ಬಂಟ್ವಾಳ
ಬಂಟ್ವಾಳ : ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿಯನ್ನು 7 ಮಂದಿ ವಿವಿಧ ಸಮಾಜದ ಹಿರಿಯರಿಂದ ಉದ್ಘಾಟನೆ
ಮತ್ತೊಮ್ಮೆ ಗೆದ್ದರೆ ಹಿಂದೆಂದಿಗಿಂತಲೂ ಹೆಚ್ಚು ಪ್ರಾಮಾಣಿಕ ಜನಸೇವೆ : ರಮಾನಾಥ ರೈ
ಬಂಟ್ವಾಳ : ಸಾಮಾಜಿಕ ಬದ್ಧತೆಯ ಸೈದ್ಧಾಂತಿಕ ರಾಜಕಾರಣ ಮಾಡಿಕೊಂಡು ಬಂದವನು ನಾನು. ಯಾವುದೇ ಧರ್ಮ, ಜಾತಿಯ ತಾರತಮ್ಯ ಮಾಡದೆ ಎಲ್ಲಾ ವರ್ಗಗಳನ್ನು ಸಮಾನತೆಯಿಂದ ನೋಡಿದವನು. ಹೀಗಾಗಿ ಸರ್ವಜನ ವರ್ಗದ ಬಂಧುಗಳು ಮುಂಬರುವ ಚುನಾವಣೆಯಲ್ಲಿ ನನ್ನನ್ನು ಆಶೀರ್ವದಿಸಬೇಕು. ಚುನಾವಣೆಯಲ್ಲಿ ಮತ್ತೊಮ್ಮೆ ಆಯ್ಕೆಯಾದಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಜನಸೇವೆ ಮಾಡುತ್ತೇನೆ ಎಂದು ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನೀಡಿದರು.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ತಮ್ಮ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ಬಿ.ಸಿ. ರೋಡ್ ನ ಪದ್ಮ ಪೆಟ್ರೋಲ್ ಪಂಪ್ ಮುಂಭಾಗದಲ್ಲಿರುವ ಧನಲಕ್ಷ್ಮಿ ಕಾಂಪ್ಲೆಕ್ಸ್ ನಲ್ಲಿ ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಚೇರಿ ಇಂದು ಉದ್ಘಾಟನೆಗೊಂಡಿತು. ವಿಪಕ್ಷ ಉಪನಾಯಕ ಯು.ಟಿ ಖಾದರ್ ಉಪಸ್ಥಿತರಿದ್ದರು.
ಮತದಾನದ ದಿನಕ್ಕೆ ಇನ್ನು ಕೇವಲ 27 ದಿನಗಳು ಬಾಕಿಯುಳಿದಿದ್ದು ಕಾರ್ಯಕರ್ತರು ಅವಿರತ ಶ್ರಮಿಸಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಸಹಕರಿಸಬೇಕು ಎಂದು ಅವರು ವಿನಂತಿಸಿದರು.
ಪಕ್ಷದ ಹಿರಿಯ ಮುಖಂಡರುಗಳಿಂದ ಕಚೇರಿ ಉದ್ಘಾಟಿಸಲಾಯಿತು. ಜನಾರ್ಧನ ಶೆಟ್ಟಿ ಮೊಡಂಕಾಪುಗುತ್ತು, ರಾಮಣ್ಣ ಪೂಜಾರಿ ಕಂಗಿಹಿತ್ತಿಲು, ಜಿನರಾಜ ಆರಿಗ ಕಾರಿಂಜ, ಹಾಜಿ ಬಿ.ಎಂ. ಖಾದರ್ ಬಂಟ್ವಾಳ, ನಿವೃತ್ತ ಯೋಧ ವಲೇರಿಯನ್ ಡಿಸೋಜ, ಬೇಬಿ ನಾಯಕ್ ಸಜೀಪಮುನ್ನೂರು, ಬಾಳಪ್ಪ ಶೆಟ್ಟಿ ವಗೆನಾಡು ಕರೋಪಾಡಿ ಮುಂತಾದ ಏಳು ಮಂದಿ ವಿವಿಧ ಸಮುದಾಯಗಳ ಹಿರಿಯರಿಂದ ಕಚೇರಿ ಉದ್ಘಾಟಿಸಿದ್ದು ವಿಶೇಷವಾಗಿತ್ತು.
ಉದ್ಘಾಟನೆಗೆ ಮೊದಲು ಗಣಪತಿ ಹೋಮ ನಡೆಯಿತು.
ಕಾರ್ಯಕ್ರಮ ಸ್ವಾಗತ ಮತ್ತು ನಿರೂಪಣೆಯನ್ನು ಬಾಲಕೃಷ್ಣ ಆಳ್ವ ಕೊಡಾಜೆ ನಿರ್ವಹಿಸಿದರು. ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಸಪಲ್ಯ ಧನ್ಯವಾದ ಸಲ್ಲಿಸಿದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕೆ.ಪಿ.ಸಿ.ಸಿ. ಸದಸ್ಯರುಗಳಾದ ಪಿಯೂಸ್ ಎಲ್. ರಾಡ್ರಿಗಸ್, ಎಂ.ಎಸ್. ಮುಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ಪದ್ಮಶೇಖರ ಜೈನ್ ಮತ್ತಿತರ ವಿವಿಧ ಘಟಕಗಳ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು. ಇದೇ ವೇಳೆ ಇಬ್ರಾಹೀಂ ಕೈಲಾರ ಕಾಂಗ್ರೆಸ್ ಸೇರ್ಪಡೆಗೊಂಡರು.
ಅಪರಾಧ
Bantwal-ಬಂಟ್ವಾಳ : ಬಾಲಕಿಯೊಂದಿಗೆ ಅನುಚಿತ ವರ್ತನೆ – ಯುವಕನ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ಪೊಳಲಿಯಲ್ಲಿ ಬಾಲಕಿಯನ್ನು ಅಪ್ಪಿ ಹಿಡಿದು ಅನುಚಿತವಾಗಿ ವರ್ತಿಸಿದ ಘಟನೆಯು ಎ. 24ರಂದು ನಡೆದಿದ್ದು, ಆರೋಪಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡಕಬೈಲು ನಿವಾಸಿ ಅಮೀನ್ ಯಾನೆ ಮೊಹಮ್ಮದ್ ಅಮೀನ್ ಪ್ರಕರಣ ಆರೋಪಿಯಾಗಿದ್ದು, ಆತ ಬಾಲಕಿಯ ಹಿಂದಿನಿಂದ ಬಂದು ಜೋರಾಗಿ ಎದೆ ಭಾಗವನ್ನು ಅಪ್ಪಿ, ಕೈಯನ್ನು ಬಲವಾಗಿ ಹಿಡಿದು ತಿರುಗಿ ನೋಡಲು ಕೂಡ ಅವಕಾಶ ನೀಡದೆ ನಿನ್ನ ಮೊಬೈಲ್ ನಂಬರ್ ಕೊಡಬೇಕು, ಇಲ್ಲದಿದ್ದರೇ ನಿನ್ನನ್ನು ರೇಪ್ ಮಾಡದೇ ಬಿಡುವುದಿಲ್ಲ, ನೀನು ನನಗೆ ಬೇಕು ಎಂದು ಹೇಳಿದಾಗ ನೊಂದ ಬಾಲಕಿಯು ಬೊಬ್ಬೆ ಹಾಕಿದ್ದಾಳೆ.
ಈ ವೇಳೆ ಸಂಬಂಧಿಕನೋರ್ವ ಬರುವುದನ್ನು ನೋಡಿ ಆರೋಪಿಯು ಸ್ಕೂಟರ್ನಲ್ಲಿ ಪರಾರಿಯಾಗಿದ್ದಾನೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Bantwal-ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನಿಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನ – ರವಿ ನಾವೂರು ವಿರುದ್ದ ಪ್ರಕರಣ ದಾಖಲು
ಹಿಂದೂ ಸಂಘಟನೆಯ ಮುಖಂಡನಿಗೆ ಚೂರಿಯಿಂದ ಇರಿದು ಹತ್ಯೆ ಯತ್ನಿಸಿದ ಬಗ್ಗೆ ರವಿ ನಾವೂರು ಎಂಬಾತನ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣಕಾಸಿನ ಮನಸ್ತಾಪದಲ್ಲಿ ಉಂಟಾದ ಜಗಳ ಕೊಲೆಯತ್ನದವರೆಗೆ ಮುಂದುವರಿದಿದೆ ಎಂದು ಬಡ್ಡಕಟ್ಟೆ, ಬಿ.ಕಸ್ಬಾ ಗ್ರಾಮ, ಬಂಟ್ವಾಳ ನಿವಾಸಿ ಗುರುರಾಜ್ (32) ಎಂಬವರು ಠಾಣೆಗೆ ದೂರು ನೀಡಿದ್ದಾರೆ.
ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ಬಡ್ಡಕಟ್ಟೆ ಎಂಬಲ್ಲಿ ಏ. 14ರಂದು ರಾತ್ರಿ ಪುಷ್ಪರಾಜ್ ಎಂಬವರ ಮೇಲೆ ಹಲ್ಲೆ ನಡೆದಿತ್ತು. ಪರಸ್ಪರ ಪರಿಚಿತರಾದ ರವಿ ನಾವೂರು ಹಾಗೂ ಪುಷ್ಪರಾಜ್ ಎಂಬವರ ನಡುವೆ ಗಲಾಟೆ ನಡೆದಿದ್ದು, ಆರೋಪಿ ರವಿ ನಾವೂರು ಪುಷ್ಪರಾಜ್ ರವರಿಗೆ ಚೂರಿಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಹಲ್ಲೆಯಿಂದ ಗಾಯಗೊಂಡ ಪುಷ್ಪರಾಜ್ ರವರನ್ನು, ಗುರುರಾಜ್ ಹಾಗೂ ಮತ್ತೋರ್ವರು ಸೇರಿ, ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ, ಮಂಗಳೂರು ಎ.ಜೆ. ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ.
ಗಲಾಟೆ ಕುರಿತಾಗಿ ಪುಷ್ಪರಾಜ್ ಬಳಿ ಗುರುರಾಜ್ರವರು ವಿಚಾರಿಸಿದಾಗ, ಹಣಕಾಸಿನ ವಿಚಾರದಲ್ಲಿ ಆರೋಪಿ ಹಲ್ಲೆ ನಡೆಸಿರುವುದಾಗಿ ತಿಳಿಸಿರುತ್ತಾನೆ ಎಂಬುದಾಗಿ ಗುರುರಾಜ್ರವರು ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ದ ಐಪಿಸಿ ಕಲಂ 504, 506, 307 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಬಿಗ್ ನ್ಯೂಸ್
Bantwal-ಬಂಟ್ವಾಳ : ಕುದ್ಕೋಳಿ ಬಳಿ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಡಸ್ಟರ್ ಕಾರು
ಬಂಟ್ವಾಳ: ಇಲ್ಲಿನ ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ(ಏ.8) ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದು ಹೋದ ಘಟನೆ ನಡೆದಿದೆ. ಆದರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.
ಬಂಟ್ವಾಳ ಅಗ್ನಿಶಾಮಕ ದಳದವರು ಹಾಗೂ ಸ್ಥಳೀಯರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಕಾರಿನಲ್ಲಿದ್ದವರು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಿಂದ ಇಳಿದಿದ್ದು, ಯಾರಿಗೂ ಗಾಯಗಳಾಗಿಲ್ಲ. ಆದರೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಈ ಘಟನೆಯಿಂದಾಗಿ ಬಂಟ್ವಾಳ- ಮೂಡುಬಿದಿರೆ ರಸ್ತೆ ಸುಮಾರು ಒಂದು ತಾಸುಗಳ ಕಾಲ ಬ್ಲಾಕ್ ಆಗಿತ್ತು ಎನ್ನಲಾಗಿದೆ.
ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರ ಕಾರಿನಲ್ಲಿ ಬೆಂಕಿ ಕಾಣಿಕೊಂಡಿದ್ದು, ಈ ವೇಳೆ ಕಾರು ಬ್ರೇಕ್ ಹಾಕಿದರೂ ನಿಲ್ಲದೇ, ಬಳಿಕ ಚಾಲಕನ ಸಮಯ ಪ್ರಜ್ಞೆಯಿಂದ ಕಾರು ನಿಂತಿದೆ. ಕಾರಿನಲ್ಲಿ ಮಗು ಸೇರಿದಂತೆ ಇತರ ನಾಲ್ಕು ಮಂದಿ ಇದ್ದು, ಯಾರಿಗೂ ಯಾವುದೇ ಹಾನಿ ಸಂಭವಿಸಿರುವುದಿಲ್ಲ.
-
ದಕ್ಷಿಣ ಕನ್ನಡ1 day ago
woman bathing Video graphed: ಮದುವೆ ಮನೆಯಲ್ಲಿ ಬಾತ್ ರೂಂನಲ್ಲಿ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ಆರೋಪ – ವಿಚಾರಿಸಲು ಮನೆಗೆ ಹೋದಗ ಚೂರಿ ಪ್ರದರ್ಶಿಸಿ ಹಲ್ಲೆ – ಕಡಬ ಠಾಣೆಯಲ್ಲಿ ಪ್ರಕರಣ ದಾಖಲು
-
ಬಿಗ್ ನ್ಯೂಸ್1 day ago
Prajwal Revanna | ಜರ್ಮನಿಯಿಂದ ಅರಬ್ ರಾಷ್ಟ್ರಕ್ಕೆ ಪಲಾಯನಗೈದ ಪ್ರಜ್ವಲ್ ರೇವಣ್ಣ : ಇಂದು ಮಂಗಳೂರಿನಲ್ಲಿ ಶರಣಾಗ್ತಾರ..?
-
ಬಿಗ್ ನ್ಯೂಸ್2 days ago
Prajwal Revanna Sex Scandal Case | ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡೀಯೋ ಪ್ರಕರಣ : ಅಪಹರಣವಾಗಿದ್ದ ಸಂತ್ರಸ್ತೆಯನ್ನು ಹುಣಸೂರು ತೋಟದ ಮನೆಯಿಂದ ರಕ್ಷಿಸಿದ ಎಸ್ಐಟಿ
-
ಬಿಗ್ ನ್ಯೂಸ್2 days ago
Revanna Arrest | ಮಹಿಳೆ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ ರೇವಣ್ಣ ಎಸ್ಐಟಿ ವಶಕ್ಕೆ
-
ಮಂಗಳೂರು1 day ago
ವಿಟ್ಲ: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮಗು ಸಹಿತ ಮೂವರಿಗೆ ಗಾಯ
-
ರಾಜ್ಯ7 hours ago
Heavy rainfall-ನಾಳೆಯಿಂದ 4 ದಿನ ರಾಜ್ಯದ ಹಲವೆಡೆ ಬಿರುಸಾಗಿ ಮಳೆಯಾಗುವ ಸಾಧ್ಯತೆ; ಪ್ರವಾಹ ಎದುರಿಸಲು ಸಜ್ಜಾಗುವಂತೆ ಸೂಚನೆ
-
ರಾಜಕೀಯ6 hours ago
Bollywood actress-ಪ್ರಜ್ವಲ್ ರೇವಣ್ಣ ಬದಲು ಆರೋಪಿ ಮುಸ್ಲಿಂ ಆಗಿದ್ರೆ ಬಿಜೆಪಿಯವರು ಬಿಡುತಿದ್ರಾ? ಬಾಲಿವುಡ್ ನಟಿಯ ಪ್ರಶ್ನೆ
-
ಬಿಗ್ ನ್ಯೂಸ್4 hours ago
Heat Wave | ಕರ್ನಾಟಕ ಕರಾವಳಿಯಲ್ಲಿ ಬಿಸಿಗಾಳಿ – ಆರೆಂಜ್ ಎಲರ್ಟ್ ಘೋಷಣೆ