Connect with us

ಸಾಮಾಜಿಕ ಮಾಧ್ಯಮ

Mar. 11: Election to the Board of Directors of DK District Central Cooperative Bank – ಮಾ.11: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಆಡಳಿತ ಮಂಡಳಿಯ ಅವಧಿ ಮುಕ್ತಾಯಗೊಂಡಿದ್ದು ನೂತನ ಆಡಳಿತ ಮಂಡಳಿಯ ರಚನೆಗೆ ಮಾ.11ರಂದು ಚುನಾವಣೆ ನಡೆಯಲಿದೆ.

Ad Widget

Ad Widget

Ad Widget

Ad Widget

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಫೆ.26ರಿಂದ ಪ್ರಾರಂಭಗೊಂಡಿದ್ದು ನಾಮಪತ್ರ ಸಲ್ಲಿಸಲು ಮಾ. 3 ಅಂತಿಮ ದಿನವಾಗಿದೆ. ಮಾ.4ರಂದು ನಾಮಪತ್ರ ಪರಿಶೀಲನೆ, ಮಾ.5ರಂದು ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ. ಅದೇ ದಿನ ರಿಟರ್ನಿಂಗ್‌ ಅಧಿಕಾರಿಯವರು ಅಭ್ಯರ್ಥಿಗಳಿಗೆ ಚಿಹ್ನೆಯನ್ನು ನೀಡಲಿದ್ದಾರೆ. ಮಾ. 11ರಂದು ಮಂಗಳೂರಿನ ಕೋಡಿಯಾಲ್‌ ಬೈಲ್‌ನಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಪ್ರಧಾನ ಕಛೇರಿಯ ಸಭಾಂಗಣದಲ್ಲಿ ಬೆಳಿಗ್ಗೆ ಗಂಟೆ 9ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಅದೇ ದಿನ ಸಂಜೆ ಮತ ಎಣಿಕೆಯಾಗಿ ಫಲಿತಾಂಶ ಘೋಷಣೆಯಾಗಲಿದೆ. ಮಂಗಳೂರು ಉಪ ವಿಭಾಗದ ಸಹಾಯಕ ಆಯುಕ್ತ ಹರ್ಷವರ್ಧನ ಎಸ್.ಜೆ. ಅವರು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

Ad Widget

Ad Widget

Ad Widget

Ad Widget

16 ಸ್ಥಾನಗಳಿಗೆ ಚುನಾವಣೆ:
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಒಟ್ಟು 16 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪ್ರಾಥಮಿಕ ವ್ಯವಸಾಯ, ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳ 13 ಸ್ಥಾನ ಇದೆ. ಕುಂದಾಪುರ – 2, ಉಡುಪಿ -2, ಮಂಗಳೂರು-೪ ಸ್ಥಾನಗಳಿದ್ದು ಸುಳ್ಯ, ಪುತ್ತೂರು, ಕಾರ್ಕಳ, ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕುಗಳಲ್ಲಿ ತಲಾ ಒಂದು ಸ್ಭಾನ ಇದೆ. ಉಭಯ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರಿ ಸಂಘ, ಪಟ್ಟಣ ಸಹಕಾರಿ ಬ್ಯಾಂಕ್‌, ಕೃಷಿಯೇತರ ಸಹಕಾರಿ ಸಂಘ ಹಾಗೂ ಈ ಮೇಲಿನ ಮೂರು ತರಗತಿಯ ಸಂಘಗಳನ್ನು ಹೊರತು ಪಡಿಸಿ ಇತರ ಎಲ್ಲಾ ಸಹಕಾರ ಸಂಘಗಳಿಗೆ ತಲಾ ಒಂದು ಸ್ಥಾನ ಇದೆ. ಈ ಸಂಘಗಳಲ್ಲಿ ಆಡಳಿತ ಮಂಡಳಿ ನಿರ್ಣಯಿಸಿದ ನಿರ್ದೇಶಕರು ಅಭ್ಯರ್ಥಿಗಳು ಹಾಗೂ ಮತದಾರರಾಗಿರುತ್ತಾರೆ.

Ad Widget

Ad Widget

Ad Widget

Ad Widget
Click to comment

Leave a Reply

ಸಾಮಾಜಿಕ ಮಾಧ್ಯಮ

Panchamitra-ದೇಶದಲ್ಲೇ ಪ್ರಥಮ ಬಾರಿ ರಾಜ್ಯದಲ್ಲಿ ಜಾರಿಯಾದ ‘ಪಂಚಮಿತ್ರ’ ಚಾಟ್ ಗೆ ಅಭೂತಪೂರ್ವ ಜನ ಸ್ಪಂದನೆ : ಏನೀದು ಪಂಚಮಿತ್ರ ಇಲ್ಲಿ ಓದಿ

Ad Widget

Ad Widget

Ad Widget

Ad Widget

‘ಪಂಚಮಿತ್ರ’ ವಾಟ್ಸ್ಆ್ಯಪ್ ಚಾಟ್‌ಗೆ ಆರಂಭವಾದ ಕೆಲವೇ ದಿನಗಳಲ್ಲಿ ಅಭೂತಪೂರ್ವ ಸ್ಪಂದನೆ ದೊರೆತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ‘ಪಂಚಮಿತ್ರ’ ವಾಟ್ಸ್ಆ್ಯಪ್ ಚಾಟ್‌ಗೆ ಸೇವೆ ಆರಂಭಿಸಿ 70 ದಿನದಲ್ಲಿಯೇ 88,000ಕ್ಕೂ ಹೆಚ್ಚು ಜನ ಬಳಕೆದಾರರಾಗಿದ್ದಾರೆ.

Ad Widget

Ad Widget

Ad Widget

Ad Widget

ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಪಂಚಮಿತ್ರ ವಾಟ್ಸ್ಆ್ಯಪ್ ಚಾಟ್ ಆರಂಭಿಸಿದೆ. ಇದರಿಂದಾಗಿ ಸಾರ್ವಜನಿಕರು ಗ್ರಾಮ ಪಂಚಾಯಿತಿಗಳಲ್ಲಿ ತಮಗೆ ಅವಶ್ಯವಿರುವ ಮಾಹಿತಿ ಮತ್ತು ವಿವರ ಪಡೆಯಲು ಮತ್ತು ಗ್ರಾಮ ಪಂಚಾಯಿತಿಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಹಲವಾರು ವೆಬ್‌ಸೈಟ್ ಮತ್ತು ಪೋರ್ಟಲ್‌ಗಳನ್ನು ತಡಕಾಡಬೇಕಾದ ಪರಿಸ್ಥಿತಿ ಕಡಿಮೆ ಮಾಡಬಹುದು. ಅನೇಕರಿಗೆ ಯಾವ ವೆಬ್‌ಸೈಟ್/ಪೋರ್ಟಲ್‌ ನಲ್ಲಿ ಯಾವ ಮಾಹಿತಿ ಸಿಗುತ್ತದೆ ಎಂಬ ಗೊಂದಲ ಉಂಟಾಗಿತ್ತು. ಇದನ್ನು ನಿವಾರಿಸಲು ಸರಕಾರ ಈ ಪಂಚಮಿತ್ರ ವಾಟ್ಸ್ಆ್ಯಪ್ ಚಾಟ್‌ ಆರಂಭ ಮಾಡಿದೆ. ಈ ಪೋರ್ಟಲ್‌ನಲ್ಲಿ ಬಳಕೆದಾರರು 2,650ಕ್ಕೂ ಹೆಚ್ಚು ಕುಂದು-ಕೊರತೆ ದಾಖಲು ಮಾಡಿದ್ದಾರೆ. ಅನೇಕ ಸವಲತ್ತು, ಸೇವೆಗಳನ್ನು ಪಡೆದುಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ರಾಜ್ಯದಲ್ಲೇ ಮೊದಲು ಜಾರಿ: ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿ ಪರಿಶೀಲಿಸಲು ಹಾಗೂ ಗ್ರಾಪಂಗಳಿಗೆ ಸಂಬಂಧಿಸಿದ ಕುಂದುಕೊರತೆ ದಾಖಲಿಸಲು ದೇಶದಲ್ಲೇ ಪ್ರಪ್ರಥಮ ಬಾರಿಗೆ ವಾಟ್ಸ್ ಆ್ಯಪ್ ಚಾಟ್ ಅನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದಲೇ ಅಭಿವೃದ್ಧಿಪಡಿಸಿ ಅನುಷ್ಠಾನಗೊಳಿಸಲಾಗಿದೆ. ಈ ಪೋರ್ಟಲ್ ಮೂಲಕ ಇನ್ಮುಂದೆ ಗ್ರಾ ಪಂಗಳ ಮಾಹಿತಿ ಮತ್ತು ವಿವರಗಳನ್ನು, ಸೇವೆಗಳಿಗೆ ಅರ್ಜಿ ಮತ್ತು ಕುಂದುಕೊರತೆಗಳನ್ನು ವಾಟ್ಸ್ ಆ್ಯಪ್ ಮೂಲಕ ದಾಖಲಿಸಬಹುದಾಗಿದೆ. ನಗರ-ಸ್ಥಳೀಯ ಸಂಸ್ಥೆಗಳಲ್ಲೂ ಈ ಸೌಲಭ್ಯವಿಲ್ಲ.

Ad Widget

Ad Widget

Ad Widget

Ad Widget

ದೂರುದಾರರ ಗೌಪ್ಯತೆ ಕಾಪಾಡುವ ಭರವಸೆ: ಗ್ರಾಮದ ಸಮಸ್ಯೆ ಕುರಿತು ಅನೇಕರು ದೂರು ನೀಡುತ್ತಾರೆ. ಈ ದೂರುಗಳಿಂದ ಹಲವು ಸಂದರ್ಭಗಳಲ್ಲಿ ವೈಯಕ್ತಿಕ ದ್ವೇಷ ಸಾಧನೆಗೆ ಕಾರಣವಾಗುತ್ತವೆ. ಹಾಗಾಗಿ ಈ ತಂತ್ರಜ್ಞಾನ ಬಳಕೆಯಲ್ಲಿ ದೂರುದಾರರ ಗೌಪ್ಯತೆಯನ್ನೂ ಕಾಪಾಡಲಾಗುತ್ತದೆ. ಹಾಗಾಗಿ ಜನರು ನಿರ್ಭಯವಾಗಿ ದೂರು ನೀಡಬಹುದಾಗಿದೆ.

Ad Widget

Ad Widget

Ad Widget

ಕುಂದುಕೊರತೆ ದಾಖಲಿಸಿ ಪರಿಹಾರ ಕಂಡುಕೊಳ್ಳಬಹುದು : ವಾಟ್ಸ್ಆ್ಯಪ್ ಮೂಲಕ ಗ್ರಾಪಂಗಳಿಗೆ ಸಂಬಂಧಿಸಿದಂತೆ ಕುಡಿಯುವ ನೀರು, ರಸ್ತೆ ಮತ್ತು ಸೇತುವೆಗಳ ದುರಸ್ತಿ, ಉದ್ಯೋಗ ಖಾತ್ರಿ ಯೋಜನೆಗೆ ಮತ್ತು ಪಂಚಾಯತ್ ರಾಜ್ ವಿಷಯಗಳಿಗೆ ಸಂಬಂಧಿತ ಕುಂದುಕೊರತೆ ದಾಖಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಕುಂದು-ಕೊರತೆಯ ಸ್ಥಿತಿ-ಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸಲೂ ಅವಕಾಶ ಕಲ್ಪಿಸಲಾಗಿದೆ

ಮಾಹಿತಿಗಳೇನು?
» ಸೇವೆಗಳ ವಿವರಗಳು
» ಸ್ವ ಸಹಾಯ ಗುಂಪಿನ ವಿವರಗಳು
» ఆರ್‌ಟಿಐ ದಾಖಲೆಗಳು
» ಚುನಾಯಿತ ಪ್ರತಿನಿಧಿಗಳ ವಿವರ
» ಸಿಬ್ಬಂದಿ ಮಾಹಿತಿ
» ಪೂರ್ಣಗೊಂಡ ಗ್ರಾಪಂ ಸಭೆಗಳ ನಡಾವಳಿ
» ಗ್ರಾಪಂ ಮುಂಬರುವ ಸಭೆಗಳ ಮಾಹಿತಿ
» ಆದಾಯ ಸಂಗ್ರಹ ವಿವರ

ಲಭ್ಯವಿರುವ ಸೇವೆಗಳು :
ಕಟ್ಟಡ ನಿರ್ಮಾಣ ಲೈಸನ್ಸ್, ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜಿನ ಸಂಪರ್ಕ ಕಡಿತ, ಕುಡಿಯುವ ನೀರು, ಬೀದಿ ದೀಪದ ನಿರ್ವಹಣೆ, ಗ್ರಾಮ ನೈರ್ಮಲ್ಯ, ವ್ಯಾಪಾರ ಪರವಾನಗಿ, ಸ್ವಾಧೀನ ಪ್ರಮಾಣಪತ್ರ, ರಸ್ತೆ ಅಗೆಯಲು ಅನುಮತಿ, ಕೈಗಾರಿಕೆ/ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ, ನಿರಾಕ್ಷೇಪಣಾ ಪತ್ರ, ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ, ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು, ಹೊಸ/ಅಸ್ಥಿತ್ವದಲ್ಲಿರುವ ದೂರ ಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ, ಕೇಬಲ್/ಭೂಗತ ಕೇಬಲ್ ಅನುಮತಿ, ನಮೂನೆ 9/1ಎ, ನಮೂನೆ 11 ಬಿ ಸೇವೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಸೇವೆ ಪಡೆಯಬಹುದು.

ಪಂಚ ಮಿತ್ರ ವಾಟ್ಸಾಪ್ ಚಾಟ್ ನಂಬರ್‌ : 8277 506 000

ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ಇಂಟರ್‌ನೆಟ್ ಪೆನಟ್ರೇಷನ್ ಪ್ರಮಾಣ ಶೇ.91 ಇದೆ. ಜನರಿಗೆ ವಾಟ್ಸ್ಆ್ಯಪ್ ಸುಲಭ ಸಂವಹನದ ಮಾರ್ಗವಾಗಿದೆ. ಈ ತಂತ್ರಜ್ಞಾನ ಬಳಸಿ ಜನರಿಗೆ ಸೇವೆ ಒದಗಿಸಲು ಪಂಚಮಿತ್ರ ವಾಟ್ಸ್ ಆ್ಯಪ್ ಚಾಟ್ ಆರಂಭಿಸಲಾಗಿದೆ. ಜನರಿಗೆ ಸಮಸ್ಯೆಗಳ ಪರಿಹಾರದ ಭರವಸೆಯೂ ದೊರೆಯುತ್ತಿದೆ. ಇದನ್ನು ಇನ್ನಷ್ಟು ಪ್ರಚುರಪಡಿಸಲು ಕ್ರಮ ಕೈಗೊಳ್ಳುತ್ತೇವೆ. – ಪ್ರಿಯಾಂಕ್ ಖರ್ಗೆ ಸಚಿವ

Continue Reading

ಸಾಮಾಜಿಕ ಮಾಧ್ಯಮ

Hasana sex tape : ಚುನಾವಣೆ ಹೊಸ್ತಿಲಲ್ಲಿ  ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್‌ ಡ್ರೈವ್‌  ಸೌಂಡ್‌ ! ಅಸಲಿಯ / ನಕಲಿಯ ತೀವ್ರ ಚರ್ಚೆ

Ad Widget

Ad Widget

Ad Widget

Ad Widget

ಹಾಸನ ಲೋಕಸಭಾ ಕ್ಷೇತ್ರದ  ರಾಜಕೀಯ ಪಕ್ಷವೊಂದರ ಅಭ್ಯರ್ಥಿಯೊರು  ಭಾಗಿಯಾಗಿದ್ದಾರೆ  ಎನ್ನಲಾದ ನೂರಾರು  ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ವೊಂದು ಇದೆ ಎಂಬ ಸುದ್ದಿ ಕ್ಷೇತ್ರದಾದ್ಯಂತ ಚುನಾವಣೆಯಲ್ಲಿ ಭಾರಿ ಸಂಚಲನ ಉಂಟು ಮಾಡಿದೆ. ಕೆಲ ಅಶ್ಲೀಲ ವಿಡಿಯೋ ಹಾಗೂ ಫೋಟೊಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇವು ಆ ಪೆನ್‌ ಡ್ರೈವ್‌ ಒಳಗಿನಿಂದ ಸೋರಿಕೆ ಮಾಡಲಾದ ಕ್ಲಿಪಿಂಗ್‌ ಗಳು ಎಂದು ಹೇಳಲಾಗುತ್ತಿದೆ.

Ad Widget

Ad Widget

Ad Widget

Ad Widget

ಚುನಾವಣೆ ಹೊಸ್ತಿಲಲ್ಲಿ , 3 ದಿನಗಳ ಹಿಂದೆಯಷ್ಟೆ ಈ ಪೆನ್‌ ಡ್ರೈವ್‌ ಚರ್ಚೆ ಮುನ್ನಲೆಗೆ ಬಂದಿದೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ. ತನ್ನಲ್ಲಿ ಕೆಲಸ ಕೇಳಿ ಬಂದ ಯುವತಿಯರು ಹಾಗೂ ಮಹಿಳೆಯರನ್ನು ಆ ವ್ಯಕ್ತಿ ವಿಕೃತವಾಗಿ ಬಳಸಿಕೊಂಡಿದ್ದಾನೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

Ad Widget

Ad Widget

Ad Widget

Ad Widget

ಆದರೇ ರಾಜಕಾರಣಿಯ ಬೆಂಬಲಿಗರು ಈ ಆರೋಪಗಳನ್ನು ನಿರಾಕರಿಸಿದ್ದು.  ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಈ ವಿಡಿಯೋಗಳನ್ನು  ಎಂದು  ಅಭ್ಯರ್ಥಿಯ ಬೆಂಬಲಿಗರು   ಪೊಲೀಸ್ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಇಷ್ಟು ದಿನಗಳ ಬಳಿಕ ಇದೀಗ ಕೊನೆಯ ಹಂತದಲ್ಲಿ ಈ ರಾಸಲೀಲೆಯ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಬಗ್ಗೆ ಚರ್ಚೆ ನಡೆಯುತ್ತಿರುವುದು ಕುತೂಹಲ ಮೂಡಿದ್ದು, ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ  ಶರಣಾಗಿದ್ದಾರೆ.

Ad Widget

Ad Widget

Ad Widget

ಈ ಪೆನ್‌ಡ್ರೈನಲ್ಲಿ ಸುಮಾರು ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಇದರಲ್ಲಿರುವ ಎನ್ನಲಾದ ಅಭ್ಯರ್ಥಿ ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದ. ಆ ಲೈಂಗಿಕ ಚಟುವಟಿಕೆಯನ್ನು ತಾನೇವಿಡಿಯೋ ಮಾಡಿಟ್ಟುಕೊಳ್ಳುತ್ತಿದ್ದ. ಈಗಾಗಲೇ ಕ್ಷೇತ್ರದ ಹಲವರು ಹಲವರು ಈ ಈ ವಿಡಿಯೋಗಳನ್ನು ನೋಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅದರ ತುಣುಕುಗಳು ಹರಿದಾಡುತ್ತಿವೆ.

 ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿ ಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆದರೆ, ಇದೀಗ ಈ ವಿಡಿಯೋಗಳನ್ನು ತಾವು ಬಹಿರಂಗ ಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

Continue Reading

ಸಾಮಾಜಿಕ ಮಾಧ್ಯಮ

Dhruv Rathee | ಕನ್ನಡ ಸೇರಿ ಪಂಚಭಾಷೆಯಲ್ಲಿ ಯೂಟ್ಯೂಬ್ ಚಾನೆಲ್ ಪ್ರಾರಂಭಿಸಿದ ದೇಶದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ

Ad Widget

Ad Widget

Ad Widget

Ad Widget

ಹೊಸದಿಲ್ಲಿ: ರಾಜಕೀಯ, ರಾಷ್ಟ್ರೀಯ ಅಂತರಾಷ್ಟ್ರೀಯ ವಿಶ್ಲೇಷಕ ದೇಶದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ (Dhruv Rathee) ಅವರು ಕನ್ನಡ, ತಮಿಳು, ತೆಲುಗು ಸೇರಿದಂತೆ ಒಟ್ಟು ಐದು ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ.

Ad Widget

Ad Widget

Ad Widget

Ad Widget

ಖ್ಯಾತ ಯೂಟ್ಯೂಬ‌ರ್ ಧ್ರುವ್ ರಾಠಿ ಅವರು ಇತ್ತೀಚೆಗೆ ಬಿಡುಗಡೆಗೊಳಿಸಿದ್ದ ಯೂಟ್ಯೂಬ್ ವಿಡಿಯೋಗಳು ಭಾರೀ ವೈರಲ್ ಆಗಿ ದೇಶದಾದ್ಯಂತ ಚರ್ಚೆಯಾಗಿದೆ. ತನ್ನ ವಿಡಿಯೋ ಎಲ್ಲಾ ಭಾಷಿಕರಿಗೆ ತಲುಪುವಂತೆ ಮಾಡಲು ಧ್ರುವ್ ರಾಠಿ ಈಗ ಕನ್ನಡ ಸಹಿತ ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್‌ ಆರಂಭಿಸಿದ್ದಾರೆ.

Ad Widget

Ad Widget

Ad Widget

Ad Widget

ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಬಿಜೆಪಿ ಪಕ್ಷವು ಈ ಬಾರಿಯ ಲೋಕಸಭಾ ಚುನಾವಣೆ ಗೆಲ್ಲಲು ವಿರೋಧ ಪಕ್ಷಗಳನ್ನು ಹೇಗೆ ಕಟ್ಟಿ ಹಾಕಿದೆ?. ದೇಶದ ಉನ್ನತ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಲಾಗಿದೆ ಎಂದು ಸವಿವರವಾದ ವಿಡಿಯೋ ಬಿಡುಗಡೆಗೊಳಿಸಿದ್ದರು. ಅಲ್ಲದೇ ಚುನಾವಣಾ ಬಾಂಡ್ ಕುರಿತ ವಿಡಿಯೋ ಕೂಡ ಮಾಡಿದ್ದು, ಮೋದಿ ಸರ್ವಾಧಿಕಾರಿಯೇ ಎಂಬ ಕೂಡ ಕೋಟಿ ವೀಕ್ಷಣೆ ಕಂಡಿದೆ. ಇದು ಸಾಮಾಜಿಕ ಜಾಲತಾಣದಾದ್ಯಂತ ವೈರಲ್ ಆಗಿತ್ತು. ಇವರ ಎಲ್ಲಾ ವೀಡಿಯೋಗಳು ಮಿಲಿಯನ್ ಗಟ್ಟಲೆ ವ್ಯೂವ್ಸ್ ಕಾಣುತ್ತಿದೆ.

Ad Widget

Ad Widget

Ad Widget

Ad Widget

ಚುನಾವಣಾ ಬಾಂಡ್‌ಗಳು ರಾಜಕೀಯ ನಾಯಕರ ಬಂಧನಕ್ಕೆ ಹೇಗೆ ಕಾರಣವಾಗಿದೆ ಎನ್ನುವುದನ್ನು ಸಾಕಷ್ಟು ಆಧಾರಗಳೊಂದಿಗೆ ತಮ್ಮ ವಿಡಿಯೋದಲ್ಲಿ ಮಾಹಿತಿ ನೀಡಿದ್ದರು. ನಂತರ ಹಲವು ಬಲಪಂಥೀಯರು ಧ್ರುವ್ ರಾಠಿ ಅವರನ್ನು ಗುರಿಯಾಗಿರಿಸಿದ್ದರು.

Ad Widget

Ad Widget

Ad Widget

ಇದೀಗ ಅವರು ಎಐ ತಂತ್ರಜ್ಞಾನದ ಮೂಲಕ ಕನ್ನಡ ಸೇರಿ ಐದು ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ನೀಡಿರುವ ಧ್ರುವ್ ರಾಠಿ, “ತಮಿಳು, ತೆಲುಗು, ಬೆಂಗಾಳಿ, ಕನ್ನಡ, ಮರಾಠಿ ಸೇರಿ ಇಂದು 5 ಭಾರತೀಯ ಭಾಷೆಗಳಲ್ಲಿ ನನ್ನ ವಿಡಿಯೋ ಬಿಡುಗಡೆಯಾಗಿದೆ. ಈ ರಾಜ್ಯಗಳ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಪ್ರಮುಖ ವೀಡಿಯೊ ಈಗಾಗಲೇ ಈ ಚಾನಲ್‌ಗಳಲ್ಲಿ ಲೈವ್ ಆಗಿದೆ” ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading