ಬೆಂಗಳೂರಿನಲ್ಲಿ ಪ್ರಧಾನಿ ಔತಣಕೂಟಕ್ಕೆ ಯಶ್, ರಿಷಬ್ ಶೆಟ್ಟಿ ಸಹಿತ ಹಲವು ಸಾಧಕರು – ಅಯ್ಯೋ ಶ್ರದ್ಧಾಳ ಕಂಡು ‘ಅಯ್ಯೋ’ ಎಂದ ಪ್ರಧಾನಿ: ವಿದೇಶದಲ್ಲಿ ಸಿನಿಮಾಕ್ಕೆ ಕೊಡುವ ಪ್ರೋತ್ಸಾಹದಂತೆ ಭಾರತದಲ್ಲೂ ಕೊಡಿ ಎಂದು ಬೇಡಿಕೆ ಇಟ್ಟ ಕಲಾವಿದರು

FB_IMG_1676299671800
Ad Widget

Ad Widget

Ad Widget

ಪ್ರಧಾನಮಂತ್ರಿ ಕಚೇರಿಯಿಂದ ಬಂದ ನೇರ ಆಹ್ವಾನದ ಮೇರೆಗೆ ಬೆಂಗಳೂರಿನ ರಾಜಭವನದಲ್ಲಿ ಭಾನುವಾರ ರಾತ್ರಿ ನಡೆದ ಔತಣಕೂಟದಲ್ಲಿ ಕನ್ನಡ ಚಿತ್ರರಂಗದಿಂದ ರಾಕಿಂಗ್ ಸ್ಟಾರ್ ಯಶ್, ನಿರ್ಮಾಪಕ ವಿಜಯ್ ಕಿರಗಂದೂರು, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ನಟ ನಿರ್ದೇಶಕ ರಿಷಬ್ ಶೆಟ್ಟ ಹಾಗೂ ಶ್ರದ್ಧಾ ಜೈನ್ ಭಾಗವಹಿಸಿದ್ದರು. ಇವರೊಂದಿಗೆ ಕ್ರೀಡಾ ಕ್ಷೇತ್ರದ ಸಾಧಕರು ಪ್ರಧಾನಿ ಜೊತೆ ಔತಣಕೂಟದಲ್ಲಿ ಭಾಗವಹಿಸಿದ್ದರು.

Ad Widget

Ad Widget

Ad Widget

Ad Widget

ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೊತೆಗೆ ಇವರೆಲ್ಲಾ ಮಾತುಕತೆ ನಡೆಸಿದರು. ಇದೇ ವೇಳೆ, ಕನ್ನಡ ಚಲನಚಿತ್ರ ರಂಗದ ಬೆಳವಣಿಗೆ ಬಗ್ಗೆ ಪ್ರಶಂಸಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ದೇಶ ವಿದೇಶಗಳ ಪ್ರೇಕ್ಷಕರ ಗಮನ ಸೆಳೆದ ‘ಕಾಂತಾರ’ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೇ, ಕನ್ನಡ ಚಿತ್ರೋದ್ಯಮದ ಬೆಳವಣಿಗೆಗೆ ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

Ad Widget

ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯರಾಗಿರುವ ನಟಿ ಶ್ರದ್ಧಾ ಜೈನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ರಿಷಬ್ ಶೆಟ್ಟಿ ತಂಡದೊಂದಿಗೆ ಭೇಟಿಯಾದ ಸಂತಸವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

Ad Widget

Ad Widget

”ನಮಸ್ಕಾರ, ಹೌದು, ನಾನು ನಮ್ಮ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಯವರನ್ನು ಭೇಟಿಯಾದೆ. ನನಗೆ ಅವರ ಮೊದಲ ಮಾತು ‘ಅಯ್ಯೋ!’. ನಾನು ಕಣ್ಣು ಮಿಟುಕಿಸುತ್ತಿಲ್ಲ, ಅದು ನನ್ನ ‘ಓ ಮೈ ಜೋಡ್, ಅವರು ನಿಜವಾಗಿಯೂ ಹೇಳಿದ್ದಾರೆ, ಇದು ನಿಜವಾಗಿಯೂ ನಡೆದಿದೆ!!!!’ ನೋಡಿ. ಭಾರತದ ಪ್ರಧಾನ ಮಂತ್ರಿಗಳಿಗೆ ಧನ್ಯವಾದ! ಎಂದು ಸಂಭ್ರಮವನ್ನು ಶ್ರದ್ಧಾ ಜೈನ್ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ಕನ್ನಡದ ಸಿನಿಮಾಗಳು ಉತ್ತರ ಭಾರತದ ಚಿತ್ರಗಳಿಗಿಂತ ಹೆಚ್ಚು ಖ್ಯಾತಿ ಗಳಿಸುತ್ತಿರುವುದಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ‌ ವ್ಯಕ್ತಪಡಿಸಿದರು. ”ಕನ್ನಡದ ಸಿನಿಮಾಗಳಲ್ಲಿ ನಾಡಿನ ಸಾಂಸ್ಕೃತಿಕ ಪರಂಪರೆ ಹಾಗೂ ಪ್ರಾದೇಶಿಕತೆ ಬಿಂಬಿಸಲು ಒತ್ತು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಈ ಮೂಲಕ ದೇಶ-ವಿದೇಶಗಳಿಗೆ ನಮ್ಮ ಪರಂಪರೆಯನ್ನು ಪರಿಚಯಿಸಿ ಕನ್ನಡ ಚಿತ್ರರಂಗ ಯಶಸ್ಸು ಗಳಿಸುತ್ತಿರುವುದು ದೇಶದ ಗೌರವ ಹೆಚ್ಚುವಂತೆ ಮಾಡಿದೆ” ಎಂದರು ನರೇಂದ್ರ ಮೋದಿ.

”ನಮ್ಮ ದೇಶದ ದ್ವೀಪಗಳನ್ನು ಚಿತ್ರೀಕರಣಕ್ಕೆ ಸೂಕ್ತವಾಗುವಂತೆ ಅಭಿವೃದಿ ಪಡಿಸುವ ಯೋಜನೆ ಸರ್ಕಾರಕ್ಕೆ ಇದೆ. ನಿಮ್ಮ ರಚನಾತ್ಮಕ ಯೋಚನೆಗಳನ್ನು ಪತ್ರದ ಮೂಲಕ ಹಂಚಿಕೊಳ್ಳಿ. ದೂರವಾಣಿ ಮೂಲಕ ಕೂಡ ನಿಮ್ಮ ಜೊತೆ ಸಂಪರ್ಕದಲ್ಲಿ ಇರುತ್ತೇವೆ” ಎಂದು ನರೇಂದ್ರ ಮೋದಿ ತಿಳಿಸಿದರು.

‘ಕಾಂತಾರ’ ಸಿನಿಮಾದ ಬಗ್ಗೆ ಪ್ರಸ್ತಾಪಿಸಿದ ಮೋದಿ, ”ಸ್ಥಳೀಯತೆ, ಪರಂಪರೆ ಹಾಗೂ ಸಂಸ್ಕೃತಿ ಪರಿಚಯಿಸುವ ಇಂತಹ ಸಿನಿಮಾಗಳು ಹೆಚ್ಚಿನ ಸಂಖ್ಯೆಯಲ್ಲಿ ಹೊರಹೊಮ್ಮಬೇಕು” ಎಂದು ಅಭಿಪ್ರಾಯಪಟ್ಟರು. ಹೊಂಬಾಳೆ ಫಿಲ್ಮ್ಸ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಮೋದಿ, ”ಪ್ರತಿಭಾವಂತರಿಗೆ ಅವಕಾಶಗಳನ್ನು ಕೊಟ್ಟು ಕನ್ನಡ ಚಿತ್ರೋದ್ಯಮವನ್ನು ಹೊಸ ಎತ್ತರಕ್ಕೆ ಏರಿಸುವ ಕೆಲಸ ಮಾಡುತ್ತಿರುವ ಕಾರ್ಯ ಶ್ಲಾಘನೀಯ” ಎಂದರು

ಪುನೀತ್ ರಾಜ್‌ಕುಮಾರ್ ಅವರ ಜನಪ್ರಿಯತೆಯನ್ನು ಪ್ರಧಾನಿ ಮೋದಿ ಸ್ಮರಿಸಿದರು. ಯಶ್ ಮತ್ತು ರಿಷಬ್ ಶೆಟ್ಟಿ ಅವರ ಕಲಾಪ್ರೌಢಿಮೆಯನ್ನು ಮೋದಿ ಮೆಚ್ಚಿದರು.

”ಅಶ್ವಿನಿ ಜೀ” ಎಂದು ಮಾತು ಆರಂಭಿಸಿದ ಪ್ರಧಾನಿ ಮೋದಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಯೋಗಕ್ಷೇಮ ವಿಚಾರಿಸಿದರು. ಅಪ್ಪು ನಿಧನಕ್ಕೆ ಸಂತಾಪ ಸೂಚಿಸಿದ ನಂತರ, ಅಪ್ಪು ಅವರ ಕೊನೆಯ ಸಿನಿಮಾ ‘ಗಂಧದ ಗುಡಿ’ ಸಮಾಜಕ್ಕೆ ಒಳ್ಳೆ ಸಂದೇಶ ಕೊಟ್ಟಿದೆ ಎಂದರು. ನಿರ್ಮಾಣ ಸಂಸ್ಥೆಯನ್ನ ಅಶ್ವಿನಿ ನಡೆಸುತ್ತಿರುವ ಬಗ್ಗೆ ಕೇಳಿ ತಿಳಿದುಕೊಂಡ ಮೋದಿ ಅವರು, ”ನಿಮ್ಮ ನಿರ್ಮಾಣದಲ್ಲಿ ಒಳ್ಳೆಯ ಚಿತ್ರಗಳು ಹೊರಬರಲಿ” ಎಂದು ಹಾರೈಸಿದರು.

”ಸರ್ಕಾರಕ್ಕೆ ಸಿನಿಮಾ ಕ್ಷೇತ್ರದಿಂದ ಅತಿ ಹೆಚ್ಚು ತೆರಿಗೆ ಬರುತ್ತಿದೆ. ಇದನ್ನು ಗಮನದಲ್ಲಿರಿಸಿಕೊಂಡು ಸಿನಿಮಾ ಕ್ಷೇತ್ರಕ್ಕೆ ಹೆಚ್ಚಿನ ಸಹಕಾರ ನೀಡಬೇಕು. ಬೇರೆ ದೇಶಗಳಲ್ಲಿ ಸಿನಿಮಾಗೆ ಕೊಡುತ್ತಿರುವ ಹಾಗೆಯೇ ಇಲ್ಲೂ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಶೂಟಿಂಗ್‌ಗಾಗಿ ಬೇರೆ ದೇಶದವರು ನಮ್ಮಲ್ಲಿಗೆ ಬರುವಂತೆ ಆಗಬೇಕು. ಐಟಿ-ಬಿಟಿ ಕ್ಷೇತ್ರಕ್ಕೆ ಕೊಡುವಂತೆ ಸಿನಿಮಾದವರಿಗೂ ಬೆಂಬಲ ನೀಡಬೇಕು.

ಚಿತ್ರೀಕರಣಕ್ಕೆ ಬೇಕಾದ ಸ್ಟುಡಿಯೋ ಮತ್ತಿತರ ಸವಲತ್ತು ಕಲ್ಪಿಸಬೇಕು. ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡುವವರ ಹಿತರಕ್ಷಣೆಗೆ ಆದ್ಯತೆ ಕೊಡಬೇಕು” ಎಂಬುದನ್ನು ಚಿತ್ರತಂಡದವರು ಪ್ರಧಾನಿ ಮೋದಿ ಅವರ ಗಮನಕ್ಕೆ ತಂದರು.

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: