Stabbing ಉಳ್ಳಾಲ : ತಡ ರಾತ್ರಿ ಯುವಕನಿಗೆ ಮನೆ ಬಳಿ ಚೂರಿ ಇರಿತ  

WhatsApp Image 2023-03-04 at 09.18.29
Ad Widget

Ad Widget

Ad Widget

ಉಳ್ಳಾಲ, (Ullala) ಮಾ 04:   ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಎಂಬಲ್ಲಿ ಇಬ್ಬರು ದುಷ್ಕರ್ಮಿಗಳು ಯುವಕನೊಬ್ಬನಿಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ಮಾ 3 ರಂದು ತಡ ರಾತ್ರಿ ನಡೆದಿದೆ. ಕೋಟೆಪುರ ನಿವಾಸಿ ಸದಕತ್ತುಲ್ಲಾ (34)  ಇರಿತಕ್ಕೆ ಒಳಗಾಗಿದ್ದು ಈತನ ಮನೆಯೆದುರೆ ಕೃತ್ಯ ನಡೆದಿದೆ.     

Ad Widget

ಸ್ಥಳೀಯ ನಿವಾಸಿಗಳಾದ ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಕೃತ್ಯ ಎಸಗಿದವರು ಎಂದು ಶಂಕಿಸಲಾಗಿದೆ . ಪೂರ್ವ ದ್ವೇಷದಿಂದ ಕೃತ್ಯ ಎಸಗಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಇಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಗಾಯಾಳುವನ್ನು ತಕ್ಷಣ  ಆತನ ಮನೆಯವರು ಆಸ್ಫತ್ರೆಗೆ ದಾಖಲಿಸಿರುವುದಾಗಿ ವರದಿಯಾಗಿದೆ.

Ad Widget

Ad Widget

Ad Widget

ಫಿಶ್ ಆಯಿಲ್ ಮಿಲ್ ಮಾಲೀಕರಿಂದ ಬೆದರಿಸಿ ಹಣ ಪಡೆದಿರುವ ವಿಚಾರದಲ್ಲಿ ಇಬ್ಬರ ನಡುವೆ  ಮನಸ್ತಾಪ ಉಂಟಾಗಿತ್ತು.  ಕೆಲ ತಿಂಗಳುಗಳ ಹಿಂದೆ  ಈ ಕುರಿತು ಜಗಳ ನಡೆದು  ಆರೋಪಿಗಳ ಪೈಕಿ ಓರ್ವನಿಗೆ ಸದಕತ್ತುಲ್ಲಾ ತಂಡ ಹಲ್ಲೆ ನಡೆಸಿದ್ದು,  ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದಕ್ಕೆ ಪ್ರತೀಕಾರವಾಗಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.

Ad Widget

ನಿನ್ನೆ ತಡ ರಾತ್ರಿ ಸದಕತ್ತುಲ್ಲಾ ಮನೆ ಸಮೀಪ ಬಂದ ದುಷ್ಕರ್ಮಿಗಳು,ಆತನನ್ನು ಮನೆಯಿಂದ ಹೊರಗೆ ಕರೆದು ಚೂರಿ ಇರಿದಿದ್ದಾರೆ ಎನ್ನಲಾಗುತ್ತಿದೆ. ಹೊಟ್ಟೆಯ ಭಾಗಕ್ಕೆ ಚೂರಿಯಿಂದ ಇರಿಯಲಾಗಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget

Ad Widget
ಯು.ಟಿ ಖಾದರ್ ಮಧ್ಯರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದರು

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: