Connect with us

ರಾಷ್ಟ್ರೀಯ

ಕಡಬದಲ್ಲೊಂದು ರಿಯಲ್ ʼಕಾಂತಾರʼ – ರೊಚ್ಚಿಗೆದ್ದ ಗ್ರಾಮಸ್ಥರಿಂದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ದ ಹಲ್ಲೆ- ಇಲಾಖಾ ವಾಹನ ಧ್ವಂಸ – 7 ಜನರ ಬಂಧನ

Ad Widget

Ad Widget

Ad Widget

Ad Widget Ad Widget

kadaba : ಫೆ 24 : ಪ್ರಕೃತಿ ಮತ್ತು ಮನುಷ್ಯ ನಡುವಿನ ಸಂಘರ್ಷದಲ್ಲಿ ಕಾಡಿನ ಸಮೀಪದ ಗ್ರಾಮಸ್ಥರು ಅರಣ್ಯ ಇಲಾಖೆಯ (Forest Department) ವಿರುದ್ದ ಹೋರಾಡುವ ಕಥಾ ಹಂದರವನ್ನುಳ್ಳ ಕಾಂತಾರ ( Kantara) ತೆರೆ ಕಂಡು ಭರ್ಜರಿ ಯಶಸ್ಸು ಕಂಡದ್ದು ನಮಗೆಲ್ಲಾ ಗೊತ್ತೆ ಇದ್ದೆ. ಕಳೆದ ಶತಮಾನದ 90 ರ ದಶಕದ ಅಸುಪಾಸಿನಲ್ಲಿ ನಡೆದಿದೆ ಎನ್ನಲಾದ ಆ ದಂತ ಕಥೆಯನ್ನು ಒಂದಷ್ಟು ಹೋಲುವ ಘಟನೆಯೊಂದು 21 ನೇ ಶತಮಾನದಲ್ಲೂ ನಡೆದಿರುವುದು ವಿಪರ್ಯಾಸ.

Ad Widget

Ad Widget

Ad Widget

Ad Widget

Ad Widget

ತಮ್ಮ ಜಾಗವನ್ನು ಅರಣ್ಯ ಇಲಾಖೆ ತಮ್ಮ ಸುಪರ್ದಿಗೆ ತೆಗೆದುಕೊಳ್ಳುತ್ತದೆ ಎಂಬ ಭಯದಿಂದ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿ ಜತೆ ಜಗಳವಾಡುವ ದೃಶ್ಯ ಕಾಂತಾರ ಸಿನಿಮಾದಲ್ಲಿದ್ದರೇ, ನಮ್ಮ ಜಮೀನಿಗೆ ಬಂದ ಕಾಡಾನೆಯನ್ನು (Wild Elephant) ಅರಣ್ಯ ಇಲಾಖೆಯವರು ಸೆರೆ ಹಿಡಿದಿಲ್ಲ ಎಂದು ಕಡಬದ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬಂದಿ ಹಾಗೂ ಪೊಲೀಸರಿಗೆ ಹಲ್ಲೆ ನಡೆಸಿ ವಾಹನ((Forest officers vehicles) ಜಖಂಗೊಳಿಸಿದ್ದಾರೆ. ಕಡಬ ಗಲಾಟಗೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಅತ್ಯಂತ ಹಿಂದುಳಿದ ತಾಲೂಕು ಎಂದೇ ಗುರುತಿಸಲಾಗುವ , ಪಶ್ಚಿಮ ಘಟ್ಟದ ಸರಹದ್ದಿನಲ್ಲಿರುವ ಕಡಬದಲ್ಲಿ ಕಾಡಾನೆ ದಾಂಧಲೆ ಹೊಸದೆನ್ನಲ್ಲ. ಇಲ್ಲಿನ ಕೃಷಿಕರು ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ನಿತ್ಯ ನಿರಂತರವಾದದ್ದು . ಪ್ರಾಣಿಗಳ ಕಾಟದಿಂದ ಉಳಿದ ಫಸಲಷ್ಟೆ ನಮ್ಮ ಪಾಲಿನ ಪಂಚಾಮೃತ ಎಂದು ತಿಳಿದು ಕೃಷಿ ಮಾಡುತ್ತಿರುವವರು ಇಲ್ಲಿನ ರೈತಾಪಿ ವರ್ಗ.

Ad Widget

Ad Widget

ಎರಡು –ಮೂರು ತಿಂಗಳುಗಳ ಹಿಂದೆ ಕನಿಷ್ಟ 7-8 ಆನೆಗಳನ್ನು ಹೊಂದಿರುವ ಕಾಡಾನೆಗಳ ಪುಂಡೊಂದು ನಾಡಿಗೆ ಬಂದಿದೆ. ಇದು ಕೂಡ ಅಲ್ಲಿನ ಜನರಿಗೆ ಹೊಸ ಸಂಗತಿಯಲ್ಲ. ಈ ಬಾರಿ ನಾಡಿಗೆ ಬಂದ ಕಾಡಾನೆಗಳು ಫಸಲನಷ್ಟೆ ಹಾನಿ ಮಾಡದೇ ಮನುಷ್ಯನ ಜೀವಕ್ಕೂ ಕುತ್ತು ತಂದವು. ಒಂದೇ ದಿನ ಇಬ್ಬರನ್ನು ಬಲಿ ತೆಗೆದುಕೊಂಡು ರೌಧ್ರವಾತರ ತೋರಿದ್ದವು. ಈ ಭಯಾನಕ ಘಟನೆಯೂ ಕಡಬ ತಾಲೂಕಿನ 7 ಗ್ರಾಮದ ಜನರನ್ನು ಭಯದ ನೆರಳಿನಲ್ಲಿ ಬದುಕುವಂತೆ ಮಾಡಿದವು.

Ad Widget

Ad Widget

ಕಾಡಾನೆ ಇಬ್ಬರನ್ನು ಕೊಂದ ಘಟನೆ ಸಹಜವಾಗಿಯೇ ಕಡಬದ ಜನರನ್ನು ರೊಚ್ಚಿಗೆಬ್ಬಿಸಿದ್ದವು. 5 ಸಾವಿರಕ್ಕೂ ಮಿಕ್ಕಿ ಸಾರ್ವಜನಿಕರು ಆನೆ ದಾಳಿಯಿಂದ ಮೃತಪಟ್ಟವರ ಶವವಿಟ್ಟು ಪ್ರತಿಭಟನೆ ನಡೆಸಿ ಅಡಳಿತಶಾಹಿಗೆ ಎಚ್ಚರಿಕೆ ನೀಡುವ ಕೆಲಸ ಮಾಡಿದ್ದರು. ಆಕ್ರೋಶಕ್ಕೆ ಬೆದರಿದ ಸರಕಾರ ದ.ಕ ಡಿಸಿ ಹಾಗೂ ಸಚಿವ ಅಂಗಾರರನ್ನು ಘಟನಾ ಸ್ಥಳಕ್ಕೆ ಕಳುಹಿಸಿತ್ತು. ಹಲವು ತಿಂಗಳುಗಳಿಂದ ಗ್ರಾಮಸ್ಥರು ಕಾಡಾನೆಗಳನ್ನು ಸ್ಥಳಾಂತರಿಸುವಂತೆ ಒತ್ತಾಯಿಸುತ್ತಿದ್ದಾಗ ದಿವ್ಯ ನಿರ್ಲಕ್ಷ್ಯ ವಹಿಸಿದ್ದ ಸರಕಾರ ಪ್ರತಿಭಟನಾಕಾರರ ಕಟ್ಟೆಯೊಡೆದ ಆಕ್ರೋಶ ನೋಡಿ ಬೆದರಿ ರಾತ್ರೋ ರಾತ್ರಿ ದುಬಾರೆಯಿಂದ ಸಾಕಾನೆಗಳನ್ನು ತರಿಸಿ ಆಪರೇ಼ನ್ ಎಲಿಫೆಂಟ್ ಕಾರ್ಯಾಚರಣೆ ಆರಂಭಿಸಿತ್ತು.

ನಾಲ್ಕು ದಿನಗಳ ಸತತ ಕಾರ್ಯಾಚರಣೆಯ ಬಳಿಕ ಕೊನೆಗೆ ಆನೆಯೊಂದನ್ನು ಸೆರೆ ಹಿಡಿದ ಆರಣ್ಯ ಇಲಾಖೆ ಅದೇ ನರಹಂತಕ ಅನೆಯೆಂದು ಘೋಷಿಸಿ ಅದನ್ನು ರಾತ್ರೋ ರಾತ್ರಿ ಕೊಡಗಿನ ದುಬಾರೆಯಲ್ಲಿರುವ ಆನೆ ಬಿಡಾರಕ್ಕೆ ಸಾಗಿಸಲು ಮುಂದಾಗಿದ್ದಾರೆ. ಈ ವಿದ್ಯಮಾನ ಸ್ಥಳೀಯರಲ್ಲಿ ಅನುಮಾನ ಮೂಡಿಸಿದೆ. ಕೇವಲ ಒಂದು ಆನೆಯನ್ನು ಹಿಡಿದು ಇದನ್ನೆ ನರಬಲಿ ಪಡೆದ ಆನೆ ಎಂದು ಬಿಂಬಿಸಿ ಕಾರ್ಯಾಚರಣೆಗೆ ಸ್ಥಗಿತಗೊಳಿಸಿ ದುಬಾರೆಯಿಂದ ಕರೆ ತಂದಿದ್ದ ಸಾಕಾನೆಗಳನ್ನು ಮರಳಿ ಅಲ್ಲಿಗೆ ಕರೆದುಕೊಂಡು ಹೋಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು . ಇದು ಸ್ತಳೀಯ ಗ್ರಾಮಸ್ಥರನ್ನು ಕುದಿಯುವಂತೆ ಮಾಡಿತು. ಇದು ಕಾಂತಾರದ ಘಟನೆಯೊಂದನ್ನು ಮರುಕಳಿಸುವಂತೆ ಮಾಡಿತು.

ಫೆ 23 ರಂದು ಸಂಜೆ 5 ಗಂಟೆ ಸುಮಾರಿಗೆ ಕೊಂಬಾರು ಗ್ರಾಮದ ಮಂಡೆಕರ ಬಳಿ ಅರಣ್ಯದಲ್ಲಿದ್ದ ಆನೆಯನ್ನು ಸೆರೆಹಿಡಿದ ಅರಣ್ಯಾಧಿಕಾರಿಗಳ ತಂಡ ಅದಣ್ನು ರಾತ್ರಿ ದುಬಾರೆಗೆ ಸಾಗಿಸುತ್ತಿದ್ದ ವೇಳೆ, ಸುಂಕದಕಟ್ಟೆ ಎಮಬಲ್ಲಿ ಅರಣ್ಯಾಧಿಕಾರಿಗಳ ವಾಹನವನ್ನು ಸಾವಿರಕ್ಕೂ ಮಿಕ್ಕಿದ್ದ ಗ್ರಾಮಸ್ಥರು ಅಡ್ಡಗಟ್ಟಿದ್ದಾರೆ. ನೀವು ಹಿಡಿದಿರುವ ಆನೆಯನ್ನು ಇಲ್ಲಿಯೇ ನಿಲ್ಲಿಸಿ, ಇತರೆ ಕಾಡಾನೆಗಳನ್ನು ಸೆರೆಹಿಡಿದು ಒಟ್ಟಿಗೆ ಎಲ್ಲಾ ಆನೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಆ ಉದ್ರಿಕ್ತರ ಗುಂಪು ಅಗ್ರಹಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಅರಣ್ಯಾಧಿಕಾರಿಗಳು “ ಕಾಡಾನೆಯನ್ನು ಹೆಚ್ಚು ಸಮಯ ಲಾರಿಯಲ್ಲಿ ನಿಲ್ಲಿಸಲು ಆಗುವುದಿಲ್ಲ. ಹೀಗಾಗಿ ನಾವು ಮೊದಲು ಸೆರೆಹಿಡಿದ ಆನೆಯನ್ನು ಬಿಟ್ಟು ಬಂದು ಉಳಿದ ಕಾಡಾನೆಗಳನ್ನು ಸೆರೆಹಿಡಿಯುವುದಾಗಿ ತಿಳಿಸಿದರು. ಆದರೆ, ಅದನ್ನು ಅರ್ಥೈಸಿಕೊಳ್ಳುವ ಸ್ಥಿತಿಯಲ್ಲಿಲ್ಲದ ಗುಂಪಿನಲ್ಲಿದ್ದ ಕೆಲವರು ಏರುಧ್ವನಿಯಲ್ಲಿ ಗಲಾಟೆಗೆ ಮುಂದಾಗಿದ್ದಾರೆ.

ಈ ವೇಳೆ ಅರಣ್ಯ ಇಲಾಖೆ ಸಿಬಂದಿಗಳು ಪೋಲೀಸರನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಪೊಲೀಸರು ತಿಳಿವಳಿಕೆ ನೀಡಿದರೂ ಕೆಲವರು ಏಕಾಏಕಿ ಸಮವಸ್ತ್ರದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಗೂ ಮತ್ತು ಅರಣ್ಯ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ಮಾಡಿದ್ದರು. ಕಲ್ಲು ತೂರಾಟದಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಪೊಲೀಸರು ಗಾಯಗೊಂಡಿದ್ದಾರೆ . ಇಷ್ಟಕ್ಕೇ ನಿಲ್ಲದ ಕೆಲವು ಯುವಕರು ಸ್ಥಳದಲ್ಲಿ ನಿಲ್ಲಿಸಿದ್ದ ಅರಣ್ಯ ಇಲಾಖಾ ವಾಹನ ಹಾಗೂ ಪೊಲೀಸ್ ಇಲಾಖಾ ವಾಹನಗಳ ಮೇಲೂ ಕಲ್ಲು ತೂರಾಟ ಮಾಡಿ ವಾಹನಗಳನ್ನು ಜಖಂ ಮಾಡಿರುವುದಾಗಿ ಉಪ ವಲಯ ಅರಣ್ಯ ಅಧಿಕಾರಿ ಮದನ್ ಕೆ ಅವರು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಗುರುವಾರ ರಾತ್ರಿಯೇ ಬಂಧಿಸಿದ್ದು, ಶುಕ್ರವಾರ ಬೆಳಿಗ್ಗೆ ಆರು ಜನರನ್ನು ದಸ್ತಗಿರಿ ಮಾಡಿದ್ದಾರೆ. ಕೊಂಬಾರು ಕಮರ್ಕಜೆ ನಿವಾಸಿ ಶೀನಪ್ಪ ಗೌಡರ ಪುತ್ರರಾದ ಉಮೇಶ್, ಕೋಕಿಲಾನಂದ, ಗೋಪಾಲ ಗೌಡ ಪುತ್ರ ರಾಜೇಶ್ , ಕೋಲ್ಪೆ ಕಮಲಾಲಕ್ಷ ಅವರ ಪುತ್ರ ಜನಾರ್ಧರ ರೈ, ಚಂದ್ರಪ್ಪ ಗೌಡರ ಪುತ್ರ ತೀರ್ಥಕುಮಾರ್, ಸಿರಿಬಗಿಲು ಗ್ರಾಮದ ಬಾರ್ಯ ಮನೆ ಹುಕ್ರಪ್ಪ ಗೌಡರ ಪುತ್ರ ಗಂಗಾಧರ ಗೌಡ, ಕೊಂಬಾರು ಗ್ರಾಮ ಕೆಂಜಾಲ ನಿವಾಸಿ ದಿವಾಕರ ಅವರ ಪುತ್ರ ಅಜಿತ್ ಕುಮಾರ್ ಮತ್ತಿತ್ತರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ಸೆರೆ ಹಿಡಿಯಲಾದ ಕಾಡಾನೆಯನ್ನು ದುಬಾರೆ ಆನೆ ಶಿಬಿರಕ್ಕೆ ಕೊಂಡೊಯ್ಯುವ ವೇಳೆ ಅಭಿಮನ್ಯು ಹಾಗೂ ಇನ್ನೊಂದು ಸಾಕಾನೆಯನ್ನೂ ಅಲ್ಲಿಗೆ ಕೊಂಡೊಯ್ಯಲಾಗುತ್ತಿದೆ ಎಂಬ ಮಾಹಿತಿ ತಿಳಿದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದರು. ಕಾರ್ಯಾಚರಣೆ ನಿಲ್ಲಿಸಿಲ್ಲ, ಆನೆಗಳಿಗೆ ಒಂದು ದಿನ ವಿಶ್ರಾಂತಿ ನೀಡಿ ಮತ್ತೆ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಅಧಿಕಾರಿಗಳು ಮನವರಿಕೆ ಮಾಡಿದರೂ ಸಮಾಧಾನಗೊಳ್ಳದ ಗ್ರಾಮಸ್ಥರು ಹಲ್ಲೆಗೆ ಯತ್ನಿಸಿ, ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಹಾನಿಗೊಳಿಸಿದ್ದಾರೆ.

ಘಟನೆಯಲ್ಲಿ ಎರಡು ಪೊಲೀಸ್ ಜೀಪ್, ಅರಣ್ಯ ಇಲಾಖೆಯ ಎರಡು ವಾಹನಗಳು ಜಖಂಗೊಂಡಿವೆ ಎಂದು ವರದಿಯಾಗಿದೆ. ಈ ವೇಳೆ ಪೊಲೀಸರು ಲಾಠಿಚಾರ್ಜ್ ಮಾಡಿ ಜನರನ್ನು ಚದುರಿಸಿದ್ದಲ್ಲದೆ, ಓರ್ವನನ್ನು ವಶಕ್ಕೆ ಪಡೆದು ಶುಕ್ರವಾರ ಇತರ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಲಭೆ ವೇಳೆ ಮುಂಚೂಣಿಯಲ್ಲಿ ಕಾಣಿಕೊಂಡಿದ್ದ ಕೆಲವರ ಗುರುತು ಪತ್ತೆ ಹಚ್ಚಿರುವ ಪೋಲೀಸರು ಅವರ ಬಂಧನಕ್ಕೆ ಬಲೆ ಬೀಸಿದ್ದಾರೆ.

Click to comment

Leave a Reply

ರಾಷ್ಟ್ರೀಯ

ಅಪಾರ್ಟ್ ಮೆಂಟ್ ನ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಯುಟ್ಯೂಬರ್ ಜೋಡಿ

Ad Widget

Ad Widget

Ad Widget

Ad Widget Ad Widget

ಹೊಸದಿಲ್ಲಿ ಎ.14: ಸೋಶಿಯಲ್ ಮಿಡಿಯಾ ಯೂಟ್ಯೂಬರ್ ಮೂಲಕ ಟ್ರೆಂಡಿಗ್ ನಲ್ಲಿದ್ದ ಜೋಡಿಯೊಂದು ಅಪಾರ್ಟ್ ಮೆಂಟ್ ನ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಹರಿಯಾಣದ ಬಹದ್ದೂರ್‌ಗಢದ ರುಹಿಲ್ ರೆಸಿಡೆನ್ಸಿಯಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

Ad Widget

ಮೃತರನ್ನು ಗರ್ವಿತ್ (25) ಮತ್ತು ನಂದಿನಿ (22) ಎಂದು ಗುರುತಿಸಲಾಗಿದೆ. ಮೃತ ಜೋಡಿ ತಮ್ಮ ಯೂಟ್ಯೂಬ್ ಚಾನೆಲ್ ನಿರ್ವಹಣೆ ಮತ್ತು ಕಿರುಚಿತ್ರಗಳನ್ನು ರಚಿಸುವಲ್ಲಿ ಪ್ರಸಿದ್ಧರಾಗಿದ್ದರು. ಇತ್ತೀಚೆಗೆ, ಅವರು ತಮ್ಮ ತಂಡದೊಂದಿಗೆ ಡೆಹ್ರಾಡೂನ್‌ನಿಂದ ಬಹದ್ದೂರ್‌ಗಢಕ್ಕೆ ಸ್ಥಳಾಂತರಗೊಂಡಿದ್ದರು.

Ad Widget

Ad Widget

ದಂಪತಿಗಳು ಕಟ್ಟಡದ ಏಳನೇ ಮಹಡಿಯಲ್ಲಿ ಅಪಾರ್ಟ್ಮೆಂಟ್ ಅನ್ನು ಬಾಡಿಗೆಗೆ ಪಡೆದಿದ್ದರು. ಅವರು ತಮ್ಮ ತಂಡದ ಸರಿಸುಮಾರು ಐದು ಮಂದಿಯೊಂದಿಗೆ ವಾಸಿಸುತ್ತಿದ್ದರು.

Ad Widget

Ad Widget
Continue Reading

ಮಂಗಳೂರು

Padmaraj R ಜಿಲ್ಲೆಯ ಪ್ರಭಾವಿ ಬಿಲ್ಲವ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಶಿಷ್ಯ  ಪದ್ಮರಾಜ್‌ ರಾಮಯ್ಯ ಗೆ ಒಲಿದ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ –   

Ad Widget

Ad Widget

Ad Widget

Ad Widget Ad Widget

ಪುತ್ತೂರು:   ಕಾಂಗ್ರೆಸ್‌ ಪಕ್ಷ ರಾಜ್ಯದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮಂಗಳೂರು ಲೋಕಸಭಾ ಕ್ಷೇತ್ರದಿಂದ ಜಿಲ್ಲೆಯ ಪ್ರಭಾವಿ ಬಿಲ್ಲವ ನಾಯಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜನಾರ್ಧನ ಪೂಜಾರಿಯರ ಶಿಷ್ಯ , ಕಳೆದ 25 ವರ್ಷಗಳಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯವಾದಿ ಪದ್ಮರಾಜ್‌ ರಾಮಯ್ಯನವರಿಗೆ ಟಿಕೆಟ್‌ ನೀಡಲಾಗಿದೆ. ನೋಟರಿ ವಕೀಲರಾದ ಇವರು ತನ್ನ ನೋಟರಿ ಸಹಿಯನ್ನು ಬಡವರು, ವಿದ್ಯಾರ್ಥಿಗಳ ದೃಢೀಕರಣಕ್ಕೆ ಉಚಿತವಾಗಿ ನೀಡುವ ಮೂಲಕ ಸಮಾಜಕ್ಕೊಬ್ಬ ಮಾದರಿ ವಕೀಲರಾಗಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಪದ್ಮರಾಜ್‌ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರುನಲ್ಲಿ ವಾಸ್ತವ್ಯವಿದ್ದ  ಮಂಗಳೂರು ಮೂಲದ ಎಚ್.ಎಂ. ರಾಮಯ್ಯ ಪೂಜಾರಿ ಮತ್ತು ಲಲಿತಾ ದಂಪತಿಯ ದ್ವಿತೀಯ ಪುತ್ರ. ಅವರು ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣವನ್ನು ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಗಿಸಿ ಮುಂದೆ ಬಿ.ಎ. ಪದವಿಯನ್ನು ಬೆಳ್ತಂಗಡಿಯ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಹಾಗೂ ಕಾನೂನು ಪದವಿಯನ್ನು ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಮುಗಿಸಿದರು

Ad Widget

Ad Widget

 1995ರಿಂದ ಕಾನೂನು ವೃತ್ತಿಯ ಚೊಚ್ಚಲ ಅಭ್ಯಾಸವನ್ನು ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿಯವರೊಂದಿಗೆ ಪ್ರಾರಂಭಿಸಿದ ಇವರು ನಾಲ್ಕು ವರ್ಷಗಳ ಬಳಿಕ ಮಂಗಳೂರಿನ ಬಳ್ಳಾಲ್‌ಬಾಗ್‌ನಲ್ಲಿ ಸ್ವಂತ ಕಚೇರಿ ಪ್ರಾರಂಭಿಸಿದರು. ವೃತ್ತಿ ಜೀವನದ ಆರಂಭದ ಸಮಯದಲ್ಲಿ ಹಿರಿಯ ವಕೀಲರಾದ ಪಿ.ಗಂಗಾಧ‌ರ್ ಅವರ ಸಲಹೆಯಂತೆ ಆಗಿನ ಬಿಲ್ಲವರ ಯೂನಿಯನ್ ಸದಸ್ಯರಾದರು. ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಳ್ಳದಿದ್ದರೂ ಬಿ.ಜನಾರ್ದನ ಪೂಜಾರಿಯವರು ಸ್ಪರ್ಧಿಸಿದ ಎಲ್ಲಾ ಚುನಾವಣೆ ಸಂದರ್ಭದಲ್ಲೂ ಅವರಿಗಾಗಿ ದುಡಿದಿದ್ದಾರೆ.

Ad Widget

Ad Widget

ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಮಾಜಸೇವೆಯನ್ನು ಮೈಗೂಡಿಸಿಕೊಂಡಿರುವ ಪದ್ಮರಾಜ್‌ ಅವರಿಗೆ  ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಳದ ಬಗ್ಗೆ ಅಪಾರ ಶ್ರದ್ಧೆ, ಭಕ್ತಿ. ಬಿ.ಜನಾರ್ದನ ಪೂಜಾರಿಯವರ   ಮಾರ್ಗದರ್ಶನದಲ್ಲಿಪದ್ಮರಾಜ್‌ ರವರು   ಮಂಗಳೂರಿನ ನವರಾತ್ರಿ ಉತ್ಸವ ವಿಶ್ವ ಪ್ರಸಿದ್ಧಿ ಪಡೆಯಲು ಶ್ರಮ ಪಟ್ಟಿದ್ದಾರೆ.

Ad Widget

Ad Widget

ಕೊರೊನಾ ಮಹಾಮಾರಿಯಿಂದಾಗಿ 40 ದಿನಗಳ ಲಾಕ್‌ಡೌನ್ ಉಂಟಾದ ಸಂದರ್ಭ ಬಿ.ಜನಾರ್ದನ ಪೂಜಾರಿಯವರ  sUcneyMte  ದಿನಂಪ್ರತಿ ದೇವಸ್ಥಾನದ ವತಿಯಿಂದ ಸುಮಾರು 1000 ಬಡವರು, ನಿರಾಶ್ರಿತರಿಗೆ ಹಾಗೂ ವಲಸೆ ಕೂಲಿ ಕಾರ್ಮಿಕರಿಗೆ ಅನ್ನದಾನ ನಡೆಯುತ್ತಿತ್ತು. ಈ ಸಂದರ್ಭ ಪದ್ಮರಾಜ್ ಅವರೇ ಖುದ್ದಾಗಿ ಸೇವಾದಳದವರೊಂದಿಗೆ ವಿವಿಧ ಪ್ರದೇಶಗಳಿಗೆ ತೆರಳಿ ಅನ್ನದಾನ ವಿತರಣೆಯಲ್ಲಿ ಭಾಗಿಯಾಗುತ್ತಿದ್ದರು

ಪದ್ಮರಾಜ್ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ ದೇವಸ್ಥಾನದ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ 300 ಕ್ವಿಂಟಾಲ್‌ ಅಕ್ಕಿದಾನ ಮಾಡಲಾಗಿತ್ತು. ಎರಡನೇ ಲಾಕ್‌ಡೌನ್‌ ಸಂದರ್ಭದಲ್ಲಿ ತನ್ನ ಮುಂದಾಳತ್ವದ ಗುರು ಬೆಳದಿಂಗಳು ಪೌಂಡೇಶನ್ ಮೂಲಕ ಸಹಸ್ರಾರು ನೊಂದವರಿಗೆ ದಿನಸಿ, ಆಹಾರ ಸಾಮಾಗ್ರಿ ತಲುಪಿಸಿದರು. ಗುರು ಬೆಳದಿಂಗಳು ಪೌಂಡೇಶನ್ ಅಶಕ್ತರ ಕಣ್ಣೀರು ಒರೆಸಲು ಪದ್ಮರಾಜ್‌ ಆರಂಭಿಸಿದ ಪೌಂಡೇಷನ್.‌ ಇದರ ಮೂಲಕ ಸಾವಿರಾರು ನೊಂದವರಿಗೆ ಸಹಾಯ ಮಾಡಲಾಗಿದೆ.

ಯುವವಾಹಿನಿ ಕೇಂದ್ರ ಸಮಿತಿಯ ಗೌರವ ಸಲಹೆಗಾರರು, ಜೆ.ಸಿ. ಪ್ರತಿಷ್ಠಾನ ದ.ಕ. ಜಿಲ್ಲಾ ಗೌರವ ಸಂಚಾಲಕ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಂಘ ಸಂಸ್ಥೆಗಳಿಂದ ಇವರ ಸಮಾಜಮುಖಿ ಸೇವೆಗೆ ಗೌರವ ಸಂದಿದೆ. ನಮ್ಮ ಕುಡ್ಲ ವಾಹಿನಿ ನೀಡುವ ಪ್ರಶಸ್ತಿಗೂ ಭಾಜನರಾಗಿದ್ದಾರೆ.

ಪದ್ಮರಾಜ್‌ರವರು ಬ್ರಹ್ಮಶ್ರೀ ನಾರಾಯಣ  ಗುರುಗಳ ತತ್ವ ಅದರ್ಶಗಳನ್ನು ಮೈಗೂಡಿಸಿಕೊಂಡವರು. 2 ವರ್ಷಗಳ ಹಿಂದೆ  ಗಣ ರಾಜ್ಯೋತ್ಸವದ ಸಂದರ್ಭ ಕೇಂದ್ರ ಸರಕಾರ ನಾರಾಯಣ ಗುರುಗಳ ಟ್ಯಾಬ್ಲೊ ಪ್ರದರ್ಶನವನ್ನು  ನಿರಾಕರಿಸಿದಾಗ ಅದರ ವಿರುದ್ಧ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿ ದ್ದವರು. ಇವರ ಮುಂದಾಳತ್ವದಲ್ಲಿ ಗುರುಗಳಿಗೆ ಆದ ಅವಮಾನದ ಕುರಿತು ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆದಿತ್ತು.   ಹಿಂದಿನ ರಾಜ್ಯ ಸರಕಾರದ ಅವಧಿಯಲ್ಲಿ  10ನೇ ತರಗತಿಯ ಪಠ್ಯಪುಸ್ತಕದ ಸಮಾಜ ವಿಜ್ಞಾನದಲ್ಲಿ ನಾರಾಯಣ ಗುರುಗಳ ಪಠ್ಯ ಕೈಬಿಟ್ಟದ್ದರ ವಿರುದ್ಧ ಮೊದಲು ಖಂಡನೆ ವ್ಯಕ್ತಪಡಿಸಿ ರಾಜ್ಯಾದ್ಯಂತ ಹೋರಾಟ ಮಾಡುವ ಮೂಲಕ ಗುರುಗಳ ಪಠ್ಯವನ್ನು ಸೇರ್ಪಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದರು.

Continue Reading

ಅಪರಾಧ

Mother Kills Own Daughter: ಮನೆಯಲ್ಲಿ ಬಾಯ್‌ ಫ್ರೆಂಡ್‌ ಜತೆ ಮಗಳ ನೋಡಿ ತಾಯಿ ಕೆಂಡಮಂಡಲ – ಕತ್ತು ಹಿಸುಕಿ ಹತ್ಯೆ

Ad Widget

Ad Widget

Ad Widget

Ad Widget Ad Widget

ಹೈದರಾಬಾದ್‌:  ಮನೆಯಲ್ಲಿ ಯಾರೂ ಇಲ್ಲದ ವೇಳೆ, ಮಗಳು ತನ್ನ ಬಾಯ್‌ಫ್ರೆಂಡ್‌ ಜೊತೆ ಮನೆಯೊಳಗಡೆ  ಇರುವುದನ್ನು ಕಂಡು ಕೋಪಗೊಂಡ ತಾಯಿ, ಸ್ವಂತ ಮಗಳನ್ನೆ ಕತ್ತು ಹಿಸುಕಿ ಹತ್ಯೆ ಮಾಡಿದ ಘಟನೆ ಹೈದರಾಬಾದ್‌ನಲ್ಲಿ (Hyderabad) ನಡೆದಿದೆ. 19ರ ಹರೆಯದ ಬಾರ್ಗವಿ ಕೊಲೆಯಾದವಳು.

Ad Widget

Ad Widget

Ad Widget

Ad Widget

Ad Widget

ಹೈದರಾಬಾದ್‌ ನ ಇಬ್ರಾಹಿಂಪಟ್ಟಣದಲ್ಲಿ ಕೃತ್ಯ ನಡೆದಿದೆ. ಬಾರ್ಗವಿಯ ತಾಯಿ ಜಂಗಮ್ಮ ಕೊಲೆ ಆರೋಪಿ.  ಭಾರ್ಗವಿಗೆ ಮದುವೆ  ಮಾಡಲು ನಿರ್ಧರಿಸಿದ್ದ, ಜಂಗಮ್ಮ   ಸೂಕ್ತ ವರನ ಅನ್ವೇಷಣೆಯಲ್ಲಿದ್ದರು.  ಆದರೆ ಯುವತಿ  ಸ್ಥಳೀಯ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಇದು ಜಂಗಮ್ಮನಿಗೆ ಇಷ್ಟವಿರಲಿಲ್ಲ. ಆಕೆ ಅವರಿಬ್ಬರ ಪ್ರೀತಿ ಸಂಬಂಧವನ್ನು ವಿರೋಧಿಸಿದ್ದಳು.

Ad Widget

Ad Widget

ಸೋಮವಾರ ಮಧ್ಯಾಹ್ನ  ಜಂಗಮ್ಮ ಗದ್ದೆಯಿಂದ ಊಟಕ್ಕೆಂದು ಮನೆಗೆ ಬಂದಾಗ ಮಗಳ ಗೆಳೆಯ ಮನೆಯಲ್ಲಿದ್ದದ್ದನ್ನು ಕಂಡು  ಕೋಪಗೊಂಡಿದ್ದಾಳೆ.   ಮಗಳಿಗೆ ಬೈಯಲು ಆರಂಭಿಸಿದ್ದಾಳೆ.  ಈ ವೇಳೆ ಯುವಕ  ಮನೆಯಿಂದ  ಓಡಿ ಹೋಗಿದ್ದು, ಯುವತಿಯ ತಮ್ಮನಿಗೆ  ವಿಷಯ ತಿಳಿಸಿದ್ದಾನೆ. ಆಕೆಯ ಸಹೋದರ ಮನೆಗೆ ಬಂದಾಗ ಬಾಗಿಲು ಬೀಗ ಹಾಕಿತ್ತು.  ಕಿಟಕಿಯಿಂದ ನೋಡಿದಾಗ,   ತಾಯಿ  ಅಕ್ಕನ  ಕತ್ತು ಹಿಸುಕಲು ಪ್ರಯತ್ನಿಸುತ್ತಿರುವುದು ಕಾಣಿಸಿದೆ.   

Ad Widget

Ad Widget

 ಹೀಗಾಗಿ ಆತ ಕೋಣೆಯ ಬಾಗಿಲು ಬಿಡಿದಿದ್ದು, ಅಲ್ಲಿಂದ ಹೊರ ಬಂದ ಜಂಗಮ್ಮ ,  ತಾನು ನೋಡಿದಾಗ ಮಗಳು ಕೊರಳಿಗೆ ಸೀರೆಯ ಕುಣಿಕೆ ಹಾಕಿಕೊಂಡಿದ್ದು, ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಸುಳ್ಳು ಕಥೆಯೊಂದನ್ನು ಮಗನಲ್ಲಿ ಹೇಳಿದ್ದಳು.  ಸಂಬಂಧಿಕರು ವೈದ್ಯರನ್ನು ಮನೆಗೆ ಕರೆತಂದು ಪರೀಖ್ಷೆಗೆ ಒಳಪಡಿಸಿದಾಗ, ಭಾರ್ಗವಿ ಸಾವನ್ನಪ್ಪಿರುವುದು ಗೊತ್ತಾಗಿದೆ.   

Ad Widget

Ad Widget

ಕೊಲೆಯಾದ ಯುವತಿಯ ಅಪ್ರಾಪ್ತ ಸಹೋದರ, ತಾನು ಕೊಲೆಯನ್ನು ನೋಡಿರುವುದಾಗಿ  ತಾಯಿಯ ವಿರುದ್ಧ ದೂರು  ನೀಡಿದ್ದು , ಅದರಂತೆ ಪ್ರಕರಣ ದಾಖಲಾಗಿದೆ.  

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading