Connect with us

Uncategorized

Arun Puttila joins bjp: ಅರುಣ್‌ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರ ; ಪುತ್ತಿಲ ಪರಿವಾರದ ಡೆಡ್‌ ಲೈನ್‌ ಅನ್ನು ಮಾನ್ಯ ಮಾಡುವುದೇ ಬಿಜೆಪಿ ಮತ್ತು ಅರ್‌ ಎಸ್‌ ಎಸ್‌ ?

Ad Widget

Ad Widget

Ad Widget

Ad Widget

ಪುತ್ತಿಲ ಪರಿವಾರದ ಸಮಾಲೋಚನಾ ಸಭೆಯ ಬಳಿಕ ಬಿಜೆಪಿ ಹಾಗೂ ಪುತ್ತಿಲ ಪರಿವಾರದ ಮಧ್ಯೆ ಇರುವ ಗೊಂದಲ ತಿಳಿಯಾಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಫೆ 5 ರಂದು  ಕೊಟೇಚಾ ಹಾಲ್‌ ನಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಪುತ್ತಿಲ ಪರಿವಾರವು 3 ನಿರ್ಣಯಗಳನ್ನು ಘೋಷಿಸಿದ್ದು, ಇದು ಮುಂದಿನ ದಿನಗಳಲ್ಲಿ ಎರಡು ತಂಡಗಳು ಮತ್ತೆ ಜತೆಯಾಗುವ ಸಾಧ್ಯತೆಯನ್ನು ಕ್ಷೀಣಿಸುವಂತೆ ಮಾಡಿದೆ. ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರುರವರು ಪುತ್ತಿಲ ಪರಿವಾರದ ಸಂಸ್ಥಾಪಕ  ಅರುಣ್‌ ಪುತ್ತಿಲರವರು ಬಿಜೆಪಿ ಸೇರ್ಪಡೆಗೆ ನಿಗದಿಪಡಿಸಿದ 3 ಷರತ್ತುಗಳಿಗೆ ಉತ್ತರ ನೀಡುವುದೆ ಸಮಾಲೋಚಾನ ಸಭೆಯ ಪ್ರಮುಖ ಅಜೆಂಡಾ ಆಗಿತ್ತು.

Ad Widget

Ad Widget

Ad Widget

ಅಧ್ಯಕ್ಷತೆ ವಹಿಸಿದ್ದ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತಾ ಸಭೆಯಲ್ಲಿ ಮೂರು ನಿರ್ಣಯಗಳನ್ನು ಮಂಡಿಸಿ ಬಿಜೆಪಿಗೆ ಎಚ್ಚರಿಕೆಯ ಸಂದೇಶ ರವಾನಿಸಿದರು. ಮುಖಂಡ ಅರುಣ್ ಕುಮಾರ್‌ ಪುತ್ತಿಲ ಅವರಿಗೆ ಜವಾಬ್ದಾರಿಯುತ ಸ್ಥಾನ ನೀಡಿದಲ್ಲಿ ಪುತ್ತಿಲ ಪರಿವಾರ ಮಾತೃ ಪಕ್ಷ ಬಿಜೆಪಿಯೊಂದಿಗೆ ವಿಲೀನವಾಗಲಿದೆ. ಪುತ್ತಿಲರಿಗೆ ಬಿಜೆಪಿ ಪುತ್ತೂರು ಮಂಡಲ ಅಧ್ಯಕ್ಷತೆ ನೀಡದಿದ್ದಲ್ಲಿ ಮುಂದೆ ಜಿಲ್ಲೆಯಲ್ಲಿ ಮಹಾ ರಾಜಕೀಯ ವಿಪ್ಲವ ನಡೆಯಲಿದೆ ಎಂದು   ಎಚ್ಚರಿಕೆ ನೀಡಿದ್ದಾರೆ.

Ad Widget

3 ನಿರ್ಣಯಗಳು

Ad Widget

Ad Widget
  • ಮಾತೃ ಪಕ್ಷ ಬಿಜೆಪಿಯ ನಾಯಕರು, ಹಿರಿಯರು ಅಥವಾ ಸಂಘ ಪರಿವಾರದವರಿಗೆ ಅಗೌರವ ಉಂಟಾಗುವ ಯಾವುದೇ ಹೇಳಿಕೆ, ಮಾತುಗಳನ್ನು ಪುತ್ತಿಲ ಪರಿವಾರ ಅಥವಾ ಅರುಣ್ ಕುಮಾರ್ ಪುತ್ತಿಲ ಆಡದೇ ಇರುವುದರಿಂದ ಯಾರಲ್ಲಿಯೂ ಕ್ಷಮೆ ಕೇಳುವ ಪ್ರಶ್ನೆಯೇ ಬರುವುದಿಲ್ಲ.
  • ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷ ಸ್ಥಾನವನ್ನು ಬಿಜೆಪಿಯ ಜವಾಬ್ದಾರಿಯುತ ವ್ಯಕ್ತಿ ಗೌರವಯುತವಾಗಿ ನೀಡಿದರೆ ಪುತ್ತಿಲ ಪರಿವಾರವನ್ನು ಬಿಜೆಪಿ ಜತೆ ವಿಲೀನಗೊಳಿಸಲಾಗುವುದು.
  • ಪುತ್ತೂರು ಬಿಜೆಪಿ ಅಧ್ಯಕ್ಷ ಸ್ಥಾನವನ್ನು ನೀಡದಿದ್ದರೆ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಪುತ್ತಿಲ ಪರಿವಾರದಿಂದ ಜಿಲ್ಲೆಯಾದ್ಯಂತ ಸ್ಪರ್ಧೆ ನಡೆಸಲಾಗುವುದು.

ಈ ಮೂರು ನಿರ್ಣಾಯಗಳು ಸದ್ಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಬಾರಿ ಚರ್ಚೆಗೆ ಕಾರಣವಾಗುತ್ತಿದೆ ಇದರ ಜತೆಗೆ ಮುಂದಿನ 3 ದಿನದೊಳಗಡೆ ಅರುಣ್‌ ಅವರಿಗೆ ಬಿಜೆಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸ್ಥಾನ ಕೊಡಬೇಕು ಡೆಡ್‌ ಲೈನ್‌ ಅನ್ನು ವಿಧಿಸಲಾಗಿದೆ. ಅಲ್ಲದೇ ಹುದ್ದೆ ನೀಡದಿದ್ದಲ್ಲಿ ಮುಂದೆ ನಡೆಯುವ ಎಲ್ಲ ಚುನಾವಣೆಗಳಲ್ಲಿ ಜಿಲ್ಲೆಯಾದ್ಯಂತ ಸ್ಪರ್ಧಿಸುವ ಎಚ್ಚರಿಕೆಯ ಸಂದೇಶವನ್ನು ಸಮಾಲೋಚನ ಸಭೆಯ ವೇದಿಕೆಯಿಂದ ರವಾನಿಸಲಾಗಿದೆ. ಇದರಲ್ಲಿ ಲೋಕಸಭಾ ಚುನಾವಣೆಯು ಸೇರಲಿದೆಯೇ ಎಂಬುದು ಖಚಿತಗೊಂಡಿಲ್ಲ . ಸಭೆಯಲ್ಲಿ ಕಾರ್ಯಕರ್ತರೊಬ್ಬರ ಲೋಕಸಬಾ ಚುನಾವಣೆ ಸ್ಪರ್ಧೆ ಕುರಿತ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದ ಪುತ್ತಿಲ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಎದುಕೊಳ್ಳಲಾಗುವುದು ಎಂದು ಉತ್ತರಿಸಿದ್ದಾರೆ

Ad Widget

Ad Widget

Ad Widget

ಪುತ್ತಿಲ ಪರಿವಾರದ ಈ ಹೇಳಿಕೆ ಹಾಗೂ ನಿರ್ಣಯದ ಬಳಿಕವು ಬಿಜೆಪಿ ಅರುಣ್‌ ಪುತ್ತಿಲರನ್ನು ಅವರು ಆಪೇಕ್ಷಿಸಿದ ಹುದ್ದೆ ನೀಡಿ ಬಿಜೆಪಿಗೆ ಸೇರಿಸಿಕೊಳ್ಳುವುದೇ ? ಎನ್ನುವುದು ಸದ್ಯ ಚರ್ಚೆಯಾಗುತ್ತಿರುವ ವಿಷಯ.  ಜಿಲ್ಲಾ ಬಿಜೆಪಿಯ ಈ ಹಿಂದಿನ ಟ್ರ್ಯಾಕ್‌ ರೆಕಾರ್ಡ್‌ ಗಮನಿಸಿದರೇ ಇದು ದೂರದ ಮಾತು ಎನಿಸುತ್ತಿದೆ.  ಅಲ್ಲದೇ ಜಿಲ್ಲೆಯಲ್ಲಿ ಪಕ್ಷದ ಮೇಲೆ ಅರ್‌ ಎಸ್‌ ಎಸ್‌ ಗೆ ವಿಪರೀತವಾದ ಹಿಡಿತವಿದೆ.  ಆರ್‌ ಎಸ್‌ ಎಸ್‌ ವ್ಯಕ್ತಿಗಿಂತ ಸಂಘಟನೆಗೆ ಹೆಚ್ಚು ಮಹತ್ವ ಕೊಡುವುದರಿಂದ ಹಾಗೂ ಜಿಲ್ಲೆಯ ಆರ್‌ ಎಸ್‌ ಎಸ್‌ ನಾಯಕರು,  ಪುತ್ತಿಲ ತಗ್ಗಿ ಬಗ್ಗಿ ಪಕ್ಷಕ್ಕೆ ಬರಬೇಕು ಎಂಬ ನಿಲುವು ಹೊಂದಿರುವುದರಿಂದ  ಪುತ್ತಿಲ ಪರಿವಾರ ಒಡ್ಡಿರುವ ಷರತ್ತುಗಳಿಗೆ ಭಾಗುವ ಸಾಧ್ಯತೆ ಇಲ್ಲ ಎಂದೆ ರಾಜಕೀಯ ವಲಯದಲ್ಲಿ ವಿಶ್ಲೇಸಿಸಲಾಗುತ್ತಿದೆ

ಆದರೇ  ಇದೆ ವೇಳೆ ಜಿಲ್ಲೆಯ ಇನ್ನೆರಡು ಕ್ಷೇತ್ರಗಳಲ್ಲೂ ಬಿಜೆಪಿ ಬಂಡಾಯದ ಬಿಸಿಯನ್ನು ಎದುರಿಸುತ್ತಿದ್ದು, ಹೀಗಾಗಿ ಸದ್ಯ ಜಿಲ್ಲಾ ಬಿಜೆಪಿ ಏಕಾಏಕಿ ಅಗ್ರೇಸಿವ್‌ ನಿರ್ಧಾರ ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲ. ಅದು ಕೂಡ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದಕ್ಕಿಂತ, ಕಾದು ನೋಡುವ ತಂತ್ರಕ್ಕೆ ಮುಂದಾಗುವ ಸಾಧ್ಯತೆಯೇ ಅಧಿಕ . ಹೀಗಾಗಿ ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೇ ಉಳಿದಿರುವ ಒಂದು ಜಿಲ್ಲಾ ಉಪಾಧ್ಯಕ್ಷ ಹುದ್ದೆಯನ್ನು ಭರ್ತಿ ಮಾಡಿ, ಲೋಕಸಭಾ ಚುನಾವಣೆಯವರೆಗೆ  ಪುತ್ತೂರು ಮಂಡಲಕ್ಕೆ ಹೊಸ  ಅಧ್ಯಕ್ಷರ ನೇಮಕಾತಿ ಮಾಡದೇ ಯಥಾಸ್ಥಿತಿ ಮುಂದುವರಿಸುವ ಸಾಧ್ಯತೆಯೇ ಅಧಿಕ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆಯ ಬಳಿಕ ಪರಿಸ್ಥಿತಿಯನ್ನು ಅವಲೋಕಿಸಿ ಪಕ್ಷ ಪುತ್ತೂರು ಮಂಡಲದ ನೇಮಕಾತಿ ಮಾಡುವ ಸಾಧ್ಯತೆಯೇ ಅಧಿಕ

Click to comment

Leave a Reply

Uncategorized

ಹುಬ್ಬಳ್ಳಿ : ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿ ಸದ್ದಾಂ ಹುಸೇನ್ ಗೆ ಪೊಲೀಸರಿಂದ ಗುಂಡೇಟು  – ಬಂಧನ

Ad Widget

Ad Widget

Ad Widget

Ad Widget

Ad Widget

Ad Widget

Ad Widget

ನೇಹಾ ಮಾದರಿಯಲ್ಲಿಯೇ ಹುಬ್ಬಳ್ಳಿಯಲ್ಲಿ ಮತ್ತೊಂದು  ಬಾಲಕಿಯ ಮೇಲೆ  ಲೈಂಗಿಕ ದೌರ್ಜನ್ಯ ನೀಡಿದ್ದ ಪ್ರಕರಣ ನಡೆದಿದ್ದು, ಆರೋಪಿ ಸದ್ದಾಂ ಹುಸೇನ್ ನನ್ನು  ಪೊಲೀಸರು ಗುಂಡು ಹಾರಿಸಿ ಗಾಯಗೊಳಿಸಿ ಬಂಧಿಸಿದ್ದಾರೆ.

Ad Widget

ಆರೋಪಿ ಸದ್ದಾಂ ವಿರುದ್ದ  16 ವರ್ಷದ ಬಾಲಕಿಯ ಮೇಲೆ  ಅತ್ಯಾಚಾರ ಎಸಗಿ  ಗರ್ಭಿಣಿ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ. ಠಾಣೆಯಲ್ಲಿ FIR ದಾಖಲಾದ   ವಿಚಾರ ತಿಳಿಯುತ್ತಿದ್ದಂತೆ ಆರೋಪಿ ಎಸ್ಕೇಪ್ ಆಗಿದ್ದು,  ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಸ್ಥಳಾಂತರಿಸುವ ವೇಳೆ ಆರೋಪಿ ಸುತ್ತಗಟ್ಟಿ ಗ್ರಾಮದ ಸಮೀಪ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆರೋಪಿಗೆ ಗುಂಡೇಟು ಹೊಡೆದಿದ್ದಾರೆ.

Ad Widget

Ad Widget

  ಪೊಲೀಸರು ಆರೋಪಿ ಸದ್ದಾಂ ಹುಸೇನ್ ಎಡಗಾಲಿಗೆ ಗುಂಡು ಹಾರಿಸಿ (Firing) ಬಂಧಿಸಿದ್ದಾರೆ. ಆರೋಪಿ ಸದ್ದಾಂ ಹುಸೇನ್ ಹಲ್ಲೆ  ನಡೆಸಿದ್ದರಿಂದ  ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂಗಮೇಶ ಹಾಗೂ ಕಾನ್ಸ್ಟೇಬಲ್ ಅರುಣ್ ಅವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಖಲಿಸಲಾಗಿದೆ. ಆರೋಪಿ ಸದ್ದಾಂ ಹುಸೇನ್ನನ್ನು ಧಾರವಾಡ (Dharwad) ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

Ad Widget

ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಆಸ್ಪತ್ರೆಗೆ  ಭೇಟಿ ನೀಡಿದ್ದು  ಈ ವೇಳೆ ಮಾಧ್ಯಮಗಳಿಗೆ ಘಟನೆಯನ್ನು ವಿವರಿಸಿದ್ದಾರೆ.” ಎಪಿಎಂಸಿ ಕೇಸ್ ಪತ್ತೆ ಹಚ್ಚಲು ಟೀಮ್ ಕಳಿಹಿಸಿದ್ವಿ. ಅದರಲ್ಲಿ ಒಂದು ಟೀಮ್ಗೆ ಈತ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಐದಾರು ಕಿಮೀ ದೂರದಲ್ಲಿರೋದು ತಿಳಿಯುತ್ತೆ. ಆಗ ಆತನನ್ನು ಬಂಧಿಸಿ ಕರೆತರಲು ತೆರಳಿದ್ದರು. ಆ ವೇಳೆಯಲ್ಲಿ ವಿದ್ಯಾಗಿರಿ ಇನ್ಸ್ಪೆಕ್ಟರ್ ನೇತೃತ್ವದ ಟೀಮ್ ಹೋಗಿತ್ತು. ಮುಂದಿನ ತನಿಖೆಗೆ ಠಾಣೆಗೆ ಕರೆತರಲು ಮುಂದಾಗಿದ್ದರು ಎಂದು ಹೇಳಿದ್ದಾರೆ.

ಬಳಿಕ ಆರೋಪಿಯನ್ನು ಬಂಧಿಸಿ ಜೀಪ್ ಹತ್ತಿಸುವಾಗ ಪೆನ್ ನೈಪ್ ನಿಂದ ಎಡ ಭುಜಕ್ಕೆ ಚುಚ್ಚಿದ್ದಾನೆ. ಕಾನ್ಸ್ ಟಬಲ್ ಅರುಣ ಮೇಲೆ ಮೊದಲು ಹಲ್ಲೆ ಮಾಡುತ್ತಾನೆ. ಆಗ ಕಂಟ್ರೋಲ್ ಮಾಡಲು ಆತನನ್ನು ಕೆಳಗೆ ತಳ್ಳಿದ್ದರು. ಆಗ ಅದೇ ಚಾಕುವಿನಿಂದ ಇನ್ಸಪೆಕ್ಟರ್ ಮಂಡಿ ಮತ್ತು ಬೆನ್ನ ಮೇಲೆ ಹಲ್ಲೆ ಮಾಡುತ್ತಾನೆ. ಅವನನ್ನ ಕಂಟ್ರೋಲ್ ಮಾಡಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಆಗ ಎಡಗಾಲಿಗೆ ಫೈರ್ ಮಾಡಿದ್ದಾರೆ. ಆರೋಪಿ ಸೇರಿ ಮೂರು ಜನ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ರೇಣುಕಾ ಸುಕುಮಾರ ಎಂದಿದ್ದಾರೆ.

ಸಿಪಿಐ ಮತ್ತು ಕಾನ್ಸಟೇಬಲ್ಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ. ಹೀಗಾಗಿ ಅಡ್ಮಿಟ್ ಮಾಡಿಕೊಂಡಿದ್ದಾರೆ. ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದು ಒಂದು ಕೇಸ್ ದಾಖಲಿಸಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.

ಗರ್ಭಿಣಿಯಾದ ಬಾಲಕಿ

ಆರೋಪಿ ಸದ್ದಾಂ ಹುಸೇನ್ ಲಿಂಬುವಾಲೆ ಹುಬ್ಬಳ್ಳಿಯ ಈಶ್ವರನಗರದವನು ಎಂದು ಗುರುತಿಸಲಾಗಿದೆ. ಅಪ್ರಾಪ್ತ ಜತೆ ಸಲುಗೆ ಬೆಳೆಸಿ, ಪ್ರೀತಿಸುವಂತೆ ನಂಬಿಸಿ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಮನೆಯಲ್ಲಿ ಹೇಳಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ. ಕಳೆದ ಮೂರ್ನಾಲ್ಕು ದಿನದಿಂದ ಬಾಲಕಿ ವಾಂತಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಿದ್ದರು. ಆದರೂ ವಾಂತಿ ಕಡಿಮೆಯಾಗದಿ ದ್ದಾಗ ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಆ ವೇಳೆ ಬಾಲಕಿ ವಿಚಾರಿಸಿದಾಗ ಸದ್ದಾಂ ಹುಸೇನ್ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿ ಪೋಷಕರು ದೂರು ದಾಖಲಿಸಿದ್ದಾರೆ.

Continue Reading

Uncategorized

Prajwal Revanna Sex Scandal: ಹಾಸ್ಟೆಲ್‌ ಕುರಿತು ವಿಚಾರಿಸಲು ಹೋಗಿದ್ದ ವೇಳೆ ಕೈ ಹಿಡಿದೆಳೆದು ರೂಮಿನ ಬಾಗಿಲು ಹಾಕಿದರು-  ಗನ್‌ ತೋರಿಸಿ ಬಟ್ಟೆ ಬಿಚ್ಚು ಎಂದರು; ರೇಪ್‌ ಮಾಡಿ ಮೊಬೈಲ್‌ ನಲ್ಲಿ ವಿಡಿಯೋ ಮಾಡಿಕೊಂಡ್ರು: ಮಾಜಿ ಜಿಪಂ ಸದಸ್ಯೆಯಿಂದ  ಪ್ರಜ್ವಲ್‌ ರೇವಣ್ಣ ಮೇಲೆ ಅತ್ಯಾಚಾರ ಪ್ರಕರಣ  

Ad Widget

Ad Widget

Ad Widget

Ad Widget

ಮಾಜಿ ಪ್ರಧಾನಿ ಎಚ್‌ ಡಿ ದೇವೆಗೌಡರ ಮೊಮ್ಮಗ, ಮಾಜಿ ಸಚಿವ ಎಚ್‌ ಡಿ ರೇವಣ್ಣ  ಪುತ್ರ ಹಾಸನ  ಸಂಸದ ಪ್ರಜ್ವಲ್ ರೇವಣ್ಣ ಸಂಕಷ್ಟ ದಿನೇ ದಿನೆ ಹೆಚ್ಚಾಗುತ್ತಿದೆ. ರಾಸಲೀಲೆಯ ಪೆನ್‌ ಡ್ರೈವ್‌ ಬಹಿರಂಗವಾಗುತ್ತಲೇ, ಮನೆಯ ಮಹಿಳಾ ಕೆಲಸದಾಳು ನೀಡಿದ ದೂರಿನ ಮೇರೆಗೆ ಅಪ್ಪ ಮಗನ ಮೇಲೆ ಹೊಳೆನರಸಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಜ್ವಲ್‌ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

 ಹಾಸನದ ಸ್ಥಳೀಯ ಸಂಸ್ಥೆಗಳ ಮಾಜಿ ಸದಸ್ಯೆಯೊಬ್ಬಳಿಗೆ ಗನ್ ತೋರಿಸಿ ಜೀವ ಬೆದರಿಕೆ ಹಾಕಿ ಅತ್ಯಾಚಾರ ನಡೆಸಿದ ಬಗ್ಗೆ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಗಳ ವಿಡಿಯೋ ಚಿತ್ರಿಕರಣ ನಡೆಸಿರುವ ಬಗ್ಗೆ  ಸಿಐಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Ad Widget

2ನೇ ದೂರುದಾರೆ ಹಾಸನ ಜಿಲ್ಲೆಯಯರಾಗಿದ್ದು, ಆಕೆಗೀಗ  44 ವರ್ಷ. ಗುರುವಾರ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಸಂತ್ರಸ್ತೆಯನ್ನು ನ್ಯಾಯಾಧೀಶರ ಸಮ್ಮುಖದಲ್ಲಿ ಹಾಜರುಪಡಿಸಿ ಹೇಳಿಕೆ ದಾಖಲಿಸಿದ್ದರು. ಇದರ ಬೆನ್ನಲ್ಲೇ ಎಫ್ ಐಆ‌ರ್ ದಾಖಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಜೀವ ಬೆದರಿಕೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ

Ad Widget

Ad Widget

ದೂರಿನಲ್ಲಿ ಏನಿದೆ ?

Ad Widget

Ad Widget

Ad Widget

 ದೂರುದಾರೆಯೂ ಚುನಾಯಿತ ಪ್ರತಿನಿಧಿಯಾಗಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರ ಕೆಲಸ ಮಾಡಿಸಿಕೊಡಲು ಶಾಸಕರು, ಸಂಸದರನ್ನು ಭೇಟಿಯಾಗುತ್ತಿದ್ದರು.  ಒಂದು ದಿನ ಬಿಸಿಎಂ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರಿಗೆ ಸೀಟು ಕೊಡಿಸುವ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣರ ಬಳಿ ಮನವಿ ಮಾಡಲು ತೆರಳಿದ್ದೆ. ಅಂದು ಸಂಸದರ ಕಚೇರಿ ಮತ್ತು ವಸತಿ ಗೃಹದಲ್ಲಿ ತುಂಬಾ ಜನರು ಇದ್ದರು. ಈ ವೇಳೆ ಅಲ್ಲಿನ ಸಿಬ್ಬಂದಿ ನೀವು ವಸತಿ ಗೃಹದ ಮಹಡಿಯಲ್ಲಿ ಇರುವಂತೆ ನನಗೆ ಸೂಚಿಸಿದರು. ಅದರಂತೆ ನಾನು ಮಹಡಿಗೆ ತೆರಳಿದೆ. ಅಲ್ಲಿ ಕೆಲ ಮಹಿಳೆಯರು ಇದ್ದರು.’ ಕೈ ಹಿಡಿದು ಎಳೆದು ರೂಮ್ ಬಾಗಿಲು ಲಾಕ್:

“ಸ್ವಲ್ಪ ಸಮಯದ ಬಳಿಕ ಮಹಡಿಗೆ ಬಂದ ಪ್ರಜ್ವಲ್ ರೇವಣ್ಣ ಅಲ್ಲಿಂದ ಬೇರೆ ಮಹಿಳೆಯರ ಅಹವಾಲು ಆಲಿಸಿ ಕಳುಹಿಸಿದರು. ಬಳಿಕ ನಾನು ಒಬ್ಬನೇ ಇದ್ದಿದ್ದರಿಂದ ನನ್ನನ್ನು ರೂಮ್‌ಗೆ ಕರೆದರು. ನಾನು ಒಳಗೆ ಹೋಗುತ್ತಿದ್ದಂತೆ ಕೈ ಹಿಡಿದು ಎಳೆದುಕೊಂಡು ರೂಮ್‌ನ ಬಾಗಿಲು ಹಾಕಿದರು. ಆಗ ಏಕೆ ಬಾಗಿಲು ಹಾಕುತ್ತೀರಿ ಎಂದು ನಾನು ಕೇಳಿದೆ. ಆಗ ಅವರು ಏನೂ ಆಗುವುದಿಲ್ಲ ಎಂದು ನನ್ನನ್ನು ಬೆಡ್ ಮೇಲೆ ಕೂರಿಸಿಕೊಂಡರು.’

ಹೇಳಿದ ಹಾಗೆ ಕೇಳು:

 ‘ನಿನ್ನ ಗಂಡ ಜೋರು, ಕಡಿಮೆ ಮಾತನಾಡಲು ಹೇಳು. ಇಲ್ಲವಾದರೆ ಅವನನ್ನು ಬಿಡುವುದಿಲ್ಲ, ಅವನಿಂದ ನಮ್ಮ ಅಮ್ಮನ ಎಂಎಲ್‌ಎ ಟಿಕೆಟ್‌ ತಪ್ಪಿತು.ನಿನ್ನಗಂಡರಾಜಕೀಯವಾಗಿ ಬೆಳಯಬೇಕು ಎಂದರೆ ನಾನು ಹೇಳಿದ ಹಾಗೆ ಮಾಡು ಎನ್ನುತ್ತಾ ನನ್ನನ್ನು ಮಂಚದ ಮೇಲೆ ಮಲಗಿ ಬಟ್ಟೆ ಬಿಚ್ಚು ಎಂದರು. ನಾನು ಬಿಚ್ಚುವುದಿಲ್ಲ ಎಂದರೂ ಬಿಚ್ಚುವಂತೆ ಒತ್ತಾಯ ಮಾಡಿದರು’ ಎಂದು ದೂರಿನಲ್ಲಿಆರೋಪಿಸಿದ್ದಾರೆ.

ನನ್ನ ಬಳಿ ಗನ್ ಇದೆ:

 ‘ಈ ವೇಳೆ ನಾನು ಕೂಗುತ್ತೇನೆ ಎಂದು ಹೇಳಿದಾಗ, ನನ್ನ ಬಳಿ ಗನ್ ಇದೆ. ನಾನು ಹೇಳಿದ ಹಾಗೆ ಕೇಳಬೇಕು. ಇಲ್ಲವಾದರೆ, ನಿನ್ನನ್ನು ಮತ್ತು ನಿನ್ನ ಗಂಡನನ್ನು ಬಿಡುವುದಿಲ್ಲ, ಮುಗಿಸಿಬಿಡುತ್ತೇನೆ ಎಂದು ಬೆದರಿಕೆ ಹಾಕಿದರು. ಬಳಿಕ ನನ್ನನ್ನು ಬಲಾತ್ಕಾರ ಮಾಡಲು ಪ್ರಯತ್ನಿಸಿದರು. ನಾನೇ ಎಷ್ಟೇ ಪ್ರತಿರೋಧ ಒಡ್ಡಿದರೂ ಬಿಗಿಯಾಗಿ ನನ್ನ ಕೈ ಹಿಡಿದು ಕೂಗಬೇಡ ಎಂದು ಬೆದರಿಸಿದರು. ಆಗ ನಾನು ಭಯಪಟ್ಟೆ. ಆಗ ಅವರು ಮೊಬೈಲ್ ತೆಗೆದರು. ಇದರಿಂದ ಹೆದರಿ ಅವರು ಹೇಳಿದಂತೆ ನಾನು ಕೇಳಿದೆ. ಅವರು ಹೇಳಿದಂತೆ ನಡೆದುಕೊಂಡೆ’ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಮೊಬೈಲ್‌ನಲ್ಲಿ ಚಿತ್ರೀಕರಣ:

‘ನನ್ನನ್ನು ಬಲಾತ್ಕಾರ,ಲೈಂಗಿಕ ದೌರ್ಜನ್ಯ ಮಾಡಿ ಅದನ್ನು ಮೊಬೈಲ್‌ನಲ್ಲಿ  ಚಿತ್ರೀಕರಣ ಮಾಡಿಕೊಂಡರು. ನೀನೇನಾದರೂ ಈ ವಿಚಾರವನ್ನು ಬಾಯಿ ಬಿಟ್ಟರೆ, ನಿನ್ನ ವಿಡಿಯೋವನ್ನು ಸಾರ್ವಜನಿಕರಿಗೆ ಬಿಡುತ್ತೇನೆ. ಈ ವಿಡಿಯೊದಲ್ಲಿ ನನ್ನ ಮುಖ ಇಲ್ಲ. ನಿನ್ನದೇ ಮಾನ-ಮರ್ಯಾದೆ ಹೋಗುತ್ತದೆ ಎಂದು ಹೇಳಿ ಭಯಪಡಿಸಿದರು. ಈ ವಿಡಿಯೊವನ್ನು ಹೀಗೇ ಇರಿಸಿಕೊಂಡಿರುತ್ತೇನೆ. ನಾನು ಕರೆದಾಗಲೆಲ್ಲಾ ನೀನು ನನ್ನ ಜತೆ ಮಲಗಬೇಕು. ಇಲ್ಲವಾದರೆ, ವಿಡಿಯೋವನ್ನು ಬಹಿರಂಗಪಡಿಸುತ್ತೇನೆ ಎಂದು ಬ್ಲ್ಯಾಕ್ ಮೇಲ್ ಮಾಡಿದರು.’

ಮುಂದುವರೆದು, ‘ನಿನ್ನ ಗಂಡ ನನ್ನ ಜತೆ ಇರುತ್ತಾನೆ. ಅವನನ್ನೂ ಮುಗಿಸುತ್ತೇನೆ ಎಂದು ನನ್ನನ್ನು ಬೆದರಿಸಿದರು. ಪದೇ ಪದೇ ನನಗೆ ಕರೆ ಮಾಡಿ, ವಿಡಿಯೋ ಕರೆ ಮಾಡಿ, ನಿನ್ನ ದೇಹವನ್ನು ನಗ್ನವಾಗಿ ತೋರಿಸು, ಬಟ್ಟೆ ಬಿಚ್ಚು ಎಂದು ಪೀಡಿಸಿ ಮಾನಸಿಕ ಹಿಂಸೆ ನೀಡುತ್ತಿದ್ದರು. ದೈಹಿಕವಾಗಿ ಆನೇಕ ಬಾರಿ ನನ್ನನ್ನು ಬಲಾತ್ಕಾರ ಮಾಡಿ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ’ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಜ್ವಲ್ ಮೇಲೆ ಕ್ರಮ ಆಗಬೇಕು:

‘ಪ್ರಜ್ವಲ್ ರೇವಣ್ಣ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕೊಲೆ ಬೆದರಿಕೆ ಹಾಕಿ ನನ್ನ ಮೇಲೆ ಬಲಾತ್ಕಾರ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಲೈಂಗಿಕ ದೌರ್ಜನ್ಯದ ವಿಡಿಯೋವನ್ನು ಪ್ರಸಾರ ಮಾಡಿ ನನ್ನ ಮರ್ಯಾದೆ ಹಾಳುಮಾಡಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

‘ಇಷ್ಟು ದಿನ ನಾನು ಪ್ರಜ್ವಲ್ ರೇವಣ್ಣ ಬೆದರಿಕೆ ಹಾಕಿದ್ದಕ್ಕೆ ಭಯಗೊಂಡು ನನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ನೀಡಿರಲಿಲ್ಲ. ಈಗ ಎಸ್‌ಐಟಿ ರಚನೆಯಾಗಿ ತನಿಖೆಯಾಗುತ್ತಿರುವುದರಿಂದ ನನಗಾಗಿರುವ ದೌರ್ಜನ್ಯದ ಸಂಬಂಧ ದೂರು ನೀಡುತ್ತಿದ್ದೇನೆ’ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಪದೇ ಪದೇ ಕರೆ ಮಾಡಿ, ವಿಡಿಯೋ ಕರೆ ಮಾಡಿ, ನಿನ್ನ ದೇಹವನ್ನು ನಗ್ನವಾಗಿ ತೋರಿಸು, ಬಟ್ಟೆ ಬಿಚ್ಚು ಎಂದು ಪೀಡಿಸಿ ಮಾನಸಿಕ ಹಿಂಸೆ ನೀಡುತ್ತಿದ್ದರು. ದೈಹಿಕ ವಾಗಿ ಅನೇಕ ಬಾರಿ ನನ್ನನ್ನು ಬಲಾತ್ಕಾರ ಮಾಡಿ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ.

ದೂರಿನಲ್ಲಿ ಮಹಿಳೆ ಹೇಳಿದ್ದು

Continue Reading

Uncategorized

ವಿಟ್ಲದ ದಂಪತಿಗಳಿದ್ದ ಕಾರು ಸಂಪಾಜೆಯಲ್ಲಿ ಅಪಘಾತ – ಮಹಿಳೆ ಮೃತ್ಯು

Ad Widget

Ad Widget

Ad Widget

Ad Widget

ಪುತ್ತೂರು: ಮಡಿಕೇರಿಯ ಕಡೆಗೆ ಸಂಚರಿಸುತ್ತಿದ್ದ ಕಾರು ಸಂಪಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಟೇಲ್ ಒಂದಕ್ಕೆ ಡಿಕ್ಕಿ ಹೊಡೆದು ಪತ್ನಿ ಮೃತಪಟ್ಟು ಪತಿ ಗಂಭೀರ ಗಾಯಗೊಂಡ ಘಟನೆ ಮೇ 3ರಂದು ನಡೆದಿದೆ.

Ad Widget

Ad Widget

Ad Widget

ಅಡ್ಯನಡ್ಕ ನಿವಾಸಿ ಅನುರಾಧ ಪೈ ಮೃತ ಪಟ್ಟಿದ್ದು, ಪತಿ ಅರವಿಂದ ಪೈ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget

ಕಾರಿನ ಮುಂಭಾಗ ಕುಳಿತಿದ್ದ ಅನುರಾಧ ಪೈ ಅವರು ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದು, ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ.

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading