ಬೆಂಗಳೂರು
5 ಗ್ಯಾರೆಂಟಿ ಯೋಜನೆಗಳು ಗ್ಯಾರಂಟಿ : ಮುಖ್ಯಮಂತ್ರಿ ಸಿದ್ಧರಾಮಯ್ಯ : ಅನುಷ್ಠಾನಕ್ಕೆ ಡೇಟ್ ಫಿಕ್ಸ್
ಬೆಂಗಳೂರು, ಮೇ 31 : ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು.
ಅವರು ಇಂದು ಗ್ಯಾರಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಐದು ಗ್ಯಾರೆಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರೆಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ರಾಜಕೀಯ
Priyanka Gandhi-ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನೆ ತ್ಯಾಗ ಮಾಡಿದ್ದಾರೆ, ಅಜ್ಜಿ ಯುದ್ದ ಕಾಲದಲ್ಲಿ ತನ್ನ ಚಿನ್ನವನ್ನೆ ದೇಶಕ್ಕೆ ನೀಡಿದ್ದಾರೆ : 60 ವರ್ಷದ ಆಡಳಿತದಲ್ಲಿ ಕಾಂಗ್ರೆಸ್ ಯಾವತ್ತೂ ಮಹಿಳೆಯರ ಮಂಗಳಸೂತ್ರ ಕೀಳುವ ಕೆಲಸ ಮಾಡಿಲ್ಲ : ಪ್ರಿಯಾಂಕಾ ಗಾಂಧಿ
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕ್ರಿಕೆಟ್ ಮೈದಾನದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರವಾಗಿ ಮತಯಾಚನೆ ಮಾಡಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ʻಮಂಗಳಸೂತ್ರದ ಮಹತ್ವದ ಬಗ್ಗೆ ಅರಿವಿಲ್ಲದವರು ಅಸಂಬದ್ಧವಾಗಿ ಮಾತನಾಡುತ್ತಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಿತ್ತುಕೊಳ್ಳುತ್ತದೆ ಎಂದು ಹೇಳುತ್ತಾರೆ. 60ಕ್ಕೂ ಹೆಚ್ಚಿನ ವರ್ಷ ದೇಶವನ್ನಾಳಿದ ಕಾಂಗ್ರೆಸ್ ಯಾವತ್ತೂ ಮಹಿಳೆಯರ ಮಂಗಳಸೂತ್ರ ಕೀಳುವ ಕೆಲಸ ಮಾಡಿಲ್ಲ’ ಎಂದರು.
ಈ ದೇಶಕ್ಕಾಗಿ ನನ್ನ ತಾಯಿ ತಮ್ಮ ಮಂಗಳಸೂತ್ರವನ್ನೇ ತ್ಯಾಗ ಮಾಡಿದವರು. ನನ್ನ ಅಜ್ಜಿ ಇಂದಿರಾಗಾಂಧಿ ಅವರು ಯುದ್ಧದ ಸಂದರ್ಭದಲ್ಲಿ ತಮ್ಮ ಚಿನ್ನವನ್ನೆಲ್ಲ ದೇಶಕ್ಕೆ ನೀಡಿದವರು. ಮಹಿಳೆಯರ ಸೇವೆ, ಸಂಘರ್ಷಗಳ ಬಗ್ಗೆ ಅರಿವಿಲ್ಲದ ನರೇಂದ್ರ ಮೋದಿ ಅವರು ಮಂಗಳಸೂತ್ರದ ಬಗ್ಗೆ ಕೇವಲವಾಗಿ ಮಾತನಾಡುತ್ತಿದ್ದಾರೆ. ಅವರು ಮಹಿಳೆಯರ ಭಾವನೆಗಳಿಗೆ ಘಾಸಿ ಮಾಡುತ್ತಿದ್ದಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ಮಾಡಿದರು.
ಚುನಾವಣೆಗಾಗಿ ಮೋದಿಗೆ ಮಂಗಳಸೂತ್ರ ನೆನಪಾಗಿದೆ
ನಮ್ಮ ದೇಶದ ಪರಂಪರೆಯು ಮಹಿಳೆಯರ ಸೇವೆ, ಸಂಘರ್ಷದ ಮೇಲೆ ನಿಂತಿದೆ. ನೋಟ್ ಬ್ಯಾನ್ ಮಾಡಿದಾಗ ಮಹಿಳೆಯರು ಕೂಡಿಟ್ಟಿದ್ದ ಹಣವನ್ನೆಲ್ಲ ಕಿತ್ತುಕೊಳ್ಳುವಾಗ ನರೇಂದ್ರ ಮೋದಿ ಅವರಿಗೆ ಮಂಗಳಸೂತ್ರದ ನೆನಪಾಗಲಿಲ್ಲ. ಲಾಕ್ ಡೌನ್ ಮಾಡಿ ಕಾರ್ಮಿಕರು ಮತ್ತು ಕುಟುಂಬ ಬರಿಗಾಲಲ್ಲಿ ತಮ್ಮ ಊರಿಗೆ ಸಾಗುವಾಗ ಮಂಗಳಸೂತ್ರದ ನೆನಪಾಗಲಿಲ್ಲ. ಕೃಷಿಕರು ಆಂದೋಲನ ಮಾಡಿದಾಗ 600ಕ್ಕೂ ಹೆಚ್ಚಿನ ಕೃಷಿಕರು ಸಾವನ್ನಪ್ಪಿದರು. ಅವರ ಪತ್ನಿಯರ ಮಂಗಳಸೂತ್ರದ ಬಗ್ಗೆ ಯೋಚಿಸಲಿಲ್ಲ. ಮಣಿಪುರದಲ್ಲಿ ಯೋಧನ ಪತ್ನಿಯನ್ನು ವಿವಸ್ತ್ರಗೊಳಿಸಿ ಬೀದಿಯಲ್ಲಿ ಮೆರವಣಿಗೆ ಮಾಡುವಾಗ ನರೇಂದ್ರ ಮೋದಿ ಅವರಿಗೆ ಆಕೆಯ ಮಂಗಳಸೂತ್ರದ ಬಗ್ಗೆ ಯೋಚನೆ ಬರಲಿಲ್ಲ. ಆದರೀಗ, ಚುನಾವಣೆಗಾಗಿ ಮಂಗಳಸೂತ್ರದ ನೆನಪಾಗಿದೆ.- ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನಾಯಕಿ
ಅಪರಾಧ
Online acquaintance-ಆನ್ ಲೈನ್ ಪರಿಚಿತ ಗೆಳೆಯ ಮಹಿಳೆಯ ಜೀವಾಂತ್ಯಗೊಳಿಸಿದ
ಬೆಂಗಳೂರು: ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎಂ. ಶೋಭಾ (48) ಕೊಲೆ ಪ್ರಕರಣದ ಆರೋಪಿ ನವೀನ್ ಗೌಡ (28) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ನವೀನ್ ಗೌಡ, ನಗರದ ಸಾಫ್ಟ್ವೇರ್ ಕಂಪನಿಯೊಂದರ ಉದ್ಯೋಗಿ. ಕೊಡಿಗೇಹಳ್ಳಿ ಬಳಿಯ ಗಣೇಶ ನಗರದ ಶೋಭಾ ಅವರನ್ನು ಏ. 18ರಂದು ಕೊಲೆ ಮಾಡಿ ಪರಾರಿಯಾಗಿದ್ದ.
ಶೋಭಾ ಮಗಳು ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸರು ಹೇಳಿದರು. ಶೋಭಾ ಅವರು ವಾಹನ ಚಾಲನಾ ತರಬೇತಿ ಶಾಲೆ ನಡೆಸುತ್ತಿದ್ದರು. ಎರಡನೇ ಮಗಳ ಜೊತೆ ನೆಲೆಸಿದ್ದರು. ಅವರ ಪತಿ ಹಾಗೂ ಮೊದಲ ಮಗಳು ಪ್ರತ್ಯೇಕವಾಗಿ ವಾಸವಿದ್ದರು. ಏ. 18ರಂದು ಬೆಳಿಗ್ಗೆ ಎರಡನೇ ಮಗಳು ತಮ್ಮ ಪತಿ ಮನೆಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಮನೆಗೆ ಬಂದಿದ್ದ ನವೀನ್ ಗೌಡ, ಶೋಭಾ ಅವರನ್ನು ಕತ್ತು ಹಿಸುಕಿ ಕೊಂದಿದ್ದನೆಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು.
ಸಾಮಾಜಿಕ ಮಾಧ್ಯಮದಿಂದ ಪರಿಚಯ: ‘ಶೋಭಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಖಾತೆ ಹೊಂದಿದ್ದರು. ಅದೇ ಖಾತೆಗೆ ಆರೋಪಿ ನವೀನ್ ರಿಕ್ವೆಸ್ಟ್ ಕಳುಹಿಸಿದ್ದ. ಅದನ್ನು ಶೋಭಾ ಸ್ವೀಕರಿಸಿದ್ದರು. ನಂತರ, ಇಬ್ಬರೂ ಪರಸ್ಪರ ಚಾಟಿಂಗ್ ಮಾಡಲಾರಂಭಿಸಿದ್ದರು ಎಂದು ಪೊಲೀಸರು ಹೇಳಿದರು.
ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡಿದ್ದ ಇಬ್ಬರೂ ಮಾತುಕತೆ ಆರಂಭಿಸಿದ್ದರು. ಇಬ್ಬರ ನಡುವೆ ಸಲುಗೆಯೂ ಬೆಳೆದಿತ್ತು ಎಂಬ ಮಾಹಿತಿ ಇದೆ. ಭೇಟಿಯಾಗುವುದಾಗಿ ಹೇಳಿದ್ದ ನವೀನ್, ಕೆಲ ದಿನಗಳ ಹಿಂದೆಯಷ್ಟೇ ಶೋಭಾ ಅವರ ಮನೆಗೆ ಬಂದು ಹೋಗಿದ್ದ. ಏ. 18ರಂದು ಎರಡನೇ ಬಾರಿ ಮನೆಗೆ ಬಂದಿದ್ದ ನವೀನ್ ಹಾಗೂ ಶೋಭಾ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ’ ಎಂದು ತಿಳಿಸಿದರು.
ಕೊಲೆ ನಂತರ ಆರೋಪಿ ನವೀನ್, ಶೋಭಾ ಅವರ ಕಾರಿನಲ್ಲಿಯೇ ಸ್ಥಳದಿಂದ ಪರಾರಿಯಾಗಿದ್ದ. ಸಲುಗೆ ಕಾರಣಕ್ಕೆ ಈ ಕೊಲೆ ನಡೆದಿರುವ ಮಾಹಿತಿ ಇದೆ’ ಎಂದು ಪೊಲೀಸರು ಹೇಳಿದರು.
ರಾಜಕೀಯ
Siddaramaiah-ಮೋದಿಯವರ ಮಂಗಳಸೂತ್ರ ಹೇಳಿಕೆ ಪ್ರಧಾನಿ ಸ್ಥಾನಕ್ಕೆ ತೋರಿದ ಅಗೌರವ : ಸಿದ್ದರಾಮಯ್ಯ
ಬೆಂಗಳೂರು (ಏ.23): ಕಾಂಗ್ರೆಸ್ ಗೆದ್ದರೆ ಮಹಿಳೆಯರ ಮಂಗಳಸೂತ್ರವನ್ನು ಮುಸ್ಲಿಮರಿಗೆ ಹಂಚಲಾಗುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಮುಖಂಡರಿಂದ ಸೋಮವಾರ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ಮುಖಂಡರು ಇದೊಂದು ಕೀಳು ಹೇಳಿಕೆ, ಪ್ರಧಾನಿ ಮೋದಿ ಅವರು ಸೋಲಿನ ಭೀತಿಯಿಂದ ಈ ರೀತಿ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಶ್ರಮದಿಂದ ಗಳಿಸಿದ ಸಂಪತ್ತನ್ನು ಕಿತ್ತುಕೊಳ್ಳುವ ಅಧಿಕಾರ ಯಾರಿಗಾದರೂ ಇದೆಯೇ? ಆದರೂ ಇದನ್ನು ಕಾಂಗ್ರೆಸ್ ಮಾಡಲಿದೆ.
ಪ್ರಧಾನಿ ಮೋದಿಯವರು ಜೈಪುರದಲ್ಲಿ ನಡೆಸಿದ ಸಮಾವೇಶದಲ್ಲಿ ತಾಯಂದಿರು ಶ್ರಮದಿಂದ ಮಾಡಿಸಿಕೊಂಡಿರುವ ಚಿನ್ನದ ತಾಳಿಯನ್ನು ಕಿತ್ತುಕೊಳ್ಳಲಾಗುತ್ತದೆ. ಅದನ್ನು ದೇಶದ ಸಂಪತ್ತಿನ ಮೊದಲ ಹಕ್ಕುದಾರರು ಮುಸ್ಲಿಮರು ಎಂದಿದ್ದ ಹಿಂದಿನ ಪ್ರಧಾನಿ ಮನಮೋಹನ ಸಿಂಗ್ ಅವರ ನೀತಿಯಂತೆ ಮುಸಲ್ಮಾನರು, ಒಳನುಸುಳುಕೋರರು ಮತ್ತು ಹೆಣ್ಣುಮಕ್ಕಳಿದ್ದವರಿಗೆ ಹಂಚಲಾಗುತ್ತದೆ ಎಂದು ಆರೋಪಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಪ್ರಧಾನಿಯಾಗಿ ಅವರು ಇಷ್ಟೊಂದು ಕೀಳುಹೇಳಿಕೆ ನೀಡಬಾರದಿತ್ತು. ಅವರ ಸ್ಥಾನಕ್ಕೆ ಅಗೌರವ ತೋರುವ ರೀತಿ ಮೋದಿ ಮಾತನಾಡಿದ್ದಾರೆ ಎಂದು ಕಿಡಿಕಾರಿದರು.
ಸೋಲಿನ ಭೀತಿ: ಕಾಂಗ್ರೆಸ್ ಗೆದ್ದರೆ ಮಹಿಳೆಯರ ಮಂಗಳಸೂತ್ರವನ್ನು ಕಿತ್ತು ಮುಸ್ಲಿಮರಿಗೆ ನೀಡುತ್ತದೆ ಎಂದು ದೇಶದ ಪ್ರಧಾನಿ ಹೇಳುತ್ತಿದ್ದಾರೆ. ಮೋದಿಯವರಿಗೆ ಸೋಲುವ ಭೀತಿ ಉಂಟಾಗಿದೆ. ಹೀಗಾಗಿ ಅವರು ಹೀಗೆ ಮಾತನಾಡುತ್ತಿದ್ದಾರೆ. ಭಾರತೀಯರೆಲ್ಲರೂ ಸಮಾನರು ಎಂದು ಸಂವಿಧಾನದಲ್ಲಿ ಹೇಳಿದ್ದಾರೆ. ಮಂಗಳಸೂತ್ರ ಕಿತ್ತುಕೊಳ್ಳುತ್ತಾರೆಂದರೆ ಏನರ್ಥ? ಈ ಮಾತುಗಳನ್ನು ನೋಡಿದರೆ ಬಿಜೆಪಿಯ ಹತಾಶೆ ಕಾಣಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ರಾಜ್ಯದ 25 ದಂಡಪಿಂಡಗಳನ್ನು ಜನರು ಮನೆಗೆ ಕಳಿಸಬೇಕು: ಬಿ.ವಿ.ಶ್ರೀನಿವಾಸ್ ವಿಶೇಷ ಸಂದರ್ಶನ!
ಪ್ರಧಾನಿ ಹೇಳಿಕೆ ಅವರ ಮನಸ್ಥಿತಿ ತೋರಿಸುತ್ತದೆ. ದೇಶದ ಇತಿಹಾಸದಲ್ಲಿ ಯಾವ ಪ್ರಧಾನಿಯೂ ಇಷ್ಟೊಂದು ಕೆಳಮಟ್ಟಕ್ಕೆ ಇಳಿದು ಮಾತನಾಡಿರುವುದು ನಾನು ನೋಡಿರಲಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದರೆ, ಮೋದಿ ಅವರು ಮತೀಯ ಭಾವನೆ ಕೆರಳಿಸುವ ರೀತಿ ಮಾತನಾಡಿದ್ದಾರೆ. ಚುನಾವಣಾ ಆಯೋಗ ಯಾಕೆ ಈ ವಿಚಾರದಲ್ಲಿ ಕಣ್ಣುಮುಚ್ಚಿ ಕೂತಿದೆಯೋ ಗೊತ್ತಿಲ್ಲ. 70 ವರ್ಷಗಳಿಂದ ವಿವಿಧ ಪಕ್ಷಗಳು ಆಡಳಿತ ನಡೆಸಿವೆ. ಯಾವ ಹಿಂದೂಗೂ ಅನ್ಯಾಯವಾಗಿಲ್ಲ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ಸಾಮಾಜಿಕ ಮಾಧ್ಯಮ2 days ago
Hasana sex tape : ಚುನಾವಣೆ ಹೊಸ್ತಿಲಲ್ಲಿ ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್ ಡ್ರೈವ್ ಸೌಂಡ್ ! ಅಸಲಿಯ / ನಕಲಿಯ ತೀವ್ರ ಚರ್ಚೆ
-
ಬಿಗ್ ನ್ಯೂಸ್19 hours ago
Hasana Sex Tape: ಹಾಸನ ಸಂಸದ ಪ್ರಜ್ವಲ್ ರೇವಣ್ಣರವರದೆಂದು ಬಿಂಬಿಸಿ ಕೊಳಕು, ಮಾರ್ಫ್ ಮಾಡಿದ ವೀಡಿಯೊಗಳು ಆನ್ಲೈನ್ನಲ್ಲಿ ವ್ಯಾಪಕವಾಗಿ ಪ್ರಸಾರ : ಚುನಾವಣಾ ಏಜೆಂಟ್ ರಿಂದ ಠಾಣೆಗೆ ದೂರು
-
ದಕ್ಷಿಣ ಕನ್ನಡ2 days ago
Student harrased in bus ಉಪ್ಪಿನಂಗಡಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿದ್ಯಾರ್ಥಿನಿಗೆ ಜತೆ ಸಹ ಪ್ರಯಾಣಿಕನಿಂದ ಕಿರುಕುಳ – ಯುವತಿ ವ್ಯಗ್ರಗೊಳ್ಳುತ್ತಾಳೆ ಕಿಟಕಿಯಿಂದ ಹಾರಿ ಆರೋಪಿ ಪರಾರಿ – ಮುಂದೇನಾಯಿತು ?
-
ಬಿಗ್ ನ್ಯೂಸ್18 hours ago
ಕುಟುಂಬ ಸಮೇತ ಮತ ಚಲಾಯಿಸಲು ಪದ್ಮರಾಜ್ ಬಂದಾಗ ಬಿಜೆಪಿ ಕಾರ್ಯಕರ್ತನಿಂದ ಗೂಂಡಾಗಿರಿ – ಪೊಲೀಸ್ ಅಧಿಕಾರಿಯನ್ನು ತಳ್ಳಾಡಿ ಪುಂಡಾಟ : ಮಾಧ್ಯಮದವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ
-
ನಿಧನ ವಾರ್ತೆ2 days ago
Bhagavata Subramanya Dhareshwara-ಹಾಡು ನಿಲ್ಲಿಸಿದ ಬಡಗುತಿಟ್ಟಿನ ಗಾನ ಕೋಗಿಲೆ – ಯಕ್ಷಗಾನದ ಹಿರಿಯ ಭಾಗವತ ಸುಬ್ರಮಣ್ಯ ಧಾರೇಶ್ವರ ಇನ್ನಿಲ್ಲ
-
ಸ್ಥಳೀಯ2 days ago
Mithun Rai-ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಮೂಡುಬಿದಿರೆ ಬಿಜೆಪಿ ಶಾಸಕರ ಪ್ರಾಮಾಣಿಕ ಪ್ರಯತ್ನ – ಮಿಥುನ್ ರೈ ಶಾಕಿಂಗ್ ಹೇಳಿಕೆ
-
ಮಂಗಳೂರು2 days ago
Janardhana Poojary-ಹಿಂದುತ್ವದ ಅಮಲಿನಲ್ಲಿ ಹಿಂದುಳಿದ ವರ್ಗದ ಯುವಕರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಮೇಲ್ವರ್ಗದವರು ಅಧಿಕಾರ ನಡೆಸುತ್ತಿದ್ದಾರೆ- ಇದಕ್ಕೆಲ್ಲ ತಿಲಾಂಜಲಿ ನೀಡುವ ಕೆಲಸ ಪದ್ಮರಾಜ್ ಆರ್ ಪೂಜಾರಿಯನ್ನು ಗೆಲ್ಲಿಸುವ ಮೂಲಕ ಆಗಬೇಕಿದೆ :ಜನಾರ್ದನ ಪೂಜಾರಿ
-
ಅಪರಾಧ1 day ago
Bantwal-ಬಂಟ್ವಾಳ : ಬಾಲಕಿಯೊಂದಿಗೆ ಅನುಚಿತ ವರ್ತನೆ – ಯುವಕನ ವಿರುದ್ಧ ಪ್ರಕರಣ ದಾಖಲು