Connect with us

ದಕ್ಷಿಣ ಕನ್ನಡ

Ashok Rai ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಳಕ್ಕೆ ಭೇಟಿ ನೀಡಿದ ಪುತ್ತೂರು ಶಾಸಕರಿಗೆ ಅಭಿಮಾನಿಗಳಿಂದ ಪೌರ ಸನ್ಮಾನ

Ad Widget

Ad Widget

Ad Widget

Ad Widget

Ad Widget

Ad Widget

ಪೆರ್ಲ: ಚೌ ಗ್ರಾಮದ ದೇವಸ್ಥಾನ ಎಂದೇ ಪ್ರಸಿದ್ಧಿ ಪಡೆದ ಕಾಟುಕುಕ್ಕೆ ಶ್ರೀ ಸುಬ್ರಾಯ ದೇಗುಲಕ್ಕೆ ಮಂಗಳವಾರ ಭೇಟಿ ನೀಡಿದ ಪುತ್ತೂರು ಶಾಸಕ ಆಶೋಕ್ ಕುಮಾರ್ ರೈ ಕೋಡಿಂಬಾಡಿ ಪ್ರಾರ್ಥನೆ ಸಲ್ಲಿಸಿದರು.

Ad Widget

Ad Widget

Ad Widget

ವಿಧಾನಸಭೆ ಚುನಾವಣೆ ವೇಳೆ ಅಶೋಕ್ ಕುಮಾರ್ ರೈ ಅವರ ಗೆಲುವಿಗೆ ಅಭಿಮಾನಿಗಳು ಹೇಳಿಕೊಂಡಿದ್ದ ಹರಕೆ ತೀರಿಸಲು ಕಾಟುಕುಕ್ಕೆ ಕ್ಷೇತ್ರಕ್ಕೆ ಆಗಮಿಸಿದ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಕಾಟುಕುಕ್ಕೆಯ ಅಭಿಮಾನಿ ಬಳಗದಿಂದ ಶಾಸಕರಿಗೆ ಪೌರ ಸನ್ಮಾನ ಕಾರ್ಯಕ್ರಮ ನಡೆಯಿತು‌.ದೇವಳದ ಆಡಳಿತ ಮೊಕ್ತೇಸರ ತಾರನಾಥ ರೈ ಪಡ್ಡಂಬೈಲು, ನಿಕಟಪೂರ್ವ ಮೊಕ್ತೇಸರ ನಾರಾಯಣ, ಉತ್ಸವ ಸಮಿತಿ ಅಧ್ಯಕ್ಷ ಪುರುಷೋತ್ತಮ ಭಟ್ ಮಿತ್ತೂರು ಉಪಸ್ಥಿತರಿದ್ದರು.

Ad Widget

ಎಣ್ಮಕಜೆ ಗ್ರಾಪಂ‌ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್.ಗಾಂಭೀರ್ ಸ್ವಾಗತಿಸಿದರು.ದೀಪಕ್ ಭಂಡಾರದ ಮನೆ ವಂದಿಸಿದರು.ಕ್ಷೇತ್ರ ಅಭಿವೃದ್ಧಿಗೆ ಕರ್ನಾಟಕ ಸರಕಾರದ ನೆರವು ನೀಡುವಂತೆ ಆಗ್ರಹಿಸಿ ಆಡಳಿತ ಮೊಕ್ತೇಸರರು ಹಾಗೂ ಅಡ್ಕಸ್ಥಳ ಕಾಟುಕುಕ್ಕೆ ಮೂಲಕ ಆರ್ಲಪದವು ಪುತ್ತೂರಿಗೆ ಸರಕಾರಿ ಬಸ್ ಮಂಜೂರುಗೊಳಿಸುವಂತೆ ಆಗ್ರಹಿಸಿ ನಾಗರಿಕ ಪರವಾಗಿ ಬಿ.ಎಸ್.ಗಾಂಭೀರ್ ಶಾಸಕರಿಗೆ ಮನವಿ ಸಲ್ಲಿಸಿದರು.

Ad Widget

Ad Widget
Click to comment

Leave a Reply

ದಕ್ಷಿಣ ಕನ್ನಡ

ಧರ್ಮಸ್ಥಳ ಲಕ್ಷದೀಪೋತ್ಸವ : ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ – ಪಾದಯಾತ್ರಿಗಳಿಂದ ಭೀಷ್ಮ ಪ್ರತಿಜ್ಞೆ : ಹೆಗ್ಗಡೆಯವರ ಸಂಸದರ ನಿಧಿಯಿಂದ ಬೀದರ್ ನಲ್ಲಿ ಕ್ಷೀರಕ್ರಾಂತಿ

Ad Widget

Ad Widget

ಉಜಿರೆ: ಹೃದಯ ಪರಿವರ್ತನೆಯಿಂದ ಅದ್ಭುತ ಪ್ರಗತಿ ಸಾಧ್ಯವಾಗುತ್ತದೆ. ಎಲ್ಲರನ್ನೂ ಜಯಿಸಿ ಸರ್ವರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

Ad Widget

Ad Widget

Ad Widget

Ad Widget

ಅವರು ಲಕ್ಷದೀಪೋತ್ಸವ ಸಂದರ್ಭದಲ್ಲಿ ಶುಕ್ರವಾರ ಶಿವನಾಮ ಸ್ಮರಣೆಯೊಂದಿಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಹತ್ತು ಸಾವಿರಕ್ಕೂ ಮಿಕ್ಕಿ ಭಕ್ತರನ್ನು ಅಭಿನಂದಿಸಿ ಮಾತನಾಡಿದರು.

Ad Widget

Ad Widget

Ad Widget

ನಾವು ಎಲ್ಲರಲ್ಲಿಯೂ ಒಳ್ಳೆಯತನವನ್ನು ಕಾಣಬೇಕು. ದೋಷವನ್ನು ಹುಡುಕಬಾರದು. ಯಾವಾಗಲೂ ಕೆಟ್ಟ ಯೋಚನೆ ಮಾಡದೆ ಸದಾಶಯದೊಂದಿಗೆ ಸತ್ಕಾರ್ಯಗಳನ್ನೇ ಮಾಡಿದರೆ ಲೋಕಕಲ್ಯಾಣವಾಗುತ್ತದೆ.

Ad Widget

ಎಲ್ಲರಲ್ಲಿಯೂ ಪರಸ್ಪರ ಪ್ರೀತಿ-ವಿಶ್ವಾಸ, ನಂಬಿಕೆ ಮತ್ತು ಗೌರವ ಬೆಳೆಯುತ್ತದೆ. ದೇವರು ನನಗೆ ಕೊಟ್ಟ ಎಲ್ಲಾ ಅವಕಾಶಗಳನ್ನು ಮತ್ತು ಸಂಪತ್ತನ್ನು ಬಳಸಿ ಸತ್ಕಾರ್ಯಗಳನ್ನೇ ಮಾಡಿದ್ದೇನೆ. ಅಗಾಧ ಸಂಪತ್ತಿಗಿAತ ಸತ್ಕಾರ್ಯಕ್ಕೆ ಮೌಲ್ಯ ಜಾಸ್ತಿ. ಎಲ್ಲರೂ ಸೇರಿ ಜೊತೆಯಾಗಿ ಸತ್ಕಾರ್ಯಗಳನ್ನೇ ಮಾಡೋಣ ಎಂದು ಅವರು ಕಿವಿಮಾತು ಹೇಳಿದರು.

Ad Widget

Ad Widget

ಧರ್ಮಸ್ಥಳದ ಬಗ್ಗೆ ಯಾವುದೇ ಅನುಮಾನ, ಸಂಶಯ ಬೇಡ. ನೇರವಾಗಿ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಅವರು ಸಲಹೆ ನೀಡಿದರು.

ಸಂಸದರ ನಿಧಿಯಿಂದ ತನಗೆ ಮಂಜೂರಾದ ಎರಡೂವರೆ ಕೋಟಿ ರೂ. ಅನುದಾನವನ್ನು ಬೀದರ್ ಜಿಲ್ಲೆಗೆ ನೀಡಿದ್ದು ಅಲ್ಲಿ ಇದರಿಂದಾಗಿ ಕ್ಷೀರ ಕ್ರಾಂತಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಪಾದಯಾತ್ರೆ ಮೂಲಕ ಎಲ್ಲರೂ ನಿಮ್ಮ ಪ್ರೀತಿ-ವಿಶ್ವಾಸ, ಗೌರವ, ಭಕ್ತಿ ಮತ್ತು ಸಂತೋಷವನ್ನು ವ್ಯಕ್ತಪಡಿಸಿರುವಿರಿ. ಇದರಿಂದ ನನ್ನಲ್ಲಿ ತೃಪ್ತಿ, ಸಂತೋಷ ಮತ್ತು ಧನ್ಯತಾಭಾವ ಮೂಡಿಬಂದಿದೆ ಎಂದರು.

ಪಾದಯಾತ್ರಿಗಳ ಭೀಷ್ಮ ಪ್ರತಿಜ್ಞೆ: ಪಾದಯಾತ್ರಿಗಳೆಲ್ಲ ಸಂಘಟನೆ ಮೂಲಕ ಸತ್ಯ, ಧರ್ಮ, ನ್ಯಾಯ ಮತ್ತು ನೀತಿಗಾಗಿ ತಾವೆಲ್ಲರೂ ಧರ್ಮಸ್ಥಳದ ಜೊತೆ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜೊತೆ ಸದಾ ಇದ್ದೇವೆ ಎಂದು ಸಾಮೂಹಿಕವಾಗಿ ದೃಢಸಂಕಲ್ಪದೊಂದಿಗೆ ಭೀಷ್ಮ ಪ್ರತಿಜ್ಞೆ ಮಾಡಿದರು.

ಹೇಮಾವತಿ ವಿ ಹೆಗ್ಗಡೆಯವರು, ಶ್ರದ್ಧಾ ಅಮಿತ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ನಿಶ್ಚಲ್ ಕುಮಾರ್, ಸೋನಿಯವರ್ಮ, ಪೂರನ್‌ವರ್ಮ, ಶರತ್‌ಕೃಷ್ಣ ಪಡ್ವೆಟ್ನಾಯ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ.ಎಸ್. ಸತೀಶ್ಚಂದ್ರ, ಎಸ್.ಡಿ.ಎಮ್. ಕಾಲೇಜು ಪ್ರಾಂಶುಪಾಲ ಕುಮಾರ ಹೆಗ್ಡೆ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಎಚ್. ಮಂಜುನಾಥ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್. ಜನಾರ್ದನ್, ಎಸ್.ಡಿ.ಎಮ್ ಆಸ್ಪತ್ರೆಯ ನಿರ್ದೇಶಕ ಎಮ್. ಜನಾರ್ದನ ಸಿ.ಒ.ಒ. ಅನಿಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ವಕೀಲ ಬಿ.ಕೆ. ಧನಂಜಯ ರಾವ್ ಸ್ವಾಗತಿಸಿದರು. ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.

Continue Reading

ದಕ್ಷಿಣ ಕನ್ನಡ

ಈಶ್ವರಮಂಗಲ ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಬಸ್ಸು ಹರಿದು ಸಾವು – ಅದೇ ಬಸ್ಸಿನಿಂದ ಇಳಿದಿದ್ದರು..!

Ad Widget

Ad Widget

ಪುತ್ತೂರು : ಈಶ್ವರಮಂಗಲದ ಗಾಳಿಮುಖದಲ್ಲಿ ಖಾಸಗಿ ಬಸ್ಸಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಡಿ. 8ರಂದು ಸಂಭವಿಸಿದೆ. ಮುಳ್ಳೇರಿಯಾದ ಕೋಳಿಕಾಲ ನಿವಾಸಿ, ಕೃಷಿಕ ಕುಂಞಿರಾಮ ಮಣಿಯಾಣಿ ಮೃತಪಟ್ಟವರು.ʼ ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Ad Widget

Ad Widget

Ad Widget

Ad Widget

ಗಾಳಿಮುಖಕ್ಕೆ ಬಂದಿದ್ದ ಅವರು ಬಸ್ಸಿನಿಂದ ಇಳಿದು ರಸ್ತೆ ದಾಟುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಹಿಂಬದಿ ಬಾಗಿಲಿನಿಂದ ಇಳಿದಿದ್ದ ಕುಂಞಿರಾಮ ಮಣಿಯಾಣಿ ಅವರು, ಇನ್ನೊಂದು ಬದಿಗೆ ದಾಟುವಷ್ಟರಲ್ಲಿ ಬಸ್‌ ಚಲಿಸಿದ್ದು, ಬಸ್ಸಿನ ಮುಂಭಾಗದ ಚಕ್ರ ಕುಂಞಿರಾಮ ಅವರ ಎದೆಯ ಭಾಗದಿಂದ ಹರಿದಿದೆ. ಸಂಪ್ಯ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Ad Widget

Ad Widget

Ad Widget

ಚಾಲಕನ ಮೇಲೆ FIR

Ad Widget

ಕೇರಳ ನೋಂದಣಿಯ ಖಾಸಗಿ ಬಸ್ಸಿನ ಚಾಲಕ ಸುಜೀತ್ ವಿ ಎಂಬವರು  ನಿರ್ಲಕ್ಷತನ ಹಾಗೂ ಅಜಾಗರೂಕತೆಯಿಂದ ಬಸ್ಸನ್ನು ಚಲಾಯಿಸಿ ರಸ್ತೆ ದಾಟುತ್ತಿದ್ದ ಕುಂಞಿರಾಮ ಮಣಿಯಾಣಿ ಯವರಿಗೆ  ಡಿಕ್ಕಿ ಹೊಡೆದಿದ್ದು , ಆಗ ಅವರು  ಡಾಮಾರು ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ವೇಳೆ  ಅವರ ಮೇಲೆ ಬಸ್ ಚಲಿಸಿರುತ್ತದೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಕುಂಞಿರಾಮ ಮಣಿಯಾಣಿರವರು ಮೃತಪಟ್ಟಿರುತ್ತಾರೆ ಎಂದು ಮೃತರ ಚಿಕ್ಕಪ್ಪನ ಮಗ ಕೃಷ್ಣ ಎ ಎಂಬವರು   ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.  ಐಪಿಸಿ ಕಲಂ : 279,304(A)  ರಂತೆ ಪ್ರಕರಣ ದಾಖಲಾಗಿದೆ.

Ad Widget

Ad Widget
Continue Reading

ದಕ್ಷಿಣ ಕನ್ನಡ

Kidnap and Murder 20 ದಿನಗಳ ಹಿಂದೆ ಪುತ್ತೂರಿನಿಂದ ಅಪಹರಣವಾದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಆಗುಂಬೆ ಘಾಟ್‌ ನಲ್ಲಿ ಪತ್ತೆ- ಅನೈತಿಕ ಸಂಬಂಧದ ಹಿನ್ನಲೆ ಕೊಂದು ಎಸೆದಿರುವ ಶಂಕೆ |‌  ಇಬ್ಬರು ಪೊಲೀಸ್ ವಶ

Ad Widget

Ad Widget

ಪುತ್ತೂರು :20 ದಿನಗಳ ಹಿಂದೆ ಪುತ್ತೂರಿನ ಕುಂಬ್ರದಿಂದ ಅಪಹರಣವಾಗಿದ್ದ (Kidnap) ಯುವಕನ ಮೃತದೇಹ ಆಗುಂಬೆ ಘಾಟ್‌ ನಲ್ಲಿ (Agumbe Ghat) ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈತನನ್ನುನ್ನು ಕೊಲೆ (Murder) ಮಾಡಿ ಆಗುಂಬೆ ಘಾಟ್ ನಲ್ಲಿ ಬೀಸಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇವರು ಕೊಲೆ ನಡೆಸಿರುವುದನ್ನು ಒಪ್ಪಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.  

Ad Widget

Ad Widget

Ad Widget

Ad Widget

ಬಾಗಲಕೋಟೆ ಜಿಲ್ಲೆ ಬಾದಮಿ ತಾಲೊಕಿನ ಡಾಣಕಶಿರೂರು ನಿವಾಸಿ ಹನುಮಂತ  (22) ಮೃತಪಟ್ಟವರು . ಕುಂಬ್ರದ ಉದ್ಯಮಿ ಮೋಹನ್‌ ದಾಸ್‌ ರೈಯವರ ಟಿಪ್ಪರ್‌ ಚಾಲಕರನಾಗಿ ದುಡಿಯುತ್ತಿದ್ದ ಈತ, ಅಪಹರಣವಾದ 5 ದಿನದ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರ. ‌ ನ 17 ರಂದು ಸಂಜೆ KA-26-B-3833 ನೋಂದಣಿಯ ಮ್ಯಾಕ್ಸಿ ವಾಹನದಲ್ಲಿ ಬಂದ ತಂಡವೊಂದು ಕುಂಬ್ರ ಮಸೀದಿ ಬಳಿಯ ರೂಮ್ ನಿಂದ  ಹನುಮಂತನನ್ನು  ಅಪಹರಿಸಿರುವುದಾಗಿ  ಆತನ ತಾಯಿ ತಾಯಿ ರೇಣವ್ವ ಮಾದರರವರು ಸಂಪ್ಯ ಠಾಣೆಗೆ  ನ 20 ರಂದು ದೂರು ನೀಡಿದ್ದರು

Ad Widget

Ad Widget

Ad Widget

ಅಕ್ರಮ ಸಂಬಂಧ (illicit Relationship) ಹಿನ್ನಲೆಯಲ್ಲಿ ಅಪಹರಣ ಮತ್ತು ಕೊಲೆ ನಡೆದಿದೆಯೆಂದು ಮೇಲ್ನೋಟಕ್ಕೆ ಕಂಡು ಬಂದಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ. ಪ್ರಕರಣದ ಪ್ರಮುಖ ಆರೋಪಿ  ಬಾದಮಿ ತಾಲೂಕಿನ ಶಿವಪ್ಪ (45) ಎಂಬಾತನ ಪತ್ನಿಯ ಜತೆ ಹನುಮಂತ ಅಕ್ರಮ ಸಂಬಂಧ ಹೊಂದಿರುವ ದ್ವೇಷವೇ ಕೊಲೆಗೆ ಕಾರಣವಾಯಿತು ಎನ್ನಲಾಗುತ್ತಿದೆ.

Ad Widget

 ಅಪಹರಣ ನಡೆಯುವುದಕ್ಕೆ  ಕೆಲ ದಿನಗಳ ಹಿಂದೆ ಆರೋಪಿ ಶಿವಪ್ಪನು  ಹನುಮಂತನ ಮಾವ ಮಂಜುನಾಥ ಎಂಬವರ ಬಳಿ ಹನುಮಂತ ತನ್ನ ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದು ,ಅವನನ್ನು ಎಲ್ಲಿಯಾದರೂ ದೂರ ಕಳುಹಿಸು ಎಂದು ಹೇಳಿದ್ದ. ಹೀಗಾಗಿ  ನ 10 ರಂದು ಹನುಮಂತನನ್ನು ಮಂಜುನಾಥರವರು ತನ್ನ ಗೆಳೆಯ  ಸಂತೋಷ್  ಗದ್ದಿ ಗೌಡ್ರನೊಂದಿಗೆ  ಪುತ್ತೂರಿನ  ಕುಂಬ್ರಕ್ಕೆ  ಟಿಪ್ಪರ್‌ ಚಾಲಕನಾಗಿ  ಕಳುಹಿಸಿ ಕೊಟ್ಟಿದ್ದರು.

Ad Widget

Ad Widget

ಇದಾದ ಬಳಿಕನ ನ 17 ರಂದು ಮಂಜುನಾಥನರವರಿಗೆ ಕರೆ ಮಾಡಿದ ಶಿವಪ್ಪ ನಿನ್ನ ಅಕ್ಕನ ಮಗ ಸಿಕ್ಕಲ್ಲಿ ಬಿಡುವುದಿಲ್ಲ ಎಂದು ಬೆದರಿಸಿದ್ದರು. ಇದನ್ನು ಮಂಜುನಾಥನವರು ತನ್ನ ಅಕ್ಕ  ರೇಣವ್ವ ಮಾದರರವರ ಬಳಿ ತಿಳಿಸಿದ್ದಾರೆ.  ಗಾಬರಿಯಾದ ಆಕೆ ಕುಂಬ್ರದಲ್ಲಿರುವ ಸಂತೋಷ್  ಗದ್ದಿ ಗೌಡ್ರರಿಗೆ ಕರೆ ಮಾಡಿ ತಿಳಿಸಿದ್ದು ಅಷ್ಟರಾಗಲೇ ಆರೋಪಿಗಳಾದ ಶಿವಪ್ಪ, ಮಂಜುನಾಥ ಮತ್ತು ದುರ್ಗಾಪ್ಪ ನವರು ಹನುಮಂತನನ್ನು  ಅಪಹರಿಸಿಕೊಂಡು ಹೋಗಿದ್ದರು ಎಂದು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಆದರೇ ಸ್ಥಳಿಯ ಮೂಲಗಳ ಪ್ರಕಾರ ನ 17 ರಂದು ಕುಂಬ್ರಕ್ಕೆ ಬಂದಿದ್ದ ಶಿವಪ್ಪ, ಮಂಜುನಾಥ ಮತ್ತು ದುರ್ಗಾಪ್ಪನವರು  ಹನುಮಂತನನ್ನು ಊರಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಜತೆಗಿದ್ದವರ ಬಳಿ ತಿಳಿಸಿಯೆ ಕರೆದುಕೊಂಡು ಹೋಗಿದ್ದರು. ಬಂದವರ  ಪೋಟೋ ತೆಗೆದಿರಿಸುವಂತೆ ಟಿಪ್ಪರ್‌ ಮಾಲಕ ಮೋಹನ್‌ದಾಸ ರೈ ಅವರು ತನ್ನ ಕೆಲಸದವರಿಗೆ ಸೂಚಿಸಿದ್ದರು. ಹಾಗಾಗಿ ಕೆಲಸದವರು ಆ ಮೂವರು ಪೋಟೋವನ್ನು ಮೊಬೈಲ್‌ನಲ್ಲಿ ತೆಗೆಸಿ ಇಟ್ಟುಕೊಂಡಿದ್ದರು ಎಂದು ತಿಳಿದು ಬಂದಿದೆ.

ಹನುಮಂತನನ್ನು ಕುಂಬ್ರದಿಂದ ಕರೆದುಕೊಂಡು ಹೋದವರು

ಹನುಮಂತನ ತಾಯಿ ಠಾಣೆಯಲ್ಲಿ  ಪ್ರಕರಣ ದಾಖಲಿಸಿದ ಬಳಿಕ  ತನಿಖೆ ಆರಂಭಿಸಿದ ಪೊಲೀಸರಿಗೆ ಈ ಗ್ರೂಫ್‌  ಫೋಟೊವನ್ನು ನೀಡಲಾಗಿತ್ತು. ಇದನ್ನು ಅನುಸರಿಸಿ  ಹನುಮಂತನನ್ನು ಕರೆದುಕೊಂಡು ಹೋಗಿದ್ದ ಇಬರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ ಅತನನ್ನು ಕೊಲೆ ಮಾಡಿ ಎಸೆದಿರುವುದನ್ನು ಅವರು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.  ಆಗುಂಬೆ ಘಾಟ್‌ನ ಮೂರನೇ ತಿರುವಿನ ರಸ್ತೆ ಬಳಿ ಮೃತದೇಹ ಪತ್ತೆಯಾಗಿದ್ದು ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ. ಕತ್ತು ಹಿಸುಕಿ ಅಥವಾ ಮಾರಕಾಯುಧಗಳಿಂದ ಹೊಡೆದು ಕೊಲೆ ಮಾಡಿರುವ ಶಂಕೆ ಮೂಡಿದೆ.

ಈ ಪ್ರಕರಣದಲ್ಲಿ ಶಿವಪ್ಪ, ಮಂಜುನಾಥ ಪೊಲೀಸ್‌ ವಶದಲ್ಲಿದ್ದು, ದುರ್ಗಾಪ್ಪ ತಲೆ ಮರೆಸಿಕೊಂಡಿರುವುದಾಗಿ ತಿಳಿದು ಬಂದಿದೆ. ಅಪಹರಣ ಹಾಗೂ ಕೊಲೆ ಪ್ರಕರಣ ಹಾಗೂ ಆರೋಪಿಗಳ ಬಂಧನದ ಬಗ್ಗೆ ಪೊಲೀಸ್‌ ಇಲಾಖೆ ಇಲ್ಲಿಯವರೆಗೆ ಯಾವುದೇ ಮಾಹಿತಿಯನ್ನು ಬಿಟ್ಟು ಕೊಟ್ಟಿಲ್ಲದಿರುವುದು ವಿಶೇಷವಾಗಿದೆ.

Continue Reading

Trending

error: Content is protected !!