ಅಪರಾಧ
Mother Kills Own Daughter: ಮನೆಯಲ್ಲಿ ಬಾಯ್ ಫ್ರೆಂಡ್ ಜತೆ ಮಗಳ ನೋಡಿ ತಾಯಿ ಕೆಂಡಮಂಡಲ – ಕತ್ತು ಹಿಸುಕಿ ಹತ್ಯೆ
ಹೈದರಾಬಾದ್: ಮನೆಯಲ್ಲಿ ಯಾರೂ ಇಲ್ಲದ ವೇಳೆ, ಮಗಳು ತನ್ನ ಬಾಯ್ಫ್ರೆಂಡ್ ಜೊತೆ ಮನೆಯೊಳಗಡೆ ಇರುವುದನ್ನು ಕಂಡು ಕೋಪಗೊಂಡ ತಾಯಿ, ಸ್ವಂತ ಮಗಳನ್ನೆ ಕತ್ತು ಹಿಸುಕಿ ಹತ್ಯೆ ಮಾಡಿದ ಘಟನೆ ಹೈದರಾಬಾದ್ನಲ್ಲಿ (Hyderabad) ನಡೆದಿದೆ. 19ರ ಹರೆಯದ ಬಾರ್ಗವಿ ಕೊಲೆಯಾದವಳು.
ಹೈದರಾಬಾದ್ ನ ಇಬ್ರಾಹಿಂಪಟ್ಟಣದಲ್ಲಿ ಕೃತ್ಯ ನಡೆದಿದೆ. ಬಾರ್ಗವಿಯ ತಾಯಿ ಜಂಗಮ್ಮ ಕೊಲೆ ಆರೋಪಿ. ಭಾರ್ಗವಿಗೆ ಮದುವೆ ಮಾಡಲು ನಿರ್ಧರಿಸಿದ್ದ, ಜಂಗಮ್ಮ ಸೂಕ್ತ ವರನ ಅನ್ವೇಷಣೆಯಲ್ಲಿದ್ದರು. ಆದರೆ ಯುವತಿ ಸ್ಥಳೀಯ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಇದು ಜಂಗಮ್ಮನಿಗೆ ಇಷ್ಟವಿರಲಿಲ್ಲ. ಆಕೆ ಅವರಿಬ್ಬರ ಪ್ರೀತಿ ಸಂಬಂಧವನ್ನು ವಿರೋಧಿಸಿದ್ದಳು.
ಸೋಮವಾರ ಮಧ್ಯಾಹ್ನ ಜಂಗಮ್ಮ ಗದ್ದೆಯಿಂದ ಊಟಕ್ಕೆಂದು ಮನೆಗೆ ಬಂದಾಗ ಮಗಳ ಗೆಳೆಯ ಮನೆಯಲ್ಲಿದ್ದದ್ದನ್ನು ಕಂಡು ಕೋಪಗೊಂಡಿದ್ದಾಳೆ. ಮಗಳಿಗೆ ಬೈಯಲು ಆರಂಭಿಸಿದ್ದಾಳೆ. ಈ ವೇಳೆ ಯುವಕ ಮನೆಯಿಂದ ಓಡಿ ಹೋಗಿದ್ದು, ಯುವತಿಯ ತಮ್ಮನಿಗೆ ವಿಷಯ ತಿಳಿಸಿದ್ದಾನೆ. ಆಕೆಯ ಸಹೋದರ ಮನೆಗೆ ಬಂದಾಗ ಬಾಗಿಲು ಬೀಗ ಹಾಕಿತ್ತು. ಕಿಟಕಿಯಿಂದ ನೋಡಿದಾಗ, ತಾಯಿ ಅಕ್ಕನ ಕತ್ತು ಹಿಸುಕಲು ಪ್ರಯತ್ನಿಸುತ್ತಿರುವುದು ಕಾಣಿಸಿದೆ.
ಹೀಗಾಗಿ ಆತ ಕೋಣೆಯ ಬಾಗಿಲು ಬಿಡಿದಿದ್ದು, ಅಲ್ಲಿಂದ ಹೊರ ಬಂದ ಜಂಗಮ್ಮ , ತಾನು ನೋಡಿದಾಗ ಮಗಳು ಕೊರಳಿಗೆ ಸೀರೆಯ ಕುಣಿಕೆ ಹಾಕಿಕೊಂಡಿದ್ದು, ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಸುಳ್ಳು ಕಥೆಯೊಂದನ್ನು ಮಗನಲ್ಲಿ ಹೇಳಿದ್ದಳು. ಸಂಬಂಧಿಕರು ವೈದ್ಯರನ್ನು ಮನೆಗೆ ಕರೆತಂದು ಪರೀಖ್ಷೆಗೆ ಒಳಪಡಿಸಿದಾಗ, ಭಾರ್ಗವಿ ಸಾವನ್ನಪ್ಪಿರುವುದು ಗೊತ್ತಾಗಿದೆ.
ಕೊಲೆಯಾದ ಯುವತಿಯ ಅಪ್ರಾಪ್ತ ಸಹೋದರ, ತಾನು ಕೊಲೆಯನ್ನು ನೋಡಿರುವುದಾಗಿ ತಾಯಿಯ ವಿರುದ್ಧ ದೂರು ನೀಡಿದ್ದು , ಅದರಂತೆ ಪ್ರಕರಣ ದಾಖಲಾಗಿದೆ.
ಅಂತರ ರಾಜ್ಯ
Baba Ramdev’s-ದಾರಿ ತಪ್ಪಿಸುವ ಜಾಹೀರಾತು – ಬಾಬ ರಾಮದೇವ್ ಕಂಪೆನಿ ಪತಂಜಲಿಯಯ ಪರವಾನಗಿ ಅಮಾನತು
ನವದೆಹಲಿ : ಯೋಗ ಗುರು ಬಾಬಾ ರಾಮದೇವ್ ಅವರಿಗೆ ಸೇರಿದ ಔಷಧ ಕಂಪನಿಗಳು ತಯಾರಿಸುವ 14 ಬಗೆಯ ಉತ್ಪನ್ನಗಳ ತಯಾರಿಕೆಗೆ ನೀಡಿರುವ ಪರವಾನಗಿಯನ್ನು ಉತ್ತರಾಖಂಡ ಸರ್ಕಾರವು ಅಮಾನತಿನಲ್ಲಿ ಇರಿಸಿದೆ. ಔಷಧಗಳ ಸಾಮರ್ಥ್ಯದ ಬಗ್ಗೆ ತಪ್ಪುದಾರಿಗೆ ಎಳೆಯುವ ಜಾಹೀರಾತುಗಳನ್ನು ಮತ್ತೆ ಮತ್ತೆ ಪ್ರಕಟಿಸಿದ್ದಕ್ಕಾಗಿ ಈ ರೀತಿ ಮಾಡಲಾಗಿದೆ.
ಈ ಆದೇಶವು ರಾಮದೇವ ಅವರಿಗೆ ಆಗಿರುವ ಹಿನ್ನಡೆ ಎಂದು ವಿಶ್ಲೇಷಿಸಲಾಗಿದೆ. ರಾಮದೇವ ಅವರು ಈಚಿನ ದಿನಗಳಲ್ಲಿ ಸುಪ್ರೀಂ ಕೋರ್ಟ್ನ ಕೋಪಕ್ಕೂ ತುತ್ತಾಗಿದ್ದಾರೆ.
ಉತ್ತರಾಖಂಡ ಸರ್ಕಾರವು ಏ. 15ರಂದು ಈ ಅಮಾನತು ಆದೇಶ ಹೊರಡಿಸಿದೆ. ಅಸ್ತಮಾ, ಶ್ವಾಸನಾಳಗಳ ಒಳಪೊರೆಯ ಉರಿಯೂತ (ಬ್ರಾಂಕೈಟಿಸ್) ಮತ್ತು ಮಧುಮೇಹ ಔಷಧಿಗಳ ತಯಾರಿಕಾ ಪರವಾನಗಿಯನ್ನು ಅಮಾನತು ಮಾಡಲಾಗಿದೆ. ಈ ಕುರಿತು ತಕ್ಷಣಕ್ಕೆ ಪ್ರತಿಕ್ರಿಯೆ ನೀಡಲು ರಾಮದೇವ ಅವರ ವಕ್ತಾರರು ನಿರಾಕರಿಸಿದ್ದಾರೆ.
ಪರವಾನಗಿ ಅಮಾನತ್ತಾದ 14 ಔಷಧಗಳ ಪಟ್ಟಿ ಇಂತಿದೆ…
- ಸ್ವಸರಿ ಗೋಲ್ಡ್
- ಸ್ವಸರಿ ವತಿ
- ಬ್ರಾಂಕೋಮ್
- ಸ್ವಸರಿ ಪ್ರವಾಹಿ
- ಸ್ವಸರಿ ಅವಲೇಹ್
- ಮುಕ್ತಾವತಿ ಎಕ್ಸ್ಟ್ರಾ ಪವರ್
- ಲಿಪಿಡೋಮ್
- ಬಿಪಿ ಗ್ರಿಟ್
- ಮಧುಗ್ರಿಟ್
- ಮಧುನಾಶಿನಿವತಿ ಎಕ್ಸ್ಟ್ರಾ ಪವರ್
- ಲಿವಾಮೃತ್ ಅಡ್ವಾನ್ಸ್
- ಲಿವೋಗ್ರಿಟ್
- ಐಗ್ರಿಟ್ ಗೋಲ್ಡ್
- ಪತಂಜಲಿ ದೃಷ್ಟಿ ಐ ಡ್ರಾಪ್
ಅಪರಾಧ
Low marks-ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ-ಪರಸ್ಪರ ಚಾಕುವಿನಿಂದ ಇರಿದುಕೊಂಡ ತಾಯಿ, ಮಗಳು; ಮಗಳು ಕೊಲೆಯಾದರೆ, ತಾಯಿ ಗಂಭೀರ
ಮಂಗಳೂರು(ಬೆಂಗಳೂರು) : ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವುದು ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಪರಸ್ಪರ ಚಾಕು ಇರಿದುಕೊಂಡಿದ್ದರಿಂದ ಮಗಳು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಹಿತಿ(18) ಕೊಲೆಯಾದ ಯುವತಿ. ಪದ್ಮಜಾ (60) ಮಗಳನ್ನು ಕೊಲೆಗೈದ ತಾಯಿ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಮಗಳನ್ನು ತಾಯಿ ಪ್ರಶ್ನೆ ಮಾಡಿದ್ದಾಳೆ. ಈ ವಿಚಾರಕ್ಕೆ ತಾಯಿ ಮತ್ತು ಮಗಳ ನಡುವೆ ನಿತ್ಯ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಸೋಮವಾರ ಇದೇ ವಿಚಾರಕ್ಕೆ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ಚಾಕುವಿನಿಂದ ಪರಸ್ಪರ ಇರಿದು ಕೊಂಡಿದ್ದರಿಂದ ಮಗಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾಳೆ. ತಾಯಿಗೆ ಗಂಭೀರ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಾಧ
Covishield-ಕೋವಿಶೀಲ್ಡ್ ಲಸಿಕೆಯಿಂದ ಸೈಡ್ ಎಪೆಕ್ಟ್ – ಮೊದಲ ಬಾರಿ ಒಪ್ಪಿಕೊಂಡ ಉತ್ಪಾದಕ ಕಂಪೆನಿ; ‘ಥೋಂಬೋಸಿಸ್” ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ
ಲಂಡನ್: ಕೋವಿಡ್ ಮಹಾಮಾರಿಯು 2019-21ರ ಅವಧಿಯಲ್ಲಿ ಇಡೀ ಜಗತ್ತನ್ನು ಕಾಡಿದ್ದು ಇದರ ತಡೆಗೆ ತಾನು ಅಭಿವೃದ್ಧಿಪಡಿಸಿದ್ದ ಕೋವಿಡ್ ಲಸಿಕೆಯು ಅಪರೂಪದ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು ಎಂದು ಬ್ರಿಟನ್ ಮೂಲದ ಆಸ್ಟ್ರಾಜೆನಿಕಾ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಕೋವಿಡ್ ಲಸಿಕೆಗಳ ಅಡ್ಡಪರಿಣಾಮದ ಕುರಿತು ಕಂಪನಿ ಬಹಿರಂಗವಾಗಿ ಒಪ್ಪಿಕೊಂಡಿದೆ. ಈ ಬಗ್ಗೆ ನಾನಾ ವದಂತಿಗಳು ಇದ್ದವಾದರೂ ಕಂಪೆನಿ ಬಹಿರಂಗವಾಗಿ ಒಪ್ಪಿಕೊಂಡಿರುವುದು ಇದೇ ಮೊದಲ ಬಾರಿ.
ಇದೇ ಆಸ್ಟ್ರಾಜೆನಿಕಾ ಲಸಿಕೆಯನ್ನೇ ಭಾರತದ ಪುಣೆ ಮೂಲ ಸೀರಂ ಇನ್ಸ್ಟಿಟ್ಯೂಟ್ ಕೋವಿಶೀಲ್ಡ್ ಹೆಸರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಿತ್ತು. ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ನೀಡಿದ್ದ ಲಸಿಕೆ ಕೂಡಾ ಇದೇ ಆಗಿದೆ.
ಆಸ್ಟ್ರಾಜೆನಿಕಾ ಹೇಳಿದ್ದು
ನಾವು ಅಭಿವೃದ್ಧಿಪಡಿಸಿರುವ ಲಸಿಕೆಯು ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮಗಳಿಗೆಕಾರಣವಾಗುವುದು ನಿಜ. ಲಸಿಕೆ ಪಡೆದವರು ಥೋಂಬೋಸಿಸ್ ಎಂಬ ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ. ಈ ಸಮಸ್ಯೆಗೆ ತುತ್ತಾದವರು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್ಲೆಟ್ಗಳ ಸಂಖ್ಯೆಯಲ್ಲಿ ಕಡಿಮೆಯ ತೊಂದರೆಗೆ ಒಳಗಾಗುತ್ತಾರೆ. ಅತ್ಯಂತ ಸೂಕ್ಷ್ಮ ಪ್ರಕರಣಗಳಲ್ಲಿ ವ್ಯಕ್ತಿ ಸಾವನ್ನಪ್ಪುವ ಸಾಧ್ಯತೆಯೂ ಇದೆ. ಆ ಕಾರಣ, ಲಂಡನ್ ನ್ಯಾಯಾಲಯದಲ್ಲಿ ಆಸ್ಟ್ರಾಜೆನಿಕಾ ನೀಡಿದ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಆಕ್ಸ್ಫರ್ಡ್ ವಿವಿ ಸಹಯೋಗದಲ್ಲಿ ಆಸ್ಟ್ರಾಜೆನಿಕಾ ಕಂಪನಿಯು ಕೋವಿಡ್ ಲಸಿಕೆ ಅಭಿವೃದ್ಧಿಪಡಿಸಿತ್ತು. ಆದರೆ ಈ ಲಸಿಕೆ ಪಡೆದ ಪರಿಣಾಮ ರಕ್ತ ಹೆಪ್ಪುಗಟ್ಟುವಿಕೆ ಸೇರಿದಂತೆ ಹಲವು ಅಡ್ಡಪರಿಣಾಮಗಳು ಸಂಭವಿಸಿವೆ ಮತ್ತು ಹಲವು ಸಾವು ಸಂಭವಿಸಿದೆ ಎಂದು ಆರೋಪಿಸಿ ಬ್ರಿಟನ್ನ ವಿವಿಧ ನ್ಯಾಯಾಲಯಗಳಲ್ಲಿ ಹಲವು ದೂರು ಸಲ್ಲಿಕೆಯಾಗಿದ್ದವು. ಈ ಪೈಕಿ ಜೇಮಿ ಸ್ಕಾಟ್ ಎಂಬುವವರು 2021ರ ಏಪ್ರಿಲ್ನಲ್ಲಿ ನಾನು ಲಸಿಕೆ ಪಡೆದ ಬಳಿಕ ಮೆದುಳಿನಲ್ಲಿ ಶಾಶ್ವತ ಗಾಯ ಸಂಭವಿಸಿದೆ ಎಂದು ಆರೋಪಿಸಿದ್ದರು.
ಈ ಬಗ್ಗೆ ಕಂಪನಿ ಹೇಳಿದ್ದೇನು?: ಈ ಪ್ರಕರಣದ ವಿಚಾರಣೆ ವೇಳೆ ಆಸ್ಟ್ರಾಜೆನಿಕಾದ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿದ್ದು ಅದರಲ್ಲಿ ‘ಕಂಪನಿ ಅಭಿವೃದ್ಧಿಪಡಿಸಿರುವ ಲಸಿಕೆಯು ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮಗಳಿಗೆ ಕಾರಣವಾಗುವುದು ನಿಜ. ಲಸಿಕೆ ಪಡೆದವರು ಹೊಂಬೋಸಿಸ್ ಎಂಬ ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ. ಈ ಸಮಸ್ಯೆಗೆ ತುತ್ತಾ ದವರು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್ಲೆಟ್ ಗಳ ಸಂಖ್ಯೆಯಲ್ಲಿ ಕಡಿಮೆಯ ತೊಂದರೆಗೆ ಒಳಗಾಗುತ್ತಾರೆ. ಅತ್ಯಂತ ಸೂಕ್ಷ್ಮ ಪ್ರಕರಣಗಳಲ್ಲಿ ವ್ಯಕ್ತಿಯು ಸಾವನ್ನಪ್ಪುವ ಸಾಧ್ಯತೆಯೂ ಇರುತ್ತದೆ’ ಎಂಬುದಾಗಿ ಸಂಸ್ಥೆ ತಪ್ಪೊಪ್ಪಿಕೊಂಡಿದೆ. ಆಸ್ಟ್ರಾಜೆನಿಕಾ ಸಂಸ್ಥೆ ತಯಾರಿಸಿರುವ ಕೋವಿಡ್ ಲಸಿಕೆಯು ಭಾರತದಲ್ಲಿ ಕೋವಿಶೀಲ್ಡ್ ಹೆಸರಿನಲ್ಲಿ ಉತ್ಪಾದನೆಯಾಗಿ 174 ಕೋಟಿ ಡೋಸ್ನಷ್ಟು ಲಸಿಕೆ ನೀಡಲಾಗಿತ್ತು.
ವಿಶ್ವದಾದ್ಯಂತ 70 ಲಕ್ಷ ಸಾವು: ಕೋವಿಡ್ ಸೋಂಕು ವಿಶ್ವದಾದ್ಯಂತ 78 ಕೋಟಿ ಜನರಿಗೆ ತಗುಲಿದ್ದು, 70 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಭಾರತದಲ್ಲಿ 45 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ವ್ಯಾಪಿಸಿ 5 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.
-
ಬಿಗ್ ನ್ಯೂಸ್2 days ago
Eshwarappa Son | ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಬೆನ್ನಲ್ಲೇ ರೆಬಲ್ ನಾಯಕ ಈಶ್ವರಪ್ಪ ಪುತ್ರನಿಂದ ತಡೆಯಾಜ್ಞೆ..!
-
ಅಂತರ ರಾಜ್ಯ2 days ago
April temperature-ನೂರು ವರ್ಷದ ದಾಖಲೆ ಮುರಿದ ಏಪ್ರಿಲ್ ತಿಂಗಳ ಉಷ್ಣಾಂಶ; ಇನ್ನೂ 5 ದಿನ ಮುಂದುವರಿಯುವ ಸಾಧ್ಯತೆ
-
ಚಿನ್ನ-ಬೆಳ್ಳಿ ದರ2 days ago
Gold Rate Today -ಚಿನ್ನ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ; ಚಿನ್ನ, ಬೆಳ್ಳಿ ಬೆಲೆ ಇಳಿಕೆ
-
ಅಪರಾಧ2 days ago
Low marks-ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ-ಪರಸ್ಪರ ಚಾಕುವಿನಿಂದ ಇರಿದುಕೊಂಡ ತಾಯಿ, ಮಗಳು; ಮಗಳು ಕೊಲೆಯಾದರೆ, ತಾಯಿ ಗಂಭೀರ
-
ಬೆಂಗಳೂರು1 day ago
Viral Video: ಮಹಿಳಾ ಪದಾಧಿಕಾರಿಯೊಂದಿಗಿನ ಕಾಂಗ್ರೆಸ್ ಶಾಸಕನದು ಎನ್ನಲಾದ ವಾಟ್ಸ್ ಆಪ್ ಕಾಲ್ ವಿಡಿಯೋ ವೈರಲ್
-
ಕ್ರೀಡೆ2 days ago
T20 World Cup: ಟಿ20 ವಿಶ್ವಕಪ್ಗೆ ಭಾರತ ತಂಡ ಪ್ರಕಟ: ಕೆ ಎಲ್ ರಾಹುಲ್ ಗೆ ಕೋಖ್
-
ದಕ್ಷಿಣ ಕನ್ನಡ1 day ago
Communal Hatred Murder: ವಿಟ್ಲದ ಹಲ್ಲೆಗೆ ಪ್ರತಿಕಾರವಾಗಿ ಬಂಟ್ವಾಳದಲ್ಲಿ ಕೋಮು ದ್ವೇಷದಿಂದ ಹತ್ಯೆ : ನಾಲ್ವರಿಗೆ ಜೀವಾವಧಿ ಶಿಕ್ಷೆ
-
ಅಂತರ ರಾಜ್ಯ2 days ago
Baba Ramdev’s-ದಾರಿ ತಪ್ಪಿಸುವ ಜಾಹೀರಾತು – ಬಾಬ ರಾಮದೇವ್ ಕಂಪೆನಿ ಪತಂಜಲಿಯಯ ಪರವಾನಗಿ ಅಮಾನತು