ಬೆಂಗಳೂರು
Gold Rate Today : ಚಿನ್ನ ತಟಸ್ಥ – ಬೆಳ್ಳಿ ತುಸು ಇಳಿಕೆ – ಇಲ್ಲಿದೆ ಇಂದಿನ ದರ ಪಟ್ಟಿ
ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ, ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ: 60,800 ರೂ.
24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ: 66,330ರೂ.
ಬೆಳ್ಳಿ ಬೆಲೆ 1 ಕೆಜಿ: 75,500 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,590 ರೂಪಾಯಿ ಇತ್ತು. ಆದರೆ ಇಂದು 60,380 ರೂಪಾಯಿ ಆಗಿದೆ. ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 66,100 ರೂಪಾಯಿ ಇತ್ತು. ಆದರೆ ಇಂದು 65,870 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರೆಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು: 60,800ರೂ.
ಮುಂಬೈ: 60,800 ರೂ
ದೆಹಲಿ: 60,950 ರೂ.
ಕೇರಳ: 60,800ರೂ.
ಅಹ್ಮದಾಬಾದ್: 60,850 ರೂ.
ಜೈಪುರ್: 60,950 ರೂ
ರಾಜಕೀಯ
Prajwal Revanna-ಪ್ರಜ್ವಲ್ ರೇವಣ್ಣ ವಿರುದ್ದ ಲುಕ್ ಔಟ್ ನೋಟಿಸ್ ಜಾರಿ ಮಾಡಿದ SIT
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಅವರಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಇದನ್ನೂ ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ.
ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್ಗೆ ಎಸ್ಐಟಿ ಅಧಿಕಾರಿಗಳು ಲುಕೌಟ್ ನೋಟಿಸ್ ನೀಡಿದೆ ಎನ್ನಲಾಗಿದ್ದು, ಈ ಮೂಲಕ ಲೊಕೇಟ್ ಆದ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಲಾಗಿದೆ ಅಂತ ತಿಳಿದು ಬಂದಿದೆ.
ಪೆನ್ ಡ್ರೈವ್ ಪ್ರಕರಣ ದಾಖಲಾಗುವ 2 ದಿನ ಮುನ್ನಾ ಪ್ರಜ್ವಲ್ ದೇಶದಿಂದ ಪರಾರಿಯಾಗಿದ್ದಾರೆ. ವಿಚಾರಣೆಗೆ ನೋಟಿಸ್ ನೀಡಿದರೂ ಹಾಜರಾಗಿಲ್ಲ. ಪ್ರಜ್ವಲ್ ವಿದೇಶದಲ್ಲಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ.
ಪ್ರಜ್ವಲ್ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಜಾರಿ ಮಾಡಿ, ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ. ಲುಕ್ಔಟ್ ನೋಟಿಸ್ ಬಳಿಕವೂ ಪ್ರಜ್ವಲ್ ಪತ್ತೆಯಾಗದಿದ್ದರೆ, ಆತನ ಪತ್ತೆಗೆ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗುವ ಸಾಧ್ಯತೆ ಇದೆ.
ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಹಾಗೂ ಅವರ ಮಗ ಪ್ರಜ್ವಲ್ ಆರೋಪಿಗಳಾಗಿದ್ದಾರೆ
ಬೆಂಗಳೂರು
Viral Video: ಮಹಿಳಾ ಪದಾಧಿಕಾರಿಯೊಂದಿಗಿನ ಕಾಂಗ್ರೆಸ್ ಶಾಸಕನದು ಎನ್ನಲಾದ ವಾಟ್ಸ್ ಆಪ್ ಕಾಲ್ ವಿಡಿಯೋ ವೈರಲ್
ರಾಮನಗರ: ದೇಶಾದ್ಯಂತ ಈಗ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ನದೇ ಸುದ್ದಿ . ಬಹುಷ: ಒಬ್ಬನೇ ವ್ಯಕ್ತಿಯ ರಾಸಲೀಲೆಯ 2900 ವಿಡಿಯೋ ಗಳು ಸಿಕ್ಕಿರುವುದು ಜಗತ್ತಿನಲ್ಲೆ ಮೊದಲು. ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ ಈ ವಿಚಾರ ಸಹಜವಾಗಿಯೇ ಚುನಾವಣಾ ವಿಷಯವಾಗಿಯೂ ಬದಲಾಗಿದೆ. ವಿಪಕ್ಷ ಕಾಂಗ್ರೆಸ್ ಇದನ್ನು ದೇಶದಾದ್ಯಂತ ಬಿಜೆಪಿಯ ವಿರುದ್ದ ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ.
ಇದೇ ವೇಳೆ ರಾಮನಗರ ಕಾಂಗ್ರೆಸ್ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಮಹಿಳೆಯೊಬ್ಬರ ಜತೆಗೆ ವಾಟ್ಸ್ ಆಪ್ ಕಾಲ್ ನಲ್ಲಿ ಇರುವ ವಿಡಿಯೋವೊಂದು ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇನ್ಸಾಲ್ ಹುಸೇನ್ ಅವರು ಕಾಂಗ್ರೆಸ್ ಪದಾಧಿಕಾರಿ ಎನ್ನಲಾದ ಮಹಿಳೆಯೊಬ್ಬರ ಜತೆಗೆ ವಾಟ್ಸಾಪ್ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದಾರೆ ಎನ್ನಲಾದ 2 ನಿಮಿಷ 27 ಸೆಕೆಂಡ್ನ ವಿಡಿಯೋ ಇದಾಗಿದೆ.
ಈ ವಿಡಿಯೋವನ್ನು ಸ್ಟೀನ್ ರೆಕಾರ್ಡರ್ ಮೂಲಕ ರೆಕಾರ್ಡ್ ಮಾಡಲಾಗಿದ್ದು, ಸಂಭಾಷಣೆ ಕೇಳಿಸುವುದಿಲ್ಲ. ಅದರೂ ವಿಡಿಯೋ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಈ ವಿಡಿಯೋದಲ್ಲಿ ಇರುವ ಮಹಿಳೆ ಕಾಂಗ್ರೆಸ್ ಪಕ್ಷದ ಜಿಲ್ಲೆಯ ಹಿರಿಯ ನಾಯಕರೊಟ್ಟಿಗೆ ಫೋಟೋ ತೆಗೆಸಿಕೊಂಡಿರುವುದು ಸಹ ಚರ್ಚೆಗೆ ಕಾರಣವಾಗಿದೆ. ವಿಡಿಯೋಗೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ.
ಒಂದೂವರೆ ವರ್ಷ ಹಿಂದಿನದು
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ನನ್ನದೇ ಎಂದು ಒಪ್ಪಿಕೊಂಡಿರುವ ಶಾಸಕ ಇಕ್ಬಾಲ್ ಹುಸೇನ್, ಯಾರದ್ದೋ ಕೋಪವನ್ನು ತೀರಿಸಿಕೊಳ್ಳಲು ನನ್ನನ್ನು ಸಿಲುಕಿಸುವ ಪ್ರಯತ್ನ ಇದಾಗಿದೆ ಎಂದು ಆರೋಪಿಸಿದ್ದಾರೆ. ಸಮಸ್ಯೆಗಳನ್ನು ಹೇಳಿಕೊಳ್ಳಲು ಹಲವಾರು ಮಂದಿ ಕರೆ ಮಾಡುತ್ತಾರೆ ವಿಡಿಯೋ ಕಾಲ್ ಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಕರೆ ಸುಮಾರು ಒಂದೂವರೆ ವರ್ಷ ಹಿಂದಿನದು ಎಂದ ಇಕ್ಬಾಲ್ ಹುಸೇನ್, ಹೀಗೆ ಕಾಲ್ ರೆಕಾರ್ಡ್ ಮಾಡಿಕೊಂಡು ಈಗ ನನ್ನ ತೇಜೋವದೆ ಮಾಡಲಾಗುತ್ತಿದೆ. ಇದು ನನಗೆ ಬೇಸರ ತರಿಸಿದೆ ಎಂದಿದ್ದಾರೆ.
ಕ್ರೀಡೆ
T20 World Cup: ಟಿ20 ವಿಶ್ವಕಪ್ಗೆ ಭಾರತ ತಂಡ ಪ್ರಕಟ: ಕೆ ಎಲ್ ರಾಹುಲ್ ಗೆ ಕೋಖ್
ಬೆಂಗಳೂರು: ಮುಂಬರುವ ಬಹುನಿರೀಕ್ಷಿತ ಐಸಿಸಿ ಟ್ವೆಂಟಿ-20 ವಿಶ್ವಕಪ್ಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂದು ಪ್ರಕಟಿಸಿದೆ. ಐಸಿಸಿ ಪುರುಷರ ಟಿ 20 ವಿಶ್ವಕಪ್ ನ ಒಂಬತ್ತನೇ ಆವೃತ್ತಿಯು 2024 ರ ಜೂನ್ 1 ರಿಂದ 29 ರವರೆಗೆ ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿದೆ.
ಜೂನ್ 2 ರ ಭಾನುವಾರ ಟೆಕ್ಸಾಸ್ ನ ಗ್ರ್ಯಾಂಡ್ ಪ್ರೈರಿಯಲ್ಲಿ ಯುಎಸ್ಎ ಮತ್ತು ಕೆನಡಾ ನಡುವಿನ ಪಂದ್ಯಾವಳಿಯ ಆರಂಭಿಕ ಪಂದ್ಯದೊಂದಿಗೆ ಪ್ರಾರಂಭವಾಗಿ ಜೂನ್ 29 ರ ಶನಿವಾರ ಬಾರ್ಬಡೋಸ್ ನ ಬ್ರಿಡ್ಜ್ಟೌ ಟೌನ್ ನಲ್ಲಿ ಫೈನಲ್ ನೊಂದಿಗೆ ಕೊನೆಗೊಳ್ಳುತ್ತದೆ.
ಪ್ರಕಟಿತ ತಂಡದಲ್ಲಿ ಕನ್ನಡಿಗರಿಗೆ ಸ್ಥಾನ ಲಭಿಸಿಲ್ಲ.
ಬಹು ನಿರೀಕ್ಷಿತ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ದೊಡ್ಡ ಪ್ರಶ್ನೆ ಆಗಿತ್ತು. ಈ ಪ್ರಶ್ನೆಗೆ ಬಿಸಿಸಿಐ ಆಯ್ಕೆ ಸಮಿತಿ ಉತ್ತರ ನೀಡಿದ್ದು, ಐಪಿಎಲ್ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ರಿಷಭ್ ಪಂತ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಇತ್ತೀಚೆಗೆ ನಡೆದ ಐಸಿಸಿ ವಿಶ್ವಕಪ್ ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಕೆ ಎಲ್ ರಾಹುಲ್ಗ ೆಕೋಖ್ ನೀಡಲಾಗಿದೆ
ರಿಷಭ್ ಬಹಳ ದಿನಗಳ ನಂತರ ಟೀಂ ಇಂಡಿಯಾಗೆ ಮರಳಿದ್ದಾರೆ. ಕಾರು ಅಪಘಾತವಾದಾಗಿನಿಂದ ಅವರು ಮೈದಾನದಿಂದ ದೂರವಿದ್ದರು. ಆದರೆ ಅವರು ಐಪಿಎಲ್ ಮೂಲಕ ಮೈದಾನಕ್ಕೆ ಮರಳಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಅಲ್ಲದೆ ತಾವು ಟಿ20 ವಿಶ್ವಕಪ್ ಆಡಲು ಸಿದ್ಧರಾಗಿರುವುದಾಗಿ ಪ್ರದರ್ಶನದ ಮೂಲಕ ತಿಳಿಸಿದ್ದರು.
ಭಾರತ ತಂಡ ಇಂತಿದೆ:
- ರೋಹಿತ್ ಶರ್ಮಾ (ನಾಯಕ)
- ಯಶಸ್ವಿ ಜೈಸ್ವಾಲ್
- ವಿರಾಟ್ ಕೊಹ್ಲಿ
- ಸೂರ್ಯಕುಮಾರ್ ಯಾದವ್
- ರಿಷಭ್ ಪಂತ್ (ವಿಕೆಟ್ ಕೀಪರ್)
- ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
- ಹಾರ್ದಿಕ್ ಪಾಂಡ್ಯ (ಉಪನಾಯಕ)
- ಶಿವಂ ದುಬೆ
- ರವೀಂದ್ರ ಜಡೇಜ
- ಅಕ್ಷರ್ ಪಟೇಲ್
- ಕುಲದೀಪ್ ಯಾದವ್
- ಯಜುವೇಂದ್ರ ಚಾಹಲ್
- ಆರ್ಶದೀಪ್ ಸಿಂಗ್
- ಜಸ್ಪ್ರೀತ್ ಬೂಮ್ರಾ
- ಮೊಹಮ್ಮದ್ ಸಿರಾಜ್
ಮೀಸಲು ಆಟಗಾರರು:
ಶುಭಮನ್ ಗಿಲ್, ಖಲೀಲ್ ಅಹ್ಮದ್, ರಿಂಕು ಸಿಂಗ್ ಮತ್ತು ಆವೇಶ್ ಖಾನ್.
ಗ್ರೂಪ್ ಎ: ಭಾರತ, ಪಾಕಿಸ್ತಾನ, ಐರ್ಲೆಂಡ್, ಕೆನಡಾ, ಯುಎಸ್ಎ
ಬಿ ಗುಂಪು: ಇಂಗ್ಲೆಂಡ್, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್ಲೆಂಡ್, ಒಮಾನ್
ಸಿ ಗುಂಪು: ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಅಫ್ಘಾನಿಸ್ತಾನ, ಉಗಾಂಡಾ, ಪಪುವಾ ನ್ಯೂಗಿನಿಯಾ
ಗ್ರೂಪ್ ಡಿ: ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲ್ಯಾಂಡ್ಸ್, ನೇಪಾಳ
-
ಬಿಗ್ ನ್ಯೂಸ್2 days ago
Eshwarappa Son | ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಬೆನ್ನಲ್ಲೇ ರೆಬಲ್ ನಾಯಕ ಈಶ್ವರಪ್ಪ ಪುತ್ರನಿಂದ ತಡೆಯಾಜ್ಞೆ..!
-
ಅಂತರ ರಾಜ್ಯ2 days ago
April temperature-ನೂರು ವರ್ಷದ ದಾಖಲೆ ಮುರಿದ ಏಪ್ರಿಲ್ ತಿಂಗಳ ಉಷ್ಣಾಂಶ; ಇನ್ನೂ 5 ದಿನ ಮುಂದುವರಿಯುವ ಸಾಧ್ಯತೆ
-
ಚಿನ್ನ-ಬೆಳ್ಳಿ ದರ2 days ago
Gold Rate Today -ಚಿನ್ನ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ; ಚಿನ್ನ, ಬೆಳ್ಳಿ ಬೆಲೆ ಇಳಿಕೆ
-
ಅಪರಾಧ2 days ago
Low marks-ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ-ಪರಸ್ಪರ ಚಾಕುವಿನಿಂದ ಇರಿದುಕೊಂಡ ತಾಯಿ, ಮಗಳು; ಮಗಳು ಕೊಲೆಯಾದರೆ, ತಾಯಿ ಗಂಭೀರ
-
ಬೆಂಗಳೂರು1 day ago
Viral Video: ಮಹಿಳಾ ಪದಾಧಿಕಾರಿಯೊಂದಿಗಿನ ಕಾಂಗ್ರೆಸ್ ಶಾಸಕನದು ಎನ್ನಲಾದ ವಾಟ್ಸ್ ಆಪ್ ಕಾಲ್ ವಿಡಿಯೋ ವೈರಲ್
-
ಕ್ರೀಡೆ2 days ago
T20 World Cup: ಟಿ20 ವಿಶ್ವಕಪ್ಗೆ ಭಾರತ ತಂಡ ಪ್ರಕಟ: ಕೆ ಎಲ್ ರಾಹುಲ್ ಗೆ ಕೋಖ್
-
ದಕ್ಷಿಣ ಕನ್ನಡ1 day ago
Communal Hatred Murder: ವಿಟ್ಲದ ಹಲ್ಲೆಗೆ ಪ್ರತಿಕಾರವಾಗಿ ಬಂಟ್ವಾಳದಲ್ಲಿ ಕೋಮು ದ್ವೇಷದಿಂದ ಹತ್ಯೆ : ನಾಲ್ವರಿಗೆ ಜೀವಾವಧಿ ಶಿಕ್ಷೆ
-
ಅಂತರ ರಾಜ್ಯ2 days ago
Baba Ramdev’s-ದಾರಿ ತಪ್ಪಿಸುವ ಜಾಹೀರಾತು – ಬಾಬ ರಾಮದೇವ್ ಕಂಪೆನಿ ಪತಂಜಲಿಯಯ ಪರವಾನಗಿ ಅಮಾನತು