ಸುಳ್ಯ
ಸುಳ್ಯ – ಕುರುಂಜಿಭಾಗ್ : ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ರಮ ಪ್ರವೇಶಿಸಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗೆ ತಂಡದಿಂದ ಬೆದರಿಕೆ – ಪ್ರಕರಣ ದಾಖಲು

ಸುಳ್ಯ ಪೇಟಯ ಸಮೀಪದ ಕುರುಂಜಿಭಾಗ್ನಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿಗೆ ತಂಡವೊಂದು ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರನ್ನು ಬೆದರಿಸಿರುವುದಾಗಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ ಜ್ಯೋತಿ ಆರ್ ಪ್ರಸಾದ್ (52) ಎಂಬವರು ನೀಡಿದ ದೂರಿನಂತೆ ಐಪಿಸಿ ಕಲಂ 448, 506 ಜೊತೆಗೆ 34 ಯಂತೆ ಪ್ರಕರಣ ದಾಖಲಾಗಿದೆ.
ದೂರುದಾರರ ಬಾವ ಡಾ|| ಚಿದಾನಂದ, ಅವರ ಹೆಂಡತಿ ಶೋಭ ಚಿದಾನಂದ, ಮಗ ಅಕ್ಷಯ್ ಕೆ ಸಿ, ಮಗಳು ಡಾ| ಐಶ್ವರ್ಯ, ಸಂಬಂದಿ ಹೇಮನಾಥ ಕೆ ವಿ, ಜಗದೀಶ್ ಅಡ್ತಲೇ ಮತ್ತು ಅವರ ಇತರ ಸಿಬ್ಬಂದಿಗಳು ಅಕ್ರಮ ಪ್ರವೇಶ ಮಾಡಿದವರೆಂದು ದೂರಿನಲ್ಲಿ ತಿಳಿಸಲಾಗಿದೆ.
ಸೆ 6 ರಂದು ಡಾ ಜ್ಯೋತಿ ಆರ್ ಪ್ರಸಾದ್ ಅವರು ಮಂಗಳೂರಿಗೆ ಹೋಗಿದ್ದು ಈ ವೇಳೆ ಆರೋಪಿಗಳು ಕುರುಂಜಿಭಾಗ್ನಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ರಮ ಪ್ರವೇಶ ಮಾಡಿದ್ದಾರೆ. ಅಲ್ಲಿದ್ದ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರ ಮೊಬೈಲ್ಗಳನ್ನು ಕೇಳಿ ಪಡೆದು, ಸಿ ಸಿ ಕ್ಯಾಮರಗಳ ಮತ್ತು ಇತರ ಮಾಹಿತಿ ಪಡೆದು, ಮೊಬೈಲ್ಗಳನ್ನು ಹಿಂತಿರುಗಿಸಿ, ಬೆದರಿಸಿ ಹೋಗಿರುತ್ತಾರೆ ಎಂದು ಆರೋಪಿಸಿರುವ ಅವರು , ಮಾಹಿತಿ ತಿಳಿದ ತಾನೂ . ತಕ್ಷಣ ಗಾಬರಿಯಾಗಿ ಮಂಗಳೂರಿನಿಂದ ಸುಳ್ಯದ ಸಂಸ್ಥೆಗೆ ಬಂದಿರುವುದಾಗಿ ತಿಳಿಸಿದ್ದಾರೆ
ಸುಳ್ಯ
Kukke subrahmnya Temple ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಗಮನಕ್ಕೆ : ಡಿ.8ರಿಂದ 24ರ ತನಕ ಕ್ಷೇತ್ರದಲ್ಲಿ ಪ್ರಧಾನ ಸೇವೆ ಸಹಿತ ಹಲವು ಸೇವೆಗಳು ಅಲಭ್ಯ, ವ್ಯತ್ಯಯ – ಇಲ್ಲಿದೆ ಮಾಹಿತಿ

ಶ್ರೀ ಕ್ಷೇತ್ರದ ಜಾತ್ರೋತ್ಸವದ ಹಿನ್ನಲೆ ಇಲ್ಲಿನ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪ ಸಂಸ್ಕಾರವು ಡಿ.8ರಿಂದ 24ರ ತನಕ ನೆರವೇರುವುದಿಲ್ಲ. ಇತರ ಸೇವೆಗಳು ಎಂದಿನಂತೆ ನೆರವೇರುತ್ತದೆ. ಲಕ್ಷದೀಪೋತ್ಸವ, ಚೌತಿ, ಪಂಚಮಿ ಮತ್ತು ಷಷ್ಠಿ ದಿನ ಕೆಲವೊಂದು ಸೇವೆಗಳು ನೆರವೇರುವುದಿಲ್ಲ. ಭಕ್ತಾದಿಗಳು ಸಹಕರಿಸಬೇಕು ಎಂದು ದೇವಳದ ಪ್ರಕಟಣೆ ತಿಳಿಸಿದೆ.
ಪ್ರಾರ್ಥನೆ, ಆಶ್ಲೇಷ ಬಲಿ ಸೇವೆಯಲ್ಲಿ ವ್ಯತ್ಯಯ:
ಲಕ್ಷದೀಪೋತ್ಸವ (ಡಿ.12), ಚೌತಿ (ಡಿ.16), ಪಂಚಮಿ (ಡಿ.17) ದಿನದಂದು ರಾತ್ರಿ ಹೊತ್ತಿನಲ್ಲಿ ಪ್ರಾರ್ಥನೆ ಸೇವೆ ಇರುವುದಿಲ್ಲ. ಚಂಪಾಷಷ್ಠಿ (ಡಿ.18) ದಿನದಂದು ಮಧ್ಯಾಹ್ನ ಪ್ರಾರ್ಥನೆ ಸೇವೆ ನಡೆಯುವುದಿಲ್ಲ. ಚಂಪಾಷಷ್ಠಿ ದಿನ ಆಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನೆರವೇರುವುದಿಲ್ಲ.
ಲಕ್ಷದೀಪೋತ್ಸವ (ಡಿ.12), ಚೌತಿ (ಡಿ.16), ಪಂಚಮಿ (ಡಿ.18) ಮತ್ತು ಕೊಪ್ಪರಿಗೆ ಇಳಿಯುವ ದಿನ (ಡಿ.24) ದಂದು ಮಹಾಭಿಷೇಕ ಸೇವೆ ನಡಯುವುದಿಲ್ಲ. ಡಿ.10ರಿಂದ ಡಿ.24ರ ತನಕ ಸಾಯಂಕಾಲದ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ.
Kukke Shri Subrahmanya Temple ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರದಲ್ಲಿ ನಾಳೆ (ಡಿ 9) ಮೂಲ ಮೃತಿಕಾ ಪ್ರಸಾದ ವಿತರಣೆ – ಇಲ್ಲಿದೆ ವರ್ಷಕ್ಕೊಮ್ಮೆ ಮಾತ್ರ ಹುತ್ತದಿಂದ ತೆಗೆಯುವ ಈ ಪ್ರಸಾದದ ಮಹತ್ವ
ಚಂಪಾಷಷ್ಠಿ ಜಾತ್ರೋತ್ಸವವು ಡಿ.10 ರಿಂದ 24ರ ತನಕ ನಡೆಯಲಿದ್ದು, ಜಾತ್ರೋತ್ಸವದ ಪ್ರಧಾನ ದಿನಗಳಾದ ಲಕ್ಷದೀಪ, ಚೌತಿ, ಪಂಚಮಿ ಮತ್ತು ಷಷ್ಠಿಯಂದು ಮಾತ್ರ ಕೆಲವೊಂದು ಸೇವೆಗಳನ್ನು ನೆರವೇರಿಸಲು ಅವಕಾಶಗಳು ಇರುವುದಿಲ್ಲ. ಆದರೆ ಇತರ ದಿನಗಳಲ್ಲಿ ಆಶ್ಲೇಷ ಬಲಿ, ಪಂಚಾಮೃತ ಮಹಾಭಿಷೇಕ, ಶೇಷಸೇವೆ, ಕಾರ್ತಿಕಪೂಜೆ, ಮಹಾಪೂಜೆ, ತುಲಾಭಾರ, ನಾಗಪ್ರತಿಷ್ಠೆ ಮೊದಲಾದುವುಗಳು ಎಂದಿನಂತೆ ನೆರವೇರಲಿದೆ. ಸರ್ಪಸಂಸ್ಕಾರ ಮತ್ತು ಸಂಜೆಯ ಆಶ್ಲೇಷ ಬಲಿ ಸೇವೆಗಳು ಮಾತ್ರ ಡಿ.24ರ ತನಕ ನೆರವೇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.9 ದರುಶನದಲ್ಲಿ ವ್ಯತ್ಯಯ: ಡಿ.9ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯು ಪವಿತ್ರ ಕಾರ್ಯದ ಕಾರಣ ಭಕ್ತಾದಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯ ತನಕ ದೇವರ ದರುಶನ ಹಾಗೂ ಸೇವಾದಿಗಳನ್ನು ನೆರವೇರಿಸಲು ಅವಕಾಶ ಇರುವುದಿಲ್ಲ, 2 ಗಂಟೆಯ ನಂತರ ದೇವರ ದರ್ಶನಕ್ಕೆ ಹಾಗೂ ಆಯ್ದ ಸೇವೆಗಳನ್ನು ನೆರವೇರಿಸಲು ಅವಕಾಶವಿದೆ
ಸುಳ್ಯ
Kukke Shri Subrahmanya Temple ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರದಲ್ಲಿ ನಾಳೆ (ಡಿ 9) ಮೂಲ ಮೃತಿಕಾ ಪ್ರಸಾದ ವಿತರಣೆ – ಇಲ್ಲಿದೆ ವರ್ಷಕ್ಕೊಮ್ಮೆ ಮಾತ್ರ ಹುತ್ತದಿಂದ ತೆಗೆಯುವ ಈ ಪ್ರಸಾದದ ಮಹತ್ವ

Kukke Shri Subrahmanya Temple ಡಿಸೆಂಬರ್ 06; ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ವಾರಾಂತ್ಯದಲ್ಲಿ ದರ್ಶನ ಮತ್ತು ವಿವಿಧ ಸೇವೆಗಳು ಅರ್ಧ ದಿನದ ಕಾಲ ಲಭ್ಯವಿರುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿದೆ.
ದೇವಳದಲ್ಲಿ 2023-24ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಪೂರಕವಾಗಿ ಡಿ.9ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಪವಿತ್ರ ಕಾರ್ಯ ಇರಲಿದೆ. ಈ ಹಿನ್ನಲೆಯಲ್ಲಿ ಆ ದಿನ ಭಕ್ತಾದಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯ ತನಕ ದೇವರ ದರುಶನ ಹಾಗೂ ಸೇವಾದಿಗಳನ್ನು ನೆರವೇರಿಸಲು ಅವಕಾಶ ಇರುವುದಿಲ್ಲ. 2 ಗಂಟೆಯ ನಂತರ ದೇವರ ದರ್ಶನಕ್ಕೆ ಹಾಗೂ ಆಯ್ದ ಸೇವೆಗಳನ್ನು ನೆರವೇರಿಸಲು ಅವಕಾಶವಿದೆ
ಕುಕ್ಕೆ ಸುಬ್ರಮಣ್ಯದಲ್ಲಿ “ಮೂಲಮೃತಿಕಾ” ಪ್ರಸಾದಕ್ಕೆ ಹೆಚ್ಚಿನ ಮಹತ್ವವಿದೆ. ಮೂಲಸ್ಥಾನವಾದ ಕುಕ್ಕೆ ಸುಬ್ರಮಣ್ಯ ದೇವಳದ ಗರ್ಭಗುಡಿಯಿಂದ ತೆಗೆಯುವ ಕ್ಷೇತ್ರದ ಅತ್ಯಂತ ಪವಿತ್ರ ಪ್ರಸಾದ. ಯಾವುದೇ ದೇವಾಲಯದಲ್ಲಿ ಸಹ ಈ ಮಾದರಿ ಪ್ರಸಾದ ಸಿಗುವುದಿಲ್ಲ. ವರ್ಷಕ್ಕೆ ಒಂದು ಬಾರಿ ಮಾತ್ರ ಈ ಪ್ರಸಾದ ತೆಗೆಯಲಾಗುತ್ತದೆ.
ಕ್ಷೇತ್ರದ ಮೂಲಸ್ಥಾನವಾದ ಗರ್ಭಗುಡಿಯಿಂದ ಈ ಮೂಲಮೃತಿಕಾ ಪ್ರಸಾದವನ್ನು ತೆಗೆದು ಭಕ್ತರಿಗೆ ನೀಡಲಾಗುತ್ತದೆ. ಈ ಪ್ರಸಾದವು ರೋಗ ನಿರೋಧಕ ಶಕ್ತಿ ಹೊಂದಿದೆ ಎಂಬುದು ಭಕ್ತರ ನಂಬಿಕೆಯಾಗಿದೆ. ಈ ಮೃತ್ತಿಕೆ ಪ್ರಸಾದ ಸಂತಾನಕಾರಕ, ಚರ್ಮ ರೋಗಗಳ ಪರಿಹಾರಕ್ಕೆ ದಿವ್ಯ ಔಷಧ ಎಂಬುದು ಭಕ್ತರ ನಂಬಿಕೆ. ಮೃತ್ತಿಕಾ ಪ್ರಸಾದವನ್ನು ಶುಭ ಕಾರ್ಯಗಳ ಒಳಿತಿಗೂ, ವ್ಯಾಧಿಗಳ ನಿವಾರಣೆಗೂ ಭಕ್ತರು ಬಳಸುತ್ತಾರೆ.
ಸಾವಿರಾರು ಭಕ್ತರು ಮೂಲಮೃತಿಕಾ ಪ್ರಸಾದವನ್ನು ತೆಗೆದುಕೊಂಡು ಹೋಗಲು ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ಆಗಮಿಸುತ್ತಾರೆ. ಶುಭ ಕಾರ್ಯಗಳ ಸಂದರ್ಭದಲ್ಲಿ, ರೋಗಗಳ ನಿವಾರಣೆಗೆ ಸಹ ಈ ಪ್ರಸಾದವನ್ನು ಬಳಕೆ ಮಾಡುತ್ತಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ರಾಜ್ಯದ ಸುಬ್ರಹ್ಮಣ್ಯಂ ಗ್ರಾಮದಲ್ಲಿ ಬರುತ್ತದೆ. ಪ್ರಕೃತಿಯ ಸೌಂದರ್ಯದಲ್ಲಿ ನೆಲೆಸಿರುವ ಈ ಭವ್ಯವಾದ ದೇವಾಲಯವು ಗ್ರಾಮದ ಹೃದಯಭಾಗದಲ್ಲಿದೆ. ಪ್ರಕೃತಿ ನದಿಗಳು, ಕಾಡುಗಳು ಮತ್ತು ಪರ್ವತಗಳಿಂದ ಸುತ್ತುವರೆದಿರುವ ಈ ದೇವಾಲಯವು ತನ್ನ ಅನನ್ಯ ಸೌಂದರ್ಯವನ್ನು ಬಹಿರಂಗಪಡಿಸುತ್ತದೆ .ಪ್ರತಿನಿತ್ಯ ನೂರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ವಾರಾಂತ್ಯ, ಸರ್ಕಾರಿ ರಜೆ ದಿನಗಳಲ್ಲಿ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ.
ಸುಳ್ಯ
Arecanut Yellow leaf diseases ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದತ್ತ ಮಹತ್ವದ ಹೆಜ್ಜೆ – ಸಂಪಾಜೆಯಲ್ಲಿ ಇಂದೋರ್ ಕಂಪೆನಿಯ ಔಷಧಿ ಪ್ರಯೋಗಕ್ಕೆ ಆರಂಭಿಕ ಗೆಲುವು – ರೋಗವಿದ್ದ ಪ್ರದೇಶದಲ್ಲಿ ನಳನಳಿಸುತ್ತಿದೆ ಫಸಲು

Arecanut Yellow leaf diseases Remedy ಕರಾವಳಿ ಕರ್ನಾಟಕದ ಜೀವನಾಡಿ, ಇಲ್ಲಿನ ಬದುಕಿನ ಆಧಾರ ಸ್ಥಂಭ ಎನಿಸಿಕೊಂಡಿರುವ ಅಡಿಕೆಗೆ (Arecanut) ಕಂಟಕವಾಗಿ ಪರಿಣಮಿಸಿರುವ ಹಳದಿ ಎಲೆ ರೋಗ (Yellow leaf diseases) ಮೊತ್ತ ಮೊದಲ ಬಾರಿ ಈ ಭಾಗದಲ್ಲಿ ಕಾಣಿಸಿಕೊಂಡದ್ದು ಸುಳ್ಯ ತಾಲೂಕಿನ ಸಂಪಾಜೆಯಲ್ಲಿ (Sampaje). ಪಶ್ಚಿಮ ಘಟ್ಟದ ಅಂಚಿನಲ್ಲಿರುವ ದ.ಕ ಹಾಗು ಕೊಡಗು ಜಿಲ್ಲೆಯ ಗಡಿ ಭಾಗವಾದ ಸಂಪಾಜೆಯಲ್ಲಿ ಈ ರೋಗ ಕಾಣಿಸಿಕೊಂಡು ಸರಿ ಸುಮಾರು ಅರ್ಧ ಶತಮಾನವಾಗುತ್ತ ಬಂದಿದೆ. ಬಳಿಕದ ದಿನಗಳಲ್ಲಿ ಇದು ಇತರ ಭಾಗಗಳಿಗೂ ನಿಧಾನವಾಗಿ ಪಸರಿಸಲು ಆರಂಭಿಸಿದ್ದು ಪೂರ್ತಿ ಸುಳ್ಯ ತಾಲೂಕನ್ನು ಅಕ್ರಮಿಸಿತ್ತು ಹಾಗೂ ಇತ್ತೀಚಿನ ವರ್ಷಗಳಲ್ಲಿ ಇದು ಇನ್ನಷ್ಟು ವ್ಯಾಪಿಸಿ ಅಕ್ಕ ಪಕ್ಕದ ತಾಲೂಕುಗಳಾದ ಕಡಬ ಬೆಳ್ತಂಗಡಿ ಹಾಗು ಪುತ್ತೂರು ತಾಲೂಕಿಗೂ ಪಸರಿಸಿದೆ. ಪ್ರಸ್ತುತ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ ಸಾವಿರಾರು ಎಕರೆ ಅಡಿಕೆ ತೋಟಗಳಿಗೆ ಹಳದಿ ಎಲೆ ರೋಗ ಬಂದಿದೆ.
ಅಡಿಕೆ ಕೃಷಿಗೆ ಬೆನ್ನು ಹಾಕಿದ ರೈತರು
ಸಂಪಾಜೆ ಅಸುಪಾಸಿನಲ್ಲಿ ಹಳದಿ ರೋಗದ ಹಾವಳಿ ಹೇಗಿತು ಎಂದರೆ ಬಹುತೇಕ ತೋಟಗಳು ಈ ರೋಗದಿಂದ ನಾಶವಾಗಿ ಹೋಯಿತ್ತು. ಉಳಿದ ಅಲ್ಪ ತೋಟದಲ್ಲೂ ಫಸಲು ಇಲ್ಲ. ಹಳದಿ ರೋಗ ಭಾದಿತ ಗಿಡಗಳನ್ನು ಕಡಿದು ತೆಗೆದು ಅಲ್ಲಿ ಹೊಸತಾಗಿ ಅಡಿಕೆ ಕೃಷಿ ಮಾಡಿದರೂ ಮತ್ತೆ ಆ ಮರಗಳನ್ನು ಹಳದಿ ರೋಗ ಬೆಂಬಿಡದೆ ಕಾಡುತಿತ್ತು. ಹೀಗಾಗಿ ಅಡಿಕೆಯ ಕೃಷಿಯ ಸಹವಾಸವೇ ಬೇಡ ಎಂದು ಆ ಭಾಗದ ರೈತರು ಬೇರೆ ಕೃಷಿಯತ್ತ ಮುಖ ಮಾಡಿದರು.
ವಿಫಲ ಪ್ರಯತ್ನಗಳು
ಈ ರೋಗ ನಿಯಂತ್ರಣಕ್ಕೆ ತೋಟಗಾರಿಕೆ, ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಕೇಂದ್ರ (ಸಿಪಿಸಿಆರ್ಐ) ಸೇರಿದಂತೆ ಕೃಷಿಕರ ಸಂಘಟನೆಗಳೂ ಸಾಕಷ್ಟು ಪ್ರಯತ್ನ ನಡೆಸಿವೆಯಾದರು ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ. ಹಲವು ಕಂಪೆನಿಗಳು ಹಾಗೂ ಸರಕಾರದ ಇಲಾಖೆಗಳು ವಿವಿಧ ನಮೂನೆಯ ಪರಿಹಾರೋಪಾಯಗಳನ್ನು ಔಷಧಿಗಳನ್ನು ನೀಡಿತಾದರೂ ಅದರಿಂದ ಕೃಷಿಕರಿಗೆ ಲಾಭಕ್ಕಿಂತ ನಷ್ಟವಾದದ್ದೆ ಹೆಚ್ಚು. ರೋಗ ನಿಯಂತ್ರಣಕ್ಕೂ ಬಂದಿಲ್ಲ. ಈಗ ಈ ರೋಗ ಕರಾವಳಿ ಮಲೆನಾಡಿಗೂ ಹಬ್ಬಿದ್ದು , ಅಲ್ಲಿನ ರೋಗ ಬಾಧಿತ ತೋಟದ ಪರಿಸ್ಥಿತಿ ಇಲ್ಲಿನದಕ್ಕಿಂತ ಭಿನ್ನವಾಗಿಲ್ಲ. ಕೆಲವು ಔಷಧಿ ಕಂಪೆನಿಗಳಂತೂ ರೈತರ ಅಸಹಾಯಕತೆಯನ್ನು ಬಳಸಿಕೊಂಡು ಲಾಭ ಮಾಡಿಕೊಂಡದ್ದು ಇದೆ. ಇನ್ನು ರಾಜಕಾರಣಿಗಳು ಚುನಾವಣೆಯ ಸಂದರ್ಭ ಮತಗಳಿಕೆಗೆ ಇದನ್ನು ಸಾಧನವಾಗಿಸಿದ್ದು ಬಿಟ್ರೆ ರೈತರಿಗೆ ಅವರಿಂದ ದೊಡ್ಡ ಲಾಭವಾಗಿಲ್ಲ.

ಆಶಾಕಿರಣ
ಆದರೆ ಈಗ ಕಾಲ ಚಕ್ರ ಒಂದು ಸುತ್ತು ತಿರುಗಿದಂತೆ ಕಾಣುತ್ತಿದೆ. ಮೊದಲ ಬಾರಿ ಹಳದಿ ರೋಗಕ್ಕೆ ತುತ್ತಾದ ಸಂಪಾಜೆಯಲ್ಲೆ ಈ ರೋಗಕ್ಕೆ ಶಾಶ್ವತ ಪರಿಹಾರದ ಆಶಾಕಿರಣವೊಂದು ಕಾಣಿಸಿದೆ. ಇಂದೋರ್ನಲ್ಲಿ ಸ್ವಂತ ರಾಸಾಯನಿಕ ಗೊಬ್ಬರದ ಘಟಕ ನಿರ್ವಹಿಸುತ್ತಿರುವ ( ಶ್ರೀ ಸಿದ್ದಿ ಎಗ್ರಿ ಕೆಮಿಕಲ್ ಪ್ರೈವೇಟ್ ಲಿಮಿಟೆಡ್, ಇಂದೋರ್) ದ.ಕ. ಮೂಲದ ಕೃಷಿ ಉದ್ಯಮಿ ಪಿ.ಎನ್.ಭಟ್ ಪೆರುವೊಡಿ ಈ ರೋಗದ ಕುರಿತಾಗಿ ಸ್ವತ: ಸಂಶೋಧನೆ ನಡೆಸಿದ್ದು, ಅದನ್ನು ತನ್ನ ಸಹೋದರ ಸಂಪಾಜೆ ಗ್ರಾಮದ ಪೆರುವೊಡಿ ಸತ್ಯನಾರಾಯಣ ಭಟ್ ಹಾಗೂ ಜೇಡ್ಲ ಶ್ರೀಧರ ಭಟ್ ರವರ ಹಳದಿ ಎಲೆ ರೋಗ ಪೀಡಿತ ಅಡಕೆ ತೋಟದಲ್ಲಿ ಪ್ರಾಯೋಗಿಕವಾಗಿ ಬಳಸಿದ್ದಾರೆ. ಕಳೆದೊಂದು ವರ್ಷದಿಂದ ಸಂಪಾಜೆಯ ಈ ಆಯ್ದ ತೊಟಗಳಲ್ಲಿ ಪ್ರಯೋಗ ಚಾಲ್ತಿಯಲ್ಲಿದ್ದು ನಿರೀಕ್ಷಿತ ಯಶಸ್ಸು ಸಿಕ್ಕಿದೆ. ಹಾಗಾಗಿಯೂ ಪ್ರಯೋಗ ಆರಂಭಿಕ ಹಂತದಲ್ಲಿದ್ದು ಎರಡು ವರ್ಷಗಳ ಕಾಲ ಇದೇ ಔಷಧಿಯನ್ನು ಬಳಸಿ ನೋಡಿದ ಬಳಿಕ ಇನ್ನಷ್ಟು ಖಚಿತತೆ ಸಿಗಬಹುದು.

ಮಣ್ಣಿನ ಸ್ಯಾಂಪಲ್ ಪರೀಕ್ಷೆ
ಪಿ.ಎನ್.ಭಟ್ ಅವರು ಮೊದಲಿಗೆ ಪೆರುವೊಡಿ ಸತ್ಯನಾರಾಯಣ ಭಟ್ ಹಾಗೂ ಜೇಡ್ಲ ಶ್ರೀಧರ ಭಟ್ ರವರ ತೋಟದ ಮಣ್ಣಿನ ಸ್ಯಾಂಪಲ್ ಪಡೆದು ಇಂದೋರ್ನ ತನ್ನ ಘಟಕದಲ್ಲಿ ಪರೀಕ್ಷೆ ನಡೆಸಿದ್ದಾರೆ. 90ರ ದಶಕದ ಕೊನೆಯಲ್ಲಿ ಈ ಎರಡು ತೋಟಗಳು ಹಳದಿ ರೋಗಕ್ಕೆ ತುತ್ತಾಗಿತ್ತು. ಸರಿ ಸುಮಾರು 150 ಕ್ವಿಂಟ್ವಾಲ್ ಅಡಿಕೆ ಫಸಲು ಬರುತ್ತಿದ್ದ ತೋಟ ಬರುಬರುತ್ತಾ ಶೂನ್ಯ ಫಸಲಿನತ್ತ ಸಾಗಿತ್ತು. ಜೇಡ್ಲ ಶ್ರೀಧರ ಭಟ್ ರವರು 2015ರಲ್ಲಿ ಅದೇ ಜಾಗದಲ್ಲಿ ಹೊಸ ತೋಟಕ್ಕೆ ತಯಾರಿ ನಡೆಸಿದ್ದು, 2017ರಲ್ಲಿ 400 ಅಡಿಕೆ ಸಸಿಗಳನ್ನು ಅಲ್ಲಿ ನೆಟ್ಟಿದ್ದರು. ಇದರಲ್ಲೂ ವರ್ಷಗಳ ಹಿಂದೆ 4-5 ಗಿಡಗಳ ಸೋಗೆ ಹಳದಿ ಬಣ್ಣಕ್ಕೆ ತಿರುಗಿದಂತೆ ಕಂಡು ಬಂದಿತ್ತು. ಅದು ಹಳದಿ ರೋಗವಾಗಿರಬಹುದು ಎಂಬ ಶಂಕೆ ನನ್ನಲ್ಲಿತ್ತು ಎನ್ನುತ್ತಾರೆ ಶ್ರೀಧರ ಭಟ್.

2 ವರ್ಷ ಬೇಕು
ಇಂದೋರ್ ನಲ್ಲಿ ನಡೆಸಿದ ಪರೀಕ್ಷೆ ವೇಳೆ ಹಳದಿ ಎಲೆರೋಗ ಪೀಡಿತ ಅಡಕೆ ತೋಟಗಳ ಮಣ್ಣಿನಲ್ಲಿ ಮೆಗ್ನೆಶಿಯಂ, ಕ್ಯಾಲ್ಸಿಯಂ ಹಾಗೂ ಪೊಟಾಷ್ ಅಂಶ ಗಣನಿಯ ಪ್ರಮಾಣದಲ್ಲಿ ಕೊರತೆ ಇರುವುದು ಕಂಡುಬಂದಿದೆ. ಇದನ್ನು ಹೋಗಲಾಡಿಸಲು ತಾವೇ ತಯಾರಿಸಿದ ರಾಸಾಯನಿಕ ಔಷಧವನ್ನು ಪಿಎನ್ ಭಟ್ ಅವರು ಈ ಇಬ್ಬರು ರೈತರಿಗೆ ನೀಡಿದ್ದಾರೆ. ಅವರ ಸಲಹೆಯಂತೆ ಕಳೆದ ಡಿಸೆಂಬರ್ನಿಂದ ಪ್ರತಿ ತಿಂಗಳು ಈ ಔಷಧ ಸಿಂಪರಣೆ ಮಾಡಿ ಹಳದಿ ಎಲೆ ರೋಗದಿಂದ ಶ್ರೀಧರ ಭಟ್ ಹಾಗೂ ಸತ್ಯನಾರಾಯಣ ಭಟ್ ಮುಕ್ತಿ ಪಡೆದಿದ್ದಾರೆ. ಸದ್ಯ ಇವರ ತೋಟಗಳು ಹಸಿರಿನಿಂದ ಕಂಗೋಳಿಸುತ್ತಿದ್ದು, ಹಳದಿ ಎಲೆ ರೋಗವಿದ್ದ ಪ್ರದೇಶದಲ್ಲಿ ಫಸಲು ನಳನಳಿಸುತ್ತಿದೆ. ಆದರೇ ಇನ್ನೂ 2 ವರ್ಷ ಬಳಸಿ ನೋಡಿದಾಗ ಮಾತ್ರ ಸಂಪೂರ್ಣ ಫಲಿತಾಂಶ ಸಿಗಬಹುದು. ಈ ರೋಗ ಭಾದಿತ ತೋಟದ ರೈತರು ಕೃಷಿಯ ಬಗ್ಗೆ ನಂಬಿಕೆ ಕಳಕೊಂಡಿದ್ದು ಅವರಿಗೆ ಈ ಬೆಳವಣಿಗೆ ಚೇತೊಹರಿ ಎನಿಸಿದೆ.
ಇಂದೋರ್ನ ಈ ರಸಗೊಬ್ಬರ ಕಂಪನಿ ಅಲ್ಪಕಾಲಿಕ ಬೆಳೆಗಳಾದ ಟೊಮೆಟೋ, ಖರ್ಜೂರ ಮುಂತಾದ ಬೆಳೆಗಳಲ್ಲಿ ಕಾಡುವ ಹಳದಿ ಎಲೆ ರೋಗಕ್ಕೆ ಈ ಹಿಂದೆ ಔಷಧ ಒದಗಿಸಿ ಯಶಸ್ಸು ಕಂಡಿತ್ತು. ಹೀಗಾಗಿ ದೀರ್ಘಕಾಲಿಕ ಬೆಳೆಯಾದ ಅಡಕೆ ಮರದ ಮೇಲೂ ಪ್ರಯೋಗ ನಡೆಸಲು ಮುಂದಾಯಿತು. ಪ್ರಸಕ್ತ ಈ ಪ್ರಯೋಗವನ್ನು ಇತರೆ ರೋಗಪೀಡಿತ ತೋಟಗಳಿಗೂ ವಿಸ್ತರಿಸಲಾಗಿದೆ.
ಹಳದಿ ರೋಗದ ಲಕ್ಷಣಗಳು ಮರದ ಕಾಂಡದ ಗಾತ್ರ ಕುಗ್ಗುವುದು, ಗರಿಗಳ ಬೆಳವಣಿಗೆ ಕುಂಠಿತವಾಗುತ್ತವೆ ನಂತರ ಹಳದಿಯಾಗಿ ತುದಿಯಿಂದ ಒಣಗುವುದು, ಬೇರು ಭಾಗ ಕೊಳೆಯುವುದು, ಎಲೆಗಳು ಬೆಳೆಯದೆ ಸಂಪೂರ್ಣ ಹಳದಿ ಬಣ್ಣಕ್ಕೆ ತಿರುಗಿ ಸುಳಿ ಮುರಿದು ಬೀಳುವುದು, ವಿಶೇಷವಾಗಿ ಕಾಯಿ ಬಲಿಯುವ ಸಮಯದಲ್ಲಿ ಗಾತ್ರದಲ್ಲಿ ಏರುಪೇರಾಗುವುದು, ಕಾಯಿಯ ಒಳಗಡೆ ಕಪ್ಪಾಗಿ ಅಂಟಿನಿಂದ ಕೂಡುವುದು ನಂತರ ಕಾಯಿಗಳು ಉದುರಿಹೋಗುವುದು. ಈ ವೇಳೆ ಮರಗಳನ್ನು ಸರಿಯಾಗಿ ಆರೈಕೆ ಮಾಡದಿದ್ದಾರೆ ಮರಗಳು ಸತ್ತು ಹೋಗುತ್ತವೆ.
ಹಳದಿ ಎಲೆರೋಗಕ್ಕೆ ಔಷಧ ಸಿಂಪರಣೆ ಮೊದಲು ಕಡ್ಡಾಯ ಮಣ್ಣು ಪರೀಕ್ಷೆ ಮಾಡಿಸಬೇಕು. ನನ್ನಲ್ಲಿ ವಿವಿಧ ಬಗೆಯ ಪೋಷಕಾಂಶಯುಕ್ತ ಔಷಧ ಸಿಂಪರಣೆಯಿಂದ ಹಳದಿ ಎಲೆರೋಗ ನಿಯಂತ್ರಣ ಸಾಧ್ಯವಾಗಿದೆ. ಈ ಮಾದರಿ ಹಳದಿ ಎಲೆರೋಗ ಪೀಡಿತ ತೋಟಗಳಲ್ಲಿ ಬಳಕೆಯಾದರೆ ಎಲ್ಲ ಬೆಳೆಗಾರರಿಗೂ ಉಪಯುಕ್ತವಾಗಲಿದೆ
ಶ್ರೀಧರ ಭಟ್ ಜೇಡ್ಲ, ಸಂಪಾಜೆ, ಅಡಕೆ ಬೆಳೆಗಾರ
-
ರಾಷ್ಟ್ರೀಯ2 days ago
Divorce under Hindu Marriage Act : ಹಿಂದು ವಿವಾಹ ಕಾಯ್ದೆಯಡಿ ವಿಚ್ಛೇದನ ಪಡೆಯಲು ʼಈʼ ನಿಯಮ ಪಾಲನೆ ಕಡ್ಡಾಯ – ಕೊರ್ಟು ಮಹತ್ವದ ಆದೇಶ ; ಏನದು ನಿಯಮ ?
-
ಅಪರಾಧ2 days ago
Dowry Harasment: ʼಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಡೆತ್ ನೋಟ್ ಬರೆದಿಟ್ಟು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಯುವ ವೈದ್ಯೆ ಆತ್ಮಹತ್ಯೆ – ಅಷ್ಟಕ್ಕೂ ವರನ ಮನೆಯವರು ಇಟ್ಟ ಡಿಮ್ಯಾಂಡ್ ಎಷ್ಟು ಗೊತ್ತೆ ?
-
ಸುಳ್ಯ2 days ago
Arecanut Yellow leaf diseases ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದತ್ತ ಮಹತ್ವದ ಹೆಜ್ಜೆ – ಸಂಪಾಜೆಯಲ್ಲಿ ಇಂದೋರ್ ಕಂಪೆನಿಯ ಔಷಧಿ ಪ್ರಯೋಗಕ್ಕೆ ಆರಂಭಿಕ ಗೆಲುವು – ರೋಗವಿದ್ದ ಪ್ರದೇಶದಲ್ಲಿ ನಳನಳಿಸುತ್ತಿದೆ ಫಸಲು
-
ಮಂಗಳೂರು2 days ago
ಕುಡುಪು ಷಷ್ಟಿ ಮಹೋತ್ಸವ ಜಾತ್ರೆ – ಸಂತೆ ವ್ಯಾಪಾರದಲ್ಲಿ ಹಿಂದೂಯೇತರರಿಗಿಲ್ಲ ಅವಕಾಶ: ವ್ಯಾಪಾರಿಗಳ ಸಮನ್ವಯ ಸಮಿತಿ ಆಕ್ರೋಶ – ದೇವಸ್ಥಾನದ EOರಿಂದ ತಿರುಗೇಟು – ಕರಾವಳಿಯಲ್ಲಿ ನಿಲ್ಲೋದಿಲ್ವಾ ಧರ್ಮ ದಂಗಲ್ ?
-
ರಾಷ್ಟ್ರೀಯ2 days ago
Pancard latest update : ಪ್ಯಾನ್ ಕಾರ್ಡ್ ಕುರಿತು ಮಹತ್ವದ ಮಾಹಿತಿ – ಈ ತಪ್ಪು ಮಾಡಿದರೆ 10,000 ರೂ ದಂಡ ಗ್ಯಾರಂಟಿ
-
ಮಂಗಳೂರು24 hours ago
Interfaith Marriage ಮಂಗಳೂರು : ಭಿನ್ನಕೋಮಿನ ಜೋಡಿ ವಿವಾಹ?
-
ಬಿಗ್ ನ್ಯೂಸ್1 day ago
Bride refuses Marriage in hall ತಾಳಿ ಕಟ್ಟುವ ವೇಳೆ ವರನ ಕೈಗೆ ಅಡ್ಡ ಹಿಡಿದು ಸಿನಿಮೀಯ ಶೈಲಿಯಲ್ಲಿ ಮದುವೆ ನಿರಾಕರಿಸಿದ ವಧು
-
ಸಿನೆಮಾ2 days ago
Pooja gandhi : ಕುವೆಂಪು ಪರಿಕಲ್ಪನೆಯ ’ಮಂತ್ರ ಮಾಂಗಲ್ಯ’ ಪದ್ದತಿಯಲ್ಲಿ ವಿವಾಹವಾದ ಪೂಜಾ ಗಾಂದಿ ದಂಪತಿಯಿಂದ ಕವಿ ಶೈಲ ಭೇಟಿ – ಹುಟ್ಟಿದ್ದು ಪಂಜಾಬಿನಲ್ಲಾದರೂ ಕನ್ನಡದ ಬಗೆಗಿನ ನಟಿಯ ಪ್ರೀತಿಗೆ ವ್ಯಾಪಕ ಮೆಚ್ಚುಗೆ