ದಕ್ಷಿಣ ಕನ್ನಡ
Vitla 400 KV HT Line ವಿಟ್ಲ : 400 ಕೆವಿ ಹೈಟೆನ್ಷನ್ ಲೈನ್ : ಕೃಷಿ ಜಮೀನಿನ ಬದಲು ಪರ್ಯಾಯ ಮಾರ್ಗ ಹುಡುಕಬೇಕು : ಮಾಜಿ ಶಾಸಕ ಸಂಜೀವ ಮಠಂದೂರು

ಉಡುಪಿ – ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗ 10 ವರ್ಷದ ಹಿಂದಿನ ಯೋಜನೆಯಾಗಿದೆ. ಕೇಂದ್ರದ ಗ್ರಿಡ್ ನಿಂದ ಕಾಸರಗೋಡಿಗೆ ವಿದ್ಯುತ್ ಸರಬರಜು ಮಾಡಲು ಈ ವಿದ್ಯುತ್ ಸಂಪರ್ಕ ಮಾರ್ಗವನ್ನು ಯೋಜಿಸಲಾಗಿದೆ. ಈ ವಿದ್ಯುತ್ ಮಾರ್ಗ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೃಷಿ ಭೂಮಿಯಲ್ಲಿ ಹಾದು ಹೋಗುವ ಹಿನ್ನಲೆಯಲ್ಲಿ ಸೂಕ್ತ ಪರಿಹಾರ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಸಂಬಂಧಪಟ್ಟ ರೈತರು ಈ ಯೋಜನೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.
ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ” ಹೈಟೆನ್ಷನ್ ಲೈನ್ ಹಾದು ಹೋಗುವ ಮಾರ್ಗದಲ್ಲಿ ಅಡಿಕೆ ತೋಟ, ತೆಂಗಿನ ತೋಟ, ಮನೆಗಳು ಇರುವ ಕಾರಣ ಮಾರ್ಗ ಹೋಗುವುದಕ್ಕೆ ಆಕ್ಷೇಪವಿದೆ. ಅವರು ಸೂಕ್ತ ಪರಿಹಾರ ಸಿಗಬೇಕೆಂಬ ಆಗ್ರಹವನ್ನು ವಕ್ತ ಪಡಿಸುತ್ತಿದ್ದಾರೆ. ಪ್ರಸ್ತುತ ಕಂಪೆನಿಯವರು ನೀಡುತ್ತಿರುವ ಪರಿಹಾರ ಕೇಂದ್ರಸರ್ಕಾರದ ಭೂಸ್ವಾಧೀನ ಪ್ರಕ್ರಿಯೆಯಷ್ಟು ಇರದೆ ಕಡಿಮೆಯಿದೆ. ರೈತರ ವಿರೋಧದಂತೆ ಹಿಂದಿನ ಇಂಧನ ಸಚಿವರು ಯೋಜನೆಯನ್ನು ತಡೆಹಿಡಿದು, ರೈತರ ಸಭೆಯನ್ನು ನಡೆಸಿ ಪರಿಹಾರೋಪಾಯ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗೆ ಸೂಚಿಸಿದ್ದರು ಎಂದರು
ಇದು ಹೈಟೆನ್ಷನ್ ಲೈನ್ ಆಗಿರುವುದರಿಂದ ತಂತಿ ಹಾದು ಹೋಗುವ ಪ್ರದೇಶದ ಸುತ್ತ ಮುತ್ತ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕವು ರೈತರಲ್ಲಿದೆ. ಹೀಗಾಗಿ ಗೇಲ್ ಕಂಪನಿಯ ಪೈಪ್ ಲೈನ್ ತರಹದಲ್ಲಿ ಅಥವಾ ಎನ್.ಎಚ್. ರಸ್ತೆ ಮಾರ್ಜಿನ್ ನಲ್ಲಿ ಈ ವಿದ್ಯುತ್ ಪ್ರಸರಣ ಮಾರ್ಗವನ್ನು ಸ್ಥಳಾಂತರಿಸುವಂತೆ ಸೂಚಿಸಲಾಗಿತ್ತು. ಪರ್ಯಾಯ ಮಾರ್ಗ ಇಲ್ಲದಿದ್ದಲ್ಲಿ ಕನಿಷ್ಟ ಕೃಷಿ ಭೂಮಿ ಇಲ್ಲದ ಜಾಗದಲ್ಲಿ ತೆಗೆದುಕೊಂಡು ಹೋಗುವಂತೆ ಸಂಬಂದಪಟ್ಟವರಿಗೆ ತಿಳಿಸಲಾಗಿತ್ತು. ಹಾಗೂ ನಮ್ಮ ಸರಕಾರ ಇರುವವರೆಗೆ ಕೃಷಿ ಭೂಮಿಯಲ್ಲಿ ಕಾಮಗಾರಿ ನಡೆಸದಂತೆ ನೋಡಿಕೊಳ್ಳಲಾಗಿತ್ತು ಎಂದು ತಿಳಿಸಿದರು.
ಸರ್ಕಾರ ಬದಲಾಗಿದ್ದು, ಮಂತ್ರಿಗಳು ಬದಲಾಗಿದ್ದು, ಮತ್ತೆ ಗುತ್ತಿಗೆದಾರ ಕೆಲಸ ಪ್ರಾರಂಭಿಸಿದ್ದಾರೆ. ಇದರ ಮಾಹಿತಿ ಪಡೆದು ಅ 10 ರಂದು ಸ್ಥಳಕ್ಕೆ ತೆರಳಿ ಕೇರಳದ ಗಡಿಯಲ್ಲೇ ಜಿಲ್ಲಾಧಿಕಾರಿಗಳಿಗೆ ಹೇಳಿ ಕಾಮಾಗರಿ ನಿಲ್ಲಿಸುವ ಕಾರ್ಯ ಮಾಡಿದ್ದೇನೆ. ವಿಟ್ಲ ಪೇಟೆ ಬಳಿ ಸೇರಿದಂತೆ ಹಲವೆಡೆ ಈ ಹೈ ಟೆನ್ಷನ್ ಲೈನ್ ಸಣ್ಣ ರೈತರ ಭೂಮಿಯಲ್ಲಿ ಹಾದು ಹೋಗುತ್ತಿದೆ. ಒಂದು ವೇಳೆ ಅದೇ ಮಾರ್ಗದಲ್ಲಿ ತಂತಿ ಹಾದು ಹೋದರೆ ಆ ರೈತರು ಕೃಷಿ ಭೂಮಿಯನ್ನೆ ಕಳೆದುಕೊಳ್ಳುವ ಪರಿಸ್ಥಿತಿ ಬರಬಹುದು. ಹೀಗಾಗಿ ಸರ್ವೇಯನ್ನೇ ಬದಲು ಮಾಡಬೇಕು. ಹೊಸದಾಗಿ ಆಗುತ್ತಿರುವ 400 ಕೆವಿ ಯ ಸಾಧಕ ಬಾಧಕಗಳನ್ನು ನೋಡುವ ಅನಿವಾರ್ಯತೆಯಿದೆ ಎಂದು ಮಾಜಿ ಶಾಸಕ ಸಂಜೀವ ಮಂಠದೂರು ಹೇಳಿದರು.
ವಿಡಿಯೋ ನೋಡಿ
ದಕ್ಷಿಣ ಕನ್ನಡ
ಧರ್ಮಸ್ಥಳ ಲಕ್ಷದೀಪೋತ್ಸವ : ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ – ಪಾದಯಾತ್ರಿಗಳಿಂದ ಭೀಷ್ಮ ಪ್ರತಿಜ್ಞೆ : ಹೆಗ್ಗಡೆಯವರ ಸಂಸದರ ನಿಧಿಯಿಂದ ಬೀದರ್ ನಲ್ಲಿ ಕ್ಷೀರಕ್ರಾಂತಿ

ಉಜಿರೆ: ಹೃದಯ ಪರಿವರ್ತನೆಯಿಂದ ಅದ್ಭುತ ಪ್ರಗತಿ ಸಾಧ್ಯವಾಗುತ್ತದೆ. ಎಲ್ಲರನ್ನೂ ಜಯಿಸಿ ಸರ್ವರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಲಕ್ಷದೀಪೋತ್ಸವ ಸಂದರ್ಭದಲ್ಲಿ ಶುಕ್ರವಾರ ಶಿವನಾಮ ಸ್ಮರಣೆಯೊಂದಿಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಹತ್ತು ಸಾವಿರಕ್ಕೂ ಮಿಕ್ಕಿ ಭಕ್ತರನ್ನು ಅಭಿನಂದಿಸಿ ಮಾತನಾಡಿದರು.

ನಾವು ಎಲ್ಲರಲ್ಲಿಯೂ ಒಳ್ಳೆಯತನವನ್ನು ಕಾಣಬೇಕು. ದೋಷವನ್ನು ಹುಡುಕಬಾರದು. ಯಾವಾಗಲೂ ಕೆಟ್ಟ ಯೋಚನೆ ಮಾಡದೆ ಸದಾಶಯದೊಂದಿಗೆ ಸತ್ಕಾರ್ಯಗಳನ್ನೇ ಮಾಡಿದರೆ ಲೋಕಕಲ್ಯಾಣವಾಗುತ್ತದೆ.
ಎಲ್ಲರಲ್ಲಿಯೂ ಪರಸ್ಪರ ಪ್ರೀತಿ-ವಿಶ್ವಾಸ, ನಂಬಿಕೆ ಮತ್ತು ಗೌರವ ಬೆಳೆಯುತ್ತದೆ. ದೇವರು ನನಗೆ ಕೊಟ್ಟ ಎಲ್ಲಾ ಅವಕಾಶಗಳನ್ನು ಮತ್ತು ಸಂಪತ್ತನ್ನು ಬಳಸಿ ಸತ್ಕಾರ್ಯಗಳನ್ನೇ ಮಾಡಿದ್ದೇನೆ. ಅಗಾಧ ಸಂಪತ್ತಿಗಿAತ ಸತ್ಕಾರ್ಯಕ್ಕೆ ಮೌಲ್ಯ ಜಾಸ್ತಿ. ಎಲ್ಲರೂ ಸೇರಿ ಜೊತೆಯಾಗಿ ಸತ್ಕಾರ್ಯಗಳನ್ನೇ ಮಾಡೋಣ ಎಂದು ಅವರು ಕಿವಿಮಾತು ಹೇಳಿದರು.

ಧರ್ಮಸ್ಥಳದ ಬಗ್ಗೆ ಯಾವುದೇ ಅನುಮಾನ, ಸಂಶಯ ಬೇಡ. ನೇರವಾಗಿ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಅವರು ಸಲಹೆ ನೀಡಿದರು.
ಸಂಸದರ ನಿಧಿಯಿಂದ ತನಗೆ ಮಂಜೂರಾದ ಎರಡೂವರೆ ಕೋಟಿ ರೂ. ಅನುದಾನವನ್ನು ಬೀದರ್ ಜಿಲ್ಲೆಗೆ ನೀಡಿದ್ದು ಅಲ್ಲಿ ಇದರಿಂದಾಗಿ ಕ್ಷೀರ ಕ್ರಾಂತಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಪಾದಯಾತ್ರೆ ಮೂಲಕ ಎಲ್ಲರೂ ನಿಮ್ಮ ಪ್ರೀತಿ-ವಿಶ್ವಾಸ, ಗೌರವ, ಭಕ್ತಿ ಮತ್ತು ಸಂತೋಷವನ್ನು ವ್ಯಕ್ತಪಡಿಸಿರುವಿರಿ. ಇದರಿಂದ ನನ್ನಲ್ಲಿ ತೃಪ್ತಿ, ಸಂತೋಷ ಮತ್ತು ಧನ್ಯತಾಭಾವ ಮೂಡಿಬಂದಿದೆ ಎಂದರು.
ಪಾದಯಾತ್ರಿಗಳ ಭೀಷ್ಮ ಪ್ರತಿಜ್ಞೆ: ಪಾದಯಾತ್ರಿಗಳೆಲ್ಲ ಸಂಘಟನೆ ಮೂಲಕ ಸತ್ಯ, ಧರ್ಮ, ನ್ಯಾಯ ಮತ್ತು ನೀತಿಗಾಗಿ ತಾವೆಲ್ಲರೂ ಧರ್ಮಸ್ಥಳದ ಜೊತೆ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜೊತೆ ಸದಾ ಇದ್ದೇವೆ ಎಂದು ಸಾಮೂಹಿಕವಾಗಿ ದೃಢಸಂಕಲ್ಪದೊಂದಿಗೆ ಭೀಷ್ಮ ಪ್ರತಿಜ್ಞೆ ಮಾಡಿದರು.
ಹೇಮಾವತಿ ವಿ ಹೆಗ್ಗಡೆಯವರು, ಶ್ರದ್ಧಾ ಅಮಿತ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ನಿಶ್ಚಲ್ ಕುಮಾರ್, ಸೋನಿಯವರ್ಮ, ಪೂರನ್ವರ್ಮ, ಶರತ್ಕೃಷ್ಣ ಪಡ್ವೆಟ್ನಾಯ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ.ಎಸ್. ಸತೀಶ್ಚಂದ್ರ, ಎಸ್.ಡಿ.ಎಮ್. ಕಾಲೇಜು ಪ್ರಾಂಶುಪಾಲ ಕುಮಾರ ಹೆಗ್ಡೆ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಎಚ್. ಮಂಜುನಾಥ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್. ಜನಾರ್ದನ್, ಎಸ್.ಡಿ.ಎಮ್ ಆಸ್ಪತ್ರೆಯ ನಿರ್ದೇಶಕ ಎಮ್. ಜನಾರ್ದನ ಸಿ.ಒ.ಒ. ಅನಿಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ವಕೀಲ ಬಿ.ಕೆ. ಧನಂಜಯ ರಾವ್ ಸ್ವಾಗತಿಸಿದರು. ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.
ದಕ್ಷಿಣ ಕನ್ನಡ
ಈಶ್ವರಮಂಗಲ ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಬಸ್ಸು ಹರಿದು ಸಾವು – ಅದೇ ಬಸ್ಸಿನಿಂದ ಇಳಿದಿದ್ದರು..!

ಪುತ್ತೂರು : ಈಶ್ವರಮಂಗಲದ ಗಾಳಿಮುಖದಲ್ಲಿ ಖಾಸಗಿ ಬಸ್ಸಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಡಿ. 8ರಂದು ಸಂಭವಿಸಿದೆ. ಮುಳ್ಳೇರಿಯಾದ ಕೋಳಿಕಾಲ ನಿವಾಸಿ, ಕೃಷಿಕ ಕುಂಞಿರಾಮ ಮಣಿಯಾಣಿ ಮೃತಪಟ್ಟವರು.ʼ ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಗಾಳಿಮುಖಕ್ಕೆ ಬಂದಿದ್ದ ಅವರು ಬಸ್ಸಿನಿಂದ ಇಳಿದು ರಸ್ತೆ ದಾಟುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಹಿಂಬದಿ ಬಾಗಿಲಿನಿಂದ ಇಳಿದಿದ್ದ ಕುಂಞಿರಾಮ ಮಣಿಯಾಣಿ ಅವರು, ಇನ್ನೊಂದು ಬದಿಗೆ ದಾಟುವಷ್ಟರಲ್ಲಿ ಬಸ್ ಚಲಿಸಿದ್ದು, ಬಸ್ಸಿನ ಮುಂಭಾಗದ ಚಕ್ರ ಕುಂಞಿರಾಮ ಅವರ ಎದೆಯ ಭಾಗದಿಂದ ಹರಿದಿದೆ. ಸಂಪ್ಯ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಚಾಲಕನ ಮೇಲೆ FIR
ಕೇರಳ ನೋಂದಣಿಯ ಖಾಸಗಿ ಬಸ್ಸಿನ ಚಾಲಕ ಸುಜೀತ್ ವಿ ಎಂಬವರು ನಿರ್ಲಕ್ಷತನ ಹಾಗೂ ಅಜಾಗರೂಕತೆಯಿಂದ ಬಸ್ಸನ್ನು ಚಲಾಯಿಸಿ ರಸ್ತೆ ದಾಟುತ್ತಿದ್ದ ಕುಂಞಿರಾಮ ಮಣಿಯಾಣಿ ಯವರಿಗೆ ಡಿಕ್ಕಿ ಹೊಡೆದಿದ್ದು , ಆಗ ಅವರು ಡಾಮಾರು ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ವೇಳೆ ಅವರ ಮೇಲೆ ಬಸ್ ಚಲಿಸಿರುತ್ತದೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಕುಂಞಿರಾಮ ಮಣಿಯಾಣಿರವರು ಮೃತಪಟ್ಟಿರುತ್ತಾರೆ ಎಂದು ಮೃತರ ಚಿಕ್ಕಪ್ಪನ ಮಗ ಕೃಷ್ಣ ಎ ಎಂಬವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಐಪಿಸಿ ಕಲಂ : 279,304(A) ರಂತೆ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ
Kidnap and Murder 20 ದಿನಗಳ ಹಿಂದೆ ಪುತ್ತೂರಿನಿಂದ ಅಪಹರಣವಾದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಆಗುಂಬೆ ಘಾಟ್ ನಲ್ಲಿ ಪತ್ತೆ- ಅನೈತಿಕ ಸಂಬಂಧದ ಹಿನ್ನಲೆ ಕೊಂದು ಎಸೆದಿರುವ ಶಂಕೆ | ಇಬ್ಬರು ಪೊಲೀಸ್ ವಶ

ಪುತ್ತೂರು :20 ದಿನಗಳ ಹಿಂದೆ ಪುತ್ತೂರಿನ ಕುಂಬ್ರದಿಂದ ಅಪಹರಣವಾಗಿದ್ದ (Kidnap) ಯುವಕನ ಮೃತದೇಹ ಆಗುಂಬೆ ಘಾಟ್ ನಲ್ಲಿ (Agumbe Ghat) ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈತನನ್ನುನ್ನು ಕೊಲೆ (Murder) ಮಾಡಿ ಆಗುಂಬೆ ಘಾಟ್ ನಲ್ಲಿ ಬೀಸಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇವರು ಕೊಲೆ ನಡೆಸಿರುವುದನ್ನು ಒಪ್ಪಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.
ಬಾಗಲಕೋಟೆ ಜಿಲ್ಲೆ ಬಾದಮಿ ತಾಲೊಕಿನ ಡಾಣಕಶಿರೂರು ನಿವಾಸಿ ಹನುಮಂತ (22) ಮೃತಪಟ್ಟವರು . ಕುಂಬ್ರದ ಉದ್ಯಮಿ ಮೋಹನ್ ದಾಸ್ ರೈಯವರ ಟಿಪ್ಪರ್ ಚಾಲಕರನಾಗಿ ದುಡಿಯುತ್ತಿದ್ದ ಈತ, ಅಪಹರಣವಾದ 5 ದಿನದ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರ. ನ 17 ರಂದು ಸಂಜೆ KA-26-B-3833 ನೋಂದಣಿಯ ಮ್ಯಾಕ್ಸಿ ವಾಹನದಲ್ಲಿ ಬಂದ ತಂಡವೊಂದು ಕುಂಬ್ರ ಮಸೀದಿ ಬಳಿಯ ರೂಮ್ ನಿಂದ ಹನುಮಂತನನ್ನು ಅಪಹರಿಸಿರುವುದಾಗಿ ಆತನ ತಾಯಿ ತಾಯಿ ರೇಣವ್ವ ಮಾದರರವರು ಸಂಪ್ಯ ಠಾಣೆಗೆ ನ 20 ರಂದು ದೂರು ನೀಡಿದ್ದರು
ಅಕ್ರಮ ಸಂಬಂಧ (illicit Relationship) ಹಿನ್ನಲೆಯಲ್ಲಿ ಅಪಹರಣ ಮತ್ತು ಕೊಲೆ ನಡೆದಿದೆಯೆಂದು ಮೇಲ್ನೋಟಕ್ಕೆ ಕಂಡು ಬಂದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದ ಪ್ರಮುಖ ಆರೋಪಿ ಬಾದಮಿ ತಾಲೂಕಿನ ಶಿವಪ್ಪ (45) ಎಂಬಾತನ ಪತ್ನಿಯ ಜತೆ ಹನುಮಂತ ಅಕ್ರಮ ಸಂಬಂಧ ಹೊಂದಿರುವ ದ್ವೇಷವೇ ಕೊಲೆಗೆ ಕಾರಣವಾಯಿತು ಎನ್ನಲಾಗುತ್ತಿದೆ.
ಅಪಹರಣ ನಡೆಯುವುದಕ್ಕೆ ಕೆಲ ದಿನಗಳ ಹಿಂದೆ ಆರೋಪಿ ಶಿವಪ್ಪನು ಹನುಮಂತನ ಮಾವ ಮಂಜುನಾಥ ಎಂಬವರ ಬಳಿ ಹನುಮಂತ ತನ್ನ ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದು ,ಅವನನ್ನು ಎಲ್ಲಿಯಾದರೂ ದೂರ ಕಳುಹಿಸು ಎಂದು ಹೇಳಿದ್ದ. ಹೀಗಾಗಿ ನ 10 ರಂದು ಹನುಮಂತನನ್ನು ಮಂಜುನಾಥರವರು ತನ್ನ ಗೆಳೆಯ ಸಂತೋಷ್ ಗದ್ದಿ ಗೌಡ್ರನೊಂದಿಗೆ ಪುತ್ತೂರಿನ ಕುಂಬ್ರಕ್ಕೆ ಟಿಪ್ಪರ್ ಚಾಲಕನಾಗಿ ಕಳುಹಿಸಿ ಕೊಟ್ಟಿದ್ದರು.
ಇದಾದ ಬಳಿಕನ ನ 17 ರಂದು ಮಂಜುನಾಥನರವರಿಗೆ ಕರೆ ಮಾಡಿದ ಶಿವಪ್ಪ ನಿನ್ನ ಅಕ್ಕನ ಮಗ ಸಿಕ್ಕಲ್ಲಿ ಬಿಡುವುದಿಲ್ಲ ಎಂದು ಬೆದರಿಸಿದ್ದರು. ಇದನ್ನು ಮಂಜುನಾಥನವರು ತನ್ನ ಅಕ್ಕ ರೇಣವ್ವ ಮಾದರರವರ ಬಳಿ ತಿಳಿಸಿದ್ದಾರೆ. ಗಾಬರಿಯಾದ ಆಕೆ ಕುಂಬ್ರದಲ್ಲಿರುವ ಸಂತೋಷ್ ಗದ್ದಿ ಗೌಡ್ರರಿಗೆ ಕರೆ ಮಾಡಿ ತಿಳಿಸಿದ್ದು ಅಷ್ಟರಾಗಲೇ ಆರೋಪಿಗಳಾದ ಶಿವಪ್ಪ, ಮಂಜುನಾಥ ಮತ್ತು ದುರ್ಗಾಪ್ಪ ನವರು ಹನುಮಂತನನ್ನು ಅಪಹರಿಸಿಕೊಂಡು ಹೋಗಿದ್ದರು ಎಂದು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಆದರೇ ಸ್ಥಳಿಯ ಮೂಲಗಳ ಪ್ರಕಾರ ನ 17 ರಂದು ಕುಂಬ್ರಕ್ಕೆ ಬಂದಿದ್ದ ಶಿವಪ್ಪ, ಮಂಜುನಾಥ ಮತ್ತು ದುರ್ಗಾಪ್ಪನವರು ಹನುಮಂತನನ್ನು ಊರಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಜತೆಗಿದ್ದವರ ಬಳಿ ತಿಳಿಸಿಯೆ ಕರೆದುಕೊಂಡು ಹೋಗಿದ್ದರು. ಬಂದವರ ಪೋಟೋ ತೆಗೆದಿರಿಸುವಂತೆ ಟಿಪ್ಪರ್ ಮಾಲಕ ಮೋಹನ್ದಾಸ ರೈ ಅವರು ತನ್ನ ಕೆಲಸದವರಿಗೆ ಸೂಚಿಸಿದ್ದರು. ಹಾಗಾಗಿ ಕೆಲಸದವರು ಆ ಮೂವರು ಪೋಟೋವನ್ನು ಮೊಬೈಲ್ನಲ್ಲಿ ತೆಗೆಸಿ ಇಟ್ಟುಕೊಂಡಿದ್ದರು ಎಂದು ತಿಳಿದು ಬಂದಿದೆ.

ಹನುಮಂತನ ತಾಯಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಬಳಿಕ ತನಿಖೆ ಆರಂಭಿಸಿದ ಪೊಲೀಸರಿಗೆ ಈ ಗ್ರೂಫ್ ಫೋಟೊವನ್ನು ನೀಡಲಾಗಿತ್ತು. ಇದನ್ನು ಅನುಸರಿಸಿ ಹನುಮಂತನನ್ನು ಕರೆದುಕೊಂಡು ಹೋಗಿದ್ದ ಇಬರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ ಅತನನ್ನು ಕೊಲೆ ಮಾಡಿ ಎಸೆದಿರುವುದನ್ನು ಅವರು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಆಗುಂಬೆ ಘಾಟ್ನ ಮೂರನೇ ತಿರುವಿನ ರಸ್ತೆ ಬಳಿ ಮೃತದೇಹ ಪತ್ತೆಯಾಗಿದ್ದು ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ. ಕತ್ತು ಹಿಸುಕಿ ಅಥವಾ ಮಾರಕಾಯುಧಗಳಿಂದ ಹೊಡೆದು ಕೊಲೆ ಮಾಡಿರುವ ಶಂಕೆ ಮೂಡಿದೆ.
ಈ ಪ್ರಕರಣದಲ್ಲಿ ಶಿವಪ್ಪ, ಮಂಜುನಾಥ ಪೊಲೀಸ್ ವಶದಲ್ಲಿದ್ದು, ದುರ್ಗಾಪ್ಪ ತಲೆ ಮರೆಸಿಕೊಂಡಿರುವುದಾಗಿ ತಿಳಿದು ಬಂದಿದೆ. ಅಪಹರಣ ಹಾಗೂ ಕೊಲೆ ಪ್ರಕರಣ ಹಾಗೂ ಆರೋಪಿಗಳ ಬಂಧನದ ಬಗ್ಗೆ ಪೊಲೀಸ್ ಇಲಾಖೆ ಇಲ್ಲಿಯವರೆಗೆ ಯಾವುದೇ ಮಾಹಿತಿಯನ್ನು ಬಿಟ್ಟು ಕೊಟ್ಟಿಲ್ಲದಿರುವುದು ವಿಶೇಷವಾಗಿದೆ.
-
ಸುಳ್ಯ2 days ago
College student rape case ಪುತ್ತೂರು : ಕಾಲೇಜ್ ವಿದ್ಯಾರ್ಥಿನಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ಬಂಧಿತ ಆರೊಪಿಗೆ 2 ತಿಂಗಳ ಬಳಿಕ ಜಾಮೀನು
-
ರಾಷ್ಟ್ರೀಯ2 days ago
Divorce under Hindu Marriage Act : ಹಿಂದು ವಿವಾಹ ಕಾಯ್ದೆಯಡಿ ವಿಚ್ಛೇದನ ಪಡೆಯಲು ʼಈʼ ನಿಯಮ ಪಾಲನೆ ಕಡ್ಡಾಯ – ಕೊರ್ಟು ಮಹತ್ವದ ಆದೇಶ ; ಏನದು ನಿಯಮ ?
-
ಅಪರಾಧ2 days ago
Dowry Harasment: ʼಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಡೆತ್ ನೋಟ್ ಬರೆದಿಟ್ಟು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಯುವ ವೈದ್ಯೆ ಆತ್ಮಹತ್ಯೆ – ಅಷ್ಟಕ್ಕೂ ವರನ ಮನೆಯವರು ಇಟ್ಟ ಡಿಮ್ಯಾಂಡ್ ಎಷ್ಟು ಗೊತ್ತೆ ?
-
ಸುಳ್ಯ2 days ago
Arecanut Yellow leaf diseases ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದತ್ತ ಮಹತ್ವದ ಹೆಜ್ಜೆ – ಸಂಪಾಜೆಯಲ್ಲಿ ಇಂದೋರ್ ಕಂಪೆನಿಯ ಔಷಧಿ ಪ್ರಯೋಗಕ್ಕೆ ಆರಂಭಿಕ ಗೆಲುವು – ರೋಗವಿದ್ದ ಪ್ರದೇಶದಲ್ಲಿ ನಳನಳಿಸುತ್ತಿದೆ ಫಸಲು
-
ಮಂಗಳೂರು1 day ago
ಕುಡುಪು ಷಷ್ಟಿ ಮಹೋತ್ಸವ ಜಾತ್ರೆ – ಸಂತೆ ವ್ಯಾಪಾರದಲ್ಲಿ ಹಿಂದೂಯೇತರರಿಗಿಲ್ಲ ಅವಕಾಶ: ವ್ಯಾಪಾರಿಗಳ ಸಮನ್ವಯ ಸಮಿತಿ ಆಕ್ರೋಶ – ದೇವಸ್ಥಾನದ EOರಿಂದ ತಿರುಗೇಟು – ಕರಾವಳಿಯಲ್ಲಿ ನಿಲ್ಲೋದಿಲ್ವಾ ಧರ್ಮ ದಂಗಲ್ ?
-
ರಾಷ್ಟ್ರೀಯ2 days ago
Pancard latest update : ಪ್ಯಾನ್ ಕಾರ್ಡ್ ಕುರಿತು ಮಹತ್ವದ ಮಾಹಿತಿ – ಈ ತಪ್ಪು ಮಾಡಿದರೆ 10,000 ರೂ ದಂಡ ಗ್ಯಾರಂಟಿ
-
ಮಂಗಳೂರು23 hours ago
Interfaith Marriage ಮಂಗಳೂರು : ಭಿನ್ನಕೋಮಿನ ಜೋಡಿ ವಿವಾಹ?
-
ಬಿಗ್ ನ್ಯೂಸ್23 hours ago
Bride refuses Marriage in hall ತಾಳಿ ಕಟ್ಟುವ ವೇಳೆ ವರನ ಕೈಗೆ ಅಡ್ಡ ಹಿಡಿದು ಸಿನಿಮೀಯ ಶೈಲಿಯಲ್ಲಿ ಮದುವೆ ನಿರಾಕರಿಸಿದ ವಧು