಬಂತು.

ರಾಂಗ್ ಸೈಡಲ್ಲಿ ಜೀಪು ಬಂದದ್ದೇ ಘಟನೆಗೆ ಕಾರಣ..? ಜೀಪು ಸವಾರ ಜೀಪನ್ನು ರಾಂಗ್ ಸೈಡಲ್ಲಿ ಚಲಾಯಿಸಿದ್ದೇ ಘಟನೆಗೆ ಕಾರಣ ಎನ್ನುವ ಆರೋಪ ಸ್ಥಳೀಯವಾಗಿ ಕೇಳಿ ಬಂದಿದೆ. ಜೀಪಿನಲ್ಲಿ ಐದು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ.

ಬೈಕ್‌ನ್ನು ಎಳೆದೊಯ್ದ ಜೀಪ್..!

ಅಪಘಾತದ ಭೀಕರತೆ ಎಷ್ಟಿತ್ತೆಂದರೆ ಬೈಕ್‌ಗೆ ಜೀಪು ಗುದ್ದಿ 150 ಮೀ. ದೂರ ಬೈಕ್‌ನ್ನು ಜೀಪ್ ಎಳೆದುಕೊಂಡು ಹೋಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಬೈಕ್ ಜೀಪಿನ ಅಡಿಯಲ್ಲಿ ಅಪ್ಪಚ್ಚಿಯಾಗಿತ್ತು.

ಗೃಹ ಪ್ರವೇಶದ ಸಂತಸದಲ್ಲಿದ್ದ ಮೃತ ಲೋಕೇಶ್ :

ಮೃತ ಲೋಕೇಶ್ ಅವರ ಮನೆ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು ಇನ್ನೇನು ಕೆಲವೇ ಸಮಯದಲ್ಲಿ ಗೃಹ ಪ್ರವೇಶ ಮಾಡುವ ಸಂತಸದಲ್ಲಿದ್ದರು ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

Continue Reading

ಪುತ್ತೂರು

Puttur Jathre | ಪುತ್ತೂರ ಒಡೆಯನ ದರ್ಶನ ಬಲಿಗೆ ಕ್ಷಣಗಣನೆ – ‘ಪುತ್ತೂರು ಬೆಡಿ’ ಭರದ ತಯಾರಿ – ಶೃಂಗಾರಗೊಂಡ ಬ್ರಹ್ಮರಥ

Ad Widget

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ (Puttur Jathre) ಎ.10ರಿಂದ ಪ್ರಾರಂಭವಾಗಿದ್ದು, ಎ.17ರಂದು ಮಧ್ಯಾಹ್ನ ದರ್ಶನ ಬಲಿ ರಾತ್ರಿ ಬ್ರಹ್ಮಕಲಶೋತ್ಸವ ಹಾಗೂ ಪುತ್ತೂರು ಬೆಡಿ ಎಂದೇ ಪ್ರಸಿದ್ದಿಯಾಗಿರುವ ವಿಶೇಷ ಸುಡುಮದ್ದುಗಳ ಪ್ರದರ್ಶನ ನಡೆಯಲಿದೆ.

Ad Widget

Ad Widget

Ad Widget

Ad Widget

ಇದೀಗ ಶ್ರೀದೇವರ ವಿಶೇಷ ದರ್ಶನ ಬಲಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಭಕ್ತ ಸಾಗರ ದೇವಸ್ಥಾನಕ್ಕೆ ಹರಿದು ಬರುತ್ತಿದೆ. ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ ನಡೆಯಲಿದೆ.

Ad Widget

Ad Widget

ಜಾತ್ರಾ ಮಹೋತ್ಸವ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ. ಬಂದೋಬಸ್ತಿಗಾಗಿ ಜಿಲ್ಲೆಯ ವಿವಿಧ ಕಡೆಗಳಿಂದ ಪೊಲೀಸರನ್ನು ಕರೆಸಲಾಗಿದೆ. ಜೊತೆಗೆ ಸಶಸ್ತ್ರ ಮೀಸಲು ಪಡೆ, ಗೃಹ ರಕ್ಷಕ ದಳದವರೂ ಬಂದೋಬಸ್ತ್ ನಿರತರಾಗಿದ್ದಾರೆ.ಮಪ್ತಿಯಲ್ಲಿಯೂ ನೂರಾರು ಪೊಲೀಸರು ಕಾರ್ಯನಿರತರಾಗಿದ್ದಾರೆ.ಡಿವೈಎಸ್ಪಿ ಅರುಣ್ ನಾಗೇಗೌಡರ ನೇತೃತ್ವದಲ್ಲಿ ಬಂದೋಬಸ್ತ್ ನಡೆಯಲಿದೆ.

Ad Widget

Ad Widget

ಎ.17ರಂದು ಬೆಳಿಗ್ಗೆ, ಶ್ರೀ ದೇವಳದಲ್ಲಿ ದರ್ಶನ ಬಲಿ, ಬಟ್ಟಲು ಕಾಣಿಕೆ ಸಹಿತ ವಿವಿಧ ವೈದಿಕ ಕಾರ್ಯಕ್ರಮ ನಡೆಯಲಿದೆ.ರಾತ್ರಿ ಬ್ರಹ್ಮರಥೋತ್ಸವ ನಡೆಯಲಿದೆ. ಈ ವರ್ಷ ಸುಮಾರು ರೂ.8.5 ಲಕ್ಷ ವೆಚ್ಚದಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ. ಕಾರ್ಕಳದ ರಮಾನಂದ ಮತ್ತು ಪುತ್ತೂರಿನ ನಾಗೇಶ್ ರಾವ್ ಅವರು ಸಿಡಿಮದ್ದು ಪ್ರದರ್ಶನದ ಗುತ್ತಿಗೆ ವಹಿಸಿಕೊಂಡಿದ್ದಾರೆ.

Ad Widget

Ad Widget

ಮೊಬೈಲ್ ಸಿಸಿ ಕ್ಯಾಮರಾ ಕಂಟ್ರೋಲ್ ರೂಮ್: ಜಾತ್ರಾ ಗದ್ದೆಯಲ್ಲಿ ಹಲವು ಕಡೆ ಸಿಸಿ ಕ್ಯಾಮರ ಆಳವಡಿಸಲಾಗಿದೆ.ದೇವಳದ ರಥ ಮಂದಿರದ ಬಳಿ ಮೊಬೈಲ್ ಸಿಸಿ ಕ್ಯಾಮರಾ ಕಂಟ್ರೋಲ್ ರೂಮ್ ವ್ಯವಸ್ಥೆ ಮಾಡಲಾಗಿದೆ.ಶೇಟ್ ಇಲೆಕ್ಟೋನಿಕ್ಸ್ ಸಂಸ್ಥೆ ಸಿಸಿ ಕ್ಯಾಮರಾಗಳ ನಿಯಂತ್ರಣ ಮಾಡಲಿದ್ದಾರೆ. ಪೊಲೀಸರ ಜೊತೆ ಸಿಸಿ ಕ್ಯಾಮರಾ ಕಣ್ಣಾವಲು ಕಾರ್ಯ ಮಾಡುತ್ತಿದೆ.

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading