ಸುಳ್ಯ
ಶಾಲಾ ಮುಖ್ಯ ಶಿಕ್ಷಕ ಜನಾರ್ದನ ಗೌಡ ಹೃದಯಾಘಾತದಿಂದ ನಿಧನ
ರಾಮಕುಂಜ: ಕೊಯಿಲ ಗ್ರಾಮದ ಗಂಡಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ, ಅಲಂಕಾರು ಗ್ರಾಮದ ತೀರ್ಥಜಾಲು ನಿವಾಸಿ ಜನಾರ್ದನ ಗೌಡ (59) ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು.
ಜನಾರ್ದನ ಗೌಡ ಅವರು ಮಂಗಳವಾರ ಮಧ್ಯಾಹ್ನದ ವರೆಗೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಹೋಗಿ ಸಂಜೆ ಮನೆಗೆ ಬಂದಿದ್ದರು. ರಾತ್ರಿ ಅವರಿಗೆ ಎದೆನೋವು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಮನೆಯವರು ತಕ್ಷಣ ಉಪ್ಪಿನಂಗಡಿಯ ಆಸ್ಪತ್ರೆಗೆ ಕರೆತಂದರಾದರು ಆ ವೇಳೆಗಾಗಲೇ ಜನಾರ್ಧನಗೌಡರವರು ಮೃತಪಟ್ಟಿದ್ದರು ಎನ್ನಲಾಗಿದೆ.
ಜನಾರ್ದನ ಗೌಡ ಅವರು ನರಿಮೊಗರು ಶಾಲೆಯಲ್ಲಿ ಶಿಕ್ಷಕ ವೃತ್ತಿ ಆರಂಭಿಸಿ ಬಳಿಕ ಕುಂಡಾಜೆ, ಕಳಪ್ಪಾರು, ಆಲಂಕಾರು ಶಾಲೆಗಳಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸಿ ಎರಡು ವರ್ಷ ದ ಹಿಂದೆ ಮುಖ್ಯಶಿಕ್ಷಕರಾಗಿ ಭಡ್ತಿ ಪಡೆದು ಗಂಡಿಬಾಗಿಲು ಶಾಲೆಗೆ ವರ್ಗಾವಣೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು
ಸುಳ್ಯ
Kadaba-ಕಡಬ: ಆಸ್ಪತ್ರೆಯಿಂದಲೇ ಆಂಬ್ಯುಲೆನ್ಸ್ನಲ್ಲಿ ತೆರಳಿ ಸಿಇಟಿ ಬರೆದ ಆ್ಯಸಿಡ್ ದಾಳಿ ಸಂತ್ರಸ್ತೆ
ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಸ್ಪತ್ರೆಯಿಂದಲೇ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಬರೆದಿದ್ದಾರೆ.
ಮಾ. 4ರಂದು ಕಾಲೇಜಿನಲ್ಲಿ ಗಣಿತ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಜಿನ್ ಎಂಬಾತ ಆ್ಯಸಿಡ್ ಎರಚಿದ ಕಾರಣ ಮೂವರು ವಿದ್ಯಾರ್ಥಿನಿಯರಿಗೆ ಸುಟ್ಟಗಾಯಗಳಾಗಿತ್ತು. ಇಬ್ಬರು ವಿದ್ಯಾರ್ಥಿನಿಯರು 12% ಮತ್ತು 10% ಸುಟ್ಟಗಾಯಗಳನ್ನು – ಅನುಭವಿಸಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಖ್ಯ ಸಂತ್ರಸ್ತೆ 17 ವರ್ಷದ ಯುವತಿಗೆ ಸುಮಾರು 20% ಸುಟ್ಟಗಾಯಗಳಾಗಿತ್ತು. ಈಕೆ ಇನ್ನೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಕೆ ತನ್ನ ತಾಯಿಯೊಂದಿಗೆ ಐಸೋಲೇಶನ್ ವಾಡ್೯ನಲ್ಲಿ ಇದ್ದುಕೊಂಡೇ ಸಿಂಟಿಗೆ ತಯಾರಿ ನಡೆಸುತ್ತಿದ್ದರು.
ಸಿಇಟಿಗಾಗಿ ಈಜೆ ಮತ್ತು ಸಂತ್ರಸ್ತ ಇತರ ಇಬ್ಬರು ಸಹಪಾಠಿಗಳಿಗೆ ಪುತ್ತೂರಿನಲ್ಲಿ ಪರೀಕ್ಷಾ ಕೇಂದ್ರ ನಿಗದಿಯಾಗಿತ್ತು. 6 ಆದರೆ ಚಿಕಿತ್ಸೆ ವೇಳೆ ದೂರದ ಪ್ರಯಾಣ ಮಾಡದಂತೆ ಬಾಲಕಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಸಲಹೆ ನೀಡಿದ್ದ ಕಾರಣ ದ.ಕ ಜಿಲ್ಲಾ ಪದವಿ ಪೂರ್ವ ಇಲಾಖೆಯ ಉಪನಿರ್ದೆಶಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಸ್. ರಮ್ಯಾ ಅವರ ಗಮನಕ್ಕೆ ತಂದಿದ್ದರು. ಹೀಗಾಗಿ ಮಂಗಳೂರಿನ ಆಸ್ಪತ್ರೆಯಿಂದ ಸುಮಾರು ಒಂದು ಕಿ.ಮೀ ದೂರದಲ್ಲಿರುವ ಪದವಿಪೂರ್ವ ಕಾಲೇಜುನಲ್ಲಿ ಈಕೆಗೆ ಸಿಐಟಿ ಬರೆಯಲು ರಮ್ಯಾ ಅವರು ಅನುಮತಿ ನೀಡಿದ್ದರು.
ಅದರಂತೆ ವಿದ್ಯಾರ್ಥಿನಿ ಸಿಐಟಿ ಕೇಂದ್ರಕ್ಕೆ ತನ್ನ ತಾಯಿಯೊಂದಿಗೆ ಅಂಬ್ಯುಲೆನ್ಸ್ನಲ್ಲಿ ಬಂದಿದ್ದು ಆಕೆಗೆ ಪ್ರತ್ಯೇಕ ತರಗತಿಯನ್ನು ನೀಡಲಾಗಿತ್ತು. ಅಲ್ಲಿ ಮೊದಲ ದಿನ ಜೀವಶಾಸ್ತ್ರ ಪರೀಕ್ಷೆ ಬರೆದು ಬಳಿಕ ಮಧ್ಯಾಹ್ನ 12.15ಕ್ಕೆ ಆಸ್ಪತ್ರೆಗೆ ಮರಳಿ 2.30ಕ್ಕೆ ವಾಪಸ್ ಬಂದು ಗಣಿತ ಪತ್ರಿಕೆ ಬರೆದಿದ್ದಾರೆ. ಏ. 19ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯದ ಪರೀಕ್ಷೆಗಳನ್ನು ಬರೆದಿದ್ದಾರೆ.
ಆ್ಯಸಿಡ್ ದಾಳಿಯಿಂದ ಸಂತ್ರಸ್ತರಾಗಿರುವ ಮೂವರು ವಿದ್ಯಾರ್ಥಿನಿಯರೂ ಎಪ್ರಿಲ್ 29ರಂದು ಪ್ರಾರಂಭವಾಗುವ ಪಿಯುಸಿ ಮರು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ. ವೈದ್ಯರ ಸಲಹೆಯಂತೆ ಇಲಾಖೆಯು ಮರು ಪರಿಕ್ಷೆಗೆ ಹಾಜರಾಗಲು ಅನುಕೂಲವಾಗುವಂತೆ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ಮಾಹಿತಿ ನೀಡಿದ್ದಾರೆ.
ಸುಳ್ಯ
Padmaraj R. Poojary-ಅಪಪ್ರಚಾರಕ್ಕೆ ಕಿವಿಗೊಡಬೇಡಿ; ಪ್ರೀತಿಯಿಂದಲೇ ಚುನಾವಣೆ ಎದುರಿಸೋಣ; ಸಂಪಾಜೆಯ ಕಲ್ಲುಗುಂಡಿಯಲ್ಲಿ ನಡೆದ ಕಾರ್ನರ್ ಮೀಟಿಂಗಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ
ಸುಳ್ಯ: ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ಸ್ಪಷ್ಟವಾಗಿದೆ. ಹಾಗಾಗಿ ವಿರೋಧಿಗಳ ಅಪಪ್ರಚಾರವೂ ಹೆಚ್ಚಾಗುತ್ತಿದೆ. ಮನೆಮನೆಗಳಿಗೆ ತೆರಳಿ ಆಣೆ – ಪ್ರಮಾಣ ಮಾಡಿಸುವ ಕೆಲಸಕ್ಕೂ ಮುಂದಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೇ, ಪ್ರೀತಿಯಿಂದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಸಂಪಾಜೆಯಿಂದ ಕಲ್ಲುಗುಂಡಿವರೆಗೆ ರೋಡ್ ಶೋ ಬಳಿಕ ನಡೆದ ಕಾರ್ನರ್ ಮೀಟಿಂಗ್ ನಲ್ಲಿ ಮಾತನಾಡಿದರು.
ಪ್ರಜಾಪ್ರಭುತ್ವದ ದೊಡ್ಡ ಹಬ್ಬವಾದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ. ಅಭಿವೃದ್ಧಿಯ ವಿಚಾರವಾಗಿ ನಾವು ಚುನಾವಣೆಯನ್ನು ಎದುರಿಸಬೇಕಾಗಿದೆ ಎಂದರು.
ಬಿಜೆಪಿ ಸಂಸದರಿದ್ದ ಕಳೆದ ಮೂವತ್ಮೂರು ವರ್ಷಗಳಲ್ಲಿ ಜಿಲ್ಲೆ ಅಭಿವೃದ್ಧಿ ಶೂನ್ಯವಾಗಿದೆ. ಕಾಂಗ್ರೆಸ್ ಸಂಸದರಿದ್ದಾಗ ಆಗಿದ್ದ ಅಭಿವೃದ್ಧಿ, ಜಿಲ್ಲೆಗೆ ಬಂದಿದ್ದ ಯೋಜನೆಗಳು ಜಿಲ್ಲೆಯನ್ನು ಮಾದರಿಯಾಗಿ ರೂಪಿಸಿತ್ತು. ಮುಂದೆಯೂ ಜಿಲ್ಲೆ ದೇಶದಲ್ಲೇ ಮಾದರಿಯಾಗಿ ರೂಪುಗೊಳ್ಳಲು ಕಾಂಗ್ರೆಸನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಇಂದು ಅಭಿವೃದ್ಧಿಯ ವಿಚಾರವಾಗಿ ಚರ್ಚೆ ಆಗಬೇಕಾಗಿದೆ. ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ ಹಾಗೂ ನುಡಿದಂತೆ ನಡೆಯಲಿದ್ದೇವೆ. ಈಗಾಗಲೇ ಗ್ಯಾರೆಂಟಿ ಯೋಜನೆ ನೀಡಿ, ಅನುಷ್ಠಾನ ಮಾಡಲಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಇನ್ನು ಹಲವು ಗ್ಯಾರೆಂಟಿ ಯೋಜನೆಗಳು ಸಿಗಲಿವೆ ಎಂದರು.
ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ ಮಾತನಾಡಿ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅತ್ಯುತ್ತಮ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಪೂಜಾರಿ ಇದ್ದಾರೆ. ನಮ್ಮ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಗೇರುನಿಗಮದ ಅಧ್ಯಕ್ಷೆ ಮಮತ ಗಟ್ಟಿ, ಗ್ರಾ.ಪಂ. ಅಧ್ಯಕ್ಷೆ ಸುಮತಿ ಶಕ್ತಿವೇಲು, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಕಾಂಗ್ರೆಸ್ ಮುಖಂಡರಾದ ಜಿ. ಕೃಷ್ಣಪ್ಪ, ಟಿ.ಎಂ. ಶಹೀದ್, ವೆಂಕಪ್ಪ ಗೌಡ, ನಿತ್ಯಾನಂದ ಮುಂಡೋಡಿ, ಎಂ.ಎಸ್. ಮಹಮ್ಮದ್, ಜಿ.ಕೆ. ಹಮೀದ್, ಎಸ್.ಕೆ. ಹನೀಫ್, ಅಬೂಸಾಲಿ ಗೂನಡ್ಕ, ಕಿರಣ್ ಬುಡ್ಲೆಗುತ್ತು, ಮಹಮದ್ ಕುಂಞಿ ಗೂನಡ್ಕ, ಗೀತಾ ಕೋಲ್ಚಾರ್ , ಕೆ.ಪಿ. ಜಾನಿ ಕಲ್ಲುಗುಂಡಿ, ವಸಂತ ಪೆಲ್ತಡ್ಕ, ಎ.ಕೆ. ಇಬ್ರಾಹಿಂ, ಶೌವಾದ್ ಗೂನಡ್ಕ, ಯಮುನ ಬಿ.ಎಸ್., ಸುಂದರಿ ಮುಂಡಡ್ಕ, ಕಾಂತಿ ಬಿ.ಎಸ್., ಲೂಕಾಸ್ ಟಿ., ಲಿಸ್ಸಿ ಮೊನಾಲಿಸಾ, ರಾಜು ನೆಲ್ಲಿಕುಮೇರಿ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ವಹೀದಾ ಇಸ್ಮಾಯಿಲ್, ಡಿಸಿಸಿ ಉಪಾಧ್ಯಕ್ಷೆ ರಾಜೀವಿ ಆರ್. ರೈ, ಡಿಸಿಸಿ ಸದಸ್ಯೆ ಜೂಲಿಯಾನಾ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಭೇಟಿ:
ರೋಡ್ ಶೋ, ಕಾರ್ನರ್ ಸಭೆಯ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.
ಸುಳ್ಯ
Kadaba-ಕಡಬ : ಕುಮಾರಧಾರ ನದಿಯಲ್ಲಿ ಮೊಸಳೆ ಮೃತಪಡಲು ಪ್ಲಾಸ್ಟಿಕ್ ಸೇವನೆ ಯೇ ಕಾರಣ – ನದಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಪರಿಸರ ಪ್ರೇಮಿಗಳ ಕಿಡಿ
ಕಡಬ ಸಮೀಪದ ಪುಳಿಕುಕ್ಕು ಬಳಿ ಕುಮಾರಧಾರ ನದಿಯಲ್ಲಿ ಮೃತಪಟ್ಟ ಮೊಸಳೆಯ ಸಾವಿಗೆ ಪ್ಲಾಸ್ಟಿಕ್ ಸೇವನೆ ಮಾಡಿರುವುದೇ ಕಾರಣ ಎನ್ನುವುದು ಮೊಸಳೆಯ ಮೃತದೇಹದ ಮರಣೋತ್ತರ ಪರೀಕ್ಷೆಯ ವೇಳೆ ದೃಢಪಟ್ಟಿದೆ. ಮರಣೋತ್ತರ ಪರೀಕ್ಷೆ ವೇಳೆ ಮೃತ ಮೊಸಳೆಯ ಹೊಟ್ಟೆಯಲ್ಲಿ 1 ಕೆ.ಜಿ.ಗೂ ಅಧಿಕ ಪ್ಲಾಸ್ಟಿಕ್ ಹಾಗೂ ಮತ್ತಿತರ ತ್ಯಾಜ್ಯ ಪತ್ತೆಯಾಗಿದೆ.
ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು ಸೇತುವೆ ಕೆಳಭಾಗದ ಕುಮಾರಧಾರ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆಯಾಗಿತ್ತು.. ಅರಣ್ಯ ಇಲಾಖೆಯ ಏನೆಕಲ್ಲು ನರ್ಸರಿ ಪ್ರದೇಶದಲ್ಲಿ ಮೊಸಳೆಯ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಡಬ ತಾಲೂಕು ಪಶು ವೈದ್ಯಾಧಿಕಾರಿ ಡಾ.ಅಜಿತ್ ನಡೆಸಿದರು.
ಮರಣೋತ್ತರ ಪರೀಕ್ಷೆ ವೇಳೆ ಮೊಸಳೆಯ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ ಕೋಳಿ ತ್ಯಾಜ್ಯ, ಮಕ್ಕಳಿಗೆ ಬಳಸುವ ಪ್ಯಾಡ್ ಪತ್ತೆಯಾಗಿತ್ತು. . ಈ ತ್ಯಾಜ್ಯ ಮೊಸಳೆಯ ಹೊಟ್ಟೆಯಲ್ಲಿ ಜೀರ್ಣಗೊಳ್ಳದೆ ಅಸೌಖ್ಯಗೊಂಡು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಇದೊಂದು ಹೆಣ್ಣು ಮೊಸಳೆಯಾಗಿದ್ದು ನಾಲ್ಕು ವರ್ಷ ವಯಸ್ಸಿನದ್ದು ಎಂದು ಅಂದಾಜಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಏನೆಕಲ್ಲಿನ ನರ್ಸರಿ ಪ್ರದೇಶದಲ್ಲಿ ಮೊಸಳೆ ಕಳೆಬರಹದ ಅಂತ್ಯ ಕ್ರಿಯೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಅರಣ್ಯ ಉಪವಿಭಾಗ ಎಸಿಎಫ್ ಪ್ರವೀಣ್ ಕುಮಾರ್ ಶೆಟ್ಟಿ, ಪಂಜ ವಲಯ ಅರಣ್ಯಾಕಾರಿ ಗಿರೀಶ್, ಉಪ ವಲಯಾರಣ್ಯಾಕಾರಿಗಳಾದ ಸುಬ್ರಹ್ಮಣ್ಯ, ಅಜಿತ್ ಮತ್ತಿತರರು ಭಾಘವಹಿಸಿದ್ದರು.
ಕೆಲವು ಕಿಡಿಗೇಡಿಗಳು ಕೋಳಿ ತ್ಯಾಜ್ಯ, ದನ ಕಡಿದು ಮಾಂಸ ಮಾಡಿರುವುದರ ತ್ಯಾಜ್ಯಗಳನ್ನು ನೇರವಾಗಿ ನದಿಗೆ ಎಸೆಯುತ್ತಾರೆ. ಗೋ ಕಳ್ಳರು ರಾತ್ರಿ ಹೊತ್ತು ಯಾರೂ ಇಲ್ಲದ ವೇಳೆ ನದಿಗೆ ತ್ಯಾಜ್ಯ ಎಸೆದರೆ, ಕೋಳಿ ತ್ಯಾಜ್ಯ ಎಸೆಯುವವರು ರಾತ್ರಿ ತಮ್ಮ ಅಂಗಡಿ ಬಂದ್ ಮಾಡಿದ ಬಳಿಕ ಜನಸಂದಣೀ ಇಲ್ಲದಿದ್ದ ಸಮಯ ಗಮನಿಸಿ ನದಿಗೆ ಅಥವಾ ತೋಡಿಗೆ ಎಸೆದು ಬರುತ್ತಾರೆ. ಇದರಿಂದ ನೀರು ಕಲುಷಿತಗೊಂಡು, ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ. ಇನ್ನು ಇದನ್ನು ಸೇವಿಸುವ ಜಲಚರಗಳು ಸಾವನ್ನಪ್ಪುತ್ತಿವೆ. ಇದರ ವಿರುದ್ದ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ
-
ಮಂಗಳೂರು2 days ago
Adyar Bonda factory-ಅಡ್ಯಾರ್ ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ – ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ
-
ಅಪರಾಧ2 days ago
Covishield-ಕೋವಿಶೀಲ್ಡ್ ಲಸಿಕೆಯಿಂದ ಸೈಡ್ ಎಪೆಕ್ಟ್ – ಮೊದಲ ಬಾರಿ ಒಪ್ಪಿಕೊಂಡ ಉತ್ಪಾದಕ ಕಂಪೆನಿ; ‘ಥೋಂಬೋಸಿಸ್” ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ
-
ಅಂತರ ರಾಜ್ಯ2 days ago
April temperature-ನೂರು ವರ್ಷದ ದಾಖಲೆ ಮುರಿದ ಏಪ್ರಿಲ್ ತಿಂಗಳ ಉಷ್ಣಾಂಶ; ಇನ್ನೂ 5 ದಿನ ಮುಂದುವರಿಯುವ ಸಾಧ್ಯತೆ
-
ಬಿಗ್ ನ್ಯೂಸ್1 day ago
Eshwarappa Son | ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಬೆನ್ನಲ್ಲೇ ರೆಬಲ್ ನಾಯಕ ಈಶ್ವರಪ್ಪ ಪುತ್ರನಿಂದ ತಡೆಯಾಜ್ಞೆ..!
-
ಅಪರಾಧ2 days ago
Hasana Files 2 ಪೆನ್ ಡ್ರೈವ್, 2900ಕ್ಕೂ ಅಧಿಕ ಅಶ್ಲೀಲ ವಿಡಿಯೋ – 40 ಜಿಬಿ ಪೆನ್ ಡ್ರೈವ್ SIT ವಶ: ಜೀವ ಭೀತಿಯಲ್ಲಿ ಸಂತ್ರಸ್ತೆಯರು – ಮನಃಶಾಸ್ತ್ರಜ್ಞರ ನೆರವು ನೀಡಲು ಸಿದ್ದತೆ
-
ಚಿನ್ನ-ಬೆಳ್ಳಿ ದರ2 days ago
Gold Rate Today -ಚಿನ್ನ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ; ಚಿನ್ನ, ಬೆಳ್ಳಿ ಬೆಲೆ ಇಳಿಕೆ
-
ಅಪರಾಧ2 days ago
Low marks-ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ-ಪರಸ್ಪರ ಚಾಕುವಿನಿಂದ ಇರಿದುಕೊಂಡ ತಾಯಿ, ಮಗಳು; ಮಗಳು ಕೊಲೆಯಾದರೆ, ತಾಯಿ ಗಂಭೀರ
-
ಬಿಗ್ ನ್ಯೂಸ್2 days ago
Prajwal Revanna Videos | ಮೈತ್ರಿಗೆ ಮೊದಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಗ್ಗೆ ಬಿಜೆಪಿ ಹೈಕಮಾಂಡ್ ಗೆ ಪತ್ರ ಬರೆದಿದ್ದ ಬಿಜೆಪಿ ಮುಖಂಡ..!