Connect with us

ಕಾರ್ಕಳ

Karkala | ಬೆಳ್ಮಣ್: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಬೃಹತ್ ಮರ – ಯುವಕ ದಾರುಣ ಸಾವು

Ad Widget

Ad Widget

Ad Widget

Ad Widget

ಬೆಳ್ಮಣ್ : ಧಾರಾಕಾರ ಮಳೆ ಕಾರ್ಕಳದಲ್ಲಿ (Karkala) ಹಲವು ಅನಾಹುತಗಳನ್ನು ಸೃಷ್ಟಿಸಿದೆ. ನಿನ್ನೆ ರಾತ್ರಿ 9.30 ಹೊತ್ತಿಗೆ ಬೆಳ್ಮಣ್ ಬಸ್ ನಿಲ್ದಾಣದ ಪಕ್ಕದಲ್ಲಿರುವ ಬೃಹತ್ ಮರವೊಂದು ಧರೆಗುರುಳಿ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ. ಇದರೊಂದಿಗೆ ನಿನ್ನೆ ಒಂದೇ ದಿನ ಕಾರ್ಕಳ ತಾಲೂಕಲ್ಲಿ ಮಳೆಗೆ ಇಬ್ಬರು ಬಲಿಯಾದಂತಾಗಿದೆ.

Ad Widget

Ad Widget

Ad Widget

ಕಾರ್ಕಳ-ಪಡುಬಿದ್ರಿ ಹೆದ್ದಾರಿ ಪಕ್ಕದಲ್ಲೇ ಬೆಳ್ಮಣ್ ಪೇಟೆಯ ಮಧ್ಯೆ ಇದ್ದ ಬೃಹತ್ ಮರ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ. ಘಟನೆಯಿಂದ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. ಜಡಿಮಳೆಯ ನಡುವೆಯೇ ಸ್ಥಳೀಯರು ಅವರನ್ನು ಮರದ ನಡುವಿನಿಂದ ಎತ್ತಿ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಲಿಲ್ಲ.

Ad Widget

ಆಸ್ಪತ್ರೆಗೆ ತಲುಪುವ ಮೊದಲೇ ಕೊನೆಯುಸಿರೆಳೆದಿದ್ದರು. ಮೃತ ವ್ಯಕ್ತಿಯನ್ನು ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದೆ. ಪ್ರವೀಣ್ ತಮ್ಮ ಪಾಡಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ, ದೊಡ್ಡ ಆಲದ ಮರ ಅವರ ಮೇಲೆ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Ad Widget

Ad Widget
Click to comment

Leave a Reply

ಕಾರ್ಕಳ

saanvi rao ದ್ವಿತೀಯ ಪಿ.ಯು.ಸಿ ಮರು ಮೌಲ್ಯಮಾಪನ ಫಲಿತಾಂಶ ಪ್ರಕಟ:ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ, ಭಕ್ತಿ ಕಾಮತ್ ರಾಜ್ಯಕ್ಕೆ ಐದನೇ ರ‍್ಯಾಂಕ್

Ad Widget

Ad Widget

Ad Widget

Ad Widget

ಶೈಕ್ಷಣಿಕ ಸಾಧನೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಸಂಸ್ಕೃತ ಮತ್ತು ಇ.ಬಿ.ಎ.ಸಿ ಯಲ್ಲಿ ತಲಾ 100 ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್ ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು.

Ad Widget

Ad Widget

Ad Widget

ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 03 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಇವರು ಉತ್ತರಕನ್ನಡದ ಹೊನ್ನಾವರದ ಜಗದೀಶ್ ರಾವ್ ಬಿ ಎಸ್ ಮತ್ತು ವಿನುತಾ ಭಟ್ ದಂಪತಿಗಳ ಸುಪುತ್ರಿ.

Ad Widget

ವಾಣಿಜ್ಯ ವಿಭಾಗದ ಭಕ್ತಿ ಕಾಮತ್ 594 ಅಂಕಗಳೊಂದಿಗೆ ರಾಜ್ಯಕ್ಕೆ ಐದನೇ ರ‍್ಯಾಂಕ್, ವಿಜ್ಞಾನ ವಿಭಾಗದ ಸಾಗರ್ ಎಸ್. ಟಿ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್ ಹಾಗೆಯೇ ವಾಣಿಜ್ಯ ವಿಭಾಗದ ವಿನಯ್ ಪ್ರಶಾಂತ್ 589 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 10ನೇ ರ‍್ಯಾಂಕ್ ಗಳಿಸಿರುತ್ತಾರೆ.

Ad Widget

Ad Widget

ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಒಟ್ಟು 12 ವಿದ್ಯಾರ್ಥಿಗಳು ರಾಜ್ಯದ ಮೊದಲ 10 ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿರುವುದು ಹೆಮ್ಮೆಯ ವಿಷಯವಾಗಿದ್ದು ವಿದ್ಯಾರ್ಥಿಗಳ ಈ ವಿಶೇಷ ಸಾಧನೆಯನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು, ಬೋಧಕೇತರ ವರ್ಗದವರು ಶ್ಲಾಘಿಸಿ, ಅಭಿನಂದಿಸಿದ್ದಾರೆ.

Ad Widget

Ad Widget

Ad Widget
Continue Reading

ಶಿಕ್ಷಣ

Karkala-ಕಾರ್ಕಳ: ದ್ವಿತೀಯ ಪಿಯುಸಿಯಲ್ಲಿ ಶೇ 100 ಫಲಿತಾಂಶ ಪಡೆದ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನ-ರಾಜ್ಯಮಟ್ಟದಲ್ಲಿ 6 Rank ಪಡೆದು ಮಹತ್ವದ ಸಾಧನೆ

Ad Widget

Ad Widget

Ad Widget

Ad Widget

ಕಾರ್ಕಳದಲ್ಲಿರುವ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನವು ದ್ವಿತೀಯ ಪಿಯುಸಿಯಲ್ಲಿ ಶೇ 100 ಫಲಿತಾಂಶ ಗಳಿಸಿದ್ದು ಇಲ್ಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸಾನ್ವಿ ರಾವ್‌ 595 ಅಂಕಗಳೊಂದಿಗೆ ರಾಜ್ಯದಲ್ಲಿ 3ನೇಯ Rank ಗಳಿಸಿದ್ದಾರೆ.

Ad Widget

Ad Widget

Ad Widget

ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಭಾರತೀ ಕಾಮತ್‌ 592 ಅಂಕ ಹಾಗೂ ಎ.ಎಸ್. ಚಿನ್ಮಯ 592 ಅಂಗಳೊಂದಿಗೆ 6ನೇಯ Rank ಗಳಿಸಿದ್ದಾರೆ. ಎ. ಅನನ್ಯ ಜೈನ್‌ 589 ಅಂಕಗಳೊಂದಿಗೆ 9ನೇಯ Rank ಗಳಿಸಿದ್ದಾರೆ.

Ad Widget

ವಿಜ್ಞಾನ ವಿಭಾಗದಲ್ಲಿ ಸಿಂಚನ ಆರ್. ಎಚ್. 592 ಅಂಕಗಳೊಂದಿಗೆ 7ನೇ Rank ಮತ್ತು ಸುಜಿತ್‌ ಬಿ.ಕೆ. ಹಾಗೂ ಹಂಸಿನಿ ವಿ. 591 ಅಂಕ ಗಳಿಸಿ 8ನೇ Rank ಗಳಿಸಿದ್ದಾರೆ. ಪ್ರೇಮ್‌ ಸಾಗರ್‌ ಪಾಟೀಲ್‌ ಹಾಗೂ ವರ್ಷ ಎಚ್.ವಿ. 589 ಅಂಕ ಪಡೆದು 10ನೇಯ Rank ಗಳಿಸಿದ್ದಾರೆ.

Ad Widget

Ad Widget
Continue Reading

ಕಾರ್ಕಳ

ಕಾರ್ಕಳಕ್ಕೆ ಕಾಲಿಟ್ಟ ಪ್ರತಿಷ್ಠಿತ ವಿದ್ಯಾಮಾತಾ ಅಕಾಡೆಮಿ : ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಎಳೆಯ ವಯಸ್ಸಿನಲ್ಲಿಯೇ ಅರಿವು ಬೆಳೆಸಿಕೊಂಡರೆ ಪ್ರತೀ ಇಲಾಖೆಗಳಲ್ಲೂ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಬಹುದು – ಶಾಖಾ ಕಚೇರಿ ಉದ್ಘಾಟಿಸಿ ವಜ್ರದೇಹಿ ಶ್ರೀ

Ad Widget

Ad Widget

Ad Widget

Ad Widget

ಕರ್ನಾಟಕ ರಾಜ್ಯದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು ತನ್ನ ಎರಡನೇ ಶಾಖೆಯನ್ನು ಕಾರ್ಕಳದಲ್ಲಿ ತೆರೆದಿದೆ.

Ad Widget

Ad Widget

Ad Widget

ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ ರಾಜಶೇಖರನಂದ ಶ್ರೀಗಳು “ಈ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕತೆಯ ಬಗ್ಗೆ ಯುವ ಜನತೆಯಲ್ಲಿ ಅರಿವನ್ನು ಮೂಡಿಸುವುದು ತೀರಾ ಅನಿವಾರ್ಯವಾಗಿದ್ದು ಈ ಅರಿವನ್ನು ಎಳೆಯ ವಯಸ್ಸಿನಲ್ಲಿಯೇ ಬೆಳೆಸಿಕೊಂಡರೆ ಪ್ರತೀ ಇಲಾಖೆಗಳಲ್ಲೂ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಬಹುದು” ಎಂದು ಈ ನಿಟ್ಟಿನಲ್ಲಿ ಕಾರ್ಯಪ್ರವೃತವಾಗಿರುವ ವಿದ್ಯಾಮಾತಾ ಅಕಾಡೆಮಿ ಕಾರ್ಯವೈಖರಿಯ ಕುರಿತು ಮೆಚ್ಚುಗೆಯ ನುಡಿಯನ್ನಾಡಿ ಸಂಸ್ಥೆಗೆ ಶುಭಾಶೀರ್ವಾದ ನೀಡಿದರು.

Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಮೃತ ಭಾರತಿ ಟ್ರಸ್ಟ್ ಇದರ ಕಾರ್ಯದರ್ಶಿಗಳಾದ ಶ್ರೀ ಗುರುದಾಸ್ ಶೆಣೈ ರವರು ಮಾತನಾಡಿ ಗ್ರಾಮೀಣ ಪ್ರದೇಶಗಳಿಂದ ಹಲವು ಅಧಿಕಾರಿಗಳನ್ನು ನೀಡಿದ ವಿದ್ಯಾಮಾತಾ ಅಕಾಡೆಮಿಯು ಉಡುಪಿ ಜಿಲ್ಲೆಗೂ ಕಾಲಿಟ್ಟದ್ದು ಸಂತಸದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.

Ad Widget

Ad Widget

ಮತ್ತೊರ್ವ ಅತಿಥಿಯಾದ ಉಜ್ವಲ್ ಗ್ರೂಪ್ ನ ವ್ಯವಸ್ಥಾಪಕ ನಿರ್ದೇಶಕರಾದ ಅಜಯ್ ಶೆಟ್ಟಿರವರು ಸ್ಪರ್ಧಾತ್ಮಕ ಯುಗದಲ್ಲಿ ಯುವ ಜನತೆಯ ಕೌಶಲ್ಯ ಸಾಮರ್ಥ್ಯವೂ ಕೂಡ ಬಹಳ ಮುಖ್ಯ ಎಂಬುದನ್ನು ಈ ಸಂಸ್ಥೆ ಈಗಾಗಲೇ ಸಾಬೀತು ಪಡಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Ad Widget

Ad Widget

Ad Widget

ಸಾಧಕರಿಗೆ ಸನ್ಮಾನ: ಇದೇ ಸಂದರ್ಭದಲ್ಲಿ ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜ್ ಹಾಗೂ ಶ್ರೀ ವೆಂಕಟರಮಣ ಮಹಿಳಾ ಕಾಲೇಜ್ ನಲ್ಲಿ ಒಟ್ಟು 35 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ಪ್ರೊ.ಮಿತ್ರ ಪ್ರಭಾ ಹೆಗ್ಡೆ ಮತ್ತು ಶೈಕ್ಷಣಿಕ ಹಾಗೂ ಕನ್ನಡ ಸಾಹಿತ್ಯ ರಂಗದಲ್ಲಿ ಸೇವೆ ಸಲ್ಲಿಸಿದ ಜ್ಯೋತಿ ಗುರುಪ್ರಸಾದ್ ರವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಸ್ತವಿಕ ನೆಲೆಯಲ್ಲಿ ಮಾತನಾಡಿ ಸ್ವಾಗತಿಸಿದ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಯವರು ಸಂಸ್ಥೆಯ ಏಳಿಗೆಯಲ್ಲಿ ಎಲ್ಲರ ಸಹಕಾರವನ್ನು ಕೋರಿದರು. ಎ.10ರಿಂದ VAO ಮತ್ತು PDO ನೇಮಕಾತಿಯ ಆನ್ಲೈನ್ ತರಬೇತಿಯು ಪ್ರಾರಂಭವಾಗಲಿದೆ ಎಂದು ಘೋಷಿಸಿದರು.

ವಿದ್ಯಾಮಾತಾ ಅಕಾಡೆಮಿಯ ಕಾರ್ಕಳ ಶಾಖೆಯ ಸಂಚಾಲಕರಾದ ಶ್ರೀಮತಿ ರಮಿತ ಶೈಲೇಂದ್ರ ರಾವ್ ರವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಅತಿಥಿ ಅಭ್ಯಾಗತರನ್ನು ಅಭಿನಂದಿಸಿದರು, ನೂತನ ಶಾಖೆಯ ಶುಭಾರಂಭದ ಸುಸಂದರ್ಭದಲ್ಲಿ ಸಂಸ್ಥೆಯ ತರಬೇತುದಾರರು, ಸಿಬ್ಬಂದಿ ವರ್ಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading