ರಾಷ್ಟ್ರೀಯ
Wrestlers protest : ಗೆದ್ದ ಪದಕಗಳನ್ನು ಗಂಗಾನದಿಯಲ್ಲಿ ಬಿಡಲು ತೀರ್ಮಾನಿಸಿದ ಕುಸ್ತಿಪಟುಗಳು – ಈ ಪದಕಗಳನ್ನು ಕಳೆದುಕೊಂಡ ಬಳಿಕ ತಮ್ಮ ಜೀವಗಳಿಗೂ ಯಾವುದೇ ಅರ್ಥವಿಲ್ಲ ಬಾವುಕ ಪತ್ರ
ಹೊಸದಿಲ್ಲಿ: ಭಾರತೀಯ ಕುಸ್ತಿಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh)ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು (Wrestlers Protest) ನಮ್ಮ ಬೇಡಿಕೆ ಈಡೇರಿಸದೇ ಇದ್ದರೆ ಇಂದು(ಮಂಗಳವಾರ) ಸಂಜೆ 6 ಗಂಟೆಗೆ ತಾವು ಗೆದ್ದ ಪದಕಗಳನ್ನು ಗಂಗಾ ನದಿಯಲ್ಲಿ (Ganga River) ಬಿಡುವುದಾಗಿ ಹೇಳಿದ್ದಾರೆ.
ಈ ಕುರಿತು ಬಾವುಕರಾಗಿ ಪತ್ರ ಬರೆದಿರುವ ಕುಸ್ತಿ ಪಟುಗಳು “ ಗಂಗಾ ನದಿ ನಮ್ಮ ಮಾತೆಯಾಗಿರುವುದರಿಂದ ಅದನ್ನು ಆಯ್ಕೆ ಮಾಡಿದ್ದೇವೆ. ಗಂಗೆಯಂತೆ ನಾವು ಪವಿತ್ರರು. ಈ ಪದಕಗಳನ್ನು ಗೆಲ್ಲಲು ಪರಿಶುದ್ಧತೆಯಂತೆ ಕಠಿಣ ಪರಿಶ್ರಮ ಹಾಕಿದ್ದೇವೆ. ಪದಕಗಳು ಇಡೀ ದೇಶಕ್ಕೆ ಪವಿತ್ರವಾಗಿವೆ. ಅವುಗಳಿಗೆ ಈ ಪವಿತ್ರ ನದಿಯೇ ಸೂಕ್ತ ಸ್ಥಳ” ಎಂದು ತಿಳಿಸಿದ್ದಾರೆ
ಡಬ್ಲ್ಯುಎಫ್ಐ ಮುಖ್ಯಸ್ಥರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ ತಿಂಗಳಿನಿಂದ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಈ ಕುಸ್ತಿ ಪಟುಗಳನ್ನು ವಶಕ್ಕೆ ಪಡೆದ ಪೊಲೀಸರು, ಪ್ರತಿಭಟನಾ ನಿರತರ ವಸ್ತುಗಳನ್ನು ಅಲ್ಲಿಂದ ಖಾಲಿ ಮಾಡಿದ್ದರು. ಭಾನುವಾರದ ಘಟನೆ ನಂತರ ತೀವ್ರವಾಗಿ ನೊಂದಿರುವ ಕುಸ್ತಿಪಟುಗಳು ಈಗ ಪದಕಗಳನ್ನು ಗಂಗಾ ನದಿಯಲ್ಲಿ ಬಿಡಲು ತೀರ್ಮಾನಿಸಿದ್ದಾರೆ.
ಈ ಕುರಿತ ಮಾಹಿತಿಯುಳ್ಳ ಸುದೀರ್ಘ ಪತ್ರವೊಂದನ್ನು ಸಾಕ್ಷಿ ಮಲಿಕ್, ವಿನೇಶ್ ಪೋಗಟ್, ಬಜರಂಗ್ ಪೂನಿಯಾ ಮುಂತಾದ ಕುಸ್ತಿಪಟುಗಳು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
.ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಅಪ್ರಾಪ್ತ ವಯಸ್ಕಳು ಸೇರಿದಂತೆ ಅನೇಕ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದು, ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪದಕಗಳನ್ನು ಕಳೆದುಕೊಂಡ ಬಳಿಕ ತಮ್ಮ ಜೀವಗಳಿಗೂ ಯಾವುದೇ ಅರ್ಥವಿಲ್ಲ. ಆತ್ಮಗೌರವದ ಜತೆಗೆ ರಾಜಿಯಾಗುವುದನ್ನು ಮುಂದುವರಿಸಲು ತಮ್ಮಿಂದ ಸಾಧ್ಯವಿಲ್ಲ ಎಂದು ಹಂಚಿಕೊಂಡಿರುವ ಪತ್ರದಲ್ಲಿ ತಿಳಿಸಲಾಗಿದೆ.
ಈಗಾಗಲೇ ಕುಸ್ತಿಪಟುಗಳ ತಂಡ ಉತ್ತರಾಖಂಡದ ಹರಿದ್ವಾರದ ಕಡೆಗೆ ತೆರಳಿದ್ದು, ಮಂಗಳವಾರ ಸಂಜೆ 6 ಗಂಟೆಗೆ ಪದಕಗಳ ವಿಸರ್ಜನೆಗೆ ಉದ್ದೇಶಿಸಿದ್ದಾರೆ. ಅದರ ನಂತರ ದಿಲ್ಲಿಯ ಇಂಡಿಯಾ ಗೇಟ್ ಬಳಿ ಆಮರಣಾಂತ ಉಪವಾಸ ಮುಷ್ಕರ ನಡೆಸುವುದಾಗಿ ತಿಳಿಸಿದ್ದಾರೆ.
“ನಮ್ಮ ಕುತ್ತಿಗೆ ಸುತ್ತ ಅಲಂಕೃತವಾಗಿದ್ದ ಈ ಪದಕಗಳಿಗೆ ಇನ್ನು ಯಾವ ಅರ್ಥವೂ ಇಲ್ಲ ಎನಿಸುತ್ತದೆ. ಅವುಗಳನ್ನು ಮರಳಿಸುವ ವಿಚಾರದ ಆಲೋಚನೆಯೇ ನನ್ನನ್ನು ಸಾಯಿಸುತ್ತಿದೆ. ಆದರೆ ನಿಮ್ಮ ಆತ್ಮ ಗೌರವದ ಜತೆ ರಾಜಿ ಮಾಡಿಕೊಂಡು ಬದುಕುವ ಜೀವನದ ಪ್ರಯೋಜನವೇನು?” ಎಂದು ಏಪ್ರಿಲ್ನಿಂದ ಪ್ರತಿಭಟನೆ ನಡೆಸುತ್ತಿರುವ ಪ್ರಮುಖ ಅಥ್ಲೀಟ್ಗಳು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಪತ್ರದಲ್ಲಿ ಹೇಳಲಾಗಿದೆ.
ರಾಷ್ಟ್ರಪತಿಯೂ ಇಲ್ಲ, ಮೋದಿಯೂ ಕೇಳಿಲ್ಲ
ತಮ್ಮ ನೋವನ್ನು ಆಲಿಸದ ಸರ್ಕಾರಕ್ಕೆ ‘ಪದಕ ವಾಪ್ಸಿ’ ನಡೆಸುವುದಾಗಿ ಈ ಹಿಂದೆ ಹೇಳಿದ ಕುಸ್ತಿಪಟುಗಳು , ಇದೀಗ ತಮ್ಮ ನೋವನ್ನು ಆಲಿಸದಿರುವ ರಾಷ್ಟ್ರಪತಿ ಅಥಾವ ಪ್ರಧಾನಿಗೆ ಪದಕವನ್ನು ವಾಪಸ್ಸು ಮಾಡಲು ಇಚ್ಚಿಸುತ್ತಿಲ್ಲ ಎಂದು ಅವರು ಪತ್ರದಲ್ಲಿ ಅತೀವವಾದ ನೋವಿನಿಂದ ಉಲ್ಲೇಖಿಸಿದ್ದಾರೆ.
. “ಸ್ವತಃ ಮಹಿಳೆಯಾಗಿರುವ ರಾಷ್ಟ್ರಪತಿ, ಕೇವಲ ಎರಡು ಕಿಮೀ ದೂರದಲ್ಲಿ ಕುಳಿತು ನೋಡಿದ್ದಾರೆ. ಅವರು ಏನನ್ನೂ ಹೇಳಲಿಲ್ಲ” ಎಂದು ಪದಕಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮರಳಿಸಲು ಏಕೆ ಮುಂದಾಗಿಲ್ಲ ಎಂಬುದನ್ನು ಪತ್ರದಲ್ಲಿ ಬರೆಯಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಒಮ್ಮೆ ಕೂಡ ತಮ್ಮ ಬಗ್ಗೆ ವಿಚಾರಿಸಿಲ್ಲ. “ಬದಲಾಗಿ, ನಮ್ಮ ಶೋಷಕ (ಬ್ರಿಜ್ ಭೂಷಣ್) ಹೊಳೆಯುವ ಬಿಳಿ ಬಟ್ಟೆಗಳನ್ನು ಧರಿಸಿ, ಫೋಟೋಗಳನ್ನು ಕ್ಲಿಕ್ಕಿಸಿಕೊಳ್ಳುತ್ತಾ ಹೊಸ ಸಂಸತ್ ಕಟ್ಟಡದ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು. ಆ ಬಿಳಿ ಉಡುಪುಗಳು, ‘ನಾನೇ ವ್ಯವಸ್ಥೆ’ ಎಂದು ಹೇಳುವಂತೆ ನಮ್ಮನ್ನು ಕುಟುಕುತ್ತಿದ್ದವು” ಎಂದು ನೋವು ಹಂಚಿಕೊಂಡಿದ್ದಾರೆ. ಈ ವ್ಯವಸ್ಥೆಯು ಪದಕಗಳನ್ನು ನಮ್ಮ ಕುತ್ತಿಗೆ ಸುತ್ತಲೂ ಹಾಕಿ, ನಮಗೆ ಮುಖವಾಡ ತೊಡಗಿಸುವ ಮೂಲಕ ತನ್ನದೇ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ. ಹೀಗಾಗಿ ಈ ಪದಕಗಳು ನಮಗೆ ಬೇಡ. ಅವರು ಆಗ ನಮ್ಮನ್ನು ಶೋಷಣೆ ಮಾಡಿದರು. ಈಗ ನಾವು ಪ್ರತಿಭಟನೆ ನಡೆಸಿದರೆ ಜೈಲಿಗೆ ಹಾಕಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಪೊಲೀಸರು ಮತ್ತು ವ್ಯವಸ್ಥೆಯು ನಮ್ಮನ್ನು ಕ್ರಿಮಿನಲ್ಗಳಂತೆ ನಡೆಸಿಕೊಳ್ಳುತ್ತಿದ್ದರೆ, ಕಿರುಕುಳ ನೀಡಿದಾತ ಸಾರ್ವಜನಿಕ ಸಭೆಗಳಲ್ಲಿ ನಮ್ಮ ಮೇಲೆ ಬಹಿರಂಗವಾಗಿ ದಾಳಿ ನಡೆಸುತ್ತಿದ್ದಾರೆ. ಮಹಿಳಾ ಕುಸ್ತಿಪಟುಗಳಿಗೆ ಈ ದೇಶದಲ್ಲಿ ನಮಗೆ ಏನೂ ಉಳಿದಿಲ್ಲ ಎಂದೆನಿಸತೊಡಗಿದೆ. ನಾವು ಒಲಿಂಪಿಕ್ ಹಾಗೂ ವಿಶ್ವ ಚಾಂಪಿಯನ್ ಶಿಪ್ಗಳಲ್ಲಿ ಗೆದ್ದಾಗಿನ ಗಳಿಗೆಗಳನ್ನು ನೆನಪಿಸಿಕೊಳ್ಳುತ್ತಿದ್ದೇವೆ” ಎಂದು ಹೇಳಿದ್ದಾರೆ.
ರಾಷ್ಟ್ರೀಯ
ಅಪಾರ್ಟ್ ಮೆಂಟ್ ನ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಯುಟ್ಯೂಬರ್ ಜೋಡಿ
ಹೊಸದಿಲ್ಲಿ ಎ.14: ಸೋಶಿಯಲ್ ಮಿಡಿಯಾ ಯೂಟ್ಯೂಬರ್ ಮೂಲಕ ಟ್ರೆಂಡಿಗ್ ನಲ್ಲಿದ್ದ ಜೋಡಿಯೊಂದು ಅಪಾರ್ಟ್ ಮೆಂಟ್ ನ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಹರಿಯಾಣದ ಬಹದ್ದೂರ್ಗಢದ ರುಹಿಲ್ ರೆಸಿಡೆನ್ಸಿಯಲ್ಲಿ ನಡೆದಿದೆ.
ಮೃತರನ್ನು ಗರ್ವಿತ್ (25) ಮತ್ತು ನಂದಿನಿ (22) ಎಂದು ಗುರುತಿಸಲಾಗಿದೆ. ಮೃತ ಜೋಡಿ ತಮ್ಮ ಯೂಟ್ಯೂಬ್ ಚಾನೆಲ್ ನಿರ್ವಹಣೆ ಮತ್ತು ಕಿರುಚಿತ್ರಗಳನ್ನು ರಚಿಸುವಲ್ಲಿ ಪ್ರಸಿದ್ಧರಾಗಿದ್ದರು. ಇತ್ತೀಚೆಗೆ, ಅವರು ತಮ್ಮ ತಂಡದೊಂದಿಗೆ ಡೆಹ್ರಾಡೂನ್ನಿಂದ ಬಹದ್ದೂರ್ಗಢಕ್ಕೆ ಸ್ಥಳಾಂತರಗೊಂಡಿದ್ದರು.
ದಂಪತಿಗಳು ಕಟ್ಟಡದ ಏಳನೇ ಮಹಡಿಯಲ್ಲಿ ಅಪಾರ್ಟ್ಮೆಂಟ್ ಅನ್ನು ಬಾಡಿಗೆಗೆ ಪಡೆದಿದ್ದರು. ಅವರು ತಮ್ಮ ತಂಡದ ಸರಿಸುಮಾರು ಐದು ಮಂದಿಯೊಂದಿಗೆ ವಾಸಿಸುತ್ತಿದ್ದರು.
ಮಂಗಳೂರು
Padmaraj R ಜಿಲ್ಲೆಯ ಪ್ರಭಾವಿ ಬಿಲ್ಲವ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಶಿಷ್ಯ ಪದ್ಮರಾಜ್ ರಾಮಯ್ಯ ಗೆ ಒಲಿದ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ –
ಪುತ್ತೂರು: ಕಾಂಗ್ರೆಸ್ ಪಕ್ಷ ರಾಜ್ಯದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮಂಗಳೂರು ಲೋಕಸಭಾ ಕ್ಷೇತ್ರದಿಂದ ಜಿಲ್ಲೆಯ ಪ್ರಭಾವಿ ಬಿಲ್ಲವ ನಾಯಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜನಾರ್ಧನ ಪೂಜಾರಿಯರ ಶಿಷ್ಯ , ಕಳೆದ 25 ವರ್ಷಗಳಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯವಾದಿ ಪದ್ಮರಾಜ್ ರಾಮಯ್ಯನವರಿಗೆ ಟಿಕೆಟ್ ನೀಡಲಾಗಿದೆ. ನೋಟರಿ ವಕೀಲರಾದ ಇವರು ತನ್ನ ನೋಟರಿ ಸಹಿಯನ್ನು ಬಡವರು, ವಿದ್ಯಾರ್ಥಿಗಳ ದೃಢೀಕರಣಕ್ಕೆ ಉಚಿತವಾಗಿ ನೀಡುವ ಮೂಲಕ ಸಮಾಜಕ್ಕೊಬ್ಬ ಮಾದರಿ ವಕೀಲರಾಗಿದ್ದಾರೆ.
ಪದ್ಮರಾಜ್ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರುನಲ್ಲಿ ವಾಸ್ತವ್ಯವಿದ್ದ ಮಂಗಳೂರು ಮೂಲದ ಎಚ್.ಎಂ. ರಾಮಯ್ಯ ಪೂಜಾರಿ ಮತ್ತು ಲಲಿತಾ ದಂಪತಿಯ ದ್ವಿತೀಯ ಪುತ್ರ. ಅವರು ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣವನ್ನು ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಗಿಸಿ ಮುಂದೆ ಬಿ.ಎ. ಪದವಿಯನ್ನು ಬೆಳ್ತಂಗಡಿಯ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಹಾಗೂ ಕಾನೂನು ಪದವಿಯನ್ನು ಮಂಗಳೂರಿನ ಎಸ್ಡಿಎಂ ಕಾನೂನು ಕಾಲೇಜಿನಲ್ಲಿ ಮುಗಿಸಿದರು
1995ರಿಂದ ಕಾನೂನು ವೃತ್ತಿಯ ಚೊಚ್ಚಲ ಅಭ್ಯಾಸವನ್ನು ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿಯವರೊಂದಿಗೆ ಪ್ರಾರಂಭಿಸಿದ ಇವರು ನಾಲ್ಕು ವರ್ಷಗಳ ಬಳಿಕ ಮಂಗಳೂರಿನ ಬಳ್ಳಾಲ್ಬಾಗ್ನಲ್ಲಿ ಸ್ವಂತ ಕಚೇರಿ ಪ್ರಾರಂಭಿಸಿದರು. ವೃತ್ತಿ ಜೀವನದ ಆರಂಭದ ಸಮಯದಲ್ಲಿ ಹಿರಿಯ ವಕೀಲರಾದ ಪಿ.ಗಂಗಾಧರ್ ಅವರ ಸಲಹೆಯಂತೆ ಆಗಿನ ಬಿಲ್ಲವರ ಯೂನಿಯನ್ ಸದಸ್ಯರಾದರು. ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಳ್ಳದಿದ್ದರೂ ಬಿ.ಜನಾರ್ದನ ಪೂಜಾರಿಯವರು ಸ್ಪರ್ಧಿಸಿದ ಎಲ್ಲಾ ಚುನಾವಣೆ ಸಂದರ್ಭದಲ್ಲೂ ಅವರಿಗಾಗಿ ದುಡಿದಿದ್ದಾರೆ.
ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಮಾಜಸೇವೆಯನ್ನು ಮೈಗೂಡಿಸಿಕೊಂಡಿರುವ ಪದ್ಮರಾಜ್ ಅವರಿಗೆ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಳದ ಬಗ್ಗೆ ಅಪಾರ ಶ್ರದ್ಧೆ, ಭಕ್ತಿ. ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿಪದ್ಮರಾಜ್ ರವರು ಮಂಗಳೂರಿನ ನವರಾತ್ರಿ ಉತ್ಸವ ವಿಶ್ವ ಪ್ರಸಿದ್ಧಿ ಪಡೆಯಲು ಶ್ರಮ ಪಟ್ಟಿದ್ದಾರೆ.
ಕೊರೊನಾ ಮಹಾಮಾರಿಯಿಂದಾಗಿ 40 ದಿನಗಳ ಲಾಕ್ಡೌನ್ ಉಂಟಾದ ಸಂದರ್ಭ ಬಿ.ಜನಾರ್ದನ ಪೂಜಾರಿಯವರ sUcneyMte ದಿನಂಪ್ರತಿ ದೇವಸ್ಥಾನದ ವತಿಯಿಂದ ಸುಮಾರು 1000 ಬಡವರು, ನಿರಾಶ್ರಿತರಿಗೆ ಹಾಗೂ ವಲಸೆ ಕೂಲಿ ಕಾರ್ಮಿಕರಿಗೆ ಅನ್ನದಾನ ನಡೆಯುತ್ತಿತ್ತು. ಈ ಸಂದರ್ಭ ಪದ್ಮರಾಜ್ ಅವರೇ ಖುದ್ದಾಗಿ ಸೇವಾದಳದವರೊಂದಿಗೆ ವಿವಿಧ ಪ್ರದೇಶಗಳಿಗೆ ತೆರಳಿ ಅನ್ನದಾನ ವಿತರಣೆಯಲ್ಲಿ ಭಾಗಿಯಾಗುತ್ತಿದ್ದರು
ಪದ್ಮರಾಜ್ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ ದೇವಸ್ಥಾನದ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ 300 ಕ್ವಿಂಟಾಲ್ ಅಕ್ಕಿದಾನ ಮಾಡಲಾಗಿತ್ತು. ಎರಡನೇ ಲಾಕ್ಡೌನ್ ಸಂದರ್ಭದಲ್ಲಿ ತನ್ನ ಮುಂದಾಳತ್ವದ ಗುರು ಬೆಳದಿಂಗಳು ಪೌಂಡೇಶನ್ ಮೂಲಕ ಸಹಸ್ರಾರು ನೊಂದವರಿಗೆ ದಿನಸಿ, ಆಹಾರ ಸಾಮಾಗ್ರಿ ತಲುಪಿಸಿದರು. ಗುರು ಬೆಳದಿಂಗಳು ಪೌಂಡೇಶನ್ ಅಶಕ್ತರ ಕಣ್ಣೀರು ಒರೆಸಲು ಪದ್ಮರಾಜ್ ಆರಂಭಿಸಿದ ಪೌಂಡೇಷನ್. ಇದರ ಮೂಲಕ ಸಾವಿರಾರು ನೊಂದವರಿಗೆ ಸಹಾಯ ಮಾಡಲಾಗಿದೆ.
ಯುವವಾಹಿನಿ ಕೇಂದ್ರ ಸಮಿತಿಯ ಗೌರವ ಸಲಹೆಗಾರರು, ಜೆ.ಸಿ. ಪ್ರತಿಷ್ಠಾನ ದ.ಕ. ಜಿಲ್ಲಾ ಗೌರವ ಸಂಚಾಲಕ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಂಘ ಸಂಸ್ಥೆಗಳಿಂದ ಇವರ ಸಮಾಜಮುಖಿ ಸೇವೆಗೆ ಗೌರವ ಸಂದಿದೆ. ನಮ್ಮ ಕುಡ್ಲ ವಾಹಿನಿ ನೀಡುವ ಪ್ರಶಸ್ತಿಗೂ ಭಾಜನರಾಗಿದ್ದಾರೆ.
ಪದ್ಮರಾಜ್ರವರು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಅದರ್ಶಗಳನ್ನು ಮೈಗೂಡಿಸಿಕೊಂಡವರು. 2 ವರ್ಷಗಳ ಹಿಂದೆ ಗಣ ರಾಜ್ಯೋತ್ಸವದ ಸಂದರ್ಭ ಕೇಂದ್ರ ಸರಕಾರ ನಾರಾಯಣ ಗುರುಗಳ ಟ್ಯಾಬ್ಲೊ ಪ್ರದರ್ಶನವನ್ನು ನಿರಾಕರಿಸಿದಾಗ ಅದರ ವಿರುದ್ಧ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿ ದ್ದವರು. ಇವರ ಮುಂದಾಳತ್ವದಲ್ಲಿ ಗುರುಗಳಿಗೆ ಆದ ಅವಮಾನದ ಕುರಿತು ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆದಿತ್ತು. ಹಿಂದಿನ ರಾಜ್ಯ ಸರಕಾರದ ಅವಧಿಯಲ್ಲಿ 10ನೇ ತರಗತಿಯ ಪಠ್ಯಪುಸ್ತಕದ ಸಮಾಜ ವಿಜ್ಞಾನದಲ್ಲಿ ನಾರಾಯಣ ಗುರುಗಳ ಪಠ್ಯ ಕೈಬಿಟ್ಟದ್ದರ ವಿರುದ್ಧ ಮೊದಲು ಖಂಡನೆ ವ್ಯಕ್ತಪಡಿಸಿ ರಾಜ್ಯಾದ್ಯಂತ ಹೋರಾಟ ಮಾಡುವ ಮೂಲಕ ಗುರುಗಳ ಪಠ್ಯವನ್ನು ಸೇರ್ಪಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದರು.
ಅಪರಾಧ
Mother Kills Own Daughter: ಮನೆಯಲ್ಲಿ ಬಾಯ್ ಫ್ರೆಂಡ್ ಜತೆ ಮಗಳ ನೋಡಿ ತಾಯಿ ಕೆಂಡಮಂಡಲ – ಕತ್ತು ಹಿಸುಕಿ ಹತ್ಯೆ
ಹೈದರಾಬಾದ್: ಮನೆಯಲ್ಲಿ ಯಾರೂ ಇಲ್ಲದ ವೇಳೆ, ಮಗಳು ತನ್ನ ಬಾಯ್ಫ್ರೆಂಡ್ ಜೊತೆ ಮನೆಯೊಳಗಡೆ ಇರುವುದನ್ನು ಕಂಡು ಕೋಪಗೊಂಡ ತಾಯಿ, ಸ್ವಂತ ಮಗಳನ್ನೆ ಕತ್ತು ಹಿಸುಕಿ ಹತ್ಯೆ ಮಾಡಿದ ಘಟನೆ ಹೈದರಾಬಾದ್ನಲ್ಲಿ (Hyderabad) ನಡೆದಿದೆ. 19ರ ಹರೆಯದ ಬಾರ್ಗವಿ ಕೊಲೆಯಾದವಳು.
ಹೈದರಾಬಾದ್ ನ ಇಬ್ರಾಹಿಂಪಟ್ಟಣದಲ್ಲಿ ಕೃತ್ಯ ನಡೆದಿದೆ. ಬಾರ್ಗವಿಯ ತಾಯಿ ಜಂಗಮ್ಮ ಕೊಲೆ ಆರೋಪಿ. ಭಾರ್ಗವಿಗೆ ಮದುವೆ ಮಾಡಲು ನಿರ್ಧರಿಸಿದ್ದ, ಜಂಗಮ್ಮ ಸೂಕ್ತ ವರನ ಅನ್ವೇಷಣೆಯಲ್ಲಿದ್ದರು. ಆದರೆ ಯುವತಿ ಸ್ಥಳೀಯ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಇದು ಜಂಗಮ್ಮನಿಗೆ ಇಷ್ಟವಿರಲಿಲ್ಲ. ಆಕೆ ಅವರಿಬ್ಬರ ಪ್ರೀತಿ ಸಂಬಂಧವನ್ನು ವಿರೋಧಿಸಿದ್ದಳು.
ಸೋಮವಾರ ಮಧ್ಯಾಹ್ನ ಜಂಗಮ್ಮ ಗದ್ದೆಯಿಂದ ಊಟಕ್ಕೆಂದು ಮನೆಗೆ ಬಂದಾಗ ಮಗಳ ಗೆಳೆಯ ಮನೆಯಲ್ಲಿದ್ದದ್ದನ್ನು ಕಂಡು ಕೋಪಗೊಂಡಿದ್ದಾಳೆ. ಮಗಳಿಗೆ ಬೈಯಲು ಆರಂಭಿಸಿದ್ದಾಳೆ. ಈ ವೇಳೆ ಯುವಕ ಮನೆಯಿಂದ ಓಡಿ ಹೋಗಿದ್ದು, ಯುವತಿಯ ತಮ್ಮನಿಗೆ ವಿಷಯ ತಿಳಿಸಿದ್ದಾನೆ. ಆಕೆಯ ಸಹೋದರ ಮನೆಗೆ ಬಂದಾಗ ಬಾಗಿಲು ಬೀಗ ಹಾಕಿತ್ತು. ಕಿಟಕಿಯಿಂದ ನೋಡಿದಾಗ, ತಾಯಿ ಅಕ್ಕನ ಕತ್ತು ಹಿಸುಕಲು ಪ್ರಯತ್ನಿಸುತ್ತಿರುವುದು ಕಾಣಿಸಿದೆ.
ಹೀಗಾಗಿ ಆತ ಕೋಣೆಯ ಬಾಗಿಲು ಬಿಡಿದಿದ್ದು, ಅಲ್ಲಿಂದ ಹೊರ ಬಂದ ಜಂಗಮ್ಮ , ತಾನು ನೋಡಿದಾಗ ಮಗಳು ಕೊರಳಿಗೆ ಸೀರೆಯ ಕುಣಿಕೆ ಹಾಕಿಕೊಂಡಿದ್ದು, ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಸುಳ್ಳು ಕಥೆಯೊಂದನ್ನು ಮಗನಲ್ಲಿ ಹೇಳಿದ್ದಳು. ಸಂಬಂಧಿಕರು ವೈದ್ಯರನ್ನು ಮನೆಗೆ ಕರೆತಂದು ಪರೀಖ್ಷೆಗೆ ಒಳಪಡಿಸಿದಾಗ, ಭಾರ್ಗವಿ ಸಾವನ್ನಪ್ಪಿರುವುದು ಗೊತ್ತಾಗಿದೆ.
ಕೊಲೆಯಾದ ಯುವತಿಯ ಅಪ್ರಾಪ್ತ ಸಹೋದರ, ತಾನು ಕೊಲೆಯನ್ನು ನೋಡಿರುವುದಾಗಿ ತಾಯಿಯ ವಿರುದ್ಧ ದೂರು ನೀಡಿದ್ದು , ಅದರಂತೆ ಪ್ರಕರಣ ದಾಖಲಾಗಿದೆ.
-
ಸಾಮಾಜಿಕ ಮಾಧ್ಯಮ20 hours ago
Hasana sex tape : ಚುನಾವಣೆ ಹೊಸ್ತಿಲಲ್ಲಿ ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್ ಡ್ರೈವ್ ಸೌಂಡ್ ! ಅಸಲಿಯ / ನಕಲಿಯ ತೀವ್ರ ಚರ್ಚೆ
-
ದಕ್ಷಿಣ ಕನ್ನಡ21 hours ago
Student harrased in bus ಉಪ್ಪಿನಂಗಡಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿದ್ಯಾರ್ಥಿನಿಗೆ ಜತೆ ಸಹ ಪ್ರಯಾಣಿಕನಿಂದ ಕಿರುಕುಳ – ಯುವತಿ ವ್ಯಗ್ರಗೊಳ್ಳುತ್ತಾಳೆ ಕಿಟಕಿಯಿಂದ ಹಾರಿ ಆರೋಪಿ ಪರಾರಿ – ಮುಂದೇನಾಯಿತು ?
-
ಬಿಗ್ ನ್ಯೂಸ್1 day ago
NOTAForSoujanyaCase : ಸೌಜನ್ಯ ಪ್ರಕರಣ : ಟ್ವಿಟರ್ ಟ್ರೆಂಡಿಂಗಲ್ಲಿ 3ನೇ ಸ್ಥಾನ ಪಡೆದ ನೋಟಾ ಅಭಿಯಾನ
-
ನಿಧನ ವಾರ್ತೆ19 hours ago
Bhagavata Subramanya Dhareshwara-ಹಾಡು ನಿಲ್ಲಿಸಿದ ಬಡಗುತಿಟ್ಟಿನ ಗಾನ ಕೋಗಿಲೆ – ಯಕ್ಷಗಾನದ ಹಿರಿಯ ಭಾಗವತ ಸುಬ್ರಮಣ್ಯ ಧಾರೇಶ್ವರ ಇನ್ನಿಲ್ಲ
-
ಅಪರಾಧ2 days ago
Online acquaintance-ಆನ್ ಲೈನ್ ಪರಿಚಿತ ಗೆಳೆಯ ಮಹಿಳೆಯ ಜೀವಾಂತ್ಯಗೊಳಿಸಿದ
-
ನಿಧನ ವಾರ್ತೆ2 days ago
Run over-ತಂದೆಯಿಂದಲೇ ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣ
-
ಮಂಗಳೂರು19 hours ago
Janardhana Poojary-ಹಿಂದುತ್ವದ ಅಮಲಿನಲ್ಲಿ ಹಿಂದುಳಿದ ವರ್ಗದ ಯುವಕರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಮೇಲ್ವರ್ಗದವರು ಅಧಿಕಾರ ನಡೆಸುತ್ತಿದ್ದಾರೆ- ಇದಕ್ಕೆಲ್ಲ ತಿಲಾಂಜಲಿ ನೀಡುವ ಕೆಲಸ ಪದ್ಮರಾಜ್ ಆರ್ ಪೂಜಾರಿಯನ್ನು ಗೆಲ್ಲಿಸುವ ಮೂಲಕ ಆಗಬೇಕಿದೆ :ಜನಾರ್ದನ ಪೂಜಾರಿ
-
ದಕ್ಷಿಣ ಕನ್ನಡ2 days ago
ಬೆಲೆಯೆರಿಕೆ ಗಗನಕ್ಕೆರಿದ ಸಂದರ್ಭ ಸಿದ್ದರಾಮಯ್ಯ ಸರಕಾರ ಗ್ಯಾರಂಟಿ ಮೂಲಕ ಮಹಿಳೆಯರ ನೆರವಿಗೆ ನಿಂತಿದೆ : ಅನಿತಾ ಹೇಮನಾಥ ಶೆಟ್ಟಿ