Connect with us

ದಕ್ಷಿಣ ಕನ್ನಡ

Arun Kumar Puttila : ಪುತ್ತಿಲ ಪರಿವಾರ ಕಛೇರಿ ಮುಂಭಾಗ ತಲವಾರು ಪ್ರದರ್ಶನ – ಪ್ರಕರಣ ಹಾಗೂ ಆ ಬಳಿಕ ಏನೆಲ್ಲಾ ಆಯಿತು? ಸಂಪೂರ್ಣ ಮಾಹಿತಿ ಇಲ್ಲಿದೆ

Ad Widget

Ad Widget

ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಪುತ್ತೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ, ಪ್ರಭಾವಿ ಹಿಂದೂ ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್‌ ಕುಮಾರ್‌ ಪುತ್ತಿಲರವರ ಕಚೇರಿ ಬಳಿ 9 ಮಂದಿ  ಯುವಕರ ತಂಡವೊಂದು ಮಾರಾಕಾಯುಧಗಳೊಂದಿಗೆ ಬಂದ ಘಟನೆ ಪುತ್ತೂರಿನ ಹೊರವಲಯ ಮುಕ್ರಂಪಾಡಿ ಬಳಿ ನಡೆದಿದೆ . ಶುಕ್ರವಾರ (ನ 10) ರಂದು ಮಧ್ಯಾಹ್ನ 1.30 ಸುಮಾರಿಗೆ ಸುಭದ್ರ ಹಾಲ್‌ ಬಳಿಯಿರುವ ಪುತ್ತಿಲ ಪರಿವಾರ ಕಛೇರಿಯಲ್ಲಿ ನಡೆದಿದ್ದೂ 9 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ಇಬ್ಬರು ಅಪ್ರಾಪ್ತರು.

Ad Widget

Ad Widget

Ad Widget

Ad Widget

ಹಿಂದೂ ಜಾಗರಣ ವೇದಿಕೆಯ ಪುತ್ತೂರು  ಜಿಲ್ಲಾ ಮುಖಂಡ ದಿನೇಶ್‌ ಪಂಜಿಗ ನೇತ್ರತ್ವದ 6 ಕ್ಕೂ ಹೆಚ್ಚು ಮಂದಿಯ ತಂಡ ಬೆನ್ನಿನಲ್ಲಿ ತಲ್ವಾರು ಇಟ್ಟುಕೊಂಡು ʼಪುತ್ತಿಲ ಪರಿವಾರʼದ ಕಛೇರಿಯ ಮುಂದೆ ಆಗಮಿಸಿ, ಕಚೇರಿಯಲ್ಲಿದ್ದವರ  ಜತೆ ವಾಗ್ವಾದ ನಡೆಸುವ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 

Ad Widget

Ad Widget

Ad Widget
ಬೆನ್ನಿನಲ್ಲಿ ತಲ್ವಾರು ಇಟ್ಟಿರುವುದು

ದುಷ್ಕರ್ಮಿಗಳ ತಂಡ ಪುತ್ತಿಲ ಪರಿವಾರದ ಕಛೇರಿಗೆ ಬಂದ ವೇಳೆ ಅಲ್ಲಿ  ಪುತ್ತಿಲ ಪರಿವಾರದ ಪ್ರಮುಖರಾದ ಕೃಷ್ಣ ಪ್ರಸಾದ್‌ ಶೆಟ್ಟಿ, ಅನಿಲ್‌ ತೆಂಕಿಲ ಹಾಗೂ ವಿಜೇತ್‌  ಮತ್ತಿತ್ತರರಿದ್ದರು. ಪ್ರತ್ಯಕ್ಷ ದರ್ಶಿಗಳ ಪ್ರಕಾರ ದಿನೇಶ್‌ ಪಂಜಿಗ ಹಾಗೂ ಇತರ 8 ಮಂದಿ ಮಾರಕಾಯುಧಗಳೊಂದಿಗೆ ಆಗಮಿಸಿ ಯಾರಿಗೋ ಹುಡುಕಾಟ ನಡೆಸಿದ್ದಾರೆ. ಅಲ್ಲಿ ಅವರಿಗೆ ಬೇಕಾದ ವ್ಯಕ್ತಿ  ಕಾಣದಿದ್ದಾಗ ಪುತ್ತಿಲ ಪರಿವಾರದ ಪ್ರಮುಖರೊಬ್ಬರ  ಬಗ್ಗೆ  ವಿಚಾರಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ದಿನೇಶ್‌ ಅವರನ್ನು  ಕೃಷ್ಣ ಪ್ರಸಾದ್‌ ಶೆಟ್ಟಿಯವರು ಸಮಾಧನಿಸಲು ಪ್ರಯತ್ನಿಸಿದ್ದಾರೆ.

Ad Widget
ಘಟನೆ ನಡೆದ ಪುತ್ತಿಲ ಪರಿವಾರದ ಕಛೇರಿ

ಸಿಸಿಟಿವಿ ವಿಡಿಯೋ:

Ad Widget

Ad Widget

ಪೊಲೀಸರ ಮಿಂಚಿನ ಕಾರ್ಯಚರಣೆ

ಕಛೇರಿ ಮುಂಭಾಗ ತಲ್ವಾರು ಝಳಪಿಸಿದ ಮಾಹಿತಿ ದೊರಕುತ್ತಲೇ ಮಿಂಚಿನ ಕಾರ್ಯಚರಣೆ ನಡೆಸಿದ ಪುತ್ತೂರು ನಗರ ಠಾಣೆ ಪೊಲೀಸರು ಕೃತ್ಯ ಎಸಗಿದ ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.  ವಾಟ್ಸಾಪ್‌ ಗ್ರೂಪ್‌ ಒಂದರಲ್ಲಿ ಪುತ್ತಿಲ ಪರಿವಾರದ ಪ್ರಮುಖರಾದ ಮನೀಶ್‌ ಕುಲಾಲ್‌  ಹಾಗೂ ದಿನೇಶ್‌ ಪಂಜಿಗರವರು ರಾಜಕೀಯ ವಿಚಾರವಾಗಿ ಚರ್ಚೆ ನಡೆಸಿದ್ದು ಅದು ವಿಕೋಪಕ್ಕೆ ಹೋಗಿದೆ. ಬಳಿಕ ಅವರಿಬ್ಬರು ಫೋನ್‌ ನಲ್ಲೂ ಈ ಕುರಿತು ಜಗಳವಾಡಿಕೊಂಡಿದ್ದಾರೆ.  ಅದರ ಮುಂದುವರಿದ ಭಾಗವಾಗಿ ಈ ಪ್ರಕರಣ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 

ಠಾಣೆ ಮುಂದೆ ಜಮಾಯಿಸುರುವ ಇತ್ತಂಡದ ಮುಖಂಡರು

ಠಾಣೆಗೆ ಬಿಜೆಪಿ ಮುಖಂಡರ ದೌಡು

ಆರೋಪಿಗಳನ್ನು ಠಾಣೆಗೆ ಕರೆದು ಕೊಂಡು ಹೋದ ಮಾಹಿತಿ ಪಡೆಯುತ್ತಲೇ, ಠಾಣೆಗೆ ಬಿಜೆಪಿ ಪ್ರಮುಖರು ಧಾವಿಸಿದ್ದಾರೆ.  ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮುಖಂಡರಾದ ಹರಿಪ್ರಸಾದ್‌ ಯಾದವ್‌,  ಹರೀಶ್‌ ಬಿಜತ್ರೆ ರಾಜೇಶ್‌ ಬನ್ನೂರು, ಉಳಿದಂತೆ ದಿನೇಶ್‌ ಜೈನ್‌, ಶ್ರೀಧರ ತೆಂಕಿಲ ಆಗಮಿಸಿ ಪೊಲೀಸ್‌ ಠಾಣೆಯಲ್ಲಿ ಪಂಚಾತಿಕೆ ಮಾಡುವ ಮೂಲಕ ರಾಜಿಗೆ  ಮುಂದಾಗಿದ್ದಾರೆ.  ಈ ವೇಳೆ ಡಿವೈಎಸ್ಪಿ ಗಾನಾ ಪಿ ಕುಮಾರಿ, ಇನ್ಸ್‌ಪೆಕ್ಟರ್‌ ಸುನೀಲ್‌ ಕುಮಾರ್‌ ಹಾಗೂ ಎಸೈ ಅಂಜನೇಯ ರೆಡ್ಡಿಯವರು ಠಾಣೆಯ  ಸ್ವಾಗತಕಾರರು ಹಾಗೂ  ಠಾಣಾಧಿಕಾರಿ ಕೂರುವ ಕೊಠಡಿಯಲ್ಲಿ  ಬಿಜೆಪಿ ಮುಖಂಡರನ್ನು ಕೂರಿಸಿ ಅರ್ಧ ಗಂಟೆಗೂ ಅಧಿಕ ಕಾಲ ಮಾತುಕತೆ ನಡೆಸಿದ್ದರು.

ಡಿವೈಎಸ್ಪಿ ನೇತ್ರತ್ವದಲ್ಲಿ ಠಾಣೆ ಮುಂದೆ ಜಮಾಯಿಸಿದವರನ್ನು ಪೊಲೀಸರು ಚದುರಿಸುತ್ತಿರುವುದು

ಪುತ್ತಿಲ ಪರಿವಾರ ಮುಖಂಡರ ಆಗಮನ

ಇದೇ ಸಮಯದಲ್ಲಿ ಪುತ್ತಿಲ ಪರಿವಾರದ ಪ್ರಮುಖರಾದ ಅರುಣ್‌ ಕುಮಾರ್‌ ಪುತ್ತಿಲ, ಪ್ರಸನ್ನ ಮಾಡ್ತಾ, ಉಮೇಶ್‌, ಪ್ರವೀಣ್‌ ಶೆಟ್ಟಿ ಮತ್ತಿತ್ತರರು ಠಾಣೆಗೆ ಆಗಮಿಸಿದರು. ಅವರನ್ನು ಇನ್ಸ್‌ ಪೆಕ್ಟರ್‌ ಛೇಂಬರ್‌ ನಲ್ಲಿ ಕುಳ್ಳಿರಿಸಿ ಅಧಿಕಾರಿಗಳು  ಮಾತುಕತೆ ನಡೆಸಿದರು. ಇದು ಬಿಜೆಪಿ ಮುಖಂಡರನ್ನು ಕೆರಳಿಸಿದ್ದು,  ನಾವು ಮೊದಲು ಬಂದಿದ್ದೇವೆ, ನೀವು ಅವರನ್ನು ಚೇಂಬರ್‌ ಗೆ ಕರೆಸಿ ಮಾತುಕತೆ ನಡೆಸಿದ್ದೀರಿ  ಠಾಣೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಎಂದು  ಕೋಪದಲ್ಲಿ ಆಗ್ರಹಿಸಿದರು. ಇತ್ತ ಪುತ್ತಿಲ ಪರಿವಾರದವರು  ಘಟನೆಯನ್ನು  ರಾಜಿಯಲ್ಲಿ ಮುಗಿಸಲು ಒಪ್ಪದೇ  ಪ್ರಕರಣ ದಾಖಲಿಸುವಂತೆ ಸೂಚಿಸಿದರು. ಬಳಿಕ ಬಿಜೆಪಿ ಮುಖಂಡರು ಠಾಣೆಯಿಂದ ಹಿಂತಿರುಗಿದರು.

 ಬಿಜೆಪಿ ಮುಖಂಡರ ಜತೆ ಪೊಲೀಸ್‌ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದ ವೇಳೆ  ಠಾಣೆ ಸುತ್ತ ಜನ ಜಮಾಯಿಸಿದ್ದು, ಮಾತುಕತೆಯ ವಿಷಯ ಬಹಿರಂಗವಾಗಬಾರದು ಎಂಬ ಕಾರಣಕ್ಕೆ ಪೊಲೀಸರು ಅವರನ್ನು ಚದರಿಸಲು ಯತ್ನಿಸಿದರು. ಈ ವೇಳೆ ಪತ್ರಕರ್ತರನ್ನು ಠಾಣೆಯ ಎದುರಿನಿಂದ ಹೋಗುವಂತೆ ಸೂಚಿಸಿದರು.  

ಘಟನೆಯ ಕುರಿತು ಅರುಣ್‌ ಕುಮಾರ್‌ ಪುತ್ತಿಲ ಹೇಳಿದ್ದೇನು ?

6 ತಿಂಗಳ ಹಿಂದಿನವರೆಗೂ ದಿನೇಶ್‌ ಪಂಜಿಗ ಹಾಗೂ ಮನೀಶ್‌ ಕುಲಾಲ್‌ ಇಬ್ಬರು ಹಿಂದೂ ಜಾಗರಣೆ ವೇದಿಕೆಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅರುಣ್‌ ಕುಮಾರ್‌ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ವೇಳೆ ಅವರ ಜತೆ ಮುಂಚೂಣಿಯಲ್ಲಿ ಮನೀಶ್‌ ಕುಲಾಲ್‌ ಕಾಣಿಸಿಕೊಂಡಿದ್ದರು. ಆದರೇ ದಿನೇಶ್‌ ಪಂಜಿಗ ಬಿಜೆಪಿ ಪಕ್ಷ ಜತೆಯೇ ಗುರುತಿಸಿಕೊಂಡಿದ್ದರು.

Click to comment

Leave a Reply

ಪುತ್ತೂರು

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಪ್ರಾಚಿ ಪುರಾತನ ಆಭರಣಗಳ ಪ್ರದರ್ಶನ ಹಾಗೂ ಮಾರಾಟ

Ad Widget

Ad Widget

ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಡಿಸೆಂಬರ್ 8ರಿಂದ ಪ್ರಾಚಿ ಪುರಾತನ ಆಭರಣಗಳ ಪ್ರದರ್ಶನ ಹಾಗೂ ಮಾರಾಟವನ್ನು ಆಯೋಜಿಸಲಾಗಿದೆ. ಗ್ರಾಹಕರು ಪ್ರಾಚಿ ಆ್ಯಂಟಿಕ್ ಚಿನ್ನಾಭರಣಗಳ ಖರೀದಿಗೆ ವಿಶೇಷ ರಿಯಾಯಿತಿ ಹಾಗೂ ಅಚ್ಚರಿಯ ಕೊಡುಗೆಗಳನ್ನು ಪಡೆಯುವ ಅವಕಾಶವಿದೆ.

Ad Widget

Ad Widget

Ad Widget

Ad Widget

1957 ರಲ್ಲಿ ಆರಂಭಗೊಂಡ ಸಂಸ್ಥೆಯು ಆಭರಣಗಳ ಮಾರಾಟದಲ್ಲಿ ತನ್ನದೇ ಛಾಪು ಮೂಡಿಸಿದೆ. ವಿಶ್ವಾಸ, ಪರಿಶುದ್ಧತೆ, ಪರಂಪರೆ, ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸಂಸ್ಥೆ ಮನೆಮಾತಾಗಿದೆ. ಆ್ಯಂಟಿಕ್ ಆಭರಣಗಳು, ಅನ್ ಕಟ್ ಡೈಮಂಡ್ಸ್ ಹಾಗೂ ಅಮೂಲ್ಯ ಹರಳುಗಳ ವಿಪುಲ ಸಂಗ್ರಹವಿದ್ದು ಗ್ರಾಹಕರು ಆರಾಮದಾಯಕವಾಗಿ ಶಾಪಿಂಗ್ ಮಾಡಲು ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ.

Ad Widget

Ad Widget

Ad Widget

ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಷರತ್ತುಗಳು ಅನ್ವಯದೊಂದಿಗೆ ಈ ಆಫರ್ ಪುತ್ತೂರು ಹಾಗೂ ಸುಳ್ಯ ಮಳಿಗೆಗಳಲ್ಲಿ ಮಾತ್ರ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Ad Widget
Continue Reading

ದಕ್ಷಿಣ ಕನ್ನಡ

ಧರ್ಮಸ್ಥಳ ಲಕ್ಷದೀಪೋತ್ಸವ : ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ – ಪಾದಯಾತ್ರಿಗಳಿಂದ ಭೀಷ್ಮ ಪ್ರತಿಜ್ಞೆ : ಹೆಗ್ಗಡೆಯವರ ಸಂಸದರ ನಿಧಿಯಿಂದ ಬೀದರ್ ನಲ್ಲಿ ಕ್ಷೀರಕ್ರಾಂತಿ

Ad Widget

Ad Widget

ಉಜಿರೆ: ಹೃದಯ ಪರಿವರ್ತನೆಯಿಂದ ಅದ್ಭುತ ಪ್ರಗತಿ ಸಾಧ್ಯವಾಗುತ್ತದೆ. ಎಲ್ಲರನ್ನೂ ಜಯಿಸಿ ಸರ್ವರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

Ad Widget

Ad Widget

Ad Widget

Ad Widget

ಅವರು ಲಕ್ಷದೀಪೋತ್ಸವ ಸಂದರ್ಭದಲ್ಲಿ ಶುಕ್ರವಾರ ಶಿವನಾಮ ಸ್ಮರಣೆಯೊಂದಿಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಹತ್ತು ಸಾವಿರಕ್ಕೂ ಮಿಕ್ಕಿ ಭಕ್ತರನ್ನು ಅಭಿನಂದಿಸಿ ಮಾತನಾಡಿದರು.

Ad Widget

Ad Widget

Ad Widget

ನಾವು ಎಲ್ಲರಲ್ಲಿಯೂ ಒಳ್ಳೆಯತನವನ್ನು ಕಾಣಬೇಕು. ದೋಷವನ್ನು ಹುಡುಕಬಾರದು. ಯಾವಾಗಲೂ ಕೆಟ್ಟ ಯೋಚನೆ ಮಾಡದೆ ಸದಾಶಯದೊಂದಿಗೆ ಸತ್ಕಾರ್ಯಗಳನ್ನೇ ಮಾಡಿದರೆ ಲೋಕಕಲ್ಯಾಣವಾಗುತ್ತದೆ.

Ad Widget

ಎಲ್ಲರಲ್ಲಿಯೂ ಪರಸ್ಪರ ಪ್ರೀತಿ-ವಿಶ್ವಾಸ, ನಂಬಿಕೆ ಮತ್ತು ಗೌರವ ಬೆಳೆಯುತ್ತದೆ. ದೇವರು ನನಗೆ ಕೊಟ್ಟ ಎಲ್ಲಾ ಅವಕಾಶಗಳನ್ನು ಮತ್ತು ಸಂಪತ್ತನ್ನು ಬಳಸಿ ಸತ್ಕಾರ್ಯಗಳನ್ನೇ ಮಾಡಿದ್ದೇನೆ. ಅಗಾಧ ಸಂಪತ್ತಿಗಿAತ ಸತ್ಕಾರ್ಯಕ್ಕೆ ಮೌಲ್ಯ ಜಾಸ್ತಿ. ಎಲ್ಲರೂ ಸೇರಿ ಜೊತೆಯಾಗಿ ಸತ್ಕಾರ್ಯಗಳನ್ನೇ ಮಾಡೋಣ ಎಂದು ಅವರು ಕಿವಿಮಾತು ಹೇಳಿದರು.

Ad Widget

Ad Widget

ಧರ್ಮಸ್ಥಳದ ಬಗ್ಗೆ ಯಾವುದೇ ಅನುಮಾನ, ಸಂಶಯ ಬೇಡ. ನೇರವಾಗಿ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಅವರು ಸಲಹೆ ನೀಡಿದರು.

ಸಂಸದರ ನಿಧಿಯಿಂದ ತನಗೆ ಮಂಜೂರಾದ ಎರಡೂವರೆ ಕೋಟಿ ರೂ. ಅನುದಾನವನ್ನು ಬೀದರ್ ಜಿಲ್ಲೆಗೆ ನೀಡಿದ್ದು ಅಲ್ಲಿ ಇದರಿಂದಾಗಿ ಕ್ಷೀರ ಕ್ರಾಂತಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಪಾದಯಾತ್ರೆ ಮೂಲಕ ಎಲ್ಲರೂ ನಿಮ್ಮ ಪ್ರೀತಿ-ವಿಶ್ವಾಸ, ಗೌರವ, ಭಕ್ತಿ ಮತ್ತು ಸಂತೋಷವನ್ನು ವ್ಯಕ್ತಪಡಿಸಿರುವಿರಿ. ಇದರಿಂದ ನನ್ನಲ್ಲಿ ತೃಪ್ತಿ, ಸಂತೋಷ ಮತ್ತು ಧನ್ಯತಾಭಾವ ಮೂಡಿಬಂದಿದೆ ಎಂದರು.

ಪಾದಯಾತ್ರಿಗಳ ಭೀಷ್ಮ ಪ್ರತಿಜ್ಞೆ: ಪಾದಯಾತ್ರಿಗಳೆಲ್ಲ ಸಂಘಟನೆ ಮೂಲಕ ಸತ್ಯ, ಧರ್ಮ, ನ್ಯಾಯ ಮತ್ತು ನೀತಿಗಾಗಿ ತಾವೆಲ್ಲರೂ ಧರ್ಮಸ್ಥಳದ ಜೊತೆ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜೊತೆ ಸದಾ ಇದ್ದೇವೆ ಎಂದು ಸಾಮೂಹಿಕವಾಗಿ ದೃಢಸಂಕಲ್ಪದೊಂದಿಗೆ ಭೀಷ್ಮ ಪ್ರತಿಜ್ಞೆ ಮಾಡಿದರು.

ಹೇಮಾವತಿ ವಿ ಹೆಗ್ಗಡೆಯವರು, ಶ್ರದ್ಧಾ ಅಮಿತ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ನಿಶ್ಚಲ್ ಕುಮಾರ್, ಸೋನಿಯವರ್ಮ, ಪೂರನ್‌ವರ್ಮ, ಶರತ್‌ಕೃಷ್ಣ ಪಡ್ವೆಟ್ನಾಯ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ.ಎಸ್. ಸತೀಶ್ಚಂದ್ರ, ಎಸ್.ಡಿ.ಎಮ್. ಕಾಲೇಜು ಪ್ರಾಂಶುಪಾಲ ಕುಮಾರ ಹೆಗ್ಡೆ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಎಚ್. ಮಂಜುನಾಥ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್. ಜನಾರ್ದನ್, ಎಸ್.ಡಿ.ಎಮ್ ಆಸ್ಪತ್ರೆಯ ನಿರ್ದೇಶಕ ಎಮ್. ಜನಾರ್ದನ ಸಿ.ಒ.ಒ. ಅನಿಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ವಕೀಲ ಬಿ.ಕೆ. ಧನಂಜಯ ರಾವ್ ಸ್ವಾಗತಿಸಿದರು. ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.

Continue Reading

ದಕ್ಷಿಣ ಕನ್ನಡ

ಈಶ್ವರಮಂಗಲ ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಬಸ್ಸು ಹರಿದು ಸಾವು – ಅದೇ ಬಸ್ಸಿನಿಂದ ಇಳಿದಿದ್ದರು..!

Ad Widget

Ad Widget

ಪುತ್ತೂರು : ಈಶ್ವರಮಂಗಲದ ಗಾಳಿಮುಖದಲ್ಲಿ ಖಾಸಗಿ ಬಸ್ಸಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಡಿ. 8ರಂದು ಸಂಭವಿಸಿದೆ. ಮುಳ್ಳೇರಿಯಾದ ಕೋಳಿಕಾಲ ನಿವಾಸಿ, ಕೃಷಿಕ ಕುಂಞಿರಾಮ ಮಣಿಯಾಣಿ ಮೃತಪಟ್ಟವರು.ʼ ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Ad Widget

Ad Widget

Ad Widget

Ad Widget

ಗಾಳಿಮುಖಕ್ಕೆ ಬಂದಿದ್ದ ಅವರು ಬಸ್ಸಿನಿಂದ ಇಳಿದು ರಸ್ತೆ ದಾಟುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಹಿಂಬದಿ ಬಾಗಿಲಿನಿಂದ ಇಳಿದಿದ್ದ ಕುಂಞಿರಾಮ ಮಣಿಯಾಣಿ ಅವರು, ಇನ್ನೊಂದು ಬದಿಗೆ ದಾಟುವಷ್ಟರಲ್ಲಿ ಬಸ್‌ ಚಲಿಸಿದ್ದು, ಬಸ್ಸಿನ ಮುಂಭಾಗದ ಚಕ್ರ ಕುಂಞಿರಾಮ ಅವರ ಎದೆಯ ಭಾಗದಿಂದ ಹರಿದಿದೆ. ಸಂಪ್ಯ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Ad Widget

Ad Widget

Ad Widget

ಚಾಲಕನ ಮೇಲೆ FIR

Ad Widget

ಕೇರಳ ನೋಂದಣಿಯ ಖಾಸಗಿ ಬಸ್ಸಿನ ಚಾಲಕ ಸುಜೀತ್ ವಿ ಎಂಬವರು  ನಿರ್ಲಕ್ಷತನ ಹಾಗೂ ಅಜಾಗರೂಕತೆಯಿಂದ ಬಸ್ಸನ್ನು ಚಲಾಯಿಸಿ ರಸ್ತೆ ದಾಟುತ್ತಿದ್ದ ಕುಂಞಿರಾಮ ಮಣಿಯಾಣಿ ಯವರಿಗೆ  ಡಿಕ್ಕಿ ಹೊಡೆದಿದ್ದು , ಆಗ ಅವರು  ಡಾಮಾರು ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ವೇಳೆ  ಅವರ ಮೇಲೆ ಬಸ್ ಚಲಿಸಿರುತ್ತದೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಕುಂಞಿರಾಮ ಮಣಿಯಾಣಿರವರು ಮೃತಪಟ್ಟಿರುತ್ತಾರೆ ಎಂದು ಮೃತರ ಚಿಕ್ಕಪ್ಪನ ಮಗ ಕೃಷ್ಣ ಎ ಎಂಬವರು   ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.  ಐಪಿಸಿ ಕಲಂ : 279,304(A)  ರಂತೆ ಪ್ರಕರಣ ದಾಖಲಾಗಿದೆ.

Ad Widget

Ad Widget
Continue Reading

Trending

error: Content is protected !!