ಮಂಗಳೂರು
Arun Kumar Puttila : ಬಿಜೆಪಿ ಸೇರ್ಪಡೆಯೇ ? ಪಕ್ಷೇತರ ಸ್ಪರ್ಧೆಯೇ ? ಪತ್ರಿಕಾಗೋಷ್ಟಿಯಲ್ಲಿ ಅರುಣ್ ಪುತ್ತಿಲ ಹೇಳಿದ್ದೇನು ?
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅರುಣ್ ಪುತ್ತಿಲ ಸ್ಪರ್ಧಿಸಲಿದ್ದಾರೆಂದು ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತಾ ಘೋಷಿಸಿದ್ದಾರೆ.
ಪುತ್ತೂರಿನ ಪುತ್ತಿಲ ಪರಿವಾರದ ಕಛೇರಿಯಲ್ಲಿ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.
ಮುಂದುವರಿದು ಅವರು ಸಂಘಟನೆಯನ್ನು ಜಿಲ್ಲೆಯಾದ್ಯಂತ ವಿಸ್ತರಿಸುವ ಕಾರ್ಯ ನಡೆಯಲಿದೆ. ಜಿಲ್ಲೆಯಲ್ಲಿ ನಡೆಯಲಿರುವ
ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧಿಸಲಿದೆ ಎಂದು ಅವರು ತಿಳಿಸಿದರು.
ಸೇವಾಕಾರ್ಯದ ಜತೆಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಕಾರ್ಯವನ್ನು ಪುತ್ತಿಲ ಪರಿವಾರ ಮಾಡುವ ಮೂಲಕ ಕಾರ್ಯಕರ್ತರ ಹಾಗೂ ಮತದಾರರ ಕೈ ಬಲಪಡಿಸುವ ಕಾರ್ಯ ಮಾಡಲಿದೆ ಎಂದರು
ಮಾರ್ಚ್ 3ರಂದು ಪುತ್ತಿಲ ಪರಿವಾರದದಿಮದ ಅಂಬ್ಯುಲೆನ್ಸ್ ಲೋಕಾರ್ಪಣೆಯಾಗಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ
ಉಮೇಶ್ ಕೋಡಿಬೈಲ್, ವಕ್ತಾರ ಕೃಷ್ಣ ಉಪಾದ್ಯಯ, ಪ್ರಮುಖರಾದ ಅನಿಲಗ ತೆಂಕಿಲ, ಮಹೇಂದ್ರ ವರ್ಮಾ
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಪುತ್ತಿಲರವರು 2023ರಲ್ಲಿ ಪಕ್ಷದಿಂದ ಟಿಕೆಟ್ ಸಿಗದಿದ್ದಾಗ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ 62 ಸಾವಿರಕ್ಕೂ ಮಿಕ್ಕಿ ಮತಗಳನ್ನು ಪಡೆದು ವಿರೋಚಿತ ಸೋಲು ಅನುಭವಿಸಿದ್ದರು. ಇದಾದ ಬಳಿಕ ಅವರು ಪುತ್ತಿಲ ಪರಿವಾರ ಎಂಬ ಸಾಮಾಜಿಕ ಹಾಗೂ ಧಾರ್ಮಿಕ ಸಂಘಟನೆಯನ್ನು ಕಟ್ಟಿದ್ದರು. ಇನ್ನೊಂದೆಡೆ ಬಿಜೆಪಿ ಸೇರ್ಪಡೆಗೆ ತೆರೆ ಮರೆಯಲ್ಲಿ ಪ್ರಯತ್ನ ನಡೆಸಿದ್ದರು.
ವಿಧಾನಸಭೆ ಚುನಾವಣೆ ಸಂದರ್ಭ ಪುತ್ತಿಲರ ಜತೆ ಪ್ರಭಲವಾಗಿ ಗುರುತಿಸಕೊಂಡಿದ್ದ ಸುರೇಶ್ ಪುತ್ತೂರಾಯರವರು ಸಂಧಾನ ಮಾತುಕತೆಯಲ್ಲಿ ಪ್ರಧಾನ ಪಾತ್ರ ವಹಿಸಿದ್ದರು. ಈ ಮಧ್ಯೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ತನ್ನ ಅಭ್ಯರ್ಥಿಗಳನ್ನು ಇಳಿಸಿ ಬಿಜೆಪಿಗೆ ಸಡ್ಡು ಹೊಡೆದಿತ್ತು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಅಂದಿನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೆವಿ ಜತೆ ಬಿಜೆಪಿ ಸೇರ್ಪಡೆ ಕುರಿತು ಅರುಣ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಹಲವು ಸುತ್ತಿನ ಮಾತುಕತೆ ನಡೆಸಿದ್ದರು. ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬದಲಾದ ಬಳಿಕ ನೂತನ ಅಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜತೆಯೂ ಪುತ್ತಿಲರವರು ಗೌಪ್ಯ ಮಾತುಕತೆ ನಡೆಸಿದ್ದರು.
ಈ ಎಲ್ಲ ಬೆಳವಣಿಗೆಗಳಿಂದ ಒಂದು ಹಂತದಲ್ಲಿ ಅರುಣ್ ಪುತ್ತಿಲ ಹಾಗೂ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ಬಹುತೇಕ ಖಚಿತ ಎಂಬ ಮಾತುಗಳು ಎರಡು ಪಾಳಯದಿಂದಲೂ ಕೇಳಿ ಬರುತಿತ್ತು . ಆದರೇ ಪುತ್ತಿಲರಿಗೆ ಪಕ್ಷದಲ್ಲಿ ಆಯಕಟ್ಟಿನ ಹುದ್ದೆ ನೀಡುವುದಕ್ಕೆ ಪುತ್ತೂರು ಬಿಜೆಪಿಯ ಕೆಲ ನಾಯಕರು ಹಾಗೂ ಪುತ್ತೂರಿನ ಸಂಘ ಪರಿವಾರದ ಮುಖಂಡರು ಪ್ರಭಲ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಪಕ್ಷಸೇರ್ಪಡೆ ವಿಚಾರ ನೆನೆಗುದಿಗೆ ಬಿದ್ದಿತ್ತು. ಈ ಹಿನ್ನಲೆ ಸಂಘಟನಾ ರಾಜೇಶ್ ಕೆವಿಯವರು ಪುತ್ತೂರಿಗೆ ಆಗಮಿಸಿ ಕಾರ್ಯಕರ್ತರ ಹಾಗೂ ಮುಖಂಡರ ಅಭಿಪ್ರಾಯ ಸಂಗ್ರಹಿಸುವ ಕಾರ್ಯ ಮಾಡಿದ್ದರು. ಈ ಸಭೆಯಲ್ಲೂ ಹುದ್ದೆ ಕೊಡುವ ಬಗ್ಗೆ ಸಹಮತ ಮೂಡಿರಲಿಲ್ಲ.
3 ದಿನದ ಗಡುವು
ಈ ಎಲ್ಲ ಬೆಳವಣಿಗೆಗಳ ಬಳಿಕ ಇದೆ ತಿಂಗಳ ಫೆ 5 ರಂದು ಸಮಾಲೋಚನಾ ಸಭೆ ನಡೆಸಿದ ಪುತ್ತಿಲ ಪರಿವಾರ ಪುತ್ತೂರು ವಿದಾನಸಭಾ ಕ್ಷೇತ್ರದ ಅಧ್ಯಕ್ಷ ಹುದ್ದೆಯ ಬೇಡಿಕೆ ಇರಿಸಿ 3 ದಿನಗಳ ಗಡುವು ನೀಡಿತ್ತು. ಈ ಗಡುವು ಪೂರ್ಣಗೊಳ್ಳುವ ಮೊದಲು ಪುತ್ತಿಲರನ್ನು ಸಂಪರ್ಕಿಸಿದ ವಿಜಯೇಂದ್ರರವರು ಮಾತುಕತೆಯ ಆಫರ್ ನೀಡದ್ದರು ಎಂದು ಪುತ್ತಿಲ ಪರಿವಾರದ ಮೂಲಗಳು ತಿಳಿಸಿದ್ದವು. ಈ ಬಳಿಕ ಪುತ್ತಿಲ ಹಾಗೂ ವಿಜಯೇಂದ್ರ ಮಧ್ಯೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದವು. ಏತನ್ಮದ್ಯೆ ಮೈಸೂರಿನಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಬಿ ವೈ ವಿಜಯೇಂದ್ರರವರು ಪ್ರಧಾನಿ ನರೇಂದ್ರ ಮೋದಿಯ ಗೆಲುವಿಗಾಗಿ ಪುತ್ತಿಲರವರು ಬೇಷರತ್ತಾಗಿ ಬಿಜೆಪಿಗೆ ಬರಬೇಕು ಎಂದು ಸೂಚಿಸಿದ್ದರು
ಮಂಗಳೂರು
Luxury ship-ಮಂಗಳೂರಿಗೆ ಬಂದ 8ನೇ ಬೃಹತ್ ಐಷಾರಾಮಿ ಹಡಗು
ಪಣಂಬೂರು ಮೇ 5: ಈ ವರ್ಷದ 8ನೇ ಐಷಾರಾಮಿ ಕ್ರೂಸ್ ‘ಎಂಎಸ್ ಇನ್ಸೈನಿಯಾ’ ನವಮಂಗಳೂರು ಬಂದರಿಗೆ ರವಿವಾರ ಆಗಮಿಸಿತು. ನವಮಂಗಳೂರು ಬಂದರು ಪ್ರಾಧಿಕಾರ(ಎನ್ಎಂಪಿಎ) ದ ವತಿಯಿಂದ ಭರತನಾಟ್ಯ, ಯಕ್ಷಗಾನ ಸಹಿತ ಭಾರತೀಯ, ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ವಿದೇಶೀ ಪ್ರವಾಸಿಗರಿಗೆ ಪರಿಚಯಿಸಿ ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು.
ನಾರ್ವೇಜಿಯನ್ ಕ್ರೂಸ್ ಲೈನರ್ 509 ಪ್ರಯಾಣಿಕರು ಮತ್ತು 407 ಸಿಬಂದಿ ಒಳಗೊಂಡಿದೆ. ಎನ್ ಎಂಪಿಎಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಕ್ಷಿಪ್ರ ಕ್ಲಿಯರಿಂಗ್ ವ್ಯವಸ್ಥೆ ಸೌಲಭ್ಯ ಅಳವಡಿಸಲಾಗಿದೆ.
ಕಾರ್ಕಳ ಗೋಮಟೇಶ್ವರ ಬೆಟ್ಟ ಮೂಡಬಿದಿರೆಯ ಸಾವಿರ ಕಂಬಗಳ ಬಸದಿ, ಸೋನ್ಸ್ ಫಾರ್ಮ್, ಗೋಡಂಬಿ ಕಾರ್ಖಾನೆ, ಗೋಕರ್ಣನಾಥ ದೇವಸ್ಥಾನ, ಸೈಂಟ್ ಅಲೋಶಿಯಸ್ ಚಾಪೆಲ್, ಸ್ಥಳೀಯ ಮಾರುಕಟ್ಟೆ ಮತ್ತು ಸಾಂಪ್ರದಾಯಿಕ ಮನೆಗಳಂತಹ ವಿವಿಧ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡಿದರು.
ಮಂಗಳೂರು
Panolibail-ಪಣೋಲಿಬೈಲ್ನಲ್ಲಿ 23 ಸಾವಿರಕ್ಕೂ ಅಧಿಕ ಕೋಲ ಸೇವೆ ಬುಕ್ಕಿಂಗ್; ಪೂರ್ಣಗೊಳ್ಳಬೇಕಾದರೆ ಕನಿಷ್ಠ ಎಷ್ಟು ವರ್ಷ ಬೇಕು ಗೊತ್ತೇ ?
ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ ಕಾರಣಿಕ ಕ್ಷೇತ್ರವಾಗಿದ್ದು, ದೈವಗಳನ್ನು ನಂಬುವ ಭಕ್ತರು ಅಪಾರ ಸಂಖ್ಯೆಯಲ್ಲಿದ್ದಾರೆ. ಯಾವುದಾದರೂ ಸಂದರ್ಭದಲ್ಲಿ ಪಣೋಲಿಬೈಲು ದೈವಕ್ಕೆ ಹರಕೆ ಹೇಳಿಕೊಳ್ಳುವುದುಂಟು. ಅದನ್ನು ಈಡೇರಿಸಲು ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಾರೆ.
ಇಲ್ಲಿ ಅಗೇಲು ಸೇವೆ (ಕೋಳಿ, ಕುಚ್ಚಲಕ್ಕಿ, ಬಾಳೆ, ತೆಂಗಿನಕಾಯಿ, ಕೇಪುಳ ಹೂ ಒಪ್ಪಿಸುವುದು) ಹಾಗೂ ಕೋಲ ಸೇವೆ ಪ್ರಸಿದ್ಧ. ಕೋಲ ಸೇವೆಗಾಗಿ ಭಕ್ತರು ಬುಕ್ ಮಾಡುವುದುಂಟು. ಹೀಗೆ 23 ಸಾವಿರ ಸೇವೆಗಳು ಈ ಸನ್ನಿಧಿಯಲ್ಲಿ ಬುಕ್ ಆಗಿವೆ. ದಿನವೊಂದಕ್ಕೆ 4, ವಾರದಲ್ಲಿ 5 (ಕೆಲವು ದಿನ, ತಿಂಗಳು ಇರುವುದಿಲ್ಲ) ಸೇರಿ ಒಟ್ಟು 600ರಿಂದ 700 ಕೋಲ ಸೇವೆಗಳು ಇಲ್ಲಿ ನಡೆಯುತ್ತವೆ ಎಂದು ಲೆಕ್ಕ ಹಾಕಿದರೆ, ಇವತ್ತು ಬುಕ್ ಮಾಡಿದವರಿಗೆ 35 ವರ್ಷಗಳ ನಂತರ ಇಲ್ಲಿ ಸೇವೆ ಮಾಡಿಸಲು ಅವಕಾಶ ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಈಗ ಕೋಲಸೇವೆಯಲ್ಲಿ 4ರ ಬದಲಿಗೆ 8 ಮಂದಿಗೆ ಸೇವೆ ಸಂದಾಯಕ್ಕೆ ಅವಕಾಶ ಕಲ್ಪಿಸಲಾಗಿದೆ.
23 ಸಾವಿರಕ್ಕೂ ಅಧಿಕ ಕೋಲ ಸೇವೆ ಬುಕ್ಕಿಂಗ್ :
ಪಣೋಲಿಬೈಲಿಗೆ ತುಳುನಾಡ ಜಿಲ್ಲೆಗಳಷ್ಟೇ ಅಲ್ಲ, ಹೊರಗಿನಿಂದಲೂ ಆಗಮಿಸುವ ಭಕ್ತರು ಅಗೇಲು, ಕೋಲ ಸೇವೆ ನಡೆಸುತ್ತಾರೆ. ವಿಶೇಷ ಹರಕೆ ರೂಪದಲ್ಲಿ ಕೋಲ ಸೇವೆಯನ್ನು ನೀಡುತ್ತಾರೆ. ಇದುವರೆಗೆ 23 ಸಾವಿರಕ್ಕೂ ಅಧಿಕ ಕೋಲ ಸೇವೆಗಳ ಬುಕ್ ಆಗಿದೆ. ಕ್ಷೇತ್ರದಲ್ಲಿ ಅಗೇಲು ಮತ್ತು ಕೋಲ ಸೇವೆಗಳು ವಿಶೇಷವಾಗಿದೆ. ವಾರದ ಮೂರು ದಿನಗಳು ಅಗೇಲು ಹಾಗೂ ವಾರದ 5 ದಿನಗಳ ಕೋಲ ಸೇವೆ ಸಂದಾಯವಾಗುತ್ತದೆ. ಬೆಳಗ್ಗೆ ನಿಗದಿತ ಸಮಯದೊಳಗೆ ಬಂದವರಿಗೆ ಎಷ್ಟು ಬೇಕಾದರೂ ಅಗೇಲು ಸೇವೆ ನೀಡುವುದಕ್ಕೆ ಅವಕಾಶವಿದೆ. ದಿನವೊಂದಕ್ಕೆ ಕೋಲ ಸೇವೆ ನೀಡುವುದಕ್ಕೆ ಕೇವಲ ನಾಲ್ವರಿಗೆ ಮಾತ್ರ ಅವಕಾಶವಿತ್ತು. ಕೋಲ ಸೇವೆಗಳ ಬುಕ್ಕಿಂಗ್ ಹೆಚ್ಚಾಗುತ್ತಿದ್ದು, ಅದು ಪೂರ್ಣಗೊಳ್ಳಬೇಕಾದರೆ ಕನಿಷ್ಠ 35 ವರ್ಷ ಬೇಕಾಗುತ್ತದೆ ಎಂದು ಅಂದಾಜಿಸಲಾಗುತ್ತಿದೆ.
ಸುದೀರ್ಘ ವರ್ಷಕ್ಕೆ ಬುಕ್ಕಿಂಗ್ ಮಾಡಿದವರಿಗೆ ಶೀಘ್ರ ಸೇವೆ :
ಕೋಲಸೇವೆಯಲ್ಲಿ 4ರ ಬದಲಿಗೆ 8 ಮಂದಿಗೆ ಸೇವೆ ಸಂದಾಯಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಈ ವ್ಯವಸ್ಥೆ ಮೇ 3ರಂದು ಆರಂಭಗೊಂಡಿದ್ದು, ಇದು ವಾರದಲ್ಲಿ 5 ದಿನ ಇರುತ್ತದೆ. ಇದರಿಂದ ಸುದೀರ್ಘ ವರ್ಷಕ್ಕೆ ಬುಕ್ಕಿಂಗ್ ಮಾಡಿದವರಿಗೆ ಶೀಘ್ರ ಸೇವೆ ಸಂದಾಯವಾಗುವ ವ್ಯವಸ್ಥೆ ಕಲ್ಪಿಸಿದಂತಾಗುತ್ತದೆ. ಇದುವರೆಗೆ ವರ್ಷಕ್ಕೆ 600ರಿಂದ 700 ಮಂದಿಗೆ ಮಾತ್ರ ಕೋಲ ಸೇವೆಗೆ ಅವಕಾಶ ಸಿಗುತ್ತಿತ್ತು. ಬುಕಿಂಗ್ ಸಂಖ್ಯೆ ವರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಭಕ್ತರಿಗೆ ಶೀಘ್ರ ಸೇವೆಗೆ ಅವಕಾಶ ನೀಡುವ ದೃಷ್ಟಿಯಿಂದ ದೈವದ ಬಳಿ ಹರಕೆ ಮಾಡಿ, ಮಾಗಣೆಯ ದೈವದ ಅಪ್ಪಣೆ ಪಡೆದು, ದಿನಕ್ಕೆ ನಾಲ್ಕು ಕೋಲ ಸೇವೆ ನೀಡಿದರೂ ಪ್ರತಿ ಕೋಲದಲ್ಲಿ ಇಬ್ಬರಿಗೆ ಪ್ರಸಾದದಂತೆ 8 ಮಂದಿಗೆ ಪ್ರಸಾದ ನೀಡುವುದಕ್ಕೆ ನಿರ್ಧರಿಸಲಾಯಿತು. ಹೀಗಾಗಿ ಮುಂದಿನ ದಿನಗಳಲ್ಲಿ ಕೋಲ ಸೇವೆ ನೀಡಲು ಬುಕಿಂಗ್ ಮಾಡುವವರಿಗೆ ಅನುಕೂಲವಾಗಲಿದೆ. ಪ್ರತಿದಿನ ನಡೆಯುತ್ತಿದ್ದ ಕೋಲ ಸೇವೆಯಲ್ಲಿ 4ರ ಬದಲಿಗೆ 8 ಮಂದಿಗೆ ಸೇವೆ ಸಂದಾಯಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಸೇವೆ ಮಾಡಿಸುವವರಿಗೂ ಅನುಕೂಲವಾಗಿದೆ.
ಕ್ಷೇತ್ರ ಪಣೋಲಿಬೈಲ್ ಎಲ್ಲಿದೆ
ಮಂಗಳೂರಿನಿಂದ ಬಿಸಿ ರೋಡಿಗೆ ಹೆದ್ದಾರಿಯಲ್ಲಿ ಬಂದು ಮುಂದಕ್ಕೆ ಸಾಗಿದಾಗ ಮೇಲ್ಕಾರ್ನಿಂದ ಬಲಭಾಗಕ್ಕೆ ಕೊಣಾಜೆ ಮಾರ್ಗದಲ್ಲಿ ಸಾಗುವ ಸಂದರ್ಭ ಮಾರ್ನಬೈಲ್ ನಲ್ಲಿ ಎಡಭಾಗಕ್ಕೆ ತಿರುಗಿ ಸುಮಾರು 4 ಕಿಮೀ ದೂರದಲ್ಲಿ ಸಾಗಿದರೆ, ಪಣೋಲಿಬೈಲ್ ಕ್ಷೇತ್ರ ಕಾಣಲು ಸಿಗುತ್ತದೆ. ಇಲ್ಲಿ ಕಲ್ಲುರ್ಟಿ ಕಲ್ಕುಡರು ನೆಲೆಯಾಗಿದ್ದಾರೆ.
ಕೋಲ ಯಾವಾಗೆಲ್ಲ ಇರುತ್ತದೆ
ಸೋಮವಾರ ಹಾಗೂ ಶನಿವಾರ ಹೊರತುಪಡಿಸಿ ವಾರದಲ್ಲಿ 5 ದಿನ ಕೋಲ ಸೇವೆಗೆ ಅವಕಾಶವಿದೆ. ಆಟಿ ತಿಂಗಳು, ಅಮಾವಾಸ್ಯೆ, ಷಷ್ಠಿ, ಸಜಿಪಮಾಗಣೆಯ ಜಾತ್ರೆ, ಉತ್ಸವಾದಿಗಳ ಸಂದರ್ಭ ಕೋಲ ಸೇವೆ ಇರುವುದಿಲ್ಲ.
ಪಣೋಲಿಬೈಲ್ ಕಲ್ಲುರ್ಟಿ ಕ್ಷೇತ್ರ ತುಳುನಾಡಿನ ಅತ್ಯಂತ ಶ್ರೀಮಂತ ಕ್ಷೇತ್ರ. ವಾರಕ್ಕೆ ಐದು ದಿವಸ ಇಪ್ಪತ್ತು ಹರಕೆಯ ಕೋಲ ಅದೇ ರೀತಿ ವಾರದ ಮೂರು ದಿನ ನಾಲ್ಕು ಸಾವಿರಕ್ಕೂ ಹೆಚ್ಚು ಅಗೆಲು ಸೇವೆ ಹರಕೆಯನ್ನು ಪಡೆಯುತ್ತಿರುವ ಕ್ಷೇತ್ರವಿದು. ಮದುವೆ, ವಿದ್ಯೆ, ಕಷ್ಟಕಾರ್ಪಣ್ಯ, ಕಳ್ಳತನ ಉದ್ಯೋಗಕ್ಕೆ ಅಲ್ಲದೆ ಶರೀರದಲ್ಲಿರುವ ಪ್ರೇತಾತ್ಮ ಇನ್ನಿತ್ತರ ದುಷ್ಟಶಕ್ತಿಗಳನ್ನು ಕೋಲದಲ್ಲಿ ವಿಮೋಚನೆಗೊಳಿಸುತ್ತಾರೆ. ಈ ಜಾಗದಲ್ಲಿ ಪಟ್ಟ ಹರಕೆ ಹೇಳುತ್ತಾ ಜನರು ಕಷ್ಟ ಕಳೆಯುತ್ತಾ ಇರುವ ಶ್ರೀ ಕ್ಷೇತ್ರ ಪಣೋಲಿಬೈಲು.
ಇಲ್ಲಿಗೆ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಬ್ರಹ್ಮಣ್ಯ, ನೆಲ್ಯಾಡಿ, ಮಡಿಕೇರಿ, ಮಂಗಳೂರು, ಮಂಜೇಶ್ವರ, ಕಾಸರಗೋಡು, ಉಡುಪಿ, ಕುಂದಾಪುರ, ಕಾರ್ಕಳ, ಮೂಡಬಿದ್ರೆ, ಕೊಡಗು ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಬರುತ್ತಾರೆ. ಇತರ ಪ್ರದೇಶಗಳಿಂದಲೂ ಗಮನಾರ್ಹ ಪ್ರಮಾಣದ ಭಕ್ತರು ನಡೆದುಕೊಳ್ಳುತ್ತಾರೆ. ಹರಕೆ ಕಾಣಿಕೆ, ಅಗೇಲು ಕೋಲ ಬೆಳ್ಳಿ ಬಂಗಾರದ ಸೇವೆಯನ್ನು ಕೊಡುತ್ತಿದ್ದಾರೆ. ಆಸ್ತಿ ವಿಚಾರ ತಕರಾರು, ಕೋರ್ಟ್ ವಿಚಾರ ಇನ್ನಿತರ ಕಷ್ಟ ಕಾರ್ಪಣ್ಯದಲ್ಲಿದ್ದವರು ಈ ಕ್ಷೇತ್ರಕ್ಕೆ ಬಂದು ದೈವದ ಮುಂದೆ ತಮ್ಮ ಕಷ್ಟ ತೋಡಿಕೊಂಡು ಹರಕೆಯನ್ನು ಹೇಳಿಕೊಳ್ಳುತ್ತಾರೆ. ಸತ್ಯ, ಧರ್ಮ, ನ್ಯಾಯವನ್ನು ಎತ್ತಿ ಹಿಡಿಯುವ ಈ ದೈವವು ಎಲ್ಲಾ ಮೂಲೆಗಳಂದಲೂ ಭಕ್ತರನ್ನು ಸೆಳೆದುಕೊಳ್ಳುತ್ತಿದೆ.
ಮಂಗಳೂರು
ವಿಟ್ಲ: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮಗು ಸಹಿತ ಮೂವರಿಗೆ ಗಾಯ
ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ.
ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡುಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.
ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟ ಗಾಯವಾಗಿದೆ.
ಗಂಭೀರ ಗಾಯಗೊಂಡ ಮಗುವನ್ನು ಪುತ್ತೂರು ಆಸ್ಪತ್ರೆ ಕೊಂಡೊಯ್ಯಲಾಗಿತ್ತು. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ತಿಳಿದು ಬಂದಿದೆ. ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
,
-
ಉದ್ಯೋಗ2 days ago
Puttur’s ‘Bindu’-ಆಂಧ್ರಕ್ಕೆ ತಲುಪಿದ ಪುತ್ತೂರಿನ ‘ಬಿಂದು’ : ಮೂರನೇ ಉತ್ಪಾದನಾ ಘಟಕದ ಶಂಕುಸ್ಥಾಪನೆ
-
ರಾಜ್ಯ2 days ago
Heavy rainfall-ನಾಳೆಯಿಂದ 4 ದಿನ ರಾಜ್ಯದ ಹಲವೆಡೆ ಬಿರುಸಾಗಿ ಮಳೆಯಾಗುವ ಸಾಧ್ಯತೆ; ಪ್ರವಾಹ ಎದುರಿಸಲು ಸಜ್ಜಾಗುವಂತೆ ಸೂಚನೆ
-
ಸ್ಥಳೀಯ2 days ago
Marriage cancelled-ಸ್ವೀಟ್ ನೀಡಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ರದ್ದುಗೊಂಡ ಮದುವೆ
-
ಬಿಗ್ ನ್ಯೂಸ್1 day ago
Anantkumar Hegde | ಚುನಾವಣೆಗೆ ಕೆಲವೇ ಗಂಟೆಗಳಿರುವಾಗ ಮಹತ್ವದ ಬೆಳವಣಿಗೆ : ಬಿಜೆಪಿಗೆ ಓಟ್ ಹಾಕಿ ಎಂದು ತನ್ನ ಫೋಟೋ ಬಳಸಿ ಫೋಸ್ಟ್ ಮಾಡಿದ್ದರ ವಿರುದ್ದ ಫೈರ್ ಬ್ರ್ಯಾಂಡ್ ನಾಯಕ , ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಗಡೆಯಿಂದ ದೂರು ದಾಖಲು
-
ಮಂಗಳೂರು2 days ago
Panolibail-ಪಣೋಲಿಬೈಲ್ನಲ್ಲಿ 23 ಸಾವಿರಕ್ಕೂ ಅಧಿಕ ಕೋಲ ಸೇವೆ ಬುಕ್ಕಿಂಗ್; ಪೂರ್ಣಗೊಳ್ಳಬೇಕಾದರೆ ಕನಿಷ್ಠ ಎಷ್ಟು ವರ್ಷ ಬೇಕು ಗೊತ್ತೇ ?
-
ಚಿನ್ನ-ಬೆಳ್ಳಿ ದರ2 days ago
Gold Rate Today – ಏರಿಕೆಯಾದ ಚಿನ್ನದ ಬೆಲೆ; ಕುಸಿತ ಕಂಡ ಬೆಳ್ಳಿ ಬೆಲೆ
-
ಉಡುಪಿ2 days ago
Kapu: Pili Kola-ಕಾಪು : ಪಿಲಿ ಕೋಲ – ನಗರ ಪ್ರದಕ್ಷಿಣೆ ವೇಳೆ ಓರ್ವನ ಸ್ಪರ್ಶಿಸಿ ದೈವಸ್ಥಾನಕ್ಕೆ ಓಡಿ ಬಂದ ದೈವ..!
-
ಸುಳ್ಯ23 hours ago
ಕರೆನ್ಸಿ ರಿಚಾರ್ಜ್ ಮಾಡಿಸಲು ಬಂದ ಯುವತಿಯ ಫೋಟೊ ತೆಗೆದ ಅನ್ಯ ಕೋಮಿನ ಯುವಕ – ಠಾಣೆಯೆದುರು ಜಮಾಯಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು