ಪುತ್ತೂರು : ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಪ್ರಯಾಣಿಕ

Screenshot_20230602_064442_Google
Ad Widget

Ad Widget

Ad Widget

ಪುತ್ತೂರು ಸರಕಾರಿ ಬಸ್ಸು ನಿಲ್ದಾಣದಲ್ಲಿ ಬಸ್ ನಿಂದ ಜನರು ಇಳಿಯುವ ಸಮಯ ಬಸ್ಸನ್ನು ಏರಲು ಪ್ರಯತ್ನಿಸಿದ ಪ್ರಯಾಣಿಕನನ್ನು ತಡೆದ ಹಿನ್ನಲೆಯಲ್ಲಿ ನಿರ್ವಾಹಕನ ಮೇಲೆ ಪ್ರಯಾಣಿಕ ಹಲ್ಲೆ ನಡೆಸಿದ ಘಟನೆ ಗುರುವಾರ ಪುತ್ತೂರಿನಲ್ಲಿ ನಡೆದಿದೆ.

Ad Widget

ಧರ್ಮಸ್ಥಳ ಕೆ.ಎಸ್. ಆರ್. ಟಿ.ಸಿ. ಘಟಕದ ಚಾಲಕ ಕಂ ನಿರ್ವಾಹಕರಾದ ತುಳಸಿಗೇರಿ ಮನಾದಗಿ (39) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ಗಾಳಿಮುಖ ಭಾಗದಿಂದ ಸರ್ಕಾರಿ ಬಸ್ ನಿಲ್ದಾಣಕ್ಕೆ ಬಂದ ಬಸ್ ಅನ್ನು ಚಾಲಕ ಕ ಗೌಸ್ ಅವರು ಚಲಾಯಿಸಿಕೊಂಡು ಬಂದಿದ್ದರು.

Ad Widget

Ad Widget

Ad Widget

ಬಸ್ಸು ನಿಲ್ದಾಣದಲ್ಲಿ ಬಸ್ಸಿನಿಂದ ಪ್ರಯಾಣಿಕರು ಇಳಿಯುತ್ತಿದ್ದಾಗ ಒಬ್ಬಾತನು ಏಕಾಏಕಿಯಾಗಿ ಬಸ್ಸನ್ನು ಹತ್ತಲು ಪ್ರಯತ್ನಿಸಿದ್ದು, ಆಗ ನಿರ್ವಾಹಕ ಏರುತ್ತಿದ್ದ ವ್ಯಕ್ತಿಯನ್ನು ತಡೆದು ಪ್ರಯಾಣಿಕರು ಇಳಿದ ಬಳಿಕ ಬಸ್ ಏರುವಂತೆ ತಿಳಿಸಿದ್ದು, ಈ ವೇಳೆ ಕೋಪಗೊಂಡ ಆರೋಪಿ ಮಹಮ್ಮದ್ ಸಲಾಂ ನಿರ್ವಾಹಕನ ಮುಖಕ್ಕೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ಬೈದುದಲ್ಲದೆ ಸಮವಸ್ತ್ರದ ಕಾಲರ್ ಹಿಡಿದು ತೊಡೆಗಳಿಗೆ ಕಾಲಿನಿಂದ ಒದ್ದು ಹಲ್ಲೆ ನಡೆಸಿರುತ್ತಾನೆ.

Ad Widget

Ad Widget

Ad Widget

ಇದರಿಂದ ನಿರ್ವಾಹಕನ ಮೂಗಿಗೆ ತುಟಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ, ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿ ಮಹಮ್ಮದ್ ಸಲಾಂ ವಿರುದ್ಧ ಹಲ್ಲೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಕುರಿತು ಪ್ರಕರಣ ದಾಖಲಿಸಿದ್ದಾರೆ.

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: