ದಕ್ಷಿಣ ಕನ್ನಡ
Power Man Death : ವಿದುತ್ ಶಾಕ್ ಗೆ ತುತ್ತಾಗಿ ಕಡಬದಲ್ಲಿ ಪವರ್ ಮ್ಯಾನ್ ಸಾವು – ಮೆಸ್ಕಾಂ ನ ಇಬ್ಬರು ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲು
ಮೆಸ್ಕಾಂ ಕಡಬ ಉಪವಿಭಾಗದ ಕಡಬ ಶಾಖೆಯಲ್ಲಿ ಹಿರಿಯ ಮಾರ್ಗದಾಳು ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದ್ಯಾಮಣ್ಣ ದೊಡಮನಿ (26) ಅವರ ಸಾವಿಗೆ ಸಂಬಂಧಿಸಿದಂತೇ ಇಬ್ಬರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಹಾಯಕ ಇಂಜಿನಿಯರ್ ಸತ್ಯನಾರಾಯಣ್ ಸಿ ಕೆ ಮತ್ತು ಮೆಸ್ಕಾಂ ಕಡಬ ಶಾಖೆಯ ಕಿರಿಯ ಇಂಜಿನಿಯರ್ ವಸಂತ ಪ್ರಕರಣದ ಆರೋಪಿಗಳು . ಇವರ ವಿರುದ್ದ ಐ.ಪಿ.ಸಿ ಕಲಂ: 304(A) ಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜೂ 1 ರಂದು ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಸಮೀಪದ ಮುಳಿಮಜಲು ಎಂಬಲ್ಲಿ ವಿದ್ಯುತ್ ಕಂಬವೇರಿ ದುರಸ್ತಿ ಕಾರ್ಯದಲ್ಲಿ ಮಗ್ನರಾಗಿದ್ದ ಪವರ್ ಮ್ಯಾನ್ ದ್ಯಾಮಣ್ಣ ಎಂಬವರು ಹಠಾತ್ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದರು. ವಿದ್ಯುತ್ ಶಾಕ್ ಹೊಡೆದ ಬಳಿಕ ಕೆಲ ಸಮಯದವರೆಗೆ ವಿದಯುತ್ ಕಂಬದಲ್ಲಿದ್ದ ದ್ಯಾಮಣ್ಣ ಅವರನ್ನು ಸ್ಥಳೀಯರು ಕಂಬದಿಂದ ಇಳಿಸಿ ಆಸ್ಫತ್ರೆಗೆ ಕರೆದುಕೊಂಡು ಹೋಗಿದ್ದರು . ಆದರೇ ದಾರಿ ಮಧ್ಯೆ ಅವರು ಮೃತಪಟ್ಟಿದ್ದರು.
ದೂರಿನಲ್ಲಿ ಏನಿದೆ ?
ಕಂಬದ ಮೇಲೆ ವಿದ್ಯುತ್ ದುರಸ್ತಿ ಕಾರ್ಯಕ್ಕೆ ಕಳುಹಿಸುವಾಗ ನಿಯಮದಂತೆ ದ್ಯಾಮಣ್ಣ ಅವರ ಜೊತೆಗೆ ಹಿರಿಯ ಅಧಿಕಾರಿಗಳಾಗಲಿ ಅಥವಾ ಸಹಾಯಕ್ಕೆ ಯಾರನ್ನೂ ಜೊತೆಗೆ ಕಳುಹಿಸಿಲ್ಲ. ಹೆಲ್ಮೇಟ್ ಹ್ಯಾಂಡ್ ಗ್ಲೌಸ್, ಶೂ,ಸೇರಿದಂತೆ ಯಾವುದೇ ಸುರಕ್ಷತಾ ಸಾಮಗ್ರಿಗಳನ್ನು ಒದಗಿಸಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ನಿರ್ಲಕ್ಷತನದಿಂದ ವಿದ್ಯುತ್ ಕಂಬ ಹತ್ತಲು ಹೇಳಿ ಕೆಲಸ ಮಾಡಿಸಿದ ಮತ್ತು ತಮ್ಮ ಮಗನ ಸಾವಿಗೆ ಕಾರಣರಾದ ಮೆಸ್ಕಾಂ ಕಡಬದ ಸಹಾಯಕ ಇಂಜಿನಿಯರ್ ಆದ ಸತ್ಯನಾರಾಯಣ ಸಿ ಕೆ ಮತ್ತು ಕಿರಿಯ ಇಂಜಿನಿಯರ್ ವಸಂತ ಎಂಬವರ ಮೇಲೆ ಮೊಕದ್ದಮ್ಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ದ್ಯಾಮಣ್ಣ ಅವರ ತಂದೆ ರೇವಣೆಪ್ಪ ದೊಡಮನಿ ಕಡಬ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಾಗಿದೆ.
ಮಂಗಳೂರು
Brijesh Chowta-ಕಾಂಗ್ರೆಸಿಗೆ ಮತ ನೀಡಿದರೆ ಎಸ್ಡಿಪಿಐ ಕೈ ಬಲಪಡಿಸಿದಂತೆ ; ಶಕ್ತಿನಗರ ಕಾಲ್ನಡಿಗೆ ರೋಡ್ ಶೋದಲ್ಲಿ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು, ಎ.24 : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಚುನಾವಣಾ ಪ್ರಚಾರದ ಕೊನೆಯಲ್ಲಿ ಮಂಗಳೂರು ನಗರದ ಶಕ್ತಿನಗರದಲ್ಲಿ ಕಾಲ್ನಡಿಗೆಯಲ್ಲಿ ರೋಡ್ ಶೋ ನಡೆಸಿದ್ದಾರೆ. ಶಕ್ತಿನಗರದಿಂದ ನಾಲ್ಯಪದವು ಶತಮಾನೋತ್ಸವ ಶಾಲೆಯ ವರೆಗೂ ನೂರಾರು ಕಾರ್ಯಕರ್ತರ ಜೊತೆಗೆ ಕಾಲ್ನಡಿಗೆಯಲ್ಲಿ ಬಂದು ಮತಯಾಚನೆ ಮಾಡಿದ್ದಾರೆ.
ಇದೇ ವೇಳೆ ಮಾತನಾಡಿದ ಬ್ರಿಜೇಶ್ ಚೌಟ, ಜಿಲ್ಲೆಯಲ್ಲಿ ಬಿಜೆಪಿ ವಿರೋಧಿ ಶಕ್ತಿಗಳೆಲ್ಲ ಒಂದಾಗಿವೆ. ಎಸ್ಡಿಪಿಐ ಅವರಲ್ಲಿ ಅಭ್ಯರ್ಥಿ ಯಾರೆಂದು ಕೇಳಿದರೆ ಕಾಂಗ್ರೆಸ್, ಕಮ್ಯುನಿಸ್ಟರಲ್ಲಿ ಕೇಳಿದರೂ ಕಾಂಗ್ರೆಸ್ ಎಂದೇ ಹೇಳುತ್ತಾರೆ. ಕಾಂಗ್ರೆಸಿನವರಲ್ಲಿ ಕೇಳಿದರೆ ಅಭ್ಯರ್ಥಿ ಬಗ್ಗೆ ಸಂಶಯ ಇದೆ. ಅವರಲ್ಲೇ ಮನೆಯೊಂದು ಮೂರು ಬಾಗಿಲು ಎನ್ನುವ ರೀತಿ ಇದೆ. ಹೀಗಾಗಿ ಕಾಂಗ್ರೆಸಿಗೆ ಮತ ನೀಡಿದರೆ ಎಸ್ಡಿಪಿಐ ಕೈ ಬಲಪಡಿಸಿದಂತಾಗುತ್ತದೆ ಎಂದು ಹೇಳಿದರು.
ನೀವು ನೈಜ ದೇಶಭಕ್ತರು, ದೇಶಕ್ಕಾಗಿ ಮತ
ಬುಧವಾರ ಬೆಳಗ್ಗೆ ದೇರಳಕಟ್ಟೆಯ ಕೆಎಸ್ ಹೆಗ್ಡೆ ಆಸ್ಪತ್ರೆ, ಮುಕ್ಕ ಶ್ರೀನಿವಾಸ ಮೆಡಿಕಲ್ ಕಾಲೇಜು ಆಸ್ಪತ್ರೆ, ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಭೇಟಿಯಿತ್ತ ಕ್ಯಾ. ಬ್ರಿಜೇಶ್ ಚೌಟ, ನಿಮಗೆ ರಾಷ್ಟ್ರಭಕ್ತಿ, ರಾಷ್ಟ್ರಸೇವೆಯ ಬಗ್ಗೆ ಪ್ರತ್ಯೇಕ ಹೇಳಬೇಕಾಗಿಲ್ಲ. ನೀವೇ ನೈಜ ದೇಶ ಭಕ್ತರು. ಕೊರೊನಾ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ಬಲತುಂಬಿದವರು ವೈದ್ಯರು ಮತ್ತು ಆರೋಗ್ಯ ಸಿಬಂದಿ. ನಿಮ್ಮನ್ನು ಕೊರೊನಾ ವಾರಿಯರ್ಸ್ ಎಂಬುದಾಗಿ ಕೊಂಡಾಡಿದ್ದರು ಎಂದರಲ್ಲದೆ, ಪ್ರಧಾನಿಯನ್ನು ಮೂರನೇ ಬಾರಿಗೆ ಗದ್ದುಗೆ ಏರಿಸುವಲ್ಲಿ ನಿಮ್ಮ ಕೊಡುಗೆ ನೀಡಬೇಕೆಂದು ಮನವಿ ಮಾಡಿದರು.
ಮಂಗಳೂರು
Congress roadshow-ಪಂಪ್’ವೆಲ್’ನಿಂದ ಕಣ್ಣೂರುವರೆಗೆ ಸಾಗಿದ ಕಾಂಗ್ರೆಸ್ ರೋಡ್ ಶೋ
ಮಂಗಳೂರು: ಲೋಕಸಭೆ ಚುನಾವಣೆಯ ಕೊನೆ ದಿನವಾದ ಬುಧವಾರ ಮಂಗಳೂರಿನ ಪಂಪ್’ವೆಲ್’ನಿಂದ ಕಣ್ಣೂರುವರೆಗೆ ರೋಡ್ ಶೋ ಜರಗಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಸದಸ್ಯ ಐವನ್ ಡಿಸೋಜಾ, ಕಾರ್ಪೋರೇಟರ್ ಗಳಾದ ಶಶಿಧರ್ ಹೆಗ್ಡೆ, ಅಶ್ರಫ್, ಕೇಶವ ಮರೋಳಿ, ನವೀನ್ ಡಿಸೋಜಾ, ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ದಾಸ್, ಪ್ರಮುಖರಾದ ಯು.ಟಿ. ಫರ್ಜಾನ್, ರವಿರಾಜ್ ಪೂಜಾರಿ, ರಮಾನಂದ್ ಪೂಜಾರಿ, ಸುನಿಲ್ ಪೂಜಾರಿ, ರಾಕೇಶ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.
ಗರೋಡಿ, ದರ್ಗಾ ಭೇಟಿ:
ರೋಡ್ ಶೋ ನಡುವೆ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಕಂಕನಾಡಿ ಬ್ರಹ್ಮಬೈದರ್ಕಳ ಗರೋಡಿ, ಅಡ್ಯಾರ್ ಕಣ್ಣೂರು ಶೇಖ್ ಯೂಸುಫ್ ಸಿದ್ದೀಕ್ ದರ್ಗಾ ಶರೀಫ್’ಗೆ ಭೇಟಿ ನೀಡಿದರು.
ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಬುಧವಾರ ಸಂಜೆ ಉರ್ವ, ಬಂದರು ಪ್ರದೇಶದಲ್ಲಿ ರೋಡ್ ಶೋ ನಡೆಸಿ, ಮತ ಯಾಚಿಸಿದರು.
ತೆರೆದ ವಾಹನದ ಮುಂಭಾಗದಿಂದ ಸಾಗುತ್ತಿದ್ದ ಕಾರ್ಯಕರ್ತರು, ಘೋಷಣೆಗಳನ್ನು ಕೂಗುತ್ತಾ ಸಾಗಿದರು. ನಾಸಿಕ್ ಬ್ಯಾಂಡ್ ಸದ್ದು ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿತು.
ರಾಜಕೀಯ
Belthangady-ಬೆಳ್ತಂಗಡಿ : ಸಿಗದ ಮೂಲಭೂತ ಸೌಕರ್ಯ – ನೋಟಾಗೆ ಮತ ಚಲಾಯಿಸಲು ಮಲೆಕುಡಿಯ ಸಮುದಾಯದ ನಿರ್ಧಾರ
ಬೆಳ್ತಂಗಡಿ: ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ತಾಲೂಕಿನ ನಾವೂರು ಗ್ರಾಮದ ಮೂಲ ನಿವಾಸಿ ಮಲೆಕುಡಿಯ ಸಮುದಾಯದವರು ತಮನ್ನು ಎಲ್ಲ ರಾಜಕೀಯ ಪಕ್ಷಗಳೂ ವಂಚಿಸುತ್ತಿದ್ದಾರೆ ಎಂದು ಆರೋಪಿಸಿ ಈ ಬಾರಿ ನೋಟ ಚಲಾಯಿಸಲು ನಿರ್ಧರಿಸಿದ್ದು ಈ ಬಗ್ಗೆ ತಮ್ಮ ಗ್ರಾಮದಲ್ಲಿ ಬ್ಯಾನರ್ ಅಳವಡಿಸಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವೂರು ಗ್ರಾಮದ ಅಲ್ಯ, ಪುಳಿತ್ತಡಿ, ಎರ್ಮಲೆ ಮಂಜಲ, ಕುದ್ರೋಳಿ, ಕಾಸರೋಳಿ ಪರಿಸರದ ಆದಿವಾಸಿ ಕುಟುಂಬಗಳು ನೋಟಾ ಮತವನ್ನು ಚಲಾಯಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಲು ನಿರ್ಧರಿಸಿದ್ದಾರೆ.
22 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬಗಳು ಈ ಪರಿಸರದಲ್ಲಿ ಜೀವನ ನಡೆಸುತ್ತಿದ್ದು ಸುಮಾರು 100 ಮಂದಿ ಮತದಾರರಿದ್ದಾರೆ. ದಶಕಗಳಿಂದ ಈ ಜನರು ತಮ್ಮ ಪ್ರದೇಶಕ್ಕೆ ರಸ್ತೆ ಹಾಗೂ ವಿದ್ಯುತ್ ಸಂಪರ್ಕ ಒದಗಿಸುವಂತೆ ನಿರಂತರ ಹೋರಾಟ ನಡೆಸುತ್ತಲೇ ಬಂದಿದ್ದಾರೆ.
ಕುದುರೇಮುಖ ರಾಷ್ಟ್ರೀಯ ಉದ್ಯಾನವದ ಒಳಗಿರುವ ಈ ಕುಟುಂಬಗಳಿಗೆ ಇನ್ನೂ ಯಾವುದೇ ಮೂಲಭೂತ ಸೌಲಭ್ಯಗಳು ಲಭಿಸಿಲ್ಲ. ಗ್ರಾಮಪಂಚಾಯತಿನಿಂದ ಆರಂಭಿಸಿ ಪ್ರಧಾನಿಯವರೆಗೆ ಎಲ್ಲರಿಗೂ ಇಲ್ಲಿನ ನಿವಾಸಿಗಳು ಮನವಿ ಸಲ್ಲಿಸಿದ್ದಾರೆ. ತಮ್ಮ ಬೇಡಿಕೆಗಳಿಗೆ ಯಾವ ರಾಜಕೀಯ ಪಕ್ಷಗಳೂ ಸರಕಾರಗಳೂ ಸ್ಪಂದಿಸಲಿಲ್ಲ ಎಂಬುದು ಇಲ್ಲಿನ ಜನರ ಆರೋಪವಾಗಿದೆ. ಪುಳಿತ್ತಡಿ ಪರಿಸರದಲ್ಲಿ ಇನ್ನೂ ಕರೆಂಟ್ ಬಂದಿಲ್ಲ ಆದರೆ ಅವರ ಮನೆಗಳಲ್ಲೆಲ್ಲ ವಿದ್ಯುತ್ ಮೀಟರ್ ಅಳವಡಿಸಲಾಗಿದೆ.
2017ರ ವೇಳೆಗೆ ಏಕಾಏಕಿ ಗುತ್ತಿಗೆದಾರರು ಬಂದು ಇವರ ಮನೆಗಳಿಗೆ ಮೀಟರ್ ಅಳವಡಿಸಿದ್ದರು. ಮೀಟರ್ ಅಳವಡಿಸಿ ಆರು ವರ್ಷಗಳೇ ಕಳೆದಿದೆ ಎನ್ನುತ್ತಾರೆ ಇಲ್ಲಿನ ಜನರು. ಆದರೆ ಮತ್ತೆ ಯಾರೂ ಇತ್ತ ತಿರುಗಿ ನೋಡಿಲ್ಲ. ಅರಣ್ಯದ ನಡುವೆ ವಾಸಿಸುತ್ತಿರುವ ಈ ಜನರಿಗೆ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ಕತ್ತಲಾದ ಮೇಲೆ ಇವರ ಬದುಕೇ ದುಸ್ತರ, ಕೃಷಿಗೆ ನೀರುಣಿಸಲೂ ಸಾಧ್ಯವಾಗದೆ ಇವರು ಸಂಕಷ್ಟದಲ್ಲಿದ್ದಾರೆ.
ಮೆಸ್ಕಾಂ ಅಧಿಕಾರಿಗಳು ಇಲ್ಲಿಗೆ ವಿದ್ಯುತ್ ಒದಗಿಸಲು ಈ ಬಗ್ಗೆ ಸರ್ವೆ ನಡೆಸಿದ್ದು 2017ರಲ್ಲಿ 46,81,398 ರೂಗಳ ಅಂದಾಜುಪಟ್ಟಿ ತಯಾರಿಸಿದ್ದರು. ಇದಕ್ಕೆ ಅರಣ್ಯ ಇಲಾಖೆಯ ಅನುಮೋದನೆ ಪಡೆಯಲು ನಿಗದಿತ ನಮುನೆಯಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದೆ. ಆದರೆ ಈ ಆನ್ ಲೈನ್ ಅರ್ಜಿ ಏನಾಗಿದೆ ಎಂಬುದು ಮಾತ್ರ ಯಾರಿಗೂ ತಿಳಿದಿಲ್ಲ.
-
ಪುತ್ತೂರು2 days ago
ಅರುಣ್ ಪುತ್ತಿಲ ಮನೆ ಬಳಿ ಅಣ್ಣಾಮಲೈಗೆ ಅದ್ದೂರಿ ಸ್ವಾಗತ
-
ದಕ್ಷಿಣ ಕನ್ನಡ2 days ago
ವಿಟ್ಲ : ದುರಸ್ತಿಗೆ ಬಾವಿಗಿಳಿದ ಇಬ್ಬರು ಅಮ್ಲಜನಕ ಕೊರತೆಯಿಂದ ಮೃತ್ಯು
-
ಬಿಗ್ ನ್ಯೂಸ್19 hours ago
NOTAForSoujanyaCase : ಸೌಜನ್ಯ ಪ್ರಕರಣ : ಟ್ವಿಟರ್ ಟ್ರೆಂಡಿಂಗಲ್ಲಿ 3ನೇ ಸ್ಥಾನ ಪಡೆದ ನೋಟಾ ಅಭಿಯಾನ
-
ನಿಧನ ವಾರ್ತೆ1 day ago
Run over-ತಂದೆಯಿಂದಲೇ ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣ
-
Uncategorized2 days ago
ಮಠಂತಬೆಟ್ಟು ಗುಲಾಬಿ ಅನಂತ ರೈ ನಿಧನ
-
ದಕ್ಷಿಣ ಕನ್ನಡ1 day ago
ಬೆಲೆಯೆರಿಕೆ ಗಗನಕ್ಕೆರಿದ ಸಂದರ್ಭ ಸಿದ್ದರಾಮಯ್ಯ ಸರಕಾರ ಗ್ಯಾರಂಟಿ ಮೂಲಕ ಮಹಿಳೆಯರ ನೆರವಿಗೆ ನಿಂತಿದೆ : ಅನಿತಾ ಹೇಮನಾಥ ಶೆಟ್ಟಿ
-
ಅಪರಾಧ23 hours ago
Online acquaintance-ಆನ್ ಲೈನ್ ಪರಿಚಿತ ಗೆಳೆಯ ಮಹಿಳೆಯ ಜೀವಾಂತ್ಯಗೊಳಿಸಿದ
-
ದಕ್ಷಿಣ ಕನ್ನಡ5 hours ago
Student harrased in bus ಉಪ್ಪಿನಂಗಡಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿದ್ಯಾರ್ಥಿನಿಗೆ ಜತೆ ಸಹ ಪ್ರಯಾಣಿಕನಿಂದ ಕಿರುಕುಳ – ಯುವತಿ ವ್ಯಗ್ರಗೊಳ್ಳುತ್ತಾಳೆ ಕಿಟಕಿಯಿಂದ ಹಾರಿ ಆರೋಪಿ ಪರಾರಿ – ಮುಂದೇನಾಯಿತು ?