ಉಡುಪಿ
ಉಡುಪಿ ನಾಲ್ವರ ಕಗ್ಗೊಲೆ : ತನಿಖೆಯ ದಾರಿ ತಪ್ಪಿಸಲು ಯತ್ನಿಸುತ್ತಿರುವ ಹಂತಕ ಬಾಯ್ಬಿಡುತ್ತಿಲ್ಲ..! ಕೊಲೆಯ ಮೋಟಿವ್ ಕುರಿತು ಬಗೆ ಹರಿಯದ ಅನುಮಾನ
ಮಂಗಳೂರು: ಉಡುಪಿಯ ನೇಜಾರಿನ ಮನೆಯೊಂದರಲ್ಲಿದ್ದ ನಾಲ್ವರ ಹತ್ಯೆಗೈದ ಆರೋಪಿ ಏರ್ ಇಂಡಿಯಾ ಕ್ಯಾಬಿನ್ ಕ್ರೂ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆ ಪೊಲೀಸರ ತನಿಖೆಗೆ ಸಹಕಾರ ನೀಡುತ್ತಿಲ್ಲ, ಪೊಲೀಸರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆತ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾದ್ಯಮಗಳಿಗೆ ಮಾಹಿತಿ ನೀಡಿದ್ದರು. ಅದರ ಹೊರತು ಕೊಲೆ ಮಾಡಿದ ಉದ್ದೇಶ ಹಾಗೂ ಕೃತ್ಯ ನಡೆಸಿದ ಘಟನಾವಳಿಗಳ ಮಾಹಿತಿಯನ್ನು ಇವರೆಗೆ ಒದಗಿಸಿಲ್ಲ ಎಂದು ತಿಳಿದು ಬಂದಿದೆ.
ಆರೋಪಿಯ ಎರಡು ಕೈ ಬೆರಳಿಗೆ ಗಾಯವಾಗಿದ್ದು, ಇದು ಹೇಗೆ ಆಯಿತು ಎನ್ನುವ ವಿಚಾರವನ್ನು ಆತ ಪೊಲೀಸರಿಗೆ ತಿಳಿಸಿಲ್ಲ ಎನ್ನಲಾಗಿದೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿದ ವೇಳೆ ಹತ್ಯೆ ನಡೆಸುವ ವೇಳೆ ಕೈಗಾದ ಗಾಯ ಎಂದು ಪೊಲೀಸರು ನ್ಯಾಯದೀಶರಿಗೆ ಸಮಜಾಯಿಷಿ ನೀಡಿದ್ದರು. ಆದರೇ ಅದನ್ನು ಆರೋಪಿ ಅಲ್ಲೆ ನಿರಾಕರಿಸಿದ್ದ. ಇನ್ನೂ ಹತ್ಯೆಗೆ ಬಳಸಿದ ಆಯುಧವು ಇವರೆಗೆ ಪತ್ತೆಯಾಗಿಲ್ಲ. ಒಂದು ಬಾರಿ ಅದನ್ನು ತಾನು ಮೂಲ್ಕಿ ಬಳಿ ನದಿಯಲ್ಲಿ ಬೀಸಾಡಿರುವುದಾಗಿ ತಿಳಿಸಿದರೇ, ಇನ್ನೊಮ್ಮೆ ಬೇರೆಲ್ಲೂ ಎಸೆದಿರುವುದಾಗಿ ತಿಳಿಸಿರುವುದಾಗಿ ವರದಿಯಾಗಿದೆ.

ಕೃತ್ಯಕ್ಕೆ ಬಳಸಿದ ಆಯುಧ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದು, ಪ್ರಾಷಿಕ್ಯೂಷನ್ ಗೆ ಆರೋಪವನ್ನು ಸಾಬೀತುಪಡಿಸಲು ಇದು ಬಲವಾದ ಆಧಾರವಾಗಿದೆ. ಇದು ಸಿಗದೇ ಹೋದರೆ ಅಷ್ಟರಮಟ್ಟಿಗೆ ಕೇಸಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಕುಟುಂಬದ ಯಜಮಾನ ನೂರ್ ಮಹಮ್ಮದ್ ಅವರ 70 ವರ್ಷದ ತಾಯಿ, ಕೃತ್ಯದ ವೇಳೆ ಗಂಭೀರ ಗಾಯಗೊಂಡ ಮಹಿಳೆ ಈ ಪ್ರಕರಣದ ಏಕೈಕ ಪ್ರತ್ಯಕ್ಷ ಸಾಕ್ಷಿ. ಬೊಬ್ಬೆ ಕೇಳಿ ಹೊರ ಬಂದ ನೋಡಿದ್ದಾಳೆ. ಆರೋಪಿಯನ್ನು ಮನೆಯವರೆಗೆ ಬಿಟ್ಟ ಆಟೋ ರಿಕ್ಷಾ ಚಾಲಕ ಹಾಗೂ ಹಂತಕ ಹತ್ಯಕಾಂಡ ನಡೆಸಿ ಮನೆಯಿಂದ ಹೊರ ಹೋಗುವದನ್ನು ನೋಡಿದ ಪಕ್ಕದ ಮನೆಯ ಯುವತಿ ( ನೂರ್ ಮಹಮ್ಮದ್ ಅವರ ಅಣ್ಣನ ಮಗಳು) ಪ್ರಕರಣದ ಪರೋಕ್ಷ ಸಾಕ್ಷಿಗಳು, ಆದರೆ ಇವರಿಬ್ಬರು ನೋಡಿದಾಗ ಹಂತಕ ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದ
ಇನ್ನು ಕೃತ್ಯ ಎಸಗಿದ ಬಳಿಕ ಪರಾರಿಯಾದ ಮಾರ್ಗ, ಬಳಸಿದ ವಾಹನಗಳ ಬಗ್ಗೆಯೂ ಮಾಹಿತಿ ನೀಡುವಾಗಲೂ ಪೊಲೀಸರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದನೆಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಆತ ಕೃತ್ಯ ಎಸಗಿದ ಬಳಿಕ ಬೈಕ್ ವೊಂದರಲ್ಲಿ ರಿಕ್ಷಾ ಸ್ಟ್ಯಾಂಡ್ ಬಳಿ ಬಂದು ಅಲ್ಲಿಂದ ತುಸು ದೂರ ಆಟೋ ರಿಕ್ಷಾದಲ್ಲಿ ತೆರಲ್ಲಿ ಅಲ್ಲಿಂದ ಉದ್ಯಾವರದವರೆಗೆ ಬೈಕ್ ನಲ್ಲಿ ಹೋಗಿರುವುದು ಸಿಸಿಟಿವಿ ಪರಿಶೀಲನೆ ವೇಳೆ ಬೆಳಕಿಗೆ ಬಂದಿತ್ತು. ಆದರೇ ಯಾವುದೇ ಸಿಸಿಟಿವಿಯಲ್ಲೂ ಆತನ ಮುಖ ಕಾಣಿಸಿಲ್ಲ. ಹೀಗಾಗಿ ಪ್ರಕರಣವನ್ನು ಸಾಬೀತು ಪಡಿಸಲು ಪರಾರಿಯ ವೇಳೆ ಆರೋಪಿಯನ್ನು ನೋಡಿದವರ ಸಾಂದರ್ಭಿಕ ಸಾಕ್ಷ್ಯದ ಅನಿವಾರ್ಯತೆ ಪ್ರಾಷಿಕ್ಯೂಷನ್ ಗೆ ಬೀಳಬಹುದು. ಇದೇ ಉದ್ದೇಶದಿಂದ ಆರೋಪಿ ಸರಿಯಾದ ಮಾಹಿತಿ ನೀಡದೆ ಪೊಲೀಸರ ದಾರಿ ತಪ್ಪಿಸುತ್ತಿದ್ದ ಎನ್ನಲಾಗಿದೆ.

ಆರೋಪಿ ಅಲ್ಲಿಂದ ಮಂಗಳೂರಿಗೆ ಹೇಗೆ ಹೋದ? ಎನ್ನುವ ಬಗ್ಗೆ ಪೊಲೀಸರಿಗೆ ಇನ್ನೂ ಸ್ಪಷ್ಟ ಮಾಹಿತಿ ದೊರಕಿಲ್ಲ ಎನ್ನಲಾಗುತ್ತಿದೆ. ಆರೋಪಿ ಮೂಲ್ಕಿಯಿಂದ ತನ್ನ ಕಾರಿನಲ್ಲಿ ಮಂಗಳೂರಿಗೆ ಹೋಗಿರಬಹುಎಂದು ಹೇಳಲಾಗುತ್ತಿದ್ದು, ಇನ್ನೊಂದು ಮೂಲದ ಪ್ರಕಾರ ಆತ ಉದ್ಯಾವರದಿಂದ ಮಂಗಳೂರಿಗೆ ಬಸ್ಸಿನಲ್ಲಿ ಹೋಗಿ ಅಲ್ಲಿಂದ ತನ್ನ ಹೆಕ್ಟರ್ ಕಾರಿನಲ್ಲಿ ಬೆಳಗಾವಿಯ ಸಂಬಂಧಿಕರ ಮನೆಗೆ ಕುಟುಂಬ ಸಮೇತ ಹೋಗಿರುವುದಾಗಿ ಹೇಳಲಾಗುತ್ತಿದೆ. ಈ ಕುರಿತ ನಿಖರ ಮಾಹಿತಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇನ್ನೂ ಲಭಿಸಿಲ್ಲ ಎನ್ನಲಾಗುತ್ತಿದೆ.
ಮಹಜರು ವೇಳೆಯೂ 25 ನಿಮಿಷಗಳ ಕಾಲ ಕೃತ್ಯ ನಡೆಸಿದ ರೀತಿ, ಆ ಕೊಲೆಗಳನ್ನು ಹೇಗೆ ಮಾಡಿದ ಎಂಬ ಬಗ್ಗೆಯೂ ತನಿಖೆಯ ದಾರಿ ತಪ್ಪಿಸುವ ರೀತಿಯಲ್ಲೆ ವರ್ತಿಸಿದ್ದಾನೆ ಎನ್ನಲಾಗುತ್ತಿದೆ. ಹೀಗಾಗಿ ಇನ್ನೊಂದು ಆರೋಪಿಯನ್ನು ಕೃತ್ಯ ನಡೆದ ಸ್ಥಳಕ್ಕೆ ಮಹಜರಿಗೆ ಕರೆದುಕೊಂಡು ಬರುವ ಸಾದ್ಯತೆಯೂ ಇದೆ.

ಗಗನ ಸಖಿಯಾಗಿರುವ ಹತ್ಯೆಯಾದ ಐನಾಝ್ ಕುರಿತಾಗಿ ಚೌಗ್ಲೆ ವಿಪರೀತವಾಗಿ ಪೊಸೆಸಿವ್ ಆಗಿದ್ದ. ಆಕೆ ಇತನನ್ನು ಅವಾಯ್ಡ್ ಮಾಡುತ್ತಿದ್ದದ್ದೆ ಕೊಲೆಗೆ ಕಾರಣ ಎನ್ನುವ ವಾದ ಸರಣಿಯನ್ನು ಹಲವು ಮಾದ್ಯಮಗಳು ಹೊರ ಬಿಡುತ್ತಿವೆ. ಆರೋಪಿ ಕೊಲೆಗೆ ಎರಡು ಮೂರು ಕಾರಣ ತಿಳಿಸಿದ್ದು, ಆತ ಐನಾಝ್ ಳನ್ನು ಅತಿಯಾಗಿ ಹಚ್ಚಿಕೊಂಡಿದ್ದು ಆಕೆ ತನ್ನ ನಿಯಂತ್ರಣದಲ್ಲಿರಬೇಕು ಮನಸ್ಥಿತಿಯಿಂದ ಕೊಲೆ ಮಾಡಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಕೆ. ಅರುಣ್ ಕುಮಾರ್ ತಿಳಿಸಿದ್ದಾರೆ.

ಆದರೇ ಕೇವಲ ಆಕೆಯ ಮೇಲೆ ದ್ವೇಷ ಇದ್ದರೇ ಅವಳು ಒಬ್ಬಂಟಿಯಾಗಿ ಸಿಗುವ ಸ್ಥಳದಲ್ಲಿ ಕೃತ್ಯ ಎಸಗುತ್ತಿದ್ದ. ಮನೆಯವರೆಗೂ ಹುಡುಕಿಕೊಂಡು ಹೋಗಿ ಅಲ್ಲಿ ಕೊಲೆ ಮಾಡುವ ರಿಸ್ಕ್ ಯಾಕೇ ತೆಗೆದುಕೊಳ್ಳುತ್ತಿದ್ದ. ಅದು ಮನೆಯಲ್ಲಿ ಅಷ್ಟು ಜನರಿರುವಾಗ ಎನ್ನುವ ಸಂಶಯ ಜನರನ್ನು ಕಾಡುತ್ತಿದೆ. ಇಡಿ ಉಡುಪಿ ಬೆಚ್ಚಿ ಬೀಳುವ ರೀತಿ ಬಾಲಕನ ಸಹಿತ ನಾಲ್ವರ ಕೊಲೆ ಮಾಡಿದ ಭಯಾನಕ ಹಂತಕ ಯಾವುದೇ ಕಾರಣಕ್ಕೂ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಬಾರದು, ಸಾಕ್ಷ್ಯದ ಕೊರತೆಯಿಂದ ಹೊರ ಬರಬಾರದು. ಹಾಗಾಗಿ ಪೊಲೀಸ್ ಇಲಾಖೆ ಸಮರ್ಪಕ ತನಿಖೆ ನಡೆಸಬೇಕು ಹಾಗೂ ಕೊಲೆಯ ಹಿಂದಿನ ಕಾರಣಗಳು ಬಯಲು ಮಾಡಬೇಕು. ಸಾಕ್ಷ್ಯ ಸಂಗ್ರಹದಲ್ಲಿ ಲೋಪ ಆಗಬಾರದು . ಇದೆ ವೇಳೆ ಹತ್ಯೆಯಾದವರ ಚಾರಿತ್ರಹರಣವು ನಡೆಯಬಾರದು ಎನ್ನುವುದು ಸಾರ್ವಜನಿಕರ ಬೇಡಿಕೆ
ಉಡುಪಿ
Bangalore Kambala ಬೆಂಗಳೂರು ಕಂಬಳದಲ್ಲಿ ಭಾಗವಹಿಸುವ ಕೋಣಗಳಿಗೆ ಮಂಗಳೂರಿಂದಲೇ ಕುಡಿಯುವ ನೀರು – ಯಾಕೆ ಗೊತ್ತಾ?

ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಆಚರಣೆಯಾದ ಕಂಬಳವನ್ನು ಆಚರಿಸುವುದು ವಿಶೇಷವಾಗಿದೆ.ನವೆಂಬರ್ 25 ಮತ್ತು 26 ರಂದು ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಶೀರ್ಷಿಕೆಯಡಿ ಕಂಬಳವನ್ನು ಆಯೋಜಿಸಲಾಗಿದೆ.
ಬೆಂಗಳೂರಿನಲ್ಲಿ ನಡೆಯಲಿರವ ಕಂಬಳಕ್ಕೆ ಕೋಣಗಳು ಆಗಮಿಸಲಿದ್ದು ಊರು ಬಿಟ್ಟು ಮತ್ತೊಂದು ಊರಿಗೆ ಕಂಬಳದ ಕೋಣಗಳು ಬರಲಿರುವುದರಿಂದ ಕೋಣಗಳ ಬಗ್ಗೆ ಮಾಲೀಕರು ವಿಶೇಷ ಮುತುವರ್ಜಿಯನ್ನು ವಹಿಸಲಿದ್ದಾರೆ. ಕಂಬಳದ ಕೋಣಗಳಿಗೆ ಕುಡಿಯಲು ನೀರು ಸಹ ಮಂಗಳೂರಿನಿಂದಲೇ ಬರಲಿದೆ. ಕಂಬಳದ ಕೋಣಗಳನ್ನು ತಮ್ಮ ಮಕ್ಕಳಿಗಿಂತಲೂ ಹೆಚ್ಚು ಪ್ರೀತಿಯಿಂದ ಸಾಕುವುದರಿಂದ ಅದಕ್ಕೆ ಹಾಕುವ ಆಹಾರದಿಂದ ಹಿಡಿದು ಕುಡಿಯುವ ನೀರಿನ ತನಕ ಮಾಲೀಕರು ಹೆಚ್ಚು ಹೆಚ್ಚು ಎಚ್ಚರಿಕೆಯಿಂದ ಇರುತ್ತಾರೆ ಕೋಣಗಳ ಮಾಲೀಕರು.
ಮಂಗಳೂರಿನಿಂದ ಕೋಣಗಳಿಗೆ ನೀರು ತರುವುದರ ಹಿಂದಿನ ಕಾರಣ:
ಕರಾವಳಿ ಮತ್ತು ಬೆಂಗಳೂರಿನ ವಾತಾವರಣ, ಜೀವನ ಶೈಲಿ, ಆಹಾರ ಪದ್ಧತಿ, ನೀರಿನಲ್ಲಿ ಸಾಕಷ್ಟು ವ್ಯತ್ಯಾಸ ಇರುವುದರಿಂದ ಬೆಂಗಳೂರಿನ ಆಹಾರ, ನೀರು ಕೊಡುವುದರಿಂದ ಕೋಣಗಳ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಹೀಗಾಗಿ ಕುಡಿಯಲು ನೀರನ್ನು ಸಹ ಕರಾವಳಿಯಿಂದಲೇ ತರಲು ಉದ್ದೇಶಿಸಲಾಗಿದೆ.
ಕಂಬಳದ ಕೋಣಗಳಿಗೆ ಬಾವಿ ನೀರು: ಕಂಬಳದ ಕೋಣಗಳಿಗೆ ಕುಡಿಯಲು ಮಾಲೀಕರ ಬಾವಿಯ ನೀರನ್ನೇ ನೀಡಲಾಗುತ್ತದೆ. ಕರಾವಳಿಯಲ್ಲಿ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ತೆರಳಿದಾಗ ನೀರು ಬದಲಾದರೂ ಭೇದಿ ಆರಂಭವಾಗುತ್ತದೆ. ಹೀಗಾಗಿ ಬೆಂಗಳೂರಿಗೆ ಕರಾವಳಿಯ ಬಾವಿ ನೀರನ್ನೇ ತೆಗೆದುಕೊಂಡು ಹೋಗಲು ನಿರ್ಧರಿಸಲಾಗಿದೆ. ಕೋಣಗಳನ್ನು ಕರೆದುಕೊಂಡು ಹೋಗುವಾಗ ನೀರು ತುಂಬಿದ ಟ್ಯಾಂಕರ್ಗಳು ಕೂಡ ಜೊತೆಯಲ್ಲಿ ಸಾಗಲಿವೆ. ವರ್ಷಗಟ್ಟಲೆ ಒಂದೇ ಬಾವಿಯ ನೀರು ಕುಡಿದ ಕೋಣಗಳಿಗೆ ಇಲ್ಲಿನ ನದಿ ನೀರು ಕುಡಿದರೂ ತೊಂದರೆಯಾಗುತ್ತದೆ. ಹುರುಳಿ, ಬೈ ಹುಲ್ಲಿನ ಸಮಸ್ಯೆ ಇಲ್ಲ. ನೀರಿನ ವಿಷಯದಲ್ಲಿ ಅತಿಸೂಕ್ಷ್ಮವಾಗಿ ಇರಬೇಕು’ ಎಂದು ಈಗಾಗಲೇ ತೀರ್ಮಾನ ಕೈಗೊಳ್ಳಲಾಗಿದೆ.
ಕಂಬಳದ ಕೋಣಗಳಿಗೆ ಯಾವುದೇ ಸಮಸ್ಯೆ ಆಗದಂತೆ ಊರಿನಿಂದಲೇ 8 ಟ್ಯಾಂಕರ್ನಷ್ಟು ನೀರು ತರಲು ನಿರ್ಧರಿಸಲಾಗಿದೆ. ಅವುಗಳಿಗೆ ಬೇಕಾದ ಆಹಾರವನ್ನೂ ಕರಾವಳಿಯಿಂದಲೇ ತರಿಸಲಾಗುತ್ತದೆ.
ಉಡುಪಿ
Bangalore Kambala : ಸಿಲಿಕಾನ್ ಸಿಟಿಯಲ್ಲಿ ನಡೆಯುವ ಕಂಬಳದಲ್ಲಿ ಗೆಲ್ಲುವ ಕೋಣಗಳಿಗೆ ಸಿಗಲಿದೆ ಭರ್ಜರಿ ಬಹುಮಾನ – ಇಲ್ಲಿದೆ ಬಹುಮಾನದ ವಿವರ

ಇದೇ ಮೊದಲ ಬಾರಿಗೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್ 25 ಮತ್ತು 26 ರಂದು ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಶೀರ್ಷಿಕೆಯಡಿ ಕಂಬಳವನ್ನು ಆಯೋಜಿಸಲಾಗಿದೆ.
.25ರಂದು ಬೆಳಗ್ಗೆ 10.30ಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಕಂಬಳ ಉದ್ಘಾಟಿಸಲಿದ್ದಾರೆ. ಕಂಬಳ ಮಹೋತ್ಸವದಲ್ಲಿ ಗೆಲ್ಲುವ ಕೋಣಗಳಿಗೆ ಭಾರೀ ಮೊತ್ತದ ನಗದು ಹಾಗೂ ಚಿನ್ನವನ್ನು ನೀಡಲಾಗುತ್ತದೆ.
ಕಂಬಳ ವಿಜೇತರ ಬಹುಮಾನ ವಿವರ ಹೀಗಿದೆ: ಬೆಂಗಳೂರು ಕಂಬಳದಲ್ಲಿ ವಿಜೇತರಾಗುವ ಕೋಣದ ಮಾಲೀಕರಿಗೆ 1 ಲಕ್ಷ ರೂ. ನಗದು, 16 ಗ್ರಾಂ ಸ್ವರ್ಣ ಕೊಡಲಾಗುತ್ತದೆ. ದ್ವಿತೀಯ ಸ್ಥಾನ ಗಳಿಸಿದವರಿಗೆ 50,000 ರೂ. ಜತೆಗೆ 8 ಗ್ರಾಂ ಚಿನ್ನ ಮತ್ತು ತೃತೀಯ ಸ್ಥಾನ ಪಡೆದವರಿಗೆ 25,000 ರೂ. ನಗದು ಹಾಗೂ 4 ಗ್ರಾಂ ಬಂಗಾರದ ಪದಕವನ್ನು ಬಹುಮಾನವಾಗಿ ನೀಡಲಾಗುತ್ತದೆ.
ಬೆಂಗಳೂರು ಕರಾವಳಿ ಕರ್ನಾಟಕದ 18 ಲಕ್ಷ ಜನರಿಗೆ ನೆಲೆಯಾಗಿದೆ. ಅವರಲ್ಲಿ ಸುಮಾರು ಎಂಟು ಲಕ್ಷ ಜನರು ಎರಡು ದಿನಗಳ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಗಳಿವೆ. ಕಂಬಳದ ವೇಳೆ ಆಹಾರ, ಕಲಾಕೃತಿಗಳು ಮತ್ತು ಇತರ ವಸ್ತುಗಳ 150 ಕ್ಕೂ ಹೆಚ್ಚು ಮಳಿಗೆಗಳನ್ನು ಹಾಕಲಾಗುತ್ತದೆ.
ಆರು ವಿಭಾಗಗಳಲ್ಲಿ ನಡೆಯಲಿದೆ ಬೆಂಗಳೂರು ಕಂಬಳ: ಕನೆಹಲಗೆ, ಅಡ್ಡಹಲಗೆ, ನೇಗಿಲು ಹಿರಿಯ ಮತ್ತು ಕಿರಿಯ ಜೊತೆಗೆ ಹಗ್ಗ ಹಿರಿಯ ಮತ್ತು ಕಿರಿಯ ಎಂಬ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ.

ಕಂಬಳಕ್ಕೆ ಸಾರ್ವಜನಿಕರಿಗೆ ಫ್ರೀ:ಹೌದು ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಇದೆ. ಯಾವುದೇ ಟಿಕೆಟ್ ಆಗಲಿ ಪಡೆದುಕೊಳ್ಳಲುವ ಅವಕಾಶ ಇಲ್ಲ. ಸಾರ್ವಜನಿಕರಿಗೆ ಪಾಸ್ ತೋರಿಸುವ ಅಗತ್ಯವೂ ಇಲ್ಲ. ಬದಲಾಗಿ ವಿಐಪಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು 24 ಎಕರೆ ಪ್ರದೇಶದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ವೀಕ್ಷಕರಿಗೆ ನೋಡಲು ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. 6 ರಿಂದ 7 ಸಾವಿರ ಜನರು ಇದರಲ್ಲಿ ಕುಳಿತುಕೊಂಡು ಕಂಬಳ ನೋಡಬಹುದು
ನ. 24 ರಂದು ಶುಕ್ರವಾರ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪರಮೇಶ್ವರ್, ಬಸವರಾಜ್ ಬೊಮ್ಮಯಿ, ಶೋಭಾ ಕರಂದ್ಲಾಜೆ ಸೇರಿದಂತೆ ಎಲ್ಲ ಶಾಸಕರು, ಸಚಿವರುಗಳು ಬರಲಿದ್ದಾರೆ. ಸರ್ಕಾರದಿಂದ ಒಂದು ಕೋಟಿ ಅನುದಾನ ಕೊಟ್ಟಿದ್ದಾರೆ. ಆದರೆ 7 ರಿಂದ 8 ಕೋಟಿ ಖರ್ಚಾಗುತ್ತಿದೆ. ಉಳಿದ ಹಣವನ್ನ ಸಂಘ- ಸಂಸ್ಥೆಗಳಿಂದ ಸಂಗ್ರಹಿಸಲಾಗಿದೆ.

ಕಂಬಳಕ್ಕೆ ತಾರಾ ಮೆರಗು: ಮಂಗಳೂರಿನ 80 % ರಷ್ಟು ಸಿನಿಮಾ ನಟಿ – ನಟಿಯರು ಕಂಬಳಕ್ಕೆ ಬರಲಿದ್ದಾರೆ. ಅನುಷ್ಕ ಶೆಟ್ಟಿ ಬರ್ತಾರೆ. ಶಿವಣ್ಣ, ಸುದೀಪ್, ಉಪೇಂದ್ರ, ಅಶ್ವಿನಿ ಪುನೀತ್ ರಾಜ್ ಕುಮಾರ್ ಬರ್ತಾರೆ.
ಉಡುಪಿ
Bangalore Kambala Traffic guidlines; ಬೆಂಗಳೂರು ಕಂಬಳ: ವಾಹನಗಳ ನಿಲುಗಡೆ ಸಂಚಾರ ಬದಲಾವಣೆ: ವಾಹನಗಳ ಪ್ರವೇಶ ಮತ್ತು ನಿರ್ಗಮನದ ಬಗ್ಗೆ ಟ್ರಾಫಿಕ್ ಪೊಲೀಸರಿಂದ ಮಾರ್ಗಸೂಚಿ ಬಿಡುಗಡೆ – ಇದರ ಬಗ್ಗೆ ವಿವರ ಇಲ್ಲಿದೆ ನೋಡಿ

ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ಕಂಬಳ ನಡೆಯಲಿದೆ. ಶನಿವಾರ ಕಂಬಳವನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಉದ್ಘಾಟನೆ ಮಾಡಲಿದ್ದಾರೆ. 10.30 ಕ್ಕೆ ಉದ್ಘಾಟನೆಗೊಂಡ ಕಂಬಳ ಎರಡು ದಿನಗಳ ಕಾಲ ನಡೆಯಲಿದೆ. ಅರಮನೆ ಮೈದಾನದ ಗೇಟ್ ನಂಬರ್ 1, 2, 3 ಹಾಗೂ 4 ರಲ್ಲಿ ಸಾರ್ವಜನಿಕರಿಗೆ ಎಂಟ್ರಿ ಇದೆ. ಉಳಿದಂತೆ ವಿವಿಐಪಿಗಳಿಗೆ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳ ಫನ್ ವರ್ಲ್ಡ್ ಕಡೆಯಿಂದ ಪ್ರವೇಶ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು ನಡೆಯಲಿರುವ ಕಂಬಳದ (Bengaluru Kambala) ಪ್ರಯುಕ್ತ ವಾಹನ ನಿಲುಗಡೆ, ಸಂಚಾರ ಬದಲಾವಣೆ, ಪ್ರವೇಶ ಮತ್ತು ನಿರ್ಗಮನ ವಿಚಾರವಾಗಿ ಟ್ರಾಫಿಕ್ ಪೊಲೀಸರು ಗುರುವಾರ ಮಾರ್ಗಸೂಚಿ (Traffic Advisory) ಬಿಡುಗಡೆ ಮಾಡಿದ್ದಾರೆ. 25ಮತ್ತು 26ರಂದು ಸುಗಮ ಸಂಚಾರಕ್ಕಾಗಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಪ್ರವೇಶ ಮತ್ತು ವಾಹನ ನಿಲುಗಡೆ ಸ್ಥಳಗಳು ಹೀಗಿವೆ
*ಪ್ರವೇಶ ಮತ್ತು ವಾಹನ ನಿಲುಗಡೆ: ಸಿಬಿಡಿ ಏರಿಯಾ ದಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ಮೇಕ್ರಿ ಸರ್ಕಲ್ ಬಳಿ ಯು ತಿರುವು ಪಡೆದು ಮೇಕ್ರಿ ಸರ್ಕಲ್ ಗೇಟ್ ನಂ-01 (ಕೃಷ್ಣವಿಹಾರ್) ರಲ್ಲಿ ಪ್ರವೇಶಿಸಿ, ವಾಹನಗಳನ್ನು ಪಾರ್ಕ್ ಮಾಡಿ ನಂತರ ಕಾರ್ಯಕ್ರಮದ ಸ್ಥಳಕ್ಕೆ ನಡೆದುಕೊಂಡು ಹೋಗಲು ಸೂಚಿಸಲಾಗಿದೆ. ಬಳ್ಳಾರಿ ರಸ್ತೆ ಹೆಬ್ಬಾಳ ಕಡೆಯಿಂದ ಬರುವ ವಾಹನಗಳು ಮೇಕ್ರಿ ಸರ್ಕಲ್ ಅಂಡರ್ ಪಾಸ್ ನಲ್ಲಿ ಬಂದು ಗೇಟ್ ನಂ-01 ಕೃಷ್ಣವಿಹಾರ್ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾರ್ಯಕ್ರಮದ ಸ್ಥಳವನ್ನು ನಡೆದು ತಲುಪುವುದು.

ಯಶವಂತಪುರ ಕಡೆಯಿಂದ ಬರುವ ವಾಹನಗಳು ಜಂಕ್ಷನ್-ಮೇಕ್ರಿ ಸರ್ಕಲ್ ಬಲ ತಿರುವು ಪಡೆದು ಗೇಟ್ ನಂ-01 ಕೃಷ್ಣ ವಿಹಾರ್ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾರ್ಯಕ್ರಮದ ಸ್ಥಳ ತಲುಪುವುದು. ಕ್ಯಾಬ್ ಸೇವೆಯನ್ನು ಬಳಸಿಕೊಳ್ಳುವವರು ಗೇಟ್ ನಂ-02 ರಲ್ಲಿ ಪ್ರವೇಶಿಸಿ ನಿಗದಿತ ಸ್ಥಳದಲ್ಲಿ ಇಳಿದು ಗೇಟ್ ನಂ-03 ಮುಖಾಂತರ ಕ್ಯಾಬ್ಗಳು ಹೊರ ಹೋಗಬಹುದಾಗಿದೆ. ಕಾರ್ಯಕ್ರಮದಿಂದ ವಾಪಸ್ಸು ಹೋಗುವಾಗ ಎಲ್ಲಾ ವಾಹನಗಳು ಕಡ್ಡಾಯವಾಗಿ ಜಯಮಹಲ್ ರಸ್ತೆಯ ಅಮಾನುಲ್ಲಾ ಖಾನ್ ಗೇಟ್ ಮುಖಾಂತರ ನಿರ್ಗಮಿಸುವಂತೆ ಸೂಚನೆ ನೀಡಲಾಗಿದೆ.
*ಬದಲೀ ಮಾರ್ಗದ ಮಾಹಿತಿ: ಕಾರ್ಯಕ್ರಮವನ್ನು ಹೊರತುಪಡಿಸಿ, ಇತರೆ ಸ್ಥಳಗಳಿಗೆ ಹೋಗುವ ರಸ್ತೆ ಬಳಕೆದಾರರು ಈ ಕೆಳಕಂಡ ರಸ್ತೆಗಳನ್ನು ಬಳಸದೇ ಬದಲೀ ಮಾರ್ಗದಲ್ಲಿ ಸಂಚರಿಸಲು ಕೋರಿದೆ.

ಅರಮನೆ ರಸ್ತೆ: ಮೈಸೂರು ಬ್ಯಾಂಕ್ ಸರ್ಕಲ್ನಿಂದ ವಸಂತನಗರ ಅಂಡರ್ ಪಾಸ್ವರೆಗೆ.
ಎಂ.ವಿ ಜಯರಾಮ ರಸ್ತೆ : ಅರಮನೆ ರಸ್ತೆ, ಬಿ.ಡಿ.ಎ. ಜಂಕ್ಷನ್ ನಿಂದ ಚಕ್ರವರ್ತಿ ಲೇಔಟ್ ಸೇರಿದಂತೆ ವಸಂತನಗರ ಅಂಡರ್ಪಾಸ್ ನಿಂದ ಹಳೆ ಉದಯ ಟಿವಿ ಜಂಕ್ಷನ್ವರೆಗೆ (ಎರಡು ದಿಕ್ಕಿನಲ್ಲಿ).
ಬಳ್ಳಾರಿ ರಸ್ತೆ: ಮೇಕ್ರಿ ವೃತ್ತ ದಿಂದ ಎಲ್.ಆರ್.ಡಿ.ಇ ಜಂಕ್ಷನ್ವರೆಗೆ
ಕನ್ನಿಂಗ್ಹ್ಯಾಂ ರಸ್ತೆ: ಬಾಳೇಕುಂದ್ರಿ ಸರ್ಕಲ್ ನಿಂದ ಲೀ-ಮೆರಿಡಿಯನ್ ಅಂಡರ್ ಪಾಸ್ವರೆಗೆ.
ಮಿಲ್ಲರ್ಸ್ ರಸ್ತೆ: ಹಳೆ ಉದಯ ಟಿ.ವಿ ಜಂಕ್ಷನ್ ನಿಂದ ಎಲ್.ಆರ್.ಡಿ.ಇ ಜಂಕ್ಷನ್ ವರೆಗೆ.
ಜಯಮಹಲ್ ರಸ್ತೆ: ಜಯಮಹಲ್ ರಸ್ತೆ ಹಾಗೂ ಬೆಂಗಳೂರು ಅರಮನೆ ಸುತ್ತಮುತ್ತಲ ರಸ್ತೆಗಳು.

ಪಾರ್ಕಿಂಗ್ ನಿಷೇಧಿಸಿರುವ ರಸ್ತೆಗಳು: ಪ್ಯಾಲೇಸ್ ರಸ್ತೆ, ವಸಂತನಗರ ರಸ್ತೆ, ನಂದಿದುರ್ಗ ರಸ್ತೆ, ಎಂ.ವಿ ಜಯರಾಮ್ ರಸ್ತೆ, ಜಯಮಹಲ್ ರಸ್ತೆ, ಬಳ್ಳಾರಿ ರಸ್ತೆ, ಸಿ.ವಿ.ರಾಮನ್ರಸ್ತೆ, ರಮಣ ಮಹರ್ಷಿ ರಸ್ತೆ, ತರಳಬಾಳು ರಸ್ತೆ, ಮೌಂಟ್ ಕಾರ್ಮಲ್ ಕಾಲೇಜು ರಸ್ತೆ. ಭಾರೀ ಸರಕು ಸಾಗಾಣಿಕಾ ವಾಹನಗಳ ಸಂಚಾರವನ್ನು ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ & ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕಂಟೋನ್ ಮೆಂಟ್ ರೈಲ್ವೆ ಸ್ಟೇಷನ್, ಹೆಬ್ಬಾಳ ಜಂಕ್ಷನ್, ಕಾವೇರಿ ಥಿಯೇಟರ್ ಜಂಕ್ಷನ್, ಬಿ.ಹೆಚ್.ಇ.ಎಲ್, ಐಐಎಸ್ಸಿ ಜಂಕ್ಷನ್, ಬಸವೇಶ್ವರ ಜಂಕ್ಷನ್ ನಲ್ಲಿ ಭಾರೀ ಸರಕು ಸಾಗಾಣಿಕಾ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗುತ್ತದೆ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ.
-
ರಾಷ್ಟ್ರೀಯ2 days ago
Divorce under Hindu Marriage Act : ಹಿಂದು ವಿವಾಹ ಕಾಯ್ದೆಯಡಿ ವಿಚ್ಛೇದನ ಪಡೆಯಲು ʼಈʼ ನಿಯಮ ಪಾಲನೆ ಕಡ್ಡಾಯ – ಕೊರ್ಟು ಮಹತ್ವದ ಆದೇಶ ; ಏನದು ನಿಯಮ ?
-
ಅಪರಾಧ2 days ago
Dowry Harasment: ʼಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಡೆತ್ ನೋಟ್ ಬರೆದಿಟ್ಟು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಯುವ ವೈದ್ಯೆ ಆತ್ಮಹತ್ಯೆ – ಅಷ್ಟಕ್ಕೂ ವರನ ಮನೆಯವರು ಇಟ್ಟ ಡಿಮ್ಯಾಂಡ್ ಎಷ್ಟು ಗೊತ್ತೆ ?
-
ಸುಳ್ಯ2 days ago
Arecanut Yellow leaf diseases ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದತ್ತ ಮಹತ್ವದ ಹೆಜ್ಜೆ – ಸಂಪಾಜೆಯಲ್ಲಿ ಇಂದೋರ್ ಕಂಪೆನಿಯ ಔಷಧಿ ಪ್ರಯೋಗಕ್ಕೆ ಆರಂಭಿಕ ಗೆಲುವು – ರೋಗವಿದ್ದ ಪ್ರದೇಶದಲ್ಲಿ ನಳನಳಿಸುತ್ತಿದೆ ಫಸಲು
-
ಮಂಗಳೂರು2 days ago
ಕುಡುಪು ಷಷ್ಟಿ ಮಹೋತ್ಸವ ಜಾತ್ರೆ – ಸಂತೆ ವ್ಯಾಪಾರದಲ್ಲಿ ಹಿಂದೂಯೇತರರಿಗಿಲ್ಲ ಅವಕಾಶ: ವ್ಯಾಪಾರಿಗಳ ಸಮನ್ವಯ ಸಮಿತಿ ಆಕ್ರೋಶ – ದೇವಸ್ಥಾನದ EOರಿಂದ ತಿರುಗೇಟು – ಕರಾವಳಿಯಲ್ಲಿ ನಿಲ್ಲೋದಿಲ್ವಾ ಧರ್ಮ ದಂಗಲ್ ?
-
ರಾಷ್ಟ್ರೀಯ2 days ago
Pancard latest update : ಪ್ಯಾನ್ ಕಾರ್ಡ್ ಕುರಿತು ಮಹತ್ವದ ಮಾಹಿತಿ – ಈ ತಪ್ಪು ಮಾಡಿದರೆ 10,000 ರೂ ದಂಡ ಗ್ಯಾರಂಟಿ
-
ಮಂಗಳೂರು1 day ago
Interfaith Marriage ಮಂಗಳೂರು : ಭಿನ್ನಕೋಮಿನ ಜೋಡಿ ವಿವಾಹ?
-
ಬಿಗ್ ನ್ಯೂಸ್1 day ago
Bride refuses Marriage in hall ತಾಳಿ ಕಟ್ಟುವ ವೇಳೆ ವರನ ಕೈಗೆ ಅಡ್ಡ ಹಿಡಿದು ಸಿನಿಮೀಯ ಶೈಲಿಯಲ್ಲಿ ಮದುವೆ ನಿರಾಕರಿಸಿದ ವಧು
-
ಸಿನೆಮಾ2 days ago
Pooja gandhi : ಕುವೆಂಪು ಪರಿಕಲ್ಪನೆಯ ’ಮಂತ್ರ ಮಾಂಗಲ್ಯ’ ಪದ್ದತಿಯಲ್ಲಿ ವಿವಾಹವಾದ ಪೂಜಾ ಗಾಂದಿ ದಂಪತಿಯಿಂದ ಕವಿ ಶೈಲ ಭೇಟಿ – ಹುಟ್ಟಿದ್ದು ಪಂಜಾಬಿನಲ್ಲಾದರೂ ಕನ್ನಡದ ಬಗೆಗಿನ ನಟಿಯ ಪ್ರೀತಿಗೆ ವ್ಯಾಪಕ ಮೆಚ್ಚುಗೆ