Connect with us

ದಕ್ಷಿಣ ಕನ್ನಡ

ಸೌಜನ್ಯ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ. 28ರಂದು ಪುತ್ತೂರಿನಲ್ಲಿ ಬೃಹತ್‌ ಪ್ರತಿಭಟನೆ – ತಿಮರೋಡಿ, ವಾಲ್ಕೆ, ಅತ್ತಾವರ ಸಹಿತ ಹಲವು ಹಿಂದೂ ಮುಖಂಡರು ಭಾಗಿ

ಇಲಾಖೆಯ ತಪ್ಪಿನಿಂದ ನಿರ್ದೋಷಿ ಸಂತೋಷ್ ರಾವ್ ಅವರಿಗೆ ಜೈಲು ಶಿಕ್ಷೆಯಾಗಿದೆ. ಸಂತೋಷ್ ರಾವ್ ಅವರಿಗೆ ನಷ್ಟವನ್ನು ಭರಿಸಿ ಸೂಕ್ತ ಪರಿಹಾರವನ್ನು ನೀಡಬೇಕು. ಇಲಾಖೆಯ ಸೌಜನ್ಯ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ವೈಫಲ್ಯ ಎದ್ದುಕಾಣುತ್ತಿದ್ದು, ಸರಿಯಾದ ರೀತಿಯಲ್ಲಿ ಮರು ತನಿಖೆಯನ್ನು ನಡೆಸಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ

Ad Widget

Ad Widget

ಪುತ್ತೂರು: ಧರ್ಮಸ್ಥಳದ ಕಾಲೇಜ್‌ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಹತ್ಯೆಯನ್ನು ಉಗ್ರವಾಗಿ ಖಂಡಿಸಿ, ಈ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆ.೨೮ರಂದು ಪುತ್ತೂರಿನಲ್ಲಿ ಅಭಿನವ ಭಾರತ ಮಿತ್ರಮಂಡಳಿ ಪುತ್ತೂರು ಮತ್ತು ಬೆಳ್ತಂಗಡಿ ಪ್ರಜಾಪ್ರಭುತ್ವ ವೇದಿಕೆ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ.

Ad Widget

Ad Widget

Ad Widget

Ad Widget

ಈ ಕುರಿತ ಮಾಹಿತಿಯನ್ನು ಅಭಿನವ ಭಾರತ ಮಿತ್ರ ಮಂಡಳಿ ಪ್ರವರ್ತಕ ದಿನೇಶ್ ಕುಮಾರ್ ಜೈನ್ ಪತ್ರಿಕಾಗೋಷ್ಟಿಯಲ್ಲಿ ಹಂಚಿಕೊಂಡಿದ್ದು, ಆ.28 ರಂದು ಮಧ್ಯಾಹ್ನ 3 ಗಂಟೆಗೆ ಪುತ್ತೂರು ದರ್ಬೆ ವೃತ್ತದಿಂದ ಬೃಹತ್ ಜನ ಜಾಗೃತಿ ಮೆರವಣಿಗೆ ಹೊರಡಲಿದೆ . ಪುತ್ತೂರಿನ ರಾಜ ಮಾರ್ಗದಲ್ಲಿ ಸಾಗುವ ಜಾಗೃತಿ ಜಾಥವು ಪುತ್ತೂರು ಬಸ್ಸು ನಿಲ್ದಾಣದ ಮೂಲಕ ಸಾಗಿ, ಪ್ರಧಾನ ಅಂಚೆ ಕಛೇರಿಯ ಬಳಿ ತಲುಪಿ ಅಲ್ಲಿಂದ ಶ್ರೀ ಮಹಾಲೀಂಗೇಶ್ವರ ದೇಗುಲದ ಗದ್ದೆಯ ಮೂಲಕ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣ ತಲುಪಲಿದ್ದು ಅಲ್ಲಿ ಸಮಾವೇಶಗೊಳ್ಳಲಿದೆ.

Ad Widget

Ad Widget

Ad Widget

ಈ ಪ್ರತಿಭಟನೆಗೆ ಎಲ್ಲ ಹಿಂದೂ ಪರ ಸಂಘಟನೆಗಳು , ವಿವಿಧ ಜಾತಿಯ ಸಂಘಟನೆಗಳು ಬೆಂಬಲ ಸೂಚಿಸಿವೆ. ಜನ ಜಾಗೃತಿ ಸಭೆಯಲ್ಲಿ ಸೌಜನ್ಯ ತಾಯಿ, ಹಿಂದೂ ನಾಯಕ ಮಹೇಶ್ ಶೆಟ್ಟಿ ತಿಮರೋಡಿ, ಪ್ರವೀಣ್ ವಾಲ್ಕೆ, ಪ್ರಸಾದ್ ಅತ್ತಾವರ, ಸಂತೋಷ್ ರಾವ್ ಪರ ವಾಕಾಲತ್ತು ಹಾಕಿದ ವಕೀಲರಾದ ಮೋಹಿತ್, ನವೀನ್ ಪದ್ಯಾಣ ಭಾಗವಹಿಸಲಿದ್ದಾರೆ ಎಂದರು.

Ad Widget

ಇಲಾಖೆಯ ತಪ್ಪಿನಿಂದ ನಿರ್ದೋಷಿ ಸಂತೋಷ್ ರಾವ್ ಅವರಿಗೆ ಜೈಲು ಶಿಕ್ಷೆಯಾಗಿದೆ. ಸಂತೋಷ್ ರಾವ್ ಅವರಿಗೆ ನಷ್ಟವನ್ನು ಭರಿಸಿ ಸೂಕ್ತ ಪರಿಹಾರವನ್ನು ನೀಡಬೇಕು. ಇಲಾಖೆಯ ಸೌಜನ್ಯ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ವೈಫಲ್ಯ ಎದ್ದುಕಾಣುತ್ತಿದ್ದು, ಸರಿಯಾದ ರೀತಿಯಲ್ಲಿ ಮರು ತನಿಖೆಯನ್ನು ನಡೆಸಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ. ಕುಟುಂಬಕ್ಕೆ ಸರಿಯಾದ ನ್ಯಾಯ ಕೊಡಿಸುವಲ್ಲಿ ವಿಫಲವಾದರೆ ಖಾಸಗಿ ದಾವೆ ಹೂಡುವ ಮೂಲಕ ನ್ಯಾಯಕ್ಕೆ ಮೊರೆ ಹೋಗಲಾಗುವುದು ಎಂದು ಹೇಳಿದರು.

Ad Widget

Ad Widget

ದೇಶದವನ್ನು ತಾಯಿಯ ಸ್ವರೂಪದಲ್ಲಿ ಕಾಣುವುದು ಈನೆಲದಲ್ಲಿ ಮಾತೆಯರ, ಸಹೋದರಿಯ ಮೇಲೆ ದೌರ್ಜನ್ಯ ಅತ್ಯಾಚಾರ ನಡೆಯುತ್ತಿರುವುದು ಆತಂಕದ ವಿಚಾರವಾಗಿದೆ. ಹೆಣ್ಣು ಮಕ್ಕಳ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಯಾಗಬೇಕು ಎಂಬ ಆಗ್ರಹಿಸಿದರು.

ಪ್ರಜಾಪ್ರಭುತ್ವ ವೇದಿಕೆಯ ಅಧ್ಯಕ್ಷ ಅನಿಲ್ ಬೆಳ್ತಂಗಡಿ, ಮಿತ್ರ ಮಂಡಳಿಯ ಧನ್ಯ ಕುಮಾರ್ ಬೆಳಂದೂರು, ನವೀನ್ ಕುಲಾಲ್ ಪುತ್ತೂರು ಹಾಜರಿದ್ದರು.

Click to comment

Leave a Reply

ಪುತ್ತೂರು

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಪ್ರಾಚಿ ಪುರಾತನ ಆಭರಣಗಳ ಪ್ರದರ್ಶನ ಹಾಗೂ ಮಾರಾಟ

Ad Widget

Ad Widget

ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಡಿಸೆಂಬರ್ 8ರಿಂದ ಪ್ರಾಚಿ ಪುರಾತನ ಆಭರಣಗಳ ಪ್ರದರ್ಶನ ಹಾಗೂ ಮಾರಾಟವನ್ನು ಆಯೋಜಿಸಲಾಗಿದೆ. ಗ್ರಾಹಕರು ಪ್ರಾಚಿ ಆ್ಯಂಟಿಕ್ ಚಿನ್ನಾಭರಣಗಳ ಖರೀದಿಗೆ ವಿಶೇಷ ರಿಯಾಯಿತಿ ಹಾಗೂ ಅಚ್ಚರಿಯ ಕೊಡುಗೆಗಳನ್ನು ಪಡೆಯುವ ಅವಕಾಶವಿದೆ.

Ad Widget

Ad Widget

Ad Widget

Ad Widget

1957 ರಲ್ಲಿ ಆರಂಭಗೊಂಡ ಸಂಸ್ಥೆಯು ಆಭರಣಗಳ ಮಾರಾಟದಲ್ಲಿ ತನ್ನದೇ ಛಾಪು ಮೂಡಿಸಿದೆ. ವಿಶ್ವಾಸ, ಪರಿಶುದ್ಧತೆ, ಪರಂಪರೆ, ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸಂಸ್ಥೆ ಮನೆಮಾತಾಗಿದೆ. ಆ್ಯಂಟಿಕ್ ಆಭರಣಗಳು, ಅನ್ ಕಟ್ ಡೈಮಂಡ್ಸ್ ಹಾಗೂ ಅಮೂಲ್ಯ ಹರಳುಗಳ ವಿಪುಲ ಸಂಗ್ರಹವಿದ್ದು ಗ್ರಾಹಕರು ಆರಾಮದಾಯಕವಾಗಿ ಶಾಪಿಂಗ್ ಮಾಡಲು ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ.

Ad Widget

Ad Widget

Ad Widget

ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಷರತ್ತುಗಳು ಅನ್ವಯದೊಂದಿಗೆ ಈ ಆಫರ್ ಪುತ್ತೂರು ಹಾಗೂ ಸುಳ್ಯ ಮಳಿಗೆಗಳಲ್ಲಿ ಮಾತ್ರ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Ad Widget
Continue Reading

ದಕ್ಷಿಣ ಕನ್ನಡ

ಧರ್ಮಸ್ಥಳ ಲಕ್ಷದೀಪೋತ್ಸವ : ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ – ಪಾದಯಾತ್ರಿಗಳಿಂದ ಭೀಷ್ಮ ಪ್ರತಿಜ್ಞೆ : ಹೆಗ್ಗಡೆಯವರ ಸಂಸದರ ನಿಧಿಯಿಂದ ಬೀದರ್ ನಲ್ಲಿ ಕ್ಷೀರಕ್ರಾಂತಿ

Ad Widget

Ad Widget

ಉಜಿರೆ: ಹೃದಯ ಪರಿವರ್ತನೆಯಿಂದ ಅದ್ಭುತ ಪ್ರಗತಿ ಸಾಧ್ಯವಾಗುತ್ತದೆ. ಎಲ್ಲರನ್ನೂ ಜಯಿಸಿ ಸರ್ವರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

Ad Widget

Ad Widget

Ad Widget

Ad Widget

ಅವರು ಲಕ್ಷದೀಪೋತ್ಸವ ಸಂದರ್ಭದಲ್ಲಿ ಶುಕ್ರವಾರ ಶಿವನಾಮ ಸ್ಮರಣೆಯೊಂದಿಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಹತ್ತು ಸಾವಿರಕ್ಕೂ ಮಿಕ್ಕಿ ಭಕ್ತರನ್ನು ಅಭಿನಂದಿಸಿ ಮಾತನಾಡಿದರು.

Ad Widget

Ad Widget

Ad Widget

ನಾವು ಎಲ್ಲರಲ್ಲಿಯೂ ಒಳ್ಳೆಯತನವನ್ನು ಕಾಣಬೇಕು. ದೋಷವನ್ನು ಹುಡುಕಬಾರದು. ಯಾವಾಗಲೂ ಕೆಟ್ಟ ಯೋಚನೆ ಮಾಡದೆ ಸದಾಶಯದೊಂದಿಗೆ ಸತ್ಕಾರ್ಯಗಳನ್ನೇ ಮಾಡಿದರೆ ಲೋಕಕಲ್ಯಾಣವಾಗುತ್ತದೆ.

Ad Widget

ಎಲ್ಲರಲ್ಲಿಯೂ ಪರಸ್ಪರ ಪ್ರೀತಿ-ವಿಶ್ವಾಸ, ನಂಬಿಕೆ ಮತ್ತು ಗೌರವ ಬೆಳೆಯುತ್ತದೆ. ದೇವರು ನನಗೆ ಕೊಟ್ಟ ಎಲ್ಲಾ ಅವಕಾಶಗಳನ್ನು ಮತ್ತು ಸಂಪತ್ತನ್ನು ಬಳಸಿ ಸತ್ಕಾರ್ಯಗಳನ್ನೇ ಮಾಡಿದ್ದೇನೆ. ಅಗಾಧ ಸಂಪತ್ತಿಗಿAತ ಸತ್ಕಾರ್ಯಕ್ಕೆ ಮೌಲ್ಯ ಜಾಸ್ತಿ. ಎಲ್ಲರೂ ಸೇರಿ ಜೊತೆಯಾಗಿ ಸತ್ಕಾರ್ಯಗಳನ್ನೇ ಮಾಡೋಣ ಎಂದು ಅವರು ಕಿವಿಮಾತು ಹೇಳಿದರು.

Ad Widget

Ad Widget

ಧರ್ಮಸ್ಥಳದ ಬಗ್ಗೆ ಯಾವುದೇ ಅನುಮಾನ, ಸಂಶಯ ಬೇಡ. ನೇರವಾಗಿ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಅವರು ಸಲಹೆ ನೀಡಿದರು.

ಸಂಸದರ ನಿಧಿಯಿಂದ ತನಗೆ ಮಂಜೂರಾದ ಎರಡೂವರೆ ಕೋಟಿ ರೂ. ಅನುದಾನವನ್ನು ಬೀದರ್ ಜಿಲ್ಲೆಗೆ ನೀಡಿದ್ದು ಅಲ್ಲಿ ಇದರಿಂದಾಗಿ ಕ್ಷೀರ ಕ್ರಾಂತಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಪಾದಯಾತ್ರೆ ಮೂಲಕ ಎಲ್ಲರೂ ನಿಮ್ಮ ಪ್ರೀತಿ-ವಿಶ್ವಾಸ, ಗೌರವ, ಭಕ್ತಿ ಮತ್ತು ಸಂತೋಷವನ್ನು ವ್ಯಕ್ತಪಡಿಸಿರುವಿರಿ. ಇದರಿಂದ ನನ್ನಲ್ಲಿ ತೃಪ್ತಿ, ಸಂತೋಷ ಮತ್ತು ಧನ್ಯತಾಭಾವ ಮೂಡಿಬಂದಿದೆ ಎಂದರು.

ಪಾದಯಾತ್ರಿಗಳ ಭೀಷ್ಮ ಪ್ರತಿಜ್ಞೆ: ಪಾದಯಾತ್ರಿಗಳೆಲ್ಲ ಸಂಘಟನೆ ಮೂಲಕ ಸತ್ಯ, ಧರ್ಮ, ನ್ಯಾಯ ಮತ್ತು ನೀತಿಗಾಗಿ ತಾವೆಲ್ಲರೂ ಧರ್ಮಸ್ಥಳದ ಜೊತೆ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜೊತೆ ಸದಾ ಇದ್ದೇವೆ ಎಂದು ಸಾಮೂಹಿಕವಾಗಿ ದೃಢಸಂಕಲ್ಪದೊಂದಿಗೆ ಭೀಷ್ಮ ಪ್ರತಿಜ್ಞೆ ಮಾಡಿದರು.

ಹೇಮಾವತಿ ವಿ ಹೆಗ್ಗಡೆಯವರು, ಶ್ರದ್ಧಾ ಅಮಿತ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ನಿಶ್ಚಲ್ ಕುಮಾರ್, ಸೋನಿಯವರ್ಮ, ಪೂರನ್‌ವರ್ಮ, ಶರತ್‌ಕೃಷ್ಣ ಪಡ್ವೆಟ್ನಾಯ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ.ಎಸ್. ಸತೀಶ್ಚಂದ್ರ, ಎಸ್.ಡಿ.ಎಮ್. ಕಾಲೇಜು ಪ್ರಾಂಶುಪಾಲ ಕುಮಾರ ಹೆಗ್ಡೆ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಎಚ್. ಮಂಜುನಾಥ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್. ಜನಾರ್ದನ್, ಎಸ್.ಡಿ.ಎಮ್ ಆಸ್ಪತ್ರೆಯ ನಿರ್ದೇಶಕ ಎಮ್. ಜನಾರ್ದನ ಸಿ.ಒ.ಒ. ಅನಿಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ವಕೀಲ ಬಿ.ಕೆ. ಧನಂಜಯ ರಾವ್ ಸ್ವಾಗತಿಸಿದರು. ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.

Continue Reading

ದಕ್ಷಿಣ ಕನ್ನಡ

ಈಶ್ವರಮಂಗಲ ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಬಸ್ಸು ಹರಿದು ಸಾವು – ಅದೇ ಬಸ್ಸಿನಿಂದ ಇಳಿದಿದ್ದರು..!

Ad Widget

Ad Widget

ಪುತ್ತೂರು : ಈಶ್ವರಮಂಗಲದ ಗಾಳಿಮುಖದಲ್ಲಿ ಖಾಸಗಿ ಬಸ್ಸಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಡಿ. 8ರಂದು ಸಂಭವಿಸಿದೆ. ಮುಳ್ಳೇರಿಯಾದ ಕೋಳಿಕಾಲ ನಿವಾಸಿ, ಕೃಷಿಕ ಕುಂಞಿರಾಮ ಮಣಿಯಾಣಿ ಮೃತಪಟ್ಟವರು.ʼ ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Ad Widget

Ad Widget

Ad Widget

Ad Widget

ಗಾಳಿಮುಖಕ್ಕೆ ಬಂದಿದ್ದ ಅವರು ಬಸ್ಸಿನಿಂದ ಇಳಿದು ರಸ್ತೆ ದಾಟುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಹಿಂಬದಿ ಬಾಗಿಲಿನಿಂದ ಇಳಿದಿದ್ದ ಕುಂಞಿರಾಮ ಮಣಿಯಾಣಿ ಅವರು, ಇನ್ನೊಂದು ಬದಿಗೆ ದಾಟುವಷ್ಟರಲ್ಲಿ ಬಸ್‌ ಚಲಿಸಿದ್ದು, ಬಸ್ಸಿನ ಮುಂಭಾಗದ ಚಕ್ರ ಕುಂಞಿರಾಮ ಅವರ ಎದೆಯ ಭಾಗದಿಂದ ಹರಿದಿದೆ. ಸಂಪ್ಯ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Ad Widget

Ad Widget

Ad Widget

ಚಾಲಕನ ಮೇಲೆ FIR

Ad Widget

ಕೇರಳ ನೋಂದಣಿಯ ಖಾಸಗಿ ಬಸ್ಸಿನ ಚಾಲಕ ಸುಜೀತ್ ವಿ ಎಂಬವರು  ನಿರ್ಲಕ್ಷತನ ಹಾಗೂ ಅಜಾಗರೂಕತೆಯಿಂದ ಬಸ್ಸನ್ನು ಚಲಾಯಿಸಿ ರಸ್ತೆ ದಾಟುತ್ತಿದ್ದ ಕುಂಞಿರಾಮ ಮಣಿಯಾಣಿ ಯವರಿಗೆ  ಡಿಕ್ಕಿ ಹೊಡೆದಿದ್ದು , ಆಗ ಅವರು  ಡಾಮಾರು ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ವೇಳೆ  ಅವರ ಮೇಲೆ ಬಸ್ ಚಲಿಸಿರುತ್ತದೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಕುಂಞಿರಾಮ ಮಣಿಯಾಣಿರವರು ಮೃತಪಟ್ಟಿರುತ್ತಾರೆ ಎಂದು ಮೃತರ ಚಿಕ್ಕಪ್ಪನ ಮಗ ಕೃಷ್ಣ ಎ ಎಂಬವರು   ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.  ಐಪಿಸಿ ಕಲಂ : 279,304(A)  ರಂತೆ ಪ್ರಕರಣ ದಾಖಲಾಗಿದೆ.

Ad Widget

Ad Widget
Continue Reading

Trending

error: Content is protected !!