Connect with us

ಅಪರಾಧ

Wife Killed Husband ಹೊಸ ಮನೆ ಕಟ್ಟಲು ಬಂದಾತ ಮನೆಯೊಡತಿಗಾಗಿ ಮನೆ ಮುರಿದ..! ವಿಟ್ಲದ ಅರವಿಂದ ಭಾಸ್ಕರ ಅನುಮಾನಸ್ಪದ ಸಾವಿಗೆ ಬಿಗ್ ಟ್ವಿಸ್ಟ್- ಪತಿಯ ಉಸಿರು ನಿಲ್ಲಿಸಲು ಪತ್ನಿಯ ಸಾಥ್..!

Ad Widget

Ad Widget

Ad Widget

Ad Widget

Wife Killed Husband ವಿಟ್ಲ: ಫೆ 27 : ಹೊಸ ಮನೆಯ ಸೆಂಟ್ರಿಗ್‌ ಕೆಲಸಕ್ಕೆ ಬಂದಾತ ಮನೆ ಯಜಮಾನಿಯ ಜತೆ ಸೇರಿ ಮನೆಯ ಯಜಮಾನನ್ನು ಕೊಲೆಗೈದ ಘಟನೆಯೊಂದು ಬಂಟ್ವಾಳ ತಾಲೂಕಿನ ಇಡ್ಕಿದು ಎಂಬಲ್ಲಿ ಫೆ 26 ರಂದು ನಡೆದಿದೆ. ಇಡ್ಕಿದು  ಕುಮೇರು ನಿವಾಸಿ ಅರವಿಂದ ಭಾಸ್ಕರ (39) ಕೊಲೆಯಾದವರು. ಅರವಿಂದ ಪತ್ನಿ ಆಶಾ ಹಾಗೂ ಮನೆಯ ಸೆಂಟ್ರಿಂಗ್‌ ಕೆಲಸ ನಿರ್ವಹಿಸಿದ ಯೋಗೀಶ ಗೌಡ ಆರೋಪಿಗಳು .

Ad Widget

Ad Widget

Ad Widget

ಯೋಗೀಶ ಗೌಡ ಹಾಗೂ ಆಶಾ ಮಧ್ಯೆ ಅನ್ಯೂನ್ಯ ಸಂಬಂಧವಿರುವುದು ಪೊಲೀಸ್‌ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಇವರಿಬ್ಬರ ನಡುವಿನ ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದರು ಎಂಬ ಕಾರಣಕ್ಕೆ ಈ ಕೊಲೆ ನಡೆದಿರುವುದಾಗಿ ಸಾರ್ವಜನಿಕ ವಲಯದಲ್ಲಿ ಅನುಮಾನ ವ್ಯಕ್ತಪಡಿಸುತ್ತಿದ್ದು, ಪೊಲೀಸ್‌ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರ ಬರಬೇಕಿದೆ.  ಪತಿಯ ಕೊಲೆಯನ್ನು ಮುಚ್ಚಿಹಾಕಲು ಪತ್ನಿ ಆತ ರಾತ್ರಿ ಮಲಗಿದ್ದಲ್ಲಿಯೇ ಮೃತಪಟ್ಟಿರುವುದಾಗಿ ಕಟ್ಟು ಕಥೆ ಕಟ್ಟಿ ಜನರನ್ನು ನಂಬಿಸುವ ವಿಫಲ ಯತ್ನ ಮಾಡಿರುವುದು ಕೂಡ ಇದೆ ವೇಳೆ ಬೆಳಕಿಗೆ ಬಂದಿದೆ

Ad Widget

 ಅರವಿಂದ ಭಾಸ್ಕರ  ರಾತ್ರಿ ಮಲಗಿದ್ದವರು ಏಳುತ್ತಿಲ್ಲ  ಎಂದು ಹೇಳಿ ಪತ್ನಿ ಆಶಾ ಹಾಗೂ ಕೆಲ ಸ್ತಳೀಯರು ಆತನ ಮೃತ ಶರೀರವನ್ನು ವಿಟ್ಲದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದರು . ಅಲ್ಲಿ ಪರಿಕ್ಷೀಸಿದ ವೈದ್ಯರು ಭಾಸ್ಕರ್‌ ಮೃತಪಟ್ಟಿರುವುದಾಗಿ ತಿಳಿಸಿದರು . ಆದರೇ ಮೃತ ಶರೀರವನ್ನು ಗಮನಿಸಿದ ವೈದರಿಗೆ ಏನೋ ಅಸಡಬಸಡ ಆಗಿರುವುದು ಗಮನಕ್ಕೆ ಬಂದಿದೆ.

Ad Widget

Ad Widget
ಅರವಿಂದ ಭಾಸ್ಕರ

ಮೃತದೇಹದ ಸ್ಥಿತಿಯನ್ನು ಪರಿಶೀಲಿಸಿದ ಭಾಸ್ಕರ್‌ ಸಂಬಂಧಿ ವಿಟ್ಲಕಸಬಾ ಗ್ರಾಮದ ಮೇಗಿನಪೇಟೆ ನಿವಾಸಿ ರಘುನಾಥ ಈ ಕುರಿತು ಠಾಣೆಗೆ ದೂರು ನೀಡಿದ್ದು ಅದರಲ್ಲಿ  ಕುತ್ತಿಗೆಯನ್ನು ಅದುಮಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಸಂಶಯ ವ್ಯಕ್ತಪಡಿಸಿದ್ದರು. ಇದರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ದೊರೆತ ಮಹತ್ವದ ಸುಳಿವಿನ ಆಧಾರದಲ್ಲಿ   ಯೋಗೀಶ ಗೌಡ ಹಾಗೂ ಆಶಾ ಅವರನ್ನು ಕೊಲೆ ಆರೋಪಿಗಳು ಎಂದು ಹೆಸರಿಸಿದ್ದಾರೆ.

Ad Widget

Ad Widget

Ad Widget
ಯೋಗೀಶ ಗೌಡ

ಅರವಿಂದ ಭಾಸ್ಕರ ಅವರು ಸುಮಾರು 2 ವರ್ಷಗಳ ಹಿಂದೆ  ಹೊಸ ಮನೆಯನ್ನು ಕಟ್ಟುವ ಕೆಲಸ ಆರಂಭಿಸಿದರು.  ಅದರ ಸೆಂಟ್ರಿಂಗ್‌ ಕೆಲಸವನ್ನು ಯೋಗೀಶ ಗೌಡ ನಿರ್ವಹಿಸುತ್ತಿದ್ದು, ಆತ ಅರವಿಂದ ಭಾಸ್ಕರನ ಪತ್ನಿ ಆಶಾಳೊಂದಿಗೆ ತುಂಬಾ ಅನ್ಯೋನ್ಯವಾಗಿದ್ದ. ಅರವಿಂದ ಭಾಸ್ಕರ ಅವರು ಅಡಿಕೆ ಮಾರಾಟ ಮಾಡಿ ಬಂದ ಹಣವನ್ನು ದುಂದುವೆಚ್ಚ ಮಾಡುತ್ತಿದ್ದ ಬಗ್ಗೆ ಆತನ ಪತ್ನಿ ಆಕ್ಷೇಪಿಸುತ್ತಿದ್ದುದಲ್ಲದೇ, ಯೋಗೀಶ ಆಶಾಳೊಂದಿಗೆ ಸೇರಿಕೊಂಡು ಅರವಿಂದ ಭಾಸ್ಕರನಿಗೆ ಹಲ್ಲೆ ನಡೆಸುತ್ತಿದ್ದರು.  ಈ ಕುರಿತ ಮಾಹಿತಿಯನ್ನು ಸ್ವತ: ಭಾಸ್ಕರ್‌ ದೂರುದಾರ ರಘುನಾಥ ಅವರಲ್ಲಿ ಹೇಳಿಕೊಂಡಿದ್ದರು. ಹೀಗಾಗಿ ಅರವಿಂದ ಭಾಸ್ಕರ್‌ ಅವರನ್ನು ಅವರ ಪತ್ನಿ ಮತ್ತು  ಯೋಗೀಶ ಗೌಡ ಸೇರಿ ಫೆ 25 ರ ರಾತ್ರಿ 10 ಗಂಟೆಯಿಂದ ಫೆ 26 ರ ಬೆಳಿಗ್ಗೆ 7 ಗಂಟೆಯ ನಡುವೆ ದಿಂದ ಕುತ್ತಿಗೆಯನ್ನು ಅಮುಕಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಆಶಾ

ಮುಂದಿನ ತನಿಖೆ ಬಂಟ್ವಾಳ ಡಿವೈಎಸ್ಪಿ ನೇತ್ರತ್ವದಲ್ಲಿ
ಮೃತ ಸಂಬಂಧಿ ನೀಡಿದ ದೂರು  ಮತ್ತು ವಿಟ್ಲ ಠಾಣಾಧಿಕಾರಿಯ  ಪ್ರಾಥಮಿಕ ತನಿಖೆಯ ಸಂದರ್ಭದಲ್ಲಿ  ಕಂಡು ಬಂದ ಸಂಗತಿಗಳ ಆಧಾರದಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಿದ್ದು, ಜತೆಗೆ  SC/ST  ದೌರ್ಜನ್ಯ ಕಾಯ್ದೆಯ ಕಲಂಗಳಡಿಯೂ ಪ್ರಕರಣ ದಾಖಲಿಸಲಾಗಿದೆ.  SC/ST  ದೌರ್ಜನ್ಯ  ಪ್ರಕರಣವಾಗಿರುವುದರಿಂದ ಬಂಟ್ವಾಳ ಡಿವೈಎಸ್ಪಿ ಮುಂದಿನ ತನಿಖೆಯನ್ನು ವಹಿಸಿಕೊಳ್ಳಲಿದ್ದಾರೆ. ದೂರಿನ ಪ್ರಕಾರ ಶ್ರೀಮತಿ ಆಶಾ ಮತ್ತು ಯೋಗೇಶ್ ಗೌಡ ಆರೋಪಿಗಳು. 

ದ.ಕ. ಜಿಲ್ಲಾ ಪೊಲೀಸ್‌ ಅಧೀಕ್ಷಕರು
Click to comment

Leave a Reply

ಅಂತರ ರಾಜ್ಯ

Baba Ramdev’s-ದಾರಿ ತಪ್ಪಿಸುವ ಜಾಹೀರಾತು – ಬಾಬ ರಾಮದೇವ್ ಕಂಪೆನಿ ಪತಂಜಲಿಯಯ ಪರವಾನಗಿ ಅಮಾನತು

Ad Widget

Ad Widget

Ad Widget

Ad Widget

ನವದೆಹಲಿ : ಯೋಗ ಗುರು ಬಾಬಾ ರಾಮದೇವ್ ಅವರಿಗೆ ಸೇರಿದ ಔಷಧ ಕಂಪನಿಗಳು ತಯಾರಿಸುವ 14 ಬಗೆಯ ಉತ್ಪನ್ನಗಳ ತಯಾರಿಕೆಗೆ ನೀಡಿರುವ ಪರವಾನಗಿಯನ್ನು ಉತ್ತರಾಖಂಡ ಸರ್ಕಾರವು ಅಮಾನತಿನಲ್ಲಿ ಇರಿಸಿದೆ. ಔಷಧಗಳ ಸಾಮರ್ಥ್ಯದ ಬಗ್ಗೆ ತಪ್ಪುದಾರಿಗೆ ಎಳೆಯುವ ಜಾಹೀರಾತುಗಳನ್ನು ಮತ್ತೆ ಮತ್ತೆ ಪ್ರಕಟಿಸಿದ್ದಕ್ಕಾಗಿ ಈ ರೀತಿ ಮಾಡಲಾಗಿದೆ.

Ad Widget

Ad Widget

Ad Widget

ಈ ಆದೇಶವು ರಾಮದೇವ ಅವರಿಗೆ ಆಗಿರುವ ಹಿನ್ನಡೆ ಎಂದು ವಿಶ್ಲೇಷಿಸಲಾಗಿದೆ. ರಾಮದೇವ ಅವರು ಈಚಿನ ದಿನಗಳಲ್ಲಿ ಸುಪ್ರೀಂ ಕೋರ್ಟ್ನ ಕೋಪಕ್ಕೂ ತುತ್ತಾಗಿದ್ದಾರೆ.

Ad Widget

ಉತ್ತರಾಖಂಡ ಸರ್ಕಾರವು ಏ. 15ರಂದು ಈ ಅಮಾನತು ಆದೇಶ ಹೊರಡಿಸಿದೆ. ಅಸ್ತಮಾ, ಶ್ವಾಸನಾಳಗಳ ಒಳಪೊರೆಯ ಉರಿಯೂತ (ಬ್ರಾಂಕೈಟಿಸ್) ಮತ್ತು ಮಧುಮೇಹ ಔಷಧಿಗಳ ತಯಾರಿಕಾ ಪರವಾನಗಿಯನ್ನು ಅಮಾನತು ಮಾಡಲಾಗಿದೆ. ಈ ಕುರಿತು ತಕ್ಷಣಕ್ಕೆ ಪ್ರತಿಕ್ರಿಯೆ ನೀಡಲು ರಾಮದೇವ ಅವರ ವಕ್ತಾರರು ನಿರಾಕರಿಸಿದ್ದಾರೆ.

Ad Widget

Ad Widget

ಪರವಾನಗಿ ಅಮಾನತ್ತಾದ 14 ಔಷಧಗಳ ಪಟ್ಟಿ ಇಂತಿದೆ…

Ad Widget

Ad Widget

Ad Widget
  • ಸ್ವಸರಿ ಗೋಲ್ಡ್
  • ಸ್ವಸರಿ ವತಿ
  • ಬ್ರಾಂಕೋಮ್
  • ಸ್ವಸರಿ ಪ್ರವಾಹಿ
  • ಸ್ವಸರಿ ಅವಲೇಹ್
  • ಮುಕ್ತಾವತಿ ಎಕ್ಸ್ಟ್ರಾ ಪವರ್
  • ಲಿಪಿಡೋಮ್
  • ಬಿಪಿ ಗ್ರಿಟ್
  • ಮಧುಗ್ರಿಟ್
  • ಮಧುನಾಶಿನಿವತಿ ಎಕ್ಸ್ಟ್ರಾ ಪವರ್
  • ಲಿವಾಮೃತ್ ಅಡ್ವಾನ್ಸ್
  • ಲಿವೋಗ್ರಿಟ್
  • ಐಗ್ರಿಟ್ ಗೋಲ್ಡ್
  • ಪತಂಜಲಿ ದೃಷ್ಟಿ ಐ ಡ್ರಾಪ್
Continue Reading

ಅಪರಾಧ

Low marks-ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ-ಪರಸ್ಪರ ಚಾಕುವಿನಿಂದ ಇರಿದುಕೊಂಡ ತಾಯಿ, ಮಗಳು; ಮಗಳು ಕೊಲೆಯಾದರೆ, ತಾಯಿ ಗಂಭೀರ

Ad Widget

Ad Widget

Ad Widget

Ad Widget

ಮಂಗಳೂರು(ಬೆಂಗಳೂರು) : ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವುದು ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಪರಸ್ಪರ ಚಾಕು ಇರಿದುಕೊಂಡಿದ್ದರಿಂದ ಮಗಳು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

Ad Widget

ಸಾಹಿತಿ(18) ಕೊಲೆಯಾದ ಯುವತಿ. ಪದ್ಮಜಾ (60) ಮಗಳನ್ನು ಕೊಲೆಗೈದ ತಾಯಿ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಮಗಳನ್ನು ತಾಯಿ ಪ್ರಶ್ನೆ ಮಾಡಿದ್ದಾಳೆ. ಈ ವಿಚಾರಕ್ಕೆ ತಾಯಿ ಮತ್ತು ಮಗಳ ನಡುವೆ ನಿತ್ಯ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

Ad Widget

ಸೋಮವಾರ ಇದೇ ವಿಚಾರಕ್ಕೆ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ಚಾಕುವಿನಿಂದ ಪರಸ್ಪರ ಇರಿದು ಕೊಂಡಿದ್ದರಿಂದ ಮಗಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾಳೆ. ತಾಯಿಗೆ ಗಂಭೀರ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬನಶಂಕರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget
Continue Reading

ಅಪರಾಧ

Covishield-ಕೋವಿಶೀಲ್ಡ್ ಲಸಿಕೆಯಿಂದ ಸೈಡ್ ಎಪೆಕ್ಟ್ – ಮೊದಲ ಬಾರಿ ಒಪ್ಪಿಕೊಂಡ ಉತ್ಪಾದಕ ಕಂಪೆನಿ; ‘ಥೋಂಬೋಸಿಸ್” ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ

Ad Widget

Ad Widget

Ad Widget

Ad Widget

ಲಂಡನ್: ಕೋವಿಡ್ ಮಹಾಮಾರಿಯು 2019-21ರ ಅವಧಿಯಲ್ಲಿ ಇಡೀ ಜಗತ್ತನ್ನು ಕಾಡಿದ್ದು ಇದರ ತಡೆಗೆ ತಾನು ಅಭಿವೃದ್ಧಿಪಡಿಸಿದ್ದ ಕೋವಿಡ್ ಲಸಿಕೆಯು ಅಪರೂಪದ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು ಎಂದು ಬ್ರಿಟನ್ ಮೂಲದ ಆಸ್ಟ್ರಾಜೆನಿಕಾ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಕೋವಿಡ್ ಲಸಿಕೆಗಳ ಅಡ್ಡಪರಿಣಾಮದ ಕುರಿತು ಕಂಪನಿ ಬಹಿರಂಗವಾಗಿ ಒಪ್ಪಿಕೊಂಡಿದೆ. ಈ ಬಗ್ಗೆ ನಾನಾ ವದಂತಿಗಳು ಇದ್ದವಾದರೂ ಕಂಪೆನಿ ಬಹಿರಂಗವಾಗಿ ಒಪ್ಪಿಕೊಂಡಿರುವುದು ಇದೇ ಮೊದಲ ಬಾರಿ.

Ad Widget

Ad Widget

Ad Widget

ಇದೇ ಆಸ್ಟ್ರಾಜೆನಿಕಾ ಲಸಿಕೆಯನ್ನೇ ಭಾರತದ ಪುಣೆ ಮೂಲ ಸೀರಂ ಇನ್‌ಸ್ಟಿಟ್ಯೂಟ್ ಕೋವಿಶೀಲ್ಡ್ ಹೆಸರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಿತ್ತು. ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ನೀಡಿದ್ದ ಲಸಿಕೆ ಕೂಡಾ ಇದೇ ಆಗಿದೆ.

Ad Widget

ಆಸ್ಟ್ರಾಜೆನಿಕಾ ಹೇಳಿದ್ದು
ನಾವು ಅಭಿವೃದ್ಧಿಪಡಿಸಿರುವ ಲಸಿಕೆಯು ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮಗಳಿಗೆಕಾರಣವಾಗುವುದು ನಿಜ. ಲಸಿಕೆ ಪಡೆದವರು ಥೋಂಬೋಸಿಸ್ ಎಂಬ ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ. ಈ ಸಮಸ್ಯೆಗೆ ತುತ್ತಾದವರು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್‌ಗಳ ಸಂಖ್ಯೆಯಲ್ಲಿ ಕಡಿಮೆಯ ತೊಂದರೆಗೆ ಒಳಗಾಗುತ್ತಾರೆ. ಅತ್ಯಂತ ಸೂಕ್ಷ್ಮ ಪ್ರಕರಣಗಳಲ್ಲಿ ವ್ಯಕ್ತಿ ಸಾವನ್ನಪ್ಪುವ ಸಾಧ್ಯತೆಯೂ ಇದೆ. ಆ ಕಾರಣ, ಲಂಡನ್ ನ್ಯಾಯಾಲಯದಲ್ಲಿ ಆಸ್ಟ್ರಾಜೆನಿಕಾ ನೀಡಿದ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

Ad Widget

Ad Widget

ಆಕ್ಸ್‌ಫರ್ಡ್ ವಿವಿ ಸಹಯೋಗದಲ್ಲಿ ಆಸ್ಟ್ರಾಜೆನಿಕಾ ಕಂಪನಿಯು ಕೋವಿಡ್ ಲಸಿಕೆ ಅಭಿವೃದ್ಧಿಪಡಿಸಿತ್ತು. ಆದರೆ ಈ ಲಸಿಕೆ ಪಡೆದ ಪರಿಣಾಮ ರಕ್ತ ಹೆಪ್ಪುಗಟ್ಟುವಿಕೆ ಸೇರಿದಂತೆ ಹಲವು ಅಡ್ಡಪರಿಣಾಮಗಳು ಸಂಭವಿಸಿವೆ ಮತ್ತು ಹಲವು ಸಾವು ಸಂಭವಿಸಿದೆ ಎಂದು ಆರೋಪಿಸಿ ಬ್ರಿಟನ್‌ನ ವಿವಿಧ ನ್ಯಾಯಾಲಯಗಳಲ್ಲಿ ಹಲವು ದೂರು ಸಲ್ಲಿಕೆಯಾಗಿದ್ದವು. ಈ ಪೈಕಿ ಜೇಮಿ ಸ್ಕಾಟ್ ಎಂಬುವವರು 2021ರ ಏಪ್ರಿಲ್‌ನಲ್ಲಿ ನಾನು ಲಸಿಕೆ ಪಡೆದ ಬಳಿಕ ಮೆದುಳಿನಲ್ಲಿ ಶಾಶ್ವತ ಗಾಯ ಸಂಭವಿಸಿದೆ ಎಂದು ಆರೋಪಿಸಿದ್ದರು.

Ad Widget

Ad Widget

Ad Widget

ಈ ಬಗ್ಗೆ ಕಂಪನಿ ಹೇಳಿದ್ದೇನು?: ಈ ಪ್ರಕರಣದ ವಿಚಾರಣೆ ವೇಳೆ ಆಸ್ಟ್ರಾಜೆನಿಕಾದ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿದ್ದು ಅದರಲ್ಲಿ ‘ಕಂಪನಿ ಅಭಿವೃದ್ಧಿಪಡಿಸಿರುವ ಲಸಿಕೆಯು ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮಗಳಿಗೆ ಕಾರಣವಾಗುವುದು ನಿಜ. ಲಸಿಕೆ ಪಡೆದವರು ಹೊಂಬೋಸಿಸ್ ಎಂಬ ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ. ಈ ಸಮಸ್ಯೆಗೆ ತುತ್ತಾ ದವರು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್ ಗಳ ಸಂಖ್ಯೆಯಲ್ಲಿ ಕಡಿಮೆಯ ತೊಂದರೆಗೆ ಒಳಗಾಗುತ್ತಾರೆ. ಅತ್ಯಂತ ಸೂಕ್ಷ್ಮ ಪ್ರಕರಣಗಳಲ್ಲಿ ವ್ಯಕ್ತಿಯು ಸಾವನ್ನಪ್ಪುವ ಸಾಧ್ಯತೆಯೂ ಇರುತ್ತದೆ’ ಎಂಬುದಾಗಿ ಸಂಸ್ಥೆ ತಪ್ಪೊಪ್ಪಿಕೊಂಡಿದೆ. ಆಸ್ಟ್ರಾಜೆನಿಕಾ ಸಂಸ್ಥೆ ತಯಾರಿಸಿರುವ ಕೋವಿಡ್ ಲಸಿಕೆಯು ಭಾರತದಲ್ಲಿ ಕೋವಿಶೀಲ್ಡ್ ಹೆಸರಿನಲ್ಲಿ ಉತ್ಪಾದನೆಯಾಗಿ 174 ಕೋಟಿ ಡೋಸ್‌ನಷ್ಟು ಲಸಿಕೆ ನೀಡಲಾಗಿತ್ತು.

ವಿಶ್ವದಾದ್ಯಂತ 70 ಲಕ್ಷ ಸಾವು: ಕೋವಿಡ್‌ ಸೋಂಕು ವಿಶ್ವದಾದ್ಯಂತ 78 ಕೋಟಿ ಜನರಿಗೆ ತಗುಲಿದ್ದು, 70 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಭಾರತದಲ್ಲಿ 45 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ವ್ಯಾಪಿಸಿ 5 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading