Connect with us

ಶಿಕ್ಷಣ

Scholarship: ಲೋರಿಯಲ್ ಇಂಡಿಯಾದಿಂದ ಐಟಿಯ ಡಿಪ್ಲೊಮಾ ಪದವಿ ಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ:

Ad Widget

Ad Widget

ಸಮಾಜದ ಅಭಿವೃದ್ದಿಗಾಗಿ ಹಲವು ಕಂಪನಿಗಳು ಕೊಡುಗೆ ನೀಡುತ್ತಿವೆ ಅದರಲ್ಲಿ ಇತ್ತೀಚಿಗೆ ಲೋರೀಯಲ್ ಬೂಸ್ಟ್ ವಿದ್ಯಾರ್ಥಿ ವೇತನವನ್ನು ಪರಿಚಯಿಸಿದೆ.. ಲೋರಿಯಲ್ ಇಂಡಿಯಾವು ಡಿಪ್ಲೊಮಾ ಪದವಿ ಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸುತ್ತಿದೆ.

Ad Widget

Ad Widget

Ad Widget

Ad Widget

ಅರ್ಹತೆಗಳು:
*ಭಾರತದೊಳಗಿನ ಯಾವುದೇ ಮಾನ್ಯತೆ ಪಡೆದ ಕಾಲೇಜು ಅಥವಾ ವಿಶ್ವವಿದ್ಯಾಲಯಗಳಲ್ಲಿ ಐಟಿಐ ಡಿಪ್ಲೊಮಾ , ವೃತ್ತಿಪರ ಕೋರ್ಸ್ , ಪದವಿ ಮತ್ತು ಸ್ನಾತಕೋತ್ತರ ಕಾರ್ಯಕ್ರಮದ ಅಂತಿಮ ಅಥವಾ ಅಂತಿಮ ಪೂರ್ವ ವರ್ಷಗಳಲ್ಲಿ ಅಧ್ಯಯನ ಮಾಡುತ್ತಿರಬೇಕು.
*18-30 ವರ್ಷ ವಯಸ್ಸಿನೊಳಗಿರಬೇಕು.
*ಅರ್ಜಿದಾರರ ಕುಟುಂಬದ ಆದಾಯವು 8 ಲಕ್ಷಕ್ಕಿಂತ ಕಡಿಮೆಯಿರಬೇಕು.
*ಅರ್ಜಿದಾರರು ತಮ್ಮ ಪದವಿ ಅಥವಾ ಸ್ನಾತ್ತಕೋತ್ತರ ಪದವಿಯ ಮೊದಲು ಅಥವಾ ಆ ಸಮಯದಲ್ಲಿ ಕೆಲಸ ಮಾಡಿದ್ದರೆ , ಅವರ ಕೆಲಸದ ಅನುಭವವು 5 ವರ್ಷಗಳನ್ನು ಮೀರಬಾರದು.

Ad Widget

Ad Widget

Ad Widget

ಸೌಲಭ್ಯಗಳು:
*ಈ ಮೂಲಕ ಉದ್ಯಮದ ತಜ್ಞರು ನಡೆಸಲಿರುವ ಆನ್ಲೈನ್ ಆಪ್ ಸ್ಕಿಲ್ಲಿಂಗ್ ವೆಬಿನಾರ್ ಗಳಲ್ಲಿ ಭಾಗವಹಿಸುವ ಅವಕಾಶ ಪಡೆಯಬಹುದು.
*ಪ್ರಪಂಚದಾದ್ಯಂತ ವಿಶ್ವವಿದ್ಯಾಲಯಗಳು ಮತ್ತು ಕಂಪನಿಗಳಿಂದ5800 ಕ್ಕೂ ಹೆಚ್ಚು ಕೋರ್ಸ್ ಗಳು , ವೃತ್ತಿಪರ ಪ್ರಮಾಣಪತ್ರಗಳು ಮತ್ತು ಪದವಿಗಳನ್ನು ಹೊಂದಿರುವ ಕಲಿಕಾ ವೇದಿಕೆಯಾದ ಕೊರ್ಸರಾದಲ್ಲಿ 34 ಕೋರ್ಸ್ ಗಳಿಗೆ ಮೂರು ತಿಂಗಳ ವೆಚ್ಚ ರಹಿತ ಪ್ರವೇಶಕ್ಕೆ ಅವಕಾಶ
*ಲೋರಿಯಲ್ ಇಂಡಿಯಾದ ಪ್ರಮುಖ ವೃತ್ತಿಪರರಿಂದ ವಿಶೇಷವಾದ ಒನ್ ಟು ಒನ್ ಮೆಂಟರ್ ಶಿಪ್ ಸೆಷನ್ಗಳು

Ad Widget

ಶಿಕ್ಷಣ

Ambika Vidyaalaya: ಯುವಕರು ಜಾಗೃತರಾದರೆ ಭಾರತವನ್ನು ತಡೆಯುವ ಮತ್ತೊಂದು ಶಕ್ತಿಯಿಲ್ಲ : ಸುಬ್ರಹ್ಮಣ್ಯ ನಟ್ಟೋಜ

Ad Widget

Ad Widget


ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ
ಪುತ್ತೂರು: ಸ್ವಾತಂತ್ರಾö್ಯನAತರದ ಏಳು ದಶಕಗಳ ಬಳಿಕವೂ ನಾವು ಬ್ರಿಟಿಷರ ಮಾನಸಿಕತೆಯಿಂದ ಹೊರಬಂದಿಲ್ಲ. ಅನೇಕರು ತಾವು ಭಾರತೀಯರು ಎಂಬ ಕಲ್ಪನೆಯನ್ನು ಬೆಳೆಸಿಕೊಳ್ಳುತ್ತಿಲ್ಲ. ಹಾಗಾಗಿಯೇ ಉತ್ಕೃಷ್ಟವಾದ ಭಾರತೀಯ ವಿಚಾರಧಾರೆಗಳು, ಪರಂಪರೆಗಳು ಕಣ್ಣ ಮುಂದಿದ್ದರೂ ವಿದೇಶೀ ವಿಚಾರಗಳೆಡೆಗೆ ಆಕರ್ಷಿತರಾಗುತ್ತಿದ್ದೇವೆ. ಯುವಮನಸ್ಸುಗಳಿಗೆ ಒಮ್ಮೆ ನಮ್ಮ ಪಾರಂಪರಿಕವಾದ ಸಂಗತಿಗಳ ಶ್ರೇಷ್ಟತೆ ಅರಿವಾದರೆ ಮತ್ತೆ ಭಾರತವನ್ನು ತಡೆಯುವ ಶಕ್ತಿ ಜಗತ್ತಿನಲ್ಲಿಲ್ಲ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಮಂಗಳವಾರ ವಿದ್ಯಾರ್ಥಿಗಳನ್ನುದ್ದೇಶಿಸಿ ‘ರಾಷ್ಟಿçÃಯ ಚಿಂತನೆಗಳು ಹಾಗೂ ಯುವಶಕ್ತಿ’ ವಿಚಾರವಾಗಿ ಮಾತನಾಡಿದರು.
ನಮ್ಮ ಋಷಿ ಮುನಿಗಳ ಕಾಲದಿಂದಲೂ ಸಾಧನೆಯೆಡೆಗಿನ ಹಾದಿಯ ಬಗೆಗೆ ಮಾರ್ಗದರ್ಶನಗಳು ನಿರಂತರವಾಗಿ ಒದಗಿ ಬಂದಿವೆ. ಭೋಗ ಸುಖಕ್ಕೆ ಆದ್ಯತೆ ನೀಡದೆ ಹಠ ಸಾಧನೆಗೆ ಮಹತ್ವ ನೀಡಲಾಗಿದೆ. ಮನುಷ್ಯನೊಳಗೆ ಒಮ್ಮೆ ಸಾಧಿಸುವ ಹಠ ಮೂಡಿದರೆ ಅದ್ಭುತವಾದದ್ದನ್ನು ಸಾಕಾರಗೊಳಿಸುವುದಕ್ಕೆ ಸಾಧ್ಯ. ನಮ್ಮ ದೇಹವನ್ನು ಸಾಧನಾಪಥಕ್ಕೆ ಹೇಗೆ ಒಗ್ಗಿಸಿಕೊಳ್ಳಬೇಕೆಂಬ ದಾರಿಯನ್ನು ನಮ್ಮ ಹಿರಿಯರೇ ಆಚರಿಸಿ ತೋರಿದ್ದಾರೆ. ಅವರ ಹಾದಿಯನ್ನು ಅನುಸರಿಸುವುದಷ್ಟೇ ನಮ್ಮ ಮುಂದಿರುವ ಜವಾಬ್ದಾರಿ ಎಂದರು.
ಯೋಗ – ಧ್ಯಾನಗಳಂತಹ ಮಹತ್ತರವಾದ ಕೊಡುಗೆಯನ್ನು ನಮ್ಮ ಪರಂಪರೆ ನಮಗೆ ನೀಡಿದೆ. ದಿನವೊಂದಕ್ಕೆ ಅದಕ್ಕಾಗಿ ಮೀಸಲಿಡುವ ಹತ್ತು – ಹದಿನೈದು ನಿಮಿಷಗಳು ನಮ್ಮನ್ನು ತೇಜಸ್ವೀ ಮನುಷ್ಯರನ್ನಾಗಿಸುತ್ತವೆ. ಹಿಂದೂ ಧರ್ಮ ನಮಗೆ ನೀಡಿರುವ ಮಹಾನ್ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸುವ ಕಾರ್ಯ ಆಗಬೇಕಿದೆ. ಯಾರು ಧರ್ಮವನ್ನು ರಕ್ಷಿಸುತ್ತಾನೋ ಅಂಥಹವನನ್ನು ಧರ್ಮವೇ ರಕ್ಷಿಸುತ್ತದೆ ಎಂಬುದು ಬಾಯಿಮಾತಲ್ಲ. ಅದರ ಹಿಂದಿರುವ ಅರ್ಥಗಳನ್ನು ಗ್ರಹಿಸಿ ಕಾರ್ಯತತ್ಪರರಾಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಉಪನ್ಯಾಸಕರಾದ ಗಣೇಶ್ ಪ್ರಸಾದ್ ಎ, ಶಶಿಕಲಾ ವರ್ಕಾಡಿ, ಅನನ್ಯಾ ವಿ, ಜಯಂತಿ ಪಿ, ಸಂಧ್ಯಾ ಎಂ, ಗಿರೀಶ ಭಟ್ ಕುವೆತ್ತಂಡ, ಹರ್ಷಿತ್ ಪಿಂಡಿವನ, ವೀಣಾ ಶಾರದಾ, ಕಚೇರಿ ಉದ್ಯೋಗಿಗಳಾದ ಗಾಯತ್ರೀದೇವಿ ಹಾಗೂ ಪ್ರಮೋದ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಸ್ವಾಗತಿಸಿ, ಮನಃಶಾಸ್ತç ವಿಭಾಗದ ಮುಖ್ಯಸ್ಥ ಚಂದ್ರಕಾAತ ಗೋರೆ ವಂದಿಸಿದರು.

Ad Widget

Ad Widget

Ad Widget

Ad Widget
Continue Reading

ಶಿಕ್ಷಣ

Ambika Vidyalaya: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡಾ ಮೈತ್ರಿ 2023 ಪಂದ್ಯಾಟಕ್ಕೆ ತೆರೆ – ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ : ರಾಜೇಂದ್ರ ಪ್ರಸಾದ್

Ad Widget

Ad Widget


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಾಲಿಬಾಲ್ ಹಾಗೂ ಥ್ರೋ ಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ ಶುಕ್ರವಾರ ನಡೆಯಿತು. ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಪುರುಷರ ವಾಲಿಬಾಲ್ ತಂಡ ಹಾಗೂ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಮಹಿಳಾ ಥ್ರೋ ಬಾಲ್ ತಂಡ ಕ್ರಮವಾಗಿ ಚಾಂಪಿಯನ್ಸ್ ಟ್ರೋಫಿ ತಮ್ಮದಾಗಿಸಿಕೊಂಡರು.

Ad Widget

Ad Widget

Ad Widget

Ad Widget


ಅಂತೆಯೇ ಪುರುಷರ ವಾಲಿ ಬಾಲ್ ಪಂದ್ಯಾಟದಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪುರುಷ ತಂಡ ರನ್ರ್ಸ್ ಟ್ರೋಫಿ ಪಡೆದರೆ ಥ್ರೋಬಾಲ್ ಪಂದ್ಯಾಟದಲ್ಲಿ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಮಹಿಳಾ ತಂಡ ರನ್ರ್ಸ್ ಟ್ರೋಫಿ ಪಡೆದರು.

Ad Widget

Ad Widget

Ad Widget

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ ನಿರ್ದೇಶಕ ರಾಜೇಂದ್ರ ಪ್ರಸಾದ್ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ. ಸೋಲು ಗೆಲುವಿನ ಹಂಗಿಲ್ಲದೆ ಕೇವಲ ಆಡುವ ದೃಷ್ಟಿಕೋನದಿಂದ ಅಂಗಳಕ್ಕಿಳಿದಾಗ ಮನಸ್ಸಿಗೆ ಮುದ ದೊರಕುವುದಕ್ಕೆ ಸಾಧ್ಯ. ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಆಂತರಿಕ ಕ್ರೀಡೆಯನ್ನು ಆಯೋಜಿಸುವುದು ಅತ್ಯಂತ ಮುಖ್ಯ ಹಾಗೂ ಪರಿಣಾಮಕಾರಿ ಎಂದರು.

Ad Widget


ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ ಪ್ರಸಾದ ಎ, ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ, ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯೆ ಸುಚಿತ್ರಾ ಪ್ರಭು, ಅಂಬಿಕಾ ಮಹಾವಿದ್ಯಾಲಯದ ಐಕ್ಯುಎಸಿ ಘಟಕದ ಸಂಯೋಜಕ ಚಂದ್ರಕಾAತ ಗೋರೆ ಉಪಸ್ಥಿತರಿದ್ದರು. ಅಂಬಿಕಾ ಮಹಾವಿದ್ಯಾಲಯದ ಅಂತಿಮ ಬಿ.ಕಾಂ ವಿದ್ಯಾರ್ಥಿ ಅನ್ಮಯ್ ಭಟ್ ಕಾರ್ಯಕ್ರಮ ನಿರ್ವಹಿಸಿದರು. ಪಂದ್ಯಾಟಗಳನ್ನು ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ದೈಹಿಕ ಶಿಕ್ಷಕರಾದ ಸುಚಿತ್ರಾ ಹಾಗೂ ಮಹೇಶ್ ನಡೆಸಿಕೊಟ್ಟರು

Ad Widget

Ad Widget
Continue Reading

ಶಿಕ್ಷಣ

Philomina Pu College: ಫಿಲೋಮಿನಾ ಪ. ಪೂ ಕಾಲೇಜಿನ ವಿಂಧ್ಯಾಶ್ರೀ ರೈ ರಾಜ್ಯ ಮಟ್ಟಕ್ಕೆ ಆಯ್ಕೆ

Ad Widget

Ad Widget


ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವಿಶ್ವಮಾನವ ಪದವಿ ಪೂರ್ವ ಕಾಲೇಜು ಕೊಮ್ಮೇರಹಳ್ಳಿ, ಮಂಡ್ಯ ಇಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿಂಧ್ಯಾಶ್ರೀ ರೈ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget


ಇವರು ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಶಿರಸಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಇವರು ಶ್ರೀ ಮದ್ ಭಗವದ್ಗೀತಾ ಜಯಂತಿ ಪ್ರಯುಕ್ತ ನಡೆಸಿದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

Ad Widget

Ad Widget

Ad Widget


ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಹಾಗೂ ಉಪ್ಪಿನಂಗಡಿ ಹೋಬಳಿ ಘಟಕ, ರೋಟರಿ ಕ್ಲಬ್ ಉಪ್ಪಿನಂಗಡಿ ಇದರ ನೇತೃತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನಡೆದ ಪುತ್ತೂರು ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ, ಹಾಗೂ ದೇಶಭಕ್ತಿಗೀತೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

Ad Widget


ಇವರು ಕುರಿಯ ನಿವಾಸಿಯಾದ ಉಮೇಶ್ ರೈ ಮತ್ತು ಶೋಭಾವತಿ. ಯು.ರೈ ದಂಪತಿಗಳ ಪುತ್ರಿ . ಕಾಲೇಜಿನ ಪ್ರಾಂಶುಪಾಲರಾದ ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಯನ್ನೂ ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ನಿರ್ದೇಶಕರಾದ ಸುಮನ ರಾವ್, ರಶ್ಮಿ ಪಿ ಎಸ್, ಹಾಗೂ ಭರತ್ ಜಿ.ಪೈ ಉಪಸ್ಥಿತರಿದ್ದರು.

Ad Widget

Ad Widget
Continue Reading

Trending

error: Content is protected !!