Connect with us

Uncategorized

ನೇಜಾರು ಹತ್ಯೆ : ದಾರಿ ಮಧ್ಯೆ ಶರ್ಟ್‌ ಸುಟ್ಟ ಹಂತಕ – ಹೆಜ್ಜೆ ಹೆಜ್ಜೆಯಲ್ಲೂ ತೋರಿಸಿದ್ದ ಚಾಲಕಿತನ – ಗಂಡನ ಮೇಲೆ ಪತ್ನಿಗಿತ್ತು ಸಂಶಯ

Ad Widget

Ad Widget

ಉಡುಪಿ, ನ.19: ನೇಜಾರಿನಲ್ಲಿ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದ ಆರೋಪಿ ಪ್ರವೀಣ್ ಚೌಗುಲೆ(39) ಕೃತ್ಯದುದ್ದಕ್ಕೂ ಸಾಕ್ಷ್ಯ ನಾಶಕ್ಕೆ ಹೆಚ್ಚಿನ ಗಮನ ಕೊಟ್ಟಿರುವುದು ಹಾಗೂ ಯಾವುದೇ ಸಾಕ್ಷ್ಯ ಉಳಿಯದಂತೆ ಎಚ್ಚರ ವಹಿಸಿದ್ದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಕ್ಯಾಬಿನ್‌ ಕ್ರೂ ಆಗುವುದಕ್ಕೂ ಮೊದಲು ಆತ ಮೂರು ವರ್ಷ ಮಹಾರಾಷ್ಟ್ರದ ಪೊಲೀಸ್‌ ಇಲಾಖೆಯಲ್ಲಿ ಕೆಲಸ ಮಾಡಿದ್ದು, ಇದರಿಂದ ಆತನಿಗೆ ಅಪರಾಧ ಜಗತ್ತು, ಪೊಲೀಸರ ತನಿಖಾ ವಿಧಾನದ ಕರಾರುವಾಕ್ಕು ಮಾಹಿತಿಯಿತ್ತು. ಇದನ್ನು ಬಳಸಿಕೊಂಡು ಹತ್ಯೆಗೆ ಮೊದಲು ಹಾಗೂ ಬಳಿಕ ಪಕ್ಕಾ ಪ್ಲ್ಯಾನ್‌ ಮಾಡಿದ್ದಾನೆ. ಯಾವುದೇ ಕಾರಣಕ್ಕೂ ಹತ್ಯೆಯ ಆರೋಪ ತನ್ನ ಮೇಲೆ ಬರಬಾರದು, ಬಂದರೂ ಅದು ನ್ಯಾಯಾಲಯದಲ್ಲಿ ಪ್ರೂವ್‌ ಆಗಬಾರದೆಂದು ಗರಿಷ್ಟ ಎಚ್ಚರಿಕೆ ವಹಿಸಿದ್ದಾನೆ. ಆದರೇ ತಾನೊಂದು ಬಗೆದರೆ ವಿಧಿ ಇನ್ನೊಂದು ಬಗೆದಿದೆ.

Ad Widget

Ad Widget

Ad Widget

Ad Widget

ಕೃತ್ಯ ನಡೆಸಲು ಮಂಗಳೂರಿನಿಂದ ತನ್ನ ಸ್ವಂತ ಕಾರಿನಲ್ಲಿ ಹೊರಟ ಹಂತಕ, ಹೆಜಮಾಡಿ ಟೋಲ್‌ ಗೇಟ್‌ ಗಿಂತ ತುಸು ಮೊದಲು ಕಾರನ್ನು ರಸ್ತೆ ಬದಿ ಪಾರ್ಕ್‌ ಮಾಡಿದ್ದಾನೆ. ಹೆಜಮಾಡಿ ಟೋಲ್‌ ಗೇಟ್‌ ಐನಾಜ್‌ ಳ ಮನೆಗೆ ಹೋಗುವ ದಾರಿಯಲ್ಲಿ ಸಿಗುವ ಏಕೈಕ ಟೋಲ್‌ ಗೇಟ್‌. ಇಲ್ಲಿ ತನ್ನ ಕಾರು ಹಾದು ಹೋಗಿರುವುದು ಅಲ್ಲಿನ ಸಿಸಿಟಿವಿಯಲ್ಲಿ ದಾಖಲಾಗಬಾರದು, ಆ ಮೂಲಕ ತಾನು ಉಡುಪಿಗೆ ಹೋಗಿದ್ದೇನೆ ಎಂಬ ವಿಚಾರ ಯಾರಿಗೂ ಗೊತ್ತಾಗಬಾರೆದೆಂಬ ಕಾರಣಕ್ಕೆ ಟೋಲ್‌ ಗೇಟ್‌ ಗಿಂತ ತುಸು ಮೊದಲು ಕಾರು ಪಾರ್ಕ್‌ ಮಾಡಿ ಬಸ್ಸು ಹತ್ತಿದ್ದಾನೆ. ಈ ವೇಳೆ ಮುಖಕ್ಕೆ ಮಾಸ್ಕ್‌ ಧರಿಸಿ ಕೇವಲ ಒಂದು ಸಣ್ಣ ಬ್ಯಾಗ್‌ ಹಿಡ್ಕೊಂಡಿದ್ದಾನೆ. ಅದರಲ್ಲಿ ಒಂದು ಶರ್ಟ್‌ ಹಾಗೂ ಚೂರಿ ಇತ್ತು ಎಂದು ಹೇಳಲಾಗುತ್ತಿದೆ.

Ad Widget

Ad Widget

Ad Widget

ಹೆಜ್ಜೆ ಹೆಜ್ಜೆಯಲ್ಲೂ ಚಾಲಕಿತನ

Ad Widget

ಬಳಿಕ ಉಡುಪಿ ಸಂತೆಕಟ್ಟೆಯಿಂದ ಆಟೋದಲ್ಲಿ ತೆರಳಿ ಹತ್ಯೆ ಮಾಡಿ, ಅಲ್ಲಿಂದ ಬೈಕ್‌ ಮೂಲಕ ಪುನ: ಸಂತೆಕಟ್ಟೆಗೆ ಬಂದಿದ್ದಾನೆ. ಅಲ್ಲಿಂದ ತುಸು ದೂರ ಪುನ: ಆಟೋ ತೆರಳಿದ್ದು ಬಳಿಕ ಒಂದಷ್ಟು ದೂರ ನಡಕೊಂಡು ಹೋಗಿ, ಮತ್ತೆ ಯಾರದೋ ಬೈಕ್‌ ಏರಿ ಒಂದಷ್ಟು ದೂರ ಕ್ರಮಿಸಿದ್ದಾನೆ. ಅಲ್ಲಿಂದ ಬಸ್ಸು ಏರಿ ಮಂಗಳೂರಿಗೆ ಕಡೆ ಪ್ರಯಾಣಿಸಿದ್ದು ತಾನು ಬೆಳಿಗ್ಗೆ ಕಾರು ಪಾರ್ಕ್‌ ಮಾಡಿದಲ್ಲಿಗೆ ಬಸ್ಸು ತಲುಪಿದಾಗ ಅಲ್ಲಿ ಇಳಿದಿದ್ದಾನೆ. ಈ ಎಲ್ಲ ಕಡೆ ಆತ ಮಾಸ್ಕ್‌ ಧರಿಸುವ ಮೂಲಕ ತನ್ನು ಮುಖವನ್ನು ಮುಚ್ಚಿಕೊಂಡಿದ್ದ. ಈ ಮೂಲಕ ಹೆಜ್ಜೆ ಹೆಜ್ಜೆಯಲ್ಲೂ ಪೊಲೀಸರ ದಿಕ್ಕು ತಪ್ಪಿಸುವ , ಸಾಕ್ಷ್ಯ ನಾಶ ಮಾಡುವ ಗುರಿಯನ್ನು ಆತ ಹೊಂದಿರುವುದು ಸ್ಪಷ್ಟವಾಗಿದೆ. ಒಂದೊಮ್ಮೆ ಪೊಲೀಸರ ಕೈಗೆ ಸಿಕ್ಕಿಬಿದ್ದರೂ ನ್ಯಾಯಾಲಯದಲ್ಲಿ ಆತನ ಕೃತ್ಯವನ್ನು ಪ್ರೂವ್‌ ಮಾಡುವುದು ಕಷ್ಟವಾಗಬೇಕು ಎಂದು ಹಂತಕ ಈ ರೀತಿ ಮಾಡಿರಬಹುದೆಂದು ಶಂಕಿಸಲಾಗಿದೆ.

Ad Widget

Ad Widget

ಇನ್ನು ಹತ್ಯೆ ಮಾಡುವಾಗಲೂ ತನ್ನ ಶರ್ಟ್‌ ನ ಮೇಲೆ ರಕ್ತ ಚೆಲ್ಲದಂತೆ ಗರಿಷ್ಟ ಎಚ್ಚರಿಕೆ ವಹಿಸಿದ್ದಾನೆ. ಕೊಲೆ ನಡೆಸುವ ವೇಳೆ ಹಂತಕ ಧರಿಸಿದ ಶರ್ಟ್‌ ನ ಒಂದಷ್ಟು ಭಾಗಕಷ್ಟೆ ರಕ್ತ ಚೆಲ್ಲಿದೆ. ಅದನ್ನು ತನ್ನು ಬ್ಯಾಗ್‌ ನಿಂದ ಮುಚ್ಚಿಕೊಂಡೆ ಟೋಲ್ ಗೇಟ್‌ಗಿಂತ ಮುಂದೆ ನಿಲ್ಲಿಸಿದ್ದ ಕಾರಿನವರೆಗೆ ಬಸ್, ರಿಕ್ಷಾ, ಬೈಕ್‌ನಲ್ಲಿ ಮೂಲಕ ತಲುಪಿದ್ದಾನೆ. ಅಲ್ಲಿಂದ ಕಾರಿನಲ್ಲಿ ಮಂಗಳೂರಿಗೆ ಹೋಗುವ ದಾರಿ ಮಧ್ಯೆ ಈ ರಕ್ತಸಿಕ್ತ ಬಟ್ಟೆ ಬದಲಾಯಿಸಿದ್ದನು.

ರಕ್ತಸಿಕ್ತ ಬಟ್ಟೆಯಲ್ಲೇ ಮನೆಗೆ ಹೋದರೆ ಪತ್ನಿಗೆ ಅನುಮಾನ ಬರುವ ಹಿನ್ನೆಲೆಯಲ್ಲಿ ಹಾಗೂ ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಮಂಗಳೂರಿಗೆ ತೆರಳುವ ಮುನ್ನವೇ ಸುರಕ್ಷಿತ ಜಾಗ ನೋಡಿಕೊಂಡು ಕೃತ್ಯದ ವೇಳೆ ತಾನು ಧರಿಸಿದ್ದ ಬಟ್ಟೆಯನ್ನು ಬಿಚ್ಚಿ ಸುಟ್ಟು ಹಾಕಿದ್ದ ಬಗ್ಗೆ ಪೊಲೀಸರಲ್ಲಿ ಬಾಯ್ಬಿಟ್ಟಿದ್ದಾನೆ. ಇನ್ನೂ ನ.20 ರಂದು ತನಿಖಾ ತಂಡಕ್ಕೆ ಈ ಸ್ಥಳ ತೋರಿಸುವುದಾಗಿ ಒಪ್ಪಿಕೊಂಡಿದ್ದು, ಸ್ಥಳ ಮಹಜರು ಮಾಡಲಾಗುತ್ತದೆ ಎಂದು ಪೊಲೀಸ್‌ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಕೊನೆಗೂ ಚೂರಿ ವಶ

ಇನ್ನೂ ಈ ಕೃತ್ಯಕ್ಕೆ ಸಂಬಂಧಿಸಿ ಮಹತ್ವದ ಸಾಕ್ಷಿಯಾಗಿದ್ದ ಚೂರಿಯನ್ನು ನ.18 ರಂದು ಮಂಗಳೂರಿನ ಬಿಜೈ ಫ್ಲ್ಯಾಟ್‌ನಿಂದ ಪೊಲೀಸರ ತನಿಖಾ ತಂಡ ವಶಕ್ಕೆ ಪಡೆದಿದೆ. ಆರಂಭದಲ್ಲಿ ನಾನಾ ಕಥೆಗಳನ್ನು ಹೆಣೆದು ಚೂರಿ ಪೊಲೀಸರಿಗೆ ಸಿಗದಂತೆ ಆರೋಪಿ ಎಚ್ಚರಿಕೆ ವಹಿಸಿದ್ದ . ಒಮ್ಮೆ ನದಿಯಲ್ಲಿ ಬೀಸಾಡಿರುವುದಾಗಿ ಹೇಳಿದ್ದರೇ, ಇನ್ನೊಮ್ಮೆ ದಾರಿ ಮಧ್ಯೆ ಎಲ್ಲಿಯೂ ಬೀಸಾಡಿರುವುದಾಗಿ ಪೊಲೀಸರ ದಾರಿ ತಪ್ಪಿಸಿದ್ದ. ಕೊನೆಗೂ ಪೊಲೀಸರ ಟ್ರೀಟ್‌ ಮೆಂಟ್‌ ಸಹಿಸಲಾಗದೇ ಚೂರಿ ಅಡಗಿಸಿಟ್ಟ ಜಾಗ ಬಾಯ್ಬಿಟ್ಟಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

ಪತ್ನಿ ಹಾಗೂ ಮಕ್ಕಳಿಗೂ ಅನುಮಾನ ಬಾರದಂತೆ ಎಚ್ಚರ ವಹಿಸಿದ್ದ

ಪತಿ ತನ್ನ ಜತೆಗೆ ಒಳ್ಳೆಯವನಂತೆ ವರ್ತಿಸುತ್ತಿದ್ದ. ನಾಲ್ವರನ್ನು ಕೊಲೆ ಮಾಡಿ ಮನೆಗೆ ಬಂದರೂ ಪತ್ನಿಗೆ ಪತಿ ಹಂತಕ ಎನ್ನುವ ಬಗ್ಗೆ ಕಿಂಚಿತ್ತೂ ಅನುಮಾನವೇ ಬಂದಿರಲಿಲ್ಲ. ಈ ಬಗ್ಗೆ ಪತ್ನಿಯೇ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆ ನಡೆದ ನ.12ರಂದು ಬೆಳಗ್ಗೆ ಕೆಲಸದ ಸಮಯಕ್ಕಿಂತಲೂ ಬೇಗನೇ ಮನೆಯಿಂದ ಹೊರಟು ಹೋಗಿದ್ದ. ಎಲ್ಲಿಗೆ ಹೋಗುತ್ತೇನೆ ಎನ್ನುವ ಮಾಹಿತಿಯನ್ನು ಪತ್ನಿಗೆ ಹೇಳಿರಲಿಲ್ಲ. ಕೊಲೆಗೈದು ಮನೆಗೆ ಬಂದು ತನ್ನ ಕೈಗೆ ಆಗಿರುವ ಗಾಯದ ಬಗ್ಗೆಯೂ ಹೇಳಿಕೊಂಡಿರಲಿಲ್ಲ. ಕೈಯ ಗಾಯವನ್ನು ಮುಚ್ಚಿಟ್ಟಿದ್ದ. ಮಂಗಳೂರಿನ ಕ್ಲಿನಿಕ್‌ ವೊಂದರಲ್ಲಿ ಕೈ ಬೆರಳಿಗಾದ ಗಾಯಕ್ಕೆ ಚಿಕಿತ್ಸೆ ಪಡೆದು ವಾಪಸ್ಸು ಮನೆಗೆ ಬಂದಿದ್ದ. ಬಳಿಕ ಪತ್ನಿ ಮತ್ತು ಮಕ್ಕಳನ್ನು ವಿಹಾರಕ್ಕೂ ಕರಕೊಂಡು ಹೋಗಿದ್ದ. ಮರುದಿನ ದೀಪಾವಳಿ ಅಚರಿಸಲೆಂದು ಪತ್ನಿ ಮತ್ತು ಮಕ್ಕಳನ್ನು ಕುಡಚಿಗೆ ಕರಕೊಂಡು ಹೋಗಿದ್ದ. ಹೀಗಾಗಿ ಪತ್ನಿಗೂ ಈತನ ಬಗ್ಗೆ ಯಾವುದೇ ಅನುಮಾನ ಬಂದಿರಲಿಲ್ಲ.

ಗಂಡನ ಮೇಲೆ ಪತ್ನಿಗಿತ್ತು ಸಂಶಯ

ಗಗನಸಖಿ ಹಾಗೂ ತನ್ನ ಸಹದ್ಯೋಗಿ ಐನಾಝ್ ಹಿಂದೆ ಬಿದ್ದು ಕಾಡುತ್ತಿದ್ದ ಪ್ರವೀಣ್ ಚೌಗುಲೆಯ ನಡವಳಿಕೆ ಬಗ್ಗೆ ಪತ್ನಿಗೆ ಮೊದಲೇ ಸಂಶಯ ಇತ್ತು. ಗಂಡ ಯಾವುದೋ ಹೆಣ್ಣಿನ ಹಿಂದೆ ಬಿದ್ದಿದ್ದಾನೆಂದು ಎಂಬ ಅನುಮಾನ ಅವಳಿಗಿತ್ತೆ ವಿನಾ: ಆ ಹೆಣ್ಣು ಐನಾಝ್‌ ಎಂಬುವುದು ಅಕೆಗೆ ಗೊತ್ತಿರಲಿಲ್ಲ ಎನ್ನಲಾಗಿದೆ. ಯಾವುದೋ ಹೆಣ್ಣಿನ ಹಿಂದೆ ಆತ ಬಿದ್ದಿದ್ದನೆಂದು ಆಕೆ ಹಲವು ಬಾರಿ ಪ್ರವೀಣ್ ಜೊತೆ ಜಗಳ ಮಾಡಿದ್ದಳೆಂದು ತಿಳಿದುಬಂದಿದೆ. ಆದರೆ ಆಕೆಗೆ ಐನಾಝ್ ವಿಚಾರ ಏನು ಗೊತ್ತಿರಲಿಲ್ಲ ಎಂಬುದನ್ನು ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.

ತಿಂಗಳಿಗೆ 90 ಸಾವಿರದಿಂದ 1ಲಕ್ಷ ರೂ. ವೇತನ ಪಡೆಯುತ್ತಿದ್ದ ಪ್ರವೀಣ್ ಚೌಗುಲೆ, ಮೂರು ಲಕ್ಷ ರೂ. ಮುಂಗಡ ನೀಡಿ ಕಾರು ಮತ್ತು ಮಂಗಳೂರಿನಲ್ಲಿ 10 ಸೆಂಟ್ಸ್ ಜಾಗವನ್ನು ಕೂಡ ಖರೀದಿಸಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Click to comment

Leave a Reply

Uncategorized

Leelavathi | ಪ್ರಖ್ಯಾತ ಹಿರಿಯ ನಟಿ ಲೀಲಾವತಿ ವಿಧಿವಶ – ದಕ್ಷಿಣಕನ್ನಡದ ಕುಗ್ರಾಮದಿಂದ ಹೋಗಿ ಸಿನಿಮಾ ರಂಗದಲ್ಲಿ ಅಪಾರ ಸಾಧನೆ ಮೆರೆದ ನಟಿ

Ad Widget

Ad Widget

ಬೆಂಗಳೂರು: ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಖ್ಯಾತ ಹಿರಿಯ ನಟಿ ಲೀಲಾವತಿ (Leelavathi) ಅವರು ಶುಕ್ರವಾರ ಸಂಜೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

Ad Widget

Ad Widget

Ad Widget

Ad Widget

ನೆಲಮಂಗಲದ ಸೋಲದೇವನ ಹಳ್ಳಿಯ ನಿವಾಸದಲ್ಲೇ ಅವರಿಗೆ ಆರೈಕೆ ಮಾಡಲಾಗುತ್ತಿತ್ತು. ಪುತ್ರ ವಿನೋದ್ ರಾಜ್ ಅವರು ನೋಡಿ ಕೊಳ್ಳುತ್ತಿದ್ದರು.

Ad Widget

Ad Widget

Ad Widget

ದಕ್ಷಿಣಕನ್ನಡ ದ ಬೆಳ್ತಂಗಡಿಯ ಬಂಗಾಡಿಯ ಮೂಲದ ಲೀಲಾವತಿ ( ಲೀಲಾ ಕಿರಣ್) ಕನ್ನಡ, ತಮಿಳು ಮತ್ತು ತೆಲುಗು ಚಲನಚಿತ್ರಗಳಲ್ಲಿ ನಟಿಸಿದ್ದ ಹಿರಿಯ ಭಾರತೀಯ ನಟಿ.

Ad Widget

50 ವರ್ಷಗಳಿಗೂ ಹೆಚ್ಚು ಕಾಲ ತಮ್ಮ ವೃತ್ತಿಜೀವನದುದ್ದಕ್ಕೂ 600 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದರು. ಕನ್ನಡದಲ್ಲಿ 400 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಮನೆ ಮಾತಾಗಿದ್ದರು. ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಮತ್ತು ಸಂತ ತುಕಾರಂ ಚಿತ್ರಗಳಲ್ಲಿನ ಸ್ಮರಣೀಯ ಅಭಿನಯಕ್ಕಾಗಿ ಅವರು ಜನಪ್ರಿಯತೆಯ ಉತ್ತುಂಗಕ್ಕೆ ಏರಿದ್ದರು. ವರು 1999 ರಲ್ಲಿ ಡಾ. ರಾಜ್‌ಕುಮಾರ್ ಪ್ರಶಸ್ತಿ ಮತ್ತು ಫಿಲ್ಮ್‌ಫೇರ್ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

Ad Widget

Ad Widget

ಚಂಚಲಾ ಕುಮಾರಿ ನಂತರ ಶಂಕರ್ ಸಿಂಗ್ ಅವರ ನಾಗ ಕನ್ನಿಕಾ ಚಿತ್ರದಲ್ಲಿ ಸಣ್ಣ ಪಾತ್ರಗಳ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಲೀಲಾವತಿ ಅವರು ಮಹಾಲಿಂಗ ಭಾಗವತರ್ ಅವರ ಶ್ರೀ ಸಾಹಿತ್ಯ ಸಾಮ್ರಾಜ್ಯ ನಾಟಕ ಕಂಪನಿಗೆ ಸೇರಿದರು.

ಸುಬ್ಬಯ್ಯ ನಾಯ್ಡು ಅವರ 1958 ರ ಸೂಪರ್ ಹಿಟ್ ಚಲನಚಿತ್ರ ಭಕ್ತ ಪ್ರಹ್ಲಾದ, ಬಳಿಕ ಮಾಂಗಲ್ಯ ಯೋಗ, ಧರ್ಮ ವಿಜಯ ಮತ್ತು ರಣಧೀರ ಕಂಠೀರವ ಮುಂತಾದ ಚಲನಚಿತ್ರಗಳಲ್ಲಿ ನಟಿಸಿ ಗಮನ ಸೆಳೆದರು.

ರಾಣಿ ಹೊನ್ನಮ್ಮ ಚಿತ್ರದಿಂದ ಲೀಲಾವತಿ ಪೂರ್ಣ ಪ್ರಮಾಣದ ನಾಯಕಿಯಾದರು. ಸಂತ ತುಕಾರಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ ಮತ್ತು ಮನ ಮೆಚ್ಚಿದ ಮಡದಿ ಚಿತ್ರಗಳಲ್ಲಿ ನಾಯಕಿ. ಅವರು ಗೆಜ್ಜೆ ಪೂಜೆ ಮತ್ತು ಡಾಕ್ಟರ್ ಕೃಷ್ಣ ಚಿತ್ರದಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದರು. ಮನೋಜ್ಞ ಅಭಿನಯಕ್ಕಾಗಿ ಕರ್ನಾಟಕ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದರು.

ಭೂದಾನ ಚಿತ್ರದಲ್ಲಿ ಡಾ. ರಾಜಕುಮಾರ್ ಅವರ ಮಗಳಾಗಿ, ವಾತ್ಸಲ್ಯ ಚಿತ್ರದಲ್ಲಿ ತಂಗಿಯಾಗಿ,ಪ್ರೇಮಮಯಿ ಚಿತ್ರದಲ್ಲಿ ಅತ್ತಿಗೆಯಾಗಿ ವಿವಿಧ ಚಿತ್ರಗಳಲ್ಲಿ ರಾಜಕುಮಾರ್ ಅವರೊಂದಿಗೆ ನಾಯಕಿಯಾಗಿ ಕೆಲಸ ಮಾಡಿದ ಜನ ಮೆಚ್ಚಿದ ಅಪೂರ್ವ ಜೋಡಿ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಶ್ರಾವಣ ಬಂತು , ವಸಂತಗೀತೆ, ನಾ ನಿನ್ನ ಮರೆಯಲಾರೆ ಮತ್ತು ಜ್ವಾಲಾಮುಖಿಯಲ್ಲಿಯೂ ನಟಿಸಿದ್ದರು.

Continue Reading

Uncategorized

loan write off ದೇಶದ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಕಳೆದ 5 ವರ್ಷಗಳಲ್ಲಿ 10.57 ಲಕ್ಷ ಕೋಟಿ ರೂ. ರೈಟ್-ಆಫ್….

Ad Widget

Ad Widget

ನವದೆಹಲಿ: ದೇಶದ ಎಲ್ಲ ವಾಣಿಜ್ಯ ಬ್ಯಾಂಕುಗಳು ಕಳೆದ 5 ವರ್ಷಗಳಲ್ಲಿ 10.57 ಲಕ್ಷ ಕೋಟಿ ರೂಪಾಯಿ ಸಾಲವನ್ನು ರೈಟ್ ಆಫ್ ಮಾಡಿದ್ದು, ಇದರಲ್ಲಿ 5.52 ಲಕ್ಷ ಕೋಟಿ ರೂ. ದೊಡ್ಡ ಕೈಗಾರಿಕೆಗಳಿಗೆ ಸಂಬಂಧಿಸಿರುವುದಾಗಿ ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ನಿನ್ನೆ (ಡಿ.05) ಮಾಹಿತಿಯನ್ನು ನೀಡಿದೆ.

Ad Widget

Ad Widget

Ad Widget

Ad Widget

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮಾಹಿತಿಯ ಪ್ರಕಾರ ದೇಶದ ಎಲ್ಲ ವಾಣಿಜ್ಯ ಬ್ಯಾಂಕುಗಳು ಕಳೆದ ಐದು ಹಣಕಾಸು ವರ್ಷಗಳಲ್ಲಿ 10.57 ಲಕ್ಷ ಕೋಟಿ ರೂಪಾಯಿಯನ್ನು ರೈಟ್ ಆಫ್ ಮಾಡಿವೆ ಎಂದು ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ವಿತ್ತ ಖಾತೆಯ ರಾಜ್ಯ ಸಚಿವ ಭಾಗವತ್ ಕರದ್ ಈ ರೀತಿಯಾಗಿ ಸಂಸತ್ತಿನಲ್ಲಿ ಮಾಹಿತಿ ನೀಡಿದರು.ಇದೇ ಅವಧಿಯಲ್ಲಿ ವಸೂಲಾಗದ ಒಟ್ಟು ಸಾಲದಲ್ಲಿ (ಎನ್‌ಪಿಎ) ₹7.15 ಲಕ್ಷ ಕೋಟಿಯನ್ನು ವಸೂಲಿ ಮಾಡಲಾಗಿದೆ ಎಂದು ಹೇಳಿದರು.

Ad Widget

Ad Widget

Ad Widget

ರೈಟ್ ಆಫ್ ಮತ್ತು ಸಾಲಮನ್ನಾ ನಡುವೆ ಒಂದು ವ್ಯತ್ಯಾಸವಿದೆ. ಅದೇನೆಂದರೆ, ಬ್ಯಾಂಕುಗಳು ತಮ್ಮ ಬ್ಯಾಲೆನ್ಸ್ ಶೀಟ್ನಿಂದ ಮರುಪಾವತಿಯಾದ ಸಾಲವನ್ನು ತೆಗದುಹಾಕಿ ಎನ್ಪಿಎ ವರ್ಗಕ್ಕೆ ಸೇರಿಸುತ್ತದೆ. ಅಂದರೆ, ಸಾಲವನ್ನು ಬ್ಯಾಂಕ್ನ ಆಸ್ತಿ ಎಂದು ಪರಿಗಣಿಸುವುದಿಲ್ಲ. ಆದರೆ, ಸಾಲವನ್ನು ರೈಟ್ ಆಫ್ ಮಾಡಿದ ನಂತರವೂ ಸಾಲ ಮರುಪಾವತಿ ಪ್ರಕ್ರಿಯೆ ಮುಂದುವರಿಯುತ್ತದೆ. ಆದರೆ, ಸಾಲಮನ್ನಾ ವಿಚಾರಕ್ಕೆ ಬಂದಾಗ ಬ್ಯಾಂಕ್ ನೀಡಿದ ಸಾಲವನ್ನು ಸಂಪೂರ್ಣವಾಗಿ ವಜಾಗೊಳಿಸಲಾಗುತ್ತದೆ. ಅಂದರೆ, ಬ್ಯಾಂಕ್ ಮತ್ತು ಸಾಲ ಪಡೆದವನ ನಡುವೆ ಯಾವುದೇ ಒಪ್ಪಂದ ಇರುವುದಿಲ್ಲ. ಹೀಗಾಗಿ ಸಾಲವನ್ನು ಮರುಪಾವತಿ ಮಾಡುವ ಅವಕಾಶವೇ ಇರುವುದಿಲ್ಲ ಎಂದು ಹೇಳಿದರು.

Ad Widget

Heart Attack deaths Increased in India ಕಳೆದೊಂದು ವರ್ಷದಲ್ಲಿ ದೇಶದಲ್ಲಿ ಹೃದಯಾಘಾತದ ಸಂಖ್ಯೆಯಲ್ಲಿ ಭಾರೀ ಏರಿಕೆ – ಇಲ್ಲಿದೆ ಎನ್​ಸಿಆರ್​ಬಿ ವರದಿ ವಿವರ; Heart attack ಹೆಚ್ಚಳದ ಹಿಂದಿದೆ ಈ ಕಾರಣ

Ad Widget

Ad Widget

ಸುಮಾರು 2300 ಕಂಪನಿಗಳು ವಿವಿಧ ವಾಣಿಜ್ಯ ಬ್ಯಾಂಕ್‌ಗಳಿಂದ 5 ಕೋಟಿ ರೂಪಾಯಿಗೂ ಹೆಚ್ಚು ಸಾಲ ಪಡೆದು ಮರುಪಾವತಿ ಮಾಡಿಲ್ಲ. ಈ ಮೊತ್ತವೇ ಸುಮಾರು 2 ಲಕ್ಷ ಕೋಟಿ ರೂಪಾಯಿಗೂ ಹೆಚ್ಚಿದೆ. ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾರ್ಗಸೂಚಿಗಳು ಮತ್ತು ನೀತಿಯ ಪ್ರಕಾರ, ಬ್ಯಾಂಕ್‌ಗಳು ಈ ಮೊತ್ತವನ್ನು ಎನ್‌ಪಿಎ ವರ್ಗಕ್ಕೆ ಸೇರಿಸಿವೆ.
ಸರ್ಕಾರದ ಸೂಕ್ತ ಕ್ರಮಗಳ ಅನುಷ್ಠಾನದಿಂದ ಇದು ಸಾಧ್ಯವಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

2018-19ನೇ ಹಣಕಾಸು ವರ್ಷದಿಂದ 2022-23ನೇ ಹಣಕಾಸು ವರ್ಷದವರೆಗೆ ಕಳೆದ ಐದು ವರ್ಷಗಳಲ್ಲಿ ಬೃಹತ್ ಕೈಗಾರಿಕೆಗಳು ಮತ್ತು ಇತರೆ ಸೇವೆಗಳಿಗೆ ಸಂಬಂಧಿಸಿದ 5.52 ಲಕ್ಷ ಕೋಟಿ ರೂ.ಗಳನ್ನು ವಾಣಿಜ್ಯ ಬ್ಯಾಂಕುಗಳು ರೈಟ್ ಆಫ್ ಮಾಡಿವೆ. ಇದರಲ್ಲಿ 93,874 ಕೋಟಿ ರೂ. ವಂಚನೆಯ ಹಣವೂ ಸೇರಿದೆ. ಒಟ್ಟು 10.57 ಲಕ್ಷ ಕೋಟಿ ರೂ.ಗಳು ಅಂದರೆ, ಶ್ರೀಮಂತರ ಲಕ್ಷಾಂತರ ಕೋಟಿ ರೂಪಾಯಿ ಕೂಡ ಮನ್ನಾವಾದಂತೆ.

Gold Rate Hike:ಆಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿ : ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ದರ ಸಾರ್ವಕಾಲಿಕ ಜಿಗಿತ – ಮುಂದಿನ ದಿನಗಳಲ್ಲಿ ರೇಟ್‌ ಹೇಗಿರಲಿದೆ?

Continue Reading

Uncategorized

New Simcard Rules :ಸಿಮ್‌ ಕಾರ್ಡ್‌ ಖರೀದಿಗೆ ಕೇಂದ್ರ ಸರಕಾರ ಜಾರಿಗೆ ತಂದಿದೆ ಕಠಿಣ ನಿಯಮಗಳು – ಬೇಕಾಬಿಟ್ಟಿ ಅಕ್ಟಿವೇಶನ್‌ ಗೆ ಕಡಿವಾಣ – ಇಲ್ಲಿದೆ ಕಂಪ್ಲಿಟ್‌ ಡಿಟೈಲ್‌

Ad Widget

Ad Widget

New simcard Rules: ಒಂದು ಕಾಲದಲ್ಲಿ ನಾಯಿ ಕೊಡೆಗಳಂತೆ ಬೇಕಾಬಿಟ್ಟಿಯಾಗಿ ಸಿಗುತ್ತಿದ್ದ ಮೊಬೈಲ್ ಸಿಮ್ ಕಾರ್ಡ್ (Sim card) ಗಳ ಖರೀದಿ ಎನ್ನುವುದು ಮುಂದಿನ ದಿನಗಳಲ್ಲಿ ಗಜ ಪ್ರಸವ ಆಗಲಿದೆ. ಈ ಹಿಂದೆ ಯಾರು ಯಾರದೋ ಗುರುತಿನ ಚೀಟಿ (ID Card) ಭಾವಚಿತ್ರಕ್ಕೆ ಇನ್ಯಾರಿಗೋ ಸಿಮ್ ಕಾರ್ಡ್ ನೀಡುತ್ತಿದ್ದ ಹಲವು ನಿದರ್ಶನಗಳು ಕಂಡು ಬಂದಿದ್ದವು . ವಂಚಕರು ಕಾಳ ಸಂತೆಯಲ್ಲಿ ಸಿಮ್ ಕಾರ್ಡ್ ಗಳನ್ನು ಖರೀದಿ ಮಾಡಿ , ಅದನ್ನು ಬೇಕಾಬಿಟ್ಟಿಯಾಗಿ ಬಳಸುತ್ತಿದ್ದನ್ನು ನಾವು ಕಾಣಬಹುದು . ಸದ್ಯ ಪೊಲೀಸರಿಗೆ ಅಪರಾಧ ತನಿಖೆಯಲ್ಲಿ ಸಿಮ್ ಕಾರ್ಡ್ ಅತೀ ದೊಡ್ಡ ಅಸ್ತ್ರವಾಗಿ ಬಳಕೆಯಾಗುತ್ತಿದೆ. ಅಲ್ಲದೇ ದೇಶದಲ್ಲಿ ದಿನೇದಿನೆ ಸೈಬರ್ ಪ್ರಾಡ್ ಗಳು ಹೆಚ್ಚುತ್ತಿದ್ದು, ವಂಚಕರು ಪೊಲೀಸ್ ತನಿಖೆಯಿಂದ ತಪ್ಪಿಸಿಕೊಳ್ಳಲು ನಕಲಿ ಸಿಮ್ ಗಳನ್ನು ಬಳಸುತ್ತಿರುವುದು ಬೆಳಕಿಗೆ ಬಂದಿದೆ.

Ad Widget

Ad Widget

Ad Widget

Ad Widget

ಹೀಗಾಗಿ ಸಿಮ್ ಕಾರ್ಡ್ಗಳ ಮೋಸದ ಮಾರಾಟವನ್ನು ತಡೆಯಲು ಭಾರತದ ಟೆಲಿಕಾಂ ಇಲಾಖೆ ಈ ವರ್ಷದ ಆಗಸ್ಟ್ನಲ್ಲಿ ಟೆಲಿಕಾಂ ಆಪರೇಟರ್ಗಳಿಗೆ ಹೊಸ ನಿಯಮಗಳನ್ನು ಘೋಷಿಸಿತ್ತು. ಆರಂಭದಲ್ಲಿ, ಈ ನಿಯಮಗಳನ್ನು ಅಕ್ಟೋಬರ್ 1 ರಿಂದ ಜಾರಿಗೆ ತರಲು ನಿರ್ಧರಿಸಲಾಗಿತ್ತು. ಆದರೆ ನಿಯಮಗಳ ಜಾರಿಯನ್ನು ಎರಡು ತಿಂಗಳ ಕಾಲ ಮುಂದೂಡಲಾಯಿತು.

Ad Widget

Ad Widget

Ad Widget

ದೂರಸಂಪರ್ಕ ಇಲಾಖೆ (DoT) ನಕಲಿ ಸಿಮ್ ಕಾರ್ಡ್ಗಳಿಗೆ ಸಂಬಂಧಿಸಿದ ವಂಚನೆಗಳನ್ನು ತಡೆಗಟ್ಟಲು ಡಿಸೆಂಬರ್ 1, 2023 ರಿಂದ ಹೊಸ ಸಿಮ್ ಕಾರ್ಡ್ ನಿಯಮಗಳನ್ನು ಜಾರಿಗೆ ಬಂದಿದೆ. ನಕಲಿ ಸಿಮ್ ಕಾರ್ಡ್ಗಳಿಗೆ ಲಿಂಕ್ ಮಾಡಲಾದ ವಂಚನೆಗಳನ್ನು ಪರಿಹರಿಸಲು ಈ ನಿಯಮಗಳನ್ನು ರೂಪಿಸಲಾಗಿದ್ದು, ಅನುಸರಿಸದಿದ್ದಲ್ಲಿ ದಂಡ ಮತ್ತು ಜೈಲು ಶಿಕ್ಷೆಗೆ ಒಳಗಾಗಬಹುದು.

Ad Widget

ಹೊಸ ಸಿಮ್ ಕಾರ್ಡ್ ಪಡೆಯಲು ಸಾಮಾನ್ಯವಾಗಿ ಗುರುತಿನ ಚೀಟಿಯನ್ನು ಕೊಟ್ಟರೆ ಕೆಲವು ಗಂಟೆಗಳ ನಂತರ ಸಿಮ್ ಕಾರ್ಡ್ ಆಕ್ಟಿವೇಶನ್ ಆಗುತ್ತಿತ್ತು, ಆದರೆ ಈಗ ಅದು ಸಾಧ್ಯವಿಲ್ಲ.ದೂ ಇನ್ನು ಮುಂದೆ, ಮಾರಾಟಗಾರರು ಸಿಮ್ ಕಾರ್ಡ್ಗಳನ್ನು ಮಾರಾಟ ಮಾಡುವಲ್ಲಿ ಅನೇಕ ನಿಯಮಗಳನ್ನು ಅನುಸರಿಸಬೇಕಾಗುತ್ತದೆ.

Ad Widget

Ad Widget

ದೂರಸಂಪರ್ಕ ಇಲಾಖೆಯ ಈ ನಿಯಮವನ್ನು ಪಾಲಿಸದಿದ್ದರೆ 10 ಲಕ್ಷ ರೂಪಾಯಿಗಳವರೆಗೆ ದಂಡ ಕಟ್ಟಬೇಕು. ದೇಶದಲ್ಲಿ ಹೆಚ್ಚುತ್ತಿರುವ ಸಿಮ್ ಕಾರ್ಡ್ ವಂಚನೆ ದರವನ್ನು ತಡೆಯಲು ಸರ್ಕಾರದಿಂದ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ನಕಲಿ ಸಿಮ್ ಕಾರ್ಡ್ಗಳ ಮಾರಾಟವನ್ನು ತಡೆಯಲು ಮಾರಾಟಗಾರರಿಗೆ ಈ ನಿಯಮ ತಂದಿದ್ದರೂ, ಇದು ಖರೀದಿದಾರರ ಮೇಲೂ ಪರಿಣಾಮ ಬೀರುತ್ತದೆ.
ಪ್ರಮುಖವಾಗಿ ಪ್ರಿ-ಆಕ್ಟಿವೇಟೆಡ್ ಸಿಮ್ ಕಾರ್ಡ್ಗಳು ದೇಶದಲ್ಲಿ ಮಾರಾಟವಾಗುತ್ತಿರುವುದರಿಂದ ಹೆಚ್ಚಿನ ಸಂದರ್ಭಗಳಲ್ಲಿ, ಆ ಸಿಮ್ಗಳನ್ನು ಬೇರೆಯವರ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಈಗ ಸಿಮ್ ಕಾರ್ಡ್ ಮಾರಾಟವನ್ನು ಕಟ್ಟುನಿಟ್ಟಾಗಿ ಮಾಡಲು ಸಾಧ್ಯವಾದರೆ, ಅಂತಹ ವಂಚನೆಯ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ಸರ್ಕಾರ ಹೇಳಿದೆ.

ಹೊಸ ಸಿಮ್ ಕಾರ್ಡ್ ಪಡೆಯಲು ನಿಯಮಗಳು :

*ವ್ಯಾಪಾರ ಸಂಪರ್ಕದ ಮೂಲಕ ಮಾತ್ರ ಸಿಮ್ ಕಾರ್ಡ್ಗಳನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸಲು ಅನುಮತಿಸಲಾಗಿದೆ. ಸಾಮಾನ್ಯ ಬಳಕೆದಾರರು ಹಿಂದಿನಂತೆ ಈಗಲೂ ಕೂಡ ಒಂದು ಐಡಿಯಲ್ಲಿ 9 ಸಿಮ್ ಕಾರ್ಡ್ಗಳನ್ನು ಪಡೆಯಬಹುದು.
*ಸಿಮ್ ಕಾರ್ಡ್ ಅನ್ನು ಕ್ಲೋಸ್ ಆದ 90 ದಿನಗಳ ಅವಧಿಯ ನಂತರವೇ ಆ ಸಂಖ್ಯೆಯನ್ನು ಇನ್ನೊಬ್ಬ ವ್ಯಕ್ತಿಗೆ ನೀಡಲಾಗುತ್ತದೆ.
*ಅಸ್ತಿತ್ವದಲ್ಲಿರುವ ತಮ್ಮ ಫೋನ್ ಸಂಖ್ಯೆಗಳಿಗೆ ಸಿಮ್ ಕಾರ್ಡ್ಗಳನ್ನು ಖರೀದಿಸುವ ಗ್ರಾಹಕರು ತಮ್ಮ ಆಧಾರ್ ಮತ್ತು ಇತರ ಡೆಮೊಗ್ರಾಫಿಕ್ ಡೇಟಾವನ್ನು ಸಲ್ಲಿಸಬೇಕಾಗುತ್ತದೆ.
*ರಿಜಿಸ್ಟರ್ ಆಗದ ಡೀಲರ್ಗಳ ಮೂಲಕ ಸಿಮ್ ಕಾರ್ಡ್ಗಳ ಮಾರಾಟ ಮಾಡಿಸಿದರೆ ಟೆಲಿಕಾಂ ಆಪರೇಟರ್ಗಳ ಮೇಲೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.
*ರಿಜಿಸ್ಟರ್ ಆಗದ ಡೀಲರ್ಗಳ ಮೂಲಕ ಪಡೆದ ಸಿಮ್ ಕಾರ್ಡ್ ಹಾಗೂ ಫೋನ್ ನಂಬರ್ಗಳನ್ನು ಮರುಪರಿಶೀಲಿಸಲಾಗುತ್ತದೆ.
*ಅಸ್ತಿತ್ವದಲ್ಲಿರುವ ಪಾಯಿಂಟ್ ಆಫ್ ಸೇಲ್ (ಪಿಒಎಸ್) ನವೆಂಬರ್ ಅಂತ್ಯದೊಳಗೆ ದಾಖಲೆಗಳನ್ನು ಸಲ್ಲಿಸಬೇಕು ಮತ್ತು ನೋಂದಾಯಿಸಿಕೊಳ್ಳಬೇಕು. ಪಿಒಎಸ್ ಅಥವಾ ಚಿಲ್ಲರೆ ವ್ಯಾಪಾರಿಗಳು ನೋಂದಣಿಗಾಗಿ ಕಾರ್ಪೊರೇಟ್ ಗುರುತಿನ ಸಂಖ್ಯೆ (CIN), ಲಿಮಿಟೆಟ್ ಲಯಾಬಿಲಿಟಿ ಪಾರ್ಟ್ನರ್ಶಿಪ್ ಐಡೆಂಟಿಫಿಕೇಶನ್ ನಂಬರ್ (LLPIN) ಅಥವಾ ವ್ಯಾಪಾರ ಪರವಾನಗಿ, ಆಧಾರ್ ಕಾರ್ಡ್ ಅಥವಾ ಪಾಸ್ಪೋರ್ಟ್, ಪಾನ್ ಕಾರ್ಡ್, ಸರಕು ಮತ್ತು ಸೇವಾ ತೆರಿಗೆ (GST) ನೋಂದಣಿ ಪ್ರಮಾಣಪತ್ರ ಇತ್ಯಾದಿಗಳನ್ನು ಒದಗಿಸಬೇಕಾಗುತ್ತದೆ.
*ಪಿಒಎಸ್ CIN, LLPIN, ಇನ್ಕಾರ್ಪೊರೇಶನ್ ಪ್ರಮಾಣಪತ್ರ, ಪಾನ್ ಮತ್ತು ಜಿಎಸ್ಟಿ ಪ್ರಮಾಣಪತ್ರವಿಲ್ಲದಿದ್ದರೆ, ಅದು ಅಫಿಡವಿಟ್ ಸಲ್ಲಿಸಬೇಕು. ಮತ್ತು ಈ ದಾಖಲೆಗಳನ್ನು ಲಭ್ಯವಾದ ತಕ್ಷಣವೇ ಸಲ್ಲಿಸಬೇಕಾಗುತ್ತದೆ.

* ಒಂದು ವೇಳೆ ಪಿಒಎಸ್ ನಕಲಿ ದಾಖಲೆಗಳನ್ನು ಸಲ್ಲಿಸಿದರೆ ಟೆಲಿಕಾಂ ಆಪರೇಟರ್ಗಳು ಅದರ ಐಡಿ ಅನ್ನು ನಿರ್ಬಂಧಿಸಬೇಕಾಗುತ್ತದೆ ಮತ್ತು ಪಿಒಎಸ್ ನಿಂದ ನೋಂದಾಯಿಸಲ್ಪಟ್ಟ ಎಲ್ಲಾ ಗ್ರಾಹಕರ ಸಿಮ್ಗಳನ್ನು ಮರುಪರಿಶೀಲಿಸಬೇಕಾಗುತ್ತದೆ.

Continue Reading

Trending

error: Content is protected !!