Arun Kumar Putthila | ಪುತ್ತೂರು: ಅಕ್ರಮ ಗೋಸಾಟ – ತಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು – ತಕ್ಷಣ ಸ್ಥಳಕ್ಕೆ ತೆರಳಿ ಗೋಹತ್ಯೆ ನಿಷೇಧ ಕಾಯ್ದೆಯಂತೆ ಪ್ರಕರಣ ದಾಖಲಾಗಬೇಕು ಹಾಗೂ ಚೆಕ್ ಪೋಸ್ಟ್ ನಿರ್ಮಿಸಬೇಕೆಂದು ಒತ್ತಾಯಸಿದ ಅರುಣ್ ಕುಮಾರ್ ಪುತ್ತಿಲ : ನೂತನ ಕಾಯ್ದೆಯಂತೆ ಮೂವರ ವಿರುದ್ಧ ಪ್ರಕರಣ ದಾಖಲು

IMG-20230212-WA0320
Ad Widget

Ad Widget

Ad Widget

ಪುತ್ತೂರು: ಅಕ್ರಮ ಗೋ ಸಾಗಾಟವನ್ನು ತಡೆದ ಹಿಂದೂ ಕಾರ್ಯಕರ್ತರು ಜಾನುವಾರುಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ಕರ್ನಾಟಕ ಕೇರಳ ಗಡಿಭಾಗದ ಆರ್ಲಪದವಿನಲ್ಲಿ ನಡೆದಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ (Arun Kumar Putthila) ನೂತನ ಕಾಯ್ದೆಯಂತೆ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ

Ad Widget

ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ನೂತನ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

ಕೇರಳ ನೊಂದಾಣಿಯ ವಾಹನದಲ್ಲಿ ದನ ಹಾಗೂ ಗಂಡು ಕರುವನ್ನು ಅಕ್ರಮವಾಗಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದು, ಈ ಬಗ್ಗೆ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ವಾಹನವನ್ನು ತಡೆದಿದ್ದಾರೆ.

Ad Widget

ಕಾರ್ಯಕರ್ತರು ಈ ಬಗ್ಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಪಂದಿಸಿದ ಅರುಣ್ ಕುಮಾರ್ ಪುತ್ತಿಲ ರವರು ಸ್ಥಳಕ್ಕೆ ಆಗಮಿಸಿ ಪೊಲೀಸರೊಂದಿಗೆ ಮಾತುಕತೆ ನಡೆಸಿ, ದನಗಳನ್ನು ಪೊಲೀಸರಿಗೊಪ್ಪಿಸಿದ್ದು, ಮುಂದೆ ಈ ಸ್ಥಳದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

Ad Widget

Ad Widget

ದನ ಸಾಗಾಟದ ಬಗ್ಗೆ ನರಿಮೊಗರು ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ನೀಡಲಾದ ಒಪ್ಪಿಗೆ ಪತ್ರವೊಂದಿದ್ದು ಜಾನುವಾರುಗಳನ್ನು ಸಾಕಲು ತೆಗೆದುಕೊಂಡು ಹೋಗುವುದಾದರೆ ಪಶು ವೈದ್ಯರ ಸಹಿ ಆಗಬೇಕಿತ್ತು. ಆದರೇ ಅಕ್ರಮ ಗೋ ಸಾಗಾಟಕ್ಕೆ ಕುಮ್ಮಕ್ಕು ನೀಡಲು ನರಿಮೊಗರು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಕೃಷ್ಣರಾಜ್ ಎಂಬವರು ಪರ್ಮಿಷನ್ ಕೊಟ್ಟು ಅಧಿಕಾರದ ದುರುಪಯೋಗ ಮಾಡಿರುವುದಾಗಿ ಹಾಗೂ ಗೋ ಹತ್ಯೆಗೆ ಪ್ರಚೋದನೆ ಕೊಟ್ಟದಕ್ಕಾಗಿ ಅವರ ಮೇಲೆ ಎಫ್.ಐ.ಆರ್ ಮಾಡಬೇಕು ಎಂದು ಸಾರ್ವಜನಿಕರು ಮತ್ತು ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಪ್ರಕರಣ ದಾಖಲು: ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ನೆಲ್ಲಿತ್ತಿಮಾರ್ ಎಂಬಲ್ಲಿ ಅಶೋಕ್‌ ಲೇಲ್ಯಾಂಡ್‌ ಮಿನಿ ಗೂಡ್ಸ್‌ ವಾಹನವೊಂದರಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದಾಗ ಪುತ್ತೂರು ಗ್ರಾಮಾಂತರ ಠಾಣಾ ಸಬ್ ಇನ್ಸ್ ಪೆಕ್ಟರ್ ಶ್ರೀನಾಥ ರೆಡ್ಡಿ ನೇತೃತ್ವದ ತಂಡ ಪರಿಶೀಲಿಸಲಾಗಿ ಜಾನುವಾರು ಸಾಗಾಟಕ್ಕೆ ಯಾವುದೇ ಪರವಾನಿಗೆ ಅಥವಾ ಪಶು ವೈದ್ಯಾಧಿಕಾರಿಯವರ ಪ್ರಮಾಣಪತ್ರ ಇಲ್ಲದೇ ಒಂದು ಹಸು ಮತ್ತು ಒಂದು ಗಂಡು ಕರುವನ್ನು ಸಾಗಿಸುತ್ತಿರುವುದು ಕಂಡುಬಂದಿದೆ.

ಈ ಬಗ್ಗೆ ಕೃತ್ಯದಲ್ಲಿ ತೊಡಗಿದ್ದ ವಿಲ್ಲಿ ಲೂಯಿಸ್ ಡಿ ಸೋಜಾ, ಸಂತೋಷ್ ಡಿ ಸೋಜಾ, ಸಿಲ್ವೆಸ್ಟರ್ ಡಿ ಸೋಜಾ ಎಂಬವರುಗಳನ್ನು ದಸ್ತಗಿರಿ ಮಾಡಿ, ಸದ್ರಿ ವಾಹನ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 013-2023 ಕಲಂ:- 5, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ಯಂತೆ ಪ್ರಕರಣ ದಾಖಲಿಸಲಾಗಿದೆ.

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: