ಮನರಂಜನೆ
Pradeep Eshwar | Big Boss ಮನೆಗೆ ಎಂಟ್ರಿ ಕೊಟ್ಟ ಮೊದಲ ಶಾಸಕ ಪ್ರದೀಪ್ ಈಶ್ವರ್ : ಬಿಜೆಪಿ ವಿರೋಧ

ಬೆಂಗಳೂರು: ಇತ್ತ ರಾಜ್ಯ ರಾಜಕೀಯದಲ್ಲಿ ಅನೇಕ ಬದಲಾವಣೆಗಳು, ಬೆಳವಣಿಗೆಗಳು ನಡೆಯುತ್ತಿದ್ದರೆ, ಇತ್ತ ಚಿಕ್ಕಬಳ್ಳಾಪುರದಲ್ಲಿ ಸದಾ ಒಂದಿಲ್ಲೊಂದು ರೀತಿಯಲ್ಲಿ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಸುದ್ದಿಯಲ್ಲಿರುತ್ತಾರೆ. ಆಗಾಗ ಕ್ಷೇತ್ರ ಸಂಚಾರ ಮಾಡುವ ಮೂಲಕ ಸುದ್ದಿಯಲ್ಲಿರುವ ಅವರು, ಈಗ ಕನ್ನಡ ಬಿಗ್ ಬಾಸ್ ಸೀಸನ್ 10ರಲ್ಲಿ (Bigg Boss Kannada Season 10) ಬಂಧಿಯಾಗಿದ್ದಾರೆ. ಹೌದು… ಡಾ ಸುಧಾಕರ್ ಅವರನ್ನು ಮಣಿಸಿ ಭಾರೀ ಸದ್ದು ಮಾಡಿರುವ ಪ್ರದೀಶ್ ಈಶ್ವರಪ್ಪ ಚಿಕ್ಕಬಳ್ಳಾಪುರದಲ್ಲಿ ಮನೆ-ಮನೆ ತೆರಳಿ ಜನರ ಕಷ್ಟ, ಸಮಸ್ಯೆಗಳನ್ನು ಆಲಿಸಿದ್ದರು. ಆದ್ರೆ, ಇದೀಗ ಅವರು ಬಿಗ್ ಬಾಸ್ ರಿಯಾಲಿಟಿ ಶೋಗೆ ಹೋಗಿದ್ದಾರೆ.
ಜನಪ್ರತಿನಿಧಿಯೊಬ್ಬರು ರಿಯಾಲಿಟಿ ಶೋಗೆ ಹೋಗಿರುವುದು ಕರ್ನಾಟಕದಲ್ಲಿ ಇವರೇ ಮೊದಲಿಗರು. ಈ ವಿಷಯ ಏನು ಅಂದ್ರೆ ತಿಂಗಳಾನುಗಟ್ಟಲೇ ಬಿಗ್ ಬಾಸ್ ಮನೆಯಲ್ಲಿದ್ದರೆ ಇತ್ತ ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಗತಿ ಏನು? ಕ್ಷೇತ್ರದಲ್ಲಿ ಜನರ ಸಮಸ್ಯೆ ಕೇಳುವವರು ಯಾರು? ಎನ್ನುವ ಪ್ರಶ್ನೆಗಳು, ಚರ್ಚೆಗಳು ಶುರುವಾಗಿವೆ.
ಯಾಕಂದ್ರೆ ಬಿಗ್ ಬಾಸ್ ಮನೆಗೆ ಹೋದವರು ಆಚೆ ಯಾವಾಗ ಬರುತ್ತಾರೋ ಎನ್ನುವುದು ಖಚಿತತೆ ಇಲ್ಲ. ತಿಂಗಳಾನುಗಟ್ಟಲ್ಲೇ ಆಗಬಹುದು. ರಿಯಾಲಿಟಿ ಶೋ ಮುಗಿಸಿಕೊಂಡು ವಾಪಸ್ ಕ್ಷೇತ್ರಕ್ಕೆ ಬರುವುದಿದ್ದರೆ ಏನು ಸಮಸ್ಯೆ ಇರಲಿಲ್ಲ. ಆದ್ರೆ, ಒಮ್ಮೆ ಬಿಗ್ ಬಾಸ್ ಮನೆಯೊಳಗೆ ಸೇರಿದರೆ ಆಚೆ ಬರುವುದೇ ಎಲಿಮಿನೇಷನ್ ಆದ ಮೇಲೆ. ಇಲ್ಲದಿದ್ದರೆ ಹಾಗೇ ಬಿಗ್ ಬಾಸ್ ಮನೆಯಲ್ಲಿ ಇರಲೇ ಬೇಕಾಗುತ್ತಾದೆ. ಹೀಗೆ ತಿಂಗಳಾನುಗಟ್ಟಲೇ ಹೋದರೆ ಇತ್ತ ಕ್ಷೇತ್ರದ ಗತಿ ಏನು? ಎನ್ನುವ ಪ್ರಶ್ನೆಗಳು ಸಾರ್ವಜನಿಕರ ವಲಯದಲ್ಲಿ ಹುಟ್ಟುಕೊಂಡಿವೆ.
ಈಗಾಗಲೇ ಮಳೆ ಇಲ್ಲದೇ ರೈತರು ಸಂಕಷ್ಟ ಸಿಲುಕಿದ್ದಾರೆ. ಮತ್ತೊಂದೆಡೆ ಬರ ವೀಕ್ಷಣೆಗೆಂದು ಕೇಂದ್ರ ತಂಡ ಪರಿಶೀಲನೆಗೆಂದು ರಾಜ್ಯಕ್ಕೆ ಆಗಮಿಸಿದೆ. ಇವೆಲ್ಲವುಗಳ ಮಧ್ಯೆ ಪ್ರದೀಪ್ ಈಶ್ವರ್ ಬಿಗ್ ಬಾಸ್ ರಿಯಾಲಿಟಿ ಶೋಗೆ ಹೋಗಿರುವುದು ಎಷ್ಟು ಸರಿಯೇ? ಎನ್ನುವ ಚರ್ಚೆಗಳು ಶುರುವಾಗಿವೆ. ಅಲ್ಲದೇ ಪ್ರದೀಪ್ ಈಶ್ವರ್ ನಡೆಗೆ ವಿರೋಧ ಪಕ್ಷಗಳ ನಾಯಕರು ತರಾಟೆಗೆ ತೆಗೆದುಕೊಂಡಿದ್ದಾರೆ.
ಡಾ ಕೆ ಸುಧಾಕರ್ ಹೇಳಿದ್ದೇನು?
ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಗೆ ಹೋಗಿರುವ ಬಗ್ಗೆ ಎದುರಾಳಿ ಅಭ್ಯರ್ಥಿಯಾಗಿದ್ದ ಡಾ ಕೆ ಸುಧಾಕರ್ ಪ್ರತಿಕ್ರಿಯಿಸಿ, ಶಾಸಕರ ನಡೆ ನಗೆಪಾಟಲಿಗೆ ಈಡಾಗುವಂತೆ ಮಾಡಿದೆ. ರಾಜ್ಯ ದೇಶದಲ್ಲಿ ಯಾವುದೇ ಶಾಸಕರು ಈ ರೀತಿ ಮಾಡಿಲ್ಲ. ಜಿಲ್ಲೆಯಲ್ಲಿ ತೀವ್ರ ಬರ ಇದರೂ ಸಹ ಶಾಸಕರು ಬಿಗ್ ಬಾಸ್ ಗೆ ಹೋಗಿದ್ದಾರೆ ಎಂದು ಕಿಡಿಕಾರಿದರು.
ಒಟ್ಟಿನಲ್ಲಿ ಇದುವರೆಗೂ ಕರ್ನಾಟಕದ ಜನಪ್ರತಿನಿಧಿಯೊಬ್ಬರು ಒಂದು ರಿಯಾಲಿಟಿ ಶೋಗೆ ಹೋಗಿರುವ ಉದಾಹರಣೆಗಳಿಲ್ಲ. ಇದೀಗ ಪ್ರದೀಶ್ ಈಶ್ವರ್ ಎಂಟ್ರಿಕೊಟ್ಟಿದ್ದಾರೆ.
ಸಾಮಾಜಿಕ ಮಾಧ್ಯಮ
Dasara Elephant Arjun Dies ಅರ್ಜುನ ಸಾವಿನ ಸುತ್ತ ಹಲವು ಅನುಮಾನ – ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ – ಅದರಲ್ಲಿದೆ ಗುಂಡೇಟಿನ ವಿಚಾರ

ಹಾಸನ: ನಾಡಿಗೆ ಬಂದ ಕಾಡಾನೆಗಳ ಪಂಡಾಟವನ್ನು ಹತ್ತಿಕ್ಕಲು ನಡೆಸುವ ಕಾರ್ಯಚರಣೆಯಲ್ಲಿ ಸದಾ ಮುಂದಿರುತ್ತಿದ್ದ ಸಾಕಾನೆ ಅರ್ಜುನ ನಿನ್ನೆ ಹೋರಾಡುತ್ತಲೇ ಜೀವ ಕಳೆದುಕೊಂಡಿದ್ದಾನೆ . ಆದರೇ ಆತನ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಅರ್ಜುನ ಮೃತಪಟ್ಟ ಕಾರ್ಯಚರಣೆಯಲ್ಲಿ ಪಾಲ್ಗೊಂಡ ಮಾವುತರೊಬ್ಬರು ನೀಡಿದ ಹೇಳಿಕೆ ಈ ಅನುಮಾನಗಳ ಸೃಷ್ಟಿಗೆ ಕಾರಣವಾಗಿದೆ.
ನಾಡ ಹಬ್ಬ ಮೈಸೂರು ದಸಾರ ಸಂದರ್ಭ ತನ್ನ ಭುಜದ ಮೇಲೆ ನಾಡ ದೇವಿ ಚಾಮುಂಡೇಶ್ವರಿಯ ಅಂಬಾರಿಯನ್ನು ಹೊತ್ತ ಅರ್ಜುನ ಸಾವಿಗೆ ಗುಂಡೇಟು ಕಾರಣ ಎಂಬ ಅನುಮಾನವನ್ನು ಆ ಮಾವುತ ವ್ಯಕ್ತಪಡಿಸಿರುವ ಆಡಿಯೋ ವೊಂದು ಇದೀಗ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗಿದೆ.
ಅರಣ್ಯ ಇಲಾಖೆ ನೀಡಿರುವ ಅಧಿಕೃತ ಹೇಳಿಕೆ ಪ್ರಕಾರ, ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನನಿಗೆ ಒಂಟಿ ಸಲಗವೊಂದು ಕಿಬ್ಬೊಟ್ಟೆಗೆ ತಿವಿದಿದೆ. ಈ ಗಾಯದಿಂದಾಗಿ ಅರ್ಜುನ ಅಸುನೀಗಿದ್ದಾನೆ. ಆದರೇ ವೈರಲ್ ಆಡಿಯೋದ ಪ್ರಕಾರ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ ಮಾಡಿದಾಗ ತಪ್ಪಿಸಿಕೊಳ್ಳಲು ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಗುಂಡು ಹಾರಿಸಿದಾಗ ಅದು ಅರ್ಜುನನ ಕಾಲಿಗೆ ತಗುಲಿದೆ ಕಾಲಿಗೆ ಗುಂಡು ಬಿದ್ದ ನಂತರ ಅರ್ಜುನನಿಗೆ ನಡೆದಾಡಲು ಆಗಲಿಲ್ಲ. ಇದೇ ವೇಳೆ ಕಾಡಾನೆ ದಾಳಿ ಮಾಡಿದ್ದರಿಂದ ಸಾವಾಗಿದೆ. ಸ್ಥಳೀಯರೊಬ್ಬರು ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ ಆಗಿದೆ
ವೈರಲ್ ವಿಡಿಯೋದಲ್ಲಿ ಏನಿದೆ
ಅರ್ಜುನ ಆನೆ ಮೊದಲ ಬಾರಿಗೆ ಕಾಡಾನೆ ಮೇಲೆ ದಾಳಿ ಮಾಡಿತು. ಆಗ ಅರಣ್ಯ ಇಲಾಖೆ ಸಿಬ್ಬಂದಿ ಕೋವಿನಿಂದ ಗುಂಡು ಹಾರಿಸಿದರು. ಅದು ಅರ್ಜುನನ ಕಾಲಿಗೆ ತಗುಲಿತು. ಅರ್ಜುನ ಶಕ್ತಿ ಕಳೆದುಕೊಂಡ. ನಾವು ಆನೆ ಮೇಲಿಂದ ಇಳಿದು ಓಡಿದೆವು. ಗುಂಡು ಬಿದ್ದ ನಂತರ ಅರ್ಜುನನಿಗೆ ನಡೆದಾಡಲು ಆಗಲಿಲ್ಲ. ಇದೇ ವೇಳೆ ಕಾಡಾನೆ ಸಾಕಾನೆ ಅರ್ಜುನನ ಮೇಲೆ ಹಠಾತ್ ದಾಳಿ ಮಾಡಿತು ಎಂದು ಸ್ಥಳೀಯರೊಬ್ಬರು ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ ಆಗಿದ್ದು, ಅರ್ಜುನನ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕಿದೆ.
ಮದದಲ್ಲಿರುವ ಕಾಡಾನೆ ಹುಚ್ಚನಂತೆ ಆಡುತ್ತದೆ ಎಂಬ ಮಾಹಿತಿ ಗೊತ್ತಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ತಪ್ಪು ನಿರ್ಧಾರ ಮಾಡಿದ್ದಾರೆ ಎಂಬ ಬಗ್ಗೆ ತಜ್ಞರು ಟೀಕೆ ಮಾಡಿದ್ದಾರೆ.
ಸಿನೆಮಾ
Animal Box Office collection ರಣ್ ಬೀರ್ – ರಶ್ಮಿಕಾ ಜೋಡಿ ಕಮಾಲ್ : ಅನಿಮಲ್ ಬಾಕ್ಸ್ ಆಫೀಸ್ನಲ್ಲಿ ಮಾಡಿದ ಕಲೆಕ್ಷನ್ ಎಷ್ಟು ಗೊತ್ತಾ?

ಟಾಲಿವುಡ್ ನಿರ್ದೇಶಕ ಮಾಡಿರುವ ‘ಅನಿಮಲ್’ ಸಿನಿಮಾವು ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದೆ. ಜನರು ಫಿದಾ ಆಗಿದ್ದಾರೆ . ಸಿನಿಮಾವು ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ‘ಅನಿಮಲ್’ ಸಿನಿಮಾದ ಕಲೆಕ್ಷನ್ ಕುರಿತಂತೆ ಇಲ್ಲಿದೆ ಮಾಹಿತಿ.
ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಬಾಬಿ ಡಿಯೋಲ್ ಅವರ ಅಭಿನಯಿಸಿರುವ ಬಹುನಿರೀಕ್ಷಿತ ಚಿತ್ರ ಅನಿಮಲ್ ಡಿಸೆಂಬರ್ 1 ರಂದು ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗಿದೆ.ಹಿಂದಿ ಜೊತೆಗೆ, ತೆಲುಗು, ತಮಿಳು, ಕನ್ನಡ, ಮಲಯಾಳಂ ಭಾಷೆಯಲ್ಲೂ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಇದು ಅಡಲ್ಟ್ ಸಿನಿಮಾ. 18 ವರ್ಷ ವಯಸ್ಸು ಮೇಲ್ಪಟ್ಟವರು ಮಾತ್ರವರು ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ವೀಕ್ಷಣೆ ಮಾಡಬಹುದಾಗಿದೆ.’ಅನಿಮಲ್’ ಸಿನಿಮಾದ ಅವಧಿ 3 ಗಂಟೆ 21 ನಿಮಿಷ ಇದೆ.
ಬಿಡುಗಡೆ ಆದ ಮೊದಲ ದಿನವೇ (ಡಿಸೆಂಬರ್ 1) ‘ಅನಿಮಲ್’ ಸಿನಿಮಾ 72.50 ಕೋಟಿ ರೂಪಾಯಿ ಬಾಚಿಕೊಂಡಿದೆ. ಎರಡನೇ ದಿನ 66.27 ಕೋಟಿ ರೂಪಾಯಿ ಹಾಗೂ ಮೂರನೇ ದಿನ 72.50 ಕೋಟಿ ರೂಪಾಯಿ ಬಾಚಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 202 ಕೋಟಿ ರೂಪಾಯಿ . ವಿಶ್ವಾದ್ಯಂತ ‘ಅನಿಮಲ್’ ಸಿನಿಮಾ 300+ ಕೋಟಿ ರೂಪಾಯಿ ಬಾಚಿಕೊಂಡಿದೆ.
ಸಿನೆಮಾ
BBK Season10: ನನಗೆ ಇವರ ಮೇಲೆ ಫೀಲಿಂಗ್ ಇದೆ – ಬಿಗ್ ಬಾಸ್ ಕನ್ನಡ ಶೋನಲ್ಲಿ ಸ್ನೇಹಿತ್ ಗೌಡಗೆ ನಮ್ರತಾ ಗೌಡ ಮೇಲೆ ಲವ್

Big Boss kannada Love Story: ಈ ಬಾರಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲೂ ಸ್ಪರ್ಧಿಗಳ ಮಧ್ಯೆ ಲವ್ ಸ್ಟೋರಿ ಶುರುವಾದಂತಿದೆ. ಪ್ರತಿ ಸೀಸನ್ ನಲ್ಲೂ ಈ ರೀತಿ ಲವ್ ಸ್ಟೋರಿಗಳು ಇದ್ದೆ ಇರುತ್ತೆ. ಕೆಲವು ಜೋಡಿಗಲು ಬಿಗ್ ಬಾಸ್ ಮನೆಯಲ್ಲಿ ಶುರು ಮಾಡಿದ ಲವ್ ಅನ್ನು ಮನೆ ಹೊರಗಡೆಯು ಮುಂದುವರಿಸಿ ಮದುವೆಯಾದ ಉದಾಹರಣೆಯೂ ಇದೆ.
ಬಿಗ್ ಬಾಸ್ 10 ರಲ್ಲಿ ನಮ್ರತಾ ಗೌಡ ಮೇಲಿನ ಲವ್ ಅನ್ನು ಸ್ನೇಹಿತ್ ನೇರವಾಗಿ ಹೇಳಿಕೊಂಡಿದ್ದಾರೆ. ನನಗೆ ನಮ್ರತಾ ಮೇಲೆ ಫೀಲಿಂಗ್ ಇದೆ’ ಎಂದು ಸ್ನೇಹಿತ್ ಗೌಡ ಹೇಳಿಕೊಂಡಿದ್ದಾರೆ. ಈ ಬಗ್ಗೆ ವಿನಯ್ ಗೌಡ ಬಳಿ ವಿವರಿಸಿದ್ದಾರೆ. ಅದನ್ನು ಕೇಳಿ ವಿನಯ್ ಅವರು ಅಚ್ಚರಿಪಟ್ಟಿದ್ದಾರೆ.
ನನಗೆ ಹುಡುಗಿಯರು ಇಷ್ಟ ಆಗಿದ್ದು ಬಹಳ ಕಡಿಮೆ. ಒಬ್ಬಳು ಇಷ್ಟ ಆಗಿದ್ದಳು. ಅದು ವರ್ಕ್ ಆಗಲಿಲ್ಲ. ಅದಾದ ಬಳಿಕ ಈಗಲೇ ಆಗಿರುವುದು. ಬಿಗ್ ಬಾಸ್ ಮನೆಗೆ ಬಂದಾಗ ಒಬ್ಬರು ನನಗೆ ಇಷ್ಟೆಲ್ಲ ಇಷ್ಟ ಆಗುತ್ತಾರೆ ಎಂದು ನನಗೂ ನಂಬಿಕೆ ಇರಲಿಲ್ಲ. ಅದನ್ನು ನಂಬೋಕೆ ಆಗುತ್ತಿಲ್ಲ. ಇವರ ಜೊತೆ ನಾನು ಫ್ರೆಂಡ್ಗಿಂತಲೂ ಚೂರು ಜಾಸ್ತಿ ಅಟ್ಯಾಚ್ ಆಗಿದ್ದೇನೆ ಎಂಬುದು ನಾನು ಜೈಲಿಗೆ ಹೋದಾಗ ಗೊತ್ತಾಯಿತು’ ಎಂದು ಸ್ನೇಹಿತ್ ಗೌಡ ಹೇಳಿದ್ದಾರೆ.

‘ಸ್ನೇಹಿತ್ ಗೌಡ ಬಿಗ್ ಬಾಸ್ ಮನೆಯಲ್ಲಿ ಅವರು ನಿರೀಕ್ಷಿತ ಮಟ್ಟದಲ್ಲಿ ಪರ್ಫಾರ್ಮೆನ್ಸ್ ನೀಡುತ್ತಿಲ್ಲ. ಸದ್ಯಕ್ಕಂತೂ ಅವರು ಡೇಂಜರ್ ಜೋನ್ನಲ್ಲಿ ಇದ್ದಾರೆ. ಹಾಗಿದ್ದರೂ ಕೂಡ ತಮ್ಮ ಪ್ರೀತಿಯ ಬಗ್ಗೆ ಅವರೀಗ ಓಪನ್ ಆಗಿ ಹೇಳಿಕೊಂಡಿದ್ದಾರೆ. ಆದರೆ ಈ ಪ್ರೀತಿಗೆ ನಮೃತಾ ಗ್ರೀನ್ ಸಿಗ್ನಲ್ ಕೊಡ್ತಾರ ಕಾದು ನೋಡಬೇಕಾಗಿದೆ.

ಬಿಗ್ ಬಾಸ್ 10 ರಲ್ಲಿ (BBK SEASON 10) ಮೈಕಲ್- ಇಶಾನಿ ಹಾಗೂ ಸಂಗೀತಾ-ಕಾರ್ತಿಕ್ ನಡುವೆ ಆತ್ಮೀಯತೆ ಬೆಳೆದಿರುವುದು ಗೊತ್ತೇ ಇದೆ. ಇದೀಗ ಸ್ನೇಹಿತ್ ಗೌಡ ಹಾಗೂ ನಮ್ರತಾ ಸ್ನೇಹ ಎಲ್ಲಿಗೆ ಹೋಗಿ ಮುಟ್ಟಲಿದೆಯೋ ಎಂದು ಪ್ರೇಕ್ಷಕರು ತಲೆ ಕೆಡಿಸಿಕೊಂಡಿದ್ದಾರೆ.
ಮೊದಲಿಗೆ ಸಂಗೀತಾ ಜತೆ ಕ್ಲೋಸ್ ಆಗಲು ನೋಡಿದ ಸ್ನೇಹಿತ್ಗೆ ಕಾರ್ತಿಕ್ ಕಾರಣಗಳಿಂದ ವಿಫಲವಾಯ್ತು. ಮತ್ತೆ ಇಶಾನಿಗೂ ಟ್ರೈ ಮಾಡಿದ್ದರೂ ಮೈಕಲ್ ಜತೆ ಇಶಾನಿ ಕ್ಲೋಸ್ ಆದ ಕಾರಣ ಅಲ್ಲಿಯೂ ಅವರಿಗೆ ಹಿನ್ನಡೆ ಆಯ್ತು. ನಮ್ರತಾಗೂ ಮೊದಲ ದಿನದಂದಲೂ ಕಾಳು ಹಾಕುತ್ತಲೇ ಇರುವ ಸ್ನೇಹಿತ್ ಟಾಸ್ಕ್ ವಿಚಾರವಾಗಿ ನಮ್ರತಾ ಜತೆ ಸ್ವಲ್ಪ ಸಲುಗೆಯಿಂದ ಕೂಡ ಇದ್ದಿದ್ದರು.
-
ಅಪರಾಧ9 hours ago
ವಿಟ್ಲ : 80 ಪ್ರಕರಣಗಳ ಸರದಾರ ʼಇತ್ತೆ ಬರ್ಪೆ ಅಬೂಬ್ಬಕರ್ʼ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು – ಅಷ್ಟಕ್ಕೂ ಈತ ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ? ಇತ್ತೆ ಬರ್ಪೆ ಹೆಸರಿನ ಹಿಂದಿದೆ ಇಂಟ್ರೆಸ್ಟಿಂಗ್ ಕಹಾನಿ
-
ಬಿಗ್ ನ್ಯೂಸ್13 hours ago
ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ ಚೆಕ್ ವಿತರಣೆ : ಮೊತ್ತ ತಾಯಿ-ಪತ್ನಿಗೆ ಸಮಪಾಲು ಮಾಡಿದ ಸರ್ಕಾರ
-
ಕ್ರೀಡೆ13 hours ago
Bomb Threat ಪ್ರಿಯಕರ ಕೊಟ್ಟ ಐಡಿಯಾ ನಂಬಿ ಗಂಡನ ಜೈಲಿಗೆ ಕಳುಹಿಸಲು ಆತನ ಮೊಬೈಲ್ʼನಿಂದ ಹೆಂಡತಿ ಕಳುಹಿಸಿದಳು ಬೆದರಿಕೆ ಮೆಸೇಜ್ – ಆದರೇ ಮುಂದೇನಾಯಿತು ?
-
ಕ್ರೀಡೆ10 hours ago
Jay shah: ಜಯ್ ಶಾಗೆ ಸ್ಪೋರ್ಟ್ಸ್ ಬ್ಯುಸಿನೆಸ್ ಲೀಡರ್ ಆಫ್ ದಿ ಇಯರ್ ಪ್ರಶಸ್ತಿಯ ಗರಿ – ಬಿಸಿಸಿಐ ಕಾರ್ಯದರ್ಶಿಗೆ ಈ ಗೌರವ ಸಿಕ್ಕಿದ್ದು ಯಾಕೆ ಗೊತ್ತೆ ?
-
ರಾಜಕೀಯ11 hours ago
Harish Poonja Moved Privilege motion ತನ್ನ ಮೇಲೆ ಎಫ್ ಐ ಆರ್ ದಾಖಲಿಸಿದ ಅರಣ್ಯ ಅಧಿಕಾರಿಗಳ ವಿರುದ್ದ ಸದನದಲ್ಲಿ ಹಕ್ಕು ಚ್ಯುತಿ ಮಂಡಿಸಿದ ಹರೀಶ್ ಪೂಂಜಾ – ಏನಿದು ಪ್ರಕರಣ ? ಮುಂದೇನಾಯಿತು?
-
ಸಾಮಾಜಿಕ ಮಾಧ್ಯಮ18 hours ago
Dasara Elephant Arjun Dies ಅರ್ಜುನ ಸಾವಿನ ಸುತ್ತ ಹಲವು ಅನುಮಾನ – ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ – ಅದರಲ್ಲಿದೆ ಗುಂಡೇಟಿನ ವಿಚಾರ
-
ಸಿನೆಮಾ1 day ago
Animal Box Office collection ರಣ್ ಬೀರ್ – ರಶ್ಮಿಕಾ ಜೋಡಿ ಕಮಾಲ್ : ಅನಿಮಲ್ ಬಾಕ್ಸ್ ಆಫೀಸ್ನಲ್ಲಿ ಮಾಡಿದ ಕಲೆಕ್ಷನ್ ಎಷ್ಟು ಗೊತ್ತಾ?
-
ಚಿನ್ನ-ಬೆಳ್ಳಿ ದರ19 hours ago
Gold Rate Hike:ಆಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿ : ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ದರ ಸಾರ್ವಕಾಲಿಕ ಜಿಗಿತ – ಮುಂದಿನ ದಿನಗಳಲ್ಲಿ ರೇಟ್ ಹೇಗಿರಲಿದೆ?